Author: kannadanewsnow07

ಚನ್ನೈ: ಹೈಕೋರ್ಟ್ ಆದೇಶ: ವಿವಾಹಿತ ಪುರುಷ ಮತ್ತು ಅವಿವಾಹಿತ ಮಹಿಳೆಯ ನಡುವಿನ ಲಿವ್-ಇನ್ ಸಂಬಂಧವು “ಮದುವೆಯ ಸ್ವರೂಪ” ದದ್ದಲ್ಲ, ಇದು ಪಕ್ಷಕಾರರಿಗೆ ಹಕ್ಕುಗಳನ್ನು ನೀಡುತ್ತದೆ ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಪ್ರಕರಣದ ವಿಚಾರಣೆ ನಡೆಸಿತು. ಯಾವುದೇ ಕಾನೂನಿನ ಅನುಪಸ್ಥಿತಿಯಲ್ಲಿ, ಲಿವ್-ಇನ್ ಪಾಲುದಾರರು ಇತರ ಪಕ್ಷದ ಆಸ್ತಿಯ ಉತ್ತರಾಧಿಕಾರ ಅಥವಾ ಉತ್ತರಾಧಿಕಾರವನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.  ಜಸ್ಟಿಸ್ ಆರ್‌ಎಂಟಿ ಟಿಕಾ ರಾಮನ್ ಅವರು ಮದುವೆಯಾಗಿದ್ದರೂ, ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧವನ್ನು ಪ್ರವೇಶಿಸಿದ ವ್ಯಕ್ತಿಗೆ ಪರಿಹಾರ ನೀಡಲು ನಿರಾಕರಿಸಿದರು. ಈ ಸಂದರ್ಭದಲ್ಲಿ ನ್ಯಾಯಾಲಯವು ಸಂಬಂಧವು ಮದುವೆಯ ಸ್ವರೂಪದ್ದಾಗಿರಲು, ಯುವಕರು ಸಮಾಜದಲ್ಲಿ ಪತಿ-ಪತ್ನಿಯಾಗಿ ಕಾಣಿಸಿಕೊಳ್ಳುವುದು ಮತ್ತು ಮದುವೆಯಾಗಲು ಅರ್ಹರಾಗಿರುವುದು ಅಗತ್ಯವಾಗಿದೆ ಎಂದು ಹೇಳಿದರು. ಲಿವ್-ಇನ್ ಸಂಬಂಧದ ಸಮಯದಲ್ಲಿ ಪುರುಷ ಮತ್ತು ಅವನ ಹೆಂಡತಿಯ ನಡುವಿನ ವಿವಾಹವು ಇನ್ನೂ ಅಸ್ತಿತ್ವದಲ್ಲಿದ್ದ ಕಾರಣ, ಲಿವ್-ಇನ್ ಸಂಬಂಧವನ್ನು ಮದುವೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಹೇಳಿದೆ. ಮಾರ್ಗರೇಟ್ ಅರುಲ್ಮೋಳಿ ಅವರೊಂದಿಗೆ ಲಿವ್ ಇನ್ ಸಂಬಂಧ…

