Author: kannadanewsnow07

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹೈದ್ರಬಾದ್-ಕರ್ನಾಟಕ ವೃಂದದ-201 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಜನವರಿ 9, 2023 ಹಾಗೂ ಹೆಚ್ಚುವರಿ ಪಟ್ಟಿಯನ್ನು ಮೇ 5, 2023 ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 15 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಾನುಕ್ರಮದನುಸಾರ 34 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್‍ಆಫ್ ಅಂಕಗಳ ಪಟ್ಟಿಯನ್ನು ಸಿದ್ಧಪಡಿಸಿ ಜೂನ್ 15 ರಂದು ಆಯೋಗದ ವೆಬ್‍ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ.  ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ. ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂ ಮೇಟ್ ಗಳಾಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಬಂದಿತ್ತು. ಅದು ಸೂಪರ್ ಹಿಟ್ ಆಗಿತ್ತು. ಈ…

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಇನ್ನೂ ಸರಿಯಾಗಿ ಕಾಲಿಟ್ಟಿಲ್ಲ, ಬರಗಾಲ ಛಾಯೆಯಿಂದ ಹೊರ ಬರುವುದಕ್ಕೆ ಇನ್ನೂ ಹಲವು ದಿನಗಳು ಬೇಕಾಗಿದ್ದು, ಒಂದು ವೇಳೆ ಮಳೆ ಸಮಯಕ್ಕೆ ಸರಿಯಾಗಿ ಬಾರದೇ ಹೋದರೆ ಇಡೀ ಆರ್ಥ ವ್ಯವಸ್ಥೆ ಮೇಲೆ ಗಂಭಿರವಾದ ಪರಿಣಾಮ ಬೀರುವುದು ಸುಳ್ಳಲ್ಲ. ಈ ನಡುವೆ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದಿದ್ದೆ. ಇವೆಲ್ಲದರ ನಡುವೆ ಶನಿವಾರದಿಂದ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೂ ಹೆಚ್ಚಳ ಕಂಡಿದ್ದು, ಇದು ಕೂಡ ತರಕಾರಿಗಳ, ದಿನಸಿ ವಸ್ತುಗಳ ಬೆಲೆಯಲ್ಲಿನ ಹೆಚ್ಚಳಕ್ಕೆ ಕಾರಣವಾಗಬಹುದು ಎನ್ನಲಾಗಿದೆ.

Read More

ಬೆಂಗಳೂರು: ಹೊಸ ಬಿಪಿಲ್‌ ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಸರ್ಕಾರದಿಂದ ಬಿಗ್‌ ಶಾಕ್‌ ಸಿಕ್ಕಿದೆ. ಹೌದು, ಹೊಸದಾಗಿ ಕಾರ್ಡ್‌ಗಳನ್ನು ವಿತರಿಸಿದರೆ ಅಂತಹವರಿಗೆ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಹಣವನ್ನೂ ಕೂಡ ನೀಡಬೇಕಾಗುತ್ತದೆ, ಇದು ರಾಜ್ಯ ಸರ್ಕಾರಕ್ಕೆ ಹೊರೆಯಾಗುವ ನಿಟ್ಟಿನಲ್ಲಿ ಸದ್ಯಕ್ಕೆ ಹೊಸ ಕಾರ್ಡ್‌ಗಳನ್ನು ನೀಡದೇ ಇರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿರುವ ಬಹುದು ಎನ್ನಲಾಗಿದೆ. 2023ರ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನಲೆಯಲ್ಲಿ ಹೊಸ ಪಡಿತರ ಚೀಟಿಯನ್ನು ನೀಡುವುದಕ್ಕೆ ತಡೆ ಇತ್ತು, ಆದಾದ ಬಳಿಕ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೂಡ ಹೊಸ ಕಾರ್ಡ್‌ಗಳನ್ನು ನೀಡಲಾಗುತ್ತಿರಲಿಲ್ಲ. ಸದ್ಯ ಹೊಸದಾಗಿ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಸಾಕಷ್ಟು ಮಂದಿ ಕಾಯುತ್ತಿದ್ದು, ಅಂತಹವರಿಗೆ ಹೊಸ ಕಾರ್ಡ್ ಸಿಗುವುದು ಸದ್ಯಕ್ಕೆ ಅನುಮಾನ ಮೂಡಿಸಿದೆ. ಸರ್ಕಾರ ಕೂಡ ಈ ಬಗ್ಗೆ ಸೂಕ್ತ ಕಾಲದಲ್ಲಿ ನಿರ್ಧಾರವನ್ನು ಅರ್ಹರಿಗೆ ನೀಡುವ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಿದೆ.

