Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಮೇ 1 ಅನ್ನು ಮೇ ದಿನವೆಂದು ಗುರುತಿಸಲಾಗಿದೆ, ಇದನ್ನು ವಿಶ್ವದಾದ್ಯಂತ ವಿವಿಧ ದೇಶಗಳಲ್ಲಿ ಅಂತರರಾಷ್ಟ್ರೀಯ ಕಾರ್ಮಿಕರ ದಿನ ಮತ್ತು ಕಾರ್ಮಿಕ ದಿನ ಎಂದೂ ಕರೆಯಲಾಗುತ್ತದೆ. ಈ ದಿನವು ಕಾರ್ಮಿಕರು ಮತ್ತು ಕಾರ್ಮಿಕ ಚಳವಳಿಯ ಕೊಡುಗೆಗಳನ್ನು ಸ್ಮರಿಸುತ್ತದೆ. ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಗುಂಪುಗಳು ಇದನ್ನು ಕಾರ್ಮಿಕ ವರ್ಗದ ಜನರನ್ನು ಬೆಂಬಲಿಸುವ ದಿನವೆಂದು ಗೊತ್ತುಪಡಿಸಲು ನಿರ್ಧರಿಸಿದ ನಂತರ, ಮೇ 1 ಅನ್ನು 19 ನೇ ಶತಮಾನದ ಉತ್ತರಾರ್ಧದಲ್ಲಿ ಕಾರ್ಮಿಕ ಚಳವಳಿಯೊಂದಿಗೆ ಸಂಬಂಧಿಸಲಾಯಿತು. 1886ರ ಮೇ 4ರಂದು ಪೊಲೀಸರು ಮತ್ತು ಕಾರ್ಮಿಕ ಪ್ರತಿಭಟನಾಕಾರರ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದಾಗ ಚಿಕಾಗೋದ ಹೇಮಾರ್ಕೆಟ್ ವ್ಯವಹಾರದ ನೆನಪಿಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಿಕಾಗೋದ ಹೇಮಾರ್ಕೆಟ್ ಸ್ಕ್ವೇರ್ನಲ್ಲಿ ಶಾಂತಿಯುತ ರ್ಯಾಲಿಯನ್ನು ಮುರಿಯಲು ಪೊಲೀಸರು ಆಗಮಿಸಿದ ನಂತರ ಬಾಂಬ್ ಸ್ಫೋಟಗೊಂಡ ನಂತರ ಈ ಘಟನೆ ಸಂಭವಿಸಿದೆ. ಅಂತಿಮವಾಗಿ, ಹಿಂಸಾಚಾರ ಕೊನೆಗೊಳ್ಳುವ ಮೊದಲು ಏಳು ಪೊಲೀಸ್ ಅಧಿಕಾರಿಗಳು ಕೊಲ್ಲಲ್ಪಟ್ಟರು ಮತ್ತು 60 ಜನರು ಗಾಯಗೊಂಡರು. ನಾಲ್ಕರಿಂದ ಎಂಟು ನಾಗರಿಕರು ಸಾವನ್ನಪ್ಪಿದ್ದಾರೆ…
ಬೆಂಗಳೂರು: ನಾಡಿನ ಹೆಮ್ಮೆಯ ನಟಿ, ಟಿಕ್ ಟಾಕ್ ಸ್ಟಾರ್, ಮಹಿಳಾ ಪರಹೋರಾಟಗಾರ್ತಿ, ನೇಹಾ ಪ್ರಕರಣದಲ್ಲಿ ದೊಡ್ಡದಾಗಿ ಗುರುತಿಸಿಕೊಂಡಿದ್ದ ಪ್ರಿಯಾ ಸವದಿ ಅವರು ಹಾಸನ ಪೆನ್ ಡ್ರೈವ್ ಕೇಸ್ನಲ್ಲಿ ನೊಂದ ಮಹಿಳೆಯರ ಪರ ಹೋರಾಟ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ನೇಹಾ ಹತ್ಯೆಯಾದ ಬಳಿಕ ಹತ್ಯೆ ವಿರುದ್ದ, ಹಿಂದೂ ಪರವಾಗಿ ಮಾತನಾಡಿ ಎಲ್ಲರ ಚಪ್ಪಳ ಗಿಟ್ಟಿಸಿಕೊಂಡಿದ್ದ ಪ್ರಿಯ ಸವದಿ ಅವರು ಈಗ ಹಾಸನದಲ್ಲಿ ಆಗಿರುವ ಮಹಿಳೆಯರ ಪರವಾಗಿ ಹೋರಾಟ ನಡೆಸಲಿ ಎನ್ನುವುದು ಸಾಮಾಜಿಕ ಜಾಲತಾಣದಲ್ಲಿ ಕೂಗು ಕೇಳಿ ಬರುತ್ತಿದೆ. ಹೆಣ್ಣು ಮಕ್ಕಳು ಅಂದ್ರೆ ಅದು ಬರಿ ನೇಹಾ ಅಲ್ಲ ಅದು ಹಾಸನದಲ್ಲಿ ಆಗಿರುವ ಹೆಣ್ಣುಮಕ್ಕಳಿಗೂ ಕೂಡ ಅನ್ಯಾಯ ಈ ಕೂಡಲೇ ತಮ್ಮ ಕೋಪ, ತಾಪವನ್ನು ಹಾಸನದ ಕೇಸ್ನಲ್ಲಿ ಕೂಡ ಪ್ರಿಯ ಸವದಿ ಅವರು ತೋರ್ಪಡಿಸಿ ಹೋರಾಟಕ್ಕೆ ಇಳಿದು ನೊಂದ ಹೆಣ್ಣು ಮಕ್ಕಳ ಪರವಾಗಿ ಹೋರಾಟ ನಡಸಲಿ ಅಂಥ ಅನೇಕ ಮಂದಿ ಅವರನ್ನು ಮನವಿ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಬಗ್ಗೆ ಪ್ರಿಯ ಸವದಿ ಅವರು ಶೀಘ್ರದಲ್ಲಿ ತಮ್ಮ…
ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ವೇಳೇ ಅವರು ಮಾತನಾಡಿ ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಮಾನಿಸಿದರು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು ನಿಂತೋಗತ್ತವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಆಗಲೇ ತೆಗೆದಿಟ್ಟಿದ್ದೀವಿ ಎಂದರು.
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಚಾಮರಾಜನಗರ ಸಂಸದ ವಿ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ.ಸೋಮವಾರ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು…
ರಾಯಚೂರು: ದೇಶದ ಯುವಕರಿಗೆ ಉದ್ಯೋಗ ನೀಡುವ ಬದಲು ಪ್ರಧಾನ ಮಂತ್ರಿಗಳು ‘ಪಕೋಡ ಮಾರಿ’ ಎಂದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಸಿಂಧನೂರು ನಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜಶೇಖರ್ ಹಿಟ್ನಾಳ್ ಯವರ ಪರವಾಗಿ ಮತದಾರರಲ್ಲಿ ಮತ ಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ವಿದೇಶದಿಂದ ಬಂದ ಕಪ್ಪು ಹಣವನ್ನು ತಂದು ದೇಶದ ಎಲ್ಲ ಜನರ ಖಾತೆಗೆ 15 ಲಕ್ಷ ರೂ.ಹಾಕುತ್ತೇವೆ ಎಂದಿದ್ದ ಮೋದಿಯವರು ಹತ್ತು ವರ್ಷವಾದರೂ ಹಣ ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿ ಯುವಜನರಿಗೆ ಕೆಲಸ ನೀಡುತ್ತೇನೆ ಎಂದಿದ್ದರು. ಇದನ್ನು ನಂಬಿ ದೇಶದ ಯುವಜನತೆ ‘ಮೋದಿ , ಮೋದಿ’ ಎಂದು ನಂಬಿದ್ದರೆ, ಮೋದಿಯವರು ‘ಪಕೋಡ ಮಾರಲಿ’ ಎಂದು ಯುವಜನರಿಗೆ ಹೇಳಿದ್ದು, ಮೋದಿಯವರ ಬೇಜವಾಬ್ದಾರಿಯನ್ನು ತೋರುತ್ತದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಸುಳ್ಳನ್ನು ಹೇಳಿದರು. ಅಗತ್ಯ ವಸ್ತುಗಳ ಬೆಲೆ ಇಳಿಸುತ್ತೇನೆ ಎಂದು ಭರವಸೆ ನೀಡಿದ್ದರು.…
