Author: kannadanewsnow07

ಬೆಂಗಳೂರು: ಬೆಂಗಳೂರು: ಎಸ್ಐಟಿ ಬಂಧಿಸಲ್ಪಟ್ಟಿದ್ದಂತ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಎಸ್ಐಟಿ ವಶಕ್ಕೆ ನೀಡಿ ಆದೇಶಿಸಿತ್ತು. ಪುತ್ರನ ಬೆನ್ನಲ್ಲೇ ಅಣ್ಣನಿಗೂ ಕೋರ್ಟ್ ಶಾಕ್ ನೀಡಿದೆ. ಅದೇ ಮಹಿಳೆ ಅಪಹರಣ ಕೇಸಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಭವಾನಿ ರೇವಣ್ಣ ಅವರನ್ನು ಬಂಧನ ಸಾಧ್ಯತೆ ಇದೆ. ನ್ಯಾಯಾಲಯವು ಅಂಥ ಹೇಳಿದೆ. ನಿರೀಕ್ಷಣಾ ಜಾಮೀನು ಕೋರಿದ್ದ ಭವಾನಿ ರೇವಣ್ಣ (Bhavani Revanna )  ಅರ್ಜಿಯ ಆದೇಶವನ್ನು ಕೋರ್ಟ್ ಕಾಯ್ದಿರಿಸಿದ್ದು ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ (Court)  ಮೆ 31 ಕ್ಕೆ ಅಂದರೆ ಇಂದು ಮುಂದೂಡಿತು. ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್ ನೀಡಿತ್ತು. ‘ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ (Criminal) ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (Court)  (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ಈ ಆದೇಶವನ್ನು ನೀಡಿದ್ದಾರೆ. ಭವಾನಿ ರೇವಣ್ಣ ಪರ…

Read More

*ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಮುಖಂಡ, ಸಂಸದ ಪ್ರಜ್ವಲ್ ರೇವಣ್ಣ (Prajwal Revanna)  ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಬಂಧಿಸಲಾಗಿದೆ (arrested). ಹಾಸನದ 33 ವರ್ಷದ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna)  ಅವರನ್ನು ಅವರ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ವಿಮಾನ ನಿಲ್ದಾಣದಿಂದ ವಶಕ್ಕೆ ತೆಗೆದುಕೊಂಡಿದೆ. ದೇಶವನ್ನು ತೊರೆದ ಸುಮಾರು ಒಂದು ತಿಂಗಳ ನಂತರ ಅವರು ಗುರುವಾರ ಮಧ್ಯರಾತ್ರಿ ಜರ್ಮನಿಯಿಂದ ಭಾರತಕ್ಕೆ ಮರಳಿದರು. ಕೋರ್ಟ್‌ನಲ್ಲಿ ವಾದ-ಪ್ರತಿ ವಿವಾದ ಆಗಿದ್ದೇನು? ಈ ನಡುವೆ ಪ್ರಜ್ವಲ್‌ ರೇವಣ್ಣ (Prajwal Revanna)  ಅವರನ್ನು ಕೆಲ ನಿಮಿಷಗಳ ಹಿಂದೆ, ಬೆಂಗಳೂರಿನ 42 ನೇ ಎಸಿಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್‌ ಶಿವಕುಮಾರ್‌ ಅವರ ಮುಂದೆ ಹಾಜರು ಪಡಿಸಿದರು, ಈ ವೇಳೆ ಎಸ್‌ಐಟಿ (SIT) ಪರ ಎಸ್‌ಪಿಪಿ ಅಶೋಕ್‌ ನಾಯಕ್‌ ಅವರು ವಾದ ಮಂಡನೆ ಮಾಡಿದರು. …

Read More

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಪರಿಷತ್ತಿಗೆ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜೂನ್, 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದೆ. ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಸ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ…