Read More

ನವದೆಹಲಿ: ಗೋರಖ್ಪುರದ ಈಶಾನ್ಯ ರೈಲ್ವೆಯ ರೈಲ್ವೆ ನೇಮಕಾತಿ ಕೋಶ (ಆರ್ಆರ್ಸಿ) ವಿವಿಧ ವಿಭಾಗಗಳಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಪೇಂಟರ್, ಮೆಷಿನಿಸ್ಟ್, ಟರ್ನರ್ ಸೇರಿದಂತೆ ವಿವಿಧ ಟ್ರೇಡ್ಗಳಲ್ಲಿ ಒಟ್ಟು 1104 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಪ್ರಕ್ರಿಯೆಯು ಅಧಿಕೃತ ವೆಬ್ಸೈಟ್ ner.indianrailways.gov.in ಮತ್ತು apprentice.rrcner.net ನಲ್ಲಿ ನಡೆಯುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 11, 2024 ರೊಳಗೆ ಈ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.  ಮೆಟ್ರಿಕ್ಯುಲೇಷನ್ [ಕನಿಷ್ಠ 50% (ಒಟ್ಟು) ಅಂಕಗಳೊಂದಿಗೆ] ಮತ್ತು ಐಟಿಐ ಪರೀಕ್ಷೆ ಎರಡರಲ್ಲೂ ಅಭ್ಯರ್ಥಿಗಳು ಪಡೆದ ಶೇಕಡಾವಾರು ಅಂಕಗಳ ಸರಾಸರಿಯನ್ನು ಪರಿಗಣಿಸಿ ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಈಶಾನ್ಯ ರೈಲ್ವೆಯ ಆಕ್ಟ್‌ ಅಪ್ರೆಂಟಿಸ್‌ ಹುದ್ದೆಗಳ ಘಟಕವಾರು ವಿವರ ಮೆಕ್ಯಾನಿಕಲ್ ವರ್ಕ್‌ಶಾಪ್‌ ಗೋರಖ್‌ಪುರ್ 411 ಸಿಗ್ನಲ್ ವರ್ಕ್‌ಶಾಪ್‌ ಗೋರಖ್‌ಪುರ್ 63 ಬ್ರಿಡ್ಜ್‌ ವರ್ಕ್‌ಶಾಪ್‌ ಗೋರಖ್‌ಪುರ್‌…

Read More

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿ ಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ 2024-25ನೇ ಸಾಲಿನ (ಫೆಬ್ರವರಿ) ಅಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ ಸನ್ಮಾನ್ಯ ಮುಖ್ಯ ಮಂತ್ರಿಯವರು ಈ ಕೆಳಕಂಡಂತೆ ಘೋಷಿಸಿರುತ್ತಾರೆ. 2000 ಸರ್ಕಾರಿ ಪಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು ” ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (3)ರ ಏಕ ಕಡತದಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಬಲವರ್ಧನೆಗಾಗಿ ಹಾಲಿ ನಡೆಯುತ್ತಿರುವ ಪ್ರಾಥಮಿಕ ಶಾಲೆಗಳಿಗೆ ಅಗತ್ಯಾನುಸಾರ 1ನೇ ತರಗತಿಯಿಂದ…

Read More

ದಾವಣಗೆರೆ: 220/66/11 ಕೆ.ವಿ. ಎಸ್.ಆರ್.ಎಸ್. ಸ್ವಿಕರಣಾ ಕೇಂದ್ರದÀಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ  ಓಬಜ್ಜಿಹಳ್ಳಿ 66/11ಕೆ.ವಿ. ವಿದ್ಯುತ್ ವಿತರಣ ಕೇಂದ್ರಗಳಿಂದ ಸರಬರಾಜಾಗುವ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.    ಎಫ್-10 ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ,  ಲಕ್ಷ್ಮೀ ಬಡಾವಣೆ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು. ಎಫ್-11 ವಾಟರ್ ವಕ್ರ್ಸ ಫೀಡರ್ ವ್ಯಾಪ್ತಿಯ ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ  ನಿಗಮ, ಜಿಲ್ಲಾ ಪಂಚಾಯತ್ ಕಛೇರಿ ಎಫ್-13 ಇಂಡಸ್ಟ್ರಿಯಲ್ ಫೀಡರ್ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ,   ಎಸ್.ಎ  .ರವೀಂದ್ರನಾಥ ಬಡಾವಣೆ ಮತ್ತು  ಸುತ್ತ …

Read More

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ತರಬೇತಿಗಾಗಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ನಿಂದ ಪಡೆಯಬಹುದು. ದೂ.ಸಂ: ದಕ್ಷಿಣ ಕನ್ನಡ ಜಿಲ್ಲೆ : ದೂ.ಸಂ. 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ ಜಿಲ್ಲೆ : ದೂ.ಸಂ. 08382-226589ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Read More

