Author: kannadanewsnow07

ಬೆಂಗಳೂರು: ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ವಿಮಾ ಕಂಪನಿಗಳ ನಡವಳಿಕೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ. ಆದ್ದರಿಂದ ಈ ಕುರಿತು ಮುಂಚಿತವಾಗಿಯೇ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೈಸೂರಿನ ಎರಡು ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ. ನರಸೀಪುರ ತಾಲ್ಲೂಕು…

Read More

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದು, ಕೂಡಲೇ ಅವರ ಬಂಧನಕ್ಕೆ ಅವಕಾಶ ಮಾಡಿಕೊಡಬೇಕಾಗಿ ಆಗ್ರಹಿದ್ದಾರೆ. ಈ ನಡುವೆ ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂತ ಇಲಾಖೆಯು ಪ್ರಜ್ವಲ್ ರೇವಣ್ ಅವರ ಪಾಸ್ ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ ಎನ್ನಲಾಗಿದೆ. ಎಸ್‌ಐಟಿಯಿಂದ ಪಾಸ್‌ಪೋರ್ಟ್‌ ರದ್ದತಿ ಮನವಿ ಬಂದಿದೆ. ಹೀಗಾಗಿ ಪಾಸ್‌ಪೋರ್ಟ್‌ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.

Read More

ಶಿವಮೊಗ್ಗ: ಶಿವಮೊಗ್ಗದಿಂದ ಕುಂದಾಪುರಕ್ಕೆ ಹೋಗುವ ಬಸ್‌ವೊಂದು ಡೀಸೆಲ್‌ ಖಾಲಿಯಾಗಿ ನಡು ರೋಡಲ್ಲಿ ಪ್ರಯಾಣಿಕರನ್ನ ಇಳಿಸಿದ ಘಟನೆ ಶಿವಮೊಗ್ಗ ಹುಲಿಕಲ್‌ ಘಾಟಿಯ ಬಳಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರ ಹೋಗುತ್ತಿದ್ದ ಬಸ್ ನಿನ್ನೆ ಸಂಜೆ ಮಾಸ್ತಿಕಟ್ಟೆ ಸಮೀಪ ಡಿಸೇಲ್‌ ಇಲ್ಲ ಎನ್ನುವ ಕಾರಣಕ್ಕೆ ನಿಂತಿದೆ ಎನ್ನಲಾಗಿದೆ. ಬಸ್‌ನ ಡ್ರೈವರ್‌ ಹಾಗೂ ಕಂಡಕ್ಟರ್‌ ವಿಷಯವನ್ನು ತಮ್ಮ ಮೇಲಾಧಿಕಾರಿಗಳಿಗೆ ಈ ಬಗ್ಗೆ ಗಮನಕ್ಕೆ ತಂದ ವೇಳೆಯಲ್ಲಿ ಅಧಿಕಾರಿಗಳು ನಿಮ್ಮ ಹಣದಿಂದಲೇ ಡಿಸೇಲ್ ಹಾಕಿಸಿಕೊಂಡು ಬನ್ನಿ ಅಂತ ಹೇಳಿ ತಮ್ಮ ಉದಾಸೀನವನ್ನು ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆ ಮಹಿಳೆಯರು ಮಕ್ಕಳು ಕೂಡ ಈ ಘಟನೆಯಿಂದ ನೊಂದು ಹೋಗಿದ್ದಾರೆ ಎನ್ನಲಾಗಿದೆ. ಈ ನಡುವೆ ಖಾಸಗಿ ಬಸ್‌ಗಳಿಗೆ ಪ್ರಯಾಣಿಕರನ್ನು ಹತ್ತಿಸಿ ಅವರವರ ಊರಿಗೆ ಹೋಗಿದ್ದಾರೆ ಎನ್ನಲಾಗಿದೆ. ಇನ್ನೂ ಕಳೆದ ಒಂದು ತಿಂಗಳಿನಲ್ಲಿ ಇದೇ ಮಾರ್ಗದಲ್ಲಿ ಮೂರು ಸಲ ಕೆಎಸ್‌ಆರ್‌ಟಿಸಿ ಬಸ್‌ ಡೀಸೆಲ್‌ ಇಲ್ಲದೆ ನಿಂತಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಸರ್ಕಾರ ಈ ಕೂಡಲೇ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

