Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದ ಮಧ್ಯೆ, ಜನರು ತಮ್ಮ ದೇಹಕ್ಕೆ ಹೊಸದಾಗಿ ರೂಪುಗೊಂಡ ಲಸಿಕೆಯನ್ನು ಅಸಹ್ಯ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ತ್ವರಿತವಾಗಿ ಅಭಿವೃದ್ಧಿಪಡಿಸಲಾಯಿತು. ಬೇರೆ ಯಾವುದೇ ಪರ್ಯಾಯಗಳು ಗೋಚರಿಸದ ಕಾರಣ ಮತ್ತು ವಿಶ್ವಾದ್ಯಂತ ವೈದ್ಯರು ಮತ್ತು ವಿಜ್ಞಾನಿಗಳು ಕೋವಿಡ್ ಲಸಿಕೆಗಳನ್ನು ತಯಾರಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಮಾರಣಾಂತಿಕ ಫಲಿತಾಂಶಗಳು ಅಥವಾ ದೀರ್ಘಕಾಲದ ಕೋವಿಡ್ ರೋಗಲಕ್ಷಣಗಳ ವಿರುದ್ಧ ಅಂತಿಮ ಗುರಾಣಿಯಾಗಿ ಲಸಿಕೆ ತೆಗೆದುಕೊಳ್ಳುವಂತೆ ಪ್ರತಿಯೊಬ್ಬರನ್ನು ಒತ್ತಾಯಿಸುತ್ತಿದ್ದಾರೆ, ವಿಶ್ವದ ಜನಸಂಖ್ಯೆಯ ದೊಡ್ಡ ಭಾಗವು ತಮ್ಮ ತೋಳುಗಳನ್ನು ತಿರುಗಿಸಿ ರೋಗನಿರೋಧಕ ಶಕ್ತಿಯನ್ನು ಪಡೆದುಕೊಂಡಿದೆ. ಒಮ್ಮೆ ಅಲ್ಲ, ಎರಡು ಬಾರಿ, ನಂತರ ಬೂಸ್ಟರ್ ಶಾಟ್ ಬಂದಿತು. ಈ ನಡುವೆ ಓ ಡೋಸ್ಗಳನ್ನು ಸಾಂಕ್ರಾಮಿಕ ಯೋಧರು ಎಂದು ಶ್ಲಾಘಿಸಲಾಗಿದ್ದರೂ, ಜನರು ಲಸಿಕೆಗೆ ಪ್ರಶ್ನೆಗಳೊಂದಿಗೆ ಚುಚ್ಚುತ್ತಲೇ ಇದ್ದರು. ಈಗ, ಅತಿದೊಡ್ಡ ಜಾಗತಿಕ ಲಸಿಕೆ ಸುರಕ್ಷತಾ ಅಧ್ಯಯನದಲ್ಲಿ, ಕೋವಿಡ್ ಲಸಿಕೆ ನರಮಂಡಲದಲ್ಲಿನ ಕೆಲವು ಪ್ರತಿಕ್ರಿಯೆಗಳು, ರಕ್ತದ ಸಮಸ್ಯೆಗಳು ಮತ್ತು ಹೃದಯದ ಪರಿಸ್ಥಿತಿಗಳೊಂದಿಗೆ ಸಣ್ಣ ಸಂಪರ್ಕವನ್ನು ಹೊಂದಿದೆ ಎಂದು ತಿಳಿದುಬಂದಿದೆ. ಸಾಂಕ್ರಾಮಿಕ ಸಮಯದಲ್ಲಿ ಕೆಲವು…
ಬೆಂಗಳೂರು: ಏನಿಲ್ಲ..ಏನಿಲ್ಲ…ಹಾಡಿ ಸದನದಲ್ಲಿ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರು ಹೇಳಿ ಎಲ್ಲರ ಗಮನ ಸೆಳೆದರು. ಇಂದು ಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕ ಸುನೀಲ್ ಅವರಿಗೆ ಉತ್ತರಿಸುತ್ತ ಬಜೆಟ್ನಲ್ಲಿ ಏನಿಲ್ಲ ಅಂತ ಹೇಳಿದ ಸುನೀಲ್ ಅವರಿಗೆ ತಿವಿದರು. ಇದೇ ವೇಳೇ ಸುನೀಲ್ ಅವರು ಸಿಎಂ ಅವರೇ ನಾವು ಗ್ಯಾರಂಟಿ ಯೋಜನೆಗಳನ್ನು ನಾವು ವಿರೋಧಿ ಮಾಡಿಲ್ಲ, ಆದರೆ ನಾವು ಅಂಕಿ ಅಂಶಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದೇವೆ ಅಂತ ಹೇಳಿದರು. https://kannadanewsnow.com/kannada/govt-hospital-dinesh/ https://kannadanewsnow.com/kannada/breaking-sslc-and-puc-exam-final-schedule-announced-on-which-day-heres-whats-the-matter/
ಬೆಂಗಳೂರು: ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ BE/B.Tech ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು. (ಸೂಚನೆ: ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.) ಪ್ರಥಮ ದರ್ಜೆ ಲೆಕ್ಕ ಸಹಾಯಕರು: ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು. ಪಿಂಚಣಿ ಸೌಲಭ್ಯ: ಸರ್ಕಾರದ ಆದೇಶ ಸಂಖ್ಯೆ: ಎಫ್ ಡಿ (ಎಸ್…
