Author: kannadanewsnow07

ಬೆಂಗಳೂರು: ಕರ್ನಾಟಕ ಬಿಜೆಪಿ ಸಲ್ಲಿಕೆ ಮಾಡಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ಸಿಎಂ ಡಿ.ಸಿಎಂ ಅವರು ಸ್ವಾಗತಿಸಿದರು. ಇನ್ನೂ ಇದೇ ವೇಳೇ ಅವರು ಕೋರ್ಟ್‌ ನತ್ತ ತೆರಳುತ್ತಿದ್ದಾರೆ. ಜೂನ್ 1 ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು ಈ ಹಿನ್ನಲೆಯಲ್ಲಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರು ನ್ಯಾಯಾಲಯದಿಂದ ಇಂದು ಜಾಮೀನು ಕೋರಲಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು: ದಿನಾಂಕ: 07-06-2024 ರಂದು ಬಿಡುಗಡೆಯಾಗಲಿರುವ “ಹಮಾರ ಬಾರಾಹ್” ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡುವುದನ್ನು ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ, ರಾಜ್ಯದ ವಿವಿಧ ಜಿಲ್ಲೆ / ತಾಲ್ಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಜೀ ಸಿನಿಮಾ ವಾಹಿನಿಯು ಇತ್ತೀಚಿಗೆ “ಹಮಾರ ಬಾರಾಹ್” ಎಂಬ ಚಲನಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪುಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು ಒಂದು ಷಡ್ಯಂತ್ರವಾಗಿದೆ. ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್ 07, 2024 ರಂದು ದೇಶಾದ್ಯಂತ ಬಿಡುಗಡೆಯಾಗಲಿರುವ “ಹಮಾರೆ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿಮ್ಮ ಕಷ್ಟಗಳನ್ನು ದೂರ ಮಾಡುವ ಪ್ರಪಂಚದ ಶಕ್ತಿ ಶಾಲಿ ಮಂತ್ರ ಯಾವುದು ಎಂದು ತಿಳಿಯೋಣ . ಜೀವನದಲ್ಲಿ ಯಾವ ಕೋರಿಕೆ ಇದ್ದರೂ , ಅದು ಶೀಘ್ರವಾಗಿ ನೆರವೇರಬೇಕು ಅಂದುಕೊಂಡಿದ್ದರೆ , ಮತ್ತು ಶೀಘ್ರವಾಗಿ ಸಿಗಬೇಕು ಎಂದರೆ , ಲಲಿತಾ ದೇವಿಗೆ ಸಂಬಂಧಪಟ್ಟ ಈ ಒಂದು ಮಂತ್ರವನ್ನು ಪ್ರತಿನಿತ್ಯ ಹೇಳಿಕೊಳ್ಳಬೇಕು . ಈ ಮಂತ್ರ ಅಥವಾ ನಾಮದಿಂದ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತದೆ , ಈ ಮಂತ್ರದ ನಿಯಮಗಳು ಏನು ಎಂಬ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ . ಈ ಒಂದು ಕಲಿಯುಗದಲ್ಲಿ ತುಂಬಾ ಶಕ್ತಿಯುತವಾದ ನಾಮವೆಂದರೆ , ಲಲಿತಾ ಸಹಸ್ರನಾಮ . ಲಲಿತಾ ಸಹಸ್ರನಾಮಗಳಲ್ಲಿ ಕೆಲವು ನಾಮಗಳನ್ನು ಹೇಳಿಕೊಂಡರೆ , ವಿಶೇಷವಾದ ದೈವಬಲ ಮತ್ತು ಪ್ರಯೋಜನಗಳು ಪ್ರಾಪ್ತಿಯಾಗುತ್ತದೆ . ಲಲಿತ ಸಹಸ್ರನಾಮದಲ್ಲಿ ಒಂದು ಶಕ್ತಿಯುತ ವಾದಂತಹ ಮಂತ್ರವಿದೆ . ಮೊದಲು ಈ ಮಂತ್ರವನ್ನು…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಹುಟ್ಟಿದ ಮಕ್ಕಳಿಂದ ಹಿಡಿದು 17 ವರ್ಷ ತುಂಬುವ ವರೆಗು ಬಾಲಗ್ರಹ ಆಗುತ್ತೆ. ಬಾಲಗ್ರಹ ಆದಾಗ ಮುಖದಲ್ಲಿ ಬದಲಾವಣೆಗಳು ಕಾಣಿಸಿಕೊಳ್ಳುತ್ತೆ. ಅದು ಸುಮಾರು ಹಾಲ್ ಕುಡಿಯೋ ಮಕ್ಕಳಲ್ಲಿ ತಾಯಂದಿರಿಗೆ ಗೊತ್ತಾಗುತ್ತೆ ಏನ್ ಗೊತ್ತಾ ಮಕ್ಕಳಲ್ಲಿ ಒಂದು ಸೊಗಡಿರುತ್ತೆ, ಆ ವಾಸನೆ ಬರುತ್ತೆ ಒಂತರಾ ಸ್ಮೆಲ್ ಬರೋದಕ್ಕೆ ಶುರುವಾಗುತ್ತೆ. ಅದರಲ್ಲೇ ಗೊತ್ತಾಗೋದು ಮಕ್ಕಳಿಗೆ ಬಾಲಗ್ರಹ ಆಗಿದೆ ಅಂತ. ಮಕ್ಕಳು ಸಪ್ಪೆ ಇರ್ತಾವೆ ಅಳ್ತಾ ಇರುತ್ತೆ ಹಾಲು ಕುಡಿದಾಗ ವಾಂತಿ ಮಾಡ್ಕೊಳ್ಳುತ್ತೆ. ಬೇಧಿ ಆಗುತ್ತೆ. ಊಟ ತಿನ್ನುವುದಿಲ್ಲ. ರಾತ್ರಿ ಹೊತ್ತು ಬೆಚ್ಚಿ ಬೆಚ್ಚಿ ಎದ್ದೆಹೇಳುವುದು ಕಿಟ್ಟಾರಂತ ಕಿರ್ಚೋದು ಇತರಲ್ಲ ಆಗುತ್ತೆ. ಕಣ್ಣಿನ ಉಬ್ಬು ಕಣ್ಣಿನ ರೆಪ್ಪೆಗಳು ಮೈಯಲ್ಲಿರುವ ಸಣ್ಣ ಸಣ್ಣ ರೋಮಗಳೆಲ್ಲ ಒಂತರಾ ಸ್ಟ್ರೈಟ್ ಆಗಿ ನಿಂತ್ಕೊಂಡಂಗೆ ನಿಮಗೆ ಗೊತ್ತಾಗುತ್ತೆ. ಅದನ್ನು ನೋಡಿದಾಗ ನಿಮಗೆ ಅನುಭವ ಆಗೋದು. ಸುಮಾರು ಅನ್ನ ತಿನ್ನೋದಕ್ಕೆ ಶುರು ಮಾಡಿದ್ರೆ ಮಕ್ಕಳಲ್ಲಿ…

