Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಗ್ರಾಮ ಲೆಕ್ಕಿಗರು ಕಡತಗಳನ್ನು ತಾಲ್ಲೂಕು ಕಚೇರಿಗೆ ಒಯ್ಯುತ್ತಾರೆ. ಇದರಿಂದಾಗಿ ಪಂಚಾಯಿತಿ ಕಚೇರಿಗಳಲ್ಲಿ ಅವರು ಇರುವುದಿಲ್ಲ. ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಆದ್ದರಿಂದ ಗ್ರಾಮ ಲೆಕ್ಕಿಗರು ಎಲ್ಲಿ ಇರುತ್ತಾರೋ ಅಲ್ಲಿಂದಲೇ ಕೆಲಸ ಮಾಡಲು ಮತ್ತು ಕಡತಗಳನ್ನು ಆನ್ಲೈನ್ ಮೂಲಕ ಕಳುಹಿಸಲು ಅವರಿಗೆ ಇ-ಆಫೀಸ್ ಲಾಗ್ಇನ್ ವ್ಯವಸ್ಥೆಯನ್ನೂ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಗ್ರಾಮ ಲೆಕ್ಕಿಗರು ತಮ್ಮ ಕಚೇರಿಯಲ್ಲೇ ಇದ್ದು ಎಲ್ಲ ಕೆಲಸಗಳನ್ನು ಮಾಡಲು ಮತ್ತು ಪ್ರತಿ ನಿತ್ಯ ತಾಲ್ಲೂಕು ಕಚೇರಿಗಳಿಗೆ ಹೋಗುವುದನ್ನು ತಪ್ಪಿಸಲು 10 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್ಟಾಪ್ ವಿತರಿಸಲಾಗುವುದು ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡರು ರಾಜ್ಯದಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ರಾಜ್ಯದಲ್ಲಿ 1 ಸಾವಿರ ಗ್ರಾಮ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವುದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ತಿಂಗಳೊಳಗೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಶಿಕ್ಷಣವನ್ನು ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು. – ಪಿಯುಸಿ ಹೊರತುಪಡಿಸಿ ಜೆಒಸಿ, ಡಿಪ್ಲೊಮ ಮತ್ತು ಇನ್ನಿತರ ಯಾವುದೇ ವಿದ್ಯಾರ್ಹತೆಗಳನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ. – ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ ವಿವರಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಮಾಡಿರಬೇಕು. ಅಥವಾ ಸಿಬಿಎಸ್ಇ / ಐಸಿಎಸ್ಇ ನಡೆಸುವ 12ನೇ ತರಗತಿ / ಎನ್ಐಓಎಸ್ ನಡೆಸುವ ಹೆಚ್ಎಸ್ಸಿ ಅರ್ಹತೆ ಪಡೆದಿರಬೇಕು. ಅಥವಾ…
ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಕಮ್ ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.07 ರ ವರೆಗೆ ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್ಎಸ್ಪಿ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ಆಯಾ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು.ಹೆಲ್ಪ್ ಡೆಸ್ಕ್ ನಂ:8277799990 (24*7) ಸಹಾಯವಾಣಿಯ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಾಂತ್ರಿಕ ತೊಂದರೆಗಳಿದ್ದಲ್ಲಿ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ…
ಬೆಂಗಳೂರು: ಗ್ರಾಮ ಲೆಕ್ಕಿಗರು ಮನೆ ಬಾಗಿಲಿಗೆ ತೆರಳಿ ಆರ್ಟಿಸಿ-ಆಧಾರ್ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್ ಲಿಂಕ್ ಮಾಡಲಾಗಿದೆ. ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್ ಬಂದ್ ಮಾಹಿತಿ ಪಡೆಯಬೇಕು. ನಿಖರವಾದ ಆಕಾರ್ ಬಂದ್ ಇಲ್ಲದೇ ಆರ್ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್ ಬಂದ್ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಇದಲ್ಲದೇ ಬೇಸಿಗೆ ಹಿನ್ನೆಲೆ ನೀರಿನ ಅಭಾವವಿರುವ ಬೆಂಗಳೂರು ನಗರದ ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್ಗಳು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ತಡೆಯಲು ಬಿಬಿಎಂಪಿ ಕಠಿಣ ಕ್ರಮ ಕೈಗೊಂಡಿದೆ. ಮಾರ್ಚ್ 7ರೊಳಗೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಟ್ಯಾಂಕರ್ ಮಾಲೀಕರಿಗೆ ಗಡುವು ನೀಡಲಾಗಿದೆ. ಇನ್ನೂ ಅಂಗಾಂಗ ದಾನ ಕೋರಿ ನೋಂದಾಯಿಸಿಕೊಂಡವರ ಸಂಖ್ಯೆ 8 ಸಾವಿರಕ್ಕೂ ಹೆಚ್ಚಿದ್ದು, ಕಳೆದ ಒಂದು ವರ್ಷದಲ್ಲಿ 178 ಅಂಗಾಂಗ…
