Author: kannadanewsnow07

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ಪ್ರತಾಪ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ಪ್ರತಾಪ್‌ ಅವರಿಗೆ ಫುಡ್‌ ಫಾಯ್ಸನ್ ಆಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ. ಕಳೆದ ಎರಡು ದಿನದ ಹಿಂದೆ ಈ ಘಟನೆ ನಡೆದಿದ್ದು, ಇಂದು ಅವರು ಬಿಗ್‌ ಬಾಸ್ ಮನೆಗೆ ಬರಲಿದ್ದಾರೆ ಎನ್ನಲಾಗಿದೆ. ಆದರೆ ಕೆಲವು ಮಂದಿ ಸಾಮಾಜಿಕ ಬಳಕೆದಾರರು ಪ್ರತಾಪ್‌ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅಂತ ಸುಳ್ಳು ಸುದ್ದಿ ಹರಡಿಸುತ್ತಿದ್ದು, ಇದು ಸತ್ಯಕ್ಕೆ ವಿರುದ್ದವಾಗಿದೆ ಅಂತ ಬಿಗ್‌ ಬಾಸ್‌ ನಡೆಸಿಕೊಡುವವರು ತಿಳಿಸಿದ್ದಾರೆ. ಕೆಲವು ಮಂದಿ ಪ್ರತಾಪ್‌ ಅವರು ವಿಟಮಿನ್‌ ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಬಿಗ್‌ ಬಾಸ್‌ ಮನೆಯಲ್ಲಿ ನಮ್ಮ ಮಗನಿಗೆ ಫುಡ್‌ ಪಾಯ್ಸನ್ ಆಗಿದೆ ಅಂತ ತಿಳಿಸಿದ್ದಾರೆ ಅಂತ ಪ್ರತಾಪ್‌ ತಂದೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸದ್ಯ ಅವರು ಜ್ವರದಿಂದ ಕೂಡ ಬಳಲುತ್ತಿದ್ದಾರೆ ಅಂತ ಹೇಳಿದ್ದಾರೆ. ಪ್ರತಾಪ್‌ ಬಗ್ಗೆ ಕೇಳಿ ಬರುತ್ತಿರುವ ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ಮಾಧ್ಯಮದಿಂದ…

Read More

ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಲಿಫ್ಟ್‌ ಕೈಕೊಟ್ಟ ಕಾರಣ ಬಿಜೆಪಿ ಸಂಸದ ಸೇರಿದಂತೆ ಮೂವರು ಸಿಲುಕಿಕೊಂಡ ಘಟನೆ ನಡೆದಿದೆ. ವಿದ್ಯುತ್‌ ಚಕ್ತಿ ಹೋದ ಸಮಯದಲ್ಲಿ ಜನರೇಟರ್‌ ಸರಿಯಾಗಿ ಆನ್‌ ಆಗದ ಹಿನ್ನಲೆಯಲ್ಲಿ ಲಿಫ್ಟ್ ಕೈಕೊಟ್ಟಿದ್ದಾರೆ ಎನ್ನಲಾಗಿದೆ. ತಮ್ಮ ಬೆಂಬಲಿಗರ ಜೊತೆಗೆ ಉಮೇಶ್‌ ಜಾಧವ್‌ ಅವರು ಲಿಫ್ಟ್ ಒಳಗೆ ಹೋಗಿದ್ದಾರೆ ಈ ವೇಳೆ ವಿದ್ಯುತ್‌ ಕೈಕೊಟ್ಟಿದೆ. ಕೂಡಲೇ ಲಿಫ್ಟ್‌ ಆಪರೇಟರ್‌ಗಳನ್ನು ಕರೆಸಿದರು, ನಂತರ ತಾಂತ್ರಿಕ ವರ್ಗದವರು ಕಾರ್ಯಚರಣೆ ನಡೆಸಿ ಲಿಫ್ಟ್‌ ಒಳಗೆ ಸಿಲುಕಿಕೊಂಡವರನ್ನು ಹೊರಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಲಾಗಿದೆ. ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್‌) ಸಲ್ಲಿಸುವ ಪ್ರತಿ ಅರ್ಜಿಗೆ ನಿಗದಿ ಪಡಿಸಿದ ಪರಿಷ್ಕೃತ ಶುಲ್ಕ ಈ ಕೆಳಗಿನಂತಿದೆ. 11-ಇ ನಕ್ಷೆ, ತತ್ಕಾಲ್ ಪೋಡಿ, ಭೂ ಪರಿವರ್ತನೆ ಪೂರ್ವನಕ್ಷೆ 2 ಎಕರೆವರೆಗೆ 2,500 ರೂ. (ನಗರ), 1,500 ರೂ. (ಗ್ರಾಮೀಣ) 2 ಎಕರೆ ನಂತರ ಪ್ರತಿ ಎಕರೆಗೆ 1,000 ರೂ. (ನಗರ), 400 ರೂ. (ಗ್ರಾಮೀಣ) ಜಮೀನು ಹದ್ದುಬಸ್ತು 2 ಎಕರೆವರೆಗೆ ₹ 2,000 (ನಗರ), ₹ 500 (ಗ್ರಾಮೀಣ) 2 ಎಕರೆ ನಂತರ ಪ್ರತಿ ಎಕರೆಗೆ 400 ರೂ. (ನಗರ), 300 ರೂ. (ಗ್ರಾಮೀಣ)

