Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಅವರು ನಡೆದ ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಎನ್ಡಿಎ ಮೈತ್ರಿಕೂಟದಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಶುಕ್ರವಾರ ಬೆಳಗ್ಗೆ ಸಂಸತ್ತಿನಲ್ಲಿ ಸಭೆ ಸೇರಿ ಮುಂಬರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಸಂಪುಟ ರಚನೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ ಬುಧವಾರ ಎನ್ಡಿಎ ಪಕ್ಷಗಳ ನಾಯಕರ ಸಣೆಯಲ್ಲಿ ನರೇಂದ್ರ ಮೋದಿ ಅವರನ್ನೇ ಮತ್ತೊಮ್ಮೆ ದೇಶದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ನವದೆಹಲಿ : ಮೂರನೇ ಬಾರಿ ಕೇಂದ್ರದಲ್ಲಿ ಅಧಿಕಾರವನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿಯವರು ಸಿದ್ದವಾಗುತ್ತಿದ್ದಾರೆ. ಈ ನಡುವೆ ತಮ್ಮ ಸಚಿವ ಸಂಪುಟದಲ್ಲಿ ಈ ಬಾರಿ ಯಾರಿಗೆಲ್ಲ ಸ್ಥಾನವನ್ನು ನೀಡಬೇಕು ಎನ್ನುವುದು ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಪಟ್ಟಿಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಕರ್ನಾಟಕದಿಂದ ಕೂಡ ಹಲವು ಮಂದಿಯ ಹೆಸರುಗಳು ಕೇಳಿ ಬರುತ್ತಿದ್ದಾವೆ. ಈ ನಡುವೆ ಕರ್ನಾಟಕದಿಂದ ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಹೀಗಿದೆ. ಬಸವರಾಜ ಬೊಮ್ಮಾಯಿ, ಪಿ.ಸಿ ಮೋಹನ್., ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾರಸ್ವಾಮಿ. ಪ್ರಹ್ಲಾದ್ ಜೋಶಿ, ಗೋವಿಂದ ಕಾರಕೋಳ, ಪಿ.ಸಿ ಗೌದ್ದಿ ಗೌಡರು, ರಾಘವೇಂದ್ರ ಯಡಿಯ್ಯೂರಪ್ಪ.
ಶ್ರೀನಿವಾಸ್ ಜಿ.ಕೆ ಚಿತ್ರದುರ್ಗ ಹಿರಿಯೂರು: ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಬಳಿ ಆವರಣದಲ್ಲೇ ಅನಾಥ ನವಜಾತ ಶಿಶುವಿನ ಶವ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. ಆಸ್ಪತ್ರೆ ಆವರಣದಲ್ಲೇ ಪತ್ತೆಯಾದ ಶಿಶುವಿನ ಶವದ ಬಗ್ಗೆ ಅನೇಕ ಅನುಮಾನಗಳನ್ನು ಹುಟ್ಟಿಹಾಕಿದೆ. ಆಸ್ಪತ್ರೆ ಆವರಣದಲ್ಲೇ ನವಜಾತ ಹೆಣ್ಣು ಮಗುವಿನ ಶವ ಪತ್ತೆಯಾಗಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದ್ದು, ಘಟನೆ ಸಂಬಂಧ ಪೊಲೀಸರಿಗೆ ಎಎಂಓ ಅವರು ಮಾಹಿತಿ ನೀಡಿದ್ದು, ಸ್ಥಳ ಮಹಜರು ಮಾಡಿದ್ದು, ಸದ್ಯ ಮುಂದಿನ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ ಅಂತ ಕನ್ನಡ ನ್ಯೂಸ್ನೌಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕೆ.ಆರ್.ನಗರದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂಥೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶವನ್ನ ಹೊರಡಿಸಿದೆ. ಈ ನಡುವೆ ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ಕೋರ್ಟ್ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಿದೆ. ಇದೇ ವೇಳೆ ಹಾಸನ ಮತ್ತು ಕೆ.ಆರ್ ನಗರಕ್ಕೆ ಹೋಗುವಂತಿಲ್ಲ ಅಂಥ ತಿಳಿಸಿದೆ. ಮಹಿಳೆಯ ಅಪಹರಣ ಪ್ರಕರಣದಲ್ಲಿ ತನಿಖೆಯ ಅಗತ್ಯವಿರುವುದರಿಂದ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿದೆ. ಮೇ 2ರಂದು ಕೆ.ಆರ್.ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮೇ 15ರಂದು ಎಸ್ಐಟಿ ಮೊದಲ ನೋಟಿಸ್ ನೀಡಿತ್ತು.