ಬೆಂಗಳೂರು: ಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಕ್ರಮ ವಹಿಸಲಾಗಿದೆ. ನಮ್ಮ ದೇಶದಲ್ಲಿ 2011ರ ನಂತರ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಪೋಲಿಯೋಗೆ ಕಾರಣವಾಗುವ ವೈರಸ್ಗಳು ನೆರೆಯ ಪಾಕಿಸ್ತಾನ, ಅಪಘಾನಿಸ್ತಾನ ದೇಶದಿಂದ ವಾತಾವರಣದಲ್ಲಿ ಸೇರಿಕೊಂಡು, ದೇಶದೊಳಗೆ ಬರುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಜಗತ್ತಿನಿಂದಲೇ ಈ ಪೋಲಿಯೋ ವೈರಸ್ ನಿರ್ಮೂಲನೆಯಾಗುವವರೆಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ತಪ್ಪದೆ ಮಕ್ಕಳಿಗೆ ಹಾಕಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು. ಲಸಿಕಾ ದಿನ ಎಲ್ಲಾ ಅಂಗನವಾಡಿ ಕೇಂದ್ರವನ್ನು ತೆರೆದಿಟ್ಟು ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ತಾಯಂದಿರ ಸಭೆ, ಬಾಲ ವಿಕಾಸ ಸಮಿತಿ ಸಭೆಗಳಲ್ಲಿ ಲಸಿಕಾ ದಿನಾಂಕದ ಕುರಿತು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಬೇಕು. ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಚಾರಕರು, ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು,…
ಬೆಂಗಳೂರು: ಸರ್ಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಕೃಷಿ ಇಲಾಖೆಯ ಕಾರ್ಯಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳನ್ನು ಜೂನ್ ಮಾಹೆಯೊಳಗೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಇಲಾಖೆಯ 2023-24ನೇ ಸಾಲಿನಲ್ಲಿ ಇದುವರೆಗಿನ ಸಾಧನೆ ಕುರಿತು ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಖಾಲಿ ಹುದ್ದೆಯ ಭರ್ತಿಗೆ ಆರ್ಥಿಕ ಇಲಾಖೆಯು ಅಧಿಕೃತವಾಗಿ ಮಂಜೂರಾತಿ ನೀಡಿದೆ. 750 ಹುದ್ದೆಗಳಲ್ಲಿ 100 ಕೃಷಿ ಅಧಿಕಾರಿಗಳು ಮತ್ತು 650 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದರು. ಕಳೆದ 20 ವರ್ಷಗಳಿಂದ ಆಗದ ಮುಂಬಡ್ತಿಯನ್ನು ನಾವು ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ 04 ಉಪ ಕೃಷಿ ನಿರ್ದೇಶಕರು, 292 ಸಹಾಯಕ ಕೃಷಿ ನಿರ್ದೇಶಕರು, 253 ಕೃಷಿ ಅಧಿಕಾರಿಗಳು, 33 ಸಿಬ್ಬಂದಿಗಳು ಸೇರಿದಂತೆ…
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಪಿಯು-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿಯನ್ನು ಆಯೋಜಿಸಿದೆ. ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಮಹಿಳಾ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಶಶಿಕಲಾ ಜೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯನ್ನು ಅಥವಾ ಹತ್ತಿರದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದು
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಮಾನಹಾನಿಕರ ರೀತಿಯಲ್ಲಿ ಪ್ರಸಾರ ಮಾಡುತ್ತಿದ್ದ ಕಾಂತಕುಮಾರ ಅಲಿಯಾಸ್ ಶ್ರೀಕಾಂತ್ ಮತ್ತು ALL KARNATAKA STATE STUDENTS ASSOCIATION ಇವರುಗಳು, ಮುಂದಿನ ದಿನಾಂಕದವರೆಗೆ ಆಯೋಗದ ಅಧ್ಯಕ್ಷರಿಗೆ ಸಂಬಂಧಪಟ್ಟಂತೆ ಪ್ರತ್ಯಕ್ಷವಾಗಿಯಾಗಲೀ ಅಥವಾ ಪರೋಕ್ಷವಾಗಿಯಾಗಲೀ, ಟಿ.ವಿ.ಮಾಧ್ಯಮ ಅಥವಾ ದಿನಪತ್ರಿಕೆ ಅಥವಾ ಅಂತರ್ಜಾಲ ಅಥವಾ ವೆಬ್ಸೈಟ್ ಅಥವಾ ಯೂಟ್ಯೂಬ್ ಅಥವಾ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ರೀತಿಯಲ್ಲಿ ಪ್ರಸಾರ ಮಾಡದಂತೆ ಸದರಿ ವ್ಯಕ್ತಿ ಮತ್ತು ಸಂಸ್ಥೆಯ ವಿರುದ್ಧ ಮಾನ್ಯ 17ನೇ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು 2024ನೇ ಫೆಬ್ರವರಿ 28ರಂದು ನಿಬರ್ಂಧಕಾಜ್ಞೆ ಆದೇಶವನ್ನು ನೀಡಿರುತ್ತದೆ ಎಂದು ಕರ್ನಾಟಕ ಲೋಕಸೇವ ಆಯೋಗದ ಅಧ್ಯಕ್ಷರಾದ ಶಿವಸಂಕರಪ್ಪ ಎಸ್. ಸಾಹುಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮನಗರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕವಾಗಿ ಹಿಂದುಳಿದ ಜನರನ್ನು ಸಬಲರನ್ನಾಗಿಸಿದೆ ಎಂದು ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅವರು ಮಾ. 2ರ ಶನಿವಾರ ಚನ್ನಪಟ್ಟಣ ಟೌನಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ರಾಜ್ಯದಲ್ಲಿನ ಪ್ರತೀ ಕುಟುಂಬವು ಇದರ ಪ್ರಯೋಜನ ಪಡೆಯುತ್ತಿದೆ. ಜಿಲ್ಲೆಯಲ್ಲಿನ ರೈತರಿಗೆ ಉಚಿತ ವಿದ್ಯುತ್ ನೀಡಿ, ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲಾಗಿದೆ. ಈಗಾಗಲೇ 40 ಸ್ಟೇಷನ್ ಸ್ಥಾಪಿಸಲಾಗಿದೆ. ಉಳುವವನೇ ಭೂ ಒಡೆಯ ಎಂಬುದನ್ನು ತಂದಿದ್ದು ನಮ್ಮ ಸರ್ಕಾರ, ಜಿಲ್ಲೆಯ ಜನರಿಗೆ ಮಂಚನಬೆಲೆ ಹಾಗೂ ವೈ.ಜಿ ಗುಡ್ಡೆಯಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ ಎಂದರು. https://kannadanewsnow.com/kannada/rameswaram-cafe-bomb-blast-case-fsl-probe-reveals-another-explosive-information/ ರಾಮನಗರ ಜಿಲ್ಲೆಗೆ 100 ಬಸ್ಸುಗಳನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇದರಿಂದ…
ಬಳ್ಳಾರಿ: ಸಂವಿಧಾನವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನದಿಂದಾಗಿ ನಮ್ಮ ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದು, ಎಲ್ಲರೂ ಸಮಾನವಾಗಿ ಬದುಕಿನ ನೆಲೆ ಕಂಡುಕೊಳ್ಳಲು ಸಹಾಯಕವಾಗಿದೆ ಎಂದು ರಾವ್ ಬಹೂದ್ದೂರ್ ವೈ.ಮಹಾಬಲೇಶ್ವರ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಟಿ.ಹನುಮಂತರೆಡ್ಡಿ ಅವರು ಹೇಳಿದರು. “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮದ ಅಂಗವಾಗಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ನಗರದ ರಾವ್ ಬಹೂದ್ದೂರ್ ವೈ.ಮಹಾಬಲೇಶ್ವರ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿದ್ದ ಸಂವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂವಿಧಾನವು ಬಹಳ ಮಹತ್ವ ಪೂರ್ಣವಾಗಿದ್ದು, ಎಲ್ಲರೂ ಗೌರವಿಸುವರ ಮೂಲಕ, ಅದರ ಮೌಲ್ಯ ಮತ್ತು ಆಶೋತ್ತರಗಳನ್ನು ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಯವರಾದ ಅಂಬಿಕಾ, ಕಲ್ಗುಡಿ ಬಸವರಾಜ, ಬಸವರಾಜ.ಎನ್ ಹಾಗೂ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು