Author: kannadanewsnow07

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ವತಿಯಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯಾದ್ಯಂತ ಜುಲೈ 13, 2024 ರಂದು ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ) ಕರ್ನಾಟಕ ರಿಯಲ್ ಎಸ್ಟೇಟ್…

Read More

ಮುಂಬೈ: ಜಾಗತಿಕ ಷೇರುಗಳಲ್ಲಿನ ಸಕಾರಾತ್ಮಕ ಪ್ರವೃತ್ತಿಯ ಮಧ್ಯೆ ವಿದ್ಯುತ್, ಬಂಡವಾಳ ಸರಕುಗಳು ಮತ್ತು ಕೈಗಾರಿಕಾ ಷೇರುಗಳ ಖರೀದಿಯಿಂದಾಗಿ ಬೆಂಚ್ ಮಾರ್ಕ್ ಇಕ್ವಿಟಿ ಸೂಚ್ಯಂಕಗಳು ಬುಧವಾರ ಏರಿಕೆ ಕಂಡಿವೆ. ಇದಲ್ಲದೆ, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ನಂತಹ ಆಯ್ದ ಸೂಚ್ಯಂಕ-ಹೆವಿವೇಯ್ಟ್ ಕೌಂಟರ್ಗಳಲ್ಲಿ ಭಾರಿ ಜನಸಂದಣಿ ಹೂಡಿಕೆದಾರರ ಭಾವನೆಯನ್ನು ಹೆಚ್ಚಿಸಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ 149.98 ಪಾಯಿಂಟ್ಸ್ ಅಥವಾ ಶೇಕಡಾ 0.20 ರಷ್ಟು ಏರಿಕೆ ಕಂಡು 76,606.57 ಕ್ಕೆ ತಲುಪಿದೆ. ದಿನದ ವಹಿವಾಟಿನಲ್ಲಿ ಇದು 593.94 ಪಾಯಿಂಟ್ ಅಥವಾ ಶೇಕಡಾ 0.77 ರಷ್ಟು ಏರಿಕೆ ಕಂಡು 77,050.53 ಕ್ಕೆ ತಲುಪಿದೆ. ಬಿಎಸ್ಇ ಬೆಂಚ್ಮಾರ್ಕ್ ತನ್ನ ಹಿಂದಿನ ಜೀವಮಾನದ ಗರಿಷ್ಠ 77,079.04 ಅನ್ನು ಮುರಿಯಲು ಕೇವಲ 28.51 ಪಾಯಿಂಟ್ಗಳ ದೂರದಲ್ಲಿದೆ. ಎನ್ಎಸ್ಇ ನಿಫ್ಟಿ 177.1 ಪಾಯಿಂಟ್ಸ್ ಅಥವಾ ಶೇಕಡಾ 0.76 ರಷ್ಟು ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 23,441.95 ಕ್ಕೆ ತಲುಪಿದೆ. ಇದು 58.10 ಪಾಯಿಂಟ್ ಅಥವಾ ಶೇಕಡಾ 0.25…

Read More

ಬೆಂಗಳೂರು ; ರಾಜ್ಯ ಸರ್ಕಾರದ ಸಚಿವಾಲಯ/ಇತರೆ ಸರ್ಕಾರಿ ಕಚೇರಿಗಳು/ ನಿಗಮ/ ಮಂಡಳಿ /ಅನ್ಯ ಸೇವೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್- ‘ಎ’ ‘ಬಿ’ ವೃಂದದ ಅಧಿಕಾರಿಗಳು ಹಾಗೂ ಗ್ರೂಪ್-ಸಿ ವೃಂದದ ಸಿಬ್ಬಂದಿ ವರ್ಗದವರು ತಮ್ಮ 2023-24ನೇ ಸಾಲಿನ ಸೇವಾವಧಿಯಲ್ಲಿ ವೃತ್ತಿ ಸಂಬಂಧಿತ/ ಸಾಂಸ್ಕೃತಿಕ/ ಕ್ರೀಡೆ/ ಸಾಹಿತ್ಯ/ ಇತರೆ ಚಟುವಟಿಕೆಯಲ್ಲಿ ಸಾಧನೆ ಮಾಡಿರುವ ಬಗ್ಗೆ ಮಾಹಿತಿಯನ್ನು ದೃಢೀಕೃತ ದಾಖಲೆಯೊಂದಿಗೆ ದಿನಾಂಕ:20.06.2024ರೊಳಗೆ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.\ ಇಲಾಖೆಯ ಆಡಳಿತ ವರದಿಯಲ್ಲಿ ಮಾಹಿತಿಯನ್ನು ಸೇರಿಸಲು ಕ್ರಮವಹಿಸಲಾಗುವುದು. ಮಾಹಿತಿಯನ್ನು audit ksad @gmail.com ಕಳುಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು : ಕೊಲೆ ಪ್ರಕರಣಕ್ಕೆ ಸಬಂಧ ಪಟ್ಟಂತೆ ಈಗಾಗಲೇ ಪೊಲೀಸರ ವಶದರಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ 4 ವಿಶಿಷ್ಟ ಪ್ರಬೇದದ ಬಾತುಕೋಳಿ ಸಾಕಿದ ಹಿನ್ನೆಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಚಿಕ್ಕಮಗಳೂರಿನ ಮುತ್ತೋಡಿ ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಮಾಡಿ ಬಾಡೂಟ, ಎಣ್ಣೆ ಪಾರ್ಟಿ ಕೂಡ ನಡೆಸುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯಿದೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಜೊತೆ ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

