Author: kannadanewsnow07

ಶಿವಮೊಗ್ಗ: ನಕಲಿ ಜಿ.ಎಸ್.ಟಿ ಬಿಲ್ ಸೃಷ್ಠಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ್ದ ಜಾಲವನ್ನು ಭೇದಿಸಿರುವ ಮೈಸೂರಿನ ಕೇಂದ್ರೀಯ ತೆರಿಗೆ ಜಿ.ಎಸ್.ಟಿ ಕಚೇರಿಯ ಸಿಬ್ಬಂದಿ ಮೈಸೂರಿನ ರಬ್ ಟ್ರೇಡರ್ ನ ಮಾಲೀಕರನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿರುತ್ತಾರೆ. ಹೊರ ರಾಜ್ಯಗಳಿಂದ ಮೈಸೂರಿಗೆ ತರಿಸುವ ಸರಕು ಹಾಗೂ ಮೈಸೂರಿನಿಂದ ಹೊರರಾಜ್ಯಗಳಿಗೆ ಕಳುಹಿಸುವ ಸರಕುಗಳ ಸಂಬಮಧ ನಕಲಿ ಬಿಲ್‍ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ 14 ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ವಂಚಿಸಿದ್ದು, ಯಾವುದೇ ಅಧಿಕೃತ ರಶೀದಿ ಇಲ್ಲದೇ ನಕಲಿ ಘಟಕಗಳಿಗೆ ಸರಕು ಸಾಗಾಣೆ ಮಾಡಿರುವಂತೆ ತೋರಿಸ ಕೋಟ್ಯಂತರ ರೂ.ಗಳ ವಹಿವಾಟು ಕೇವಲ ಕಾಗದ ಮೇಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರಿನ ಕೇಂದ್ರೀಯ ಜಿಎಸ್‍ಟಿ ಆಯುಕ್ತಾಲಯದ ಅಧಿಕಾರಿಗಳು ವಂಚನೆಯ ಜಾಲವನ್ನು ಭೇದಿಸಿದೆ ಎಂದು ಉಪ ಆಯುಕ್ತರು, ಸೆಂಟ್ರಲ್ ಟ್ಯಾಕ್ಸ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದು,01-04-2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರು ಹಳೆ ಪಿಂಚಣಿ ಯೋಜನೆಗೆ ಪರಿಗಣಿಸಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾಧ್ಯಮ ಹೇಳಿಕೆ ನೀಡಿರುವ ಪ್ರಕಾರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಹಾಗೂ ದಿನಾಂಕ:10-01-2024ರಂದು ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಎಲ್.ಕೆ. ಅತೀಕ್, ಭಾ.ಆ.ಸೇ. ರವರನ್ನು ಭೇಟಿ ಮಾಡಿ 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ NPS ನೌಕರರನ್ನು OPS ವ್ಯಾಪ್ತಿಗೆ ಪರಿಗಣಿಸಲು ಕೋರಲಾಗಿ ಮಾನ್ಯರು ಸಕಾರಾತ್ಮಕವಾಗಿ ಸ್ಪಂದಿಸಿ, ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು. ಅದರಂತೆ ದಿ.11-1-2024 ರಂದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಹುದಿನಗಳ ಬೇಡಿಕೆಯಾದ ದಿನಾಂಕ:31-03-2006 ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿ ದಿನಾಂಕ:01-04-2006ರ ನಂತರ…

Read More

ಬೆಂಗಳೂರು: ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ ಎಂದರು. ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಎಂದರು. ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು. ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ : ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿ ಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ…

Read More

ಶಿವಮೊಗ್ಗ: 6 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌ ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌ ಮಾಡಿರುವ ಘಟನೆ ಸಾಗರ ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ. ಭಾರತದಲ್ಲಿ ಈ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ ಸಾಗರ ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯ ಶೀಕ್ಷಕರಾಗಿದ್ದ ಸಂತೋಷ್‌ ಕಾಂಚನ್‌ ಅವರು ಕುಂದಾಪುರದ ವಾರಾಹಿ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆ ಆವರಣದಲ್ಲಿ ಅವರಿಗಾಗಿ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.ಈ ವೇಳೇ ಅವರಿಗೆ , ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಅಂದ ಹಾಗೇ ಶಿವಮೊಗ್ಗ ‌ಜಿಲ್ಲೆ, ಹೊಸನಗರ ತಾಲೂಕು ವಳೂರು ಗ್ರಾಮ. ಬಹುತೇಕ ಕುಣಬಿ ಎಂಬ ಕಾನುವಾಸಿ ಸಮುದಾಯವಿರುವ ವಿರಳ ಮನೆಗಳ ಊರು ಆಗಿದ್ದು…

