Author: kannadanewsnow07

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿರುವ ಸರ್ಕಾರಿ/ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 2024-25 ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಎಸ್‍ಎಸ್‍ಎಲ್‍ಸಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು ಜೂನ್, 03 ರವರೆಗೆ ಆನ್‍ಲೈನ್ www.cite.karnataka.gov.in ಮೂಖಾಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಕಚೇರಿ ವೇಳೆಯಲ್ಲಿ ಭೇಟಿ ನೀಡಿ ಪಡೆಯಬಹುದು ಅಥವಾ ದೂ.ಸಂ. 08272-298357 ನ್ನು ಸಂಪರ್ಕಿಸಬಹುದು ಎಂದು ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಧರ ಅವರು ತಿಳಿಸಿದ್ದಾರೆ.

Read More

ಹಾವೇರಿ: ತಾನು ಸಿಬಿಐ ಅಧಿಕಾರಿ ಅಂತ ಹೇಳಿಕೊಂಡು ರಾಣೆಬೇನ್ನೂರು ನಗರದ ಪ್ರತಿಷ್ಠಿತ ಹಿರಿಯ ವೈದ್ಯರನ್ನು ಹೆದರಿಸಿ ಅವರ ಬ್ಯಾಂಕ್ ಖಾತೆಯಿಂದ ಸುಮಾರು ಮೂರುವರೆ ಕೋಟಿ ಹಣವನ್ನು ವರ್ಗಾವಣೆ ಘಟನೆ ನಡೆದಿದೆ. ರಾಣೆಬೆನ್ನೂರಿನ ಸಂಜೀವಿನಿ ನರ್ಸಿಂಗ್ ಹೋಂ ವೈದ್ಯರಾದ ಡಾ.ಭೀಮಸೇನ್ ಕರ್ಜಗಿ ಹಣ ಕಳೆದುಕೊಂಡ ವೈದ್ಯರಾಗಿದ್ದಾರೆ. ಮೇ. 17 ರಂದು ಅನಾಮಧೇಯ ವ್ಯಕ್ತಿಯೋರ್ವ ಡಾ.ಭೀಮಸೇನ್ ಕರ್ಜಗಿ ಅವರಿಗೆ ಕರೆ ಮಾಡಿ ತಾನು ಸಿಬಿಐ ಆಫೀಸರ್ ದಿಕ್ಷೀತ್ ಗಡಾ ಅಂತ ಪರಿಚಯ ಮಾಡಿಕೊಂಡು, ಸುಳ್ಳು ಮಾಹಿತಿ ನೀಡಿ, ವೈದ್ಯರ ಬ್ಯಾಂಕ್ ಖಾತೆಯನ್ನು ಮಾಹಿತಿ ಪಡೆದುಕೊಂಡು, ಸುಮಾರು ‌ಮೂರು ಕೋಟಿ ಎಪ್ಪತ್ತೊಂದು ಲಕ್ಷ ರೂ ವಂಚನೆ ಮಾಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾವೇರಿ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬೆಂಗಳೂರು:ಬೆಂಗಳೂರಿನಲ್ಲಿ ರಾಜೀವ್‌ಗಾಂಧಿ ಅವರ ಬೃಹತ್‌ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಅಂತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಮಾಹಿತಿ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದ ಡಿಸಿಎಂ ಡಿಕೆಶಿ ಈ ಬಗ್ಗೆ ಟ್ವಟಿರ್‌ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ. ರಾಜೀವ್‌ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದೆ. ರಾಜೀವ್‌ಗಾಂಧಿ ಅವರ ದೂರದೃಷ್ಟಿಯಿಂದಲೇ ಭಾರತದಲ್ಲಿ ತಂತ್ರಜ್ಞಾನದ ಕ್ರಾಂತಿ ಹಾಗೂ ಸ್ವಾವಲಂಬನೆಯ ಉದಯವಾಯಿತು. ಅವರ ದೂರದೃಷ್ಟಿ, ಮುಂದಾಲೋಚನೆ ಹಾಗೂ ದೇಶದ ಭವಿಷ್ಯದ ಬಗ್ಗೆ ಇದ್ದ ಅಪಾರವಾದ ನಂಬಿಕೆಯು ನನ್ನನ್ನೂ ಸೇರಿದಂತೆ ಅನೇಕರನ್ನು ಪ್ರೇರೇಪಿಸಿತು. ಅದೇ ಕಾರಣಕ್ಕೆ ನಾನು ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರಿನಲ್ಲಿ ರಾಜೀವ್‌ಗಾಂಧಿ ಅವರ ಬೃಹತ್‌ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ. ಅವರ ಆಲೋಚನೆಗಳು ಹಾಗೂ…

