Author: kannadanewsnow07

ಬೆಂಗಳೂರು: ಕೊಲೆ ಪ್ರಕಣದಲ್ಲಿ ಸದ್ಯ ಪೊಲೀಸರ ವಶದಲ್ಲಿರುವ ನಟ ದರ್ಶನ್‌ ಅನೇಕ ಬಾರಿ ವಿವಾದಗಳಿಂದಲೇ ಅವರು ಸುದ್ದಿಯಲ್ಲಿ ಇರುವುದು ಇತ್ತೀಚಿಗೆ ನಾವು ಕಾಣಬಹುದಾಗಿದೆ. ವಿವಾದ ಮತ್ತು ದರ್ಶನ್‌ ಒಂದೇ ನಾಣ್ಯದ ಎರಡು ಮುಖಗಳಂತೆ ಕಾಣಿಸಿಕೊಳ್ಳುತ್ತಿದ್ದರು ಕೂಡ. ಅಂದ ಹಾಗೇ ಕೂಡ ನಟ ದರ್ಶನ್‌ ತಮ್ಮ ಪತ್ನಿಗೆ ಸಂಬಂಧಪಟ್ಟ ಕೇಸ್‌ನಲ್ಲಿ ಜೈಲಿಗೆ ಹೋಗಿ ಬಂದಿದ್ದರು. ಹೌದು, ಪತ್ನಿ ಮತ್ತು ಮಗನ ಮೇಲೆ ಹಲ್ಲೆ ಮಾಡಿ ಜೈಲಿಗೆ ತೆರಳಿದ್ದರು, ಈ ನಡುವೆ 2011 ರಲ್ಲಿ ನಟ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಮೊದಲ ಬಾರಿ ಜೈಲು ಸೇರಿದ್ದರು. ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಅವರ ಮೇಲೆ ತೀವ್ರ ಹಲ್ಲೆಯನ್ನು ದರ್ಶನ್ ಮಾಡಿದ್ದರು. ವಿಜಯಲಕ್ಷ್ಮಿ ಅವರ ಮುಖಕ್ಕೆ, ಕೈಗೆ ಗಾಯ ಮಾಡಿದ್ದರು. ವಿಜಯಲಕ್ಷ್ಮಿ ಅವರೇ ದರ್ಶನ್ ವಿರುದ್ಧ ದೂರು ನೀಡಿದ್ದರು

Read More

ನವದೆಹಲಿ: ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ನಡೆದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಅನಗತ್ಯ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ಸಚಿವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ಇದೇ ವೇಳೆ ಮೋದಿಯವರು ಅಗತ್ಯವಿದ್ದಾಗ ಆಯಾ ಸಚಿವಾಲಯಗಳಿಗೆ ನೇರವಾಗಿ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತ್ರ ಮಾತನಾಡುವಂತೆ ಪಿಎಂ ಮೋದಿ ಕ್ಯಾಬಿನೆಟ್ ಸದಸ್ಯರಿಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳನ್ನು ಖಾಸಗಿ ಮಾಧ್ಯಮವೊಂಧು ವರದಿ ಮಾಡಿದೆ. ಮೂಲಗಳ ಪ್ರಕಾರ, ಅನಪೇಕ್ಷಿತ ಸಲಹೆ ಅಥವಾ ಧರ್ಮೋಪದೇಶಗಳನ್ನು ನೀಡದಂತೆ ಮೋದಿ ಕ್ಯಾಬಿನೆಟ್ನಲ್ಲಿರುವ ತಮ್ಮ ಸಹೋದ್ಯೋಗಿಗಳಿಗೆ ಎಚ್ಚರಿಕೆ ನೀಡಿದರು. ಭಾನುವಾರ ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ಪ್ರಧಾನಿ, ಕ್ಯಾಬಿನೆಟ್ ಮಂತ್ರಿಗಳು ಸಮಯಪ್ರಜ್ಞೆ ಹೊಂದಿರಬೇಕು ಎಂದು ಒತ್ತಾಯಿಸಿದರು, ಎನ್ನಲಾಗಿದೆ. ಸಚಿವಾಲಯದ ನಿರ್ಧಾರಗಳಲ್ಲಿ ಅವರು ಸೇರಿದಂತೆ ಎಲ್ಲಾ ಸಂಬಂಧಿತ ಕಡತಗಳನ್ನು ಆಯಾ ರಾಜ್ಯ ಸಚಿವರೊಂದಿಗೆ (ಎಂಒಎಸ್) ಹಂಚಿಕೊಳ್ಳಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅವರು ಸಚಿವರಿಗೆ ಸೂಚನೆ ನೀಡಿದರು.