ಬೆಂಗಳೂರು: ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಆರ್.ಅಶೋಕ್ ಅವರು ಸದನದಲ್ಲಿ ಪ್ರಸ್ತಾಪಿಸಿದ ಮಾತಿಗೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ತಮ್ಮ ಅವಧಿಯ ಸಾಧನೆಗಳನ್ನು ಬಿಚ್ಚಿಟ್ಟರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ ವಿವರಿಸಿದರು. ಬಿಜೆಪಿಯವರು ಎಂದಾದರೂ ಜಿಲ್ಲೆ, ತಾಲ್ಲೂಕುಗಳಲ್ಲಿರುವ ಹಿಂದುಳಿದ ವರ್ಗಗಳ, ಎಸ್ ಸಿ, ಎಸ್ ಟಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿದ್ದಾರಾ? ಈ ಸಮುದಾಯದ ವಿದ್ಯಾರ್ಥಿಗಳ ಕಷ್ಟಗಳನ್ನು ಕೇಳಿದ್ದಾರಾ? ಅವರ ಸಂಕಷ್ಟಗಳಿಗೆ ಸ್ಪಂದಿಸಿದ್ದಾರಾ? ಎಂದು ಪ್ರಶ್ನಿಸಿ ತಾವು ಸಿಎಂ ಆದಾಗಿನ ಮತ್ತು ಬಿಜೆಪಿ ಅವಧಿಯಲ್ಲಿ ಹಿಂದುಳಿದ ಸಮುದಾಯಗಳ ಏಳಿಗೆಗೆ ಬಿಡುಗಡೆ ಮಾಡಲಾದ ಹಣ, ಅನುದಾನದ ಅಂಕಿ ಅಂಶಗಳನ್ನು ಸದನದ ಮುಂದೆ ಬಿಚ್ಚಿಟ್ಟರು. 2013 ರಿಂದ 2018 ರವರೆಗೆ ಪ್ರತೀ ವರ್ಷ ವಸತಿ ನಿಲಯಗಳ ಭೋಜನಾ ವೆಚ್ಚವನ್ನು ಹೆಚ್ಚಿಸಲಾಗಿದೆ. 2014 ರಲ್ಲಿ ಮೆಟ್ರಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿಗಳ ಭೋಜನಾ ವೆಚ್ಚ ತಲಾ 750 ರಿಂದ 900ಕ್ಕೆ ಹೆಚ್ಚಿಸಿದ್ದು, ಮೆಟ್ರಿಕ್ ನಂತರದ ಭೋಜನಾ ವೆಚ್ಚ…
ಬೆಂಗಳೂರು: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದರು. ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ರಾಜ್ಯಕ್ಕೆ 77 ಸಾವಿರ ಕೋಟಿ ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ , ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರದ ಕಡಿಮೆ ಅವಧಿಯಲ್ಲೇ ಇಷ್ಟೊಂದು ಪ್ರಮಾಣದ ಹೂಡಿಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ವಿವರಿಸಿದರು.…
ಬೆಂಗಳೂರು: ಪಿಯುಸಿ ಪರೀಕ್ಷೆಯು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಯಲಿದೆ. SSLC ಪರೀಕ್ಷೆಯು ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. https://kannadanewsnow.com/kannada/big-news-state-govt-plans-probe-into-works-at-jayadeva-hospital/ https://kannadanewsnow.com/kannada/breaking-2018-rahul/ ಅಂದ ಹಾಗೇ ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಒಳಗೊಂಡಿದೆ ಆಂತ ತಿಳಿಸಿದರು . 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ 04-03-2024 ಸೋಮವಾರ ಗಣಿತ ಪರೀಕ್ಷೆ 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ 09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ…
