Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಯುಜನರ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಯುವ ನಿಧಿ” ಯೋಜನೆ ಕೇವಲ ನಿರುದ್ಯೋಗಿಗಳಿಗೆ ಹಣ ನೀಡುವುದಷ್ಟೆ ಅಲ್ಲ, ಬದಲಾಗಿ ಅವರಿಗೆ ಉದ್ಯಮಶೀಲತೆ ಕಲ್ಪಿಸಿ ಉದ್ಯೋಗ ನೀಡುವುದು ನಮ್ಮ ಆದ್ಯತೆಯಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳು ಹೆಸರು ನೊಂದಣಿ ಮಾಡಿ ಲಾಭ ಪಡೆಯಬೇಕೆಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದರು. ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ ಅವರು ಕಳೆದ ಡಿ.26ಕ್ಕೆ ಈ ಯೋಜನೆಯಡಿ ನೋಂದಣಿಗೆ ಚಾಲನೆ ನೀಡಿದ್ದು, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳ ವರೆಗೆ ಯಾವುದೇ ಉದ್ಯೋಗ ಪಡೆಯದ, ಸ್ವಯಂ ಉದ್ಯೋಗಿಯಾಗಿರದ, ವ್ಯಾಸಂಗ ಮುಂದುವರಿಸದವರಿಗೆ ಹಾಗೂ ಕನಿಷ್ಠ 6 ವರ್ಷ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದವರಿಗೆ ಕ್ರಮವಾಗಿ 3,000 ರೂ. ಮತ್ತು 1,500 ರೂ. ನಿರುದ್ಯೋಗ…
ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ಥಾಪಿಸಲಾಗುವ ರಾಮನ ವಿಗ್ರಹವು 51 ಇಂಚು ಎತ್ತರ, 1.5 ಟನ್ ತೂಕ ಮತ್ತು ಮಗುವಿನ ಮುಗ್ಧತೆಯನ್ನು ಹೊಂದಿದೆ. ರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಮ್ ಲಲ್ಲಾ ಪ್ರತಿಮೆಯ ವೈಶಿಷ್ಟ್ಯವಾಗಿದೆ ಅಂತ ತಿಳಿಸಿದ್ದಾರೆ. ಜನವರಿ 16 ರಿಂದ ವಿಗ್ರಹದ ಪೂಜೆ ಪ್ರಾರಂಭವಾಗಲಿದ್ದು, ಜನವರಿ 18 ರಂದು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು. ನೀರು, ಹಾಲು ಮತ್ತು ಅಚಮನ್ ವಿಗ್ರಹದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದರು. ಮೂವರು ಶಿಲ್ಪಿಗಳು ಭಗವಾನ್ ಶ್ರೀ ರಾಮನ ವಿಗ್ರಹವನ್ನು ಪ್ರತ್ಯೇಕವಾಗಿ ತಯಾರಿಸಿದ್ದಾರೆ, ಅದರಲ್ಲಿ ಒಂದು ವಿಗ್ರಹವನ್ನು ಆಯ್ಕೆ ಮಾಡಲಾಗಿದೆ ಎಂದು ಚಂಪತ್ ರಾಯ್ ಹೇಳಿದರು. ಇದು 1.5 ಟನ್ ತೂಕ ಮತ್ತು ಪಾದದಿಂದ ಹಣೆಯವರೆಗೆ 51 ಇಂಚು ಉದ್ದವಿದೆ. ಭಗವಾನ್ ಶ್ರೀ ರಾಮನ ವಿಗ್ರಹದ ಉದ್ದ ಮತ್ತು ಅದರ ಸ್ಥಾಪನೆಯ ಎತ್ತರವನ್ನು ಭಾರತದ ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿಗಳ ಸಲಹೆಯ ಮೇರೆಗೆ ವಿನ್ಯಾಸಗೊಳಿಸಲಾಗಿದೆ, ಪ್ರತಿ ವರ್ಷ ಚೈತ್ರ…
