Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಬಾಲ್ಯದ ಸ್ಥೂಲಕಾಯತೆಯು ಪ್ರೌಢಾವಸ್ಥೆಯಲ್ಲಿ ಯುವಕರಲ್ಲಿ ಹೆಚ್ಚಿದ ಜಡ ಸಮಯದೊಂದಿಗೆ ನೇರವಾಗಿ ಸಂಬಂಧ ಹೊಂದಿದೆ, ಆದರೆ ಹೊಸ ಸಂಶೋಧನೆಯು ಸೌಮ್ಯ ದೈಹಿಕ ಚಟುವಟಿಕೆಯು ನಕಾರಾತ್ಮಕ ಪ್ರವೃತ್ತಿಯನ್ನು ಸಂಪೂರ್ಣವಾಗಿ ಹಿಮ್ಮೆಟ್ಟಿಸುತ್ತದೆ ಎಂದು ಕಂಡುಹಿಡಿದಿದೆ. ನೇಚರ್ ಕಮ್ಯುನಿಕೇಷನ್ಸ್ನಲ್ಲಿ ಪ್ರಕಟವಾದ ಈ ಅಧ್ಯಯನವನ್ನು ಎಕ್ಸೆಟರ್, ಈಸ್ಟರ್ನ್ ಫಿನ್ಲ್ಯಾಂಡ್, ಬ್ರಿಸ್ಟಲ್ ಮತ್ತು ಕೊಲೊರಾಡೊ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ನಡೆಸಲಾಯಿತು ಮತ್ತು 90 ರ ದಶಕದ ಬ್ರಿಸ್ಟಲ್ ವಿಶ್ವವಿದ್ಯಾಲಯದ ಮಕ್ಕಳ ದತ್ತಾಂಶವನ್ನು ಬಳಸಿಕೊಂಡು ದೈಹಿಕ ಚಟುವಟಿಕೆ ಮತ್ತು ಕೊಬ್ಬಿನ ದ್ರವ್ಯರಾಶಿಯನ್ನು ವಸ್ತುನಿಷ್ಠವಾಗಿ ಅಳೆಯುವ ಅತಿದೊಡ್ಡ ಮತ್ತು ಸುದೀರ್ಘ ಅನುಸರಣೆಯಾಗಿದೆ (ಇದನ್ನು ಪೋಷಕರು ಮತ್ತು ಮಕ್ಕಳ ಏವನ್ ಲಾಂಗಿಟ್ಯುಡಿನಲ್ ಅಧ್ಯಯನ ಎಂದೂ ಕರೆಯಲಾಗುತ್ತದೆ). ಈ ಅಧ್ಯಯನವು 11 ವರ್ಷದ 6,059 ಮಕ್ಕಳನ್ನು (ಅವರಲ್ಲಿ 53 ಪ್ರತಿಶತದಷ್ಟು ಮಹಿಳೆಯರು) ಒಳಗೊಂಡಿತ್ತು, ಅವರನ್ನು 24 ವರ್ಷದವರೆಗೆ ಅನುಸರಿಸಲಾಯಿತು ಎನ್ನಲಾಗಿದೆ. ಆದರೂ ಈ ಹೊಸ ಅಧ್ಯಯನದ ಫಲಿತಾಂಶಗಳು ಕೊಬ್ಬಿನ ದ್ರವ್ಯರಾಶಿಯಲ್ಲಿ ಒಟ್ಟಾರೆ ಹೆಚ್ಚಳವನ್ನು ಕಡಿಮೆ ಮಾಡುವಲ್ಲಿ ಲಘು ದೈಹಿಕ ಚಟುವಟಿಕೆಗಿಂತ ಮಧ್ಯಮದಿಂದ ತೀವ್ರವಾದ ದೈಹಿಕ ಚಟುವಟಿಕೆಯು…
ದಾವಣಗೆರೆ: ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯ ದಿನಪತ್ರಿಕೆ ವಿತರಣಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಾ ಪತ್ರಿಕಾ ವಿತರಕರು ಇ-ಶ್ರಮ್ ಪೋರ್ಟಲ್ನಲ್ಲಿ ಸ್ವಯಂ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 (24*7), ಕಾರ್ಮಿಕ ಅಧಿಕಾರಿಗಳು,ಕಾರ್ಮಿಕÀ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ. *********************************************************** ಶೇ.50% ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ ಕನ್ನಡ ಪುಸ್ತಕ ಪ್ರಾಧಿಕಾರವು ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳಲ್ಲಿ ಪ್ರಾಧಿಕಾರ ಮಳಿಗೆ ಶೇ.50%ರ ರಿಯಾಯಿತಿ ದರಗಳಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ದೂ.08022107705), ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮತ್ತು ಕನ್ನಡ ಪುಸ್ತಕಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ಪಡೆಯಬಹುದು. ಪ್ರಾಧಿಕಾರದ…