*ರಾಮಾಂಜನೇಯ ಅವಿನಾಶ್ ಬೆಂಗಳೂರು: ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೊಳೆನರಸೀಪುರ ಶಾಸಕ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನೀಡಿದೆ. ಹೈಕೋರ್ಟ್ ಏಕ ಸದ್ಯಸ ಪೀಠ ಈ ಆದೇಶವನ್ನು ನೀಡಿದೆ. ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್ಗಳ ಅಡಿ ಎಫ್ಐಆರ್ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ, ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಮೊದಲ ಆರೋಪಿ ಹಾಗೂ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಭವಾನಿ ರೇವಣ್ಣಜನಪ್ರತಿನಿಧಿಗಳ ನ್ಯಾಯಾದಲ್ಲಿ ಅರ್ಜಿ ಸಲ್ಲಿಸಿದ್ದರು, ಆದರೆ ಅಲ್ಲಿ ರೀಕ್ಷಣಾ ಜಾಮೀನು ನಿರಾಕರಿಸಿದ್ದ ಸಲುವಾಗಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಕೆಎನ್ಎನ್ಡಿಜಿಟಲ್ಡೆಸ್ಕ್: ಅಪರೂಪದ ಲೈಂಗಿಕವಾಗಿ ಹರಡುವ ಶಿಲೀಂಧ್ರ ಸೋಂಕುಗಳು ನ್ಯೂಯಾರ್ಕ್ನಲ್ಲಿ ಮೊದಲ ಬಾರಿಗೆ ಪತ್ತೆಯಾಗಿವೆ. ಈ ವರದಿಯನ್ನು ಜಾಮಾ ಚರ್ಮರೋಗ ತಜ್ಞರು ಬಿಡುಗಡೆ ಮಾಡಿದ್ದಾರೆ. ಇಂಗ್ಲೆಂಡ್, ಗ್ರೀಸ್ ಮತ್ತು ಕ್ಯಾಲಿಫೋರ್ನಿಯಾ ಪ್ರವಾಸದ ವೇಳೆ 30 ವರ್ಷದ ವ್ಯಕ್ತಿಯೊಬ್ಬ ಅನೇಕ ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಅವರ ಕಾಲುಗಳು ಮತ್ತು ಸೊಂಟದ ಸುತ್ತಲೂ ಕೆಂಪು ದದ್ದುಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು ಎನ್ನಲಾಗಿದೆ. ತನಿಖೆಯ ನಂತರ, ಲೈಂಗಿಕ ಸಂಭೋಗದ ಸಮಯದಲ್ಲಿ ವ್ಯಕ್ತಿಗೆ ಶಿಲೀಂಧ್ರಗಳ ಸೋಂಕು ಇರುವುದು ಕಂಡುಬಂದಿದೆ. ಈ ರೀತಿಯ ಪ್ರಕರಣ ಅಮೆರಿಕದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ. ಅದೇ ಸಮಯದಲ್ಲಿ, ಫ್ರೆಂಚ್ ವೈದ್ಯರು ಕಳೆದ ವರ್ಷ ಅಂತಹ 13 ಪ್ರಕರಣಗಳು ಅಲ್ಲಿ ವರದಿಯಾಗಿವೆ ಎಂದು ಹೇಳಿದ್ದಾರೆ. ಈ 12 ಪ್ರಕರಣಗಳಲ್ಲಿ, ವ್ಯಕ್ತಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ನಂತರ ವ್ಯಕ್ತಿ ಈ ಕಾಯಿಲೆಗೆ ಬಲಿಯಾಗಿದ್ದಾನೆ. ಪ್ರವಾಸದ ಸಮಯದಲ್ಲಿ ಹಲವಾರು ದೇಶಗಳ ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ ಎಂದು ಅಮೆರಿಕನ್ ಸಂತ್ರಸ್ತೆ ಹೇಳಿದ್ದಾರೆ. ಅದೇ ಸಮಯದಲ್ಲಿ,…
ರಾಮಾಂಜನೇಯ ಅವಿನಾಶ್ ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೀನು ಮಂಜೂರಾಗಿದೆ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದ್ದು ಇದರ ವಿಚಾರಣೆ ಈಗ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿದನ್ನು ಸ್ಮರಿಸಬಹುದಾಗಿದೆ.
ನ್ಯೂಯಾರ್ಕ್: ಯುನೈಟೆಡ್ ಸ್ಟೇಟ್ಸ್ನಲ್ಲಿ ಮೊದಲ ಬಾರಿಗೆ, ಟ್ರೈಕೋಫೈಟನ್ ಮೆಂಟಗ್ರೋಫೈಟ್ಸ್ ಟೈಪ್ 7 ಎಂಬ ಅಪರೂಪದ ಶಿಲೀಂಧ್ರದಿಂದ ಉಂಟಾಗುವ ಲೈಂಗಿಕವಾಗಿ ಹರಡುವ ಶಿಂಗಲ್ಸ್ ವರದಿಯಾಗಿದೆ. ರೋಗಿಯು ನ್ಯೂಯಾರ್ಕ್ ನಗರದ 30 ವರ್ಷದ ಪುರುಷ ಆಗಿದ್ದಾರೆ . ಇಂಗ್ಲೆಂಡ್, ಗ್ರೀಸ್ ಮತ್ತು ಕ್ಯಾಲಿಫೋರ್ನಿಯಾ ಪ್ರವಾಸದ ಸಮಯದಲ್ಲಿ ಹಲವಾರು ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ನಂತರ ರೋಗಿಯ ಕಾಲುಗಳು, ಸೊಂಟ ಮತ್ತು ಪೃಷ್ಠದ ಮೇಲೆ ಕೆಂಪು, ತುರಿಕೆ ತೇಪೆಗಳು ಕಾಣಿಸಿಕೊಂಡಿದ್ದಾವೆ. ಆಂಟಿಫಂಗಲ್ ಚಿಕಿತ್ಸೆಗಳಿಂದ ವ್ಯಕ್ತಿಯ ಸೋಂಕನ್ನು ಗುಣಪಡಿಸಲಾಯಿತು, ಆದರೆ ಚೇತರಿಸಿಕೊಳ್ಳಲು ನಾಲ್ಕೂವರೆ ತಿಂಗಳು ಬೇಕಾಯಿತು. ಅವರ ಚಿಕಿತ್ಸೆಯಲ್ಲಿ ಯಾವುದೇ ಸುಧಾರಣೆಯಿಲ್ಲದೆ ನಾಲ್ಕು ವಾರಗಳವರೆಗೆ ಫ್ಲುಕೊನಜೋಲ್ ತೆಗೆದುಕೊಳ್ಳುವುದು, ನಂತರ ಆರು ವಾರಗಳವರೆಗೆ ಟೆರ್ಬಿನಾಫೈನ್ ಮತ್ತು ಸುಮಾರು ಎಂಟು ಹೆಚ್ಚುವರಿ ವಾರಗಳವರೆಗೆ ಇಟ್ರಾಕೊನಜೋಲ್ ತೆಗೆದುಕೊಳ್ಳುವುದು ಸೇರಿದೆ. ಎನ್ವೈಯು ಲ್ಯಾಂಗೋನ್ ಹೆಲ್ತ್ನ ವೈದ್ಯರು ಜಾಮಾ ಡರ್ಮಟಾಲಜಿಯಲ್ಲಿ ಪ್ರಕಟಿಸಿದ ಕೇಸ್ ಸ್ಟಡಿ, ಜಾಗತಿಕವಾಗಿ ಶಿಲೀಂಧ್ರಗಳ ಸೋಂಕಿಗೆ ಚಿಕಿತ್ಸೆ ನೀಡುವ ಕಷ್ಟವನ್ನು ಒತ್ತಿಹೇಳುತ್ತದೆ. ವೆಸ್ಟರ್ನ್ ರಿಸರ್ವ್ ವಿಶ್ವವಿದ್ಯಾಲಯದ ಚರ್ಮರೋಗ ಪ್ರಾಧ್ಯಾಪಕ ಮಹಮೂದ್ ಘನ್ನೌಮ್,…
ಅಹ್ಮದಾಬಾದ್: ಭ್ರಷ್ಟ ಸರ್ಕಾರಿ ಅಧಿಕಾರಿಗಳು ಮತ್ತು ಅವರ ಮಧ್ಯವರ್ತಿಗಳು ಗುಜರಾತ್ನಲ್ಲಿ ಜನರಿಗೆ ಸುಲಭ ಕಂತುಗಳಲ್ಲಿ ಲಂಚ ಪಾವತಿಸುವ ಆಯ್ಕೆಯನ್ನು ನೀಡುತ್ತಿದ್ದಾರೆ ಎನ್ನಲಾಗಿದೆ. ಈ ವರ್ಷ ಇದುವರೆಗೆ ಕನಿಷ್ಠ 10 ಇಂತಹ ಪ್ರಕರಣಗಳು ವರದಿಯಾಗಿವೆ, ಆದರೆ ಈ ಅಭ್ಯಾಸದಲ್ಲಿ ಹೊಸದೇನೂ ಇಲ್ಲ ಎಂದು ಭ್ರಷ್ಟಾಚಾರ ನಿಗ್ರಹ ದಳ ಕೂಡ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಜರಾತ್ನಲ್ಲಿ ಈ ವರ್ಷ ಕನಿಷ್ಠ ಹತ್ತು ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಅವರ ಮಧ್ಯವರ್ತಿಗಳು ಕಂತುಗಳಲ್ಲಿ ಲಂಚದ ಹಣವನ್ನು ಬೇಡಿಕೆ ಇಟ್ಟಿದ್ದಾರೆ ಎಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಎಸಿಬಿ ನಿರ್ದೇಶಕ ಶಂಶೇರ್ ಸಿಂಗ್ ಅವರ ಪ್ರಕಾರ, ಕಂತುಗಳಲ್ಲಿ ಲಂಚ ತೆಗೆದುಕೊಳ್ಳುವ ಈ ಅಭ್ಯಾಸವು ಹೊಸದಲ್ಲ ಮತ್ತು ಇದು ಬಹಳ ಸಮಯದಿಂದ ನಡೆಯುತ್ತಿದೆ ಹೇಳಿದ್ದಾರೆ. ದರಲ್ಲಿ ಹೊಸದೇನೂ ಇಲ್ಲ. ಸಾಮಾನ್ಯವಾಗಿ, ಬಲಿಪಶುವು ಕೆಲಸ ಮುಗಿಯುವ ಮೊದಲು ಮೊದಲ ಕಂತನ್ನು ನೀಡಲು ಒಪ್ಪುತ್ತಾನೆ ಮತ್ತು ನಂತರ ಕೆಲಸ ಮುಗಿದ ನಂತರ…
ಮಹಾ ಸುದರ್ಶನ ಹೋಮ – ಅಬಿಚಾರ ದೋಷ, ಪ್ರೇತಬಾಧೆ, ಸಂಮೋಹನಕ್ರಿಯೆಗೆ., ಮಹಾ ಮೃತ್ಯುಂಜಯ ಹೋಮ – ಮರಣಾವಸ್ಥೆಯಲ್ಲಿರುವವರಿಗೆ (ತೀವ್ರತರದ ವ್ಯಾಧಿಗಳಿಗೆ)., ಅಭಯಂಕರ ಹೋಮ – ದೀರ್ಘವ್ಯಾಧಿ, ಕುಷ್ಟ, ಚರ್ಮವ್ಯಾಧಿಗಳಿಗೆ. ತ್ರಯಂಭಕ ಹೋಮ – ಆಕಸ್ಮಿಕ ಮರಣಗಳಿಗೆ. ದುರ್ಗಾ ಹೋಮ – ಕೃತ್ರಿಮ(ಮಾಟ)ಮಹಾ ಅನಿಷ್ಟಗಳಿಗೆ. ಅಶ್ಲೇಷಬಲಿ – ಸರ್ಪದೋಷ ಶ್ರೀಘ್ರವಿವಾಹ. ಸುಬ್ರಹ್ಮಣ್ಯಹೋಮ – ಶಸ್ತ್ರ ಚಿಕಿತ್ಸೆ, ವಾಹನ ಅಪಘಾತದಿಂದ ನಿವಾರಣೆಗಾಗಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ, ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ, ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ,…