Read More

ಬೆಂಗಳೂರು: ಬಿಜೆಪಿಯಿಂದ ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನ ಶುರುವಾಗಿದ್ದು, ಈ ಮೂಲಕ ರಾಜ್ಯ ಸರ್ಕಾರದ ವಿರುದ್ದ ಸಮರ ಸಾರಿದ್ದಾರೆ ಬಿಜೆಪಿ ನಾಯಕರುಗಳು. ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಏಕಾಂಗಿ ಪ್ರತಿಭಟನೆ ನಡೆಸಿದರು. ಅವರು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ಮಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಅವರನ್ನು ಪೊಲೀಸರು ತಮ್ಮ ವಶಕ್ಕೆ ತೆಗದುಕೊಂಡ ಘಟನೆ ಕೂಡ ನಡೆಯಿತು. ಶ್ರೀಕಾಂತ್ ಪೂಜಾರಿ ಬಂಧನದ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ. ಇದಲ್ಲದೇ ಚಿಕ್ಕಮಗಳೂರಿನಲ್ಲಿ ಕೂಡ ಠಾಣೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಸಿಟಿ ರವಿಯವರನ್ನು ಕೂಡ ಪೊಲೀಸರು ಮುಂಜಾಗ್ರತ ಕ್ರಮವಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. https://twitter.com/karkalasunil/status/1742761255931433142

Read More

ಬೆಂಗಳೂರು : ಅಲೆಮಾರಿ ಸಮುದಾಯಕ್ಕೆ ಸರ್ಕಾರ 2 ಲಕ್ಷ ಸಾಲ ಸೌಲಭ್ಯ ನೀಡಲಿದ್ದು, ಈ ಬಗ್ಗೆ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಹಾದೇವಪ್ಪ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ ಹೇಳಿರುವ ಹೇಳಿಕೆಯಂತೆ, ‘ಆಧುನಿಕ ಸಂದರ್ಭವು ಬೆಳೆದಂತೆ, ತಮ್ಮ ಬದುಕಲ್ಲಿ ನಿರೀಕ್ಷಿತ ಸುಧಾರಣೆ ಕಾಣದ ಅಲೆಮಾರಿ ಸಮುದಾಯಗಳು ಒಂದಿಲ್ಲೊಂದು ಕಾರಣಕ್ಕೆ ಅಭದ್ರತೆ ಮತ್ತು ಅನಿಶ್ಚಿತತೆಯನ್ನು ಎದುರಿಸುತ್ತವೆ ಅವರಿಗೆ ಘನತೆಯ ಬದುಕನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಅಲೆಮಾರಿಗಳಿಗೆ 2 ಲಕ್ಷದವರೆಗೆ ಉದ್ಯಮಶೀಲತಾ ಸಾಲವನ್ನು ನಮ್ಮ ಸರ್ಕಾರ ಕಲ್ಪಿಸಲಿದೆ’ ಎಂದು ಮಾಹಿತಿ ನೀಡಿದ್ದಾರೆ. https://twitter.com/CMahadevappa/status/1742747265138315751

