Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಭಾರತೀಯ ವಾಯುಪಡೆ (ಐಎಎಫ್) ಮೊದಲ ಬಾರಿಗೆ ಪೂರ್ವ ವಲಯದ ಸುಧಾರಿತ ಲ್ಯಾಂಡಿಂಗ್ ಮೈದಾನದಲ್ಲಿ ರಾತ್ರಿ ದೃಷ್ಟಿ ಕನ್ನಡಕ (ಎನ್ವಿಜಿ) ಬಳಸಿ ವಿಮಾನವನ್ನು ಯಶಸ್ವಿಯಾಗಿ ಇಳಿಸಿದೆ. IAFನ ಅಧಿಕೃತ X ಖಾತೆಯು ಈ ಸುದ್ದಿಯನ್ನು ಹಂಚಿಕೊಂಡಿದೆ, “IAF C-130J ವಿಮಾನವು ಈಸ್ಟರ್ನ್ ಸೆಕ್ಟರ್ನಲ್ಲಿರುವ ಅಡ್ವಾನ್ಸ್ಡ್ ಲ್ಯಾಂಡಿಂಗ್ ಗ್ರೌಂಡ್ನಲ್ಲಿ ಯಶಸ್ವಿ ನೈಟ್ ವಿಷನ್ ಗಾಗಲ್ಸ್ ಸಹಾಯದ ಲ್ಯಾಂಡಿಂಗ್ ಅನ್ನು ನಡೆಸಿತು. ಪೂರ್ವ ವಲಯವು ಭಾರತದ ಈಶಾನ್ಯ ರಾಜ್ಯಗಳಾದ ಒಡಿಶಾ, ಜಾರ್ಖಂಡ್, ಸಿಕ್ಕಿಂ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಭಾಗಗಳನ್ನು ಒಳಗೊಂಡಿದೆ. ಇದು ಚೀನಾ, ನೇಪಾಳ, ಭೂತಾನ್, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದೊಂದಿಗೆ 6300 ಕಿಮೀ ಉದ್ದದ ಅಂತರಾಷ್ಟ್ರೀಯ ಗಡಿಯ ರಕ್ಷಣೆಯನ್ನು ಸಹ ನೋಡಿಕೊಳ್ಳುತ್ತದೆ. NVG ತಂತ್ರಜ್ಞಾನವನ್ನು ಬಳಸಿಕೊಂಡು, IAF ಈಗ ಕಡಿಮೆ-ಬೆಳಕಿನ ಪರಿಸ್ಥಿತಿಗಳಲ್ಲಿ ಸುರಕ್ಷಿತ ಮತ್ತು ಹೆಚ್ಚು ಪರಿಣಾಮಕಾರಿ ಕಾರ್ಯಾಚರಣೆಗಳನ್ನು ನಡೆಸಬಹುದು. ಇದು ರಾತ್ರಿ-ಸಮಯದ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ಪ್ರಾರಂಭಿಸಲು ಮತ್ತು ಮುಕ್ತಾಯಗೊಳಿಸಲು IAF ನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. https://twitter.com/IAF_MCC/status/1793496057726566761
ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದವರ 6 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಕಂಡು ಬಂದಿದೆ ಎನ್ನಲಾಗಿದೆ. 73 ಪುರುಷರು ಮತ್ತು 30 ಯುವತಿಯರಲ್ಲಿ ಕೊಕೇನ್ ಮತ್ತು ಹೈಡ್ರೋ ಗಾಂಜಾದಂತಹ ಪದಾರ್ಥಗಳನ್ನು ಸೇವಿಸಿದ್ದಾರೆ ಎಂದು ಪಾರ್ಟಿಯ ನಂತರ ನಡೆಸಿದ ರಕ್ತ ಪರೀಕ್ಷೆಗಳಿಂದ ದೃಢಪಡಿಸಲಾಗಿದೆ. ಆಘಾತಕಾರಿ ಸಂಗತಿಯೆಂದರೆ, 73 ಪುರುಷರಲ್ಲಿ 59 ಮತ್ತು 30 ಯುವತಿಯರಲ್ಲಿ 27 ಮಂದಿ ಮಾದಕ ದ್ರವ್ಯ ಸೇವನೆಗೆ ಪಾಸಿಟಿವ್ ಪರೀಕ್ಷೆ ನಡೆಸಲಾಗಿದೆ ಎನ್ನಲಾಗಿದೆ. ತೆಲುಗು