Author: kannadanewsnow07

ನವದೆಹಲಿ: ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಹೊಸದಾಗಿ ಆಯ್ಕೆಯಾದ ಎಲ್ಲಾ ಸಂಸದರೊಂದಿಗೆ ಸಭೆ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಮ್ಮಿಶ್ರ ಸರ್ಕಾರವನ್ನು ರಚಿಸುವ ಹಕ್ಕನ್ನು ಇಂದು ಮಂಡನೆ ಮಾಡಿದರು. ಇದೇ ವೇಳೆ ಸಂವಿಧಾನ್ ಸದನದಲ್ಲಿ (ಹಳೆಯ ಸಂಸತ್ತು) ನಡೆದ ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು, ಮುಖ್ಯಮಂತ್ರಿಗಳು ಮತ್ತು ಎನ್ಡಿಎಯ ಇತರ ನಾಯಕರು ‘ಮೋದಿ-ಮೋದಿ’ ಎಂದು ಘೋಷಣೆ ಕೂಗಿದರು. ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎನ್ಡಿಎ ನಾಯಕರು ಸ್ವಾಗತಿಸಿದರು. ಇದೇ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ರಾಜ್‌ನಾಥ್ ಸಿಂಗ್‌ ಅವರು ಪ್ರಸ್ಥಾಪ ಮಾಡಿದರು.

Read More

ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ (KR Nagara Kidnap Case) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಸಿಕ್ಕಿದೆ. ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ಈ ನಡುವೆ ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ. ಈ ನಡುವೆ ಕೆಲ ನಿಮಿಷಗಳ ಹಿಂದೆ ಅವರು ತಮ್ಮ ವಕೀಲರ ಜೊತೆಗೆ ಸಿಐಡಿ ತಂಡದರ ಮುಂದೆ, ಭವಾನಿ ರೇವಣ್ಣನವರು ಹಾಜರಾದರು.

Read More

ನವದೆಹಲಿ: ಭಾರತದಲ್ಲಿ ಲೋಕಸಭಾ ಚುನಾವಣೆಯ ಮತಗಳನ್ನು ಎಣಿಕೆ ಮಾಡಲಾಗಿದೆ ಮತ್ತು ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎನ್ಡಿಎ ಸಂಪೂರ್ಣ ಬಹುಮತವನ್ನು ಪಡೆದಿದೆ. ಇವೆಲ್ಲದರ ನಡುವೆ ನಾವುಈಗ ವಾಟ್ಸಾಪ್ನಲ್ಲಿ ಸಂದೇಶವನ್ನು ಸ್ವೀಕರಿಸಿಸುತ್ತಿದ್ದು, ಅದರಲ್ಲಿ ಪಿಎಂ ಮೋದಿಯವರ ಹೆಸರನ್ನು ಬಳಸಿಕೊಂಡು ಉಚಿತ ರೀಚಾರ್ಜ್ ಭರವಸೆ ನೀಡಲಾಗಿದೆ.ಅದರೊಂದಿಗೆ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ.  ಇತ್ತೀಚಿನ ದಿನಗಳಲ್ಲಿ ಸೈಬರ್ ದರೋಡೆಕೋರರು ಜನರನ್ನು ಮೋಸಗೊಳಿಸಲು ವಿಭಿನ್ನ ತಂತ್ರಗಳನ್ನು ಬಳಸುತ್ತಾರೆ. ಎಲ್ಲೋ ಅವರು ನಕಲಿ ರೀಚಾರ್ಜ್ ಅನ್ನು ಆಶ್ರಯಿಸುತ್ತಾರೆ, ಕೆಲವೊಮ್ಮೆ ಅವರು ನಕಲಿ ಪಾರ್ಸೆಲ್ಗಳಲ್ಲಿನ ಔಷಧಿಗಳನ್ನು ಉಲ್ಲೇಖಿಸುವ ಮೂಲಕ ಬೆದರಿಕೆ ಹಾಕುತ್ತಾರೆ. ಈಗ ಮತ್ತೊಮ್ಮೆ ಉಚಿತ ಮೊಬೈಲ್ ರೀಚಾರ್ಜ್ ಸಂದೇಶ ಹೊರಬಂದಿದೆ. “ನರೇಂದ್ರ ಮೋದಿಯವರ ಪ್ರಧಾನಿಯಾದ ಸಂತೋಷದಲ್ಲಿ, ಬಿಜೆಪಿ ಪಕ್ಷವು ಎಲ್ಲಾ ಭಾರತೀಯ ಬಳಕೆದಾರರಿಗೆ 599 ರೂ.ಗಳ 3 ತಿಂಗಳ ರೀಚಾರ್ಜ್ ಅನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದೆ, ಆದ್ದರಿಂದ ಈಗ ಕೆಳಗಿನ ನೀಲಿ ಲಿಂಕ್ನಲ್ಲಿ ನಿಮ್ಮ ಸಂಖ್ಯೆಯನ್ನು ರೀಚಾರ್ಜ್ ಮಾಡಿ” ಎಂದು ವಾಟ್ಸಾಪ್ನಲ್ಲಿ ಸಂದೇಶ ವೈರಲ್‌…