Read More

ಮೂರು ದಶಕಗಳಷ್ಟು ಹಳೆಯದಾದ ರಾಮ ಮಂದಿರ ಪ್ರಕರಣಕ್ಕೆ ಸಂಬಂಧಿಸಿದ ಹಿಂದೂ ಕಾರ್ಯಕರ್ತನ ಬಂಧನದ ವಿರುದ್ಧ ಕರ್ನಾಟಕದ ತೀವ್ರ ಪ್ರತಿಭಟನೆಯ ಮಧ್ಯೆ, ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ಹಿಂದೂ ವಿರೋಧಿ” ಎಂದು ಟೀಕಿಸಿದೆ. ಈ ನಡುವೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ. ಸಿಎಂ ಸಿದ್ದರಾಮಯ್ಯ ಅವರೇ ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ..? ಅಂತ ಪ್ರಶ್ನೆ ಮಾಡಿದೆ. https://twitter.com/BJP4Karnataka/status/1742375172559212986

Read More

ಬೆಂಗಳೂರು: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ ಭರಿತ ಮಾತುಗಳನ್ನು ಆಡಿಕೊಳ್ಳುತ್ತಿದ್ದಾರೆ. ಈ ಬಾರಿಯ ವಿಧಾನಸಭೆಯಲ್ಲಿ ತಮ್ಮ ತಂದೆಯವರ ಸಾವಿನ ಸಿಂಪತಿಯನ್ನು ಗಿಟ್ಟಿಸಿಕೊಂಡು ಗೆಲುವು ಕಂಡಿರುವ ದರ್ಶನ್ ಪುಟ್ಟಣ್ಣಯ್ಯ ತಮ್ಮ ಶಾಸಕ ಸ್ಥಾನವನ್ನು ಸರಿಯಾಗಿ ನಿಭಾಸುತ್ತಿಲ್ಲ ಎಲ್ಲದಕ್ಕಿಂತ ಹೆಚ್ಚಾಗಿ ಅವರಿಗೆ ಮೇಲುಕೋಟೆ ಕ್ಷೇತ್ರಕ್ಕಿಂತ ಅಮೇರಿಕಾದಲ್ಲಿರುವ ತಮ್ಮ ವ್ಯವಹಾರದ ಮೇಲೆಯೇ ಹೆಚ್ಚು ಪ್ರೀತಿ ಅಂಥ ಹೇಳುತ್ತಿದ್ದಾರೆ. ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೇರಿಕಕ್ಕೆ ತೆರಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಗೂ ಮೊದಲು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಾಟ ಮಾಡಿ ಹುಟ್ಟೂರಲ್ಲೇ ಇರುವುದಾಗಿ ದರ್ಶನ್ ಪುಟ್ಟಣಯ್ಯ ಭರವಸೆ ನೀಡಿದ್ದರು. ಆದಾದ ಬಳಿಕ ಅವರು ಅಮೇರಿಕಾಕ್ಕೆ ಹೋಗಿದ್ದರು, ಬಳಿಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದರು, ಆದಾದ ಬಳಿಕ ಅವರು ತಮ್ಮ ಜನತೆ ಬಳಿಕ ಇನ್ಮುಂದೆಹೀಗೆ ಆಗುವುದಿಲ್ಲ…

Read More

ಚಿಕ್ಕಮಗಳೂರು: ಪೊಲೀಸ್‌ ಠಾಣೆ ಮುಂದೆ ಧರಣಿ ಮಾಡುತ್ತಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ರಾಜ್ಯದಲ್ಲಿ ರಾಮನ ಕರ ಸೇವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಅಂಥ ಆರೋಪಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿಯವರು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿ, ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ನಡುವೆ ಇಂದು ಕೂಡ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ಪೊಲೀಸ್‌ ಠಾಣೆ ಅವರಣದಲ್ಲಿ ನನ್ನ ಕೂಡ ಬಂಧಿಸಿ ಎನ್ನುವ ಫಲಕವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸರು ಸಿಟಿ ರವಿಯವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಸ್ಥಳದಲ್ಲಿ ಕೆಲ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಪೊಲೀಸರು ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.

