Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ವಿಶ್ವ ಕೈ ನೈರ್ಮಲ್ಯ ದಿನ 2024 ರ ಥೀಮ್ “ಕೈ ನೈರ್ಮಲ್ಯ ಸೇರಿದಂತೆ ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣದ ಬಗ್ಗೆ ನವೀನ ಮತ್ತು ಪರಿಣಾಮಕಾರಿ ತರಬೇತಿ ಮತ್ತು ಶಿಕ್ಷಣದ ಮೂಲಕ ಆರೋಗ್ಯ ಮತ್ತು ಆರೈಕೆ ಕಾರ್ಯಕರ್ತರ ಜ್ಞಾನ ಮತ್ತು ಸಾಮರ್ಥ್ಯ ವರ್ಧನೆಯನ್ನು ಉತ್ತೇಜಿಸುವುದು ಆಗಿದೆ. ನಿಮ್ಮ ಕೈಗಳನ್ನು 20 ಸೆಕೆಂಡುಗಳ ಕಾಲ ತೊಳೆಯುವುದು ಮುಖ್ಯ, ಆದರೆ ಅದನ್ನು ಅತಿಯಾಗಿ ಮಾಡುವುದನ್ನು ತಪ್ಪಿಸಿ, ಹೀಗೆ ಕೈಯನ್ನು ಹೆಚ್ಚಿನ ಸಮಯದ ತನಕ ತೊಳೆಯುವುದು ಒಣ, ಒರಟು ಮತ್ತು ಕೆಂಪು ಕಾಣುವ ಕೈಗಳಿಗೆ ಕಾರಣವಾಗಬಹುದು. ಬಾರ್ ಸೋಪ್ ಆರೋಗ್ಯಕರವಲ್ಲದ ಮತ್ತು ಕೀಟಾಣುಗಳನ್ನು ಹೊಂದಿರುವುದರಿಂದ ಬಾರ್ ಸೋಪ್ ಬದಲಿಗೆ ದ್ರವ ರೂಪದ ಹ್ಯಾಂಡ್ವಾಶ್ಗಳನ್ನು ಬಳಕೆ ಮಾಡಿ. ಹೆಲ್ತ್ಲೈನ್ ಪ್ರಕಾರ, ಆಗಾಗ್ಗೆ ಕೈಗಳನ್ನು ತೊಳೆಯುವುದು ಆತಂಕದ ಸಂಕೇತವಾಗಿರಬಹುದು ಅಥವಾ ಅಬ್ಸೆಸಿವ್-ಕಂಪಲ್ಸಿವ್ ಡಿಸಾರ್ಡರ್ (ಒಸಿಡಿ) ಎಂದು ಕರೆಯಲ್ಪಡುವ ಸ್ಥಿತಿಯಾಗಿರಬಹುದು. ಆರೋಗ್ಯಕರವಾಗಿ ಮತ್ತು ರೋಗಗಳಿಂದ ದೂರವಿರಲು ಅಡುಗೆ ಮಾಡುವ ಮೊದಲು, ತಿನ್ನುವ ಮೊದಲು, ಶೌಚಾಲಯವನ್ನು ಬಳಸಿದ ನಂತರ, ಯಾವುದೇ ವಸ್ತುವನ್ನು…
ರಾಮನಗರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ (ಆರಿ ವರ್ಕ್) & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 15 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಮೇ 08 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು,…
ಬೆಂಗಳೂರು: ನಾಳೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ರೇವಣ್ಣನವರು ಬೆಂಗಳೂರಿಗೆ ಆಗಮಿಸಲಿದ್ದು,ನಾಳೆಯೇ ಪೊಲೀಸರಿಗೆ ಶರಣಾರಾಗಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಪ್ರಜ್ಚಲ್ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎನ್ನಲಾಗಿದ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ರೇವಣ್ಣರನ್ನು ಬಂಧಿಸಿದ್ದು ತಮ್ಮ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ನಾಳೆ ನ್ಯಾಯಾಧೀಶರ ಮುಂದೆ ಅವರನ್ನು ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಇನ್ನು, ಪ್ರಜ್ವಲ್ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ.