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಡುವೆ ಪ್ರಧಾನಿ ನರೇಂದ್ರ ಮೋದಿ 11 ನೇ ಬಾರಿಗೆ ಬಿಹಾರಕ್ಕೆ ಆಗಮಿಸಿದ್ದಾರೆ. ಬಿಹಾರದ ಚಂಪಾರಣ್ ನಲ್ಲಿ ಪ್ರಧಾನಿ ಮೋದಿ ಅವರ ಬೃಹತ್ ರ್ಯಾಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಪೂರ್ವ ಚಂಪಾರಣ್ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆದ್ದರಿಂದ ಪಿಎಂ ಮೋದಿಯವರ ಭಾಷಣದ 10 ಪ್ರಮುಖಾಂಶಗಳು ಹೀಗಿವೆ 1. ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡ ಪಿಎಂ ಮೋದಿ, ಮೊದಲ ಹಂತದಲ್ಲಿ ಇಂಡಿ ಮೈತ್ರಿಕೂಟವು ಜರ್ಜರಿತವಾಯಿತು ಮತ್ತು ನಂತರದ ಹಂತಗಳಲ್ಲಿ ಇಂಡಿ ಮೈತ್ರಿ ಮುರಿದುಬಿದ್ದಿತು ಎಂದು ಹೇಳಿದರು. ಈಗ ನಿನ್ನೆ ಐದನೇ ಹಂತದಲ್ಲಿ, ಇಂಡಿ ಮೈತ್ರಿಕೂಟವು ಸಂಪೂರ್ಣವಾಗಿ ಸೋತಿದೆ. 2. 21 ನೇ ಶತಮಾನದ ಭಾರತವು ಭಾರತ ಮೈತ್ರಿಕೂಟದ ಪಾಪಗಳೊಂದಿಗೆ ಮುಂದುವರಿಯಲು ಸಾಧ್ಯವಿಲ್ಲ. ಆದ್ದರಿಂದ, ಜೂನ್ 4 ಸಮ್ಮಿಶ್ರ ಸರ್ಕಾರಕ್ಕೆ ದೊಡ್ಡ ಹೊಡೆತವಾಗಲಿದೆ. ಈ ದಾಳಿಯು ತುಕ್ಡೆ ತುಕ್ಡೆ ಗ್ಯಾಂಗ್, ಭ್ರಷ್ಟಾಚಾರ, ಸನಾತನ ನಿಂದನೆ ಮನಸ್ಥಿತಿ, ಅಪರಾಧಿಗಳು, ಮಾಫಿಯಾ, ಜಂಗಲ್ ರಾಜ್ ಮೇಲೆ ಇರುತ್ತದೆ. 3. ಚಂಪಾರಣ್ಯದಲ್ಲಿ ಬಾಪೂ (ಮಹಾತ್ಮ…

Read More

ಮೈಸೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.  ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.