Read More

ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಅವರು ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಶುಕ್ರವಾರ ಬೆಳಗ್ಗೆ ಸಂಸತ್ತಿನಲ್ಲಿ ಸಭೆ ಸೇರಿ ಮುಂಬರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಸಂಪುಟ ರಚನೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ ಬುಧವಾರ ಎನ್‌ಡಿಎ ಪಕ್ಷಗಳ ನಾಯಕರ ಸಣೆಯಲ್ಲಿ ನರೇಂದ್ರ ಮೋದಿ ಅವರನ್ನೇ ಮತ್ತೊಮ್ಮೆ ದೇಶದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

Read More

ನವದೆಹಲಿ : ಮೂರನೇ ಬಾರಿ ಕೇಂದ್ರದಲ್ಲಿ ಅಧಿಕಾರವನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿಯವರು ಸಿದ್ದವಾಗುತ್ತಿದ್ದಾರೆ. ಈ ನಡುವೆ ತಮ್ಮ ಸಚಿವ ಸಂಪುಟದಲ್ಲಿ ಈ ಬಾರಿ ಯಾರಿಗೆಲ್ಲ ಸ್ಥಾನವನ್ನು ನೀಡಬೇಕು ಎನ್ನುವುದು ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಪಟ್ಟಿಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಕರ್ನಾಟಕದಿಂದ ಕೂಡ ಹಲವು ಮಂದಿಯ ಹೆಸರುಗಳು ಕೇಳಿ ಬರುತ್ತಿದ್ದಾವೆ. ಈ ನಡುವೆ ಕರ್ನಾಟಕದಿಂದ ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಹೀಗಿದೆ. ಬಸವರಾಜ ಬೊಮ್ಮಾಯಿ, ಪಿ.ಸಿ ಮೋಹನ್‌., ಜಗದೀಶ್‌ ಶೆಟ್ಟರ್‌, ಹೆಚ್‌.ಡಿ ಕುಮಾರಸ್ವಾಮಿ. ಪ್ರಹ್ಲಾದ್‌ ಜೋಶಿ, ಗೋವಿಂದ ಕಾರಕೋಳ, ಪಿ.ಸಿ ಗೌದ್ದಿ ಗೌಡರು, ರಾಘವೇಂದ್ರ ಯಡಿಯ್ಯೂರಪ್ಪ.

Read More

ಶ್ರೀನಿವಾಸ್‌ ಜಿ.ಕೆ ಚಿತ್ರದುರ್ಗ ಹಿರಿಯೂರು: ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಬಳಿ ಆವರಣದಲ್ಲೇ ಅನಾಥ ನವಜಾತ ಶಿಶುವಿನ ಶವ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. ಆಸ್ಪತ್ರೆ ಆವರಣದಲ್ಲೇ ಪತ್ತೆಯಾದ ಶಿಶುವಿನ ಶವದ ಬಗ್ಗೆ ಅನೇಕ ಅನುಮಾನಗಳನ್ನು ಹುಟ್ಟಿಹಾಕಿದೆ. ಆಸ್ಪತ್ರೆ ಆವರಣದಲ್ಲೇ ನವಜಾತ ಹೆಣ್ಣು ಮಗುವಿನ ಶವ ಪತ್ತೆಯಾಗಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದ್ದು, ಘಟನೆ ಸಂಬಂಧ ಪೊಲೀಸರಿಗೆ ಎಎಂಓ ಅವರು ಮಾಹಿತಿ ನೀಡಿದ್ದು, ಸ್ಥಳ ಮಹಜರು ಮಾಡಿದ್ದು, ಸದ್ಯ ಮುಂದಿನ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ ಅಂತ ಕನ್ನಡ ನ್ಯೂಸ್‌ನೌಗೆ ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು: ಕೆ.ಆರ್‌.ನಗರದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂಥೆ ಇಂದು ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿ ಆದೇಶವನ್ನ ಹೊರಡಿಸಿದೆ. ಈ ನಡುವೆ ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್‌ ಸೂಚಿಸಿದೆ. ಕೋರ್ಟ್ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಿದೆ.  ಇದೇ ವೇಳೆ ಹಾಸನ ಮತ್ತು ಕೆ.ಆರ್‌ ನಗರಕ್ಕೆ ಹೋಗುವಂತಿಲ್ಲ ಅಂಥ ತಿಳಿಸಿದೆ. ಮಹಿಳೆಯ ಅಪಹರಣ ಪ್ರಕರಣದಲ್ಲಿ ತನಿಖೆಯ ಅಗತ್ಯವಿರುವುದರಿಂದ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿದೆ. ಮೇ 2ರಂದು ಕೆ.ಆರ್.ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮೇ 15ರಂದು ಎಸ್ಐಟಿ ಮೊದಲ ನೋಟಿಸ್ ನೀಡಿತ್ತು.