ಕೆಎನ್ಡಿಜಿಟಲ್ಡೆಸ್ಕ್:ಮೊದಲ ಹೆಜ್ಜೆಯಲ್ಲಿಯೇ `ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ ಪಾಲಿಗೆ ರೋಮಾಂಚಕ ಗೆಲುವು ಸಿಕ್ಕಿದೆ. ಸಿನಿಮಾವಿನ್ನೂ ಬಿಡುಗಡೆಯ ಹಂತದಲ್ಲಿರುವಾಗಲೇ ಈ ಸಿನಿಮಾ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್ ಗೆ ಪ್ರವೇಶ ಪಡೆದಿರುವ ಬಗ್ಗೆ ಸುದ್ದಿ ಹೊರಬಿದ್ದಿತ್ತು. ಇದೀಗ ಮತ್ತೊಂದು ಸಂಭ್ರಮದ ಸಂಗತಿಯನ್ನು ಚಿತ್ರ ತಂಡ ಹಂಚಿಕೊಂಡಿದೆ. ಈ ಚಿತ್ರಕ್ಕೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಜ್ಯೂರಿ ಅವಾರ್ಡ್ ಲಭಿಸಿದೆ. ಈ ಮೂಲಕ ಸಹದೇವ್ ಕೆಲವಡಿ ಮೊದಲ ಪ್ರಯತ್ನದಲ್ಲಿಯೇ ತಮ್ಮ ನಿರ್ದೇಶನದ ಕಸುವನ್ನು ಸಾಬೀತುಪಡಿಸಿದ್ದಾರೆ. ಈ ಸುದ್ದಿಯೊಂದಿಗೆ ಕೆಂಡದ ಸುತ್ತ ಹಬ್ಬಿಕೊಂಡಿರುವ ನಿರೀಕ್ಷೆಗಳಿಗೆ ಮತ್ತೊಂದಷ್ಟು ಆವೇಗ ಬಂದಂತಾಗಿದೆ. ದೆಹಲಿಯಲ್ಲಿ ನಡೆಯಲಿರುವ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್-24ಕ್ಕೆ ಕೆಂಡ ಪ್ರವೇಶ ಪಡೆದುಕೊಂಡಿತ್ತು. ಈ ಹಂತದಲ್ಲಿ ಅಟತ್ಯಂತ ಕ್ಲಿಷ್ಟಕರ ಸ್ಪರ್ಧೆಯನ್ನು ದಾಟಿಕೊಂಡಿದ್ದ `ಕೆಂಡ’ ಚಿತ್ರ ಕಡೆಗೂ ಅತ್ಯುತ್ತಮ ಚೊಚ್ಚಲ ನಿರ್ದೇಶನ ವಿಭಾಗದ ಜ್ಯೂರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಸುತ್ತಿನಲ್ಲಿ ನಾನಾ ಭಾಷೆಗಳ: ಚಿತ್ರಗಳ ನಡುವೆ ಕನ್ನಡ ಚಿತ್ರ ಕೆಂಡ ಸ್ಪರ್ಧೆಗೆ ಒಡ್ಡಿಕೊಂಡಿತ್ತು. ಅಂತಿಮವಾಗಿ…
ಕೆಎನ್ಎನ್ಡಿಜಿಟಲ್ಡೆಸ್ಕ್:ಇದುವರೆಗೂ ಭಿನ್ನ ಪಥದ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವವರು ಅಶೋಕ್ ಕಡಬ. ಇದೀಗ ಅವರು `ಸತ್ಯಂ’ ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿಬಿಟ್ಟಿದೆ. ಈ ಹಿಂದೆ ಸತ್ಯಂ ಟೀಸರ್ ಬಿಕಡುಗಡೆಯಾದಾಗಲೇ ಅದು ಸ್ಪಷ್ಟವಾಗಿತ್ತು. ಆ ಟೀಸರ್ಗೆ ಮಿಲಿಯನ್ನುಗಟ್ಟಲೆ ವೀಕ್ಷಣೆಗಳು ಸಿಕ್ಕಿ, ಎಲ್ಲ ಕಡೆಗಳಿಂದಲೂ ಮೆಚ್ಚುಗೆಗಳೂ ಮೂಡಿಕೊಂಡಿದ್ದವು. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿರುವ ಸತ್ಯಂ ಸೆನ್ಸಾರ್ ಸರ್ಟಿಫಿಕೇಟ್ ಪಡೆದುಕೊಂಡಿದೆ. ಈ ವಿಚಾರವನ್ನು ನಿರ್ಮಾಪಕರಾದ ಮಹಾಂತೇಶ್ ವಿ.