Author: kannadanewsnow07

ವಸಂತ್‌ ಬಿ ಈಶ್ವರಗೆರೆ ಬೆಂಗಳೂರು: 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಪಿ.ಎಸ್.ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಯ ಕ್ರಮವಾಗಿ (One time measure) ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡುವ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಗೊಳ್ಳಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಗರಿಷ್ಠ 3 ವರ್ಷಗಳವರೆಗೆ ಸಡಿಲಿಸಲು ಪ್ರಸ್ತಾಪಿಸಿದೆ. ವರ್ಗ ಈಗಿರುವ ವಯೋಮಿತಿ ವಿಸ್ತರಿತ ವಯೋಮಿತಿ ವರ್ಗ ಈಗಿರುವ ವಯೋಮಿತಿ ವಿಸ್ತರಿತ ವಯೋಮಿತಿ ಸಾಮಾನ್ಯ 35 ವರ್ಷ 38 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ 38 ವರ್ಷ 41 ವರ್ಷ ಪ.ಪಂ. ಪ್ರವರ್ಗ-1 40 ವರ್ಷ 43…

Read More

ಬೆಂಗಳೂರು: ಜನವರಿ 17 ರಿಂದ ರಾಜ್ಯದಾದ್ಯಂತ ಟ್ರಕ್ ಚಾಲಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘ ಶನಿವಾರ ಪ್ರಕಟಿಸಿದೆ. ಹೊಸ ಭಾರತೀಯ ನ್ಯಾಯ್ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳನ್ನು ವಿರೋಧಿಸಿ ಮುಷ್ಕರ ನಡೆಸಲಾಗುತ್ತಿದೆ ಎನ್ನಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಫೆಡರೇಶನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ಸಿ.ನವೀನ್ ರೆಡ್ಡಿ, ಈ ಅಶಿಸ್ತಿನ ಕಾನೂನಿನ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ನಮ್ಮನ್ನು ಕರೆದಿದ್ದರೂ, ಅಧಿಕಾರಿಗಳು ಲಿಖಿತವಾಗಿ ಏನನ್ನೂ ನೀಡಿಲ್ಲ. ಇದು ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವಾಗಿದೆ ಮತ್ತು ಅಂತಹ ಆತುರದ ನಿರ್ಧಾರಕ್ಕೆ ಬರುವ ಮೊದಲು ಅವರು ನಮ್ಮೊಂದಿಗೆ ಸಮಾಲೋಚಿಸಲಿಲ್ಲ ಎಂದು ಅವರು ಹೇಳಿದರು. ರಾಜ್ಯದ ಎಲ್ಲಾ ಟ್ರಕ್ ಚಾಲಕರು ಮುಷ್ಕರವನ್ನು ಬೆಂಬಲಿಸುತ್ತಾರೆ ಮತ್ತು ತಮ್ಮ ವಾಹನಗಳನ್ನು ರಸ್ತೆಯಿಂದ ದೂರವಿಡುತ್ತಾರೆ ಎಂದು ರೆಡ್ಡಿ ಹೇಳಿದರು. ನಾವು ಈಗಾಗಲೇ ರಾಜ್ಯದ ಎಲ್ಲಾ ಟ್ರಕ್ ಚಾಲಕರಿಗೆ ಮಾಹಿತಿ ನೀಡಿದ್ದೇವೆ ಮತ್ತು ನಾವು…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ʻಗೃಹಲಕ್ಷ್ಮಿʼ ಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ತಿಂಗಳು ನೀಡುತ್ತಿರುವ ಹಣವನ್ನು ಚಿಟ್‌ಫಂಡ್‌ಗೆ ವಿನಿಯೋಗ ಮಾಡಿಸುವುದಕ್ಕೆ ಮುಂದಾಗಲಿದೆ ಎನ್ನಲಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯಿಂದ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಚಿಟ್‌ಫಂಡ್ ಉನ್ನತೀಕರಣಕ್ಕೆ ಪ್ಲ್ಯಾನ್‌ ಮಾಡಲಾಗಿದ್ದು, ಸರ್ಕಾರ ನೀಡುತ್ತಿರುವ ʻಗೃಹಲಕ್ಷ್ಮಿʼ ದುಡ್ಡನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ (Chit Fund) ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ನ್ನು ತರಲು ಚಿಂತನೆ ಮಾಡಿದೆ. ಎಲ್ಲವೂ ಅಂದುಕೊಂಡ ರೀತಿ ಆದಲ್ಲಿ ಏಪ್ರಿಲ್‌ನಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎನ್ನಲಾಗುತ್ತಿದೆ. ಕಡಿಮೆ ಆದಾಯದ ಗುಂಪುಗಳು, ಸಂಬಳ ಪಡೆಯುವ ಮತ್ತು ಸ್ವಯಂ ಉದ್ಯೋಗಿ ವ್ಯಕ್ತಿಗಳಲ್ಲಿ ಜನಪ್ರಿಯವಾಗಿರುವ ಚಿಟ್ ಫಂಡ್ ಸದಸ್ಯರು ನಿರ್ದಿಷ್ಟ ಅವಧಿಗೆ ಪೂರ್ವನಿರ್ಧರಿತ ಮೊತ್ತವನ್ನು ಠೇವಣಿ ಮಾಡಲು ಒಪ್ಪುವುದನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ. ಜೀವ ವಿಮಾ ನಿಗಮ (ಎಲ್ಐಸಿ) ಯಂತೆಯೇ, ಸರ್ಕಾರವು ‘ಉಳಿತಾಯ ಸಖಿಗಳನ್ನು’ ಏಜೆಂಟರಾಗಿ ನೇಮಿಸುತ್ತದೆ, ಅವರು ಚಿಟ್ ಫಂಡ್ ವ್ಯವಹಾರಕ್ಕಾಗಿ ಪ್ರತಿ ದಾಖಲಾತಿಗೆ ಪ್ರೋತ್ಸಾಹಕಗಳನ್ನು ಪಡೆಯುತ್ತಾರೆ ಎನ್ನಲಾಗಿದೆ.

