Subscribe to Updates
Get the latest creative news from FooBar about art, design and business.
Author: kannadanewsnow07
ಕೆಎನ್ಎನ್ಡಿಜಿಟಲ್ಡೆಸ್ಕ್: ಗರ್ಭಿಣಿಯರು ತಮ್ಮ ಆರೋಗ್ಯವನ್ನು ತುಂಬಾ ನಾಜೂಕಾಗಿ ಇಟ್ಟುಕೊಳ್ಳಬೇಕು. ಕೆಲವೊಂದು ಆಹಾರಗಳನ್ನು ಸೇವಿಸಲೇಬಾರದು, ಇನ್ನು ಕೆಲ ಆಹಾರಗಳನ್ನು ಅವರು ಸೇವಿಸಲೇಬೇಕು. ಜ್ಯೂಸ್ಗಳ ವಿಷಯಕ್ಕೆ ಬಂದರೆ ಗರ್ಭಿಣಿಯರು ಸೇವಿಸಲೇಬೇಕಾದ ಜ್ಯೂಸ್ಗಳಾವವು ಹಾಗು ಅದರಿಂದ ಏನು ಪ್ರಯೋಜನ ಎಂದು ತಿಳಿದುಕೊಳ್ಳೋಣ. ಬೀಟ್ರೂಟ್ ಜ್ಯೂಸ್: ಇದರಲ್ಲಿ ವಿಟಮಿನ್ ಎ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇದು ಗರ್ಭಿಣಿಯರಿಗೆ ಬಳಲಿಕೆ ಸುಸ್ತು ಕಡಿಮೆ ಮಾಡುತ್ತದೆ ಹಾಗು ದೇಹಕ್ಕೆ ನಿಶ್ಯಕ್ತಿ ಉಂಟಾದರೆ ಅದನ್ನು ಕಡಿಮೆ ಮಾಡಿ ದೇಹಕ್ಕೆ ಶಕ್ತಿ ನೀಡುತ್ತದೆ. ದಾಳಿಂಬೆ ಜ್ಯೂಸ್: ಇದರಲ್ಲಿ ಹೆಚ್ಚಿನ ನಾರಿನಾಂಶ ಹಾಗು ವಿಟಮಿನ್ ಸಿ ಮತ್ತು ಕೆ ಇರುತ್ತದೆ. ಇದು ದೇಹವು ಹೆಚ್ಚಿನ ಪ್ರಮಾಣದ ಕಬ್ಬಿನಾಂಶವನ್ನು ಹೀರಿಕೊಳ್ಳಲು ನೆರವಾಗುತ್ತದೆ. ಇದು ದೇಹವನ್ನು ನಿರ್ಜಲೀಕರಣ ಆಗದಂತೆ ನೋಡಿಕೊಳ್ಳುತ್ತದೆ. ಹಾಗು ದಾಳಿಂಬೆ ಜ್ಯೂಸ್ ಮಲಬದ್ಧತೆಯನ್ನೂ ನಿವಾರಿಸುತ್ತದೆ. ಸ್ಟ್ರಾಬೆರಿ ಜ್ಯೂಸ್: ಗರ್ಭಿಣಿಯರು ಈ ಜ್ಯೂಸ್ ಅನ್ನು ನಿಯಮಿತವಾಗಿ ಸೇವಿಸಿದರೆ ದೇಹದ ಪ್ರತಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್ಗಳು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಹಾಗು ಇದರಲ್ಲಿರುವ ಫಾಲಟೆ ಅಂಶವು…
ನವದೆಹಲಿ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ವಿರುದ್ಧ ಕಾಂಗ್ರೆಸ್ ಶಾಸಕರು ಬಂಡಾಯ ಎದ್ದ ನಂತರ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಮತ್ತು ಸಚಿವ ವಿಕ್ರಮಾದಿತ್ಯ ಸಿಂಗ್ ಹಿಮಾಚಲ ಪ್ರದೇಶ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪುತ್ರ ಅವರು ಪಕ್ಷವನ್ನು ತೊರೆಯುವುದಿಲ್ಲ ಆದರೆ ಈಗ ಎಲ್ಲವೂ ಕಾಂಗ್ರೆಸ್ ಹೈಕಮಾಂಡ್ ನ್ಯಾಯಾಲಯದಲ್ಲಿದೆ ಎಂದು ಹೇಳಿದರು. ಪಕ್ಷದ ಆರು ಶಾಸಕರು ಅಡ್ಡ ಮತದಾನದಲ್ಲಿ ತೊಡಗಿದ್ದರಿಂದ ಪಕ್ಷದ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿಗೆ ಕಾರಣವಾದ ನಂತರ ರಾಜ್ಯದ ಕಾಂಗ್ರೆಸ್ ಸರ್ಕಾರವು ದೊಡ್ಡ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ತಲಾ 34…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಯಾವುದೇ ಒಬ್ಬ ಮನುಷ್ಯನಿಗೆ ರಾತ್ರಿ ಮಲಗಿದ್ದಾಗ ಕನಸು ಬೀಳುತ್ತದೆ. ಕೆಲವು ಬಾರಿ ಒಳ್ಳೆ ಕನಸನ್ನು ಕಾಣಬಹುದು ಮತ್ತು ಕೆಲವೊಮ್ಮೆ ಕೆಟ್ಟ ಕನಸುಗಳನ್ನು ಕಾಣಬಹುದು. ಕನಸಿನಲ್ಲಿ ಎಲ್ಲಿಗೆ ಬೇಕಾದರೂ ಹೋಗಿ ಬರಬಹುದು. ಒಂದು ವೇಳೆ ಕನಸಿನಲ್ಲಿ ದೇವರು ಕಂಡರೆ ದೇವರಿಗೆ ನೀವು ಹತ್ತಿರ ಆಗುತ್ತಿದ್ದೀರಿ ಮತ್ತು ದೇವರು ನಿಮ್ಮನ್ನು ಜಾಸ್ತಿ ಇಷ್ಟ ಪಡುತ್ತಿದ್ದಾನೆ ಎನ್ನುವುದು ಅರ್ಥ.ಕೆಲವೊಂದು ಸರಿ ಕನಸಿನಲ್ಲಿ ದೇವರು ಬೇರೆ ಬೇರೆ ರೀತಿ ಕಾಣಿಸುತ್ತಾನೆ. ಅಂತಹ ಸಮಯದಲ್ಲಿ ದೇವರು ಬೇರೆ ಬೇರೆ ಸೂಚನೆಗಳು ಸಿಗುತ್ತಾ ಹೋಗುತ್ತದೆ. ನೀವು ಮಾಡುವ ಕೆಲಸದಲ್ಲಿ ನಿಮಗೆ ತಳ ಮಳ ಆಗುತ್ತಿದ್ದಾರೆ ಇಂತಹ ಸಮಯದಲ್ಲಿ ದೇವರು ಕನಸಿನಲ್ಲಿ ಕಂಡರೆ ನಿಮ್ಮ ಕೆಲಸಗಳು ನಿರ್ವಿಘ್ನವಾಗಿ ನಡೆಯುತ್ತದೆ.ನಿಮ್ಮ ಮನೋ ಬಲವನ್ನು ಹೆಚ್ಚು ಮಾಡುವುದಕ್ಕೆ ಮತ್ತು ಕಾನ್ಫಿಡೆನ್ಸ್ ಅನ್ನು ಬೂಸ್ಟ್ ಮಾಡುವುದಕ್ಕೆ ದೇವರು ಕನಸಿನಲ್ಲಿ ಬಂದು ನಿಮಗೆ ಸೂಚನೆಗಳನ್ನು ಕೊಡುತ್ತಾನೆ. ಆಧ್ಯಾತ್ಮಿಕ…
ಕೆಎನ್ಎನ್ಸಿನಿಮಾಡೆಸ್ಕ್: ಶಭ್ಬಾಷ್ ಸಿನಿಮಾವು ತನ್ನ ಎರಡನೇ ಹಂತದ ಚಿತ್ರೀಕರಣ ಮುಕ್ತವಾಗಿದ್ದು, ಇದರ ಬಗ್ಗೆ ಚಿತ್ರತಂಡ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಮುಕ್ತಾಯ ಮಾಡಿದೆ. ಈ ನಡುವೆ , ಆರು ದಿನಗಳ ಕಾಲ ಮಡಿಕೇರಿ ಭಾಗದಲ್ಲಿಯೇ ಚಿತ್ರತಂಡ ಬೀಡುಬಿಟ್ಟಿತ್ತು. ಡ್ಯಾನ್ಸರ್ ಗಳು ಸೇರಿದಂತೆ ಇಡೀ ಚಿತ್ರತಂಡವೇ ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿತ್ತು. ಇದಲ್ಲದೇ ಈ ಭಾಗದ ಟಾಟ ಟೀ ಎಸ್ಟೇಟ್, ಬೆಟ್ಟಗುಡ್ಡ, ಜಲಪಾತ ಮುಂತಾದೆಡೆಗಳಲ್ಲಿ ಬಹುಮುಖ್ಯ ಭಾಗಗಳನ್ನು ಸೆರೆಹಿಡಿಯಲಾಗಿದೆ. ದುರ್ಗಮವಾದ ಪ್ರದೇಶಗಳಲ್ಲಿ ಸಿನಿಮಾ ತಂಡ ಇತ್ತು. ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಮುಗಿಸಿರುವುದು ಚಿತ್ರತಂಡದ ತನ್ನ ಸಂತಸವನ್ನು ಹಂಚಿಕೊಂಡಿದೆ. ಈ ನಡುವೆ ವಿಶೇಷವಾಗಿ, ಎರಡು ಹಾಡುಗಳನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಗಿದೆ. ಇಲ್ಲಿ ವಾಸವಾಗಿರುವ ಜೇನುಕುರುಬರ ಹಾಡಿಗಳಿಗೆ ಭೇಟಿ ನೀಡಿದ್ದ ಚಿತ್ರತಂಡ, ಆ ಬುಡಕಟ್ಟು ಜನಾಂಗದ ಹಾಡೊಂದನ್ನು ಚಿತ್ರೀಕರಿಸಿಕೊಂಡಿದೆ. ಅದಕ್ಕೆ ಸಾಹಿತ್ಯ, ಸಂಗೀತವೆಲ್ಲ…
ನವದೆಹಲಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2024 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ದಿನಾಂಕ 01-01-2025 ರಂತೆ 111/2 ವರ್ಷದಿಂದ 13 ವರ್ಷದೊಳಗಿರುವ ಅಂದರೆ (ದಿನಾಂಕ 02-01-2012 ರಿಂದ 01-07-2013 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಈ ಪರೀಕ್ಷೆಗೆ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಸರ್ವ ರೀತಿಯ ವಿದ್ಯಾಭ್ಯಾಸ, ತರಬೇತಿ ನೀಡುವುದಾಗಿದೆ. ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ. 1,07,500/-ಗಳು (ಸಾಮಾನ್ಯ ವರ್ಗ) ಹಾಗೂ ರೂ. 93,900/- (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ) ಗಳಾಗಿರುತ್ತದೆ. ಇದು ಕಾಲಕಾಲಕ್ಕೆ ಹೆಚ್ಚಾಗಬಹುದು.…
ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ರಾಜ್ಯದ ಏಕೈಕ ರಾಜ್ಯಸಭಾ ಸ್ಥಾನವನ್ನು ಗೆದ್ದಿದೆ. ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿದ್ದಾರೆ. ಪಂದ್ಯವು 34-34ರಲ್ಲಿ ಸಮಬಲಗೊಂಡಿತ್ತು ಆದರೆ ಮಹಾಜನ್ ಅವರನ್ನು ಡ್ರಾ ಮೂಲಕ ವಿಜೇತರೆಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 68 ಸದಸ್ಯರ ವಿಧಾನಸಭೆಯಲ್ಲಿ 40 ಶಾಸಕರನ್ನು ಹೊಂದಿರುವ ಕಾಂಗ್ರೆಸ್ಗೆ ಇ ದು ದೊಡ್ಡ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಬಿಜೆಪಿ 25 ಶಾಸಕರನ್ನು ಹೊಂದಿದ್ದು, ಮೂವರು ಶಾಸಕರು ಸ್ವತಂತ್ರರಾಗಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದ 15 ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತ್ತು ಮಾಡಿದ್ದಾರೆ.