ಕೆ ಹಂಚಿಕೊಂಡಿದ್ದಾರೆ. ಯು\ಎ ಸರ್ಟಿಫಿಕೇಟಿನೊಂದಿಗೆ, ಸೆನ್ಸಾರ್ ಅಧಿಕಾರಿಗಳ ತುಂಬು ಮೆಚ್ಚುಗೆಯೂ ಎದುರುಗೊಂಡಿರೋದರಿಂದ ಚಿತ್ರತಂಡ ಖುಷಿಗೊಂಡಿದೆ. ಇದು ಗಣಪ ನಂತರ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಚಿತ್ರ. ಕನ್ನಡತಿ ಖ್ಯಾತಿಯ ರಂಜಿನಿ ರಾಘವನ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಈ ಹಿಂದೆ ರಂಗಿತರಂಗ, ಕಾಂತಾರ ಚಿತ್ರಗಳಲ್ಲಿ ತುಳುನಾಡಿನ ದೈವಾರಾಧನೆಯ ಕಥೆಯಿತ್ತು. ಆ ಎರ್ಡು ಸಿನಿಮಾಗಳ ದೊಡ್ಡ ಮಟ್ಟದ ಗೆಲುವಿನ ಶಕ್ತಿಯೂ ಅದೇ. ಅಂಥಾದ್ದೊಂದು ನೆಲದ ಘಮಲಿನ ಕಥೆಯನ್ನೊಳಗೊಂಡಿರುವ ಚಿತ್ರ `ಸತ್ಯಂ’. ಹಾಗೆಂದ ಮಾತ್ರಕ್ಕೆ ಇದು ಆ…
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ದಾವಣಗೆರೆಯಲ್ಲಿ ನಡೆದ ಪ್ರಜಾಧ್ವನಿ ಜನಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು. ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಎಂದರು. ಇಂಥಾ ಬಿಜೆಪಿಗೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಸ್ಪರ್ಧಿಸುತ್ತಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ವಿನಯ್ ಗೆ ಓಟು ಹಾಕಿದರೆ,ಬಿಜೆಪಿಗೆ ಓಟು ಹಾಕಿದಂತೆ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೀವುಗಳು ಹಾಕುವ ಪ್ರತೀ ಓಟು ನನಗೇ ಹಾಕಿದಂತೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಕಣದಲ್ಲಿ ಇದ್ದೇನೆ ಎಂದುಕೊಂಡು ಮತ ಹಾಕಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ ಎಂದು ಕರೆ ನೀಡಿದರು. 15 ಲಕ್ಷ ರೂಪಾಯಿ ಪ್ರತಿಯೊಬ್ಬ ಭಾರತೀಯರ ಖಾತೆಗೆ ಹಾಕ್ತೀನಿ ಎಂದು ನಂಬಿಸಿದ ಮೋದಿ ಈ ಹತ್ತು ವರ್ಷದಲ್ಲಿ…
*ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ವಸಂತ್ ಈಶ್ವರ್ಗೆರೆ ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣನವರನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ. ಇದರ ಬೆನ್ನಲೇ ಎಸ್ಐಟಿ ಅಧಿಕಾರಿಗಳು ರೇವಣ್ಣವರನ್ನು ಹುಡುಕಾಟ ಮಾಡುವುದಕ್ಕೆ ಮುಂದಾಗಿದ್ದರು. ಇದಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿದ್ದರು, ಇದಲ್ಲದೇ ಬಳಿಕ ಅವರನ್ನು ರೇವಣ್ಣನವರನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ. ಇಂದು ಏನೆಲ್ಲ ಆಗಿತ್ತು? ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ನಿನ್ನೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ಇಂದಿಗೆ ಮುಖ್ಯ…
ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣನವರನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ. ಇದರ ಬೆನ್ನಲೇ ಎಸ್ಐಟಿ ಅಧಿಕಾರಿಗಳು ರೇವಣ್ಣವರನ್ನು ಹುಡುಕಾಟ ಮಾಡುವುದಕ್ಕೆ ಮುಂದಾಗಿದ್ದರು. ಇದಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿದ್ದರು, ಇದಲ್ಲದೇ ಬಳಿಕ ಅವರನ್ನು ರೇವಣ್ಣನವರನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ. ಇಂದು ಏನೆಲ್ಲ ಆಗಿತ್ತು? ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ನಿನ್ನೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ಇಂದಿಗೆ ಮುಖ್ಯ ಪ್ರಕರಣದ ಮೇಲೆಯೇ ಸಂಪೂರ್ಣ ವಾದ ಆಲಿಸಿ, ನಂತ್ರ…
ಬೆಂಗಳೂರು: ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರ ಮಾಜಿ ಮನೆ ಸಹಾಯಕನ ತೋಟದ ಮನೆಯಲ್ಲಿ ಅಪಹರಣಕ್ಕೊಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿ ನ್ಯಾಯಾಲಯ ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ನಲ್ಲಿ ಕಾಣಿಸಿಕೊಂಡಿರುವ ಅನೇಕ ಮಹಿಳೆಯರಲ್ಲಿ ಒಬ್ಬರಾದ ತಮ್ಮ ತಾಯಿಯನ್ನು ರೇವಣ್ಣ ಅವರ ಸಹಚರರು ಅಪಹರಿಸಿದ್ದಾರೆ ಎಂದು ಆರೋಪಿಸಿ 20 ವರ್ಷದ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ ನಂತರ ಗುರುವಾರ ಅವರ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು
ಬೆಂಗಳೂರು: ಹಾಸನ ಸಂಸದ ಪ್ರಜ್ಬಲ್ ರೇವಣ್ಣ ವಿರುದ್ದ ಎಸ್ಐಟಿ ತಂಡ ತನಿಖೆಯನ್ನು ಭರದಿಂದ ನಡೆಸ್ತಿದೆ. ಈ ನಡುವೆ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನು ಇಂದು ನೀಡಿದೆ. ಇನ್ನೂ ಯಾವುದೇ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗ ರೇವಣ್ಣ ವಿಚಾರಣೆಗೆ ಹಾಜರಾಗದೇ ಇದ್ದರೇ ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಳ್ಳಬಹುದಾಗಿದೆ ಎನ್ನಲಾಗಿದೆ. ಅರ್ಜಿ ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿ, ಪೊಲೀಸರು ಬಂಧಿಸುವ ಸಾಧ್ಯತೆ ಇದ್ದು, ಅವರನ್ನು ಬಂಧಿಸಿದಂತೆ ಮನವಿ ಮಾಡಿ ತನಿಖೆಗೆ ರೇವಣ್ಣ ಸಹಕರಿಸುವುದಾಗಿ ತಿಳಿಸಿದ್ದರು. ಈ ನಡುವೆ ಎಸ್ ಪಿಸಿ ಜಗದೀಶ್ ಅವರು ಕೂಡ ನ್ಯಾಯಾಧೀಶರ ಮುಂದೆ ರೀಕ್ಷಣಾ ಜಾಮೀನು ನೀಡಬಾರದು ಇದು ಗಂಭೀರವಾದ ಪ್ರಕರಣ. ಬಂಧನ ಮಾಡಿ ತನಿಖೆ ಮಾಡುವ ಅವಶ್ಯಕತೆ ಇರುವುದನ್ನು…






