Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು : ರಾಜ್ಯ ಸರ್ಕಾರದಿಂದ ʻಗೃಹಲಕ್ಷ್ಮಿʼ ಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ತಿಂಗಳು ನೀಡುತ್ತಿರುವ ಹಣವನ್ನು ಚಿಟ್ಫಂಡ್ಗೆ ವಿನಿಯೋಗ ಮಾಡಿಸುವುದಕ್ಕೆ ಮುಂದಾಗಲಿದೆ ಎನ್ನಲಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯಿಂದ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಚಿಟ್ಫಂಡ್ ಉನ್ನತೀಕರಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಸರ್ಕಾರ ನೀಡುತ್ತಿರುವ ʻಗೃಹಲಕ್ಷ್ಮಿʼ ದುಡ್ಡನ್ನು ಮಹಿಳೆಯರು ಚಿಟ್ಫಂಡ್ನಲ್ಲಿ (Chit Fund) ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್ನ್ನು ತರಲು ಚಿಂತನೆ ಮಾಡಿದೆ. ಎಲ್ಲವೂ ಅಂದುಕೊಂಡ ರೀತಿ ಆದಲ್ಲಿ ಏಪ್ರಿಲ್ನಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎನ್ನಲಾಗುತ್ತಿದೆ. ಕಡಿಮೆ ಆದಾಯದ ಗುಂಪುಗಳು, ಸಂಬಳ ಪಡೆಯುವ ಮತ್ತು ಸ್ವಯಂ ಉದ್ಯೋಗಿ ವ್ಯಕ್ತಿಗಳಲ್ಲಿ ಜನಪ್ರಿಯವಾಗಿರುವ ಚಿಟ್ ಫಂಡ್ ಸದಸ್ಯರು ನಿರ್ದಿಷ್ಟ ಅವಧಿಗೆ ಪೂರ್ವನಿರ್ಧರಿತ ಮೊತ್ತವನ್ನು ಠೇವಣಿ ಮಾಡಲು ಒಪ್ಪುವುದನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ. ಜೀವ ವಿಮಾ ನಿಗಮ (ಎಲ್ಐಸಿ) ಯಂತೆಯೇ, ಸರ್ಕಾರವು ‘ಉಳಿತಾಯ ಸಖಿಗಳನ್ನು’ ಏಜೆಂಟರಾಗಿ ನೇಮಿಸುತ್ತದೆ, ಅವರು ಚಿಟ್ ಫಂಡ್ ವ್ಯವಹಾರಕ್ಕಾಗಿ ಪ್ರತಿ ದಾಖಲಾತಿಗೆ ಪ್ರೋತ್ಸಾಹಕಗಳನ್ನು ಪಡೆಯುತ್ತಾರೆ ಎನ್ನಲಾಗಿದೆ.
ಕೆಎನ್ಎನ್ಸಿನಿಮಾಡೆಸ್ಕ್:ಸ್ಟಾರ್ ಯಶ್ ಹುಟ್ಟುಹಬ್ಬ ಹಿನ್ನೆಲೆ ‘ಟಾಕ್ಸಿಕ್’ ಸಿನಿಮಾದ ಅಪ್ಡೇಟ್ಸ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ಇಂದು38ನೇ ವಸಂತಕ್ಕೆ ಕಾಲಿಡಲಿದ್ದಾರೆ ಕೆಜಿಎಫ್ ಸ್ಟಾರ್. ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಜನ್ಮದಿನವನ್ನು ವಿಶೇಷವಾಗಿ ಆಚರಿಸಲು ಸಜ್ಜಾಗಿದ್ದಾರೆ. ಆದರೆ ನಟ ಯಶ್ ಅವರು ಕೆಲ ದಿನಗಳ ಹಿಂದೆ ಇಂದು ತಮ್ಮೊಟ್ಟಿಗೆ ಇರುವುದಿಲ್ಲ ಅಂತ ಹೇಳಿಕೊಂಡಿದ್ದಾರೆ. ಜನವರಿ 8.. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ.. ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ.. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು.. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ.. ನಿಮ್ಮ ಪ್ರೀತಿಯ ಯಶ್ ಈ ಮೇಲ್ಕಂಡ ರೀತಿಯಲ್ಲಿ ಅವರು ಮಾಹಿತಿ…
ಮಹಾರಾಷ್ಟ್ರ(ಸಂಗಮನೇರ್) : ಬಿಜೆಪಿ ಪಕ್ಷ ದೇಶದಲ್ಲಿ ವಸಾಹತುಶಾಹಿ ನೀತಿ ಪಾಲಿಸುತ್ತಿದ್ದು, ಪ್ರಜಾಪ್ರಭುತ್ವದ ತಳಹದಿಗೆ ಅಪಾಯಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಜಾತಂತ್ರ ವಿರೋಧಿ ಹಾಗೂ ಸಂವಿಧಾನವಿರೋಧಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದರೆ, ದೇಶ ಅಪಾಯಕ್ಕೆ ಸಿಲುಕಲಿದೆ. ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಸರ್ವಾಧಿಕಾರಿ ಮನೋಭಾವವಿರುವಂತಹ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷವನ್ನು ಉಳಿಸಿದರೆ, ದೇಶಕ್ಕೆ ಸಂವಿಧಾನಕ್ಕೆ ಧಕ್ಕೆ ಬರುತ್ತದೆ. ಆದ್ದರಿಂದ ಭಾರತದ ಸಂವಿಧಾನದ ಆಶಯದ ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದರು. ಕರ್ನಾಟಕದಲ್ಲಿ ಬಿಜೆಪಿಯ ಭ್ರಷ್ಟಾಚಾರ ಹಾಗೂ ವಚನಭ್ರಷ್ಟತೆ: ಬಿಜೆಪಿಯ ಜನವಿರೋಧಿ ನೀತಿಯನ್ನು ಕರ್ನಾಟಕದ ಮನೆಮನೆಗೂ ಕಾಂಗ್ರೆಸ್ ತಲುಪಿಸಿದ್ದರಿಂದ, ಬಿಜೆಪಿಯನ್ನು ರಾಜ್ಯದ ಅಧಿಕಾರದಿಂದ ಕಿತ್ತೊಗೆಯಲು ಸಾಧ್ಯವಾಯಿತು. ಕರ್ನಾಟಕದಲ್ಲಿ 40% ಕಮೀಷನ್ ನ ಭ್ರಷ್ಟಾಚಾರ ನಡೆಯಲು ಬಿಜೆಪಿ…
