Author: kannadanewsnow07

ಬೆಂಗಳೂರು: 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು. ವಾಹನ ಚಾಲಕರಿಗೂ ಕಾಯಂ ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು. ಪೌರ ಕಾರ್ಮಿಕರ…

Read More

ವಿಜಯಪುರ: ಈ ವರ್ಷ ಕರ್ನಾಟಕದಲ್ಲಿ ಉತ್ತಮ ಮಳೆ – ಬೆಳೆಯಾಗಲಿದೆ ಅಂತ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. ಅವರು ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಸುಕ್ಷೇತ್ರ ಕಡಣಿ ಗ್ರಾಮದಲ್ಲಿ ಶ್ರೀ ಭೋಗಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಇದೇ ವೇಳೆ ಅವರು ಮಾತನಾಡಿ, ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿದೆ ರಾಜ್ಯ ಸುಭಿಕ್ಷವಾಗಿರಲಿದೆ. ಹಿಮಾಯಲ ಹಾಗೂ ದೆಹಲಿಯಲ್ಲಿ ಅಪಾಯವಿದೆ. ಧರ್ಮ ಮತ್ತು ದೇವರ ಮೊರೆ ಹೋಗುವುದೇ ಇದಕ್ಕೆ ಪರಿಹಾರ ಜಪ, ತಪ ಮಾಡಬೇಕು ಅಂತ ತಿಳಿಸಿದರು. ಇನ್ನೂ ಸಚಿವ ಎಂಬಿ ಪಾಟೀಲ್‌ ಅವರು ರಾಜಕೀಯದಲ್ಲಿದ್ದಾರೆ. ಉತ್ತರ ಕರ್ನಾಟಕದಿಂದ ಯಾರನ್ನಾದರೂ ಸಿಎಂ ಮಾಡಬೇಕೆಂದರೆ ಅದು ಎಂಬಿ ಪಾಟೀಲ್‌ ಅವರನ್ನು ಮಾಡಬೇಕು ಎಂದು‌ ಸ್ವಾಮೀಜಿ ಹೇಳಿದರು.

Read More

ಬೆಂಗಳೂರು: ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಯಾವ ರೀತಿ ಚೆಕ್ ಮಾಡಬೇಕು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ…

Read More

ನವದೆಹಲಿ: ಟಿ20 ಕ್ರಿಕೆಟ್ನಲ್ಲಿ ಅತಿ ವೇಗವಾಗಿ 13,000 ರನ್ ಪೂರೈಸಿದ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2025 ರ ಮುಖಾಮುಖಿಯಲ್ಲಿ ವಿರಾಟ್ ಈ ಸಾಧನೆ ಮಾಡಿದ್ದಾರೆ. ಅತಿ ಕಡಿಮೆ ಕ್ರಿಕೆಟ್ನಲ್ಲಿ 13,000 ರನ್ ಪೂರೈಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಉತ್ತಮ ಫಾರ್ಮ್ನಲ್ಲಿದ್ದರು ಮತ್ತು ಅವರು ಜಸ್ಪ್ರೀತ್ ಬುಮ್ರಾ ಅವರ ಅದ್ಭುತ ಸಿಕ್ಸರ್ ಬಾರಿಸಿ ಅಭಿಮಾನಿಗಳನ್ನು ರೋಮಾಂಚನಗೊಳಿಸಿದರು. ಕ್ರಿಸ್ ಗೇಲ್ 381 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದರೆ, ವಿರಾಟ್ ಕೊಹ್ಲಿ 386 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಪುರುಷರ ಟಿ 20 ಕ್ರಿಕೆಟ್ನಲ್ಲಿ 13000 ರನ್ ಬಾರಿಸಿದ ಆಟಗಾರರ ವಿವರ (ತೆಗೆದುಕೊಂಡ ಇನ್ನಿಂಗ್ಸ್) 14562 – ಕ್ರಿಸ್ ಗೇಲ್ (381) 13610 – ಅಲೆಕ್ಸ್ ಹೇಲ್ಸ್ (474) 13557 -…

Read More

ಬೆಂಗಳೂರು: ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಕ್ರೀಡಾಕೂಟ ಯಶಸ್ವಿಯಾಗಲಿ. ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್, ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ಸೋಮಶೇಖರಗಾಂಧಿ ಮತ್ತಿತರರು ಹಾಜರಿದ್ದರು.…

