Author: kannadanewsnow07

ರಾಮನಗರ: ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಪ್ರಾರಂಭಿಕವಾಗಿ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗುತ್ತಿತ್ತು, ಪ್ರಸ್ತುತ ಹೊಸದಾಗಿ ಹಿಂದುಳಿದ ವರ್ಗಗಳ ಪ್ರವರ್ಗ- 1, 2ಎ, ಮತ್ತು 3ಬಿ ಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ 27 ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟಾರೆ 91 ವರ್ಗಗಳ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ಕಾರ್ಡ್ ನೀಡಲಾಗುತ್ತಿದೆ. ಪ್ರಾರಂಭಿಕವಾಗಿ ಗುರುತಿಸಲಾದ 26 ವರ್ಗಗಳ ಅಸಂಘಟಿತ ಕಾರ್ಮಿಕರ ಪಟ್ಟಿ: ಹಮಾಲರು, ಟೈಲರ್‌ಗಳು, ಗೃಹ ಕಾರ್ಮಿಕರು, ಅಗಸರು, ಚಿಂದಿ ಆಯುವವರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಬೀಡಿ ಕಾರ್ಮಿಕರು, ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಕಾರ್ಮಿಕರು, ಹಗ್ಗ ಸಿದ್ದಪಡಿಸುವ (ಬೈಜಂತ್ರಿ) ಕಾರ್ಮಿಕರು, ಉಪ್ಪನ್ನು ತಯಾರಿಸುವ ಉಪ್ಪಾರರು, ಬಿದಿರು ವೃತ್ತಿಯಲ್ಲಿರುವ ಮೇದಾರರು, ಚಪ್ಪಲಿ…

Read More

ನವದೆಹಲಿ: 26/11 ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾ ಬುಧವಾರ ಭಾರತಕ್ಕೆ ಆಗಮಿಸಲಿದ್ದು, ಗಡಿಪಾರು ವಿಷಯಗಳ ಬಗ್ಗೆ ಯುಎಸ್ ನ್ಯಾಯಾಂಗದ ಶಿಫಾರಸುಗಳಿಗೆ ಅನುಗುಣವಾಗಿ ರಹಸ್ಯವಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡುವಂತೆ ದೆಹಲಿಯ ಎರಡು ಜೈಲುಗಳಿಗೆ ಮತ್ತು ಮುಂಬೈನ ಎರಡು ಜೈಲುಗಳಿಗೆ ಸೂಚಿಸಲಾಗಿದೆ. ಆತ ಆರಂಭದಲ್ಲಿ ಮೊದಲ ಕೆಲವು ವಾರಗಳವರೆಗೆ ಎನ್ಐಎ ವಶದಲ್ಲಿರುತ್ತಾನೆ ಎನ್ನಲಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಎ.ಕೆ.ದೋವಲ್ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳು ಈ ಅಭ್ಯಾಸದ ಮೇಲ್ವಿಚಾರಣೆ ನಡೆಸಿದ್ದಾರೆ.  2008ರ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಭಾರತಕ್ಕೆ ಬೇಕಾಗಿದ್ದ ತಹವ್ವುರ್ ರಾಣಾ; ಪ್ರಧಾನಿ ಮೋದಿಯವರ ಭೇಟಿಯ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಘೋಷಿಸಿದ್ದರು. ಆತನ ಹಸ್ತಾಂತರವು 2019 ರಿಂದ ಮೋದಿ ಸರ್ಕಾರದ ನಿರಂತರ ಪ್ರಯತ್ನಗಳ ಫಲಿತಾಂಶವಾಗಿದೆ. ಅದೇ ವರ್ಷ ಡಿಸೆಂಬರ್ನಲ್ಲಿ, ರಾಣಾ ಅವರನ್ನು ಹಸ್ತಾಂತರಿಸಲು ಭಾರತವು ಯುಎಸ್ಗೆ ರಾಜತಾಂತ್ರಿಕ ಟಿಪ್ಪಣಿಯನ್ನು ಸಲ್ಲಿಸಿತ್ತು. ಜೂನ್ 10, 2020 ರಂದು, ರಾಣಾ ಅವರನ್ನು ಹಸ್ತಾಂತರಿಸಲು ದಾರಿ ಮಾಡಿಕೊಡಲು ಅವರನ್ನು ತಾತ್ಕಾಲಿಕವಾಗಿ ಬಂಧಿಸುವಂತೆ…

Read More

ಬೆಂಗಳೂರು:ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇಕಡ 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉಡುಪಿ ಜಿಲ್ಲೆಯು ಶೇಕಡ 93.90 ರಷ್ಟು ಫಲಿತಾಂಶ ಪಡೆಯುವ ಮೂಲಕ ಪ್ರಥಮ ಸ್ಥಾನದಲ್ಲಿದೆÉ, ದಕ್ಷಿಣ ಕನ್ನಡ ಶೇಕಡ 93.57 ರಷ್ಟು ಪಡೆಯುವ ಮೂಲಕ ದ್ವಿತೀಯ ಸ್ಥಾನದಲ್ಲಿದ್ದು, ಬೆಂಗಳೂರು ದಕ್ಷಿಣ ಶೇ 85.36ರಷ್ಟು ಪಡೆದು ತೃತೀಯ ಸ್ಥಾನದಲ್ಲಿದೆ. ಯಾದಗಿರಿ ಜಿಲ್ಲೆಯು ಶೇಕಡ 48.45 ರಷ್ಟು ಪಡೆಯುವ ಮೂಲಕ ಕೊನೆಯ ಸ್ಥಾನದಲ್ಲಿದೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಒಟ್ಟು 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2,69,212 ಬಾಲಕಿಯರು ಉತ್ತೀರ್ಣರಾಗಿದ್ದು, 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ ನಗರ ಪ್ರದೇಶದಲ್ಲಿ 5,03,300 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 3,75,188 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ 1,34,505 ವಿದ್ಯಾರ್ಥಿಗಳು ಪರೀಕ್ಷಗೆ ಹಾಜರಾಗಿದ್ದು ಆ ಪೈಕಿ 92,251 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು 2025 ಮಾರ್ಚ್ 01 ರಿಂದ ಮಾರ್ಚ್ 20 ರವರೆಗೆ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರತಿಯೊಬ್ಬರ ಜೀವನದಲ್ಲೂ ಕೂಡ ಸಮಸ್ಯೆಗಳು ಇದ್ದೇ ಇರುತ್ತದೆ. ಅಂತಹ ಸಮಸ್ಯೆಗಳನ್ನು ದೂರ ಮಾಡಿಕೊಳ್ಳುವುದು ಈ ಅಂಜನಾ ತುಂಬಾ ಪ್ರಯೋಗ ಶಾಲಿಯಾಗಿರುತ್ತದೆ.ಎಂಬುದನ್ನು ತಿಳಿಯೋಣ. ಈ ಅಂಜನವನ್ನು ಹೇಗೆ ತಯಾರಿಸುವುದು. ಈ ತಂತ್ರವನ್ನು ನೀವು ಮಾಡುವುದರಿಂದ ಖಂಡಿತವಾಗಿಯೂ ನಿಮ್ಮ ಮೇಲೆ ಮಾಟ ಮಂತ್ರ ಅಥವಾ ಯಾವುದಾದರೂ ಸಮಸ್ಯೆ ಉಂಟಾಗಿದ್ದರು ಸಾಧ್ಯವಾಗುತ್ತದೆ. ಜೀವನದಲ್ಲಿ ಏನಾದರೂ ಪದೇ ಪದೇ ಕಷ್ಟಗಳು ಬರುತ್ತಾ ಇದ್ದರೂ ಕೂಡ ಅವುಗಳನ್ನು ನೀವು ದೂರ ಮಾಡಿಕೊಳ್ಳಲು ಸಾಧ್ಯ. ಅಂಜನವನ್ನು ಹೇಗೆ ತಯಾರಿಸುವುದು ಅದಕ್ಕೆ ಯಾವೆಲ್ಲ ಪದಾರ್ಥಗಳು ಬೇಕು ಎಂಬುದನ್ನ ತಿಳಿಯೋಣ. ನಮ್ಮ ಜೀವನದಲ್ಲಿ ಕೆಲವೊಬ್ಬರಿಗಂತು ಮಾಟ ಮಂತ್ರಗಳಿಂದ ಅನೇಕ ರೀತಿಯ ತೊಂದರೆಗಳು ಉಂಟಾಗುತ್ತಿರುತ್ತದೆ ಅವುಗಳನ್ನ ನಾವು ಹೇಗೆ ತಿಳಿಯುವುದು ನಮಗೆ ಮಾಟ ಮಂತ್ರ ಆಗಿದ್ಯೋ ಇಲ್ಲವೋ ಎಂಬುದನ್ನ ಹೇಗೆ ತಿಳಿದುಕೊಳ್ಳುವುದು ಎಂದು ತಿಳಿಯೋಣ. ಬೇವಿನ ಎಲೆ ಮತ್ತು ಎಕ್ಕದ ಗಿಡದ ಎಲೆಯನ್ನು ತೆಗೆದುಕೊಂಡು…