ಕೆಎನ್ಎನ್ಡಿಜಿಟಲ್ಡೆಸ್ಕ್: ಮಲಬದ್ಧತೆಗೆ ಕಾರಣಗಳು ಅನೇಕ. ಈ ಸಮಸ್ಯೆ ಎದುರಿಸುತ್ತಿರುವವರು ಹೊಟ್ಟೆ ಉಬಾರ. ಎತ್ತೇಚ್ಛವಾಗಿ ಗ್ಯಾಸ್ ರಿಲೀಸ್ ಆಗುವುದು. ಅನಿಯಮಿತ ಕರುಳಿನ ಚಲನೆ ಈ ಎಲ್ಲ ಅನಾರೋಗ್ಯ ಕಾಡುತ್ತಿರುತ್ತದೆ. ಇದಕ್ಕೆ ಮುಖ್ಯ ಕಾರಣ ನಮ್ಮ ಊಟದ ವ್ಯವಸ್ಥೆ. ನಮ್ಮ ಆಹಾರದ ಪದ್ಧತಿಯಲ್ಲಿ ಕೆಲ ಬದಲಾವಣೆ ಅಥವಾ ಕೆಲ ಆಹಾರಗಳನ್ನು ಸೇವಿಸುವುದನ್ನು ಬಿಟ್ಟರೆ ಈ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು. ಚಾಕೋಲೇಟ್: ಚಾಕೋಲೇಟ್ ಮಲಬದ್ಧತೆಯನ್ನು ಹೆಚ್ಚಿಸುತ್ತದೆ. ಹಾಲಿನ ಚಾಕೋಲೇಟ್ನಲ್ಲಿ ಅಪಾರ ಪ್ರಮಾಣದಲ್ಲಿ ಕೊಬ್ಬು ಇದ್ದು, ಇದು ಆಹಾರ ಚಲನೆಯನ್ನು ನಿಧಾನಗೊಳಿಸುತ್ತದೆ. ಇದರಿಂದ ಮಲಬದ್ಧತೆ ಉಂಟಾಗುತ್ತದೆ. ಬಾಳೆ ಕಾಯಿ: ಮಾಗದ ಬಾಳೆ ಹಣ್ಣು ತಿಂದರೆ ಹೊಟ್ಟೆಯ ಆರೋಗ್ಯ ಹಾಳಾಗುತ್ತದೆ. ಬಾಳೆ ಹಣ್ಣಿನಲ್ಲಿ ಅನೇಕ ಪೋಷಕಾಂಶಗಳಿವೆ ನಿಜ, ಆದರೆ ಮಾಗದ ಬಾಳೆ ಹಣ್ಣು ಸೇವನೆ ಮಲಬದ್ಧತೆ ಉಂಟು ಮಾಡುತ್ತದೆ. ರಾ ಬನಾನಾದಲ್ಲಿನ ಹೆಚ್ಚಿನ ಪ್ರಮಾಣದ ನಾರಿನಾಂಶ ದೇಹದ ಜೀರ್ಣಕ್ರಿಯೆಯನ್ನು ಹದಗೆಡಿಸುತ್ತದೆ. ಹಾಗಾಗಿ ಮಲಬದ್ಧತೆ ಇದ್ದವರು ಹಸಿರು ಬಾಳೆ ಹಣ್ಣನ್ನು ಸೇವಿಸಬೇಡಿ. ಸಂಸ್ಕರಿತ ಆಹಾರ: ಇಂದಿನ ವೇಗದ ಜೀವನಶೈಲಿಯಲ್ಲಿ ಸಂಸ್ಕರಿತ…