Read More

ನವದೆಹಲಿ: ನೀಟ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಎನ್ಟಿಎಗೆ ನೋಟಿಸ್ ನೀಡಿದೆ. ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪ್ರಸ್ತುತ ಕೌನ್ಸೆಲಿಂಗ್ ನಿಷೇಧಿಸಲು ನ್ಯಾಯಾಲಯ ನಿರಾಕರಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಜುಲೈ 8 ರಂದು ನಡೆಯಲಿದೆ. ನ್ಯಾಯಾಲಯವು ಎನ್ಟಿಎಗೆ ನೋಟಿಸ್ ನೀಡಿ ಈಗಾಗಲೇ ಬಾಕಿ ಇರುವ ಅರ್ಜಿಯೊಂದಿಗೆ ಟ್ಯಾಗ್ ಮಾಡಿದೆ. https://twitter.com/ANI/status/1800405691133554884

Read More

ಬೆಂಗಳೂರು: ಕೊಲೆ ಪ್ರಕರಣದಕ್ಕೆ ಸಂಬಂಧಪಟ್ಟಂತೆ ದರ್ಶನ್‌ ಸ್ನೇಹಿತೆ ಪವಿತ್ರಗೌಡನನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ. ಆರ್‌.ಆರ್‌ ನಗರ ಪೊಲೀಸ್‌ ಠಾಣಾ ಸಿಬ್ಬಂದಿಯವರು ಇಂದು ಬಂಧನ ಮಾಡಲಾಗಿದೆ. ಪವಿತ್ರಗೌಡ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲವಾಗಿ ಬೈಯುತ್ತಿದ್ದ ಎನ್ನಲಾಗಿದೆ. ಈ ನಡುವೆ ಇದಕ್ಕೆ ಸಂಬಂಧಪಟ್ಟಂತೆ ಹತ್ಯೆಯಾದ ರೇಣುಕಸ್ವಾಮಿಯನ್ನು ಕರೆ ತಂದು ಹಲ್ಲೆ ನಡೆಸಿದ ಬಳಿಕ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ನಡುವೆ ಆತ ಶವ ಮೋರಿ ಬಳಿ ಪತ್ತೆಯಾಗಿತ್ತು, ತನಿಖೆಗೆ ಇಳಿದ ಪೊಲೀಸರಿಗೆ ಶಾಕಿಂಗ್‌ ಮಾಹಿತಿಗಳು ಹೊರ ಸಿಕ್ಕಿವೆ. ಈಗಾಗಲೇ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದೆ ಅಂಥ ತಿಳಿದು ಬಂದಿದೆ.

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸೋಮವಾರ ಬೆಳಿಗ್ಗೆ ಅಧಿಕಾರ ವಹಿಸಿಕೊಂಡ ಕೂಡಲೇ ಪ್ರಧಾನಿ ಅವರೊಂದಿಗೆ ಮಾತನಾಡಿದರು. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು 30 ಕ್ಯಾಬಿನೆಟ್ ದರ್ಜೆಯ ಸಚಿವರು ಸೇರಿದಂತೆ ಇತರ 71 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಪಾಟೀಲ್ ಮತ್ತು ಸಿಂಗ್ ಇಬ್ಬರೂ ಯುಪಿಎ ಸರ್ಕಾರದ ಅವಧಿಯಲ್ಲಿ ಕ್ರಮವಾಗಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಿದ್ದರು, ಕಾಂಗ್ರೆಸ್ ಬೆಂಬಲಿತ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ದೇವೇಗೌಡರು ಪ್ರಧಾನಿಯಾಗಿದ್ದರು. ದೇವೇಗೌಡರ ಪಕ್ಷ ಜನತಾದಳ (ಜಾತ್ಯತೀತ) ಕೂಡ ಪ್ರಸ್ತುತ ಎನ್ಡಿಎ ಭಾಗವಾಗಿದೆ ಮತ್ತು ಅವರ ಮಗ ಎಚ್.ಡಿ.ಕುಮಾರಸ್ವಾಮಿ ಮೋದಿ 3.0 ಕ್ಯಾಬಿನೆಟ್ನಲ್ಲಿ ಸಚಿವರಾಗಿದ್ದಾರೆ.