Read More

*ರಾಮಾಂಜನೇಯ ಅವಿನಾಶ್‌ ಬೆಂಗಳೂರು: ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನೀಡಿದೆ. ಹೈಕೋರ್ಟ್ ಏಕ ಸದ್ಯಸ ಪೀಠ ಈ ಆದೇಶವನ್ನು ನೀಡಿದೆ. ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್​​ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್​ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ, ಜೆಡಿಎಸ್​ ಶಾಸಕ ಹೆಚ್.ಡಿ. ರೇವಣ್ಣ ಮೊದಲ ಆರೋಪಿ ಹಾಗೂ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಭವಾನಿ ರೇವಣ್ಣಜನಪ್ರತಿನಿಧಿಗಳ ನ್ಯಾಯಾದಲ್ಲಿ ಅರ್ಜಿ ಸಲ್ಲಿಸಿದ್ದರು, ಆದರೆ ಅಲ್ಲಿ ರೀಕ್ಷಣಾ ಜಾಮೀನು ನಿರಾಕರಿಸಿದ್ದ ಸಲುವಾಗಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಅಪರೂಪದ ಲೈಂಗಿಕವಾಗಿ ಹರಡುವ ಶಿಲೀಂಧ್ರ ಸೋಂಕುಗಳು ನ್ಯೂಯಾರ್ಕ್ನಲ್ಲಿ ಮೊದಲ ಬಾರಿಗೆ ಪತ್ತೆಯಾಗಿವೆ. ಈ ವರದಿಯನ್ನು ಜಾಮಾ ಚರ್ಮರೋಗ ತಜ್ಞರು ಬಿಡುಗಡೆ ಮಾಡಿದ್ದಾರೆ. ಇಂಗ್ಲೆಂಡ್, ಗ್ರೀಸ್ ಮತ್ತು ಕ್ಯಾಲಿಫೋರ್ನಿಯಾ ಪ್ರವಾಸದ ವೇಳೆ 30 ವರ್ಷದ ವ್ಯಕ್ತಿಯೊಬ್ಬ ಅನೇಕ ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಅವರ ಕಾಲುಗಳು ಮತ್ತು ಸೊಂಟದ ಸುತ್ತಲೂ ಕೆಂಪು ದದ್ದುಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು ಎನ್ನಲಾಗಿದೆ. ತನಿಖೆಯ ನಂತರ, ಲೈಂಗಿಕ ಸಂಭೋಗದ ಸಮಯದಲ್ಲಿ ವ್ಯಕ್ತಿಗೆ ಶಿಲೀಂಧ್ರಗಳ ಸೋಂಕು ಇರುವುದು ಕಂಡುಬಂದಿದೆ. ಈ ರೀತಿಯ ಪ್ರಕರಣ ಅಮೆರಿಕದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ. ಅದೇ ಸಮಯದಲ್ಲಿ, ಫ್ರೆಂಚ್ ವೈದ್ಯರು ಕಳೆದ ವರ್ಷ ಅಂತಹ 13 ಪ್ರಕರಣಗಳು ಅಲ್ಲಿ ವರದಿಯಾಗಿವೆ ಎಂದು ಹೇಳಿದ್ದಾರೆ. ಈ 12 ಪ್ರಕರಣಗಳಲ್ಲಿ, ವ್ಯಕ್ತಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ನಂತರ ವ್ಯಕ್ತಿ ಈ ಕಾಯಿಲೆಗೆ ಬಲಿಯಾಗಿದ್ದಾನೆ. ಪ್ರವಾಸದ ಸಮಯದಲ್ಲಿ ಹಲವಾರು ದೇಶಗಳ ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ ಎಂದು ಅಮೆರಿಕನ್ ಸಂತ್ರಸ್ತೆ ಹೇಳಿದ್ದಾರೆ. ಅದೇ ಸಮಯದಲ್ಲಿ,…

Read More

ರಾಮಾಂಜನೇಯ ಅವಿನಾಶ್‌ ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಗೆ ಜಾಮೀನು ಮಂಜೂರಾಗಿದೆ.  2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದ್ದು ಇದರ ವಿಚಾರಣೆ ಈಗ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿದನ್ನು ಸ್ಮರಿಸಬಹುದಾಗಿದೆ.

Read More