Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಬೆಂಗಳೂಋಉ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜೂನ್ 14 ರಿಂದ 22 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೆÇೀಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಚಂದನ್ ಶೆಟ್ಟಿ, ನಿವೇದಿತಾ ಗೌಡ ಡಿವೋರ್ಸ್ ಸುದ್ದಿ ಕೇಳಿ ಬಂದ ಬಳಿಕ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಜೋಡಿ ಡೈವೋರ್ಸ್ಗೆ ಮುಂದಾಗಿದ್ದು ಅದು ಸ್ಯಾಂಡಲ್ವುಡ್ ಸೂಪರ್ ಸ್ಟಾರ್, ಡಾ.ರಾಜ್ ಕುಮಾರ್ ಅವರ್ ಕುಟುಂಬದಲ್ಲೇ ಎನ್ನುವುದು ಈಗ ಆಘಾತ ಮೂಡಿಸಿದೆ . ಹೌದು, ದೊಡ್ಮನೆ ಮಗ ಗುರು ರಾಜ್ಕುಮಾರ್ ಅಲಿಯಾಸ್ ಯುವ ರಾಜ್ಕುಮಾರ್ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ಯುವ ರಾಜ್ಕುಮಾರ್ 2019 ಮೇ 26ರಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನಲ್ಲಿ ಶ್ರೀದೇವಿ ಭೈರಪ್ಪ ಎಂಬುವವರನ್ನು ಮದುವೆಯಾದರು. ಶ್ರೀದೇವಿ ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರು. ಇವರಿಬ್ಬರು ಏಳು ವರ್ಷಗಳಿಂದ ಪರಸ್ಪರ ಸ್ನೇಹಿತರಾಗಿದ್ದರು. ಈ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾದರು. ಯುವ ರಾಜ್ ಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ. ಯುವ ಅವರ ತಂದೆ ರಾಘವೇಂದ್ರ ರಾಜ್ ಕುಮಾರ್ ಕೂಡ ನಟ ಮತ್ತು ನಿರ್ಮಾಪಕರಾಗಿದ್ದಾರೆ ಮತ್ತು ಅವರ ಚಿಕ್ಕಪ್ಪರಾದ ಪುನೀತ್ ರಾಜ್ ಕುಮಾರ್…
ಬೆಂಗಳೂರು: ಮಗನ ಸೋಲಿನ ಬೇಸರಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಳಿ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿರುವ ಘಟನೆ ನಡೆದಿದೆ. ಸಿಎಂ ಭೇಟಿಗೆ ಆಗಮಿಸಿದ್ದ ಬೆಳಗಾವಿ ಭಾಗದ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗಮಿಸಿದ್ದರು ಈ ವೇಳೇ ಲಕ್ಷ್ಮಿ ಹೆಬ್ಬಾಳ್ಕರ್ ನೋಡಿ ಸಿಎಂ ಸಿದ್ದರಾಮಯ್ಯ ಸಾರಿ ಕಣಮ್ಮ ಅಂಥ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಹೆಬ್ಬಾಳ್ಕರ್ ಪುತ್ರ ಮೃಣಾಲ್ (Mrinal Hebbalkar) ಅವರು 1,78,437 ಮತಗಳ ಅಂತರದಿಂದ ಸೋತಿದ್ದಾರೆ. ಬಿಜೆಪಿಯ ಜಗದೀಶ್ ಶೆಟ್ಟರ್ ಅವರಿಗೆ 7,62,029 ಮತಗಳು ಬಿದ್ದರೆ ಮೃಣಾಲ್ ಅವರಿಗೆ 5,83,592 ಮತಗಳು ಬಿದ್ದಿದ್ದವು.