Read More

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜ್ಯದ ನಾನಾ ಕಡೆಗಳಲ್ಲಿ ನಡೆದಿದೆ. ದಾವಣಗೆರೆ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೃಪಾ(18), ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ತಾಂಡಾದ ಕಾವ್ಯ ಬಸಪ್ಪ ಲಮಾಣಿ , ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಅಗಸನೂರು ಗ್ರಾಮದ ಮಲ್ಲಯ್ಯ- ನಾಗರತ್ನ ದಂಪತಿಯ ಪುತ್ರಿ ವಿಜಯಲಕ್ಷ್ಮಿ ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ(17) ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More

ನವದೆಹಲಿ: ಪ್ರಧಾನ ಮಂತ್ರಿ ಇಂಟರ್ನ್ಶಿಪ್ ಯೋಜನೆ ದಿನಾಂಕ (ಪಿಎಂಐಎಸ್) ವಿಸ್ತರಿಸಲಾಗಿದ್ದು, ಮಹತ್ವಾಕಾಂಕ್ಷೆಯ ಅಭ್ಯರ್ಥಿಗಳಿಗೆ ಈ ಸರ್ಕಾರಿ ಬೆಂಬಲಿತ ಅವಕಾಶದಿಂದ ಪ್ರಯೋಜನ ಪಡೆಯಲು ಹೆಚ್ಚಿನ ಸಮಯವನ್ನು ನೀಡಲಾಗಿದೆ. ಪಿಎಂಐಎಸ್ ಅಡಿಯಲ್ಲಿ, ಆಯ್ಕೆಯಾದ ಇಂಟರ್ನಿಗಳು 12 ತಿಂಗಳ ಅವಧಿಗೆ ಮಾಸಿಕ 5,000 ರೂ.ಗಳ ಸ್ಟೈಫಂಡ್ ಮತ್ತು 6,000 ರೂ.ಗಳ ಒಂದು ಬಾರಿಯ ಅನುದಾನವನ್ನು ಪಡೆಯುತ್ತಾರೆ. 2024-25ರ ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ಪ್ರಧಾನ ಮಂತ್ರಿ ಇಂಟರ್ನ್ಶಿಪ್ ಯೋಜನೆಯು ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ 21 ರಿಂದ 24 ವರ್ಷ ವಯಸ್ಸಿನ ಯುವಕರಿಗೆ ಐದು ವರ್ಷಗಳಲ್ಲಿ ಒಂದು ಕೋಟಿ ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅಕ್ಟೋಬರ್ 2024 ರಲ್ಲಿ ಪ್ರಾರಂಭಿಸಲಾದ ಕಾರ್ಯಕ್ರಮದ ಪ್ರಾಯೋಗಿಕ ಹಂತವು ಮೊದಲ ಸುತ್ತಿನಲ್ಲಿ 6 ಲಕ್ಷಕ್ಕೂ ಹೆಚ್ಚು ಅರ್ಜಿಗಳೊಂದಿಗೆ ಉತ್ಸಾಹಭರಿತ ಪ್ರತಿಕ್ರಿಯೆಗೆ ಸಾಕ್ಷಿಯಾಯಿತು. ಈ ಯಶಸ್ಸಿನ ನಂತರ, ಪ್ರಾಯೋಗಿಕ ಹಂತದ 2 ನೇ ಸುತ್ತು ಈಗ ತೆರೆದಿದೆ. ಅರ್ಜಿ ಸಲ್ಲಿಸಲು ಹೊಸ ಗಡುವು: ಮೂಲತಃ ಮಾರ್ಚ್ 31, 2025 ರಂದು ಕೊನೆಗೊಳ್ಳಬೇಕಿದ್ದ ಅರ್ಜಿ…