Read More

. ಕೇಂದ್ರ ಸರ್ಕಾರ ಎಲ್ ಪಿಜಿ ಸಿಲಿಂಡರ್ ದರಗಳನ್ನು ಹೆಚ್ಚಿಸಿದೆ. ಇವೂ ಸೇರಿದಂತೆ ದಿನದ 10 ಟಾಪ್ ಸುದ್ದಿಗಳು ನಿಮಗಾಗಿ ಇಲ್ಲಿದೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ..! ನವದೆಹಲಿ: ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೆ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 50 ರೂ.ಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಪ್ರಕಟಿಸಿದ್ದಾರೆ. “ಪಿಎಂಯುವೈ ಫಲಾನುಭವಿಗಳಿಗೆ, ಬೆಲೆ ಪ್ರತಿ ಸಿಲಿಂಡರ್ಗೆ 500 ರೂ.ಗಳಿಂದ 550 ರೂ.ಗೆ ಏರಲಿದೆ. ಇತರ ಗ್ರಾಹಕರಿಗೆ ಇದು 803 ರೂ.ಗಳಿಂದ 853 ರೂ.ಗೆ ಹೆಚ್ಚಾಗುತ್ತದೆ ಎಂದು ಪುರಿ ಹೇಳಿದರು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಪ್ರತಿ ಲೀಟರ್ಗೆ ತಲಾ 2 ರೂ.ಗಳಷ್ಟು ಹೆಚ್ಚಿಸಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 13 ರೂ.ಗೆ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.…

Read More

ಖಾರ್ಗೋನ್: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಅಂಗಡಿಯೊಂದರಿಂದ 2.45 ಲಕ್ಷ ರೂ.ಗಳನ್ನು ಕದ್ದ ವ್ಯಕ್ತಿಯೊಬ್ಬ ರಾಮನವಮಿಯಂದು ಮಾಡಿದ ಕೃತ್ಯಕ್ಕೆ ಕ್ಷಮೆ ಕೋರಿ ಪತ್ರವನ್ನು ಬಿಟ್ಟು ಹೋಗಿರುವ ಘಟನೆ ನಡೆದಿದೆ. ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಾಮಿದಾರ್ ಮೊಹಲ್ಲಾದ ಜುಜರ್ ಅಲಿ ಬೋಹ್ರಾ ಅವರ ಅಂಗಡಿಯಲ್ಲಿ ಭಾನುವಾರ ಮತ್ತು ಸೋಮವಾರ ಮಧ್ಯರಾತ್ರಿ ಕಳ್ಳತನ ನಡೆದಿದೆ ಎಂದು ಕೊಟ್ವಾಲಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಅರ್ಷದ್ ಖಾನ್ ತಿಳಿಸಿದ್ದಾರೆ. “ಕಳ್ಳನು ಅಂಗಡಿ ಮಾಲೀಕರನ್ನು ಜುಜರ್ ಭಾಯ್ ಎಂದು ಸಂಬೋಧಿಸಿದ ಟೈಪ್ ಮಾಡಿದ ಪತ್ರವನ್ನು ಬಿಟ್ಟು ಹೋಗಿದ್ದಾನೆ. ಅಂಗಡಿ ಮಾಲೀಕರು 2.84 ಲಕ್ಷ ರೂ.ಗಳನ್ನು ಚೀಲದಲ್ಲಿ ಇಟ್ಟಿದ್ದರು, ಅದರಲ್ಲಿ ಸುಮಾರು 2.45 ಲಕ್ಷ ರೂ.ಗಳನ್ನು ಕಳವು ಮಾಡಲಾಗಿದ್ದು, 38,000 ರೂ.ಗಳು ಉಳಿದಿವೆ ಎಂದು ಹೇಳಿದ್ದಾರೆ. ರಾಮನವಮಿಯಂದು ಮಾಡಿದ ಕೃತ್ಯಕ್ಕೆ ಕ್ಷಮೆ ಕೋರಿದ್ದಾನೆ ಎಂದು ಪತ್ರದಲ್ಲಿ ತಿಳಿಸಲಾಗಿದೆ ಎಂದು ಖಾನ್ ಹೇಳಿದ್ದಾರೆ.ಇದೇ ವೇಳೇ ಪತ್ರದಲ್ಲಿ ಕಳ್ಳ. ಆರು ತಿಂಗಳಲ್ಲಿ ಮರುಪಾವತಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಮತ್ತು ಅಂಗಡಿ…