Read More

ಭೋಪಾಲ್: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಧ್ಯಪ್ರದೇಶದ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಜೆಪಿ ಕಾರ್ಯಕರ್ತ ನವೀನ್ ಝಾ ರಾಂಚಿ ಸಿವಿಲ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ಜಾರಿ: ಬಿಜೆಪಿಯಲ್ಲಿ ಕೊಲೆ ಆರೋಪಿ ಅಧ್ಯಕ್ಷನಾಗಬಹುದು, ಆದರೆ ಕಾಂಗ್ರೆಸ್ನಲ್ಲಿ ಇದು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ರಾಹುಲ್ ಅವರ ಹೇಳಿಕೆಯು ತನಗೆ ನೋವುಂಟು ಮಾಡಿದೆ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ, ಆದ್ದರಿಂದ ದೂರು ದಾಖಲಿಸಲಾಗಿದೆ ಎಂದು ನವೀನ್ ಅವರ ಅರ್ಜಿಯಲ್ಲಿ ತಿಳಿಸಲಾಗಿದೆ. ಕೊಲೆ ಆರೋಪಿ ಕೂಡ ಅಧ್ಯಕ್ಷರಾಗಬಹುದು, ಆದರೆ ಇದು ಕಾಂಗ್ರೆಸ್ನಲ್ಲಿ ಸಾಧ್ಯವಿಲ್ಲ ಎಂದು ಹೇಳಿದ್ದರು. ಚೈಬಾಸಾ ನ್ಯಾಯಾಲಯದಲ್ಲಿ ದೂರು ಪ್ರಕರಣವೂ ದಾಖಲಾಗಿದೆ. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸದಿರುವ ಅವಧಿಯನ್ನು ಇಲ್ಲಿನ ನ್ಯಾಯಾಲಯ ವಿಸ್ತರಿಸಿದೆ.

Read More

ನವದೆಹಲಿ: ಚಾಲನಾ ಪರವಾನಗಿ ಪಡೆಯಲು ಸರ್ಕಾರ ನಿಯಮಗಳನ್ನು ಬದಲಾಯಿಸಿದೆ. ವ್ಯಕ್ತಿಗಳು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್ಟಿಒ) ಚಾಲನಾ ಪರೀಕ್ಷೆಯನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಬದಲಾಗಿ, ಖಾಸಗಿ ಸಂಸ್ಥೆಗಳು ಈಗ ಪರೀಕ್ಷೆಗಳನ್ನು ನಡೆಸಲು ಮತ್ತು ಅವರು ತರಬೇತಿ ಪಡೆದ ಜನರಿಗೆ ಚಾಲನಾ ಪರವಾನಗಿಗಳನ್ನು ನೀಡಬಹುದು ಎಂದು ಪ್ರಮಾಣಪತ್ರಗಳನ್ನು ನೀಡಲು ಅಧಿಕಾರ ಹೊಂದಿವೆ. ಈ ನಿಯಮಗಳು ಜೂನ್ 1, 2024 ರಿಂದ ಜಾರಿಗೆ ಬರಲಿದ್ದು, ಸಾರ್ವಜನಿಕರಿಗೆ ಮಾಹಿತಿ ನೀಡಲು ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಹೊಸ ನಿಯಮಗಳ ಗಮನಾರ್ಹ ಅಂಶವೆಂದರೆ ಪರಿಸರದ ಮೇಲೆ ಕೇಂದ್ರೀಕರಿಸುವುದು. ಸುಮಾರು 900,000 ಹಳೆಯ ಸರ್ಕಾರಿ ವಾಹನಗಳನ್ನು ಹಂತಹಂತವಾಗಿ ತೆಗೆದುಹಾಕಲಾಗುವುದು ಮತ್ತು ಕಾರು ಹೊರಸೂಸುವಿಕೆಯ ಮೇಲೆ ಕಠಿಣ ನಿಯಮಗಳು ಇರುತ್ತವೆ. ವೇಗದ ಚಾಲನೆಗೆ 1000-2000 ರೂ. ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿ ಸಿಕ್ಕಿಬಿದ್ದರೆ, ಅವರು 25,000 ರೂ.ಗಳ ದಂಡವನ್ನು ಪಾವತಿಸಬೇಕಾಗುತ್ತದೆ. ವಾಹನದ ಮಾಲೀಕರ ಚಾಲನಾ ನೋಂದಣಿ ಕಾರ್ಡ್ ಅನ್ನು ರದ್ದುಗೊಳಿಸಲಾಗುವುದು ಮತ್ತು ಅಪ್ರಾಪ್ತ ವಯಸ್ಕರು 25 ವರ್ಷ ವಯಸ್ಸಿನವರೆಗೆ ಪರವಾನಗಿ ಪಡೆಯಲು ಸಾಧ್ಯವಾಗುವುದಿಲ್ಲ.…