Read More

ಹೈದರಾಬಾದ್: ಸಾಂಗ್ಲಿಯ ಸ್ವತಂತ್ರ ಸಂಸದ ವಿಶಾಲ್ ಪಾಟೀಲ್ ಗುರುವಾರ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದು, INDIA ಮೈತ್ರಿಕೂಟದ ಸಂಖ್ಯೆ 233 ಕ್ಕೆ ಏರಿದೆ. ಪಾಟೀಲ್ ಅವರ ಬೆಂಬಲವನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮಹಾರಾಷ್ಟ್ರದ ಜನರು ದ್ರೋಹ, ಅಹಂಕಾರ ಮತ್ತು ವಿಭಜನೆಯ ರಾಜಕೀಯವನ್ನು ಸೋಲಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರಂತಹ ನಮ್ಮ ಸ್ಪೂರ್ತಿದಾಯಕ ದಿಗ್ಗಜರಿಗೆ ಇದು ಸೂಕ್ತ ಗೌರವವಾಗಿದೆ. ಸಾಂಗ್ಲಿಯ ಚುನಾಯಿತ ಸಂಸದ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ. ಸಂವಿಧಾನ ದೀರ್ಘಕಾಲ ಬಾಳಲಿ ಅಂತ ಹೇಳಿದರು.