ನವದೆಹಲಿ: ಪಶ್ಚಿಮ ಬಂಗಾಳದ ನಾಲ್ಕು ಕ್ಷೇತ್ರಗಳು ಸೇರಿದಂತೆ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 10 ರಂದು ಉಪಚುನಾವಣೆಯನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗುವ ಖಾಲಿ ಹುದ್ದೆಗಳಿಗೆ ಉಪಚುನಾವಣೆ ನಡೆಯಲಿದೆ. ರುಪೌಲಿ (ಬಿಹಾರ), ರಾಯ್ಗಂಜ್, ರಣಘಾಟ್ ದಕ್ಷಿಣ್, ಬಾಗ್ಡಾ ಮತ್ತು ಮಣಿಕ್ತಾಲಾ (ಎಲ್ಲರೂ ಪಶ್ಚಿಮ ಬಂಗಾಳ), ವಿಕ್ರಾವಂಡಿ (ತಮಿಳುನಾಡು), ಅಮರವಾರಾ (ಮಧ್ಯಪ್ರದೇಶ), ಬದರೀನಾಥ್ ಮತ್ತು ಮಂಗಳೌರ್ (ಉತ್ತರಾಖಂಡ್), ಜಲಂಧರ್ ಪಶ್ಚಿಮ (ಪಂಜಾಬ್) ಮತ್ತು ಡೆಹ್ರಾಡೂನ್, ಹಮೀರ್ಪುರ್ ಮತ್ತು ನಲಘರ್ (ಹಿಮಾಚಲ ಪ್ರದೇಶ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಜೂನ್ 14 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು, ಜೂನ್ 21 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ, ಜೂನ್ 24 ರಂದು ಚುನಾವಣಾ ನಾಮಪತ್ರಗಳ ಪರಿಶೀಲನೆ ಮತ್ತು ಜೂನ್ 26 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ.…
ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ. ಇದು 9.3 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಸುಮಾರು 20,000 ಕೋಟಿ ರೂ.ಗಳನ್ನು ವಿತರಿಸುತ್ತದೆ. ಕಡತಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರ. ಆದ್ದರಿಂದ ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದೆ ಎಂಬುದು ಸೂಕ್ತವಾಗಿದೆ. ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ ವಲಯಕ್ಕಾಗಿ ಇನ್ನೂ ಹೆಚ್ಚು ಕೆಲಸ ಮಾಡಲು ನಾವು ಬಯಸುತ್ತೇವೆ ಅಂಥ ಹೇಳಿದರು. https://twitter.com/ANI/status/1800047645626380671
ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಈ ಬಾರಿ ಅತಿದೊಡ್ಡ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ 30 ಕ್ಯಾಬಿನೆಟ್ ಮಂತ್ರಿಗಳು, 5 ಸ್ವತಂತ್ರ ಉಸ್ತುವಾರಿ ಸಚಿವರು ಮತ್ತು 36 ರಾಜ್ಯ ಸಚಿವರು ಸೇರಿದ್ದಾರೆ. ಕನಿಷ್ಠ ಮೂರು ಅವಧಿಗೆ ಸಂಸದರಾಗಿರುವ 43 ಸಚಿವರಿದ್ದಾರೆ. ಈ ಹಿಂದೆ ಮೋದಿ ಸರ್ಕಾರದಲ್ಲಿ 39 ಸಚಿವರು ಕೆಲಸ ಮಾಡಿದ್ದಾರೆ. 