ರಾಯಚೂರೂ: ನರೇಂದ್ರ ಮೋದಿ ಈ ಬಾರಿ ಭಾವನೆಗಳನ್ನು ಕೆರಳಿಸಿ ಜನರ ವಿಶ್ವಾಸಗಳಿಸಲು ಸಾಧ್ಯವಿಲ್ಲ. ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಿಂಧನೂರು ನಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜಶೇಖರ್ ಹಿಟ್ನಾಳ್ ಯವರ ಪರವಾಗಿ ಮತದಾರರಲ್ಲಿ ಮತ ಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು ಎಂದರು. ಬಿಜೆಪಿಗೆ 200 ಸ್ಥಾನ ದೊರೆತರೆ ಹೆಚ್ಚು ಸಮೀಕ್ಷಾ ವರದಿಯೊಂದರ ಪ್ರಕಾರ ಬಿಜೆಪಿ 200 ಸ್ಥಾನಗಳನ್ನು ಗೆದ್ದರೆ ಹೆಚ್ಚು ಎನ್ನುವುದು ನರೇಂದ್ರಮೋದಿಯವರಿಗೆ ಗೊತ್ತಾಗಿದೆ. ಅದಕ್ಕಾಗಿ ಇಡೀ ರಾಷ್ಟ್ರದಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಟಿಕೆಟ್ ಬದಲಾಯಿಸುವ ಕೆಲಸವನ್ನು ಮಾಡಿದೆ. ಕರ್ನಾಟಕದಲ್ಲಿ 12 ಜನ…
ನವದೆಹಲಿ: ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ಗಾಗಿ ಹಿಂದೂಗಳ ವಿರುದ್ಧ ಪಕ್ಷಪಾತ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ ನಂತರ ತೆಲಂಗಾಣ ಕಾಂಗ್ರೆಸ್ ಮುಖಂಡ ತುಮ್ಮಲ ನಾಗೇಶ್ವರ ರಾವ್ ಅವರ ವೀಡಿಯೊ ವೈರಲ್ ಆಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ನಾಗೇಶ್ವರ ರಾವ್ ಅವರು ತಮ್ಮ ಪಕ್ಷಕ್ಕೆ ಹಿಂದೂ ಮತಗಳು ಅಗತ್ಯವಿಲ್ಲ ಎಂದು ಹೇಳುವುದನ್ನು ಕೇಳಬಹುದು. ಆದಾಗ್ಯೂ, ವೈರಲ್ ವೀಡಿಯೊದ ಸತ್ಯಾಸತ್ಯತೆಯನ್ನು ದೃಢೀಕರಿಸಲು ಸಾಧ್ಯವಾಗಲಿಲ್ಲ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹಿಂದೂ ಮತಗಳು ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಟಿ ನಾಗೇಶ್ವರ ರಾವ್ ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯನ್ನು ಟೀಕಿಸಿದ ಬಿಜೆಪಿ, ಅದು ಮುಸ್ಲಿಂ ಲೀಗ್ನ ಸಿದ್ಧಾಂತವನ್ನು ಉತ್ತೇಜಿಸುತ್ತದೆ ಎಂದು ಬಣ್ಣಿಸಿತು. ರಾಜಸ್ಥಾನದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕು ಇರಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್…
ನವದೆಹಲಿ: ಉದ್ಯೋಗಸ್ಥ ಮಹಿಳೆಯರ ವಿಶೇಷ ಕಾಳಜಿಗಳನ್ನು ರಾಜ್ಯವು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಗಮನಿಸಿದ ಸುಪ್ರೀಂ ಕೋರ್ಟ್, ವಿಶೇಷ ಅಗತ್ಯವಿರುವ ಮಕ್ಕಳನ್ನು ಬೆಳೆಸುವವರು ಸೇರಿದಂತೆ ತಾಯಂದಿರಿಗೆ ಮಕ್ಕಳ ಆರೈಕೆ ರಜೆ ನೀಡುವ ಸಂಪೂರ್ಣ ಅಂಶವನ್ನು ಮರುಪರಿಶೀಲಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಕಾರ್ಯಪಡೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯು ಸವಲತ್ತುಗಳ ವಿಷಯವಲ್ಲ, ಆದರೆ ಸಂವಿಧಾನದ 14, 15 ಮತ್ತು 21 ನೇ ವಿಧಿಗಳಿಂದ ರಕ್ಷಿಸಲ್ಪಟ್ಟ ಸಾಂವಿಧಾನಿಕ ಹಕ್ಕು; ಅನುಚ್ಛೇದ 19 (1) (ಜಿ) ಜೊತೆಗೆ. ಮಾದರಿ ಉದ್ಯೋಗದಾತರಾಗಿ ರಾಜ್ಯವು ಕಾರ್ಯಪಡೆಯ ಭಾಗವಾಗಿರುವ ಮಹಿಳೆಯರ ವಿಷಯದಲ್ಲಿ ಉದ್ಭವಿಸುವ ವಿಶೇಷ ಕಾಳಜಿಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಹೇಳಿದೆ.ಮಹಿಳೆಯರಿಗೆ ಮಕ್ಕಳ ಆರೈಕೆ ರಜೆಯ ನಿಬಂಧನೆಯು ಕಾರ್ಯಪಡೆಯ ಸದಸ್ಯರಾಗಿ ಮಹಿಳೆಯರು ತಮ್ಮ ಸೂಕ್ತ ಭಾಗವಹಿಸುವಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳುವ ಮಹತ್ವದ ಸಾಂವಿಧಾನಿಕ ಉದ್ದೇಶವನ್ನು ಪೂರೈಸುತ್ತದೆ. ಇಲ್ಲದಿದ್ದರೆ, ಮಕ್ಕಳ ಆರೈಕೆ ರಜೆ ಮಂಜೂರು ಮಾಡುವ ನಿಬಂಧನೆಯ ಅನುಪಸ್ಥಿತಿಯಲ್ಲಿ, ತಾಯಿಯನ್ನು ಕಾರ್ಯಪಡೆಯನ್ನು ತೊರೆಯಲು…
ಬೆಂಗಳೂರು:ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 2024-25 ನೇ ಸಾಲಿನ ಶೈಕ್ಷಣಿಕ ಅವಧಿಗೆ ಒಟ್ಟು 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿವಿಧ ಸಂಸ್ಥೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ: 01-07-2024 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಡೀಕೃತ ಅಂಕಗಳ ಮೆರಿಟ್ನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕವಾಗಿದೆ. ಡಿಪ್ಲೊಮಾ…
ಬೆಂಗಳೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ಅವಧಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ನೇರ ಪ್ರವೇಶಕ್ಕಾಗಿ 32 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಐ.ಐ.ಹೆಚ್.ಟಿ. ನಿಯಮಾನುಸಾರ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು. ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10ನೇ ತರಗತಿ ತೇರ್ಗಡೆ ಜೊತೆಗೆ (2 ವರ್ಷಗಳ ಐಟಿಐ) ತೇರ್ಗಡೆ ಹೊಂದಿರಬೇಕು. ಅಥವಾ 10+2 ಪಾಸ್ ಜೊತೆಗೆ (2 ವರ್ಷಗಳ ಐಟಿಐ) ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ…








