Author: kannadanewsnow07

ಯಾದಗಿರಿ: ವಿಪರೀತ ಬಿಸಿಲಿಗೆ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ವೃದ್ದೆಯನ್ನು ಹಣಮಂತಿ (60) ಅಂತ ತಿಳಿದು ಬಂದಿದೆ. ಹಣಮಂತಿ ಅವರು ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆಯಲ್ಲಿ ವಿಪರೀತ ಬಿಸಿಲಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲಸ ಮಾಡುತ್ತಿದ್ದ ಜಾಗದಲೇ ಅವರು ಸ್ಥಳದಲ್ಲದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಇನ್ನೂ ಮೃತ ವೃದ್ಧೆಯ ಮೃತದೇಹ ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಘಟನೆ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ದೇವರು ಮತ್ತು ಪ್ರಾರ್ಥನಾ ಸ್ಥಳದ ಹೆಸರಿನಲ್ಲಿ ಮತಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಉಚ್ಚ ನ್ಯಾಯಾಲಯವು ಎಪ್ರಿಲ್ 28ರಂದು ವಜಾಗೊಳಿಸಿದೆ. ಉತ್ತರಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿಯನ್ನು ಆರು ವರ್ಷಗಳ ಅವಧಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೆಂದು ಕೋರಿ ವಕೀಲ ಆನಂದ್ ಎಸ್ ಜೊಂಡಾಲೆ ಅವರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸಚಿನ್ ದತ್ತಾ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಪೂರ್ವಭಾವಿಯಾಗಿ ಭಾವಿಸಿದ್ದಾರೆ ಎಂದು ಹೇಳಿದರು. ಯಾವುದೇ ದೂರಿನ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

Read More

ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ (ಏಪ್ರಿಲ್ 30) ಬೆಳಿಗ್ಗೆ 10 ಗಂಟೆಗೆ ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯಲಿರುವ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳು ಪಕ್ಷದ ಕಾರ್ಯಕರ್ತರಿಗೆ ಮುಜುಗರವನ್ನುಂಟು ಮಾಡಿವೆ ಮತ್ತು ಈ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪಕ್ಷದ ಅಧ್ಯಕ್ಷ ಮತ್ತು ರಾಜ್ಯ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್‌ ನಾಯಕರು ಒತ್ತಾಯಿಸಿದ್ದಾರೆ. ಅಶ್ಲೀಲ ವೀಡಿಯೊಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ, ಇದು ಪಕ್ಷದ ಕಾರ್ಯಕರ್ತರನ್ನು ಮುಜುಗರಕ್ಕೀಡು ಮಾಡಿದೆ. ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. 19 ಶಾಸಕರು ಮುಖ್ಯವೋ ಅಥವಾ ಎಚ್.ಡಿ.ರೇವಣ್ಣ ಅಥವಾ ಪ್ರಜ್ವಲ್ ಮುಖ್ಯವೋ ಎಂಬುದನ್ನು ಅವರೇ ನಿರ್ಧರಿಸಬೇಕು. ಪಕ್ಷದ ತತ್ವಗಳನ್ನು ಉಳಿಸಲು ಮತ್ತು ಮುಜುಗರದಿಂದ ನಮ್ಮನ್ನು ರಕ್ಷಿಸಲು ರೇವಣ್ಣ ಮತ್ತು ಪ್ರಜ್ವಲ್ ಅವರನ್ನು…

Read More

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅಂದ ಹಾಗೇ ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೇರವೇರಿಸಲಾಗುವುದು. ಈ ನಡುವೆ . ಶ್ರೀನಿವಾಸ ಪ್ರಸಾದ್, ಸಂಸದರು ಹಾಗೂ ಮಾಜಿ ಸಚಿವರು ಇವರು ದಿನಾಂಕ:29.04.2024ರಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ದಿವಂಗತರ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೂ (ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ), ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ:30.04.2024ರಂದು ರಜೆ ಘೋಷಿಸಲಾಗಿದೆ. ಸದರಿ ಆದೇಶವು ನಗೋಷಿಯಬಲ್ ಇನ್ಸ್‌ಸ್ಸುಮೆಂಟ್ ಆಕ್ಟ್ 1881ರ ಪಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತ ಆದೇಶಿಸಿದೆ.

