Author: kannadanewsnow07

ಬೆಂಗಳೂರು: 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. ರಾಜ್ಯದಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಬೇಕಾಗಿರುವುದರಿಂದ ಪ್ರಸ್ತುತ ಸರ್ಕಾರವು ಭತ್ತ ನೋಂದಣಿ ಅವಧಿಯನ್ನು ಮಾ.31 ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಸರ್ಕಾರವು ರಾಜ್ಯದಲ್ಲಿ 2.5 ಲಕ್ಷ ಮೆ. ಟನ್ ಗುರಿ ತಲುಪುವವರೆಗೆ ನೋಂದಣಿ ಕೈಗೊಳ್ಳಲು ಸೂಚಿಸಿದ್ದರಿಂದ, ರೈತರು ತಕ್ಷಣವೇ ನೋಂದಣಿ ಮತ್ತು ಖರೀದಿಯ ಉಪಯೋಗವನ್ನು ಸದುಪಯೋಗಪಡಿಸಿಕೊಳ್ಳಬೇಕು. ನೋಂದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಖರೀದಿ ಏಜೆನ್ಸಿಯಾದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಹಾಗೂ ಆಯಾ ತಾಲ್ಲೂಕಿನ ಖರೀದಿ ಕೇಂದ್ರಗಳ ಖರೀದಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು:12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಹಾಗಾದ್ರೇ ಯಾರು ಎಲ್ಲಿಂದ ಎಲ್ಲಿಗೆ? ವರ್ಗಾವಣೆಯಾಗಿದ್ದಾರೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ. ಹುದ್ದೆಗಾಗಿ ಕಾಯುತ್ತಿರುವ ಸತ್ಯವತಿ ಜಿ., ಐಎಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಹಣಕಾಸು ಇಲಾಖೆಯ ಸರ್ಕಾರದ ಕಾರ್ಯದರ್ಶಿ (ವೆಚ್ಚ) ಡಾ.ರೇಜು ಎಂ.ಟಿ., ಐಎಎಸ್ (ಕೆ.ಎನ್: 2005) ಅವರನ್ನು ಕರ್ನಾಟಕ ರಾಜ್ಯ ಹಣಕಾಸು ನಿಗಮದ (ಕೆಎಸ್ಎಫ್ಸಿ) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಸಮಕಾಲೀನ ಉಸ್ತುವಾರಿಯಲ್ಲಿ ಇರಿಸಲಾಗಿದೆ. ತುಳಸಿ ಮದ್ದಿನೇನಿ, ಐಎಎಸ್ (ಕೆಎನ್: 2005) ಸರ್ಕಾರದ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸಲ್ಮಾ ಕೆ.ಫಾಹಿಮ್, ಐಎಎಸ್ (ಕೆಎನ್: 2006)…

Read More

ಬೆಂಗಳೂರು : ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಎನ್ನುವುದು ಗೊತ್ತು, ಸಿನಿಮಾದ ಯಶಸ್ಸನ್ನು ಸಹಿಸದವರು ಈ ಕೆಲಸ ಮಾಡಿದ್ದಾರೆ. ನಾವು ಕೇವಲ ಊಟಕ್ಕ ಹೋಗಿದ್ದು ಮಾತ್ರ, ಇದನ್ನು ಇಲ್ಲಿಗೆ ನಿಲ್ಲಿಸಿ. ಇಲ್ಲವಾದಲ್ಲಿ ನಾವು ಕಾನೂನು ಪ್ರಕಾರ ಹೋರಾಟ ಮಾಡ್ತೇವೆ ಅಂತ ಹೇಳಿದರು. ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಯಶಸ್ಸು ಕಾಣುವುದು ಮುಖ್ಯ, ಇದರ ಯಾರಿದ್ದಾರೆ ಎನ್ನುವುದು ಮುಖ್ಯ, ಆದರೆ ನಾನು ಹೇಳುವುದಿಲ್ಲ ಅಂತ ಅವರು ಇದೇ ವೇಳೆ ಹೇಳಿದರು. ಇನ್ನೂ ದರ್ಶನ್‌ ಅವರ ಪ್ರಕಾರ ವಕೀಲರಾದ ನಾರಾಯಣ ಸ್ವಾಮಿ ಅವರು ಮಾತನಾಡಿ, ದರ್ಶನ್‌ ವಿರುದ್ದ ವ್ಯವಸ್ಥಿತಿ ಪಿತ್ತೂರಿ ನಡೆಯುತ್ತಿದೆ. ಬೆಂಗಳೂರಿನ ಹಲವು ಕಡೆಗಳಲ್ಲಿ ಸಮಯ ಮೀರಿ ಹೋಟೆಲ್‌ಗಳು ನಡೆಯುತ್ತಿದ್ದಾವೆ. ಹಾಗಾದ್ರೇ ಅವರ ವಿರುದ್ದ ನೋಟಿಸ್‌ ಕೊಡಲು ಸಾಧ್ಯನಾ? ಅಂತ ಹೇಳಿದರು. ಇದು ಕಾನೂನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ವೈಯುಕ್ತಿಕವಾಗಿ ಯಾರು ಎಲ್ಲಿ ಬೇಕಾದ್ರು ಊಟ ಮಾಡಬಹುದು ಅಂತ ತಿಳಿಸಿದರು.