ಕಿರುತೆರೆ ನಟಿ ಹೇಮ(ಕೃಷ್ಣವೇಣಿ) ಪಾಲ್ಗೊಂಡಿರುವುದು ಬಯಲಾಗಿದೆ. ಯಾಕೆಂದರೆ ಈಕೆಯ ಬ್ಲಡ್ ರಿಪೋರ್ಟ್ನಲ್ಲಿ ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ. ಜಿಎಂ ಫಾರ್ಮ್ ಹೌಸ್ನಲ್ಲಿ ನಡೆದ ಈ ಕಾರ್ಯಕ್ರಮವನ್ನು ಹೈದರಾಬಾದ್ ಮೂಲದ ವಾಸು ಆಯೋಜಿಸಿದ್ದರು. ಆಂಧ್ರಪ್ರದೇಶ ಮತ್ತು ಬೆಂಗಳೂರಿನಿಂದ 100 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು, ಇದಲ್ಲದೇ “ಸೂರ್ಯಾಸ್ತದಿಂದ ಸೂರ್ಯೋದಯದವರೆಗೆ” ಎಂದು ಪ್ರಚಾರ ಮಾಡಲಾಯಿತು, ಪಾರ್ಟಿಯು ಸಂಜೆ 5 ಗಂಟೆಗೆ ಪ್ರಾರಂಭವಾಯಿತು ಮತ್ತು ಬೆಳಿಗ್ಗೆ 6 ಗಂಟೆಯವರೆಗೆ ನಡೆಯಿತು ಎನ್ನಲಾಗಿದೆ.
ಕಲುಷಿತ ನೀರಿನಿಂದ ತೊಂದರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ: ಕೂಡಲೇ ಅಮಾನತು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು: ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಇದೇ ವೇಳೆ ಅವರು ಸಭೆಯಲ್ಲಿ ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ…
ಬೆಂಗಳೂರು: ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ವಿಮಾ ಕಂಪನಿಗಳ ನಡವಳಿಕೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ. ಆದ್ದರಿಂದ ಈ ಕುರಿತು ಮುಂಚಿತವಾಗಿಯೇ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೈಸೂರಿನ ಎರಡು ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ. ನರಸೀಪುರ ತಾಲ್ಲೂಕು…
ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದು, ಕೂಡಲೇ ಅವರ ಬಂಧನಕ್ಕೆ ಅವಕಾಶ ಮಾಡಿಕೊಡಬೇಕಾಗಿ ಆಗ್ರಹಿದ್ದಾರೆ. ಈ ನಡುವೆ ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂತ ಇಲಾಖೆಯು ಪ್ರಜ್ವಲ್ ರೇವಣ್ ಅವರ ಪಾಸ್ ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ ಎನ್ನಲಾಗಿದೆ. ಎಸ್ಐಟಿಯಿಂದ ಪಾಸ್ಪೋರ್ಟ್ ರದ್ದತಿ ಮನವಿ ಬಂದಿದೆ. ಹೀಗಾಗಿ ಪಾಸ್ಪೋರ್ಟ್ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.
