Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಹೆಚ್ಚುತ್ತಿದ್ದು, ಜೂನ್ 18 ರವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 4,886 ಕ್ಕೆ ತಲುಪಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಗಿಂತ 149% ಹೆಚ್ಚಾಗಿದೆ. ಈ ವರ್ಷ ಇದುವರೆಗೆ ಯಾವುದೇ ಸಾವುಗಳು ದಾಖಲಾಗಿಲ್ಲ ಎನ್ನಲಾಗಿದೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2023 ರ ಜನವರಿಯಿಂದ ಜೂನ್ 18 ರವರೆಗೆ 2,003 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದರೆ, ಈ ವರ್ಷ ಪ್ರಕರಣಗಳು 4,886 ಕ್ಕೆ ಏರಿದೆ, ಇದರಲ್ಲಿ ಬಿಬಿಎಂಪಿಯಲ್ಲಿ 1,230 ಪ್ರಕರಣಗಳು ಸೇರಿವೆ. ಕರ್ನಾಟಕದಲ್ಲಿ 2022 ರಲ್ಲಿ ಒಟ್ಟು 9,889 ಡೆಂಗ್ಯೂ ಪ್ರಕರಣಗಳು ಮತ್ತು ಒಂಬತ್ತು ಸಾವುಗಳು ಮತ್ತು 2023 ರಲ್ಲಿ (ಜನವರಿಯಿಂದ ಡಿಸೆಂಬರ್ ವರೆಗೆ) 16,566 ಸಾವುಗಳು ವರದಿಯಾಗಿವೆ. ಅತ್ಯಧಿಕ ಏರಿಕೆ: ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಕರಣಗಳ ಹೆಚ್ಚಳವು ಚಿಕ್ಕಮಗಳೂರು ಮತ್ತು ಉತ್ತರ ಕನ್ನಡದಲ್ಲಿ ಅತ್ಯಧಿಕವಾಗಿದೆ, ನಂತರ ಕಲಬುರಗಿ ಮತ್ತು ಹಾವೇರಿ. ಪ್ರಕರಣಗಳ ವಿಷಯದಲ್ಲಿ, ಚಿಕ್ಕಮಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ 2023 ರಲ್ಲಿ 13…
ಬೆಂಗಳೂರು: ತಮ್ಮ ವಿರುದ್ದ ಕೇಳಿ ಬಂದಿರುವ ಅಸ್ವಾಭಾವಿಕ ಲೈಂಗಿಕ ಕಿರುಕುಳಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದಾರೆ ಎನ್ನಲಾಗಿದೆ. ಹಾಸನದ ಸಿಇಎನ್ ಠಾಣೆಗೆ ತಾಂತ್ರಿಕ ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಹೊಳೆನರಸೀಪುರ ಪೊಲೀಸರು ಅವರನ್ನು ಕರೆ ತಂದಿದ್ದು, ಮೊಬೈಲ್ ಅನ್ನು ವಶಕ್ಕೆ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀ
ಹಾಸನ : ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ(Suraj Revanna)ವಿರುದ್ದ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ಸಂಬಂಧ ಎಫ್ಐಆರ್(FIR) ದಾಖಲಾಗಿದೆ. ಘಟನೆ ಸಂಬಂಧ ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 , 342 ಹಾಗೂ 506 ರಡಿ ಕೇಸ್ ದಾಖಲು ಮಾಡಲಾಗಿದೆ ಎನ್ನಲಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ MLC ಸೂರಜ್ ರೇವಣ್ಣ ಹೇಳಿದ್ದೇನು? ಬೆಂಗಳೂರು: ತಮ್ಮ ವಿರುದ್ದ ಕೇಳಿ ಬಂದಿರುವ ಅಸಹಜ ಲೈಂಗಿಕ ಕಿರುಕುಳ ಬಗ್ಗೆ ಹಾಸನ ಎಂಎಲ್ಸಿ ಸೂರಜ್ ರೇವಣ್ಣ ಮಾತನಾಡಿದ್ದು, ತಮ್ಮ ವಿರುದ್ದ ಕೇಳಿ ಬಂದಿರುವ ಎಲ್ಲಾ ಆರೋಪವನ್ನು ತಳ್ಳಿ ಹಾಕಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗನ್ನಿಕಡ ಫಾರ್ಮ್ ಹೌಸ್ ನಲ್ಲಿ ಸೂರಜ್ ರೇವಣ್ಣ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ನನ್ನ ವಿರುದ್ದ ಎಲ್ಲಾ ರೀತಿಯಲ್ಲಿ ಷಡ್ಯಂತ್ರ ನಡೆಯುತ್ತಿದ್ದು, ಎಲ್ಲವೂ ಕಾನೂನು ಪ್ರಕಾರ ತನಿಖೆಯಾಗಲಿ ಅಂಥ ಅವರು ಹೇಳಿದರು. ಇದಲ್ಲದೇ…
ಮಾಸ್ಕೋ: ಯುದ್ಧದ ಸಮಯದಲ್ಲಿ, ಉಕ್ರೇನಿಯನ್ ಸೈನಿಕನು ರಷ್ಯಾದ ಸೈನ್ಯಕ್ಕೆ ಶರಣಾಗುವ ವೇಳೇಯಲ್ಲಿ ಆತ ತನ್ನ ಸ್ವಂತ ಸೈನಿಕರಿಂದ ಕೊಲ್ಲಲ್ಪಟ್ಟ ಘಟನೆ ನಡೆದಿದೆ. ವೈರಲ್ ಆಗಿರುವ ವೀಡಿಯೊದಲ್ಲಿ ಸೈನಿಕನೊಬ್ಬ ರಷ್ಯಾದ ಮಿಲಿಟರಿಯತ್ತ ಡ್ರೋನ್ ಅನ್ನು ಹಿಂಬಾಲಿಸುತ್ತಿರುವುದನ್ನು ಕಾಣಿಸುತ್ತಿದೆ. ಈ ಡ್ರೋನ್ ರಷ್ಯಾದ ಸೇನೆಗೆ ಸೇರಿದ್ದು ಮತ್ತು ಅದು ಸೈನಿಕನನ್ನು ತನ್ನ ಬಳಿಗೆ ಕರೆದಿದೆ ಎಂದು ಹೇಳಲಾಗುತ್ತಿದೆ. ವೀಡಿಯೊದಲ್ಲಿ, ಸೈನಿಕನು ಬಿಳಿ ಧ್ವಜವನ್ನು ಬೀಸುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಆತ ರಷ್ಯಾದ ಸೈನ್ಯವನ್ನು ತಲುಪುವ ಮೊದಲು, ಾತ ಡ್ರೋನ್ ದಾಳಿಯಲ್ಲಿ ಸಾಯುತ್ತಾನೆ. ವೀಡಿಯೊದ ಸತ್ಯಾಸತ್ಯತೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. https://twitter.com/timesofindia/status/1804139708051599561
ಬೆಂಗಳೂರು: ನಟ ದರ್ಶನ್ ಜೈಲುಪಾಲಾಗಿದ್ದಕ್ಕೆ ಆತನ ಗೆಳತಿ ಪವಿತ್ರಗೌಡ ಜೈಲಿನಲ್ಲಿ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಇಂದು ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ ಸುದ್ದಿ ಕೇಳಿದ ಪವಿತ್ರಗೌಡ ಎಂತಹ ಕೆಲಸ ಆಯ್ತು ತನ್ನಿಂದಲೇ ಈ ಕೆಲಸ ಆಗಿದೆ ಅಂಥ ಕಣ್ಣಿರಿಟ್ಟಿದ್ದಾರೆ ಎನ್ನಲಾಗಿದೆ. ಜೈಲಿನ ಡಿ ಬಾರಕ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಗೌಡಳನ್ನು ನಿನ್ನೆಯಿಂದ ಆಕೆಯ ಸಂಬಂಧಿಕರು ಮಾತನಾಡಸಲು ಆಗಮಿಸಿದ್ದರು ಎನ್ನಲಾಗಿದೆ. ಮತ್ತೊಂದೆಡೆ ಜೈಲು ಪಾಲಾಗಿರುವ ನಟ ದರ್ಶನ್ ಕೂಡ ಜೈಲಿನ ಬ್ಯಾರಕ್ ಒಳಗೆ ಹೋಗುತ್ತಿದ್ದ ಹಾಗೇ ಮೌನಕ್ಕೆ ಶರಣಾಗಿದ್ದು, ತಮ್ಮ ಸಹಚರರ ಬಳಿ ಯಾವುದೇ ಮಾತನಾಡಲು ಮುಂದಾಗಿಲ್ಲ ಎನ್ನಲಾಗಿದೆ. ದರ್ಶನ್ 6106, ಧನರಾಜ್ 6107, ವಿನಯ್ 6108, ಪ್ರದೋಶ್ 6109 ಸಂಖ್ಯೆಯನ್ನು ನೀಡಲಾಗಿದೆ.ಭದ್ರತಾ ದೃಷ್ಟಿಯಿಂದ ದರ್ಶನ್ ಅವರನ್ನು ವಿಶೇಷ ಬ್ಯಾರಕ್ ನಲ್ಲಿ ಇರಿಸಲಾಗಿದ್ದು, ದರ್ಶನ್ರನ್ನು ತುಮಕೂರು ಜೈಲಿಗೆ ಕಳುಹಿಸುವ ಬಗ್ಗೆ ಕೂಡ ಶೀಘ್ರದಲ್ಲಿ ನ್ಯಾಯಾಲಯದಲ್ಲಿ ಆದೇಶ ಹೊರ ಬೀಳುವ ಸಾಧ್ಯತೆ ಇದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ಸೋಮವಾರ ನಡೆಯಲಿದೆ.
ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವೆನಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ. ಉದ್ಯೋಗವಿಲ್ಲದೆ ಕೆಲಸ ಹುಡುಕುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈ ತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ. ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವೆನಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು.…
ಬೆಂಗಳೂರು: ತಮ್ಮ ವಿರುದ್ದ ಕೇಳಿ ಬಂದಿರುವ ಅಸಹಜ ಲೈಂಗಿಕ ಕಿರುಕುಳ ಬಗ್ಗೆ ಹಾಸನ ಎಂಎಲ್ಸಿ ಸೂರಜ್ ರೇವಣ್ಣ ಮಾತನಾಡಿದ್ದು, ತಮ್ಮ ವಿರುದ್ದ ಕೇಳಿ ಬಂದಿರುವ ಎಲ್ಲಾ ಆರೋಪವನ್ನು ತಳ್ಳಿ ಹಾಕಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗನ್ನಿಕಡ ಫಾರ್ಮ್ ಹೌಸ್ ನಲ್ಲಿ ಸೂರಜ್ ರೇವಣ್ಣ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ನನ್ನ ವಿರುದ್ದ ಎಲ್ಲಾ ರೀತಿಯಲ್ಲಿ ಷಡ್ಯಂತ್ರ ನಡೆಯುತ್ತಿದ್ದು, ಎಲ್ಲವೂ ಕಾನೂನು ಪ್ರಕಾರ ತನಿಖೆಯಾಗಲಿ ಅಂಥ ಅವರು ಹೇಳಿದರು. ಇದಲ್ಲದೇ ನನ್ನ ವಿರುದ್ದ ದೂರು ನೀಡಿರುವ ಯುವಕನ ವಿರದ್ದ ಕೂಡ ದೂರು ದಾಖಲಾಗಿದ್ದು, ಎಲ್ಲವೂ ತನಿಖೆಯಿಂದ ಸತ್ಯ ಹೊರ ಬರಲಿ ಅಂಥ ಹೇಳುವೆ ಅಂತ ಅವರು ಹೇಳಿದರು.