Read More

ಬೆಂಗಳೂರು:ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ನಾವು ಸತ್ಯ ಹೇಳಿ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು. ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರು ಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ. ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಬೇಕು. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯಲು ಸಾಧ್ಯವೇ? ನಮ್ಮವರೇ ವಿರೋಧ ಪಕ್ಷಗಳ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು. ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ…

Read More

ನವದೆಹಲಿ: ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದ ಅತ್ಯಂತ ವಿಲಕ್ಷಣ ಮತ್ತು ವಿಚಿತ್ರ ಘಟನೆಯಲ್ಲಿ, ಬೀದಿ ಗೂಳಿಯೊಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್ಬಿಐ) ಶಹಗಂಜ್ ಶಾಖೆಗೆ ಪ್ರವೇಶಿಸಿದೆ. . ಸದರ್ ಬಜಾರ್ ಪ್ರದೇಶದಲ್ಲಿರುವ ಬ್ಯಾಂಕಿನ ಮುಖ್ಯ ಶಾಖೆಯಲ್ಲಿ ಈ ಘಟನೆ ನಡೆದಿದ್ದು, ಸಿಬ್ಬಂದಿ, ಗ್ರಾಹಕರು ಮತ್ತು ಇತರರಲ್ಲಿ ಸಾಕಷ್ಟು ಭಯವಾಗಿದೆ ಎನ್ನಲಾಗಿದೆ. ಕೆಲವು ಮಂದಿ ನೆಟ್ಟಿಗರು ಹೊರಗೆ ಸೆಕೆ ಇದ್ದ ಕಾರಣಕ್ಕೆ ಗೂಳಿ ಬ್ಯಾಂಕ್‌ ಒಳಗೆ ಬಂದಿದೆ ಅಂತ ಹೇಳಿದ್ದಾರೆ.  ಈ ತಮಾಷೆಯ ಕ್ಷಣವನ್ನು ಸೆರೆಹಿಡಿಯುವ ವೀಡಿಯೊದಲ್ಲಿ ಗೂಳಿ ಬ್ಯಾಂಕಿನ ಆವರಣದ ನಡುವೆ ಶಾಂತವಾಗಿ ನಿಂತಿರುವುದನ್ನು ಕಾಣಬಹುದಾಗಿದೆ , ಘಟನೆಯನ್ನು ಸೆರೆ ಹಿಡಿದಿರುವ ವ್ಯಕ್ತಿಯ ಧ್ವನಿಯು ಗ್ರಾಹಕರಿಗೆ ತಮ್ಮ ಅಂತರವನ್ನು ಕಾಪಾಡಿಕೊಳ್ಳಲು ಸೂಚನೆ ನೀಡುವುದನ್ನು ಕೇಳಬಹುದಾಗಿದೆ. https://twitter.com/OpenInterestLiv/status/1745055796898246694

Read More

ನವದೆಹಲಿ: ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ನಂತರ ಭಾರತೀಯ ಟೆಲಿಕಾಂ ಸೇವಾ ಪೂರೈಕೆದಾರರು ಸುಂಕವನ್ನು ಗಮನಾರ್ಹವಾಗಿ 20% ಹೆಚ್ಚಿಸುವ ಸಾಧ್ಯತೆಯಿದೆ ಎಂದು ಬ್ಯಾಂಕ್ ಆಫ್ ಅಮೆರಿಕ ಸೆಕ್ಯುರಿಟೀಸ್ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. 2 ವರ್ಷಗಳಿಗಿಂತ ಹೆಚ್ಚು ಸಮಯದ ನಂತರ (ಕೊನೆಯ ಪ್ರಮುಖ ಏರಿಕೆ: ಡಿಸೆಂಬರ್ -21), ಸಿವೈ 24 ನಲ್ಲಿ ಸಿ 20% + ಸುಂಕ ಹೆಚ್ಚಳವನ್ನು ನಾವು ನಿರೀಕ್ಷಿಸುತ್ತೇವೆ. ಇದು ಸಾರ್ವತ್ರಿಕ ಚುನಾವಣೆಯ ನಂತರ ಸಂಭವನೀಯವಾಗಿದೆ ಮತ್ತು ಉದ್ಯಮದ ಆರೋಗ್ಯವನ್ನು ಸುಧಾರಿಸಲು ವಿಶೇಷವಾಗಿ ವೊಡಾಫೋನ್ ಐಡಿಯಾಗೆ ಸಹಾಯ ಮಾಡುತ್ತದೆ  ಎಂದು ಬ್ರೋಕರೇಜ್ ಹೌಸ್ನ ವಿಶ್ಲೇಷಕರು ಹೇಳಿದ್ದಾರೆ.