ಕಾಬೂಲ್: ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಬುಧವಾರ ಎರಡು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ವರದಿ ಮಾಡಿದೆ. ಮೊದಲ ಭೂಕಂಪವು ಭಾರತೀಯ ಕಾಲಮಾನ 00:28:52 ಕ್ಕೆ ಫಯಾಜಾಬಾದ್ನಿಂದ 126 ಕಿ.ಮೀ ದೂರದಲ್ಲಿ 80 ಕಿ.ಮೀ ಆಳದಲ್ಲಿ ಸಂಭವಿಸಿದೆ. ಆದರೆ, ಎರಡನೆಯದು ಫಯಾಜಾಬಾದ್ನಿಂದ 100 ಕಿ.ಮೀ ದೂರದಲ್ಲಿ 00:55:55 ಕ್ಕೆ ಸಂಭವಿಸಿದೆ. ಆಳವನ್ನು 100 ಕಿ.ಮೀ ಎಂದು ದಾಖಲಿಸಲಾಗಿದೆ. “ತೀವ್ರತೆಯ ಭೂಕಂಪ: 4.4, 03-01-2024, 00:28:52 ಭಾರತೀಯ ಕಾಲಮಾನ, ಲಾಟ್: 36.90 ಮತ್ತು ಉದ್ದ: 71.95, ಆಳ: 80 ಕಿ.ಮೀ, ಸ್ಥಳ: 126 ಕಿ.ಮೀ ಇ, ಅಫ್ಘಾನಿಸ್ತಾನದ ಫಯಾಜಾಬಾದ್” ಎಂದು ಎನ್ಸಿಎಸ್ ಪೋಸ್ಟ್ನಲ್ಲಿ ತಿಳಿಸಿದೆ. ಯಾವುದೇ ಆಸ್ತಿಪಾಸ್ತಿ ನಷ್ಟದ ಬಗ್ಗೆ ಇನ್ನೂ ವರದಿಯಾಗಿಲ್ಲ. “ತೀವ್ರತೆಯ ಭೂಕಂಪ: 4.8, 03-01-2024, 00:55:55 ಭಾರತೀಯ ಕಾಲಮಾನ, ಲಾಟ್: 36.90 ಮತ್ತು ಉದ್ದ: 71.65, ಆಳ: 140 ಕಿ.ಮೀ, ಸ್ಥಳ: ಅಫ್ಘಾನಿಸ್ತಾನದ ಫಯಾಜಾಬಾದ್ನ 100 ಕಿ.ಮೀ” ಎಂದು ಎನ್ಸಿಎಸ್ ವರದಿ ಮಾಡಿದೆ
ಬೆಂಗಳೂರು: ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (ಕೆಇಆರ್ ಸಿ) ವಿದ್ಯುತ್ ಶುಲ್ಕ ಇಳಿಕೆ ಮಾಡಿದ್ದು, ಈ ಮೂಲಕ ಗ್ರಾಹಕರ ಮೇಲಿನ ಹೊರೆಯನ್ನು ಇಳಿಸಲು ಮುಂದಾಗಿದೆ. ಅಂದ ಹಾಗೇ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕೆಇಆರ್ಸಿ ವಿದ್ಯುತ್ ದರ ಇಳಿಕೆ ಮಾಡಿದೆ ಎನ್ನಲಾಗಿದ್ದು, ಇಳಿಕೆ ದರದ ಪ್ರಕಾರ ಪ್ರಸಕ್ತ ಜನವರಿ ತಿಂಗಳಲ್ಲಿ ವಿದ್ಯುತ್ ಬಿಲ್ ಕಡಿಮೆಯಾಗಲಿದೆ ಎನ್ನಲಾಗಿದೆ. ಕೆಇಆರ್ ಸಿ ಸೂಚನೆ ಅನ್ವಯ ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 37 ಪೈಸೆ, ಮೆಸ್ಕಾಂ ವ್ಯಾಪ್ತಿಯಲ್ಲಿ 31 ಪೈಸೆ, ಹೆಸ್ಕಾಂ ವ್ಯಾಪ್ತಿಯಲ್ಲಿ 3 ಪೈಸೆ, ಜೆಸ್ಕಾಂ ವ್ಯಾಪ್ತಿಯಲ್ಲಿ 51 ಪೈಸೆ ಮತ್ತು ಸೆಸ್ಕ್ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 39 ಪೈಸೆ ಕಡಿಮೆಯಾಗಲಿದೆ. ಜನವರಿ ತಿಂಗಳ ವಿದ್ಯುತ್ ಬಿಲ್ನಲ್ಲಿ ಸರಿದೂಗಿಸುವಂತೆ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಿದೆ ಎನ್ನಲಾಗಿದೆ.
