Subscribe to Updates
Get the latest creative news from FooBar about art, design and business.
Author: kannadanewsnow07
ಇರಾನಿನ ಜನರಲ್ ಖಾಸಿಮ್ ಸೊಲೈಮಾನಿ ಅವರ ಸಮಾಧಿಯ ಬಳಿ ನಡೆದ ಎರಡು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ಬುಧವಾರ ವರದಿ ಮಾಡಿದೆ. ಸರ್ವೋಚ್ಚ ನಾಯಕನ ನಂತರ ಇರಾನ್ನ ಅತ್ಯಂತ ಶಕ್ತಿಶಾಲಿ ವ್ಯಕ್ತಿಯಾಗಿರುವ ಸುಲೈಮಾನಿ 2020 ರಲ್ಲಿ ನೆರೆಯ ಇರಾಕ್ನಲ್ಲಿ ಯುಎಸ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಇಂದಿನ ಸ್ಫೋಟದಲ್ಲಿ 171 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಪ್ರಸಾರಕ ಇರಿಬ್ ವರದಿ ಮಾಡಿದೆ. ದಕ್ಷಿಣ ನಗರ ಕೆರ್ಮನ್ ನ ಸಾಹೇಬ್ ಅಲ್-ಜಮಾನ್ ಮಸೀದಿಯ ಬಳಿ ನಡೆದ ಮೆರವಣಿಗೆಯಲ್ಲಿ ಸ್ಫೋಟಗಳು ಸಂಭವಿಸಿವೆ. ಜನರಲ್ ಸೊಲೈಮಾನಿ ಅವರ ಸ್ಮರಣಾರ್ಥ ಸಮಾರಂಭದ ಭಾಗವಾಗಿ ನೂರಾರು ಜನರು ಸಮಾಧಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು ಎಂದು ವರದಿಯಾಗಿದೆ.
ಬೆಂಗಳೂರು: ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ನೀವು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಿ ಎಂದರು. ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತೀರಿ. ಆದ್ದರಿಂದ ಹೆಚ್ಚು…
ಚಾಮರಾಜನಗರ: ನಗರದ ಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎಟಿಎಂ ಘಟಕದೊಳಗೆ ಯುವತಿಯಿಂದ ಹಣ ಕಿತ್ತುಕೊಳ್ಳಲು ವಿಫಲ ಯತ್ನ ನಡೆಸಿದ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಛಾರ್ಜ್ ಶೀಟ್ ಸಲ್ಲಿಸಲು ತಗುಲಿದ ವೆಚ್ಚವನ್ನ ನನ್ನಿಂದ ಪಡೆದಿದ್ದಾರೆ ಎಂದು ಸ್ವತಃ ಸಂತ್ರಸ್ಥೆ ಯುವತಿಯೇ ನ್ಯಾಯಾಧೀಶರ ಮುಂದೆ ಅಳಲು ತೊಡಗಿರುವ ಪ್ರಸಂಗ ನಡೆದಿದೆ ಎನ್ನಲಾಗಿದೆ. ಇತ್ತಿಚೆಗೆ ನಗರದ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದ ಯುವತಿಯನ್ನು ಹಿಂಬಲಿಸಿದ ಯುವಕನೊಬ್ಬ ಆಕೆಯ ಬಳಿ ಇದ್ದ ಪರ್ಸ್ ಹಾಗೂ ಹಣವನ್ನು ಕಿತ್ತುಕೊಳ್ಳಲು ಮುಂದಾಗಿದ್ದೇನೆ. ಗಾಬರಿ ಯಾಗಿ ಕೂಗಿ ಕೊಂಡು ಹೊರಬಂದ ಯುವತಿ ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಳು. ಈ ಪ್ರಕರಣದ ಸಂಬಂದ ಜಾರ್ಜ್ ಸೀಟ್ ಸಲ್ಲಿಸಲು ಅಗತ್ಯವಾದ ಪೇಪರ್ ಇತರೇ ಸಲಕರಣೆ, ಪೋಟೋಗಳು ಮತ್ತು ಸಿಸಿ ಟಿವಿ ಪೋಟೇಜ್ಸಂಗ್ರಹಿಸಲು 16 ಜಿಬಿಸಾರ್ಮಥ್ಯದಪೆನ್ ಡ್ರೈವ್ ಸೇರಿದಂತೆ ಇತರೇ ಖರ್ಚು ವೆಚ್ಚವನ್ನು ಪೊಲೀಸರು ಸಂತ್ರಸ್ತ ಯುವತಿಯಿಂದೇ ಪಡೆದುಕೊಂಡಿದ್ದಾರೆ ಎಂದು ಯುವತಿ ನೇರವಾಗಿ ನ್ಯಾಯಾಧೀಶರ ಮುಂದೆ ಪ್ರಕರಣ ಸಂಬಂದ ಸಾಕ್ಷ್ಯ ಹೇಳುವ…
2020 ರಲ್ಲಿ ಇರಾಕ್ನಲ್ಲಿ ಯುಎಸ್ ಡ್ರೋನ್ ದಾಳಿಯಲ್ಲಿ ಕೊಲ್ಲಲ್ಪಟ್ಟ ವಾರ್ಷಿಕೋತ್ಸವವಾದ ದಿವಂಗತ ಇರಾನಿನ ಜನರಲ್ ಕಾಸಿಮ್ ಸೊಲೈಮಾನಿ ಅವರ ಸಮಾಧಿಯ ಬಳಿ ಬುಧವಾರ (ಜನವರಿ 3) ಎರಡು ಸ್ಫೋಟಗಳು ತ್ವರಿತವಾಗಿ ಕೇಳಿ ಬಂದವು ಎಂದು ಸರ್ಕಾರಿ ಟೆಲಿವಿಷನ್ ವರದಿ ಮಾಡಿದೆ. ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಮಾಧ್ಯಮಗಳು ತಿಳಿಸಿವೆ. ದಕ್ಷಿಣ ನಗರ ಕೆರ್ಮನ್ನ ಮಸೀದಿಯಲ್ಲಿ ಇರಾನ್ನ ರೆವಲ್ಯೂಷನರಿ ಗಾರ್ಡ್ಸ್ನ ವಿದೇಶಿ ಕಾರ್ಯಾಚರಣೆಗಳ ಮುಖ್ಯಸ್ಥರ ಸಮಾಧಿಯ ಬಳಿ ನಡೆದ ಈ ಘಟನೆಯಲ್ಲಿ ಕನಿಷ್ಠ 20 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ದೂರದರ್ಶನ ತಿಳಿಸಿದೆ. “ಸಾಹೇಬ್ ಅಲ್-ಜಮಾನ್ ಮಸೀದಿ ಬಳಿ ಎರಡನೇ ಸ್ಫೋಟದ ಶಬ್ದ ಕೇಳಿಸಿತು” ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ.
ಚಿನ್ನ ಸಿಕ್ಕರೂ ಬುಧ ಗ್ರಹ ಸಿಗೋದಿಲ್ಲ ಅಂತಾರೆ.. ಬುಧ ಗ್ರಹ ತುಂಬಾ ವಿಶೇಷ. ಬುದ್ಧ ಭಗವಾನ್ ಎಂದರೆ ಬುದ್ಧಿವಂತಿಕೆ. ಉತ್ತಮ ಬುದ್ದಿವಂತಿಕೆಯಿಂದ ಜೀವನದಲ್ಲಿ ಉನ್ನತಿ ಸಾಧಿಸಬೇಕಾದರೆ ದೇವರ ಅನುಗ್ರಹ ಖಂಡಿತಾ ಬೇಕು. ಆತನ ಕೃಪೆಯನ್ನು ಪಡೆಯುವವನು ತಾನು ಕೈಗೊಳ್ಳುವ ಯಾವುದೇ ಕಾರ್ಯದಲ್ಲಿ ಖಂಡಿತವಾಗಿಯೂ ಯಶಸ್ವಿಯಾಗುತ್ತಾನೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…
