Subscribe to Updates
Get the latest creative news from FooBar about art, design and business.
Author: kannadanewsnow07
ಮಡಿಕೇರಿ: ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು. BJP ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು BJP ಪರಿವಾರದ ಹುನ್ನಾರ. ಕೇಂದ್ರ ಸಚಿವರಾಗಿದ್ದವರೇ ಈ ಮಾತನ್ನು ಬಹಿರಂಗವಾಗಿ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಎಚ್ಚರಿಸಿದರು. RSS ಪರಿವಾರ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ? RSS ಪರಿವಾರ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇವರು ದೇಶಭಕ್ತರಾಗಲು ಸಾಧ್ಯವೇ ಇಲ್ಲ ಎಂದರು. ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲಿ ಸಂವಿಧಾನ ವಿರೋಧಿಗಳ ಬಗ್ಗೆ…
ತೈವಾನ್ ಆಡಳಿತ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಲೈ ಚಿಂಗ್-ಟೆ ಶನಿವಾರ ನಡೆದ ಚುನಾವಣೆಯಲ್ಲಿ ಗೆದ್ದಿದ್ದಾರೆ, ಇದನ್ನು ಚೀನಾ ಯುದ್ಧ ಮತ್ತು ಶಾಂತಿಯ ನಡುವೆ ಆಯ್ಕೆ ಎಂದು ಹೇಳಿದೆ. ತೈವಾನ್ ನ ಪ್ರಮುಖ ವಿರೋಧ ಪಕ್ಷವಾದ ಕ್ಯುಮಿಂಟಾಂಗ್ (ಕೆಎಂಟಿ) ಅಭ್ಯರ್ಥಿ ಹೌ ಯು-ಇಹ್ ಚುನಾವಣೆಯಲ್ಲಿ ಸೋಲನ್ನು ಒಪ್ಪಿಕೊಂಡಿದ್ದಾರೆ. ತೈವಾನ್ ನ ಪ್ರತ್ಯೇಕ ಗುರುತನ್ನು ಪ್ರತಿಪಾದಿಸುವ ಮತ್ತು ಚೀನಾದ ಪ್ರಾದೇಶಿಕ ಹಕ್ಕುಗಳನ್ನು ತಿರಸ್ಕರಿಸುವ ಲೈ ಅವರ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿ, ತೈವಾನ್ ನ ಪ್ರಸ್ತುತ ಚುನಾವಣಾ ವ್ಯವಸ್ಥೆಯಲ್ಲಿ ಅಭೂತಪೂರ್ವವಾದ ಮೂರನೇ ಅವಧಿಗೆ ಪ್ರಯತ್ನಿಸುತ್ತಿದೆ. ಅಧ್ಯಕ್ಷ ಸ್ಥಾನಕ್ಕೆ ಲೈ ಇಬ್ಬರು ವಿರೋಧಿಗಳನ್ನು ಎದುರಿಸುತ್ತಿದ್ದರು – ಕೆಎಂಟಿಯ ಹೌ ಮತ್ತು 2019 ರಲ್ಲಿ ಸ್ಥಾಪನೆಯಾದ ಸಣ್ಣ ತೈವಾನ್ ಪೀಪಲ್ಸ್ ಪಾರ್ಟಿಯ ಮಾಜಿ ತೈಪೆ ಮೇಯರ್ ಕೋ ವೆನ್-ಜೆ ಆಗಿದ್ದಾರೆ. ಮತದಾನಕ್ಕೂ ಮುನ್ನ ದಕ್ಷಿಣ ನಗರ ತೈನಾನ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೈ, ಜನರು ತಮ್ಮ ಮತಗಳನ್ನು ಚಲಾಯಿಸುವಂತೆ ಮನವಿ ಮಾಡಿಕೊಂಡಿದ್ದರು.