Read More

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ಹುದ್ದೆಗೆ ಉಪನಿರ್ದೇಶಕರ ಕಛೇರಿಯಲ್ಲಿ ತಾತ್ಕಾಲಿಕವಾಗಿ ಕರ್ತವ್ಯಕ್ಕೆ ಹಾಜರಾಗಿರುವ ಶಿಕ್ಷಕರಿಗೆ ಸಿ ವಲಯದ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕೌನ್ಸಿಲಿಂಗ್. ಮೂಲಕ ಸ್ಥಳ ನಿಯುಕ್ತಿ ಮಾಡುವ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಕೆಳಕಂಡ ಮಾಹಿತಿಯನ್ನು ನೀಡಿದೆ.  2022-23 ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಪದವೀಧರ ಪ್ರಾಥಮಿಕ ಶಿಕ್ಷಕರು ( 6 ರಿಂದ 8 ನೇ ತರಗತಿ) ಹುದ್ದೆಗೆ ಕೌನ್ಸಿಲಿಂಗ್‌ ಮೂಲಕ ಸ್ಥಳ ಹಂಚಿಕೆ ಪ್ರಕ್ರಿಯೆ ಕೈಗೊಳ್ಳಲಾಗಿತ್ತು. ಕೆಲವೊಂದು ಜಿಲ್ಲೆಗಳಲ್ಲಿ ಸಿ ವಲಯದ ಖಾಲಿ ಹುದ್ರಗಳು ಲಭ್ಯವಿಲ್ಲದ ಪ್ರಯುಕ್ತ ಅಂತಹ ಶಿಕ್ಷಕರುಗಳಿಗೆ ಆಯಾ ವ್ಯಾಪ್ತಿಯ ಉರನಿರ್ದೇಶಕರು(ಆಡಳಿತ)ಗಳ ಕಛೇರಿಯಲ್ಲಿ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ತದನಂತರ ಉಲ್ಲೇಖ 13 ರಂತೆ ಉಪನಿರ್ದೇಶಕರ ಕಛೇರಿಯನ್ನು ಆಯ್ಕೆ ಮಾಡಿಕೊಂಡಿರುವ ಶಿಕ್ಷಕರು ಸೇವೆಯನ್ನು ಶಾಲೆಗಳಲ್ಲಿ ಬಳಸಿಕೊಳ್ಳುವ ದೃಷ್ಟಿಯಿಂದ ಅಗತ್ಯತೆಗನುಸಾರ…