ಬೆಂಗಳೂರು: ಕರ್ನಾಟಕದಲ್ಲಿ ಗೋಧ್ರಾ ದುರಂತ ಆಗಬಹುದು ಅಂಥ MLC ʻಬಿ.ಕೆ ಹರಿಪ್ರಸಾದ್ʼ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅವರು ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದು, ಕರ್ನಾಟಕದಲ್ಲಿ ಅಹಿತಕರ ಚಟುವಟಿಕೆಗೆ ಪ್ರಚೋದನೆ ನೀಡಲಾಗುತ್ತಿದೆ ಅಂತ ಹೇಳಿದ ಅವರು , ಈ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಅಂತ ಹೇಳಿದರು ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ವೇಳೆ ಗೋಧ್ರಾ ರೀತಿ ಮತ್ತೊಮ್ಮೆ ಏನಾದ್ರೂ ಅಗಬಹುದು ಅಂತ ಹೇಳಿರುವ ಅವರು ರಾಮಮಂದಿರವನ್ನು ಧಾರ್ಮಿಕ ಗುರುಗಳು ಉದ್ಘಾಟನೆ ಮಾಡುತ್ತಿದ್ದರೆ ನಾವು ಆಹ್ವಾನ ಇಲ್ಲದೇ ಹೋಗುತ್ತಿದ್ದೇವು. ಆದರೆ ಇದು ರಾಜಕೀಯ ಕಾರ್ಯಕ್ರಮವಾಗಿರವು ಕಾರಣದಿಂಧ ಅಲ್ಲಿಗೆ ಹೋಗುವುದಕ್ಕೆ ಸಾಧ್ಯವಿಲ್ಲ ಅಂತ ಹೇಳಿದರು. ಈ ಬಗ್ಗೆ ಬಿಜೆಪಿ ನಾಯಕರುಗಳು ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನಾಯಕರು ಹಾಗೂ ಹರಿಪ್ರಸಾದ್ ಅವರು ಟಿವಿಯಲ್ಲಿಕಾಣಿಸಿಕೊಳ್ಳುವುದಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದು, ಇದು ರಾಮ ವಿರೋಧ ಹೇಳಿಕೆಯಾಗಿದ್ದು, ಇದಕ್ಕೆ ಬೆಲೆ ನೀಡುವ ಅವಶ್ಯಕತೆ ಇಲ್ಲ ಅಂತ ಹೇಳಿದ್ದಾರೆ.
ಬೆಂಗಳೂರು: ನಗರ ಪೊಲೀಸ್ ಆಯಕ್ತ ಬಿ.ದಯಾನಂದ ಅವರು ನೇತ್ರದಾನಕ್ಕೆ ಒಪ್ಪಿಗೆ ನೀಡುವ ಮೂಲಕ ಪೊಲೀಸ್ ಇಲಾಖೆಯ ಇತರೆ ಹಿರಿಯ ಮತ್ತು ಕಿರಿಯ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ. ನಾರಾಯಣ ನೇತ್ರಾಲಯದ ಡಾ.ರಾಜ್ ಕುಮಾರ್ ನೇತ್ರದಾನಕ್ಕೆ ದಯಾನಂದ ಅವರು ತಮ್ಮ ಕಣ್ಣು ದಾನ ಮಾಡಿದ್ದಾರೆ. ಈ ಹಿನ್ನೆಲೆ ನಾರಾಯಣ ನೇತ್ರಾಲಯದಿಂದ ಆಯುಕ್ತರಿಗೆ ಪ್ರಶಂಸನಾ ಪತ್ರ ನೀಡಲಾಗಿದೆ. ಜೊತೆಗೆ ‘ಹೊಸ ವರ್ಷದ ಶುಭ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ನ ಅಧಿಕಾರಿಗಳು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ’ ಎಂದು ಆಯುಕ್ತರು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ನಾಲ್ಕು ವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ,ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಅಂತ ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖ ಮಾಡಿದ್ದಾರೆ. ಪತ್ರಿಕಾ ಹೇಳಿಕೆಯ ಪ್ರಮುಖ ಮಾಹಿತಿಗಳು ಇಲ್ಲಿವೆ. ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ? ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ…