Read More

ಬೆಂಗಳೂರು: ಸುದ್ದಿ ಮಾಧ್ಯಮಗಳಲ್ಲಿ ಮಸಾಲೆ ಪದಾರ್ಥಗಳ ಗುಣಮಟ್ಟವು ಕಳಪೆಯಾಗಿರುವ ಬಗ್ಗೆ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಸಾಲೆ ಪುಡಿ ಮತ್ತು ಸಾಂಬಾರ್ ಪದಾರ್ಥಗಳನ್ನು ಮೈಕ್ರೋ ಬಯೋಲಾಜಿಕಲ್ ಪೆರಿಮಿಟರ್ಸ್ ಅಂಶಗಳನ್ನು ಪರೀಕ್ಷಿಸಲು ಮಸಾಲೆ ಪುಡಿ ಮತ್ತು ಸಾಂಬಾರ್ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಮೇ ಮೊದಲ ಮತ್ತು ಎರಡನೇ ವಾರದಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿರುತ್ತದೆ. ಅವುಗಳಲ್ಲಿ 23 ಮಾದರಿಗಳಲ್ಲಿ ರೋಗಕಾರಕ ಸೂಕ್ಷಂಆನು ಜೀವಿಗಳು ಕಂಡು ಬಂದ ಹಿನ್ನೆಲೆಯಲ್ಲಿ ಅಸುರಕ್ಷಿತ ಎಂದು ವರದಿಯಾಗಿರುತ್ತವೆ. ತುಮಕೂರಿನ ಮೆಣಸಿನಕಾಯಿ ಪುಡಿ, ಮೈಸೂರು ಗ್ರಾಮಾಂತರದ ಕೌಶಿಕ್ ಪುಡ್ ಬ್ರ್ಯಾಂಡ್‍ನ ಮಿಕ್ಸ್ಡ್ ಮಸಾಲ, ಕೊಪ್ಪಳದ ಶ್ರೀ ಮಂಜುನಾಥ ಬ್ರ್ಯಾಂಡ್‍ನ ಮೆಣಿಸಿನಕಾಯ ಮತ್ತು ಕ್ಯಾಪ್ಸಿಕಾಂ (ಲಾಲ್ ಮಿರ್ಚಿ), ಮಂಡ್ಯದ ಸಾಂಬರ್ ಪುಡಿ, ದಾವಣಗೆರೆಯ ಅಪೇಕ್ಷಾ ಬ್ರ್ಯಾಂಡ್‍ನ ಸಾಂಬಾರು ಪುಡಿ, ಚಿಕ್ಕಬಳ್ಳಾಪುರದ ಎ.ಆರ್.ಕೆ ಬ್ರ್ಯಾಂಡ್‍ನ ಮೆಣಿಸಿನಕಾಯಿ ಪುಡಿ, ದಕ್ಷಿಣ ಕನ್ನಡದ ಅರುಣ್ ಮಸಾಲ ಬ್ರ್ಯಾಂಡ್‍ನ ಗರಂ ಮಸಾಲ, ಚಿಕ್ಕಮಗಳೂರಿನ ಎವರೆಸ್ಟ್ ಬ್ರ್ಯಾಂಡ್‍ನ ಮಿಕ್ಸ್ಡ್ ಮಸಾಲ, ಚಿಕ್ಕಬಳ್ಳಾಪುರದ ಮೆಣಸಿನಕಾಯಿ ಪುಡಿ, ಕೊಡುಗಿನ ಈಸ್ಟ್ರನ್ ಬ್ರ್ಯಾಂಡ್‍ನ ಧನಿಯಾ ಪುಡಿ,…