ಬೆಂಗಳೂರು: ಮೋಜಿಣಿ ವ್ಯವಸ್ಥೆ ಅಡಿ ಸಾರ್ವಜನಿಕರು ಅಳತೆ ಕೋರಿ ಸಲ್ಲಿಸುವ ಅರ್ಜಿಗಳ ಅಳತೆ ಶುಲ್ಕವನ್ನು ಮೇಲೆ ಓದಲಾದ ಕ್ರ.ಸಂ. (1) ಮತ್ತು (3) ರ ಆದೇಶಗಳಲ್ಲಿ ಈ ಕೆಳಕಂಡಂತ ನಿಗಧಿಪಡಿಸಲಾಗಿತ್ತು. ಹಾಗೆಯೇ, ಮೇಲೆ ಓದಲಾದ ಕ್ರಸಂ. (2) ರ ಸರ್ಕಾರದ ಆದೇಶದಲ್ಲಿ, ಪರವಾನಗಿ ಭೂಮಾಪಕರಿಗೆ ಪ್ರತಿ ಅರ್ಜಿಗೆ ಪಾವತಿಸುತ್ತಿರುವ ಸೇವಾ ಶುಲ್ಕವನ್ನು 800/- ರಿಂದ 1200/- ಗಳಿಗೆ ಹಾಗೂ ಬಹುಮಾಲೀಕತ್ವದ ಪ್ರತಿ ಹೆಚ್ಚುವರಿ ಬ್ಲಾಕಿಗೆ ರೂ 150/- ರಿಂದ 200/- ಗಳಿಗೆ ಪರಿಷ್ಕರಿಸಿ ಆದೇಶಿಸಲಾಗಿದೆ. ತದನಂತರ, ಮೇಲೆ ಓದಲಾದ ಕ್ರ.ಸಂ. (4) ಹಾಗೂ (5) ರ ಅದೇಶದಲ್ಲಿ ಮೋಜಣಿ ವ್ಯವಸ್ಥೆಯಡಿ ಸಲ್ಲಿಸುವ ಅರ್ಜಿಗಳ ಅಳತೆ ಶುಲ್ಕವನ್ನು ಪುನರ್ ಪರಿಷ್ಕರಿಸಿ, ಅರ್ಜಿ ಶುಲ್ಕವನ್ನು ಕಡಿಮೆಗೊಳಿಸಿ ಈ ಕೆಳಕಂಡಂತೆ ನಿಗಧಿಪಡಿಸಲಾಗಿದೆ. 11ಇ ಸ್ಕೆಚ್, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಪ್ರಕರಣಗಳಲ್ಲಿ ಗ್ರಾಮೀಣ ಭಾಗದ ಅರ್ಜಿದಾರರಿಗೆ ನಿಗದಿಯಾಗಿದ್ದ 2,000 ರೂ. ಸೇವಾ ಶುಲ್ಕವನ್ನು 1,500 ರೂ.ಗೆ ಇಳಿಸಲಾಗಿದೆ. ನಗರ ಪ್ರದೇಶದ ಅರ್ಜಿದಾರರಿಗೆ 2,500…
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಜನವರಿ 5 ರಿಂದ 7 ರವರೆಗೆ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2024 ನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವರು ಹಾಗೂ ಮೇಳದ ಅಧ್ಯಕ್ಷರಾದ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಂದು ಕೃಷಿ ಇಲಾಖೆ ಹಾಗೂ ಕೆಪೆಕ್ ಸಂಸ್ಥೆಯ ವತಿಯಿಂದ ಹೋಟೆಲ್ ಶಾಂಗ್ರಿಲಾದಲ್ಲಿ “ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳ – 2024” ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗುತ್ತಿರುವ ರಫ್ತುದಾರರ ಸಭೆಯ ಕುರಿತು ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸಾವಯವ ಕೃಷಿಯನ್ನು ರಾಜ್ಯದಲ್ಲಿ ಸುಮಾರು 2 ದಶಕಗಳಿಂದ ಉತ್ತಮ ಪರ್ಯಾಯ ಪದ್ಧತಿಯಾಗಿ ಉತ್ತೇಜಿಸಲಾಗುತ್ತಿದೆ. ಸ್ವಾವಲಂಬನೆ ಗ್ರಾಮೀಣಾಭಿವೃದ್ಧಿ ಮತ್ತು ಪ್ರಕೃತಿ ಸಂರಕ್ಷಣೆಗೆ ಒತ್ತು ನೀಡಲು 2004 ರಲ್ಲಿಯೇ ಪ್ರತ್ಯೇಕ ಸಾವಯವ ಕೃಷಿ ನೀತಿಯನ್ನು ಹೊರತಂದು ನೀತಿಯಡಿಯಲ್ಲಿ ರಾಜ್ಯಾದ್ಯಂತ ಹಲವಾರು ಸಾವಯವ ಕೃಷಿ ಉತ್ತೇಜನಾ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿರುತ್ತದೆ ಎಂದು ತಿಳಿಸಿದರು. ಸಿರಿಧಾನ್ಯಗಳು ಬಹು ಉಪಯೋಗಗಳನ್ನು (ಆಹಾರ, ಮೇವು. ಇಂಧನ) ಹೊಂದಿದ್ದು, ಸಾಮಾನ್ಯವಾಗಿ ಬರಗಾಲದ ಸಮಯದಲ್ಲಿ ಕೊನೆಯ ಬೆಳೆಯಾಗಿ ಸಹ…