ಬೆಂಗಳೂರು: ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಅಂತ ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ತಿಳಿಸಿದ್ದಾರೆ.  ಚಾಮರಾಜನಗರದ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್‌ನಡಿ ತಮ್ಮ ಉದ್ಯಮ ಆರಂಭಿಸಿದ್ದು, ಕಾಮಗಾರಿ ಭರದಿಂದ ಸಾಗಿದೆ. ಇಲ್ಲಿ ಅವರು ಆರಂಭದಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಮುಂದಾಗಿದ್ದರು. ಇದೀಗ ಹೂಡಿಕೆ ಸಾವಿರ ಕೋಟಿ ರೂಪಾಯಿ ಮುಟ್ಟುತ್ತಿದ್ದು, ಮುಂದಿನ ದಿನಗಳಲ್ಲಿ ಇದು 1,400 ಕೋಟಿ ರೂಪಾಯಿ ಆಗಲಿದೆ ಎಂದು ಸಚಿವ ಎಂಬಿ ಪಾಟೀಲ್‌ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಮುತ್ತಯ್ಯ ಮುರಳೀಧರನ್‌ ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

Read More

ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಭಾರತದಾದ್ಯಂತ ಸೈಬರ್ ವಂಚನೆಗಳು ಕೆಲವು ರಾಜ್ಯಗಳ ವಾರ್ಷಿಕ ವೆಚ್ಚಕ್ಕೆ ಹೋಲಿಸಬಹುದಾದ ಸಾರ್ವಜನಿಕ ನಷ್ಟಕ್ಕೆ ಕಾರಣವಾಗಿವೆ. ಕಳೆದ ಮೂರು ವರ್ಷಗಳಲ್ಲಿ ಸೈಬರ್ ವಂಚನೆಗಳಿಂದ ಭಾರತೀಯ ಸಾರ್ವಜನಿಕರಿಗೆ 25,000 ಕೋಟಿ ರೂ.ಗಳ ನಷ್ಟವಾಗಿದೆ ಎಂದು ಸರ್ಕಾರದ ಇತ್ತೀಚಿನ ಮೌಲ್ಯಮಾಪನವು ಅಂದಾಜಿಸಿದೆ, ಇದು ಸಿಕ್ಕಿಂನ ವಾರ್ಷಿಕ ಬಜೆಟ್ಗಿಂತ ಎರಡು ಪಟ್ಟು ಹೆಚ್ಚಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಲ್ಲಿ (ಎಂಇಐಟಿವೈ) ಉನ್ನತ ಮಟ್ಟದ ಸಭೆ ನಡೆಯಿತು, ಅಲ್ಲಿ ಗೃಹ ಸಚಿವಾಲಯ ಮತ್ತು ಎಂಇಐಟಿವೈ ಅಧಿಕಾರಿಗಳು ಇನ್ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಗೂಗಲ್ನಂತಹ ವಿವಿಧ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳೊಂದಿಗೆ ಕಳವಳಗಳನ್ನು ಹಂಚಿಕೊಂಡರು. ಸಭೆಯಲ್ಲಿ, ಕಳೆದ ಮೂರು ವರ್ಷಗಳಲ್ಲಿ ಸೈಬರ್ ವಂಚನೆಗಳಲ್ಲಿ 25,000 ಕೋಟಿ ರೂ.ಗಳ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ ವರ್ಷವೊಂದರಲ್ಲೇ ಸೈಬರ್ ವಂಚನೆಗೆ ಸಂಬಂಧಿಸಿದಂತೆ ಪ್ರತಿದಿನ ಸರಾಸರಿ 27 ಎಫ್ಐಆರ್ಗಳು ದಾಖಲಾಗಿದ್ದವು. ಸೈಬರ್ ವಂಚನೆ ದೂರುಗಳ ನಿಜವಾದ ಸಂಖ್ಯೆಗಿಂತ ಈ ಸಂಖ್ಯೆ ಗಮನಾರ್ಹವಾಗಿ ಕಡಿಮೆಯಾಗಿದೆ. ಎನ್ನಲಾಗಿದೆ.