Read More

ಶಿವಮೊಗ್ಗ: ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಶಿಕಾರಿಪುರದಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್,ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಟರ್ನರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ ಸಿ.ಎನ್.ಸಿ ಮೆಷಿನಿಂಗ್, ಬೇಸಿಕ್ ಡಿಸೈನರ್& ವರ್ಚುವಲ್ ವೇರಿಫೈಯರ್ ಮೆಕ್ಯಾನಿಕ್,ಆರ್ಟಿಸಸ್ ಯೂಸಿಂಗ್ ಅಡ್ವಾನ್ಸ್ ಟೂಲ್, ಮ್ಯಾನುಫಾಕ್ಟರಿಂಗ್ ಪ್ರೋಸಸ್ ಕಂಟ್ರೋಲ್ & ಆಟೋಮೆಷನ್ ಹಾಗೂ ಪಿಪಿಪಿ ಮ್ಯಾನೇಜ್‍ಮೆಂಟ್ ಸೀಟ್‍ನಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಮತ್ತು 8ನೇ ತರಗತಿ ಪಾಸ್ / ಎಸ್.ಎಸ್.ಎಲ್,ಸಿ ಪಾಸ್/ಫೇಲ್ ಆದವರಿಗೆ ವೆಲ್ಡರ್ ಹುದ್ದೆಗಳಿಗೆ ತರಬೇತಿ ನೀಡಲಾಗುವುದು. ಆಸಕ್ತ ಆಭ್ಯರ್ಥಿಗಳು www.cite.karnataka.gov.in ಆನ್‍ಲೈನ್‍ನಲ್ಲಿ ಜೂ. 03 ರೊಳಗಾಗಿ ಸಲ್ಲಿಸುವುದು ಹಾಗೂ ಆಯ್ಕೆ ಮಾಡಿಕೊಂಡ ಸರ್ಕಾರಿ ಐಟಿಐ ಗಳಲ್ಲಿ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ತೆರಳಿ ನಿಗದಿತ ದಿನಾಂಕದೂಳಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳುವುದು ಹಾಗೂ ಪಿಪಿಪಿ ಸೀಟುಗಳ ಪ್ರವೇಶಕ್ಕಾಗಿ ಖುದ್ದಾಗಿ/ಕಚೇರಿ ದೂ.ಸಂ. ಮೂಲಕ…

Read More

ಬೆಂಗಳೂರು: ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಇದೇ ವೇಳೆ ಸಿಎಂ ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ…

Read More

ಬುಧವಾರ ಮೆಕ್ಸಿಕೋದಲ್ಲಿ ಪ್ರಚಾರ ರ್ಯಾಲಿಯಲ್ಲಿ ಭಾರಿ ಗಾಳಿಯಿಂದಾಗಿ ವೇದಿಕೆ ಕುಸಿದು ಒಂಬತ್ತು ಜನರು ಸಾವನ್ನಪ್ಪಿದರು ಮತ್ತು ಅಧ್ಯಕ್ಷೀಯ ಅಭ್ಯರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎನ್ನಲಾಗಿದೆ. ಈಶಾನ್ಯ ನಗರವಾದ ಸ್ಯಾನ್ ಪೆಡ್ರೊ ಗಾರ್ಜಾ ಗಾರ್ಸಿಯಾದಲ್ಲಿ ವೇದಿಕೆಯ ಕೆಳಗೆ ಸಿಲುಕಿರುವವರನ್ನು ಉಳಿಸಲು ರಕ್ಷಣಾ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ. ಸತ್ತವರಲ್ಲಿ ಒಂದು ಮಗುವೂ ಸೇರಿದೆ ಎಂದು ಮೆಕ್ಸಿಕೊದ ನ್ಯೂವೊ ಲಿಯಾನ್ ರಾಜ್ಯದ ಗವರ್ನರ್ ಸ್ಯಾಮ್ಯುಯೆಲ್ ಗಾರ್ಸಿಯಾ ಹೇಳಿದ್ದಾರೆ. ಗಾಯಗೊಂಡವರಲ್ಲಿ ಕೆಲವರು ಈಗ ಸ್ಥಿರವಾಗಿದ್ದಾರೆ ಆದರೆ ಇತರರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರು ಹೇಳಿದರು. https://twitter.com/BNONews/status/1793483125437374584