6 ಮಂತ್ರಿಗಳು ಮುಖ್ಯಮಂತ್ರಿಗಳಾಗಿದ್ದಾರೆ. ಶಿವರಾಜ್ ಚೌಹಾಣ್ ಅವರಂತಹ ಅನುಭವಿ ಅನುಭವಿಗಳು ಮತ್ತು ಚಿರಾಗ್ ಪಾಸ್ವಾನ್ ಅವರಂತಹ ಯುವಕರು ಈ ಬಾರಿ ಮೋದಿ ತಂಡದಲ್ಲಿದ್ದಾರೆ. ಅದೇ ಸಮಯದಲ್ಲಿ, ಮೋದಿ 3.0 ರಲ್ಲಿ, ಮಂತ್ರಿಗಳ ಇಲಾಖೆಗಳನ್ನು ಇಂದು ಅಲ್ಪಾವಧಿಯಲ್ಲಿ ವಿತರಿಸಬಹುದು ಎಂದು ನಾವು ನಿಮಗೆ ಹೇಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಈಗಷ್ಟೇ ಸೌತ್ ಬ್ಲಾಕ್ ತಲುಪಿದ್ದಾರೆ. ಅವರು ಪ್ರಧಾನಿ ಕಚೇರಿಗೆ ಬಂದಿದ್ದಾರೆ. ಪ್ರಮಾಣ ವಚನ ಸ್ವೀಕಾರದ ನಂತರ, ಈಗ ಎಲ್ಲರ ಕಣ್ಣುಗಳು ಯಾವ ಸಚಿವರಿಗೆ ಯಾವ ಜವಾಬ್ದಾರಿಯನ್ನು ವಹಿಸಲಾಗುತ್ತದೆ…
ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆಯಾಗಿದೆ. ಘಟನೆ ಸಂಬಂಧ ಐವರನ್ನು ಪೋಲಿಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣ ಸಂಬಂಧ ಕಿಂಗ್ ಪಿನ್ ಕಿತ್ತೂರಿನ ಡಾ.ಅಬ್ದುಲ್ ಗಫಾರ್ ಲಾಡಖಾನ್, ನೇಗಿನಹಾಳದ ಮಹಾದೇವಿ ಜೈನ್, ಚಂದನ ಸುಬೇದಾರ್, ಪವಿತ್ರಾ ಮತ್ತು ಪ್ರವೀಣ್ನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಗೂ ಮುಂಚೆ ಗರ್ಭಿಣಿಯಾಗಿ ಮಗುವನ್ನು ಸಾಕಲಾಗದೆ ನರಳಾಡುವ ಅಸಹಾಯಕ ಹೆಣ್ಮುಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್ ಮಕ್ಕಳ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ದಾವಣಗೆರೆ: ಶ್ರೀರಾಮ ಹಾಗೂ ಪಾಂಡವರು ತಂದೆಗೆ ಹುಟ್ಟಿದವರಲ್ಲ ಅಂತ ಪ್ರೊ. ಭಗವಾನ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಅವರು ನಗರದ ಹೊರವಲಯದ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯಿಂದ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅವರು ರಾಮಾಯಣದ ಶ್ರೀರಾಮ ಹಾಗೂ ಮಹಾಭಾರತದ ಪಾಂಡವರು ತಮ್ಮ ತಂದೆಯಿಂದ ಹುಟ್ಟಿದವರಲ್ಲ. ಈ ಮಾತಿಗೆ ಪುರಾವೆಗಳಿವೆ ಅಂತ ಅವರು ತಿಳಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ರಾಮ ದಶರಥ ಮಹಾರಾಜರಿಂದ ಹುಟ್ಟಿಲ್ಲ. ಬದಲಾಗಿ ಪುರೋಹಿತನೊಬ್ಬನಿಂದ ಹುಟ್ಟಿದವನು. ಅದೇ ರೀತಿ ಮಹಾಭಾರತದಲ್ಲಿ ಬರುವ ಶಾಪಗ್ರಸ್ಥ ರಾಜ ಪಾಂಡು ಐವರು ಪಾಂಡವರ ತಂದೆ ಎಂದು ಹೇಳಲಾಗುತ್ತಿದ್ದರೂ ಪಾಂಡವರು ಹುಟ್ಟಿದ್ದು ಮಾತ್ರ ದೇವತೆಗಳಿಂದ ಎಂದು ಮಹಾಭಾರತದಲ್ಲೇ ಇದೆ ಅಂಥ ಅವರು ತಿಳಿಸಿದರು.