ಬೆಂಗಳೂರು : ಕೆ ಎಸ್ ಆರ್ ಟಿ ಸಿ ಯು 2024 ನೇ ವರ್ಷವನ್ನು “ಪ್ರಯಾಣಿಕ ಸ್ನೇಹಿ ವರ್ಷ” ವೆಂದು ಘೋಷಣೆ ಮಾಡಿದೆ. ನಿಗಮವು 2023 ನೇ ವರ್ಷವನ್ನು “ಕಾರ್ಮಿಕ ಕಲ್ಯಾಣ ವರ್ಷ” ಎಂದು ಘೋಷಿಸಿ, ಈ ಕೆಳಕಂಡ ಕಾರ್ಮಿಕಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಈ ಬಗ್ಗೆ ನಿಗಮದ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ರೂ.1 ಕೋಟಿಗಳ On Road/ Off Road ಅಪಘಾತ ವಿಮಾ ಯೋಜನೆ. ಈ ಯೋಜನೆಯಡಿಯಲ್ಲಿ ಈಗಾಗಲೇ 12 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.1 ಕೋಟಿ ವಿಮಾ ಹಣವನ್ನು ನೀಡಲಾಗಿದೆ. ನಿಗಮದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ ಮೊತ್ತವನ್ನು 3 ರಿಂದ 5 ಪಟ್ಟು ಹೆಚ್ಚಳ ಮಾಡಿ, ಹೊಸ ಕೋರ್ಸುಗಳನ್ನು ಸೇರ್ಪಡೆಗೊಳಿಸಿ, ಆನ್ ಲೈನ್ ವ್ಯವಸ್ಥೆಯನ್ನು ಜಾರಿಗೆ ತಂದು “ವಿದ್ಯಾ ಚೇತನ ಯೋಜನೆ’ ಹೆಸರಿನಲ್ಲಿ 3345 ಮಕ್ಕಳಿಗೆ ರೂ.1.67 ಕೋಟಿ ವಿದ್ಯಾರ್ಥಿ ವೇತನವನ್ನು ಪಾವತಿಸಲಾಗಿದೆ. ತನ್ನ ಸಿಬ್ಬಂದಿಗಳ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವ ಸದುದ್ದೇಶದಿಂದ, ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ…
ಢಾಕಾ: ಬಾಂಗ್ಲಾದೇಶದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತಕ್ಕೆ ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಬಾಂಗ್ಲಾದೇಶವು ಭಾರತದಂತಹ ವಿಶ್ವಾಸಾರ್ಹ ಸ್ನೇಹಿತನನ್ನು ಹೊಂದಲು ಅದೃಷ್ಟಶಾಲಿಯಾಗಿದೆ ಎಂದು ಹೇಳಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತಕ್ಕೆ ನೀಡಿದ ಸಂದೇಶದಲ್ಲಿ, ”ನಾವು ತುಂಬಾ ಅದೃಷ್ಟವಂತರು…ಭಾರತ ನಮ್ಮ ವಿಶ್ವಾಸಾರ್ಹ ಸ್ನೇಹಿತ. ನಮ್ಮ ವಿಮೋಚನಾ ಯುದ್ಧದ ಸಮಯದಲ್ಲಿ, ಅವರು ನಮಗೆ ಬೆಂಬಲ ನೀಡಿದರು … 1975 ರ ನಂತರ, ನಾವು ನಮ್ಮ ಇಡೀ ಕುಟುಂಬವನ್ನು ಕಳೆದುಕೊಂಡಾಗ … ಅವರು ನಮಗೆ ಆಶ್ರಯ ನೀಡಿದರು. ಹಾಗಾಗಿ ಭಾರತದ ಜನತೆಗೆ ನಮ್ಮ ಶುಭಾಶಯಗಳು” ಎಂದಿದ್ದಾರೆ. ಪಿಎಂ ಹಸೀನಾ ಅವರು 1975 ರಲ್ಲಿ ತಮ್ಮ ಕುಟುಂಬದ ಹತ್ಯಾಕಾಂಡದ ಭಯಾನಕತೆಯನ್ನು ವಿವರಿಸಿದರು, ಇದರಲ್ಲಿ ಅವರ ಇಡೀ ಕುಟುಂಬವು ಕೊಲ್ಲಲ್ಪಟ್ಟಿತು ಮತ್ತು ಅವರು ವರ್ಷಗಳಿಂದ ಭಾರತದಲ್ಲಿ ದೇಶಭ್ರಷ್ಟರಾಗಿದ್ದರು. ನಂತರ ಅವರು ಬಾಂಗ್ಲಾದೇಶಕ್ಕೆ ಹಿಂದಿರುಗಿದರು ಮತ್ತು ಅವಾಮಿ ಲೀಗ್ ಅನ್ನು ವಹಿಸಿಕೊಂಡರು. ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ, ಹಸೀನಾ…
ಬೆಂಗಳೂರು: ಬಸವನಗುಡಿಯ ಹೆಸರಾಂತ ‘ಅರುಣಾ ಮ್ಯೂಸಿಕಲ್ಸ್’ ಎಂಬ ಸಂಗೀತ ವಾದ್ಯಗಳ ಸಾಮ್ರಾಜ್ಯದ ಅಧಿಪತಿ ಹಾಗೂ ಖ್ಯಾತ ಹಿನ್ನೆಲೆ ಗಾಯಕಿ ಕಸ್ತೂರಿ ಶಂಕರ್ ಅವರ ಪತಿ ಶಂಕರ್ ಅವರು ಇಂದು ನಿಧನರಾಗಿದ್ದಾರೆ. ಸಂಗೀತ ಲೋಕಕ್ಕೆ ಇವರ ಕೊಡುಗೆ ಅಪಾರ. ದಕ್ಷಿಣ ಭಾರತದ ಖ್ಯಾತ ಹಾರ್ಮೋನಿಯಂ ವಾದಕರಾದ ಹಾರ್ಮೋನಿಯಂ ಅರುಣಾಚಲಪ್ಪ ನವರ ಪುತ್ರರೇ ಈ ಶಂಕರ್. ಗಾಯನ ಲೋಕದಲ್ಲಿ ಶಂಕರ್ ಅವರ ಧರ್ಮಪತ್ನಿ ಕಸ್ತೂರಿ ಶಂಕರ್ ಅವರ ಕೊಡುಗೆ ಪ್ರತೀ ಕನ್ನಡಿಗನಿಗೂ ತಿಳಿದಿರುವಂಥದ್ದೇ. ಬಹಳಷ್ಟು ಸಿನಿಮಾಗಳಿಗೆ ಹಿನ್ನೆಲೆ ಗಾಯಕಿಯಾಗಿ ಸೇವೆ ಸಲ್ಲಿಸಿರುವ ಕಸ್ತೂರಿ ಶಂಕರ್ ಅವರು ‘ಕಸ್ತೂರಿ ಶಂಕರ್ ಆರ್ಕೆಸ್ಟ್ರಾ’ ಮೂಲಕ 38 ವರ್ಷಗಳ ಕಾಲ ಕನ್ನಡಿಗರನ್ನ ರಂಜಿಸಿರುವುದು ಕಡಿಮೆ ಸೇವೆಯೇ..?! ಖ್ಯಾತ ಸಂಗೀತ ನಿರ್ದೇಶಕ ಹಾಗೂ ನಟ ಸಾಧು ಕೋಕಿಲ ಇವರ ಗರಡಿಯ ಮತ್ತೊಂದು ರತ್ನ. ಹೀಗೆ ಹತ್ತಾರು ಪ್ರತಿಭೆಗಳನ್ನ ಸಂಗೀತ ಲೋಕಕ್ಕೆ ಕೊಡುಗೆಯಾಗಿ ಕೊಟ್ಟಂತಹ ಹಿರಿಮೆ ಗರಿಮೆ ಈ ಕುಟುಂಬದ್ದು. ಮಡದಿಗೆ ತಕ್ಕ ಪತಿಯಾಗಿ ಬದುಕಿನುದ್ದಕ್ಕೂ ಬಹುದೊಡ್ಡ ಶಕ್ತಿಯಾಗಿ ಬೆನ್ನಿಗೆ ನಿಂತ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆಯಲ್ಲಿ ಧನಲಕ್ಷ್ಮೀಯು ಸ್ಥಿರವಾಗಿ ನಿಲ್ಲಬೇಕೆಂದರೆ ಯಾವುದೇ ಕಾರಣಕ್ಕೂ ಈ ಕೆಲವೊಂದು ತಪ್ಪುಗಳನ್ನ ಮಾಡಬಾರದು. ಹಾಗಾದರೆ ಮನೆಯಲ್ಲಿ ಹಣವನ್ನು ಎಣಿಸುವ ಸಮಯದಲ್ಲಿ ಯಾವ ತಪ್ಪನ್ನೂ ಮಾಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಬೀರುವಿನಲ್ಲಿ ಇರುವ ಹಣವನ್ನು ಅಥವಾ ಹೊರಗಡೆಯಿಂದ ತಂದ ಹಣವನ್ನು ಹಾಸಿಗೆ ಮೇಲೆ ಕುಳಿತುಕೊಂಡು ಎನಿಸುತ್ತಿರುತ್ತೇವೆ, ನೆಲದ ಮೇಲೆ ಕುಳಿತುಕೊಂಡು ಹಣವನ್ನು ಎಣಿಕೆ ಮಾಡುವುದು, ಟೇಬಲ್ ಮೇಲೆ ಕುಳಿತುಕೊಂಡು ಎಣಿಕೆ ಮಾಡುತ್ತಿರುತ್ತೇವೆ, ಆದರೆ ಈ ರೀತಿಯ ತಪ್ಪನ್ನು ಎಂದಿಗೂ ಮಾಡಬಾರದು. ಈ ರೀತಿ ತಪ್ಪನ್ನು ಮಾಡಿದರೆ ಧನಲಕ್ಷ್ಮೀಯು ಮನೆಯಲ್ಲಿ ಸ್ಥಿರವಾಗಿ ವಾಸಿಸುವುದಿಲ್ಲ ಹಾಗೂ ಕೋಪಗೊಳ್ಳುತ್ತಾಳೆ. ಸಾಮಾನ್ಯವಾಗಿ ಹಣವು ಲಕ್ಷ್ಮಿಯ ಪ್ರಧಾನವಾಗಿರುತ್ತದೆ. ಹಣವನ್ನು ಲಕ್ಷ್ಮಿಯ ಸ್ವರೂಪ ಎಂದು ಪೂಜೆ ಮಾಡುವುದರಿಂದ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬಾರದು. ಹಣವನ್ನು ಎಣಿಸುವಾಗ ನೆಲದ ಮೇಲೆ ಒಂದು ಚಾಪೆಯನ್ನು ಹಾಸಿಕೊಂಡು ಅದರ ಮೇಲೆ ಒಂದು…
ಬೆಂಗಳೂರು :ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ. ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು. ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ…
ಗಾಜಾ: ಉತ್ತರ ಗಾಜಾದಲ್ಲಿ ಕಳೆದ 3 ತಿಂಗಳಲ್ಲಿ ನಡೆದ ಯುದ್ಧದಿಂದ ಸುಮಾರು 8,000 ಹಮಾಸ್ ಬಂದೂಕುಧಾರಿಗಳು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಸೇನೆ ಮಾಹಿತಿ ನೀಡಿದೆ. ನೆರೆಯ ಲೆಬನಾನ್ ಮತ್ತು ಮಧ್ಯಪ್ರಾಚ್ಯದ ಇತರ ದೇಶಗಳಿಗೆ ಇಸ್ರೇಲ್-ಹಮಾಸ್ ಯುದ್ಧದ ಸೋರಿಕೆಯನ್ನು ತಡೆಯುವ ಪ್ರಯತ್ನದಲ್ಲಿ US ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ರಾಜತಾಂತ್ರಿಕರು ಈ ಪ್ರದೇಶಕ್ಕೆ ಪ್ರತ್ಯೇಕ ಭೇಟಿಗಳನ್ನು ನೀಡಿದ್ದರಿಂದ ಈ ಬೆಳವಣಿಗೆಯು ಸಂಭವಿಸಿದೆ. ಕದನ ವಿರಾಮಕ್ಕಾಗಿ ಅಂತರರಾಷ್ಟ್ರೀಯ ಒತ್ತಡ ಮತ್ತು ಗಾಜಾಕ್ಕೆ ಮಾನವೀಯ ನೆರವನ್ನು ತಳ್ಳುವ ಮಧ್ಯೆ, ಇಸ್ರೇಲ್ ರಕ್ಷಣಾ ಪಡೆಗಳ (IDF) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಅವರು ಗಾಜಾದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಹಮಾಸ್ನ ಜಾಲವನ್ನು ಕೆಡವಲು ಇದೇ ರೀತಿಯ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಹೇಳಿದರು. https://kannadanewsnow.com/kannada/4-4-magnitude-quake-jolts-japans-noto-region/ https://kannadanewsnow.com/kannada/aditya-l1-went-as-per-plan-focus-now-on-gaganyaan-isro-chief-somanath-after-solar-mission-success-2/ https://kannadanewsnow.com/kannada/4-4-magnitude-quake-jolts-japans-noto-region/ https://kannadanewsnow.com/kannada/aditya-l1-went-as-per-plan-focus-now-on-gaganyaan-isro-chief-somanath-after-solar-mission-success-2/
ಟೋಕಿಯೊ: ಜಪಾನ್ನ ನೋಟೊ ಪೆನಿನ್ಸುಲಾದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ. ಜಪಾನ್ನ ನೋಟೊ ಪೆನಿನ್ಸುಲಾದಲ್ಲಿ ಶನಿವಾರ ರಾತ್ರಿ 11:20ಕ್ಕೆ ಭೂಮೇಲ್ಮೈಯಿಂದ 10 ಕಿಮೀ ಆಳದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಸಂಸ್ಥೆ ಮಾಹಿತಿ ನೀಡಿದೆ. ಭೂಕಂಪದಿಂದಾಗಿ ಇಲ್ಲಿ ಯಾವುದೇ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿಲ್ಲ. https://kannadanewsnow.com/kannada/aditya-l1-went-as-per-plan-focus-now-on-gaganyaan-isro-chief-somanath-after-solar-mission-success/
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ನಡೆದ ಪ್ರಮುಖ ನಿರ್ಧಾರಗಳ ಹೈಲೆಟ್ಸ್ ಪಾಯಿಂಟ್ಸ್ ಇಲ್ಲಿದೆ. 1) ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ – 2023ಕ್ಕೆ ಘಟನೋತ್ತರ ಅನುಮೋದನೆ. 2) ಬಿಬಿಎಂಪಿ ವ್ಯಾಪ್ತಿಯಲ್ಲಿ ರೂ.800 ಕೋಟಿ ಅನುದಾನದಲ್ಲಿ 43 ವೈಟ್ ಟಾಪಿಂಗ್ ಕಾಮಗಾರಿಗಳನ್ನು ಕೈಗೊಳ್ಳುವ ಕ್ರಿಯಾಯೋಜನೆಗೆ ಅನುಮೋದನೆ. 3) 6 ಜಿಲ್ಲೆಗಳಲ್ಲಿ 6 ಬಹುಉತ್ಪನ್ನ ಶೀಥಲ ಗೃಹಗಳನ್ನು ರೂ.65.97 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ. 4) ASCAD ಯೋಜನೆಯಡಿ ರಾಜ್ಯದ ಜಾನುವಾರುಗಳಿಗೆ ಜಂತುನಾಶಕ ಔಷಧಿಗಳನ್ನು ರೂ.31 ಕೋಟಿಗಳ ವೆಚ್ಚದಲ್ಲಿ ವಿತರಿಸುವ ಕಾರ್ಯಕ್ರಮಕ್ಕೆ ನಿರ್ಧಾರ. 5) 16ನೇ ಹಣಕಾಸು ಆಯೋಗಕ್ಕೆ ಜ್ಞಾಪನಾ ಪತ್ರವನ್ನು ತಯಾರಿಸಲು ಮೂವರು ಸದಸ್ಯರನ್ನು ಒಳಗೊಂಡ ತಾಂತ್ರಿಕ ಕೋಶ ರಚನೆಗೆ ನಿರ್ಧಾರ. 6) ಹುಲಿಯುಗುರು, ಆನೆ ದಂತ, ಜಿಂಕೆ ಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡ ಯಾವುದೇ…