Read More

ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಇದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ ಹಾಗೂ ದೃಶ್ಯ ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತದೆ. ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ-577-515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ತರಿಸಿಕೊಳ್ಳಬಹುದು ಅಥವಾ ರಂಗ ಶಾಲೆಯ ವೆಬ್‍ಸೈಟ್ www.theatreschoolsanehalli.org ನಲ್ಲಿ ಪ್ರವೇಶ ಅರ್ಜಿ ಡೌನ್‍ಲೋಡ್ ಮಾಡಿ…

Read More

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದರೆ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಚುನಾವಣಾ ಪ್ರವೇಶಕ್ಕೆ ನಾನು ಒತ್ತಾಯಿಸಿದ್ದೇನೆ ಎಂದು ಅವರು ಹೇಳಿದರು. ಸತತ ಐದು ಗೆಲುವಿನ ನಂತರ ಸೋನಿಯಾ ಗಾಂಧಿ ಅವರಿಂದ ತೆರವಾದ ರಾಯ್ಬರೇಲಿಯಿಂದ ಸ್ಪರ್ಧಿಸುವ ಬಗ್ಗೆ ಮಾತುಕತೆ ನಡೆದಿತ್ತು. ಆದಾಗ್ಯೂ, ಗಾಂಧಿ ವಾದ್ರಾ ಅವರು ಸ್ಪರ್ಧೆಯಿಂದ ಹೊರಗುಳಿದರು ಮತ್ತು ಅವರ ಸಹೋದರ ಅವರ ಪರವಾಗಿ ನಿಂತರು, ಆದರೆ ಅವರು ಅವರ ಪ್ರಚಾರವನ್ನು ನಿರ್ವಹಿಸಿದರು ಅಂತ ಅವರು ಹೇಳಿದರು. ಖಾಸಗಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಚುನಾವಣೆಗೆ ಮೊದಲು ಎರಡು ‘ಭಾರತ್ ಜೋಡೋ ಯಾತ್ರೆ’ಗಳನ್ನು ಮುನ್ನಡೆಸಿದ ಮತ್ತು ವ್ಯಾಪಕವಾಗಿ ಪ್ರಚಾರ ಮಾಡಿದ, ಆಗಾಗ್ಗೆ ಮಿತ್ರಪಕ್ಷಗಳೊಂದಿಗೆ ವೇದಿಕೆ ಸ್ಥಳವನ್ನು (ಮತ್ತು ಊಟದ ಸಮಯ) ಹಂಚಿಕೊಂಡ ಮತ್ತು ಪ್ರಧಾನಿ ಮೋದಿಯವರ ವಿರುದ್ಧ ನೇರ ದಾಳಿ ನಡೆಸಿದ ರಾಹುಲ್ ಗಾಂಧಿ ಉನ್ನತ ಹುದ್ದೆಗೆ ಜನಪ್ರಿಯ…

Read More

ನವದೆಹಲಿ: ಈಗ ರದ್ದುಪಡಿಸಲಾದ ಮದ್ಯ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 2 ರಂದು (ಭಾನುವಾರ) ತಿಹಾರ್ ಜೈಲಿನಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ. ಮೇ 10 ರಿಂದ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಕೇಜ್ರಿವಾಲ್, ತಮ್ಮ ದೇಹದಲ್ಲಿ ಗಂಭೀರ ಕಾಯಿಲೆಯ ಕೆಲವು ಚಿಹ್ನೆಗಳು ಇರಬಹುದು ಎಂದು ವೈದ್ಯರು ಹೇಳಿದ್ದಾರೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ನನ್ನನ್ನು ಎಷ್ಟು ದಿನ ಜೈಲಿನಲ್ಲಿರಿಸಲಾಗುವುದು ಎಂದು ನನಗೆ ತಿಳಿದಿಲ್ಲ ಎಂದು ಹೇಳಿದರು. “ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು” ಮತ್ತೆ ಜೈಲಿಗೆ ಹೋಗುವುದರಿಂದ ಅವರ “ಉತ್ಸಾಹ ಹೆಚ್ಚಾಗಿದೆ” ಎಂದು ಅವರು ಪ್ರತಿಪಾದಿಸಿದರು.