Read More

ದಾವಣಗೆರೆ: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವರ್ಷ ಒಳಗಿನ ವಯೋಮಾನದವರಾಗಿದ್ದು ಮಾಸಿಕ ರೂ.9,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಕಂಪ್ಯೂಟರ್ ಜ್ಞಾನವುಳ್ಳರಾಗಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯದಿನವಾಗಿರುತ್ತದೆದಾವಣಗೆರೆ ತಾಲ್ಲೂಕು ಹಳೇಬಾತಿ, ಆಲೂರಟ್ಟಿ, ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರು ಗ್ರಾಮ ಪಂಚಾಯಿತಿಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ದೂರವಾಣಿ:08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಮೊ:9590829024 ಮತ್ತು ಚನ್ನಗಿರಿ ತಾಲ್ಲೂಕು ಮೊ:9945738141, ಹರಿಹರ ತಾಲ್ಲೂಕು ಮೊ:9945458058 ಇವರನ್ನು ಸಂಪರ್ಕಿಸಬೇಕೆಂದು ಕಲ್ಯಾಣಾಧಿಕಾರಿ ಡಾ.ಕೆ.ಕೆ ಪ್ರಕಾಶ ತಿಳಿಸಿದ್ದಾರೆ.

Read More

ಶಿವಮೊಗ್ಗ: ಸಾರ್ವಜನಿಕವಾಗಿರುವ ಎಲ್ಲಾ ಕೆಲಸ ಕಾರ್ಯಗಳನ್ನು ಸರ್ಕಾರವೇ ಮಾಡಲೆಂದು ಅಪೇಕ್ಷಿಸದೆ ತಾವು ಕೂಡ ಸ್ವಯಂ ಪ್ರೇರಿತರಾಗಿ ಕೈಲಾದ ಸೇವೆ ಸಲ್ಲಿಸಲು ಸಿದ್ದರಾಗಬೇಕು. ಎಲ್ಲರಲ್ಲೂ ನಮ್ಮ ಊರು, ನಮ್ಮ ಶಾಲೆ ಎಂಬ ಅಭಿಮಾನವಿರಬೇಕು. ಮಕ್ಕಳ ಭವಿಷ್ಯ ರೂಪಿಸುವುದು ಮಾತ್ರವಲ್ಲ ಸರ್ಕಾರದ ಅಸ್ತಿಯ ರಕ್ಷಣೆಯ ಹೊಣೆಯೂ ನಮ್ಮೆಲ್ಲರದ್ದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಸೊರಬ ತಾಲೂಕು ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗೆ ನೂತನ ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆಯ ಕಾಮಗಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಯೋಜನೆ ಮತ್ತು ಸಾಂಕಿಕ ಸಚಿವ ಡಿ. ಸುಧಾಕರ್ ಹಾಗೂ ಸ್ಥಳೀಯರೊಂದಿಗೆ ಭಾಗವಹಿಸಿ, ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ ಮಾಡಿದ ನಂತರ ಗಿಡನೆಟ್ಟು ಶಂಕುಸ್ಥಾಪನೆ ನೆರವೇರಿಸಿದರು.…

Read More

ದಾವಣಗೆರೆ: ಸಿಗ್ನಲ್ ಜಂಪ್ ಮಾಡೋದು ಇತ್ತೀಚಿನ ದಿನದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಲವು ಮಂದಿ ವಾಹನ ಸವಾರರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವುದನ್ನು ನಾವು ಕಾಣಬಹುದಾಗಿದೆ. ಈ ನಡುವೆ ಬೈಕ್ ಸವಾರನೊಬ್ಬ ಸಿಗ್ನಲ್ ಜಂಪ್ ಮಾಡಲು ಹೋಗಿ ಎದುರಿಗೆ ಬಂದ ಟಾಟಾ ಏಸ್‍ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಡಿಸಿ ಆಫೀಸ್ ಸರ್ಕಲ್‍ನಲ್ಲಿ ನಡೆದಿದೆ.ಸಾವಿಗೀಡಾದ ಯುವಕನನ್ನು ಮೈಕಲ್ ಕುಮಾರ್ (24) ಎಂದು ಗುರುತಿಸಲಾಗಿದೆ ಅಪಘಾತದಲ್ಲಿ ಬೈಕ್‍ನ ಹಿಂಬದಿ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Read More