Read More

ಕೆಎನ್‌ಎನ್‌ಸಿನಿಮಾಡೆಸ್ಕ್‌:ಸ್ಟಾರ್ ಯಶ್ ಹುಟ್ಟುಹಬ್ಬ ಹಿನ್ನೆಲೆ ‘ಟಾಕ್ಸಿಕ್’ ಸಿನಿಮಾದ ಅಪ್​ಡೇಟ್ಸ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ಇಂದು38ನೇ ವಸಂತಕ್ಕೆ ಕಾಲಿಡಲಿದ್ದಾರೆ ಕೆಜಿಎಫ್​ ಸ್ಟಾರ್. ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಜನ್ಮದಿನವನ್ನು ವಿಶೇಷವಾಗಿ ಆಚರಿಸಲು ಸಜ್ಜಾಗಿದ್ದಾರೆ. ಆದರೆ ನಟ ಯಶ್‌ ಅವರು ಕೆಲ ದಿನಗಳ ಹಿಂದೆ ಇಂದು ತಮ್ಮೊಟ್ಟಿಗೆ ಇರುವುದಿಲ್ಲ ಅಂತ ಹೇಳಿಕೊಂಡಿದ್ದಾರೆ. ಜನವರಿ 8.. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ.. ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ.. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು.. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ.. ನಿಮ್ಮ ಪ್ರೀತಿಯ ಯಶ್ ಈ ಮೇಲ್ಕಂಡ ರೀತಿಯಲ್ಲಿ ಅವರು ಮಾಹಿತಿ…

