Subscribe to Updates
Get the latest creative news from FooBar about art, design and business.
Author: kannadanewsnow07
ಬಳ್ಳಾರಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ವಲಯವು ಆರ್ಥಿಕತೆಯ ಬೆನ್ನೆಲುಬಾಗಿದ್ದು, ಸಣ್ಣ ಕೈಗಾರಿಕೆಗಳು ಬೆಳವಣೆಗೆಯಾದರೆ ದೊಡ್ಡ ಕೈಗಾರಿಕೆಗಳು ಬೆಳವಣಿಗೆಗೆ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಅವರು ಅಭಿಪ್ರಾಯ ಪಟ್ಟರು. ಸಿಡ್ಬಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಾಗೃತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಮಾನಗಳಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಹೆಚ್ಚೆಚ್ಚು ಪ್ರೋತ್ಸಾಹಿಸಲಾಗುತ್ತಿದೆ. ಹೀಗಾಗಿ ಇಂತಹ ಕಾರ್ಯಗಾರಗಳಲ್ಲಿ ಭಾಗವಹಿಸಿದರೆ ಎಂಎಸ್ಎಂಇ ಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಮಹಾರುದ್ರ ಗೌಡ ಅವರು ಮಾತನಾಡಿ, ಎಂಎಸ್ಎಂಇ ವಲಯಕ್ಕೆ ಸಂಬಂಧಿಸಿದಂತೆ ಇಂತಹ ಜಾಗೃತಿ ಸಭೆಗಳು ಸಂಕಷ್ಟದಲ್ಲಿ ಇರುವ ಅನೇಕ ಕೈಗಾರಿಕೆಗಳ ಪಾಲಿಗೆ ಸಂಜೀವಿನಿ ಆಗಲಿದೆ ಎಂದರು.…
ಬಳ್ಳಾರಿ: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿರುವ ಅನುಪಯುಕ್ತ ಪೀಠೋಪಕರಣಗಳ ಮಾರಾಟ ಮಾಡಲಾಗುತ್ತಿದ್ದು, ಖರೀದಿಸಲು ಇಚ್ಛಿಸುವವರು ದರಪಟ್ಟಿ ಸಲ್ಲಿಸಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾಯ ಆಯೋಗದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿ ಆದಪ್ಪ ರಾಮಪ್ಪ ಜುಮಾಲಾಪುರ ಅವರು ತಿಳಿಸಿದ್ದಾರೆ. *ಮಾರಾಟಕ್ಕಿರುವ ಅನುಪಯುಕ್ತ ಪೀಠೋಪಕರಣಗಳು:* ಎಸ್-ಟೈಪ್ ಚೇರ್ 02, ಎಕ್ಸೂಕ್ಯೂಟೀವ್ ಚೇರ್ 06, ಕಂಪ್ಯೂಟರ್ ಚೇರ್ 03, ಟೇಬಲ್ ಟ್ರೇ 07, ಬಜಾಜ್ ಏರ್ ಕೂಲರ್ಸ್ 02, ಟೈಪ್ ರೈಟರ್ಸ್ (ಕನ್ನಡ, ಇಂಗ್ಲೀಷ್) 02, ಡಸ್ಟ್ ಬಿನ್ (ಐರನ್) 02, ಸ್ಟೀಲ್ ಚೇರ್ಸ್ 02, ರೆಡ್ ಎಸ್-ಟೈಪರ್ ಚೇರ್ 04. ಖರೀದಿಸಲು ಇಚ್ಛಿಸುವವರು ಮಾ.14ರ ಸಂಜೆ 5 ಗಂಟೆಯೊಳಗೆ ದರಪಟ್ಟಿ ತಯಾರಿಸಿ ಇದೇ ಕಚೇರಿಗೆ ನೀಡಬಹುದು. ಯಾವ ಧರದಲ್ಲಿ ಎಂದು ಪ್ರತ್ಯೇಕವಾಗಿ ನಮೂದಿಸಬೇಕು. ಖರೀದಿಸಲು ಇಚ್ಛೆಪಡುತ್ತೀರಿ ಎಂಬುದರ ಬಗ್ಗೆ ಸೀಲ್ ಮಾಡಿದ ಲಕೋಟೆಯಲ್ಲಿ ದರಪಟ್ಟಿಯನ್ನು ಮತ್ತು ಲಕೋಟೆಯ ಮೇಲೆ ಹಳೆಯ ಅನುಪಯುಕ್ತ ಪೀಟೋಪಕರಣಗಳ ಖರೀದಿಗಾಗಿ ಧರಪಟ್ಟಿ ಎಂಬುದಾಗಿ ನಮೂದಿಸಬೇಕು. ಹೆಚ್ಚಿನ…