Read More

ಕುವೈತ್: ಕುವೈತ್ನ ಮಂಗಾಫ್ ನಗರದ ಕಾರ್ಮಿಕರಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಕಿಯಿಂದಾಗಿ ಸುಮಾರು 43 ಜನರನ್ನು . ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಕುವೈತ್ ಆರೋಗ್ಯ ಸಚಿವಾಲಯ ತಿಳಿಸಿದೆ. “ಕುವೈತ್ ನಗರದಲ್ಲಿ ಸಂಭವಿಸಿದ ಅಗ್ನಿ ದುರಂತದ ಸುದ್ದಿಯಿಂದ ತೀವ್ರ ಆಘಾತವಾಗಿದೆ. 40 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಮತ್ತು 50 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ” ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. “ದುರಂತವಾಗಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಈ ನಿಟ್ಟಿನಲ್ಲಿ ನಮ್ಮ ರಾಯಭಾರ ಕಚೇರಿ ಸಂಬಂಧಪಟ್ಟ ಎಲ್ಲರಿಗೂ ಸಂಪೂರ್ಣ ಸಹಾಯವನ್ನು ನೀಡುತ್ತದೆ” ಎಂದು ಅವರು ಹೇಳಿದರು.

Read More

ಕುವೈತ್: ದಕ್ಷಿಣ ಕುವೈತ್ ನ ಮಂಗಾಫ್ ನಗರದಲ್ಲಿ ಸಂಭವಿಸಿದ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮ ಬುಧವಾರ ವರದಿ ಮಾಡಿದೆ. ವರದಿಗಳ ಪ್ರಕಾರ, ದುರಂತ ಘಟನೆಯಲ್ಲಿ ಕನಿಷ್ಠ ನಾಲ್ಕು ಭಾರತೀಯರು ಸಹ ಸಾವನ್ನಪ್ಪಿದ್ದಾರೆ. ಈ ಕಟ್ಟಡವು ಹೆಚ್ಚಿನ ಮಲಯಾಳಂ ಜನಸಂಖ್ಯೆಯನ್ನು ಹೊಂದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು. ಆದಾಗ್ಯೂ, ಅಧಿಕಾರಿಗಳಿಂದ ಅಧಿಕೃತ ದೃಢೀಕರಣಕ್ಕಾಗಿ ಇನ್ನೂ ಕಾಯಲಾಗುತ್ತಿದೆ. ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಕೆಲವರು ಸೇರಿದಂತೆ ಗಾಯಗೊಂಡ ಎಲ್ಲರನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ. ಇದೊಂದು ಬ್ರೇಕಿಂಗ್ ಸ್ಟೋರಿ. ಹೆಚ್ಚಿನ ವಿವರಗಳನ್ನು ಸೇರಿಸಲಾಗುವುದು.

Read More

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸಕ್ತ ರೈತ, ರೈತ ಮಹಿಳೆ ಮತ್ತು ವಿಸ್ತರಣಾ ಕಾರ್ಯಕರ್ತರಿಂದ ವಿವಿಧ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಮಟ್ಟದ ಪ್ರಶಸ್ತಿಗಳು (ರಾಜ್ಯ ವ್ಯಾಪ್ತಿ), ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ, ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ರಾಜ್ಯ ಮಟ್ಟದ ಪ್ರಶಸ್ತಿಗಳು (ಕೃವಿವಿ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು), ಕ್ಯಾನ್ ಬ್ಯಾಂಕ್ ಅತ್ಯುತ್ತಮ ಕೃಷಿಕ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಜಿಲ್ಲಾ ಮಟ್ಟದ ಪ್ರಶಸ್ತಿಗಳು (ಕೃವಿವಿ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು), ಜಿಲ್ಲಾ ಮಟ್ಟದ ಪ್ರಗತಿಪರ ರೈತ ಪ್ರಶಸ್ತಿ, ಜಿಲ್ಲಾ ಮಟ್ಟದ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ, ತಾಲ್ಲೂಕು ಮಟ್ಟದ ಪ್ರಶಸ್ತಿಗಳು (ಕೃವಿವಿ, ಬೆಂಗಳೂರಿನ…