Read More

ನವದೆಹಲಿ: 2010 ರ ನಂತರ ರಾಜ್ಯದಲ್ಲಿ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ದ್ವಾರಕಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, “ಇಂದು, ಕಲ್ಕತ್ತಾ ಹೈಕೋರ್ಟ್ INDI ಮೈತ್ರಿಗೆ ಬಿಗಿಯಾದ ಕಪಾಳಮೋಕ್ಷ ಮಾಡಿದೆ. ಬಂಗಾಳದಲ್ಲಿ 2010 ರ ನಂತರ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳನ್ನು ನ್ಯಾಯಾಲಯವು ರದ್ದುಗೊಳಿಸಿದೆ. ಪಶ್ಚಿಮ ಬಂಗಾಳ ಸರ್ಕಾರವು ಮುಸ್ಲಿಮರಿಗೆ ವಿವರಿಸಲಾಗದ ರೀತಿಯಲ್ಲಿ OBC ಪ್ರಮಾಣಪತ್ರಗಳನ್ನು ನೀಡಿದ್ದರಿಂದ ಇದನ್ನು ಮಾಡಲಾಗಿದೆ. ಅವರ ರಾಜಕೀಯ ಮತ್ತು ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣದ ಗೀಳು ಎಲ್ಲಾ ಮಿತಿಗಳನ್ನು ದಾಟಿದೆ ಅಂತ ಹೇಳಿದರು. “ಆಜ್ ಕೋರ್ಟ್ ನೆ ತಮಾಚಾ ಮಾರಾ ಹೈ, ಯಹ್ ಖಾನ್ ಮಾರ್ಕೆಟ್ ಗ್ಯಾಂಗ್ ಪಾಪ್ ಕಾ ಭಾಗಿದರ್ ಹೈ (ಇಂದು ನ್ಯಾಯಾಲಯವು ಭಾರಿ ಹೊಡೆತ ನೀಡಿದೆ, ಪಾಪಕ್ಕೆ ಈ ಖಾನ್ ಮಾರ್ಕೆಟ್ ಹೊಣೆಯಾಗಿದೆ)”…

Read More

ನವದೆಹಲಿ: ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸ್ ಅಧಿಕಾರಿಗಳು AIIMS ರಿಷಿಕೇಶದ ತುರ್ತು ಚಿಕಿತ್ಸಾ ವಿಭಾಗಕ್ಕೆ SUV ಮೂಲಕ ಆಗಮಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  ಆಕ್ಷನ್ ಚಲನಚಿತ್ರದ ದೃಶ್ಯವನ್ನು ಹೋಲುವ ವೀಡಿಯೊದಲ್ಲಿ ಪೊಲೀಸ್ ಕಾರ್ ಕಿಕ್ಕಿರಿದ ತುರ್ತು ಚಿಕಿತ್ಸಾ ವಿಭಾಗದ ಮೂಲಕ ಬರುವುದನ್ನು ಕಾಣಬಹುದಾಗಿದೆ. ಸುರಕ್ಷತಾ ಅಧಿಕಾರಿಗಳ ಗುಂಪು ತರಾತುರಿಯಲ್ಲಿ ದಾರಿಯನ್ನು ತೆರವುಗೊಳಿಸಿ, ಸ್ಟ್ರೆಚರ್‌ಗಳು ಮತ್ತು ರೋಗಿಗಳನ್ನು ಒಂದು ಕಡೆಗೆ ಹೋಗುವುದನ್ನು ಕಾಣಬಹುದಾಗಿದೆ. ವಿಡಿಯೋದಲ್ಲಿ, ಹಲವಾರು ಪೊಲೀಸ್ ಅಧಿಕಾರಿಗಳು ಆಸ್ಪತ್ರೆಯ ಮೂಲಕ ದೃಢವಾಗಿ ಮುನ್ನಡೆಯುವುದನ್ನು ಕಾಣಬಹುದಾಗಿದೆ. ಪೊಲೀಸರ ಪ್ರಕಾರ, ಆರೋಪಿ ಸತೀಶ್ ಕುಮಾರ್ ಪ್ರತಿಷ್ಠಿತ ಆರೋಗ್ಯ ಕೇಂದ್ರದ ಆಪರೇಷನ್ ಥಿಯೇಟರ್‌ನಲ್ಲಿ ಮಹಿಳಾ ವೈದ್ಯರಿಗೆ ಕಿರುಕುಳ ನೀಡಿದ್ದಾನೆ. ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ರಿಷಿಕೇಶ್ ಪೊಲೀಸ್ ಅಧಿಕಾರಿ ಶಂಕರ್ ಸಿಂಗ್ ಬಿಶ್ತ್, ಇದೀಗ ಅಮಾನತುಗೊಂಡಿರುವ ಕುಮಾರ್, ವೈದ್ಯರಿಗೆ ಅಶ್ಲೀಲ ಎಸ್‌ಎಂಎಸ್ ಕೂಡ ಕಳುಹಿಸಿದ್ದ ಎನ್ನಲಾಗಿದೆ. https://twitter.com/divya_gandotra/status/1793324070446190985