Read More

ಮಹಾರಾಷ್ಟ್ರ(ಸಂಗಮನೇರ್) : ಬಿಜೆಪಿ ಪಕ್ಷ ದೇಶದಲ್ಲಿ ವಸಾಹತುಶಾಹಿ ನೀತಿ ಪಾಲಿಸುತ್ತಿದ್ದು, ಪ್ರಜಾಪ್ರಭುತ್ವದ ತಳಹದಿಗೆ ಅಪಾಯಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಜಾತಂತ್ರ ವಿರೋಧಿ ಹಾಗೂ ಸಂವಿಧಾನವಿರೋಧಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದರೆ, ದೇಶ ಅಪಾಯಕ್ಕೆ ಸಿಲುಕಲಿದೆ. ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಸರ್ವಾಧಿಕಾರಿ ಮನೋಭಾವವಿರುವಂತಹ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷವನ್ನು ಉಳಿಸಿದರೆ, ದೇಶಕ್ಕೆ ಸಂವಿಧಾನಕ್ಕೆ ಧಕ್ಕೆ ಬರುತ್ತದೆ. ಆದ್ದರಿಂದ ಭಾರತದ ಸಂವಿಧಾನದ ಆಶಯದ ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದರು. ಕರ್ನಾಟಕದಲ್ಲಿ ಬಿಜೆಪಿಯ ಭ್ರಷ್ಟಾಚಾರ ಹಾಗೂ ವಚನಭ್ರಷ್ಟತೆ: ಬಿಜೆಪಿಯ ಜನವಿರೋಧಿ ನೀತಿಯನ್ನು ಕರ್ನಾಟಕದ ಮನೆಮನೆಗೂ ಕಾಂಗ್ರೆಸ್ ತಲುಪಿಸಿದ್ದರಿಂದ, ಬಿಜೆಪಿಯನ್ನು ರಾಜ್ಯದ ಅಧಿಕಾರದಿಂದ ಕಿತ್ತೊಗೆಯಲು ಸಾಧ್ಯವಾಯಿತು. ಕರ್ನಾಟಕದಲ್ಲಿ 40% ಕಮೀಷನ್ ನ ಭ್ರಷ್ಟಾಚಾರ ನಡೆಯಲು ಬಿಜೆಪಿ…

Read More

Bangladesh Election, Sheikh Hasina ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಗೋಪಾಲ್ ಗಂಜ್ -3 ಕ್ಷೇತ್ರದಿಂದ ಭಾನುವಾರ ಗೆಲುವು ಸಾಧಿಸಿ ಮರು ಆಯ್ಕೆಯಾಗಿದ್ದಾರೆ. ದೇಶದಲ್ಲಿ ಹಿಂಸಾಚಾರದ ಘಟನೆಗಳು ಮತ್ತು ಖಲೀದಾ ಜಿಯಾ ನೇತೃತ್ವದ ಪ್ರತಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಅವಾಮಿ ಲೀಗ್ನ ಮುಖ್ಯ ಗೆಲುವು ಕಂಡು ಕೊಂಡಿದೆ ಎನ್ನಲಾಗಿದೆ. ಬಾಂಗ್ಲಾದೇಶದ ಶೇಖ್ ಹಸೀನಾ 5ನೇ ಬಾರಿಗೆ ಮರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಮತ್ತೆ ಬಾಂಗ್ಲಾ ಪ್ರಧಾನಿಯಾಗಲಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರತಿಪಕ್ಷಗಳ ಬಹಿಷ್ಕಾರದ ನಂತರ ಐದನೇ ಬಾರಿಗೆ ಮರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ, ಅವರ ಪಕ್ಷವು ಕನಿಷ್ಠ ಅರ್ಧದಷ್ಟು ಸ್ಥಾನಗಳನ್ನು ಪಡೆದುಕೊಂಡಿದೆ ಮತ್ತು ಎಣಿಕೆ ನಡೆಯುತ್ತಿದೆ ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಡಳಿತಾರೂಢ ಅವಾಮಿ ಲೀಗ್ ಪಕ್ಷವು ಶೇಕಡಾ 50 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದು ಚುನಾವಣಾ ಆಯೋಗದ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವಿಶೇಷವೆಂದರೆ, ಬಾಂಗ್ಲಾದೇಶದ ಒಟ್ಟು 119.1 ಮಿಲಿಯನ್ ಮತದಾರರಲ್ಲಿ,…