Read More

ದಾವಣಗೆರೆ: ಪ್ರತಿ ವರ್ಷ ಜನವರಿ ಅಥವಾ ಫೆಬ್ರವರಿ 2024ನೇ ಮಾಹೆಯಲ್ಲಿ ಎಲ್ಲಾ ಇಲಾಖಾ ನೌಕರರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ವಾರ್ಷಿಕ ಸದಸ್ಯತ್ವ ಶುಲ್ಕ ರೂ.200/- (ಎರಡು ನೂರು ರೂಪಾಯಿ) ಗಳನ್ನು ಕಟಾಯಿಸಿರುವ ನೌಕರರ ವಿವರವನ್ನು ನೀಡಲು ತಿಳಿಸಿರುತ್ತಾರೆ. ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿ ಚುನಾವಣೆ ನಡೆಸಲು ಅರ್ಹ ಮತದಾರರನ್ನು ನಿಗಧಿತ ನಮೂನೆಯಲ್ಲಿ ತಮ್ಮ ಇಲಾಖೆ ಹಾಗೂ ಆಧೀನ ಕಛೇರಿಗಳಲ್ಲಿ (ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಅರ್ಹ ಮತದಾರರ ಪಟ್ಟಿ ತಯಾರಿಸಲು ವಿವರವಾದ ಮಾಹಿತಿಯನ್ನು) ಭರ್ತಿ ಮಾಡಿ ಪ್ರತಿಯನ್ನು ಜಿಲ್ಲಾ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನ, ನಿಜಲಿಂಗಪ್ಪ ಬಡಾವಣೆ, ರಿಂಗ್ ರೋಡ್ ಸರ್ಕಲ್, ದಾವಣಗೆರೆ ಜೂನ್ 21 ರೊಳÀಗಾಗಿ ಕಳುಹಿಸಬೇಕೆಂದು ಕ.ರಾ.ಸ.ನೌ.ಸಂಘದ ಜಿಲ್ಲಾಧ್ಯಕ್ಷರದ ವಿರೇಶ್.ಎಸ್.ಒಡೆಯನಪುರ ತಿಳಿಸಿದ್ದಾರೆ.

Read More

ದಾವಣಗೆರೆ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿವಿಧ ಕಲಾ ಪ್ರಕಾರಗಳ ಕಲಾವಿದರಿಗೆ ಕಲಾವಿದರ ಗುರುತಿನ ಚೀಟಿಗೆ ಜೂ. 28 ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು ತಾವು ಕಲಾಪ್ರದರ್ಶನ ನೀಡಿದ ದಾಖಲೆಗಳೊಂದಿಗೆ ನಿಗಧಿತ ಅರ್ಜಿ ನಮೂನೆಯೊಂದಿಗೆ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ನಿರ್ದೇಶಕರು ತಿಳಿಸಿದ್ದಾರೆ.

Read More

ಬೆಂಗಳೂರು: 2024ನೇ ಮೇ ತಿಂಗಳಲ್ಲಿ ನಡೆದ ತಾಂತ್ರಿಕ ಪರೀಕ್ಷಾ ಮಂಡಳಿಯ ಸಿ-20 ಪಠ್ಯಕ್ರಮದ 6ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಈಗಾಗಲೇ ಮೇ 28ರಂದು ಪ್ರಕಟಿಸಲಾಗಿದ್ದು, ಇನ್ನುಳಿದ ಎಲ್ಲಾ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಜೂನ್ 18ರಂದು ರಾಜ್ಯದ ಎಲ್ಲಾ ಪಾಲಿಟೆಕ್ನಿಕ್‍ಗಳಲ್ಲಿ ಅಪರಾಹ್ನ 2.00 ಗಂಟೆಗೆ ಪ್ರಕಟಿಸಲಾಗುವುದು ಹಾಗೂ ಪರೀಕ್ಷಾ ಫಲಿತಾಂಶವು www.bteresults.in ವೆಬ್‍ಸೈಟ್‍ನಲ್ಲಿ ಲಭ್ಯವಿದೆ ಎಂದು ತಾಂತ್ರಿಕ ಪರೀಕ್ಷಾ ಮಂಡಳಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More