ಬೆಂಗಳೂರು: ದಿನಾಂಕ 13-01-2024 ರಿಂದ 17-01-2024 ರವರೆಗೆ CET-2024 ಅಪ್ಲಿಕೇಶನ್ ಲಭ್ಯವಿರುವುದಿಲ್ಲ. ಶಾಲಾ ಶಿಕ್ಷಣ ಇಲಾಖೆಯು ದಿನಾಂಕ 10-01-2024 ರ ಇಮೇಲ್ನಲ್ಲಿ SATS ಡೇಟಾಬೇಸ್ ಅನ್ನು ಹೊಸದಾಗಿ ನಿಗದಿಪಡಿಸಿರುವ ಡೇಟಾಬೇಸ್ಗೆ ಸಂಗ್ರಹಿಸುವ ಕಾರ್ಯ ಚಾಲ್ತಿಯಲ್ಲಿರುವುದರಿಂದ ರಿಂದ ವರೆಗೆ SATS ಡೇಟಾಬೇಸ್ಗಳ ಸರ್ವೀಸ್ಗಳು 13-01-2024 ರಿಂದ 16-01-2024 ಲಭ್ಯವಿರುವುದಿಲ್ಲವೆಂದು ತಿಳಿಸಿರುತ್ತಾರೆ. CET-2024 ಅಪ್ಲಿಕೇಶನ್ SATS ಸಂಖ್ಯೆಯ ಮೂಲಕ ಅಭ್ಯರ್ಥಿಗಳ ಡೇಟಾವನ್ನು ಪರಿಶೀಲಿಸುವುದರಿಂದ, CET-2024 ಅಪ್ಲಿಕೇಶನ್ ದಿನಾಂಕ 13-01-2024 ರಿಂದ 17-01-2024 ರ ವರಗೆ ಅಭ್ಯರ್ಥಿಗಳಿಗೆ ಲಭ್ಯವಿರುವುದಿಲ್ಲ.
ಸಾಮಾನ್ಯವಾಗಿ, ಅಮಾವಾಸ್ಯೆ ದಿನವು ತನ್ನದೇ ಆದ ವಿಶೇಷ ಶಕ್ತಿಯನ್ನು ಹೊಂದಿದೆ ಮತ್ತು ಆ ದಿನ ನಾವು ಅನೇಕ ಕೆಲಸಗಳನ್ನು ಮಾಡಬಹುದು ಮತ್ತು ಅನೇಕ ಪಟ್ಟು ಪ್ರಯೋಜನವನ್ನು ಪಡೆಯಬಹುದು. ಆದ್ದರಿಂದಲೇ ನಮ್ಮ ಪೂರ್ವಜರು ಅಮವಾಸ್ಯೆಯಂದು ಪಿತೃಪೂಜೆಯನ್ನು ನೆರವೆರಿಸುತ್ತಿದ್ದರು ಹಾಗೂ ಹಣದ ಹರಿವು ಇತ್ಯಾದಿಗಳಿಗೆ ಪರಿಹಾರಗಳನ್ನು ಮಾಡುತ್ತಿದ್ದರು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ…
ಬೆಂಗಳೂರು: ಜ.22ರ ಬಳಿಕ ಅಯೋಧ್ಯೆಗೆ ತೆರಳಿ ಶ್ರೀರಾಮಚಂದ್ರನ ದರ್ಶನ ಮಾಡಿಕೊಂಡು ಬರುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಶುಕ್ರವಾರ ಶಿವಮೊಗ್ಗದಲ್ಲಿ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ರಾಮ ಮಂದಿರ ಉದ್ಘಾಟನೆಗೆ ನಮಗೆ ಆಹ್ವಾನ ಬಂದಿಲ್ಲ. ಆದರೂ ಜ.22ರ ಬಳಿಕ ಅಯೋಧ್ಯೆಗೆ ಹೋಗುವುದಾಗಿ ಹೇಳಿದರು. ಇದೇ ವೇಳೆ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿ ಬಿಜೆಪಿ ಮುಖಂಡರು ರಾಜಕೀಯ ಮಾಡಲು ಹೊರಟಿದ್ದಾರೆ. ದೇವರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಿಜೆಪಿಯ ಕ್ರಮವನ್ನು ನಾವು ವಿರೋಧಿ ಸುತ್ತೇವೆಯೇ ಹೊರತು ರಾಮನನ್ನು ಅಲ್ಲ, ನಮ್ಮ ಕಾರ್ಯಕರ್ತರು ದೇವಸ್ಥಾನಗಳಿಗೆ ತೆರಳಿ ಶ್ರೀರಾಮನಿಗೆ ಪೂಜೆ ಸಲ್ಲಿಸುತ್ತಾರೆ ಅಂತಹೇಳಿದರು.
