Subscribe to Updates
Get the latest creative news from FooBar about art, design and business.
Author: kannadanewsnow07
ಮೈಸೂರು: ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು. ದೇಶದಲ್ಲಿ ಅಥವಾ ಕರ್ನಾಟಕದಲ್ಲಿ…
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಮತ್ತು 82 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ತಿಳಿಸಿದೆ. ಮಳೆಯಿಂದಾಗಿ ದೇಶಾದ್ಯಂತ 2,715 ಮನೆಗಳಿಗೆ ಭಾಗಶಃ ಅಥವಾ ಸಂಪೂರ್ಣವಾಗಿ ಹಾನಿಯಾಗಿದೆ ಎಂದು ಎನ್ಡಿಎಂಎ ಶುಕ್ರವಾರ ಹೇಳಿದೆ, ಭೂ ಕುಸಿತ, ಮಿಂಚಿನ ಹೊಡೆತ ಮತ್ತು ಹಠಾತ್ ಪ್ರವಾಹಕ್ಕೆ ಸಂಬಂಧಿಸಿದ ಘಟನೆಗಳಲ್ಲಿ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ದೇಶದ ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಿಂದ ಹೆಚ್ಚಿನ ಹಾನಿ ಮತ್ತು ಸಾವುನೋವುಗಳು ವರದಿಯಾಗಿವೆ, ಅಲ್ಲಿ ಧಾರಾಕಾರ ಮಳೆಯಿಂದಾಗಿ 36 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 53 ಜನರು ಗಾಯಗೊಂಡಿದ್ದಾರೆ, ನಂತರದ ಸ್ಥಾನದಲ್ಲಿ ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ 25 ಸಾವುಗಳು ಮತ್ತು ಎಂಟು ಗಾಯಗಳು ವರದಿಯಾಗಿವೆ ಎಂದು ಎನ್ಡಿಎಂಎ ತಿಳಿಸಿದೆ. ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಒಟ್ಟು 15 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ, ಈ…
ಮೈಸೂರು: ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿದರು ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ.ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು. ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚಂಬು ಕೊಟ್ಟಿದೆ : ಕಾಂಗ್ರೆಸ್ ನ ಚಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂದು ಬಿಜೆಪಿ ಮಾತನಾಡಿರುವ ಬಗ್ಗೆ ಮಾತನಾಡಿ ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚಂಬು ಕೊಟ್ಟಿದೆ ಎಂದು ತಿಳಿಸಲು ನೀಡಿದೆ. ದೇಶದ ಜನರಿಗೆ 15 ಲಕ್ಷ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು , ಅಚ್ಚೇ ದಿನ್…
ಮೈಸೂರು ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.
ಬೆಂಗಳೂರು: ಆಸ್ತಿ ವಿಚಾರಕ್ಕಾಗಿ ಮಾಡಿದ್ದ ನೇಹಾ ಕೊಲೆ ಆರೋಪಿ ಫಯಾಜ್ ತನ್ನ ತಂದೆ ಮೇಲೆ ಹಲ್ಲೆ ಮಾಡಿದ್ದ ಎನ್ನುವ ಅಂಶ ಹೊರ ಬಂದಿದೆ. ಕಳೆದ ಮೂರು ತಿಂಗಳ ಹಿಂದೆ ಆರೋಪಿ ಫಯಾಜ್ ತನ್ನ ತಂದೆ ಬಾಬಾ ಸಾಹೇಬ್ ಸುಭಾನಿ ಮೇಲೆ ಹಲ್ಲೆ ಮಾಡಿದ್ದ ಎನ್ನಲಾಗಿದೆ.ಘಟನೆ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಆಗ ಪೊಲೀಸರು ಆತನನ್ನು ಕರೆಸಿ ಬುದ್ದಿ ಹೇಳಿ, ಮುಚ್ಚಳಿಕೆಯನ್ನು ಬರೆಸಿಕೊಂಡು ಕಳುಹಿಸಿದ್ದರು ಎನ್ನಲಾಗಿದೆ.