Read More

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆ ದಿನ. ಆದರೆ ಶುಲ್ಕ ಪಾವತಿಸಲು ಮೇ 22ರವರೆಗೆ ಅವಕಾಶ ನೀಡಲಾಗಿದೆ. ಹುದ್ದೆ ಹೆಸರು : ಗ್ರಾಮ ಆಡಳಿತ ಅಧಿಕಾರಿ (VA – ಗ್ರಾಮ ಲೆಕ್ಕಿಗ) ಹುದ್ದೆಗಳ ಸಂಖ್ಯೆ : 1000 ವೇತನ ಶ್ರೇಣಿ : Rs.21400-42000. ಪಿಂಚಣಿ ಸೌಲಭ್ಯ : ಪಿಂಚಣಿ ರಹಿತ (ಎನ್‌ಪಿಎಸ್‌). ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ ವಿವರಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಮಾಡಿರಬೇಕು. ಅಥವಾ ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ 12ನೇ ತರಗತಿ / ಎನ್‌ಐಓಎಸ್‌ ನಡೆಸುವ ಹೆಚ್‌ಎಸ್‌ಸಿ ಅರ್ಹತೆ ಪಡೆದಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್‌ ಅಥವಾ…

Read More

ಮೈಸೂರು : ಮೈಸೂರಿನ ಡಿ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಸಾಲುಂಡಿ ಗ್ರಾಮದ ಕನಕರಾಜು ಎನ್ನಲಾಗಿದೆ. ಮೃತ ಯುವಕ ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇಲ್ಲದೇ ಇನ್ನೂ ನಾಲ್ಕೈದು ಮಂದಿ ಘಟನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಜೆ.ಟಿ ದೇವೇಗೌಡ ಅವರು ಸಿಎಂ ಈ ಕೂಡಲೇ ಮಾಹಿತಿಯನ್ನು ಪಡೆದುಕೊಂಡು ಸಂತ್ರಸ್ಥರ ನೆರವಿಗೆ ದಾವಿಸ ಬೇಕು ಅಂಥ ಆಗ್ರಹಿಸಿದ್ದಾರೆ. ಇದಲ್ಲದೇ ಸ್ಥಳೀಯ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.

Read More

ಸಾಲ ಮರುಪಾವತಿ ಮಾಡುವ ಸಲುವಾಗಿ ತನ್ನ ಹೆಂಡತಿ ಹಾಗೂ ಪುತ್ರನನ್ನು ಗೃಹ ಬಂಧನದಲ್ಲಿಟ್ಟಿದ್ದಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಸ್ಲಾಂಪುರದಲ್ಲಿ ನಡೆದಿದೆ. ಮೃತ ರೈತನನ್ನು ರಾಜು ಖೋತಗಿ ಎಂದು ಗುರುತಿಸಲಾಗಿದೆ 5 ತಿಂಗಳ ಹಿಂದೆ 1.5 ಲಕ್ಷ ರೂ. ಸಾಲವನ್ನು ತನ್ನದೇ ಗ್ರಾಮದ ಮಹಿಳೆಯೊಬ್ಬರಿಂದ ಪಡೆದುಕೊಂಡಿದ್ದರು. ಇದೇ ವೇಳೆ ಹಣವನ್ನು ನೀಡದೇ ಇದ್ದ ಸಲುವಾಗಿ ರೈತನ ಪತ್ನಿ ಹಾಗೂ ಪುತ್ರನನ್ನು ಮನೆಯಲ್ಲಿ ಬಿಟ್ಟು ಹೋಗುವಂತೆ ಹೇಳಿದ್ದಳು. ಬಳಿಕ ರೈತನ ಪತ್ನಿ ಹಾಗೂ ಪುತ್ರನನ್ನು ಎರಡು ದಿನದಿಂದ ಗೃಹ ಬಂಧನದಲ್ಲಿಟ್ಟಿದ್ದಳು. ಇದರಿಂದ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಘಟನೆ ಸಂಬಂಧ ಯಮಕನಮರಡಿ ಠಾಣೆ ಪೊಲೀಸರು ದೂರು ದಾಖಲಿಸಿಕೊಳ್ಳುವುದಕ್ಕೆ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

Read More