Read More

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ನನ್ನು ಬಂಧನ ಮಾಡಲಾಗಿದ್ದು, ಘಟನೆ ಸಂಬಂಧ ಇಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಮಹತ್ವದ ಮಾಹಿತಿಯನ್ನು ನೀಡಿದರು. ಇದೇ ವೇಳೆ ಅವರು ಮಾತನಾಡಿದ ಅವರು ರೇಣುಕ ಕೊಲೆ ಪ್ರಕರಣ ಸಂಬಂಧ ದರ್ಶನ್‌ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಬಂಧನ ಮಾಡಲಾಗಿದೆ.  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್‌ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್‌ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್‌ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್‌ 8 ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಜೂನ್‌ 9 ರಂದು ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಶವ ಪತ್ತೆಯಾಗಿದೆ. ಸದ್ಯ ರೇಣುಕಸ್ವಾಮಿ ಸಹನ ಸದ್ಯ ಮೂರು ತಿಂಗಳ ಗರ್ಭಿಣಿಯಾಗಿದ್ದು, ರೇಣುಕಸ್ವಾಮಿ ಅಪಲೋ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Read More

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 71 ಮಂತ್ರಿಗಳೊಂದಿಗೆ ಜೂನ್ 10 ರಂದು ತಮ್ಮ ಕ್ಯಾಬಿನೆಟ್ನಲ್ಲಿ ಹೊಸದಾಗಿ ಆಯ್ಕೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದರು. ಮೊದಲ ಕ್ಯಾಬಿನೆಟ್ ಸಭೆ ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಿತು.  ಖಾತೆ ಹಂಚಿಕೆ ನರೇಂದ್ರ ಮೋದಿ – ಪ್ರಧಾನ ಮಂತ್ರಿ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ, ಪರಮಾಣು ಶಕ್ತಿ, ಬಾಹ್ಯಾಕಾಶ ಇಲಾಖೆ ಮತ್ತು ಹಂಚಿಕೆಯಾಗದ ಇತರೆ ಖಾತೆಗಳು. ಸಂಪುಟ ದರ್ಜೆ ಸಚಿವರು: ರಾಜನಾಥ್ ಸಿಂಗ್ – ರಕ್ಷಣೆ ಅಮಿತ್ ಶಾ – ಗೃಹ ನಿತಿನ್ ಜೈರಾಮ್ ಗಡ್ಕರಿ – ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಜಗತ್ ಪ್ರಕಾಶ್ ನಡ್ಡಾ – ಆರೋಗ್ಯ ಶಿವರಾಜ್ ಸಿಂಗ್ ಚೌಹಾಣ್ – ಕೃಷಿ ನಿರ್ಮಲಾ ಸೀತಾರಾಮನ್ – ಹಣಕಾಸು ಸುಬ್ರಹ್ಮಣ್ಯಂ ಜೈಶಂಕರ್ – ವಿದೇಶಾಂಗ ಮನೋಹರ್ ಲಾಲ್ ಖಟ್ಟರ್ – ಇಂಧನ ಕಿರೆನ್ ರಿಜಿಜು- ಸಂಸದೀಯ…

Read More

ನವದೆಹಲಿ: ಅಲಹಾಬಾದ್ ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ವೇಳೆ ಮಹತ್ವದ ತೀರ್ಪು ನೀಡಿದೆ. ವಯಸ್ಕರು ಮದುವೆಯಾಗದೆ ತಮ್ಮ ಆಯ್ಕೆಯ ವ್ಯಕ್ತಿಯೊಂದಿಗೆ ವಾಸಿಸುವುದನ್ನು ಅಥವಾ ಮದುವೆಯಾಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಪಹರಣದ ಆರೋಪದ ಮೇಲೆ ವಯಸ್ಕ ಅರ್ಜಿದಾರರ ವಿರುದ್ಧ ದಾಖಲಾದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿದಾರರು ಎಲ್ಲಿ ಬೇಕಾದರೂ ಹೋಗಲು ಅವಕಾಶ ನೀಡಿ ಅವರನ್ನು ರಕ್ಷಿಸುವಂತೆ ನ್ಯಾಯಾಲಯವು ಎಸ್ಪಿ ಮತ್ತು ಎಸ್ಎಚ್ಒಗೆ ನಿರ್ದೇಶನ ನೀಡಿತು. ವಿಭಿನ್ನ ಅಭಿಪ್ರಾಯದಿಂದಾಗಿ ಯಾವುದೇ ನಾಗರಿಕನಿಗೆ ಇನ್ನೊಬ್ಬರನ್ನು ಕೊಲ್ಲುವ ಹಕ್ಕಿಲ್ಲ ಎಂದು ನ್ಯಾಯಾಲಯ ಹೇಳಿದೆ. ಮಾನವ ಜೀವವನ್ನು ರಕ್ಷಿಸುವುದು ರಾಜ್ಯದ ಕರ್ತವ್ಯ ಎಂದು ಹೈಕೋರ್ಟ್ ಹೇಳಿದೆ. ಎಫ್ಐಆರ್ ದಾಖಲಿಸುವ ಬದಲು, ಮ್ಯಾಜಿಸ್ಟ್ರೇಟ್ ಬಾಲಕಿಯ ಕಸ್ಟಡಿಯನ್ನು ಜೀವ ಅಪಾಯದಲ್ಲಿದೆ ಎಂದು ಹೇಳಿದ ಅದೇ ಜನರಿಗೆ ಹಸ್ತಾಂತರಿಸಿದ್ದಾರೆ ಎಂದು ವಯಸ್ಕ ಬಾಲಕಿ ತನ್ನ ಚಿಕ್ಕಪ್ಪ ಮತ್ತು ಕುಟುಂಬಕ್ಕೆ ಹೇಳಿದ ಮ್ಯಾಜಿಸ್ಟ್ರೇಟ್ ಅವರನ್ನು ನ್ಯಾಯಾಲಯ ಟೀಕಿಸಿದೆ. ಮರ್ಯಾದೆಗೇಡು ಹತ್ಯೆಗಳ ಘಟನೆಗಳ ಬಗ್ಗೆ ಯಾರಿಗೂ ತಿಳಿದಿಲ್ಲ ಎಂದು ನ್ಯಾಯಾಲಯ ಹೇಳಿದೆ.…