ಬೆಂಗಳೂರು: ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಶುಕ್ರವಾರ ಇಲ್ಲಿ ಒಟ್ಟು ₹ 3,935.52 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನುಮೋದಿಸಲಾದ ಬೃಹತ್ ಹೂಡಿಕೆ ಯೋಜನೆಗಳ ಜೊತೆಗೆ, ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿನ ಹೂಡಿಕೆ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆಗಳಲ್ಲಿ ಡೇಟಾ ಸೆಂಟರ್ ಮೂಲಸೌಕರ್ಯ, ಸೌರಶಕ್ತಿ ಬಿಡಿಭಾಗಗಳ ತಯಾರಿಕೆ, ಡಿಸ್ಟಿಲರಿ, ವಾಹನ ಬಿಡಿಭಾಗ ತಯಾರಿಕಾ ಘಟಕ ಮುಂತಾದವು ಸೇರಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಇಟಿಎಲ್ ಸೆಕ್ಯುರ್ ಸ್ಪೇಸ್ ಲಿಮಿಟೆಡ್ನ ₹ 490.50 ಕೋಟಿ ವೆಚ್ಚದ ಡೇಟಾ ಸೆಂಟರ್ ಮೂಲಸೌಲಭ್ಯ, ಬಳ್ಳಾರಿಯ ಹೂವಿನಹಡಗಲಿ ತಾಲ್ಲೂಕಿನಲ್ಲಿ ಡಿಸ್ಟಿಲರಿ ಸ್ಥಾಪಿಸಲು ಮೈಲಾರ್ ಇನ್ಫ್ರಾ ಪ್ರೈವೇಟ್ ಲಿಮಿಟೆಡ್ನ ₹ 339.84-ಕೋಟಿ ಪ್ರಸ್ತಾವ ಮತ್ತು ರಾಮನಗರ ಜಿಲ್ಲೆಯ ಹಾರೊಹಳ್ಳಿಯಲ್ಲಿ ಸಾಂಗೊ ಇಂಡಿಯಾ ಆಟೊಮೋಟಿವ್ ಪಾರ್ಟ್ಸ್ ಪ್ರೈವೇಟ್ ಲಿಮಿಟೆಡ್ನ ₹ 278.59-ಕೋಟಿ ಹೂಡಿಕೆಯ ಎಕ್ಸಾಸ್ಟ್ ಸಿಸ್ಟಮ್ ತಯಾರಿಕಾ…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರತಿಯೊಬ್ಬರ ಜೀವನದಲ್ಲೂ ಕೂಡ ಶತ್ರುಗಳು ಇದ್ದೇ ಇರುತ್ತಾರೆ, ನಾವು ಮಾಡುವ ಪ್ರತಿಯೊಂದು ಕೆಲಸ ಕಾರ್ಯದಲ್ಲಿ ಶತ್ರುಗಳಿಂದ ನಮಗೆ ಸಾಕಷ್ಟು ರೀತಿಯ ತೊಂದರೆಗಳು ಉಂಟಾಗುತ್ತಿರುತ್ತದೆ ಆದ್ದರಿಂದ ನಮ್ಮ ಜೀವನದಲ್ಲಿರುವ ಶತ್ರುಗಳನ್ನು ದೂರ ಮಾಡಿಕೊಳ್ಳುವುದಕ್ಕೆ ಈ ಶಕ್ತಿಶಾಲಿಯಾದ ತಂತ್ರವನ್ನು ಮಾಡುವುದು ತುಂಬಾ ಉತ್ತಮ. ಈ ತಂತ್ರವನ್ನ ನಾವು ಮಾಡಿದ್ದೆ ಆದರೆ ನಮ್ಮ ಜೀವನದಲ್ಲಿ ಇರುವ ಶತ್ರುಗಳು ಸಂಪೂರ್ಣ ನಾಶವಾಗುತ್ತಾರೆ. ಉದ್ಯೋಗ ಮಾಡುವ ಸ್ಥಳದಲ್ಲಿ ಆಗಿರಬಹುದು, ವ್ಯಾಪಾರ ಮಾಡುವ ಸ್ಥಳದಲ್ಲಿ ಆಗಿರಬಹುದು ಅಕ್ಕ ಪಕ್ಕದವರಾಗಿದ್ದರು ನಾವು ಅಭಿವೃದ್ಧಿ ಹೊಂದುತ್ತಿರಿ ಎಂದರೆ ನಮಗೆ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗಳನ್ನ ಮಾಡುತ್ತಾ ಇರುತ್ತಾರೆ. ಹಣಕಾಸಿನ ವಿಷಯವಾಗಿರಬಹುದು ಯಾವುದೇ ಆಗಿದ್ದರೂ ಕೂಡ ನಮಗೆ ಒಂದಲ್ಲ ಒಂದು ರೀತಿಯಲ್ಲಿ ತೊಂದರೆಯನ್ನು ನೀಡುತ್ತಾರೆ. ಈ ಶತ್ರು ಸ್ತಂಭನ ಮಾಡುವುದಕ್ಕೆ ನಾವು ಮೊದಲು ಅವರ ಹೆಸರನ್ನ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಎಲ್ಲಾ ರೀತಿಯಲ್ಲೂ ಕೂಡ ಈ…