ಶಿವಮೊಗ್ಗ: ಶಿವಮೊಗ್ಗದಿಂದ ಕುಂದಾಪುರಕ್ಕೆ ಹೋಗುವ ಬಸ್ವೊಂದು ಡೀಸೆಲ್ ಖಾಲಿಯಾಗಿ ನಡು ರೋಡಲ್ಲಿ ಪ್ರಯಾಣಿಕರನ್ನ ಇಳಿಸಿದ ಘಟನೆ ಶಿವಮೊಗ್ಗ ಹುಲಿಕಲ್ ಘಾಟಿಯ ಬಳಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರ ಹೋಗುತ್ತಿದ್ದ ಬಸ್ ನಿನ್ನೆ ಸಂಜೆ ಮಾಸ್ತಿಕಟ್ಟೆ ಸಮೀಪ ಡಿಸೇಲ್ ಇಲ್ಲ ಎನ್ನುವ ಕಾರಣಕ್ಕೆ ನಿಂತಿದೆ ಎನ್ನಲಾಗಿದೆ. ಬಸ್ನ ಡ್ರೈವರ್ ಹಾಗೂ ಕಂಡಕ್ಟರ್ ವಿಷಯವನ್ನು ತಮ್ಮ ಮೇಲಾಧಿಕಾರಿಗಳಿಗೆ ಈ ಬಗ್ಗೆ ಗಮನಕ್ಕೆ ತಂದ ವೇಳೆಯಲ್ಲಿ ಅಧಿಕಾರಿಗಳು ನಿಮ್ಮ ಹಣದಿಂದಲೇ ಡಿಸೇಲ್ ಹಾಕಿಸಿಕೊಂಡು ಬನ್ನಿ ಅಂತ ಹೇಳಿ ತಮ್ಮ ಉದಾಸೀನವನ್ನು ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆ ಮಹಿಳೆಯರು ಮಕ್ಕಳು ಕೂಡ ಈ ಘಟನೆಯಿಂದ ನೊಂದು ಹೋಗಿದ್ದಾರೆ ಎನ್ನಲಾಗಿದೆ. ಈ ನಡುವೆ ಖಾಸಗಿ ಬಸ್ಗಳಿಗೆ ಪ್ರಯಾಣಿಕರನ್ನು ಹತ್ತಿಸಿ ಅವರವರ ಊರಿಗೆ ಹೋಗಿದ್ದಾರೆ ಎನ್ನಲಾಗಿದೆ. ಇನ್ನೂ ಕಳೆದ ಒಂದು ತಿಂಗಳಿನಲ್ಲಿ ಇದೇ ಮಾರ್ಗದಲ್ಲಿ ಮೂರು ಸಲ ಕೆಎಸ್ಆರ್ಟಿಸಿ ಬಸ್ ಡೀಸೆಲ್ ಇಲ್ಲದೆ ನಿಂತಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಸರ್ಕಾರ ಈ ಕೂಡಲೇ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಶಿವಮೊಗ್ಗ: ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಶಿಕಾರಿಪುರದಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್,ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಟರ್ನರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ ಸಿ.ಎನ್.ಸಿ ಮೆಷಿನಿಂಗ್, ಬೇಸಿಕ್ ಡಿಸೈನರ್& ವರ್ಚುವಲ್ ವೇರಿಫೈಯರ್ ಮೆಕ್ಯಾನಿಕ್,ಆರ್ಟಿಸಸ್ ಯೂಸಿಂಗ್ ಅಡ್ವಾನ್ಸ್ ಟೂಲ್, ಮ್ಯಾನುಫಾಕ್ಟರಿಂಗ್ ಪ್ರೋಸಸ್ ಕಂಟ್ರೋಲ್ & ಆಟೋಮೆಷನ್ ಹಾಗೂ ಪಿಪಿಪಿ ಮ್ಯಾನೇಜ್ಮೆಂಟ್ ಸೀಟ್ನಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಮತ್ತು 8ನೇ ತರಗತಿ ಪಾಸ್ / ಎಸ್.ಎಸ್.ಎಲ್,ಸಿ ಪಾಸ್/ಫೇಲ್ ಆದವರಿಗೆ ವೆಲ್ಡರ್ ಹುದ್ದೆಗಳಿಗೆ ತರಬೇತಿ ನೀಡಲಾಗುವುದು. ಆಸಕ್ತ ಆಭ್ಯರ್ಥಿಗಳು www.cite.karnataka.gov.in ಆನ್ಲೈನ್ನಲ್ಲಿ ಜೂ. 03 ರೊಳಗಾಗಿ ಸಲ್ಲಿಸುವುದು ಹಾಗೂ ಆಯ್ಕೆ ಮಾಡಿಕೊಂಡ ಸರ್ಕಾರಿ ಐಟಿಐ ಗಳಲ್ಲಿ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ತೆರಳಿ ನಿಗದಿತ ದಿನಾಂಕದೂಳಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳುವುದು ಹಾಗೂ ಪಿಪಿಪಿ ಸೀಟುಗಳ ಪ್ರವೇಶಕ್ಕಾಗಿ ಖುದ್ದಾಗಿ/ಕಚೇರಿ ದೂ.ಸಂ. ಮೂಲಕ…