Read More

ನವದೆಹಲಿ: ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನುಗಳನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಭಾನುವಾರ ಹೇಳಿದ್ದಾರೆ.  ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷರತಾ ಕಾಯ್ದೆಯಿಂದ ಬದಲಾಯಿಸಲಾಗುವುದು ಎಂದು ಮೇಘವಾಲ್ ಹೇಳಿದರು. ಹೊಸ ಕಾನೂನುಗಳನ್ನು ಜಾರಿಗೆ ತರಲು ಅಗತ್ಯ ತರಬೇತಿ ಕಾರ್ಯಕ್ರಮಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಈಗಾಗಲೇ ನಡೆಯುತ್ತಿದೆ ಎಂದು ಅವರು ಹೇಳಿದರು. “ಸಮಯೋಚಿತ, ತ್ವರಿತ ಮತ್ತು ದೋಷರಹಿತ ನ್ಯಾಯವನ್ನು ಒದಗಿಸಲು ಮೂರು ಹೊಸ ಕಾನೂನುಗಳನ್ನು ಜುಲೈ 1 ರಿಂದ ಜಾರಿಗೆ ತರಲಾಗುವುದು” ಎಂದು ಮೇಘವಾಲ್ ಭಾನುವಾರ ಇಲ್ಲಿ ನಡೆದ ‘ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ’ ಉದ್ಘಾಟನಾ ಅಧಿವೇಶನದಲ್ಲಿ ಹೇಳಿದರು.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಜ್ಯೋತಿಷ್ಯದಲ್ಲಿ ರಾಹುವನ್ನು ನೆರಲಿನ ಗ್ರಹವೆಂದು ಪರಿಗಣಿಸಲಾಗಿದೆ. ಆದರೆ ಈ ರಾಹು ಅನುಕೂಲಕರ ಸ್ಥಾನದಲ್ಲಿದ್ದರೆ ಇದು ಬೀರುವ ಪ್ರಭಾವ ತುಂಬಾನೇ ಅನುಕೂಲಕರವಾಗಿದೆ, ಅದರಲ್ಲಿಯೂ ರಾಹು ಈ ಮನೆಯಲ್ಲಿದ್ದರೆ ಆ ರಾಶಿಯವರು ಆರ್ಥಿಕವಾಗಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತಾರೆ: 3, 6, 10, 11ನೇ ಮನೆ ಒಬ್ಬ ವ್ಯಕ್ತಿಯ ರಾಶಿಯಲ್ಲಿ ರಾಹು ಮೂರು ಅಥವಾ ಆರು ಅಥವಾ 11ನೇ ಮನೆಯಲ್ಲಿದ್ದರೆ ಅವರು ತುಂಬಾನೇ ಒಳ್ಳೆಯ ಪ್ರಯೋಜನ ಪಡೆಯುತ್ತಾರೆ. ರಾಹು ಜನ್ಮ ಕುಂಡಲಿಯಲ್ಲಿ 10 ಅಥವಾ 12ನೇಮನೆಯಲ್ಲಿದ್ದರೆ ಆ ವ್ಯಕ್ತಿ ತುಂಬಾನೇ ಪ್ರಸಿದ್ಧಿಯನ್ನು ಪಡೆಯುತ್ತಾರೆ ಎಂದು ಹೇಳಲಾಗುವುದು ಮೂರನೇ ಮನೆ ಜನ್ಮ ಕುಂಡಲಿಯಲ್ಲಿ ರಾಹು ಮೂರನೇ ಮನೆಯಲ್ಲಿದ್ದರೆ ನಿಮ್ಮೆಲ್ಲಾ ಆಸೆ ಈಡೇರಲಿದೆ, ನೀವು ಗುರಿ ಮುಟ್ಟಲು ಸಾಧ್ಯವಾಗುವುದು. ಇವರ ಸಂಹವಹನ ಶೈಲಿ, ವೃತ್ತಿ ಕೌಶಲ್ಯ ಚೆನ್ನಾಗಿರಲಿದೆ. 6ನೇ ಮನೆ ರಾಹು 6ನೇ ಮನೆಯಲ್ಲಿ ಇದ್ದಾಗ ಆ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆಯಲ್ಲಿ ಮರ ಮತ್ತು ಗಿಡಗಳನ್ನು ನೆಡುವ ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಶಾಸ್ತ್ರಗಳ ಪ್ರಕಾರ, ಮನೆಯಲ್ಲಿ ಕೆಲವು ವಿಶೇಷ ಮರಗಳು ಮತ್ತು ಗಿಡಗಳನ್ನು ನೆಡುವುದರಿಂದ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಮನೆಯಲ್ಲಿ ಮರ ಮತ್ತು ಗಿಡಗಳನ್ನು ನೆಡುವ ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಶಾಸ್ತ್ರಗಳ ಪ್ರಕಾರ, ಮನೆಯಲ್ಲಿ ಕೆಲವು ವಿಶೇಷ ಮರಗಳು ಮತ್ತು ಗಿಡಗಳನ್ನು ನೆಡುವುದರಿಂದ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಮನೆಯ ಸರಿಯಾದ ದಿಕ್ಕಿನಲ್ಲಿ ಮರ, ಗಿಡಗಳನ್ನು ನೆಡದಿರುವುದರಿಂದ ಜೀವನದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಮನೆಯಲ್ಲಿ ಕೆಲವು ಮರಗಳು ಮತ್ತು ಗಿಡಗಳನ್ನು ನೆಡುವುದು ತುಂಬಾ ಫಲದಾಯಕವಾಗಿದೆ. ಸನಾತನ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಮನೆಯಲ್ಲಿ ಮರ, ಗಿಡಗಳನ್ನು ನೆಡುವ ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಶಾಸ್ತ್ರಗಳ ಪ್ರಕಾರ, ಮನೆಯಲ್ಲಿ ಕೆಲವು ವಿಶೇಷ…