Read More

ನವದೆಹಲಿ: ಬಿಸಿಗಾಳಿ ಮತ್ತು ಶೀತ ಅಲೆಗಳನ್ನು ‘ರಾಷ್ಟ್ರೀಯ ವಿಪತ್ತುಗಳು’ ಎಂದು ಘೋಷಿಸುವ ಅವಶ್ಯಕತೆಯಿದೆ ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ. ಬಿಸಿಲಿನ ತಾಪದಿಂದ ಮೃತಪಟ್ಟವರ ಅವಲಂಬಿತರಿಗೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಾಗ ನ್ಯಾಯಾಲಯ ಗುರುವಾರ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಬಿಸಿಗಾಳಿ ವಿನಾಶವನ್ನುಂಟುಮಾಡುತ್ತಿದ್ದು, ತಾಪಮಾನವು ಪ್ರತಿದಿನ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಗಮನ ಹರಿಸಿದ ಹೈಕೋರ್ಟ್, ರಾಜಸ್ಥಾನ ಹವಾಮಾನ ಬದಲಾವಣೆ ಯೋಜನೆಯಡಿ ಸಿದ್ಧಪಡಿಸಿದ ‘ಶಾಖ ಕ್ರಿಯಾ ಯೋಜನೆಯ’ ಪರಿಣಾಮಕಾರಿ ಅನುಷ್ಠಾನಕ್ಕಾಗಿ ತಕ್ಷಣ ಮತ್ತು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ವಿವಿಧ ಇಲಾಖೆಗಳ ಸಮಿತಿಗಳನ್ನು ರಚಿಸುವಂತೆ ರಾಜಸ್ಥಾನದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ. ಹೀಟ್ ಸ್ಟ್ರೋಕ್ ನಿಂದ ಸಾವನ್ನಪ್ಪಿದವರ ಅವಲಂಬಿತರಿಗೆ ಸೂಕ್ತ ಪರಿಹಾರ ನೀಡುವಂತೆ ನ್ಯಾಯಾಲಯ ನಿರ್ದೇಶಿಸಿದೆ.

Read More

ಚಾಮರಾಜನಗರ: ರೌಡಿಗಳಂತೆ ಸಾರ್ವಜನಿಕ ಸ್ಥಳದಲ್ಲಿ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ, ಪೇದೆಗಳಿಬ್ಬರು ಹೊಡೆದಾಡಿಕೊಂಡಿಕೊಂಡ ವಿಡಿಯೋ ವೈರಲ್‌ ಆಗಿದೆ.  ಕೆಎಸ್​​ಆರ್​​ಟಿಸಿ ಬಸ್​ ಹಿಮವದ್ ಗೋಪಾಲಸ್ವಾಮಿ ಬೆಟ್ಟದಿಂದ ಗುಂಡ್ಲುಪೇಟೆಗೆ ಬರುತ್ತಿತ್ತು. ಈ ಬಸ್​ನಲ್ಲಿ ಮೈಸೂರಿನ ಪೊಲೀಸ್​ ಪೇದೆ ಕೊಟ್ರೇಶ್ ಐನಾಳ್ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಈ ನಡುವೆ ಬಸ್​ನ ನಿರ್ವಾಹಕ ಲೋಕೇಶ್ ಅವರು ಪೊಲೀಸ್​ ಪೇದೆ ಕೊಟ್ರೇಶ್ ಐನಾಳ್ ಅವರಿಗೆ ಗೊತ್ತಿಲ್ಲದೆ ಎರಡು ಬಾರಿ ಟಿಕೆಟ್ ನೀಡಿದ್ದಾರೆ. ಇದನ್ನು ಪೊಲೀಸ್​ ಪೇದೆ ಕೊಟ್ರೇಶ್ ಐನಾಳ್ ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರೂ ಚಾಮರಾಜನಗರನಗರದ ಗುಂಡ್ಲುಪೇಟ್‌ ಬಸ್‌ ನಿಲ್ದಾಣದ ಬಳಿ ಬಂದಾಗ ಇಬ್ಬರು ಕೂಡ ರೌಡಿಗಳಂತೆ ನಾವು ಸಾರ್ವಜನಿಕರ ಕೆಲಸದಲ್ಲಿ ಇರುವುದನ್ನು ಮರೆತು ಮೈಕೈಗುದ್ದುಕೊಂಡಿದ್ದಾರೆ. ಈ ನಡುವೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದ್ದು, ಪೊಲೀಸರು ಸಂಧಾನ ಮಾಡಿ ಇಬ್ಬರನ್ನು ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