Read More

ಬೆಂಗಳೂರು: ರಾಜ್ಯಾದ್ಯಂತ ಪ್ರಮುಖ ಖಾಸಗಿ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಅಳವಡಿಸಿಕೊಳ್ಳಲು ದೇವಾಲಯಗಳ ಆಡಳಿತ ಮಂಡಳಿಗಳು ಮುಂದಾಗಿವೆ ಈ ನಿಟ್ಟಿನಲ್ಲಿ ಇಂದಿನಿಂದಲೇ ಜಾರಿಗೆ ಬರಲಿದೆ. ಈ ಬಗ್ಗೆ ಈ ಕುರಿತು ಬುಧವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಕರ್ನಾಟಕ ದೇಗುಲ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಚಾಲಕ ಮೋಹನ್ ಗೌಡ ಬೆಂಗಳೂರಿನ 50 ದೇವಸ್ಥಾನಗಳು ಸೇರಿದಂತೆ ರಾಜ್ಯದಾದ್ಯಂತ 500ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಡ್ರೆಸ್ ಕೋಡ್ ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಅವರು ಮಾತನಾಡಿ ದೇವಾಲಯಗಳಲ್ಲಿ ಗುರುವಾರದಿಂದ ಹಂತಹಂತವಾಗಿ ವಸ್ತ್ರಸಂಹಿತೆಯನ್ನು ಜಾರಿ ಗೊಳಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ದೇವಾಲಯಗಳಲ್ಲೂ ಅನುಷ್ಠಾನಕ್ಕೆ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಮಾಡಲಾಗುವುದುಅಂಥ ತಿಳಿಸಿದರು. ಈ ವಸ್ತ್ರಗಳಿಗೆ ಅವಕಾಶ : ಲಂಗ-ದಾವಣಿ, ಸೀರೆ, ಚೂಡಿದಾರ, ಸಲ್ವಾರ್ – ಕುರ್ತಾ ಪುರುಷರು: ಕುರ್ತಾ, ಧೋತಿ, ಲುಂಗಿ, ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್ಗೆ ಅವಕಾಶ ನೀಡಲಾಗಿದೆ. ಈ ವಸ್ತ್ರಗಳಿಗೆ ಅವಕಾಶವಿಲ್ಲ : ರ್ಟ್, ಮಿಡಿ, ಶಾರ್ಟ್ಸ್,…

Read More

ಬೆಂಗಳೂರು: ಕರ್ನಾಟಕ ಶಿಕ್ಷಣ ಕಾಯ್ದೆ-1983 ರ ಸೆಕ್ಷನ್ 2 ರ ಕ್ಲಾಸ್ (31) ಮತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ.43.ವಿವಿಧ.2001, ದಿನಾಂಕ: 05-05-2003 ಹಾಗೂ ಸರ್ಕಾರದ ಆದೇಶ ಸಂಖ್ಯೆ: ಇಡಿ.09.ವಿವಿಧ.2001, ದಿನಾಂಕ: 16-05-2006 ಪ್ರಕಾರ, ಕರ್ನಾಟಕ ರಾಜ್ಯದಲ್ಲಿ ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್. ಹಾಗೂ ಕೆ.ಎ.ಎಸ್. ಭಾμÁ ಕೋಚಿಂಗ್ ಮತ್ತು ಇನ್ನಿತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ನೀಡುವ ಸಂಸ್ಥೆಗಳು ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಸೌಧ, ಶೇμÁದ್ರಿ ರಸ್ತೆ ಬೆಂಗಳೂರು – 560001 ಇಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ನೋಂದಣಿ ಮಾಡಿಕೊಳ್ಳದೇ ಇರುವ ರಾಜ್ಯದಲ್ಲಿರುವ ಕೋಚಿಂಗ್ ಸೆಂಟರ್‍ಗಳು ಈ ಪ್ರಕಟಣೆಯು ಪ್ರಕಟಗೊಂಡ 15 ದಿನಗಳ ಒಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವುದು. ತಪ್ಪಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ-1983 ರ ಸೆಕ್ಷನ್ 2 ರ ಕ್ಲಾಸ್ (31) ರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಹಾಸ್ಟೆಲ್‌ನಲ್ಲಿ ಓದುತ್ತಲೇ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ನಡೆದಿದೆ. ತುಮಕೂರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಬಾಗೇಪಲ್ಲಿ ಠಾಣೆಯ ಪೊಲೀಸರು ಪೋಕ್ಸೋ ಕೇಸ್ ದಾಖಲು ಮಾಡಿಕೊಂಡು ಪ್ರಕರಣವನ್ನು ಬಾಗೇಪಲ್ಲಿ ಪೊಲೀಸ್‌ ಠಾಣೆಯಿಂದ ತುಮಕೂರು ನಗರ ಪೊಲೀಸ್‌ ಠಾಣೆಗೆ ಪೋಕ್ಸೋ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಸದ್ಯ ತುಮಕೂರಿನ ನಗರ ಪೊಲೀಸ್‌ ಠಾಣೆಯವರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ವ್ಯಕ್ತಿಗಾಗಿ ಬೆನ್ನಟ್ಟಿದ್ದಾರೆ.

Read More