Subscribe to Updates
Get the latest creative news from FooBar about art, design and business.
Author: kannadanewsnow07
ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಮಂಜೂರಾದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ರಾಜ್ಯದ ಬೆಳಗಾವಿ/ ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಿದ್ದು, 21 ರಿಂದ 30 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯು.ಜಿ.ಸಿ.ಯಿಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಪಡೆದಿರಬೇಕು. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದವಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ. 8.00 ಲಕ್ಷಕ್ಕಿಂತ ಮೀರಿರಬಾರದು. ಪುರುಷರು ಕನಿಷ್ಠ ಎತ್ತರ 168 ಸೆಂ.ಮೀ, ತೂಕ 50 ಕೆ.ಜಿ ಹಾಗೂ ಎದೆಯ ಸುತ್ತಳತೆ 76 ಸೆಂ.ಮಿ. ಇರಬೇಕು ಮತ್ತು ಮಹಿಳೆಯರು ಕನಿಷ್ಠ 157 ಸೆಂ.ಮೀ. ಎತ್ತರ, 45 ಕೆ. ಜಿ. ತೂಕವಿರಬೇಕು. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ…
ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್ ಅನ್ನು ಲೋಕಾಯುಕ್ತ ಅಧಿಕಾರಿಗಳು ನೀಡಿದ್ದು, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ, ಯಾದಗಿರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ. ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿ ತಹಶೀಲ್ದಾರ್ ಮನೆ ಹಾಗೂ ಯಾದಗಿರಿ ಜಿಲ್ಲೆಯ ಲೋಕಾಯುಕ್ತ ಶಹಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತುಮಕೂರಿನಲ್ಲಿ ನಿರ್ಮಿತ ಕೇಂದ್ರದ ಎಂಡಿ ರಾಜಶೇಖರ್ ಹಾಗೂ ಸಹೋದರರ ಮನೆ ಮೇಲೆ ಕೂಡ ಅಧಿಕಾರಿಗಳು ದಾಳಿ ನಡಸಿದ್ದಾರೆ. ಒಟ್ಟು ಏಳು ಅಧಿಕಾರಿಗಳು ಮನೆ ಕಚೇರಿ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಯನ್ನು ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಹಿನ್ನಲೆಯಲ್ಲಿ ದೂರುಗಳು ಬಂದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಬೆಂಗಳೂರು: ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯು 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್ಟೈಲ್ ಟೆಕ್ನಾಲಜಿ ಕೋರ್ಸಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಟೆಕ್ಸ್ಟೈಲ್ ಟೆಕ್ನಾಲಜಿ ಕೋರ್ಸ್ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣವಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೋರ್ಸ್ 3 ವರ್ಷದ ಅವಧಿಯದ್ದಾಗಿದೆ. ಪ್ರವೇಶಕ್ಕೆ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ ಶಾಲೆಯ ಮುಖ್ಯಸ್ಥರು ದೃಡೀಕರಿಸಿದ ಎಸ್.