Read More

ಶಿವಮೊಗ್ಗ: ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಮುಖ್ಯಮಂತ್ರಿ Siddaramaiah ಅವರು ಉದ್ಘಾಟಿಸಿ ಮಾತನಾಡಿದರು. ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ *ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ. ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ. ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು, ಯುವತಿಯರು 130 ಕೋಟಿ 28 ಲಕ್ಷ ಉಚಿತ ಟಿಕೇಟ್ ಪಡೆದು ಪ್ರಯಾಣ ಮಾಡಿದ್ದಾರೆ.…

Read More

ನವದೆಹಲಿ: ಡಿಸೆಂಬರ್ 2023 ತಿಂಗಳಲ್ಲಿ, ಚಿಲ್ಲರೆ ಹಣದುಬ್ಬರ ದರದಲ್ಲಿ ಹೆಚ್ಚಳ ಕಂಡುಬಂದಿದೆ. ಚಿಲ್ಲರೆ ಹಣದುಬ್ಬರವು ಡಿಸೆಂಬರ್ನಲ್ಲಿ ಶೇಕಡಾ 5.69 ರಷ್ಟಿದ್ದು, ನವೆಂಬರ್ನಲ್ಲಿ ಶೇಕಡಾ 5.55 ರಷ್ಟಿತ್ತು. ಅಕ್ಟೋಬರ್ನಲ್ಲಿ ಚಿಲ್ಲರೆ ಹಣದುಬ್ಬರ ಶೇ.4.87ರಷ್ಟಿತ್ತು. ಸೊಪ್ಪುಗಳು ಮತ್ತು ತರಕಾರಿಗಳು ಸೇರಿದಂತೆ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಚಿಲ್ಲರೆ ಹಣದುಬ್ಬರ ಹೆಚ್ಚಾಗಿದೆ. ಅಂಕಿಅಂಶಗಳ ಸಚಿವಾಲಯವು ಚಿಲ್ಲರೆ ಹಣದುಬ್ಬರದ ದತ್ತಾಂಶವನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ ನಲ್ಲಿ ಆಹಾರ ಹಣದುಬ್ಬರ ಹೆಚ್ಚಾಗಿದೆ. ಆಹಾರ ಹಣದುಬ್ಬರವು ನವೆಂಬರ್ನಲ್ಲಿ ಶೇಕಡಾ 8.70 ರಿಂದ ಶೇಕಡಾ 9.53 ಕ್ಕೆ ಇಳಿದಿದೆ. ಚಿಲ್ಲರೆ ಹಣದುಬ್ಬರವು ಶೇಕಡಾ 4 ರಷ್ಟಿದ್ದು, ಎರಡೂ ಕಡೆ ಶೇಕಡಾ 2 ರಷ್ಟು ಅಂತರದೊಂದಿಗೆ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಕೆಲಸ ಮಾಡಿದೆ. ಕಳೆದ ವಾರ ಘೋಷಿಸಿದ ಹಣಕಾಸು ನೀತಿಯಲ್ಲಿ, ಆರ್ಬಿಐ 2023-24ರಲ್ಲಿ ಸಿಪಿಐ ಹಣದುಬ್ಬರವನ್ನು ಶೇಕಡಾ 5.4 ಕ್ಕೆ ಅಂದಾಜಿಸಿದೆ, ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 5.6 ಮತ್ತು ಕೊನೆಯ ತ್ರೈಮಾಸಿಕದಲ್ಲಿ ಶೇಕಡಾ 5.2 ರಷ್ಟಿದೆ.