Read More

ಬೆಂಗಳೂರು: ‘ಇನ್ನು ಮುಂದೆ ಸರ್ಕಾರ ‘ಜಾಡಮಾಲಿ’ ಪದ ಬಳಸಬಾರದು ಅದಕ್ಕೆ ಪರ್ಯಾಯವಾಗಿ ಸ್ವಚ್ಛತಾ ಸಹಾಯಕ ಎಂದೇ ಬಳಸಬೇಕು’ ಎಂದು ಹೈಕೋರ್ಟ್‌ ಮಹತ್ವದ ಆದೇಶವನ್ನು ಹೊರಡಿಸಿದೆ. ಸಮಾಜದಲ್ಲಿ ಅಮೂಲ್ಯ ಸೇವೆ ಸಲ್ಲಿಸುವ ಒಂದು ವರ್ಗದ ನೌಕರರನ್ನು ಉದ್ದೇಶಿಸುವ ಪದ ಗೌರವದಿಂದ ಕೂಡಿರಬೇಕು. ಹೀಗಾಗಿ, ಸರ್ಕಾರ ಇನ್ನು ಮುಂದೆ ಜಾಡಮಾಲಿ ಪದದ ಬಳಕೆ ಮಾಡಬಾರದು ಆಂತ ತಿಳಿಸಿದೆ.ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌ ಎ ಅಹಮದ್‌ ಅವರು “ಸರ್ಕಾರ ಜಾಡಮಾಲಿ ಪದ ಬಳಸುತ್ತಿರುವುದು ಸರಿಯಲ್ಲ. ಆದ್ದರಿಂದ, ಈ ಪದಕ್ಕೆ ಪರ್ಯಾಯವಾಗಿ ಸ್ವಚ್ಛತಾ ನೌಕರ ಎಂಬುದನ್ನು ಬಳಸುವಂತೆ ಪೀಠ ಆದೇಶಿಸಬೇಕು” ಎಂದು ಕೋರಿದರು.ಮನವಿ ಪುರಸ್ಕರಿಸಿ, ಅದಕ್ಕೆ ಶ್ಲಾಘಿಸಿದ ಪೀಠವು ಮುಂದೆ ಜಾಡಮಾಲಿ ಪದದ ಬಳಕೆಯ ಬದಲಾಗಿ ‘ಸ್ವಚ್ಛತಾ ನೌಕರ’ ಎಂಬುದಾಗಿಯೇ ಬಳಸಬೇಕು” ಎಂದು ನ್ಯಾಯಾಂಗ ಆದೇಶ ಹೊರಡಿಸಿದೆ

Read More

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆಯನ್ನು ರದ್ದುಪಡಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಉಲ್ಲೇಖ ಮಾಡಿರುವಂತೆ ಶಾಲಾ ಶಿಕ್ಷಣ ಇಲಾಖೆಯಲ್ಲಿ ಸರ್ಕಾರದ ಆದೇಶಾನುಸಾರ 2024-25ನೇ ಸಾಲಿನ ಶೈಕ್ಷಣಿಕ ಅವಧಿಯವರೆಗೆ ಕೆಲವು ಶಿಕ್ಷಕರುಗಳನ್ನು ಸರ್ಕಾರವು ತಾತ್ಕಾಲಿಕವಾಗಿ ನಿಯೋಜಿಸಿದೆ. ಆದರೆ ಕೆಲವು ಜಿಲ್ಲೆಗಳ ಉಪನಿರ್ದೇಶಕರುಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ನಿಯೋಜನೆ ಮೇಲಿರುವ ಶಿಕ್ಷಕರುಗಳನ್ನು ಮಾರ್ಚ್ ಅಂತ್ಯಕ್ಕೆ ಕರ್ತವ್ಯದಿಂದ ಬಿಡುಗಡೆಗೊಳಿಸದಿರುವುದು ಗಮನಕ್ಕೆ ಬಂದಿರುತ್ತದೆ. ಪ್ರಸ್ತುತ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂತಹ ಶಿಕ್ಷಕರುಗಳನ್ನು ಕೂಡಲೆ ಶಾಲಾ ಕರ್ತವ್ಯದಿಂದ ಬಿಡುಗಡೆಗೊಳಿಸತಕ್ಕದ್ದು ಹಾಗೂ ಬಿಡುಗಡೆಗೊಂಡ ಶಿಕ್ಷಕರು ದಿನಾಂಕ: 09/04/2025 ರೊಳಗೆ ಮೂಲ ಶಾಲೆಯಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು, ಒಂದು ವೇಳೆ ನಿಗದಿತ ದಿನಾಂಕದೊಳಗೆ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅಂತಹ ಶಿಕ್ಷಕರನ್ನು ಅನಧಿಕೃತ ಗೈರು ಹಾಜರಿ ಪ್ರಕರಣ…