ಎಸ್.ಎಲ್.ಸಿ / ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಮೂಲ ವರ್ಗಾವಣೆ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ (5 ವರ್ಷಗಳ ಬಿ.ಇ.ಓ ರವರಿಂದ ದೃಡೀಕರಿಸಿರಬೇಕು), ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 06 ಭಾವಚಿತ್ರಗಳು, ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ, ಕನ್ನಡ / ಗ್ರಾಮೀಣ / ಹೈದ್ರಾಬಾದ್-ಕರ್ನಾಟಕ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯ ಜಾಲತಾಣ https://gpt.karnataka.gov.in/gittbengaluru/public/ ಹಾಗೂ ಶ್ರೀಮತಿ ಉಷಾ ಎಸ್. ಪ್ರಾಂಶುಪಾಲರು ಮೊಬೈಲ್ ಸಂಖ್ಯೆ :…
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಶಾಸನಬದ್ಧ ಸಂಸ್ಥೆಯಾಗಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಸಂರಕ್ಷಿಸುವ ಮತ್ತು ನಿರ್ವಹಿಸುವ ಸಂಬಂಧ ಪ್ರೆಸ್ ಕೌನ್ಸಿಲ್ ಆಕ್ಟ್ 1978 ರ ಅಡಿಯಲ್ಲಿ ಈ ಸಂಸ್ಥೆಯನ್ನು ನವದೆಹಲಿಯ ಲೋಧಿ ರಸ್ತೆಯ ಸಿಜಿಒ ಸಂಕೀರ್ಣದ ಸೂಚನಾ ಭವನದಲ್ಲಿ ಸ್ಥಾಪಿಸಲಾಗಿದೆ. ಇದು ಯಾವುದೇ ರಾಜ್ಯ ಶಾಖೆಯನ್ನು ಹೊಂದಿಲ್ಲ ಮತ್ತು ಅದರ ಪರವಾಗಿ ಕಾರ್ಯ ನಿರ್ವಹಿಸಲು ಇತರೆ ಯಾವುದೇ ಸಂಸ್ಥೆಯನ್ನು ಅಧಿಕೃತಗೊಳಿಸಿರುವುದಿಲ್ಲ ಅಥವಾ ರಚಿಸಿರುವುದಿಲ್ಲ. ಇತರ ಪತ್ರಿಕಾ ಸಂಸ್ಥೆಗಳಿಂದ “ಪ್ರೆಸ್ ಕೌನ್ಸಿಲ್” ಪದವನ್ನು ಬಳಸಿಕೊಂಡಿರುವ ನಿದರ್ಶನಗಳಿದ್ದು, ಇದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಸಾಂಸ್ಥಿಕ ಮೌಲ್ಯವವನ್ನು ಕಳೆದುಕೊಂಡಿರುವುದು ಮಾತ್ರವಲ್ಲದೇ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ವಿಶಿಷ್ಟ ಡೊಮೇನ್ ಮತ್ತು ಶೀರ್ಷಿಕೆಯನ್ನು ಉಲ್ಲಂಘಿಸಿದಂತಾಗುವುದು. “ಪ್ರೆಸ್ ಕೌನ್ಸಿಲ್” ಅಥವಾ ಅದರ ಹಿಂದಿ ಸಮಾನವಾದ ‘ಭಾರತೀಯ ಪ್ರೆಸ್ ಪರಿಷತ್’ ಅನ್ನು ಬಳಸಿಕೊಂಡು ಯಾವುದೇ ಸ್ಥಳೀಯ ಅಥವಾ ಸರ್ಕಾರಿ ಸಂಘ/ಸಂಸ್ಥೆಯ ನೋಂದಣಿಯನ್ನು ನಿμÉೀಧಿಸಲು/ ಸರಿಪಡಿಸಲು ಅಗತ್ಯ ಸಲಹೆಯನ್ನು ಮಾತ್ರ ನೀಡಬಹುದಾಗಿದೆ. ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ,…