ಬೆಂಗಳೂರು : ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಶುರುವಾಗಿದ್ದು, ಈ ನಡುವೆ ರಾಜ್ಯ ಸರ್ಕಾರವು ರೈತರಿಗೆ ಮಹತ್ವದ ಸೂಚನೆಯನ್ನು ನೀಡಿದೆ. ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದೇ ವೇಳೆ ಅವರು ಮಾತನಾಡಿಬೆಳೆನಷ್ಟಕ್ಕೆ ತಾತ್ಕಾಲಿಕವಾಗಿ 2 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ. ಅದನ್ನು ಶೀಘ್ರವೇ ಪಾವತಿ ಮಾಡಲಾಗುವುದು. ಸದ್ಯಕ್ಕೆ ಖಾತೆಗಳಿಗೆ ಆಧಾರ್ ಲಿಂಕ್ ಜೋಡಣೆಯಾಗಬೇಕಿರುವುದರಿಂದ ತಡವಾಗುತ್ತಿದೆ ಎಂದು ಹೇಳಿದರು. ಇನ್ನೂ ರಾಮಮಂದಿರ ಉದ್ಘಾಟನೆಯ ದಿನ ಸರ್ಕಾರಿ ರಜೆ ಘೋಷಣೆ ಮಾಡಬೇಕೆನ್ನುವ ಘೋಷಣೆಯನ್ನು ಮುಖ್ಯಮಂತ್ರಿ ತಳ್ಳಿಹಾಕಿದರು. ಕಾರ್ಯಕ್ರಮ ಮಾಡುತ್ತಿರುವುದು ಕೇಂದ್ರ ಸರ್ಕಾರ. ಅವರೇ ಸರ್ಕಾರದ ರಜೆ ಘೋಷಣೆ ಮಾಡಲಿ ಎಂದು ಅವರು ಕೇಂದ್ರ…
ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆ ಖಾಯಂ ಸಾಧ್ಯವಿಲ್ಲ ಅಂತ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಹೇಳಿದ್ದಾರೆ. ಅವರು ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ಅತಿಥಿ ಉಪನ್ಯಾಸಕರ ಸೇವೆ ಕಾಯಮಾತಿಗೆ ಕಾನೂನಿನ ತೊಡಕು ಇರುವುದರಿಂದ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ ಅಂತ ಸ್ಪಷ್ಟೀಕರಣ ನೀಡಿದ್ದಾರೆ. ಇದೇ ವೇಳೇ ಅವರು ಅತಿಥಿ ಉಪನ್ಯಾಸಕರ ಖಾಯಮಾತಿಗೆ ಕಾನೂನು ತೊಡಕಿದೆ. ನಾವು ಏನೇ ಮಾಡಿದರು ನ್ಯಾಯಾಲಯದಲ್ಲಿ ಸಮಸ್ಯೆ ಆಗಬಹುದು ಎಂದು ಸಚಿವ ಎಂ ಸಿ ಸುಧಾಕರ್ ಹೇಳಿದರು. ಇದೇ ವೇಳೇ ಅವರು 7,000 ಹುದ್ದೆ ಹೆಚ್ಚುವರಿ ನೇಮಕಾತಿ ಮಾಡಲು ಬೇಡಿಕೆ ಇದೆ. 1,242 ಖಾಲಿ ಹುದ್ದೆ ಭರ್ತಿ ಮಾಡಬೇಕಾಗಿದೆ. ಇದಕ್ಕೆ ಪ್ರಕ್ರಿಯೆ ನಡೆದಿದೆ. ಕ್ಲಸ್ಟರ್ ವಿವಿಗಳಿಗೆ ಸಹಾಯಕ ಪ್ರಾಧ್ಯಾಪಕರ 250 ಹುದ್ದೆ ಖಾಲಿ ಇವೆ. 450-500 ಹೆಚ್ಚುವರಿ ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮತಿ ಪಡೆದು ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ದಿನಾಂಕ:13-01-2024 ರಂದು ನಡೆಯುವ ಕೆ-ಸೆಟ್ 2023(K-SET-2023) ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ವಸ್ತ್ರಸಂಹಿತೆ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಬಿಡುಗಡೆ ಮಾಡಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ | ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. * ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್ಗಳು, ಪಾಕೆಟ್ಗಳು, ದೊಡ್ಡ ಬಟನ್ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು. • ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಮಹಿಳಾ ಅಭ್ಯರ್ಥಿಗಳ…
ಟೋಕಿಯೊ: ಜಪಾನ್ನಲ್ಲಿ ಹೊಸ ವರ್ಷದ ದಿನದಂದೇ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಇಲ್ಲಿಯವರೆಗೂ 24 ಮಂದಿ ಬಲಿಯಾಗಿದ್ದಾರೆ ಎಂದು ಅಲ್ಲಿನ ಮಾಧ್ಯಮಳು ವರದಿ ಮಾಡಿವೆ. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ಗಿಂತಲೂ ಹೆಚ್ಚು ಎತ್ತರದ ಸುನಾಮಿ ಅಲೆಗಳನ್ನು ಪ್ರಚೋದಿಸಿತು, ಕಟ್ಟಡಗಳು ಉರುಳಿದವು, ಪ್ರಮುಖ ಬಂದರು ಬೆಂಕಿಗೆ ಕಾರಣವಾಯಿತು ಮತ್ತು ರಸ್ತೆಗಳ ಹಾನಿಗೆ ಕಾರಣವಾಗಿದೆ. ಇಲ್ಲಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಏರುವುದು ಪೊಲೀಸರು ತಿಳಿಸಿದ್ದಾರೆ. ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 24 ಜನರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಳು ವರದಿ ಮಾಡಿವೆ. “ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕವಾದ ಹಾನಿಯನ್ನು ದೃಢಪಡಿಸಲಾಗಿದೆ” ಎಂದು ವಿಪತ್ತು ಪ್ರತಿಕ್ರಿಯೆ ಸಭೆಯ ನಂತರ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ಹೇಳಿದರು. https://kannadanewsnow.com/kannada/bengaluru-sees-warmest-december-in-a-decade-in-2023/ https://kannadanewsnow.com/kannada/12-missions-in-2024-isro-chief-outlines-indias-ambitious-plan-for-new-year-after-successful-launch-of-xposat/ https://kannadanewsnow.com/kannada/bengaluru-sees-warmest-december-in-a-decade-in-2023/ https://kannadanewsnow.com/kannada/12-missions-in-2024-isro-chief-outlines-indias-ambitious-plan-for-new-year-after-successful-launch-of-xposat/