Read More

ಬೆಂಗಳೂರು: ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ಅನ್ನು ವಿಲೀನಗೊಳಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎಂಬ ಒಂದೇ ಘಟಕವನ್ನು ರಚಿಸಲಾಗುವುದು, ಇದು ಬಳ್ಳಾರಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುತ್ತದೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಿಸುತ್ತದೆ ಎಂದು ಹಣಕಾಸು ಸಚಿವಾಲಯ ಮಂಗಳವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಎರಡು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ (ಆರ್ಆರ್ಬಿ) ವಿಲೀನವು ಕೇಂದ್ರವು ಅಳವಡಿಸಿಕೊಂಡ ‘ಒಂದು ರಾಜ್ಯ ಒಂದು ಆರ್ಆರ್ಬಿ’ ತತ್ವದ ಒಂದು ಭಾಗವಾಗಿದೆ. ಉತ್ತಮ ಕಾರ್ಯಾಚರಣೆಯ ದಕ್ಷತೆ ಮತ್ತು ವೆಚ್ಚ ತರ್ಕಬದ್ಧಗೊಳಿಸುವಿಕೆಯನ್ನು ಸಾಧಿಸುವುದು ಈ ಕ್ರಮದ ಉದ್ದೇಶವಾಗಿದೆ. ಈ ಪ್ರಕ್ರಿಯೆಯ ಭಾಗವಾಗಿ ಹಣಕಾಸು ಸೇವೆಗಳ ಇಲಾಖೆ (ಡಿಎಫ್ ಎಸ್) 26 ಆರ್ ಆರ್ ಬಿಗಳನ್ನು ವಿಲೀನಗೊಳಿಸಲು ಅಧಿಸೂಚನೆ ಹೊರಡಿಸಿದೆ. “ಪ್ರಸ್ತುತ, 26 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 43 ಆರ್ ಆರ್ ಬಿಗಳು ಕಾರ್ಯನಿರ್ವಹಿಸುತ್ತಿವೆ. ವಿಲೀನದ ನಂತರ, 26 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 28 ಆರ್ಆರ್ಬಿಗಳು ಇರಲಿದ್ದು, 700 ಜಿಲ್ಲೆಗಳನ್ನು…

Read More

ರಂಜಿತ ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಚರ್ಚಾಸ್ಪದ ವಕ್ಫ್ ತಿದ್ದುಪಡಿ ಮಸೂದೆ-2025ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಿನ್ನೆ ಶನಿವಾರ ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ, 2025 ಕ್ಕೆ ಒಪ್ಪಿಗೆ ನೀಡಿದ ಬಳಿಕ ಅದು ಕಾನೂನಾಗಿ ಇಂದಿನಿಂದಲೇ ಭಾರತದಾದ್ಯಂತ ಜಾರಿಗೆ ಬಂದಿದೆ ಎನ್ನಲಾಗಿದೆ. ಇನ್ನೂ ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪರವಾಗಿ 128 ಸದಸ್ಯರು ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಅದಕ್ಕೂ ಮುನ್ನ ಗುರುವಾರ ಮುಂಜಾನೆ ಲೋಕಸಭೆಯಲ್ಲಿ ಇದನ್ನು ಅಂಗೀಕರಿಸಲಾಯಿತು, 288 ಸದಸ್ಯರು ಪರವಾಗಿ ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಕಾಯ್ದೆಯ ಸೆಕ್ಷನ್ 1 (2) ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯ ಪ್ರಕಾರ, ಏಪ್ರಿಲ್ 8, 2025 ಅನ್ನು ಕಾಯ್ದೆಯ ನಿಬಂಧನೆಗಳು ಜಾರಿಗೆ ಬರುವ ದಿನಾಂಕವಾಗಿ ನೇಮಿಸಲಾಗಿದೆ. ಏಪ್ರಿಲ್ 4 ರಂದು ಸಂಸತ್ತು ಅಂಗೀಕರಿಸಿದ ಕಾಯ್ದೆಗೆ ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಅನುಮೋದನೆ ಸಿಕ್ಕಿತು. ಈ ನಡುವೆ ವಕ್ಫ್…

Read More