Read More

ನವದೆಹಲಿ: ಮಸ್ಕತ್ ನಿಂದ ಕಣ್ಣೂರಿಗೆ ಸುಮಾರು ಒಂದು ಕಿಲೋಗ್ರಾಂ ಚಿನ್ನವನ್ನು ಗುದದ್ವಾರದಲ್ಲಿ ಅಡಗಿಸಿ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಗಗನಸಖಿಯನ್ನು ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ ಐ) ಮೂಲಗಳು ತಿಳಿಸಿವೆ. ಡಿಆರ್ಐ ಕೊಚ್ಚಿನ್ ನೀಡಿದ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಡಿಆರ್ಐ ಕಣ್ಣೂರು ಅಧಿಕಾರಿಗಳು ಮೇ 28 ರಂದು ಮಸ್ಕತ್ನಿಂದ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೋಲ್ಕತ್ತಾ ಮೂಲದ ಮತ್ತು ಕ್ಯಾಬಿನ್ ಸಿಬ್ಬಂದಿ ಸುರಭಿ ಖತುನ್ ಅವರನ್ನು ತಡೆದರು. ಈ ವೇಳೆ ಅವರ ವೈಯಕ್ತಿಕ ಶೋಧದ ಸಮಯದಲ್ಲಿ, ಅಧಿಕಾರಿಗಳು ಆಕೆಯ ಗುದದ್ವಾರದಲ್ಲಿ ಅಡಗಿಸಿಟ್ಟಿದ್ದ ಸಂಯುಕ್ತ ರೂಪದಲ್ಲಿ 960 ಗ್ರಾಂ ಚಿನ್ನವನ್ನು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ಮತ್ತು ಅಗತ್ಯ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ, ಖತುನ್ ಅವರನ್ನು ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು ಮತ್ತು ನಂತರ 14 ದಿನಗಳ ಕಾಲ ಕಣ್ಣೂರಿನ ಮಹಿಳಾ ಜೈಲಿಗೆ ರಿಮಾಂಡ್ ಮಾಡಲಾಯಿತು ಎನ್ನಲಾಗಿದೆ. ಈ ರೀತಿಯಾಗಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ…

Read More

ಬೆಂಗಳೂರು: ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ಅವರ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಶಾಸಕ ಹರೀಶ್ ಪೂಂಜಾ ಅವರ ವರ್ತನೆ ವಿರುದ್ದ ಹೈಕೋರ್ಟ್ ತೀವ್ರ ಅಸಮಾಧಾನವನ್ನು ಹೊರ ಹಾಕಿದೆ. ಅರ್ಜಿ ವಿಚಾರಣೆ ನಡೆಸಿದ ಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠವು ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ಹೋಗಿ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ. ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕೂತರೆ ಹೇಗೆ? ಆಗ ಏನು ಮಾಡುವುದು ಅಂತ ತಮ್ಮ ಅಸಮಧಾನವನ್ನು ಹೊರ ಹಾಕಿದ್ದಾರೆ. ಈ ನಡುವೆ ನಂತರ ಅರ್ಜಿಯಲ್ಲಿ ಪ್ರತಿವಾದಿಯಾದ ಬೆಳ್ತಗಂಡಿ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

Read More