ಆಶಾದಾಯಕ ಹನುಮಾನ್ ಮಂತ್ರನಾವು ಎಷ್ಟೇ ಫೇಲ್ ಆಗಿದ್ದರೂ ನಮ್ಮ ಹತ್ತಿರ ಯಾರಾದರೂ ಇದ್ದರೆ ಸಾಕು ನಮಗೆ ಆಶಾಕಿರಣ. ವೈಫಲ್ಯವನ್ನು ಜಯಿಸಿ ಮತ್ತು ಜೀವನದಲ್ಲಿ ಯಶಸ್ವಿಯಾಗಲು ಅವಕಾಶಗಳನ್ನು ಪಡೆಯಿರಿ. ರಾಮನ ಗೆಲುವಿನ ಹಿಂದೆ ಹನುಮಂತನ ಆತ್ಮಸ್ಥೈರ್ಯ ಇತ್ತು ಎಂದೂ ಹೇಳಬಹುದು. ರಾಮನಿಗೆ ಎಷ್ಟೇ ದೊಡ್ಡ ಸಮಸ್ಯೆ ಬಂದರೂ ಅದನ್ನು ಸರಿಪಡಿಸಲು ಹನುಮಂತ ಧಾವಿಸುತ್ತಾನೆ. ರಾಮನ ಪಕ್ಕದಲ್ಲಿ ನಿಂತು ಸೀತೆಯನ್ನು ರಕ್ಷಿಸಲು ಸಹಾಯ ಮಾಡಿದವನು ಹನುಮಂತ. ಹನುಮಂತನ ಸಂಕಲ್ಪ ಮತ್ತು ಶಕ್ತಿಗೆ ಯಾರೂ ಸರಿಸಾಟಿಯಾಗಲಾರರು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಶತ್ರುಗಳ ಕಾಟ ಹೆಚ್ಚಾಗಿದ್ದರೆ ಮನೆಯಲ್ಲೇ ಕುಳಿತುಕೊಂಡು ಈ ಸುಲಭವಾದ ಪರಿಹಾರವನ್ನು ಮಾಡಿ. ನಿಮ್ಮ ಜೀವನದಲ್ಲಿ ನೀವು ಮಾಡುವ ಉದ್ಯೋಗ, ವ್ಯಾಪಾರ ಯಾವುದೇ ಕೆಲಸ ಕಾರ್ಯಗಳನ್ನು ಕೂಡ ಶತ್ರುಗಳು ನಿಮಗೆ ಏನಾದರೂ ತೊಂದರೆಗಳನ್ನು ನೀಡುತ್ತಾ ಇದ್ದರೆ ಅವುಗಳನ್ನು ನೀವು ದೂರ ಮಾಡಿಕೊಳ್ಳಬೇಕು ಅಂದುಕೊಂಡಿದ್ದರೆ ಈ ತಂತ್ರವನ್ನು ಮಾಡುವುದು ತುಂಬಾ ಒಳಿತಾಗುತ್ತದೆ. ಪ್ರತಿಯೊಬ್ಬರ ಜೀವನದಲ್ಲಿ ಶತ್ರುಗಳ ಸಮಸ್ಯೆ ಎಂಬುದು ಇರುತ್ತದೆ ಕೆಲವೊಂದು ಬಾರಿ ಶತ್ರುಗಳ ಸಮಸ್ಯೆಗಳು ಹೆಚ್ಚಾದಾಗ ನಾವು ಕೆಲವೊಂದಿಷ್ಟು ದೇವರ ಮೊರೆ ಹೋಗುವುದು ಸರ್ವೇಸಾಮಾನ್ಯವಾಗಿರುತ್ತದೆ ಆದರೆ ಅಂತಹ ಸಮಸ್ಯೆಗಳಿಂದ ಯಾವುದೇ ಪರಿಹಾರ ದೊರೆತಿಲ್ಲ ಎಂದರೆ ನೀವು ಮನೆಯಲ್ಲಿ ಕುಳಿತುಕೊಂಡು ಈ ಪರಿಹಾರ ಕ್ರಮವನ್ನ ಅನುಸರಿಸಬಹುದಾಗಿದೆ. ವ್ಯಕ್ತಿ ಏಳಿಗೆ ಕಾಣುತ್ತಾನೆ ಎಂದರೆ ಶತ್ರುಗಳ ಸಮಸ್ಯೆ ಎಂಬುದು ನಮಗೆ ಹೆಚ್ಚಾಗಿ ಗೋಚರವಾಗುತ್ತದೆ. ಕೆಲವೊಂದು ಬಾರಿ ಪುರುಷರಾಗಿರಬಹುದು, ಮಹಿಳೆಯರಾಗಿರಬಹುದು ಬೇರೆ ಬೇರೆ ವ್ಯಕ್ತಿಗಳು ಕೂಡ ನಮಗೆ ದೃಷ್ಟಿಯನ್ನು…