ಕೆಎನ್ಎನ್ಡಿಜಿಟಲ್ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಮಾನಸಿ ಒತ್ತಡ ಅಂದರೆ ಮೆಂಟಲ್ ಸ್ಟ್ರೆಸ್ ಸಹಜವಾಗಿಬಿಟ್ಟಿದೆ. ಕೆಲಸ ಕುಟುಂಬ ಹೀಗೆ ನಾನಾ ಕಾರಣಗಳಿಂದ ಹೆಚ್ಚು ಜನ ಹೀಗೆ ಒತ್ತಡಕ್ಕೆ ಸಿಲುಕಿದ್ದಾರೆ. ಮಾನಸಿಕ ಒತ್ತಡವನ್ನು ನಿರ್ಲಕ್ಷಿಸಿದರೆ ಮುಂದೆ ಅದು ಖನ್ನತೆಗೆ ತಿರುಗಿ ದೊಡ್ಡ ಅಪಾಯವನ್ನು ಉಂಟು ಮಾಡುವ ಸಾಧ್ಯತೆ ಇರುತ್ತದೆ ಎಚ್ಚರ. ಹಾಗಾಗಿ ಒತ್ತಡ ನಿವಾರಣೆ ಮಾಡಿಕೊಳ್ಳಲು ಕೆಲ ಆಹಾರಗಳನ್ನು ನಿಯಮಿತವಾಗಿ ಸೇವಿಸಿದರೆ ಅಂತಹ ಅಪಾಯಗಳಿಂದ ದೂರವಿರಬಹುದು ಎಂದು ಮಾನಸಿಕ ತಜ್ಞರು ಸಲಹೆ ನೀಡುತ್ತಾರೆ. ಈ ಕೆಳಗಿನ ಆಹಾರಗಳನ್ನು ಸ್ವಲ್ಪ ಸ್ವಲ್ಪ ದಿನವೂ ಸೇವಿಸುವುದರಿಂದ ಒತ್ತಡದಿಂದ ದೂರವಿರಬಹುದು. ಡಾರ್ಕ್ ಚಾಕೋಲೆಟ್; ಡಾರ್ಕ್ ಚಾಕೋಲೆಟ್ ಒತ್ತಡ ನಿವಾರಣೆ ಮಾಡುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ. ಡಾರ್ಕ್ ಚಾಕೋಲೆಟ್ನಲ್ಲಿರುವ ಪ್ಲೆವನಾಯ್ಡ್ಗಳು ಒತ್ತಡವನ್ನು ಕಡಿಮೆ ಮಾಡುತ್ತವೆ. ಇದು ಒತ್ತಡ ಉಂಟು ಮಾಡುವ ಕಾರ್ಟಿಸೋಲ್ ಹಾರ್ಮೋನ್ಗಳನ್ನು ನಿಯಂತ್ರಿಸುತ್ತದೆ. ಹಾಗಾಗಿ ನಿಯಮಿತವಾಗಿ ಡಾರ್ಕ್ ಚಾಕೋಲೆಟ್ ಸೇವಿಸಿ ಒತ್ತಡ ನಿವಾರಿಸಿಕೊಳ್ಳಿ. ನೆನಪಿಡಿ ನೀವು ಸೇವಿಸುವ ಡಾರ್ಕ್ ಚಾಕೋಲೆಟ್ ಕೆಮಿಕಲ್ ಫ್ರೀ ಆಗಿರಲಿ ಹಾಗು ಆದಷ್ಟು ಹೋಮ್ ಮೇಡ್ ಡಾರ್ಕ್…