Read More

ನವದೆಹಲಿ: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಬಡ್ಡಿದರಗಳ ಬಗ್ಗೆ ಯುಎಸ್ ಫೆಡ್ ನಿರ್ಧಾರದ ಅನಿಶ್ಚಿತತೆಯಿಂದಾಗಿ ಬುಲಿಯನ್ ಮಾರುಕಟ್ಟೆ ಪ್ರಕ್ಷುಬ್ಧವಾಗಿರುವ ಹಿನ್ನಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸುಮಾರು 200 ರೂಪಾಯಿ ಏರಿಕೆಯಾಗಿದೆ ಎನ್ನಲಾಗಿದೆ. ಈ ನಡುವೆ ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ 2 ವಾರಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಬೆಳ್ಳಿ ಕೂಡ ಸುಮಾರು 3 ವಾರಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸುಮಾರು 200 ರೂ.ಗಳಷ್ಟು ಏರಿಕೆಯಾಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 62,700 ರೂ. ಬೆಳ್ಳಿ ಕೂಡ 40 ರೂ.ಗಳ ಅಲ್ಪ ಏರಿಕೆಯೊಂದಿಗೆ ವಹಿವಾಟು ನಡೆಸುತ್ತಿದೆ. ಎಂಸಿಎಕ್ಸ್ನಲ್ಲಿ ಬೆಳ್ಳಿಯ ಬೆಲೆ ಪ್ರತಿ ಕೆ.ಜಿ.ಗೆ 72373 ರೂ ಆಗಿದೆ. ಡಾಲರ್ ಸೂಚ್ಯಂಕ ಮತ್ತು ಬಾಂಡ್ ಇಳುವರಿಯಲ್ಲಿನ ಹೆಚ್ಚಳವು ಅಂತರರಾಷ್ಟ್ರೀಯ ಸ್ಪಾಟ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳ ಮೇಲೆ ಒತ್ತಡ ಹೇರುತ್ತಿದೆ. ಕಾಮೆಕ್ಸ್ನಲ್ಲಿ ಚಿನ್ನ 2 ಮತ್ತು…

Read More

ಬೆಂಗಳೂರು: ಎದೆಗೆ ಗುಂಡು ಹೊಡೆದುಕೊಂಡು ವಿದ್ಯಾರ್ಥೀಯೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿಷು ಉತ್ತಪ್ಪ (19) ಎಂದು ಗುರುತಿಸಲಾಗಿದೆ. ಕೊಡಗು ಮೂಲದ  ಮೃತ ವಿಷು ಉತ್ತಪ್ಪ (19) ನ ತಂದೆ ತಮ್ಮಯ್ಯ ರೇಷನ್ ತರಲು ಹೋದಾಗ ಪುತ್ರ ವಿಷು ಉತ್ತಪ್ಪ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಎದೆಗೆ ಶೂಟ್ ಮಾಡಿಕೊಂಡು ತಂದೆಗೆ ಕರೆ ಮಾಡಿ ಇನ್ಮುಂದೆ ತಪ್ಪು ಮಾಡುವುದಿಲ್ಲ ಅಂತ ಹೇಳಿದ್ದಾನೆ ಎನ್ನಲಾಗಿದೆ. ಈ ನಡುವೆ ಕೂಡಲೇ ಮನೆಗೆ ಬಂದ ತಮ್ಮಯ್ಯ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯವೇ ವಿಷು ಉತ್ತಪ್ಪ ಸಾವನ್ನಪ್ಪಿದ್ದಾನೆ ಎನ್ನಲಾಗಿದೆಈ ನಡುವೆ ಘಟನೆ ಸಂಬಂಧ ಮಾಧನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನೂ ಘಟನೆಗೆ ಕಾರಣ ವಿಷು ಉತ್ತಪ್ಪ ಸರಿಯಾಗಿ ಓದುತಿಲ್ಲ ಎನ್ನಲಾಗಿದ್ದು, ಇದಕ್ಕೆ ಸಂಬಂಧಪಟ್ಟಂತೆ ವಿಷು ಉತ್ತಪ್ಪ ಮತ್ತು ಆತನ ತಂದೆ ತಮ್ಮಯ್ಯ ನಡುವೆ ಆಗ್ಗಾಗ್ಗೆ ಗಲಾಟೆ ನಡೆಯುತಿತ್ತು ಎನ್ನಲಾಗಿದೆ. ಆದರೆ ಎಲ್ಲವೂ ತನಿಖೆ ಬಳಿಕವೇ ಎಲ್ಲವೂ ಹೊರ…

Read More