Read More

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೋಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅನುಮತಿ ಇಲ್ಲದೆ ದ್ರೋಣ್ ಕ್ಯಾಮರಾ ಬಳಕೆ ಮಾಡಿಕೊಂಡು ವಿಡಿಯೊ ಸೆರೆಹಿಡಿಯಲಾಗಿದ್ದು ಇದರ ಬಗ್ಗೆ ಸೂಕ್ತ ಕ್ರಮಕ್ಕಾಗಿ ಸ್ಥಳೀಯರೊಬ್ಬರು . ಅರಣ್ಯ ಸಚಿವರಿಗೆ ದೂರು ಸಲ್ಲಿಕೆ ಮಾಡಿದ್ದಾರೆ‌ ವಿಶ್ವೇಶ್ವರ ಭಟ್ ಎಂಬ ಖಾಸಗಿ ವ್ಯಕ್ತಿಯೊಬ್ಬರು ಸುಮಾರು ಸಂಜೆ 6.00 ಗಂಟೆ ಸಮಯದಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ್ದು, ವಲಯ ಅರಣ್ಯ ಪ್ರದೇಶದಲ್ಲಿ ಡ್ರೋನ್ ಬಳಕೆ ನಿಷೇದವಿದ್ದರು, ಖಾಸಗಿ ವ್ಯಕ್ತಿಯೊಬ್ಬರು ನಿಯಮವನ್ನು ಮೀರಿ ಡೋನ್ ಕ್ಯಾಮರಾ ವನ್ನೂ ಹಾರಿಸಿ ಪ್ರತಿದಿನ ಬೆಟ್ಟಕ್ಕೆ ಬರುವ ಕಾಡನೆಯೊಂದನ್ನು ಬೆದರಿಸುವ ಘಟನೆಯೂ ನಡೆದಿರುತ್ತದೆ, ಸದರಿ ಡ್ರೋನ್ ಕ್ಯಾಮರಾದಲ್ಲಿ ಸೆರೆ ಹಿಡಿದಿರುವ ಚಿತ್ರೀಕರಣವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿ ಕೊಂಡಿದ್ದು ಸಾರ್ವಜನಿಕರು ಹಾಗೂ ವನ್ಯ ಜೀವಿ ಪ್ರಿಯರು ಸದರಿ ಚಿತ್ರೀಕರಣವನ್ನು ವಿರೋದಿಸಿ ಪೋಸ್ಟ್ ಗಳನ್ನಿ ಮಾಡಿರುತ್ತಾರೆ ಹಾಗೂ ಖಾಸಗಿ ವ್ಯಕ್ತಿಯ ಅನಧಿಕೃತ ಪ್ರವೇಶವನ್ನು ತಡೆಯದೆ ವಲಯ ಅರಣ್ಯಾಧಿಕಾರಿಗಳು ಕರ್ತವ್ಯ ಲೋಪ ಎಸಗಿರುತ್ತಾರೆ  ಅತಿಕ್ರಮ ಪ್ರವೇಶ ಮಾಡಿರುವ ವಿಶ್ವೇಶ್ವರ ಭಟ್ ಹಾಗೂ…

Read More

ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah ) ಚಾಲನೆ ನೀಡಿದರು. ಇಂದಿನಿಂದಲೇ ಅರ್ಹ ಅಭ್ಯರ್ಥಿಗಳ ಖಾತೆಗೆ ಯುವನಿಧಿ ಯೋಜನೆಯ ( Yuvanidhi Scheme ) ಹಣ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಕಳೆದ ಡಿಸೆಂಬರ್​ 26ರಂದು ಸಿಎಂ ‘ಯುವನಿಧಿ’ ಯೋಜನೆಯ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಿದ್ದರು. ಪದವಿ, ಡಿಪ್ಲೊಮಾ ಶಿಕ್ಷಣ ಪಡೆದು 6 ತಿಂಗಳಿನಿಂದ ಉದ್ಯೋಗ ದೊರೆಯದಿದ್ದರೆ, ಗರಿಷ್ಠ 2 ವರ್ಷದವರೆಗೆ ಪದವೀಧರರಿಗೆ 3 ಸಾವಿರ ರೂಪಾಯಿ ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ. ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್,…