Read More

ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ:22.01.2024 ರಂದು ಅಯೋಧ್ಯೆಯಲ್ಲಿ ನೂತನ ಶ್ರೀ ರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನ ಪ್ರಯುಕ್ತ ವಿಶೇಷ ಪೂಜೆ/ ಪ್ರಾರ್ಥನೆ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಿದೆ.  ಆದೇಶದಲ್ಲಿ ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ:22.01.2024 ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿರುವುದರಿಂದ, ದೇಶದ/ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ:22.01.2024 ರಂದು ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ಪ್ರಾರ್ಥನೆ/ ಮಂಗಳಾರತಿಯನ್ನು ನಡೆಸಲು ಸೂಚಿಸಿದೆ ಅಂತ ಉಲ್ಲೇಖ ಮಾಡಿದೆ. .

Read More

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಇಂದು 329 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 1181 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ( Karnataka Health and Family Welfare Department ) ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ RTPC ಮೂಲಕ 3367 ಹಾಗೂ RAT ಮೂಲಕ 452 ಸೇರಿದೆತ 3819 ಮಂದಿಯನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ( Covid19 Test ) ಒಳಪಡಿಸಲಾಗಿದೆ ಅಂತ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 283 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 1181ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಕೋವಿಡ್ ಸೋಂಕಿನಿಂದ ಒಂದು ಸಾವು ಅಂತ ತಿಳಿಸಿದೆ.

Read More

ಮಾಲೆ(ಮಾಲ್ಡೀವ್ಸ್): ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾರತದ ವಿರುದ್ಧ ದ್ವೇಷದ ಭಾಷೆಯನ್ನು ಬಳಸುತ್ತಿರುವುದನ್ನು ಮಾಲ್ಡೀವ್ಸ್ ನ ಮಾಜಿ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಖಂಡಿಸಿದ್ದಾರೆ. ಮಾಲ್ಡೀವ್ಸ್ ಸರ್ಕಾರಿ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ಭಾರತದ ವಿರುದ್ಧ ದ್ವೇಷದ ಭಾಷೆಯನ್ನು ಬಳಸುವುದನ್ನು ನಾನು ಖಂಡಿಸುತ್ತೇನೆ  ಎಂದು ಸೋಲಿಹ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ತಮ್ಮ ಅಧಿಕೃತ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತವು ಯಾವಾಗಲೂ ಮಾಲ್ಡೀವ್ಸ್ಗೆ ಉತ್ತಮ ಸ್ನೇಹಿತನಾಗಿದೆ ಮತ್ತು ಅಂತಹ ಕಠೋರ ಹೇಳಿಕೆಗಳು ನಮ್ಮ ಎರಡೂ ದೇಶಗಳ ನಡುವಿನ ಹಳೆಯ ಸ್ನೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರಲು ನಾವು ಅವಕಾಶ ನೀಡಬಾರದು” ಎಂದು ಅವರು ಒತ್ತಿ ಹೇಳಿದ್ದಾರೆ.

Read More

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಗುಡ್ಡೆತೋಟದ ಬಳಿ ನಡೆದಿದೆ. ಜಯಪುರದಿಂದ ಗುಡ್ಡೆತೋಟದ ಮೂಲಕ ಹೊರನಾಡಿಗೆ ಹೋಗುವಾಗ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ ಘಟನೆಗೆ ಸರಿಯಾದ ಕಾರಣ ಇನ್ನೂ ಇಳಿದು ಬಂದಿಲ್ಲ. ಮೈಸೂರು ಮೂಲದ ಬಸ್ಸಿನಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿ ಬಂದಿದ್ದ ಮಾಲಾಧಾರಿಗಳು, ಶೃಂಗೇರಿ‌ ಶಾರದಾಂಬೆ ದರ್ಶನ ಪಡೆದು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದರು ಅಂತ ತಿಳಿದು ಬಂದಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.

Read More