ಬೆಂಗಳೂರು: ಕೃಷಿ ಇಲಾಖೆಯಲ್ಲಿ 600 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಅಂಥ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದೇ ವೇಳೆ ಅವರು ಕೃಷಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಭರ್ತಿಯಾಗದೆ ಖಾಲಿ ಉಳಿದಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ 600ಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಶೀಘ್ರ ಭರ್ತಿ ಮಾಡಲಾಗುವುದು ಅಂತ ತಿಳಿಸಿದ್ದಾರೆ. ಇನ್ನೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸಲಾದ ವಿವಿಧ ತಾಂತ್ರಿಕತೆಗಳ ಉತ್ಪನ್ನ / ಕೃಷಿ ಪರಿಕರಗಳನ್ನು ಕೃಷಿಕರಿಗೆ ಹಾಗೂ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜನಪ್ರಿಯಗೊಳಿಸುವ ಸಲುವಾಗಿ “ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ ಉತ್ಪನ್ನಗಳ ಸಂತೆ” ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ ಎಂದು ಕೃಷಿ ಸಚಿವ ಎನ್ ಚೆಲುವರಯಸ್ವಾಮಿ ತಿಳಿಸಿದರು. ಇಂದು ಕೃಷಿ ಸಚಿವ ಎನ್ ಚೆಲುವರಯಸ್ವಾಮಿ ಅವರು ಜಿ.ಕೆ.ವಿ.ಕೆ ಆವರಣದಲ್ಲಿ ಆಯೋಜಿಸಿದ್ದ“ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಉತ್ಪನ್ನಗಳ ಸಂತೆ” ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಸಚಿವರು, ಸದರಿ ಕೃಷಿ ಸಂತೆಯಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ವಿವಿಧ ಕೃಷಿ ಸಂಶೋಧನಾ,…
*ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ನಟ ದರ್ಶನ್ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲುಪಾಲಾಗಿದ್ದಾರೆ. ಇಂದು ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಕೋರ್ಟ್ ಜುಲೈ 4ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ನಡುವೆ ನಟ ದರ್ಶನ್ ನನ್ನು ಮುಂಜಾಗ್ರತಕ್ರಮವಾಗಿ ತುಮಕೂರಿನ ಜೈಲಿಗೆ ಕಳುಹಿಸಕೊಡುವ ನಿಟ್ಟಿನಲ್ಲಿ ಬಂಧಿಖಾನೆ ಅಧಿಕಾರಿಗಳು ಅಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದಲ್ಲದೇ ಕೆಲ ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಎಸ್ಪಿಪಿ ಮನವಿ ಮಾಡಿದ್ದಾರೆ ಕೂಡ ಎನ್ನಲಾಗುತ್ತಿದೆ. ಈ ಬಗ್ಗೆ ನ್ಯಾಯಾಧೀಶರು ಸೋಮವಾರ ವಿಚಾರಣೆ ನಡೆಸಲಿದ್ದು, ಅಂದೇ ಆದೇಶವನ್ನು ನೀಡಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ರೇಣುಕಸ್ವಾಮಿ ಕೊಲೆ ಆರೋಪದ ಮೇಲೆ ಸದ್ಯ ನ್ಯಾಯಾಲಯವು ದರ್ಶನ್ ರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನ್ಯಾಯಾಧೀಶರ ಮುಂದೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ಹಾಜರು ಪಡಿಸಿದ ಬಳಿಕ ನ್ಯಾಯಾಧೀಶರ ಆದೇಶದಂತೆ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಗೃಹಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಹಲವು ಅಭಿಮಾನಿಗಳು ವ್ಯಾನ್ ಬಳಿ ದರ್ಶನ್ ಪರ ಘೋಷಣೆ ಕೂಗುತ್ತಿದ್ದ ಸನ್ನಿವೇಶ ಕಂಡು ಬಂತು. ಈ ನಡುವೆ ದರ್ಶನ್ ಇದ್ದ ವ್ಯಾನ್ ಬಳಿ ಅಭಿಮಾನಿಯೊಬ್ಬ . ಈ ಥರದ್ದು ಬೇಜಾನ್ ಆಗಿದೆ ಸರ್. ತಲೆ ಕೆಡಿಸಿಕೊಳ್ಳಬೇಡಿ ಸರ್.. ಅಭಿಮಾನಿಗಳು ಹಿಂದೆ ಬರುತ್ತಾರೆ.. ನೀವು ಆರಾಮಾಗಿ ಇರಿ ಎಂದು ಹೇಳಿದ ಸನ್ನಿವೇಶ ಕಂಡು ಬಂದಿತ್ತು. ತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಮೂವರನ್ನು ಬೆಂಗಳೂರು ನಗರದ 24 ನೇ ಎಸಿಎಂಎಂ ನ್ಯಾಯಾಲಯ 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಸದ್ಯ ಈ ಎಲ್ಲರನ್ನು ಜೈಲಿಗೆ ಕಳುಹಿಸಲಾಗಿದೆ.