Bangladesh Election, Sheikh Hasina ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಗೋಪಾಲ್ ಗಂಜ್ -3 ಕ್ಷೇತ್ರದಿಂದ ಭಾನುವಾರ ಗೆಲುವು ಸಾಧಿಸಿ ಮರು ಆಯ್ಕೆಯಾಗಿದ್ದಾರೆ. ದೇಶದಲ್ಲಿ ಹಿಂಸಾಚಾರದ ಘಟನೆಗಳು ಮತ್ತು ಖಲೀದಾ ಜಿಯಾ ನೇತೃತ್ವದ ಪ್ರತಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಅವಾಮಿ ಲೀಗ್ನ ಮುಖ್ಯ ಗೆಲುವು ಕಂಡು ಕೊಂಡಿದೆ ಎನ್ನಲಾಗಿದೆ. ಬಾಂಗ್ಲಾದೇಶದ ಶೇಖ್ ಹಸೀನಾ 5ನೇ ಬಾರಿಗೆ ಮರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಮತ್ತೆ ಬಾಂಗ್ಲಾ ಪ್ರಧಾನಿಯಾಗಲಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರತಿಪಕ್ಷಗಳ ಬಹಿಷ್ಕಾರದ ನಂತರ ಐದನೇ ಬಾರಿಗೆ ಮರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ, ಅವರ ಪಕ್ಷವು ಕನಿಷ್ಠ ಅರ್ಧದಷ್ಟು ಸ್ಥಾನಗಳನ್ನು ಪಡೆದುಕೊಂಡಿದೆ ಮತ್ತು ಎಣಿಕೆ ನಡೆಯುತ್ತಿದೆ ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಡಳಿತಾರೂಢ ಅವಾಮಿ ಲೀಗ್ ಪಕ್ಷವು ಶೇಕಡಾ 50 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದು ಚುನಾವಣಾ ಆಯೋಗದ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವಿಶೇಷವೆಂದರೆ, ಬಾಂಗ್ಲಾದೇಶದ ಒಟ್ಟು 119.1 ಮಿಲಿಯನ್ ಮತದಾರರಲ್ಲಿ,…
ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ:22.01.2024 ರಂದು ಅಯೋಧ್ಯೆಯಲ್ಲಿ ನೂತನ ಶ್ರೀ ರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನ ಪ್ರಯುಕ್ತ ವಿಶೇಷ ಪೂಜೆ/ ಪ್ರಾರ್ಥನೆ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ:22.01.2024 ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿರುವುದರಿಂದ, ದೇಶದ/ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ:22.01.2024 ರಂದು ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ಪ್ರಾರ್ಥನೆ/ ಮಂಗಳಾರತಿಯನ್ನು ನಡೆಸಲು ಸೂಚಿಸಿದೆ ಅಂತ ಉಲ್ಲೇಖ ಮಾಡಿದೆ. .
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಇಂದು 329 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 1181 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ( Karnataka Health and Family Welfare Department ) ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ RTPC ಮೂಲಕ 3367 ಹಾಗೂ RAT ಮೂಲಕ 452 ಸೇರಿದೆತ 3819 ಮಂದಿಯನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ( Covid19 Test ) ಒಳಪಡಿಸಲಾಗಿದೆ ಅಂತ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 283 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 1181ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಕೋವಿಡ್ ಸೋಂಕಿನಿಂದ ಒಂದು ಸಾವು ಅಂತ ತಿಳಿಸಿದೆ.