ಬೆಂಗಳೂರು: ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಇದೇ ವೇಳೆ ಸಿಎಂ ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ…
ಬುಧವಾರ ಮೆಕ್ಸಿಕೋದಲ್ಲಿ ಪ್ರಚಾರ ರ್ಯಾಲಿಯಲ್ಲಿ ಭಾರಿ ಗಾಳಿಯಿಂದಾಗಿ ವೇದಿಕೆ ಕುಸಿದು ಒಂಬತ್ತು ಜನರು ಸಾವನ್ನಪ್ಪಿದರು ಮತ್ತು ಅಧ್ಯಕ್ಷೀಯ ಅಭ್ಯರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎನ್ನಲಾಗಿದೆ. ಈಶಾನ್ಯ ನಗರವಾದ ಸ್ಯಾನ್ ಪೆಡ್ರೊ ಗಾರ್ಜಾ ಗಾರ್ಸಿಯಾದಲ್ಲಿ ವೇದಿಕೆಯ ಕೆಳಗೆ ಸಿಲುಕಿರುವವರನ್ನು ಉಳಿಸಲು ರಕ್ಷಣಾ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ. ಸತ್ತವರಲ್ಲಿ ಒಂದು ಮಗುವೂ ಸೇರಿದೆ ಎಂದು ಮೆಕ್ಸಿಕೊದ ನ್ಯೂವೊ ಲಿಯಾನ್ ರಾಜ್ಯದ ಗವರ್ನರ್ ಸ್ಯಾಮ್ಯುಯೆಲ್ ಗಾರ್ಸಿಯಾ ಹೇಳಿದ್ದಾರೆ. ಗಾಯಗೊಂಡವರಲ್ಲಿ ಕೆಲವರು ಈಗ ಸ್ಥಿರವಾಗಿದ್ದಾರೆ ಆದರೆ ಇತರರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರು ಹೇಳಿದರು. https://twitter.com/BNONews/status/1793483125437374584
ನವದೆಹಲಿ: 2010 ರ ನಂತರ ರಾಜ್ಯದಲ್ಲಿ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ದ್ವಾರಕಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, “ಇಂದು, ಕಲ್ಕತ್ತಾ ಹೈಕೋರ್ಟ್ INDI ಮೈತ್ರಿಗೆ ಬಿಗಿಯಾದ ಕಪಾಳಮೋಕ್ಷ ಮಾಡಿದೆ. ಬಂಗಾಳದಲ್ಲಿ 2010 ರ ನಂತರ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳನ್ನು ನ್ಯಾಯಾಲಯವು ರದ್ದುಗೊಳಿಸಿದೆ. ಪಶ್ಚಿಮ ಬಂಗಾಳ ಸರ್ಕಾರವು ಮುಸ್ಲಿಮರಿಗೆ ವಿವರಿಸಲಾಗದ ರೀತಿಯಲ್ಲಿ OBC ಪ್ರಮಾಣಪತ್ರಗಳನ್ನು ನೀಡಿದ್ದರಿಂದ ಇದನ್ನು ಮಾಡಲಾಗಿದೆ. ಅವರ ರಾಜಕೀಯ ಮತ್ತು ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣದ ಗೀಳು ಎಲ್ಲಾ ಮಿತಿಗಳನ್ನು ದಾಟಿದೆ ಅಂತ ಹೇಳಿದರು. “ಆಜ್ ಕೋರ್ಟ್ ನೆ ತಮಾಚಾ ಮಾರಾ ಹೈ, ಯಹ್ ಖಾನ್ ಮಾರ್ಕೆಟ್ ಗ್ಯಾಂಗ್ ಪಾಪ್ ಕಾ ಭಾಗಿದರ್ ಹೈ (ಇಂದು ನ್ಯಾಯಾಲಯವು ಭಾರಿ ಹೊಡೆತ ನೀಡಿದೆ, ಪಾಪಕ್ಕೆ ಈ ಖಾನ್ ಮಾರ್ಕೆಟ್ ಹೊಣೆಯಾಗಿದೆ)”…