Read More

ಮುಂಬೈ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 305 (+/- 10) ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ವಿಜ್ಞಾನಿ ಮತ್ತು ಜಾಗತಿಕ ರಾಜಕೀಯ ಅಪಾಯದ ಸಲಹೆಗಾರ ಇಯಾನ್ ಬ್ರೆಮ್ಮರ್ ಮಂಗಳವಾರ ಎನ್‌ಡಿಟಿವಿ ಪ್ರಾಫಿಟ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ಅಪಾಯ ಮತ್ತು ಸಂಶೋಧನಾ ಸಲಹಾ ಸಂಸ್ಥೆಯಾದ ಯುರೇಷಿಯಾ ಗ್ರೂಪ್‌ನ ಸಂಸ್ಥಾಪಕ ಬ್ರೆಮ್ಮರ್, ಜಾಗತಿಕ ರಾಜಕೀಯ ದೃಷ್ಟಿಕೋನದಿಂದ ಭಾರತೀಯ ಸಾರ್ವತ್ರಿಕ ಚುನಾವಣೆಯು “ಸ್ಥಿರವಾಗಿ ಮತ್ತು ಸ್ಥಿರವಾಗಿ ಕಾಣುವ ಏಕೈಕ ವಿಷಯವಾಗಿದೆ … (ಯುನೈಟೆಡ್ ಸ್ಟೇಟ್ಸ್ ಸೇರಿದಂತೆ) ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆ) ಸಮಸ್ಯಾತ್ಮಕವಾಗಿದೆ” ಅಂತ ಹೇಳಿದರು. ನಾವು ಅಗಾಧ ಪ್ರಮಾಣದ ಸ್ಥೂಲ ಮಟ್ಟದ ಭೌಗೋಳಿಕ ರಾಜಕೀಯ ಅನಿಶ್ಚಿತತೆಯನ್ನು ಹೊಂದಿದ್ದೇವೆ ಮತ್ತು ಜಾಗತೀಕರಣದ ಭವಿಷ್ಯವು ಕಂಪನಿಗಳು ಬಯಸಿದ ರೀತಿಯಲ್ಲಿ ನಡೆಯುತ್ತಿಲ್ಲ. ರಾಜಕೀಯವು ಜಾಗತಿಕ ಮಾರುಕಟ್ಟೆಯೊಳಗೆ ತನ್ನನ್ನು ಸೇರಿಸಿಕೊಳ್ಳುತ್ತಿದೆ … ಯುದ್ಧಗಳು, ಯುಎಸ್-ಚೀನಾ ಸಂಬಂಧಗಳು ಮತ್ತು ಯುಎಸ್ ಚುನಾವಣೆಗಳು ಅದರ ದೊಡ್ಡ ಭಾಗವಾಗಿದೆ, ಎಂದು ಅವರು ಹೇಳಿದರು.

Read More

*ರಂಜಿತ ಚೆನ್ನೈ (ತಮಿಳುನಾಡು): ಚೆನ್ನೈನ ಪುರಸೈವಾಕಂನಲ್ಲಿರುವ ರಾಷ್ಟ್ರೀಯ ಗುಪ್ತಚರ ಸಂಸ್ಥೆ (ಎನ್‌ಐಎ) ಕಚೇರಿಯ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ವ್ಯಕ್ತಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಹಿಂದಿಯಲ್ಲಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕರೆ ಸ್ವೀಕರಿಸಿದ ನಂತರ, ರಾಷ್ಟ್ರೀಯ ಗುಪ್ತಚರ ಏಜೆನ್ಸಿಯ ಅಧಿಕಾರಿಗಳು ತ್ವರಿತವಾಗಿ ಚೆನ್ನೈ ಪೊಲೀಸರ ಅಧಿಕಾರಿಗಳಿಗೆ ಸೂಚನೆ ನೀಡಿದರು, ಬೆದರಿಕೆ ಹಾಕಿದ್ದ ಪೋನ್ ನಂಬರ್‌ ಅನ್ನು ನೀಡಿದ್ದಾರೆ ಈ ಬಗ್ಗೆ ಚೆನ್ನೈನ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More