ಮಾಲೆ(ಮಾಲ್ಡೀವ್ಸ್): ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾರತದ ವಿರುದ್ಧ ದ್ವೇಷದ ಭಾಷೆಯನ್ನು ಬಳಸುತ್ತಿರುವುದನ್ನು ಮಾಲ್ಡೀವ್ಸ್ ನ ಮಾಜಿ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಖಂಡಿಸಿದ್ದಾರೆ. ಮಾಲ್ಡೀವ್ಸ್ ಸರ್ಕಾರಿ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ಭಾರತದ ವಿರುದ್ಧ ದ್ವೇಷದ ಭಾಷೆಯನ್ನು ಬಳಸುವುದನ್ನು ನಾನು ಖಂಡಿಸುತ್ತೇನೆ ಎಂದು ಸೋಲಿಹ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ತಮ್ಮ ಅಧಿಕೃತ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತವು ಯಾವಾಗಲೂ ಮಾಲ್ಡೀವ್ಸ್ಗೆ ಉತ್ತಮ ಸ್ನೇಹಿತನಾಗಿದೆ ಮತ್ತು ಅಂತಹ ಕಠೋರ ಹೇಳಿಕೆಗಳು ನಮ್ಮ ಎರಡೂ ದೇಶಗಳ ನಡುವಿನ ಹಳೆಯ ಸ್ನೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರಲು ನಾವು ಅವಕಾಶ ನೀಡಬಾರದು” ಎಂದು ಅವರು ಒತ್ತಿ ಹೇಳಿದ್ದಾರೆ.
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಗುಡ್ಡೆತೋಟದ ಬಳಿ ನಡೆದಿದೆ. ಜಯಪುರದಿಂದ ಗುಡ್ಡೆತೋಟದ ಮೂಲಕ ಹೊರನಾಡಿಗೆ ಹೋಗುವಾಗ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ ಘಟನೆಗೆ ಸರಿಯಾದ ಕಾರಣ ಇನ್ನೂ ಇಳಿದು ಬಂದಿಲ್ಲ. ಮೈಸೂರು ಮೂಲದ ಬಸ್ಸಿನಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿ ಬಂದಿದ್ದ ಮಾಲಾಧಾರಿಗಳು, ಶೃಂಗೇರಿ ಶಾರದಾಂಬೆ ದರ್ಶನ ಪಡೆದು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದರು ಅಂತ ತಿಳಿದು ಬಂದಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು: ಲೈಂಗಿಕ ಕಿರುಕುಳ, ಮಾನಭಂಗ ಯತ್ನ ಆರೋಪದ ಹಿನ್ನಲೆಯಲ್ಲಿ ಮುಡಾ ಆಯುಕ್ತರಾದ ಮನ್ಸೂರು ಆಲಿ ವುರಯದ್ದ ಭಾರತೀಯ ದಂಡ ಸಂಹಿತೆ ಸೆಕ್ಷನ್ 354ರ (ಮಹಿಳೆಯ ಮೇಲೆ ಹಲ್ಲೆ ಮತ್ತು ಮಾನಭಂಗ ಯತ್ನ) ಹಾಗೂ 354 ಎ(ಲೈಂಗಿಕ ಕಿರುಕುಳ) ಅಡಿ ಉರ್ವಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎನ್ನಲಾಗಿದೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ರು ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ್ದಾರೆ ಅಂಥ ಆರೋಪಿಸಿದ್ದಾರೆ. ಈ ಕುರಿತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು ಉರ್ವ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ಐದು ಫಲಾನುಭವಿ ಆಧಾರಿತ ಯೋಜನೆಗಳಡಿ ವಿವಿಧ ಸೌಲಭ್ಯ ಪಡೆಯಲು ಜಿಲ್ಲೆಯ ವಿಕಲಚೇತನರಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ತಿಳಿಸಿದ್ದಾರೆ. ಅರ್ಜಿಗಳನ್ನು ಸೇವಾಸಿಂಧು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನವಾಗಿದೆ. *ಯೋಜನೆಗಳು ಮತ್ತು ಬೇಕಾದ ದಾಖಲೆಗಳು:* ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ಯೋಜನೆ: ಯುಡಿಐಡಿ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ/ಕಾಲೇಜು ದೃಢೀಕರಣ ಪತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ, ಭಾವಚಿತ್ರ, ರೂ.20 ಬಾಂಡ್ನಲ್ಲಿ ನೀರಪೇಕ್ಷಣಾ ಪ್ರಮಾಣ ಪತ್ರ. ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ: ಯುಡಿಐಡಿ ಕಾರ್ಡ್, ಚಾಲ್ತಿಯಲ್ಲಿರುವ ಎಲ್.ಎಲ್.ಆರ್./ಡಿ.ಎಲ್ ಪ್ರಮಾಣ ಪತ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ…