Read More

Karnataka Government Jobs ಬೆಂಗಳೂರು: ರಾಜ್ಯ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 5,158 ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಆಹ್ವಾನ ಮಾಡಲಾಗುವುದು ಎನ್ನಲಾಗಿದೆ. ಈ ಬಗ್ಗೆ ಕೆಇಎ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ. ಅದರಲ್ಲಿ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ (ಎ) ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, (ಬಿ) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ. (ಸಿ)ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ (ಡಿ) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, (ಇ) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಎಫ್) ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ ಅಂತ ತಿಳಿಸಿದೆ. ಅದರ ವಿವರ ಈ ಕೆಳಕಂಡತಿದೆ. ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ:…

Read More

ಬೆಂಗಳೂರು: ಗುದ್ದೋಡು [ಹಿಟ್ ಅಂಡ್ ರನ್] ಪ್ರಕರಣದಲ್ಲಿ 10 ವರ್ಷ ಜೈಲು ಹಾಗೂ 7 ಲಕ್ಷ ರೂಪಾಯಿ ದಂಡ ವಿಧಿಸುವ ಕೇಂದ್ರ ಸರ್ಕಾರದ ರಸ್ತೆ ಸಂಚಾರಿ ಕಾನೂನು ತಿದ್ದುಪಡಿ ವಿರೋಧಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘ ಜನವರಿ 17 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಲಾರಿ ಮುಷ್ಕರದಿಂದ ರಾಜ್ಯದಲ್ಲಿ ಅಗತ್ಯವಸ್ತುಗಳ ಸಾಗಾಟದ ಮೇಲೆ ಪರಿಣಾಮವಾಗುವ ಸಾಧ್ಯತೆ ಇದೆ. ಬೆಂಗಳೂರು ಲಾರಿ ಮಾಲೀಕರ ಸಂಘದ ಅಧ್ಯಕ್ಷ ನವೀನ್ ರೆಡ್ಡಿ, ತಮಿಳುನಾಡು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸೆಲ್ಲಾ ರಾಜಮಣಿ, ತಮಿಳುನಾಡು ಸಂಘದ ಡಿ. ಅಕ್ಬರ್, ಕೇರಳ ಸಂಘದ ಶಾಜು, ಆಂಧ್ರಪ್ರದೇಶದ ಬಾಷಾ ಬಾನ್ ಮತ್ತು ಮಹಾರಾಷ್ಟ್ರ ಸಂಘದ ಅಧ್ಯಕ್ಷ ಶಂಕರ ದಾದಾ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಲಾರಿ ಮಾಲೀಕರ ವಿಚಾರದಲ್ಲಿ ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದು, ಹಿಟ್ ಅಂಡ್ ರನ್ ಪ್ರಕರಣವನ್ನು ತನಗೆ ಬೇಕಾದಂತೆ ತಿರುಚುತ್ತಿದೆ. ಅಪಘಾತ ಎಂಬ ಶಬ್ಧವನ್ನು ಬೇರೆ ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಯಾರೋ ನಿರ್ಲ್ಷಕ್ಯದಿಂದ…

Read More

ಬೆಂಗಳೂರು : ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ನೇಮಕಾತಿ ಮರು ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಜನವರಿ 23ರಂದು ಪರೀಕ್ಷೆ ನಡೆಯಲಿದೆ. ಪಿಎಸ್‌ಐ ಮರು ಪರೀಕ್ಷೆ ವೇಳಾಪಟ್ಟಿ ದಿನಾಂಕ ಸಮಯ ವಿಷಯ ಅಂಕಗಳು 23-01-2024 (ಮಂಗಳವಾರ) ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 12-00 ರವರೆಗೆ ಪೇಪರ್-1 50 ಅಂಕಗಳು 23-01-2024 (ಮಂಗಳವಾರ) ಮಧ್ಯಾಹ್ನ 01-00 ರಿಂದ 02-30 ರವರೆಗೆ. ಪೇಪರ್-2 150 ಅಂಕಗಳು ಪರೀಕ್ಷೆ ಕೇಂದ್ರದಲ್ಲಿ ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳನ್ನ ಪ್ರಾಧಿಕಾರ ಹೊರಡಿಸಿದ್ದು, ಅವುಗಳ ಕಟ್ಟುನಿಟ್ಟು ಪಾಲನೆಗೆ ಸೂಚಿಸಿದೆ. ಅದ್ರಂತೆ, ಪರೀಕ್ಷೆ ಸಂಬಂಧಿಸಿದ ವೇಳಾಪಟ್ಟಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳು ಈ ಕೆಳಗಿನಂತಿವೆ. • ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ. • ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್ / ಪಾಸ್‌ಪೋರ್ಟ್ /…

Read More