ಬಳ್ಳಾರಿ: ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸಂಗಮೇಶ ಮತ್ತು ಮಹಮ್ಮದ್ ರಫಿ ಇವರ ನೇತೃತ್ವದಲ್ಲಿ ಮಾರ್ಚ್ ಮಾಹೆಯಲ್ಲಿ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ. *ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:* ಮಾ.12 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುರುಗೋಡು ತಾಲ್ಲೂಕಿನ ತಹಸೀಲ್ದಾರರ ಕಚೇರಿ ಸಭಾಂಗಣ. ಮಾ.13 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ರ ವರೆಗೆ ಸಿರುಗುಪ್ಪ ತಾಲ್ಲೂಕಿನ ಸಿ.ಡಿ.ಪಿ.ಓ ಕಚೇರಿ ಸಭಾಂಗಣ. ಮಾ.15 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ರ ಸಂಡೂರು ಪಟ್ಟಣದ ತಹಸೀಲ್ದಾರರ ಕಚೇರಿ ಸಭಾಂಗಣ. ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ವಿಚಾರಿಸಲಾಗುತ್ತದೆ ಹಾಗೂ ಸಾರ್ವಜನಿಕರು ತಮ್ಮ ಅವಹಾಲುಗಳನ್ನು ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:1 ಮತ್ತು 2ಗಳನ್ನು ನೀಡಲಾಗುತ್ತದೆ. ಕುಂದುಕೊರತೆಗಳಿರುವ…
ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ತೆರಳುವ ಭಕ್ತಾಧಿಗಳಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಬಳ್ಳಾರಿ, ಮೋಕಾ, ಕುರುಗೋಡು, ಸಿರುಗುಪ್ಪ, ತೆಕ್ಕಲಕೋಟ, ಹಳೇಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ಹೋಗುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಮಾ.04 ರಿಂದ 10 ರ ವರೆಗೆ ವಿಶೇಷ ಸಾರಿಗೆ ಸೌಕರ್ಯ ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರ ಮೊ.7760992163, ಬಳ್ಳಾರಿ-2ನೇ ಘಟಕದ ವ್ಯವಸ್ಥಾಪಕರ ಮೊ.7760992164, ಸಿರುಗುಪ್ಪ ಘಟಕದ ವ್ಯವಸ್ಥಾಪಕರ ಮೊ.7760992165, ಕುರುಗೋಡು ಘಟಕದ ವ್ಯವಸ್ಥಾಪಕರ ಮೊ.9606483671 ಗೆ ಸಂಪರ್ಕಿಸಬಹುದು. ಈ ಸಾರಿಗೆ ಸೇವೆಯನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಕರಸಾ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ: ಜಿಲ್ಲೆ ವ್ಯಾಪ್ತಿಯಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 20215 ರ ಸೆಕ್ಷನ್ 41 ರಲ್ಲಿ ನೋಂದಾಣಿಯಾಗದೇ ಇರುವ ಮಕ್ಕಳ ಪಾಲನಾ ಸಂಸ್ಥೆಗಳನ್ನು ನೋಂದಾಯಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ನೋಂದಾಯಿಸಿಕೊಳ್ಳಲು ನಗರದ ಕಂಟೋನ್ಮೆಂಟ್ನ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ ಅವರ ಮೊ.9945254537 ಹಾಗೂ ಮಕ್ಕಳ ರಕ್ಷಣಾಧಿಕಾರಿ ಚನ್ನಬಸಪ್ಪ ಪಾಟೀಲ್ ಅವರ ಮೊ.7090376455 ಗೆ ಸಂಪರ್ಕಿಸಬಹುದು. ಒಂದು ವೇಳೆ ನೋಂದಾಯಿಸಿಕೊಳ್ಳದ ಅನಧೀಕೃತ ಮಕ್ಕಳ ಪಾಲನಾ ಸಂಸ್ಥೆಗಳ ವಿರುದ್ಧ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 20215 ರ ಸೆಕ್ಷನ್ 42 ರನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ: 2024 ರ ಲೋಕಸಭಾ ಲೋಕಸಭಾ ಚುನಾವಣೆಯ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಮತ್ತು ಮತದಾರರಲ್ಲಿ ನೈತಿಕ ಮತದಾನದ ಕುರಿತು ಶಿಕ್ಷಣ ಹಾಗೂ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ. ಸಾರ್ವಜನಿಕರಲ್ಲಿ ನೈಜ ಮತದಾನದ ಅರಿವು ಮತ್ತು ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಸ್ವೀಪ್ ಸಮಿತಿಯ ಪ್ರಮುಖ ಕರ್ತವ್ಯವಾಗಿದೆ. ಪ್ರಯುಕ್ತ ಸ್ವೀಪ್ ಚಟುವಟಿಕೆ ಕಾರ್ಯಕ್ರಮಗಳನ್ನು ವ್ಯವಸ್ಥಿಕವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸುವ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸ್ವೀಪ್ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ನೇಮಿಸಿದ್ದು, ಕಾರ್ಯ ಹಂಚಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. *ಅಧಿಕಾರಿಗಳು ಮತ್ತು ಕಾರ್ಯಹಂಚಿಕೆ:* ಜಿಲ್ಲಾ ಪಂಚಾಯತ್ನ ಯೋಜನಾ ನಿರ್ದೇಶಕರು, ಜಿಲ್ಲಾ ಸ್ವೀಪ್ ಸಮಿತಿಗೆ ಸದಸ್ಯ ಕಾರ್ಯದರ್ಶಿಗಳಾಗಿದ್ದು, ಜಿಲ್ಲೆಯಲ್ಲಿ ಸ್ವೀಪ್ ಕಾರ್ಯಕ್ರಮ ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸುವುದು. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು…
ನವದೆಹಲಿ: ಬಾಲಿವುಡ್ ನ ಜನಪ್ರಿಯ ನಾಯಕಿ ಕಂಗನಾ ರಣಾವತ್ ಈ ಬಾರಿ ಎಂಪಿ ಟಿಕೆಟ್ ಸಿಕ್ಕಿದೆ. ಕೊನೆಗೂ ಬಾಲಿವುಡ್ ಕ್ವೀನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೌದು, ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ರಣಾವತ್ ಕಣಕ್ಕಿಳಿಯುತ್ತಿದ್ದಾರೆ. ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, “ಪ್ರಧಾನಿ ಮೋದಿ ವಾರಣಾಸಿಯಿಂದ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅರುಣಾಚಲ ಪಶ್ಚಿಮದಿಂದ, ಬಿಜೆಪಿ ಸಂಸದ ಬಿಷ್ಣು ಪದಾ ರೇ ಅಂಡಮಾನ್ ಮತ್ತು ನಿಕೋಬಾರ್ ನಿಂದ, ಬಿಜೆಪಿ ಸಂಸದ ತಪಿರ್ ಗಾವೊ ಅರುಣಾಚಲ ಪೂರ್ವದಿಂದ, ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ದಿಬ್ರುಗಢದಿಂದ ಸ್ಪರ್ಧಿಸಲಿದ್ದಾರೆ” ಎಂದು ಹೇಳಿದರು. ಲೋಕಸಭಾ ಚುನಾವಣೆಗೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. https://kannadanewsnow.com/kannada/lok-sabha-elections-2024-bjp-releases-first-list-of-candidates/ https://kannadanewsnow.com/kannada/lok-sabha-elections-bjp-not-to-announce-tickets-for-karnataka-constituencies-in-first-list/ https://kannadanewsnow.com/kannada/state-govt-issues-guidelines-for-treatment-of-snakebite-cases-this-rule-is-mandatory/