Read More

ರಾಮನಗರ: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ (19) ಎಂದು ಗುರುತಿಸಲಾಗಿದೆ. ಇನ್ನುಳಿದ 7ಮಂದಿ ವಿದ್ಯಾರ್ಥಿಗಳು ಪಾರಾಗಿದ್ದಾರೆ‌ ಮೃತರು ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಂಥ ತಿಳಿದು ಬಂಧಿದ್ದು, ಇಂದು ಮಧ್ಯಾಹ್ನ ನೀರಿನಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾತನೂರು ಪೊಲೀಸರು ಭೇಟಿ ನೀಡಿ ಪ್ರಕರಣವನ್ನುದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಘಟನೆ ಸಂಬಂಧ ಎಲ್ಲಾ ಐವರ ಮೃತ ದೇಹವನ್ನು ಮರೋಣತ್ತರ ಪರಿಕೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್‍ಮೆಂಟ್ ಆಫ್ ಇಂಡಿಯಾ (ಸಿಮಿ) ಅನ್ನು ಕಲಂ 3(1) ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅನ್ವಯ ಕಾನೂನು ಬಾಹಿರ ಸಂಘಟನೆಯೆಂದು ಘೋಷಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರವು ಉಪ ಕಲಂ (1) ಕಲಂ- 3 ಕಾನೂನು ಬಾಹಿರ ಚಟಿವಟಿಕೆಗಳ (ತಡೆ) ಕಾಯ್ದೆ 1967 (37 ಆಫ್ 1967) (ಇನ್ನೂ ಮುಂದೆ ‘ಕಾಯ್ದೆ’ ಎಂದು ಕರೆಯಲ್ಪಡುವ) ರ ಅಡಿಯಲ್ಲಿ ತನಗೆ ಪ್ರದತ್ತವಾದ ಅಧಿಕಾರದ ಅನ್ವಯ ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್‍ಮೆಂಟ್ ಆಫ್ ಇಂಡಿಯಾ (ಸಿಮಿ) ಅನ್ನು ಕಾನೂನು ಬಾಹಿರ ಸಂಘಟನೆಯೆಂದು ಘೋಷಿಸಿ ಅಧಿಸೂಚನೆ ಸಂಖ್ಯೆ: ಎಸ್‍ಒ 354(ಇ) ದಿನಾಂಕ: 29.01.2024 ರಂದು ಘೋಷಿಸಿದೆ. (ಪ್ರಕಟಿತ ಭಾರತದ ಗೆಜೆಟ್ ಸಂಚಿಕೆ ಭಾಗ-2, ವಿಭಾಗ-3, ಉಪ ವಿಭಾಗ (2) ದಿನಾಂಕ: 29.01.2024). ಕಾಯ್ದೆಯ ಉಪ ಕಲಂ (1) ಕಲಂ 4 ರಲ್ಲಿ ತಿಳಿಸಿರುವಂತೆ ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್‍ಮೆಂಟ್ ಆಫ್ ಇಂಡಿಯಾ ಅನ್ನು ಕಾನೂನು ಬಾಹಿರ ಸಂಘಟನೆಯೆಂದು ಘೋಷಿಸಲು ಸಾಕಷ್ಟು…

Read More

ನವದೆಹಲಿ: ಬಿಹಾರದ ಬೇಗುಸರಾಯ್ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಅವರು ಸೋಮವಾರ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಹೆಲಿಕಾಪ್ಟರ್ ಕೆಲವು ಕ್ಷಣಗಳ ಕಾಲ ನಿಯಂತ್ರಣ ಕಳೆದುಕೊಂಡಿತು. ಈ ಘಟನೆ ಸೋಮವಾರ ಬಿಹಾರದಲ್ಲಿ ನಡೆದಿದೆ. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ರಾಜ್ಯದ ಬೇಗುಸರಾಯ್ಗೆ ತೆರಳಿದ್ದ ಅಮಿತ್ ಶಾ ಮನೆಗೆ ಮರಳುತ್ತಿದ್ದರು. ವೈರಲ್ ಆಗಿರುವ ವೀಡಿಯೊದ ಪ್ರಕಾರ. ಟೇಕ್ ಆಫ್ ಆಗುವಾಗ, ಹೆಲಿಕಾಪ್ಟರ್ ಸ್ವಲ್ಪ ಬಲಕ್ಕೆ ಬಾಗಿತು. ಅದು ನೆಲವನ್ನು ಸ್ಪರ್ಶಿಸುತ್ತಿರುವಂತೆ ಭಾಸವಾಯಿತು. ಆದಾಗ್ಯೂ, ಪೈಲಟ್ ನಿಯಂತ್ರಣವನ್ನು ಮರಳಿ ಪಡೆದಾಗ, ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿದ್ದ ದಿಕ್ಕಿನಲ್ಲಿ ಹೊರಟಿತು. ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಅಮಿತ್ ಶಾ ಅವರ ನಕಲಿ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. https://twitter.com/badal_saraswat/status/1784907481212403943