Read More

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 13, 16, 19 ಮತ್ತು 23ರಂದು ನಡೆಯಲಿರುವ ಅಂತರ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳ ವೀಕ್ಷಣೆಗೆ ಬಂದು ಹೋಗುವ ಸಾರ್ವಜನಿಕ ಪ್ರಯಾಣಿಕರಿಗೆ ಬೇಡಿಕೆಗನುಗುಣವಾಗಿ ಬೆಂ.ಮ.ಸಾ.ಸಂಸ್ಥೆಯಿಂದ ವ್ಯವಸ್ಥಿತ ಸಾರಿಗೆಗಳನ್ನು ಕಾರ್ಯಾಚರಿಸಲು ಕ್ರಮ ಕೈಗೊಳ್ಳಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ಬಸ್ ನಿಲ್ದಾಣ (ಹೆಚ್.ಎ.ಎಲ್ ರಸ್ತೆ)ಕ್ಕೆ ಎಸ್.ಬಿ. ಎಸ್-1ಕೆ, ಸರ್ಜಾಪುರಕ್ಕೆ ಜಿ-2, ಎಲೆಕ್ಟ್ರಾನಿಕ್ ಸಿಟಿ (ಹೊಸೂರು ರಸ್ತೆ)ಗೆ ಜಿ-3, ಬನ್ನೇರುಘಟ್ಟ ಮೃಗಾಲಯಕ್ಕೆ ಜಿ-4, ಜನಪ್ರಿಯ ಟೌನ್‍ಷಿಪ್ (ಮಾಗಡಿ ರಸ್ತೆ)ಗೆ ಜಿ-7, ಆರ್.ಕೆ. ಹೆಗಡೆ ನಗರ (ನಾಗವಾರ, ಟ್ಯಾನರಿ ರಸ್ತೆ)ಗೆ ಜಿ-10, ಹೊಸಕೋಟೆಗೆ 317 ಜಿ ಹಾಗೂ ಬನಶಂಕರಿಗೆ ಬಸ್ ಸಂ 13 ಸಂಚಾರಿಸಲಿವೆ ಎಂದು ಬಿ.ಎಂ.ಟಿ.ಸಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ನಟ ದರ್ಶನ್‌ ಅವರನ್ನು ಸದ್ಯ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಕೊಲೆಯಾದ ರೇಣುಕ ಸ್ವಾಮಿ ಕೊಲೆಗೂ ಮುನ್ನ ದರ್ಶನ್‌ ಮುಂದೆ ನಮ್ಮ ಬಾಸ್‌ ದರ್ಶನ್‌ ನಮ್ಮ ಬಾಸ್‌ ಸಂಸಾರವನ್ನು ಹಾಳು ಮಾಡಿದಕ್ಕೆ ಪವಿತ್ರಗೌಡಳಿಗೆ ಮೇಸೆಜ್‌ ಮಾಡಿದ್ದ ಅಂಥ ಹೇಳಿದ್ದ ಎನ್ನಲಾಗಿದೆ.  ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ (Murder Case) ಆರೋಪದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Challenging Star Darshan) ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ಒಳಪಡಿಸಿದಾಗ ಅವರು ದರ್ಶನ್‌ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆರ್‌ ಆರ್‌ ನಗರದಲ್ಲಿ ಕೊಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಕೊಲೆಗೆ ದರ್ಶನ್‌ ಸುಪಾರಿ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

Read More

ಬೆಂಗಳೂರು : ದರ್ಶನ್‌ ಅವರನ್ನು ಬಂಧಿಸಿಲ್ಲ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಅಂಥ ಅವರ ಪರ ವಕೀಲರಾದ ನಾರಾಯಣಸ್ವಾಮಿಯವರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ದರ್ಶನ್‌ ಅವರನ್ನು ಬಂಧಿಸಿಲ್ಲ, ಅವರನ್ನು ವಿಚಾರಣೆಗೆ ಕರೆ ತರಲಾಗಿದೆ. ಅವರು ಕೊಲೆ ಮಾಡಿದ್ದಾರೆ ಮಾಡಿದ್ದಾರೆ ಎನ್ನುವುದು ಸುಳ್ಳು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಅಂಥ ಅವರು ಇದೇ ವೇಳೆ ಹೇಳಿದರು. ಇನ್ನೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌ ಅವರನ್ನು ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ಬಂಧಿಸಿದ್ದಾರೆ.

Read More