ಕೆಎನ್ಎನ್ಡಿಜಿಟಲ್ಡೆಸ್ಕ್: ಬೆಳ್ಳಿ ಪಾತ್ರೆಗಳು ಕೆಲವೊಮ್ಮೆ ಉಪಯೋಗಿಸದೇ ಇದ್ದರೂ ಇಟ್ಟಲ್ಲಿಯೇ ಇಟ್ಟು ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಇನ್ನು ಪೂಜೆಗಳಿಗೆ ಬಳಸಿದ, ದೀಪ ಹಚ್ಚಲು ಬೆಳ್ಳಿ ಆಭರಣಗಳ ಸಂರಕ್ಷಣೆ ಅಷ್ಟು ಸುಲಭವಾದ ಕೆಲಸವಲ್ಲ. ಎಣ್ಣೆ, ತುಪ್ಪದ ಜಿಡ್ಡು ಬೆಳ್ಳಿ ದೀಪಗಳಿಗೆ ಅಂಟಿಕೊಂಡುಬಿಡುತ್ತದೆ. ಇಂತಹ ಕಠಿಣ ಕಲೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಪೌಡರ್, ಸೋಪ್ಗಳಿವೆ. ಇವೆಲ್ಲಾ ರಾಸಾಯನಿಕಯುಕ್ತವಾಗಿರುತ್ತವೆ. ಇಂತಹ ರಾಸಾಯನಿಕಯುಕ್ತ ಪೌಡರ್ಗಳು ಬೆಳ್ಳಿಯ ಪಾತ್ರೆಗಳಿಗೆ ಕೆಲವೊಮ್ಮೆ ಹಾನಿಯುಂಟು ಮಾಡಬಹುದು. ಹಾಗಾಗಿ ಮನೆಯಲ್ಲಿಯೇ ಸಿಗುವ ಕೆಲ ಪದಾರ್ಥಗಳಿಂದ ಬೆಳ್ಳಿ ಪಾತ್ರೆಗಳನ್ನು ಹೆಚ್ಚು ಶ್ರಮವಿಲ್ಲದೇ ಸರಳವಾಗಿ ಶುಚಿಗೊಳಿಸಬಹುದು. ಕೆಲವೊಬ್ಬರು ನಿತ್ಯವೂ ಬೆಳ್ಳಿ ಪಾತ್ರೆಗಳನ್ನು ತೊಳೆಯುತ್ತಾರೆ. ನಿತ್ಯವೂ ಬೆಳ್ಳಿ ಪಾತ್ರೆ ತೊಳೆಯುತ್ತಿದ್ದರೆ, ನಿಂಬೆ ರಸಕ್ಕೆ ಅರ್ಧ ಚಮಚ ಉಪ್ಪು ಹಾಕಿ ಅದಕ್ಕೆ ಸ್ವಲ್ಪ ನೀರು ಬೆರಸಿ ಇವೆಲ್ಲವನ್ನೂ ಮಿಶ್ರಣ ಮಾಡಿ ಮೃದುವಾದ ಬ್ರೇಷ್ನಿಂದ ಬೆಳ್ಳಿ ಪಾತ್ರೆಗಳನ್ನು ಉಜ್ಜಿ ತೊಳೆಯಿರಿ. ಇದರಿಂದ ನೈಸರ್ಗಿಕವಾಗಿ ಬೆಳ್ಳಿ ಪಾತ್ರೆಗಳು ಶುಚಿಯಾಗಿ ಹೊಳೆಯುತ್ತವೆ. ದೀಪದ ಬೆಳ್ಳಿ ಪಾತ್ರೆಗಳ ಜಿಡ್ಡನ್ನು ತೆಗೆಯಲು ಟಮೆಟೋ ಕೆಚಪ್ ತುಂಬಾ ಉತ್ತಮವಾದ…