Read More

ಜಿಲ್ಲೆಯಲ್ಲಿ ಪ್ರಖರ ಬಿಸಿಲು ಕಂಡುಬರುವ ಹಿನ್ನಲೆಯಲ್ಲಿ ಮಧ್ಯಾಹ್ನದ 01 ಗಂಟೆಯಿಂದ ಸಂಜೆ 04 ಗಂಟೆಯ ಅವಧಿಯಲ್ಲಿ ವಯೋ ವೃದ್ಧರು, ಮಕ್ಕಳು ಗರ್ಭಿಣಿ ಮತ್ತು ದೀರ್ಘಕಾಲಿನ ಖಾಯಿಲೆಗಳಿಗೆ ಔಷಧಿ ಸೇವಿಸುವ ಪ್ರತಿಯೊಬ್ಬರು ಹೊರಗಡೆ ಹೋಗುವುದನ್ನು ತಪ್ಪಿಸಿ, ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ ಬಾಬು ಅವರು ಕೋರಿದ್ದಾರೆ. ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಪ್ರಸ್ತುತ ಬೇಸಿಗೆಯು ಅತ್ಯಂತ ಪ್ರಖರವಾಗಿದ್ದು, ಈಗಾಗಲೇ ರಾಜ್ಯ ಹವಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ಒಣಹವೆಯೊಂದಿಗೆ ಬಿಸಿಗಾಳಿ ಬೀಸುವ ಕುರಿತು ಮುನ್ನಚ್ಚೆರಿಕೆ ನೀಡಿರುವ ಹಿನ್ನಲೆ ಬಳ್ಳಾರಿ ಜಿಲ್ಲೆಯಲ್ಲಿಯೂ ಸಹ ವಾತಾವರಣ ಕಂಡುಬರುತ್ತಿದ್ದು, ಪ್ರತಿಯೊಬ್ಬರು ಆದಷ್ಟು ನೆರಳಿನಲ್ಲಿ ಇರುವುದಕ್ಕೆ ಆದ್ಯತೆ ನೀಡಬೇಕು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ದೇಹದಲ್ಲಿ ನಿರ್ಜಲೀಕರಣವನ್ನು ತಡೆಗಟ್ಟಲು ಓ.ಆರ್.ಎಸ್ ಜೀವಜಲ ಪುಡಿಯನ್ನು ಅಗತ್ಯವುಳ್ಳವರಿಗೆ ಕೊಡುವ ವ್ಯವಸ್ಥೆ ಮಾಡಲಾಗಿದೆ. ರೋಗಿಗಳ ಆರೈಕೆಗಾಗಿ, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ…

Read More

ಬೆಳಗಾವಿ: ನೂರಾರು ಮಹಿಳೆಯರನ್ನು ಪ್ರಜ್ವಲ್ ಜೀವಂತ ಕೊಲೆ ಮಾಡಿದ್ದಾರೆ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ, ಅವರು ಜ್ವಲ್ ರೇವಣ್ಣ ನೂರಾರು ಮಹಿಳೆಯರ ವೀಡಿಯೋ ಮಾಡಿ ಮಹಿಳೆಯರನ್ನು ಜೀವಂತವಾಗಿ ಕೊಲೆ ಮಾಡಿದ್ದಾರೆ. ಇಷ್ಟೆಲ್ಲಾ ನಡೆದ್ರೂ ಬಿಜೆಪಿಯವರು ಬಾಯಿಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ ಅಂಥ ಆರೋಪಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ, ಹುಬ್ಬಳ್ಳಿಯಲ್ಲಿ ಹೋರಾಟ ಮಾಡಿದವರಿಗೆ ಈ ನೂರಾರು ಮಹಿಳೆಯರ ನೋವಿನ ಕೂಗು ಏಕೆ ಕೇಳುತ್ತಿಲ್ಲ? ಏಕೆ ಮೌನ ವಹಿಸಿದ್ದಾರೆ ಎಂದು ಅವರು ಪ್ರಶ್ನೆ ಮಾಡಿದರು.

Read More

ನವದೆಹಲಿ : ಕರ್ನಾಟಕ ಸೇರಿ ಮತ್ತೆ ಭಾರತದಲ್ಲಿ ಹಲವಾರು ಬಳಕೆದಾರರು ವೆಬ್’ನಲ್ಲಿ ಎಕ್ಸ್ (ಹಿಂದೆ ಟ್ವಿಟರ್) ಪ್ರವೇಶಿಸುವಲ್ಲಿ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ವೆಬ್ಸೈಟ್ಗಳು ಮತ್ತು ಆನ್ಲೈನ್ ಸೇವೆಗಳ ನೈಜ-ಸಮಯದ ಸ್ಥಗಿತವನ್ನ ಪತ್ತೆಹಚ್ಚುವ ಪ್ಲಾಟ್ಫಾರ್ಮ್ Downdetector.in, ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ನೊಂದಿಗೆ ಸಮಸ್ಯೆಗಳ ವರದಿಯಲ್ಲಿ ಹೆಚ್ಚಳವನ್ನು ತೋರಿಸುತ್ತಿದೆ.

Read More