ನವದೆಹಲಿ : ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರೈಲ್ವೆ ನೇಮಕಾತಿ ಮಂಡಳಿಯು ಹಲವಾರು ವಲಯ ರೈಲ್ವೆಗಳಲ್ಲಿ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ ಒಟ್ಟು 9,970 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಪದವಿ ಪಡೆದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ/ಪದವಿ ಹೊಂದಿರಬೇಕು. ಅಭ್ಯರ್ಥಿಗಳು 18 ರಿಂದ 30 ವರ್ಷ ವಯಸ್ಸಿನವರಾಗಿರಬೇಕು. ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳಿಗೆ ಸೇರಿದವರಿಗೆ ಸಡಿಲಿಕೆ ಇರುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಸಿಬಿಟಿ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಇತ್ಯಾದಿಗಳ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ರೂ. ಪ್ರತಿ ತಿಂಗಳು. ಸಂಬಳ 19,900 ಆಗಿರುತ್ತದೆ. ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500 ಪಾವತಿಸಬೇಕು. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ,…
ನವದೆಹಲಿ: ಪಾಕಿಸ್ತಾನ ಮತ್ತು ಭಾರತ ನಡುವಿನ ಸೇನೆಯು ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ, ಹಲವಾರು ಪಾಕಿಸ್ತಾನ ಪರ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳು ತಪ್ಪು ಮಾಹಿತಿ ಹರಡುತ್ತಿದ್ದಾವೆ. ಈ ನಡುವೆ ಭಾರತದ ವಿಮಾನ ಪೈಲೆಟ್ ಒಬ್ಬರು ಬಂಧಿಸಲಾಗಿದೆ ಅಂತ ಸುಳ್ಳು ಸುದ್ದಿನ್ನು ಹರಡಿದ್ದು, ಈಗ ಅದನ್ನು ಕೇಂದ್ರ ಸರ್ಕಾರ ನಿರಕಾರಿಸಿದೆ. ಒಂದು ಪೋಸ್ಟ್ನಲ್ಲಿ ಭಾರತೀಯ ವಾಯುಪಡೆಯ ಮಹಿಳಾ ಪೈಲಟ್ ಸ್ಕ್ವಾಡ್ರನ್ ಲೀಡರ್ ಶಿವಾನಿ ಸಿಂಗ್ ಅವರನ್ನು ಪಾಕಿಸ್ತಾನದಲ್ಲಿ ಸೆರೆಹಿಡಿಯಲಾಗಿದೆ ಎಂದು ಹೇಳಲಾಗಿದೆ. “ಭಾರತೀಯ ವಾಯುಪಡೆಯ ಮಹಿಳಾ ಪೈಲಟ್ ಸ್ಕ್ವಾಡ್ರನ್ ಲೀಡರ್ ಶಿವಾನಿ ಸಿಂಗ್ ಅವರು ಜೆಟ್ನಿಂದ ಜಿಗಿಯುವಾಗ ಪಾಕಿಸ್ತಾನದಲ್ಲಿ ಸೆರೆಹಿಡಿಯಲ್ಪಟ್ಟಿದ್ದಾರೆ ಎಂಬ ಸುದ್ದಿ ಇದೆ. ಆದಾಗ್ಯೂ, ಪತ್ರಿಕಾ ಮಾಹಿತಿ ಬ್ಯೂರೋ (PIB) ದ ಸತ್ಯ-ಪರಿಶೀಲನಾ ಘಟಕವು ಈ ಹಕ್ಕು ನಕಲಿ ಎಂದು ಹೇಳಿದೆ. “ಭಾರತೀಯ ವಾಯುಪಡೆಯ ಮಹಿಳಾ ಪೈಲಟ್ ಅವರನ್ನು ಸೆರೆಹಿಡಿಯಲಾಗಿಲ್ಲ” ಎಂದು ಅದು ಹೇಳಿದೆ.
ಮಕ್ಕಳಿಗೆ ನೈತಿಕತೆ ಮತ್ತು ಅತ್ಯುತ್ತಮ ಶೈಕ್ಷಣಿಕ ಜ್ಞಾನವನ್ನು ಪಡೆಯಲು ಪೂಜೆಸರಸ್ವತಿ ಅಧ್ಯಯನಇಂದಿನ ದಿನಗಳಲ್ಲಿ ಎಲ್ಲರೂ ಹಣಕ್ಕೆ ಪ್ರಾಮುಖ್ಯತೆ ನೀಡುತ್ತಾರೆ. ಈ ಹಣವನ್ನು ಗಳಿಸಲು ಸಾಕಷ್ಟು ಜ್ಞಾನವನ್ನು ಹೊಂದಿರುವುದು ಮುಖ್ಯ ವಿಷಯ. ಅವರಿಗೆ ಜ್ಞಾನವಿದ್ದರೆ ಹೇಗಾದರೂ ಹಣ ಸಂಪಾದಿಸಬಹುದು. ಸರಸ್ವತಿ ದೇವಿಯು ಈ ಜ್ಞಾನದ ಅಧಿಪತಿ. ಸರಸ್ವತಿ ದೇವಿಯ ಪರಿಪೂರ್ಣ ಕೃಪೆ ಇರುವ ಯಾವುದೇ ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಕೊರತೆಯಾಗುವುದಿಲ್ಲ ಎಂದು ಹೇಳಬೇಕು. ಆದ್ದರಿಂದ ಸಂಪತ್ತು ಮತ್ತು ಸಮೃದ್ಧಿಯಿಂದ ಬದುಕಲು ಬಯಸುವವರು ಮೊದಲು ಸರಸ್ವತಿ ದೇವಿಯನ್ನು ಪೂಜಿಸಬೇಕು. ಅದರ ನಂತರವೇ ಮಹಾಲಕ್ಷ್ಮಿಯನ್ನು ಪೂಜಿಸಬೇಕು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ಸರಸ್ವತಿ ದೇವಿಯನ್ನು ಪೂಜಿಸುವ ಸರಳ ವಿಧಾನವನ್ನು ನಾವು ನೋಡಲಿದ್ದೇವೆ . ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ…