ಹಾಸನ: ದೇವೇಗೌಡರ ಕುಟುಂಬ ರಾಜಕಾರಣಕ್ಕೆ ಸ್ವಲ್ಪ ವಿಶ್ರಾಂತಿ ಕೊಟ್ಟು ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಚನ್ನರಾಯಪಟ್ಟಣದಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಜೋರು ಮಳೆಯಲ್ಲೂ ನೆರೆದಿದ್ದ ಸಹಸ್ರಾರು ಮಂದಿಯನ್ನು ಉದ್ದೇಶಿಸಿ ಮಾತನಾಡಿದರು. ಮೋದಿಯವರನ್ನು ವಾಚಾಮಗೋಚರವಾಗಿ ಟೀಕಿಸುತ್ತಿದ್ದ ದೇವೇಗೌಡರು ಈಗ ಉಲ್ಟಾ ಹೊಡೆದಿದ್ದಾರೆ. ತಮಗೂ ಮೋದಿಯವರಿಗೂ ಅವಿನಾಭಾವ ಸಂಬಂಧ ಇದೆ ಎಂದು ಹೇಳುತ್ತಿದ್ದಾರೆ. ನಿಮ್ಮ ಸಂಬಂಧ ಅಷ್ಟು ಚೆನ್ನಾಗಿದ್ದರೆ ಕೊಬ್ಬರಿ ಬೆಳೆಗೆ ಏಕೆ ಬೆಂಬಲ ಬೆಲೆ ಕೊಡಿಸಲಿಲ್ಲ? ಚನ್ನರಾಯಪಟ್ಟಣದ ಅಭಿವೃದ್ಧಿಗೆ ಹಣ ಏಕೆ ಕೊಡಿಸಲಿಲ್ಲ ಎಂದು ಪ್ರಶ್ನಿಸಿದರು. ಪಕೋಡ ಮಾರಿ ಅನ್ನೋಕೆ ಪ್ರಧಾನಿ ಆದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ಸುಳ್ಳು ಹೇಳಿದ್ರು. ಪಾಪ ಭಾರತದ ಯುವಕ ಯುವತಿಯರು ಮೋದಿ ಮಾತನ್ನು ನಂಬಿಬಿಟ್ಟಿದ್ದರು. ನಂಬಿದ ವಿದ್ಯಾವಂತ ನಿರುದ್ಯೋಗಿಗಳು ಉದ್ಯೋಗ ಕೇಳಿದರೆ ಪಕೋಡ ಮಾರಿ ಅಂತ ಮೋದಿ ಹೇಳಿದ್ರು. ನಿರುದ್ಯೋಗಿಗಳಿಗೆ ಪಕೋಡ ಮಾರಾಟ ಮಾಡಿ ಅಂತ…
ನವದೆಹಲಿ: ಹೊಸ ಕ್ರಿಮಿನಲ್ ನ್ಯಾಯ ಕಾನೂನುಗಳ ಜಾರಿಯನ್ನು ಸಮಾಜಕ್ಕೆ ಮಹತ್ವದ ಕ್ಷಣ ಎಂದು ಶ್ಲಾಘಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಭಾರತವು ತನ್ನ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಸಜ್ಜಾಗಿದೆ ಎಂದು ಹೇಳಿದರು. ‘ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ’ ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಅವರು, “ನಾಗರಿಕರಾಗಿ ನಾವು ಅವುಗಳನ್ನು ಅಳವಡಿಸಿಕೊಂಡರೆ” ಹೊಸ ಕಾನೂನುಗಳು ಯಶಸ್ವಿಯಾಗುತ್ತವೆ ಎಂದು ಹೇಳಿದರು. ಹೊಸದಾಗಿ ಜಾರಿಗೆ ಬಂದ ಕಾನೂನುಗಳು ಕ್ರಿಮಿನಲ್ ನ್ಯಾಯದ ಬಗ್ಗೆ ಭಾರತದ ಕಾನೂನು ಚೌಕಟ್ಟನ್ನು ಹೊಸ ಯುಗಕ್ಕೆ ಪರಿವರ್ತಿಸಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್ ಹೇಳಿದರು. ಸಂತ್ರಸ್ತರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಅಪರಾಧಗಳ ತನಿಖೆ ಮತ್ತು ಕಾನೂನು ಕ್ರಮವನ್ನು ಸಮರ್ಥವಾಗಿ ಕೈಗೊಳ್ಳಲು ಹೆಚ್ಚು ಅಗತ್ಯವಾದ ಸುಧಾರಣೆಗಳನ್ನು ಪರಿಚಯಿಸಲಾಗಿದೆ ಎಂದು ಅವರು ಹೇಳಿದರು. “ಸಂಸತ್ತು ಈ ಕಾನೂನುಗಳನ್ನು ಜಾರಿಗೆ ತರುವುದು ಭಾರತವು ಬದಲಾಗುತ್ತಿದೆ ಮತ್ತು ಚಲಿಸುತ್ತಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಮತ್ತು ಪ್ರಸ್ತುತ ಸವಾಲುಗಳನ್ನು ಎದುರಿಸಲು ಹೊಸ ಕಾನೂನು…
ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಏಪ್ರಿಲ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.
ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ 19 ಮತ್ತು 21 ರಂದು ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮತ್ತು ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಏಪ್ರಿಲ್ 19 ರಿಂದ 21 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇಂಡೋನೇಷ್ಯಾದ ದಕ್ಷಿಣ ಸುಲಾವೆಸಿಯ ಎತ್ತರದ ಪ್ರದೇಶಗಳಲ್ಲಿ, ಟೊರಾಜಾ ಜನರು ಜೀವನ ಮತ್ತು ಸಾವಿನ ನಡುವಿನ ಗಡಿಯನ್ನು ಮೀರುವ ವಿಶಿಷ್ಟ ಮತ್ತು ಪ್ರಾಚೀನ ಅಂತ್ಯಕ್ರಿಯೆಯ ಆಚರಣೆಯನ್ನು ಆಚರಿಸುತ್ತಾರೆ. ಮಾನೆನೆ, ಅಥವಾ “ಶವಗಳನ್ನು ಸ್ವಚ್ಛಗೊಳಿಸುವ ಸಮಾರಂಭ” ಎಂದು ಕರೆಯಲ್ಪಡುವ ಈ ಆಚರಣೆಯು ಮೃತ ಸಂಬಂಧಿಕರ ಶವಗಳನ್ನು ಹೊರತೆಗೆಯುವುದನ್ನು ಒಳಗೊಂಡಿರುತ್ತದೆ, ಹೆಚ್ಚಾಗಿ ಅವರ ಸಮಾಧಿಯ ವರ್ಷಗಳ ನಂತರ, ಅವರು ಇನ್ನೂ ಜೀವಂತವಾಗಿರುವಂತೆ ಅವರನ್ನು ಗೌರವಿಸಲು ಮತ್ತು ನೋಡಿಕೊಳ್ಳಲು ಆಗಿದೆ. ಈ ಆಚರಣೆಯು ಸತ್ತವರ ಬಗ್ಗೆ ಇರುವಷ್ಟೇ ಜೀವಂತರ ಬಗ್ಗೆಯೂ ಇದೆ. ಇದು ಕುಟುಂಬಗಳು ಒಗ್ಗೂಡಲು, ತಮ್ಮ ಪೂರ್ವಜರನ್ನು ನೆನಪಿಸಿಕೊಳ್ಳಲು ಮತ್ತು ಕಥೆಗಳು ಮತ್ತು ಸಂಪ್ರದಾಯಗಳನ್ನು ಯುವ ಪೀಳಿಗೆಗೆ ರವಾನಿಸಲು ಸಮಯವನ್ನು ಒದಗಿಸುತ್ತದೆ. ಮಾನೆನೆ ಸಮಾರಂಭವು ಟೋರಾಜನ ಸಾಂಸ್ಕೃತಿಕ ಗುರುತನ್ನು ಮತ್ತು ಅವರ ಪೂರ್ವಜರೊಂದಿಗಿನ ಅವರ ಆಳವಾದ ಸಂಬಂಧದ ಸ್ಪಷ್ಟ ಅಭಿವ್ಯಕ್ತಿಯಾಗಿದೆ.