ನವದೆಹಲಿ: ಅದಾನಿ-ಹಿಂದರ್ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಹಲವಾರು ಅರ್ಜಿಗಳು ಸಲ್ಲಿಕೆಯಾದ ತಿಂಗಳ ನಂತರ ಭಾರತದ ಸುಪ್ರೀಂ ಕೋರ್ಟ್ ಇಂದು ಬಹುನಿರೀಕ್ಷಿತ ತೀರ್ಪನ್ನು ನೀಡಲಿದೆ. ಕಳೆದ ವರ್ಷ ನವೆಂಬರ್ನಲ್ಲಿ ಈ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (ಒಸಿಸಿಆರ್ಪಿ) ಮತ್ತು ಹಿಂಡೆನ್ಬರ್ಗ್ ರಿಸರ್ಚ್ನಂತಹ ಸಂಸ್ಥೆಗಳಿಂದ ಪಡೆದ ಮಾಹಿತಿಯ ಮೇಲೆ ಅರ್ಜಿದಾರರು ಅವಲಂಬಿತರಾಗಿರುವ ಬಗ್ಗೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅಸಮಾಧಾನ ವ್ಯಕ್ತಪಡಿಸಿದ್ದರು. ವಿಶ್ವಾಸಾರ್ಹ ಮಾಹಿತಿಗಾಗಿ ಭಾರತೀಯ ತನಿಖಾ ಸಂಸ್ಥೆಗಳನ್ನು ಅವಲಂಬಿಸುವ ನ್ಯಾಯಾಲಯದ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಟೋಕಿಯೋ: 7.5 ತೀವ್ರತೆಯ ಭೂಕಂಪ ಸೇರಿದಂತೆ ಜಪಾನ್ನಲ್ಲಿ ಸರಣಿ ಪ್ರಬಲ ಭೂಕಂಪಗಳಿಂದ ಸಾವನ್ನಪ್ಪಿದವರ ಸಂಖ್ಯೆ ಈಗ 57 ಕ್ಕೆ ಏರಿದೆ ಎಂದು ಇಶಿಕಾವಾ ಪ್ರಾಂತ್ಯದ ಅಧಿಕಾರಿಗಳನ್ನು ಉಲ್ಲೇಖಿಸಿ ಎನ್ಎಚ್ಕೆ ವರ್ಲ್ಡ್ ವರದಿ ಮಾಡಿದೆ. ನೋಟೋ ಪರ್ಯಾಯ ದ್ವೀಪದ ವಾಜಿಮಾ ಮತ್ತು ಸುಜುನಲ್ಲಿ ಹೆಚ್ಚಿನ ಸಾವುನೋವುಗಳು ದೃಢಪಟ್ಟಿವೆ. ಬ್ಲೂಮ್ಬರ್ಗ್ ಪ್ರಕಾರ, ಎಷ್ಟು ಜನರು ಕಾಣೆಯಾಗಿದ್ದಾರೆ ಎಂಬುದನ್ನು ಖಚಿತಪಡಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿರುವುದರಿಂದ 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕುಸಿದ ಮನೆಗಳ ಅಡಿಯಲ್ಲಿ ಅನೇಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಶಿಕಾವಾ ಕೇಂದ್ರ ಪ್ರಾಂತ್ಯದ ನೊಟೊ ಪರ್ಯಾಯ ದ್ವೀಪದಲ್ಲಿ ಸೋಮವಾರ ಭೂಕಂಪ ಸಂಭವಿಸಿದ್ದು, ಕಟ್ಟಡಗಳು ಕುಸಿದಿವೆ ಮತ್ತು ಸುನಾಮಿ ಎಚ್ಚರಿಕೆಗಳನ್ನು ಪೂರ್ವ ರಷ್ಯಾದವರೆಗೆ ಕಳುಹಿಸಲಾಗಿದೆ. ದೇಶದ ಹವಾಮಾನ ಕಚೇರಿಯ ಪ್ರಕಾರ, ದಿನ ದೇಶದಲ್ಲಿ ಒಟ್ಟು 155 ಭೂಕಂಪಗಳು ವರದಿಯಾಗಿವೆ ಅಂತ ವರದಿ ಮಾಡಿದೆ. https://twitter.com/accuweather/status/1742259550034579537