ನವದೆಹಲಿ: ಲೋಕಸಭಾ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಪ್ರಕಟ ಮಾಡಲಾಗಿದೆ. ಇಂದು ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿದರು. ಹಾಗಾದ್ರೇ ಯಾರು ಎಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ. ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವ ಮೊದಲು ಆಡಳಿತ ಪಕ್ಷವು ಗಣನೀಯ ಸಂಖ್ಯೆಯ ಅಭ್ಯರ್ಥಿಗಳನ್ನು ಘೋಷಿಸಲು ಬಯಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ರಾತ್ರಿ ಸಭೆ ನಡೆಸಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿಎಂ ಮೋದಿ ಸೇರಿದಂತೆ ಪಾರ್ಟಿ ಸದಸ್ಯರು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಸಮಾಲೋಚನೆ ನಡೆಸಿದ್ದರು. ಅದಾದ ಬಳಿಕ ಇಂದು ಪಟ್ಟಿ ಬಿಡುಗಡೆಯಾಗಿದೆ. ಇತ್ತೀಚಿನ ದಿನಗಳಲ್ಲಿ, ರಾಜ್ಯದಲ್ಲಿ ಅಭಿಪ್ರಾಯ ಸಮೀಕ್ಷೆಯ ನಂತರ ಹೆಸರುಗಳು ಕೇಂದ್ರಕ್ಕೆ ಬಂದಿವೆ, ಅದರ ಬಗ್ಗೆ ಚರ್ಚೆಯ ನಂತರ, ಕಳೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 16…
ನವದೆಹಲಿ: ಲೋಕಸಭಾ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಪ್ರಕಟ ಮಾಡಲಾಗಿದೆ. ಇಂದು ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿದರು. ಹಾಗಾದ್ರೇ ಯಾರು ಎಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ. https://twitter.com/ANI/status/1763920215211974678? ಪ್ರತಿ ರಾಜ್ಯದಲ್ಲಿ ಎಷ್ಟು ಸ್ಥಾನಗಳು ಉತ್ತರ ಪ್ರದೇಶ: 51 ಸ್ಥಾನಗಳು ಪಶ್ಚಿಮ ಬಂಗಾಳ: 20 ಮಧ್ಯಪ್ರದೇಶ: 24 ಗುಜರಾತ್: 15 ರಾಜಸ್ಥಾನ: 15 ಕೇರಳ: 12 ತೆಲಂಗಾಣ: 9 ಅಸ್ಸಾಂ: 11 ಜಾರ್ಖಂಡ್: 11 ಛತ್ತೀಸ್ ಗಢ: 11 ದೆಹಲಿ: 5 ಜಮ್ಮು ಮತ್ತು ಕಾಶ್ಮೀರ: 2 ಉತ್ತರಾಖಂಡ: 3 ಅರುಣಾಚಲ ಪ್ರದೇಶ: 2 ಗೋವಾ: 1 ತ್ರಿಪುರಾ: 1 ಅಂಡಮಾನ್ ಮತ್ತು ನಿಕೋಬಾರ್: 1 ದಮನ್ ಮತ್ತು ದಿಯು: 1 ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.! ಗಾಂಧಿನಗರದಿಂದ ಅಮಿತ್ ಶಾ ಗುನಾದಿಂದ ಜ್ಯೋತಿರಾದಿತ್ಯ ಸಿಂಧಿಯಾ ತಿರುವನಂತಪುರಂನ ರಾಜೀವ್ ಚಂದ್ರಶೇಖರ್ ಸಿಂಗ್ಭುಮ್ನ ಗೀತಾ ಕೋಡಾ ದುರ್ಗ್…
ನವದೆಹಲಿ: ಲೋಕಸಭಾ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿಪ್ರಕಟ ಮಾಡಲಾಗಿದೆ. ಇಂದು ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿದರು. ಇನ್ನೂ ಈ ಬಾರಿ ಕೂಡ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂಧ್ರ ಮೋದಿಯವರು ವಾರಣಾಸಿಯಿಂದ ಸ್ಪರ್ಧೆ ಮಾಡಲಾಗಿದ್ದಾರೆ. ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವ ಮೊದಲು ಆಡಳಿತ ಪಕ್ಷವು ಗಣನೀಯ ಸಂಖ್ಯೆಯ ಅಭ್ಯರ್ಥಿಗಳನ್ನು ಘೋಷಿಸಲು ಬಯಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ರಾತ್ರಿ ಸಭೆ ನಡೆಸಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿಎಂ ಮೋದಿ ಸೇರಿದಂತೆ ಪಾರ್ಟಿ ಸದಸ್ಯರು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಸಮಾಲೋಚನೆ ನಡೆಸಿದ್ದರು. ಅದಾದ ಬಳಿಕ ಇಂದು ಪಟ್ಟಿ ಬಿಡುಗಡೆಯಾಗಿದೆ.