Read More

ಬೆಂಗಳೂರು:  ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿ.ಟಿ.ಟಿ.ಸಿ) ಖಾಲಿ ಇರುವ ವಿವಿಧ ಉಳಿಕೆ ಮೂಲ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧವಾಗಿ 2024ನೇ ಏಪ್ರಿಲ್ 3 ರಂದು ಪ್ರಕಟಿಸಲಾದ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಕೆಲವು ಹೆಚ್ಚುವರಿ ಹುದ್ದೆಗಳನ್ನು ಸೇರಿಸಿ 2024ನೇ ಮೇ 9 ರಂದು ಪರಿಷ್ಕøತ ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿನ ವಿವಿಧ ಮೂಲ ವೃಂದಗಳಲ್ಲಿನ ಒಟ್ಟು 98 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ, ವೇತನ ಶ್ರೇಣಿ, ಅಭ್ಯರ್ಥಿಗಳ ಅರ್ಹತೆ ವಿವರ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ ಪ್ರಕ್ರಿಯೆ ಮತ್ತು ನೇಮಕಾತಿಯ ವಿಧಾನ ಹಾಗೂ ಪ್ರವರ್ಗವಾರು ಹುದ್ದೆಗಳ ವಿವರಗಳ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧೀಕಾರ (ಕೆಇಎ) ಜಾಲತಾಣ http://kea.kar.nic.in ಗೆ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಉಪ ಪ್ರಧಾನ ವ್ಯವ್ಥಾಪಕರು(ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಬೆಂಗಳೂರು: 2024 ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಕೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ಕೃಷಿ ಮಾರಾಟ ಮಂಡಳಿ ವತಿಯಿಂದ ತುಮಕೂರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ವತಿಯಿಂದ ಹಾಸನ, ಮಂಡ್ಯ, ರಾಮನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ನೋಂದಣಿ ಮಾಡಿದ ರೈತರು ಜೂನ್ 14 ರಂದು ಖರೀದಿ ಪ್ರಕ್ರಿಯೆ ಅಂತ್ಯಗೊಳ್ಳುವುದರಿಂದ, ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರು ಉಂಡೆ ಕೊಬ್ಬರಿಯನ್ನು ಮಾರಾಟ ಮಾಡದೇ ಇದ್ದಲ್ಲಿ ಜೂನ್ 14 ರೊಳಗಾಗಿ ಸಂಬಂಧಪಟ್ಟ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ, ಯೋಜನೆಯ ಸದುಪಯೋಗ ಪಡೆದುಕೊಳ್ಳವಂತೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಹುಣಮಟ್ಟ ಕಾಯ್ದೆ 2006, ನಿಯಮಗಳು 2011ರನ್ವಯ ಆಹಾರ ಪದಾರ್ಥಗಳ ತಯಾರಕರುಗಳು ಮತ್ತು ಆಮದುದಾರರು ಪ್ರತಿ ವರ್ಷ ಮೇ 31ರೊಳಗೆ ವಾರ್ಷಿಕ ಆದಾಯ ಸಲ್ಲಿಸಬೇಕಾಗಿದ್ದು, FoSCoS ಪೋರ್ಟಲ್‍ನಲ್ಲಿ ವಾರ್ಷಿಕ ಆದಾಯ ಸಲ್ಲಿಸುವ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳಿಂದಾಗಿ ವಾರ್ಷಿಕ ಆದಾಯವನ್ನು ಸಲ್ಲಿಸಲು ಆಹಾರ ಉದ್ದಿಮೆದಾರರಿಗೆ ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಮೇ 31 ರವರೆಗೆ ನಿಗದಿಪಡಿಸಲಾಗಿರುವ ಕೊನೆಯ ದಿನಾಂಕವನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ. FoSCoS ಡ್ಯಾಶ್ ಬೋರ್ಡ್ https://foscos.fssai.gov.in ರಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಲಾಗುವ ವಾರ್ಷಿಕ ಆದಾಯವನ್ನು ಮಾತ್ರ ಮಾನ್ಯ ಮಾಡಲಾಗುವುದೆಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಕೆ.ಗೋವಿಂದರಾಜು, ಜಗದೇವ ಗುತ್ತೇದಾರ್, ಶ್ರೀಮತಿ ಬಲ್ಕೀಸ್ ಬಾನು, ಎನ್.ಎಸ್.ಬೋಸರಾಜು, ಡಾ.ಯತೀಂದ್ರ ಎಸ್ ಹಾಗೂ ಎ.ವಸಂತ್‍ಕುಮಾರ್, ಭಾರತೀಯ ಜನತಾ ಪಕ್ಷದಿಂದ ಮೂಳೆ ಮಾರುತಿರಾವ್, ಸಿ.ಟಿ.ರವಿ ಮತ್ತು ರವಿಕುಮಾರ್.ಎನ್ ಹಾಗೂ ಜಾತ್ಯಾತೀತ ಜನತಾದಳದಿಂದ ಟಿ.ಎನ್.ಜವರಾಯಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ದ್ವೈವಾರ್ಷಿಕ ಚುನಾವಣೆಯನ್ನು ಜೂನ್ 13 ರಂದು ನಿಗಧಿಪಡಿಸಲಾಗಿತ್ತು. ಮೇ 27 ರಿಂದ ಮೇ 3 ರವರೆಗೆ ನಾಮಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಒಟ್ಟು 12 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಜೂನ್ 4 ರಂದು ನಾಮಪತ್ರಗಳನ್ನು ಪರಿಶೀಲನೆಗೆ ತೆಗೆದುಕೊಳ್ಳಲಾಗಿತ್ತು. ಪರಿಶೀಲನೆಯ ಸಂದರ್ಭದಲ್ಲಿ ಆಸಿಫ್ ಪಾಷ ಆರ್.ಎಂ. ಎಂಬವರ ನಾಮಪತ್ರವು ಸೂಚಕರಿಲ್ಲದ ಕಾರಣ ತಿರಸ್ಕøತಗೊಂಡಿದ್ದು, ಉಳುದ 11 ಜನಗಳ ನಾಮಪತ್ರಗಳು ಅಂಗೀಕಾರಗೊಂಡಿದ್ದವು. ಜೂನ್ 6 ಮಧ್ಯಾಹ್ನ…

Read More