Read More

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸದ್ಯ ಪೋಲಿಸರ ವಶದಲ್ಲಿರುವ ನಟ ದರ್ಶನ್‌ ಮೈಸೂರಿನಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಈ ನಡುವೆ ದರ್ಶನ್‌ ಗೆಳತಿ ಪವಿತ್ರಗೌಡರಿಗೂ ಕೂಡ ಬಂಧನದ ಭೀತಿ ಎದುರಾಗಿದ್ದು, ಕೊಲೆ ಪ್ರಕರಣದಲ್ಲಿ ಆಕೆಯದ್ದು ಕೂಡ ಪಾರತ್ರವಿದೆ ಎನ್ನಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಗೌಡರಿಗೆ ಅಶ್ಲೀಲವಾದ ಕಾಮೆಂಟ್‌ ಮತ್ತು ಮೇಸೆಜ್‌ ಹಾಕುತ್ತಿದ್ದ ಎನ್ನಲಾಗಿದೆ. ಇದರಿಂದ ಸಿಟ್ಟಾಗಿದ್ದ ಪವಿತ್ರ ಗೌಡ ದರ್ಶನ್‌ ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇನ್ನೂ ಇದಕ್ಕೆ ಸಂಬಂಧಪಟ್ಟಂಥೆ ಆತನನ್ನು ಕರೆ ತಂದು ಹಲ್ಲೆ ಮಾಡಿದ ಬಳಿಕ, ಕೊಲೆ ಮಾಡಿ ಬೆಂಗಳೂರಿನ ಕಾಮಾಕ್ಸಿ ಪಾಳ್ಯದಲ್ಲಿ ಶವನ್ನು ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಹಲ್ಲೆ ಮಾಡಿದ ವೇಳೆಯಲ್ಲಿ ದರ್ಶನ್ ಮತ್ತು ಪವಿತ್ರಗೌಡ ಇದ್ದರು ಎನ್ನಲಾಗಿದೆ. ಸದ್ಯ ದರ್ಶನ್‌ ರನ್ನು ಅವರ ಫಾರ್ಮ್‌ ಹೌಸ್‌ನಲ್ಲಿ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಸದ್ಯ ಅವರನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ. ಸದ್ಯ ಘಟನೆ ಸಂಬಂಧ ಹತ್ತು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ಇದಲ್ಲದೇ ಪವಿತ್ರಗೌಡ ಕೂಡರನ್ನು…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಏಪ್ರಿಲ್-2024 ರ ಮಾಹೆಯಲ್ಲಿ ಒಟ್ಟು 19,146 ಟ್ರಿಪ್‍ಗಳನ್ನು ತಪಾಸಿಸಿ 3924 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 7,95,540/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1023 ಪ್ರಕರಣಗಳನ್ನು ದಾಖಲಿಸಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 489 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 48,900/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ. ಒಟ್ಟಾರೆಯಾಗಿ ಏಪ್ರಿಲ್-2024 ರ ಮಾಹೆಯಲ್ಲಿ 4,413 ಪ್ರಯಾಣಿಕರಿಂದ ಒಟ್ಟು ರೂ. 8,44,440/- ದಂಡವನ್ನು ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ…

Read More