ನವದೆಹಲಿ: ಭಾರೀ ಮಳೆಯಾದಿಯಿಂದ ಕರ್ನಾಟಕದ ಬೆಂಗ್ಳೂರೂ ಸೇರಿದಂತೆ ಹಲವು ಜಿಲ್ಲೆಗಳು ಮುಂದಿನ ಕೆಲ ದಿನಗಳಲ್ಲಿ ಭಾರಿ ಮಳೆ ಪಡೆಯುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಿಳಿಸಿದೆ. ಹವಾಮಾನ ಇಲಾಖೆ ಸಂದೇಶದಲ್ಲಿ ತಿಳಿಸಿದೆ. ಮೇ 12 ತನಕ ಭಾರಿ ಮಳೆಯಾಗಲಿದೆ ಎನ್ನಲಾಗಿದೆ. ಕೊಲಾರ, ಮೈಸೂರು, ಇತರ ಕರ್ನಾಟಕ ಜಿಲ್ಲೆಗಳಿಗಾಗಿ ಮಳೆಯ ಎಚ್ಚರಿಕೆ ಪ್ರಕಟಿಸಿದೆ
* ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ರಾಜ್ಯ ಗೃಹ ಇಲಾಖೆ ಮಾಡಿಕೊಂಡಿದೆ. ಈ ಸಮಯದಲ್ಲಿ ರಾಜ್ಯದ ಪೊಲೀಸರಿಗೆ ಹೆಚ್ಚಿನ ರಜೆ ಇರುವುದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಸದ್ಯ ಪೊಲೀಸರಿಗೆ ಯಾವುದೇ ಹೆಚ್ಚುವರಿ ರಜೆಯನ್ನು ನೀಡುವುದಿಲ್ಲ ಅಂತ ತಿಳಿಸಿದ ಅವರು ಯಾವಾಗ ಏನು ಆಗುತ್ತದೋ ಯಾರಿಗೂ ತಿಳಿದಿಲ್ಲ, ಕೋಸ್ಟಲ್ ಗಾರ್ಡ್ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಅಂತ ಅವರು ಇದೇ ವೇಳೇ ತಿಳಿಸಿದರು.
ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟದ ನಿರ್ಣಯಗಳು ಹೀಗಿವೆ. ಸಾಮಾಜಿಕ ಸಮಿಕ್ಷಾ ವರದಿ ನಿರ್ಣಯ ಮುಂದೂಡಿಕೆ ದಿನಾಂಕ: 29.02.2024 ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು 54 ಮಾನದಂಡಗಳಿಗೆ ಅನುಗುಣವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ 2024 ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಅಂಕಿ-ಅAಶಗಳನ್ನು ಒಳಗೊಂಡ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ಮುಚ್ಚಿದ ಲಕೋಟೆಯನ್ನು ಸಚಿವ ಸಂಪುಟದಲ್ಲಿ ತೆರೆಯಲಾಗಿತ್ತು. ದತ್ತಾಂಶ ಹಾಗೂ ಅಧ್ಯಯನ ವರದಿ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲು ಸಚಿವ ಸಂಪುಟದ ಮುಂದೆ ಮಂಡಿಸಲಾಗಿತ್ತು ಈ ವಿಷಯವನ್ನು ಮುಂದಿನ ಸಂಪುಟ ಸಭೆಗೆ ಮುಂದೂಡಲಾಯಿತು. ********** ಕೆ.ಎ.ಟಿ ತೀರ್ಪಿನ ವಿರುದ್ಧ ಮೇಲ್ಮನವಿ ಸರ್ಕಾರವು ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿ ಸಂಖ್ಯೆ: 51819/2019 ತಿರಸ್ಕೃತಗೊಂಡಿರುವುದರಿAದ, ಮಾನ್ಯ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯು ಅರ್ಜಿ ಸಂಖ್ಯೆ:…