ಬೆಂಗಳೂರು: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ ರಾಜ್ಯಾದ್ಯಂತ ಈಗಾಗಲೇ 67,951 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು 7,453 ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ 2023ರ ಎಲ್ಲ ಪದವೀಧರರಿಗೆ ಹಾಗೂ ಡಿಪ್ಲೋಮಾ ಪದವೀಧರರಿಗೆ ತಲುಪಿಸಿ. ಉತ್ತಮ ನಾಳೆಗಳನ್ನು ಕಟ್ಟಿಕೊಳ್ಳಲು ಯುವಜನತೆಗೆ ನೆರವಾಗಲಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯುವನಿಧಿ ಯೋಜನೆ ಇಂದು ಜಾರಿಗೊಂಡಿದೆ, 2023ರಲ್ಲಿ ಪದವಿ ಹಾಗೂ ಡಿಪ್ಲೊಮಾ ಪಾಸಾದ ನೊಂದಾಯಿತ ನಿರುದ್ಯೋಗಿ ಯುವಜನರ ಖಾತೆಗೆ ಮಾಸಿಕ ನಿರುದ್ಯೋಗ ಭತ್ಯೆ ಶುಕ್ರವಾರದಿಂದಲೇ ಜಮೆಯಾಗಲಿದೆ. ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡ ತಗ್ಗಿಸಬೇಕೆಂಬ ಸದುದ್ದೇಶದೊಂದಿಗೆ ಜಾರಿಗೆ ಕೊಟ್ಟಿರುವ ಈ ಯೋಜನೆಯ ಸಂಪೂರ್ಣ ಸದುಪಯೋಗ ಪಡೆಯಿರಿ ಯುವನಿಧಿ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು ₹ 3,000, ಡಿಪ್ಲೋಮಾ ಪದವೀಧರರಿಗೆ ₹ 1,500 ನೀಡಲಾಗುತ್ತದೆ. ಪದವೀಧರರಿಗೆ ಉದ್ಯೋಗ ಸಿಗುವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. https://twitter.com/KarnatakaVarthe/status/1745762576947155195
ಪ್ರಯಾಗ್ ರಾಜ್: ಪತಿ-ಪತ್ನಿಗೆ ಸಂಬಂಧಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಚ್ಛೇದನ ಪಡೆಯದಿದ್ದರೆ, ಮೊದಲ ಹೆಂಡತಿಗೆ ಮಾತ್ರ ಪಿಂಚಣಿ ಪ್ರಯೋಜನಗಳನ್ನು ಪಡೆಯುವ ಹಕ್ಕು ಇರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಜೀವನಾಂಶದಲ್ಲಿ ರಾಜಿ ಮಾಡಿಕೊಳ್ಳುವ ಮೂಲಕ, ಪತಿಯ ಮರಣದ ನಂತರ ಪತ್ನಿ ನಿವೃತ್ತಿ ಪ್ರಯೋಜನಗಳ ಹಕ್ಕನ್ನು ತ್ಯಜಿಸಿದ್ದಾರೆ ಎಂದು ಹೇಳಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ರಜನಿಕಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೌರಭ್ ಶ್ಯಾಮ್ ಶಂಶೇರಿ ಈ ಆದೇಶ ನೀಡಿದ್ದಾರೆ. ತನ್ನ ಪತಿ ಭೋಜ್ರಾಜ್ ಜೂನ್ 30, 2021 ರಂದು ನಿವೃತ್ತರಾದರು ಮತ್ತು ಅದೇ ವರ್ಷದ ಅಕ್ಟೋಬರ್ 2 ರಂದು ನಿಧನರಾದರು ಎಂದು ಅರ್ಜಿದಾರರು ಹೇಳಿದ್ದಾರೆ. ಇದೇ ವೇಳೆ ಅವರು ಅವರು ಮೈನ್ಪುರಿಯ ಸುಲ್ತಾನ್ಗಂಜ್ನ ಔರಂಗಾಬಾದ್ನ ಮಹಾರಾಜ ತೇಜ್ ಸಿಂಗ್ ಜೂನಿಯರ್ ಹೈಸ್ಕೂಲ್ನಲ್ಲಿ ಸಹಾಯಕ ಶಿಕ್ಷಕರಾಗಿದ್ದರು. ಭೋಜರಾಜ್ ಅವರ ಮೊದಲ ಪತ್ನಿ ಬಹಳ ಹಿಂದೆಯೇ ಮನೆ ತೊರೆದಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ. ಅವಳು ಅವನೊಂದಿಗೆ ಹೆಂಡತಿಯಾಗಿ ದೀರ್ಘಕಾಲ…