Read More

ಬೆಂಗಳೂರು: ಬಿಗ್ ಬಾಸ್ ಕನ್ನಡ 10′ ಸ್ಪರ್ಧಿ ಸಿರಿ (Actress Siri) ವೈವಾಹಿಕ ಜೀವನಕ್ಕೆ ಕಾಲಿಟ್ಟದ್ದು ಈ ಮೂಲಕ ಎರಡು ದಶಕಗಳ ಮೂಲಕ ಮದುವೆ ಕನಸು ಕಂಡಿದೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.  ರುಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದ್ದು, ಜೂನ್ 13ರಂದು ಸರಳವಾಗಿ ಮದುವೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ ಸಿರಿ ಮತ್ತು ಉದ್ಯಮಿ ಪ್ರಭಾಕರ್ ಮದುವೆ ಗುರುಹಿರಿಯರ ಸಮ್ಮುಖದಲ್ಲಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ತಮ್ಮ ಬ್ಯಾಚಲರ್‌ ಲೈಫ್‌ಗೆ ಗುಡ್‌ಬೈ ಹೇಳಿದ್ದಾರೆ. ರಂಗೋಲಿ, ಬದುಕು ಸೀರಿಯಲ್‌ಗಳು ಮೂಲಕ ಟಿವಿ ಪ್ರೇಕ್ಷಕರ ಗಮನ ಸೆಳೆದಿದ್ದ ಅವರು ಬಿಗ್‌ಬಾಸ್‌ನಲ್ಲಿ ತಮ್ಮ ಮದುವೆಗೆ ಸಂಬಂಧಪಟ್ಟಂತೆ ಆತಂಕವನ್ನು ವ್ಯಕ್ತಪಡಿಸಿದ್ದರು. ಸೀರಿಯಲ್‌ ಜಗತ್ತಿನ್ ಹೊತ್ತಿನಲ್ಲಿ ಅವರು ತಮ್ಮ ಹೆಸರು ಮಾಡಿದ್ದರು.

Read More

ಬೆಂಗಳೂರು: ಹೆಚ್.ಆರ್.ಎಂ.ಎಸ್-1 ತಂತ್ರಾಂಶದ ಸೇವಾವಹಿ ಭಾಗದಲ್ಲಿ, ಅಧಿಕಾರಿ/ ನೌಕರರ ಎಲ್ಲಾ ಸೇವಾ ವಿವರಗಳನ್ನು, ಅಪ್ ಡೇಟ್ ಮಾಡುವ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ. ಸುತ್ತೋಲೆಯಲ್ಲಿ ಹೇಳಿರುವಂತೆ. ಹೆಚ್‌.ಆರ್.ಎಂ.ಎಸ್ -2.0 ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಸಂಬಂಧ ವಿದ್ಯುನ್ಮಾನ ಸೇವಾ ವಹಿ (Electronic Service Register ಸಿದ್ಧಪಡಿಸಿರುತ್ತಾರೆ. ಹೆಚ್.ಆರ್.ಎಂ.ಎಸ್ -1 ತಂತ್ರಾಂಶದಲ್ಲಿನ ಸೇವಾ ವಹಿ ಭಾಗದಲ್ಲಿ ದಾಖಲಾಗಿರುವ ಎಲ್ಲಾ ಸರ್ಕಾರಿ ಅಧಿಕಾರಿ/ ನೌಕರರ ಸೇವಾ ವಿವರಗಳ ಮಾಹಿತಿಯನ್ನು ವಿದ್ಯನ್ಮಾನ ಸೇವಾ ವಹಿಗೆ ವರ್ಗಾಯಿಸುವ ಬಗೆ ಯೋಜನಾ ನಿರ್ದೇಶಕರು, ಹೆಚ್.ಆರ್.ಎಂ.ಎಸ್-2.0 ಬೆಂಗಳೂರು ರವರು ದಿನಾಂಕ:14-06-2024 ರಂದು11.00 ರಿಂದ 1.30 ರ ವರೆಗೆ Teams ನಲ್ಲಿ Online ಮೂಲಕ ತರಬೇತಿ ನೀಡಲಿರುವ ಹಿನ್ನೆಲೆಯಲ್ಲಿ ಇಲಾಖೆಯ ಎಲಾ, ಬಟವಾಡೆ ಅಧಿಕಾರಿಗಳು ತಮ್ಮ ಆಡಳಿತ ವಿಭಾಗದ ಸಿಬ್ಬಂದಿಯೊಂದಿಗೆ https://teams.microsoft.com ನ link ಮುಖಾಂತರ ತರಬೇತಿ ಪಡೆದುಕೊಳ್ಳುವಂತೆ ತಿಳಿಸಿದೆ,

Read More