ನವದೆಹಲಿ: ಮಗಳು ಉತ್ತಮ ಆರ್ಥಿಕ ಸ್ಥಿತಿಯನ್ನು ಹೊಂದಿದ್ದಾಳೆ ಎಂಬ ಕಾರಣಕ್ಕಾಗಿ, ಅವಳ ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಹಕ್ಕು ಸಾಧಿಸಲು ಸ್ವಯಂಚಾಲಿತವಾಗಿ ನಿರಾಕರಿಸಲಾಗುವುದಿಲ್ಲ ಎಂದು ತೆಲಂಗಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. https://kannadanewsnow.com/kannada/breaking-2018-rahul/ https://kannadanewsnow.com/kannada/big-news-state-govt-plans-probe-into-works-at-jayadeva-hospital/ ನ್ಯಾಯಮೂರ್ತಿ ಎಂ.ಜಿ.ಪ್ರಿಯದರ್ಶಿನಿ ಅವರು ತಮ್ಮ ಸಹೋದರಿಯ ಪರವಾಗಿ ವಿಭಜನೆ ಮೊಕದ್ದಮೆ ತೀರ್ಪು ನೀಡಿದ ನಂತರ ಅವರ ಸಹೋದರನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ. ಉತ್ತಮ ಆರ್ಥಿಕ ಸ್ಥಿತಿಯ ಕಾರಣದಿಂದಾಗಿ ತನ್ನ ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಪಾಲನ್ನು ಪಡೆಯಲು ಅನುಮತಿಸಲಾಗುವುದಿಲ್ಲ ಎಂದು ಹೇಳಲಾಗಿದೆ. ವಿಚಾರಣಾ ನ್ಯಾಯಾಲಯವು ಆಪಾದಿತ ವಿಲ್ ಅನ್ನು ನಂಬಲಿಲ್ಲ ಮತ್ತು ಸಹೋದರಿಯ ಪರವಾಗಿ ಮೊಕದ್ದಮೆಯನ್ನು ಘೋಷಿಸಿತು. ಸಹೋದರ (ಮೇಲ್ಮನವಿದಾರ) ನ್ಯಾಯಾಲಯಕ್ಕೆ ಹಾಜರುಪಡಿಸಿದ ವಿಲ್ ಡೀಡ್ನಲ್ಲಿ, ಸಹೋದರಿ “ಉತ್ತಮ ಆರ್ಥಿಕ ಸ್ಥಿತಿ” ಹೊಂದಿರುವುದರಿಂದ, ತನ್ನ ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಯಾವುದೇ ಪಾಲನ್ನು ಪಡೆಯಲು ಅವಳು ಅರ್ಹಳಲ್ಲ ಎಂದು ಉಲ್ಲೇಖಿಸಲಾಗಿದೆ. ವಾದಿ (ಸಹೋದರಿ) ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂಬ ಕಾರಣಕ್ಕಾಗಿ, ಸ್ವಯಾರ್ಜಿತ ಆಸ್ತಿಗಳಲ್ಲಿ ಪಾಲನ್ನು ಕೇಳುವ ಅವಳ ತಂದೆಯ…
ಹುಬ್ಬಳ್ಳಿ: ರಾಜ್ಯ ಪೊಲೀಸ್ ನೇಮಕಾತಿ ಪರೀಕ್ಷೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರಾಜ್ಯದೊಳಗೆ ಸಂಚರಿಸುವ ವಿವಿಧ ರೈಲುಗಳಲ್ಲಿ ಒಂದು ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕ ರೈಲ್ವೆ ವಲಯ ನಿರ್ಧರಿಸಿದೆ. ಮೈಸೂರು-ಬೆಳಗಾವಿ (17301) ಫೆ. 24ರಿಂದ 25ರವರೆಗೆ, ಬೆಳಗಾವಿ- ಮೈಸೂರು (17302), ಮೈಸೂರು- ಬಾಗಲಕೋಟ (17307) ಫೆ. 23 ರಿಂದ ಬಾಗಲಕೋಟೆ-ಮೈಸೂರು (17308) ಫೆ. 24ರಿಂದ 26, ಮೈಸೂರು-ತಾಳಗುಪ್ಪ ಫೆ. 23ರಿಂದ 25 ( 16227), ತಾಳಗುಪ್ಪ ಮೈಸೂರು (16228) ಫೆ. 24ರಿಂದ 26, ಈ ಎಲ್ಲ ರೈಲುಗಳಿಗೆ ನಿಗದಿತ ದಿನಾಂಕಗಳಂದು ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿ ಜೋಡಿಸಲಾಗುತ್ತಿದೆ. ಕೆಎಸ್ಆರ್ ಬೆಂಗಳೂರು-ಹುಬ್ಬಳ್ಳಿ (17391) ಫೆ. 25ರಿಂದ 27ರವರೆಗೆ ಹುಬ್ಬಳ್ಳಿ-ಕೆಎಸ್ಆ ಬೆಂಗಳೂರು (17392) ಫೆ. 22ರಿಂದ 25, ಕೆಎಸ್ಆರ್ ಬೆಂಗಳೂರು-ಹೊಸಪೇಟೆ (05243) ಫೆ. 23ರಿಂದ 25, ಹೊಸಪೇಟೆ-ಕೆಎಸ್ಆರ್ ಬೆಂಗಳೂರಿಗೆ ಫೆ.24ರಿಂದ 26, ಹೊಸಪೇಟೆ-ಹರಿಹರ (06245) ಫೆ. 23ರಿಂದ 25, ಹರಿಹರ-ಹೊಸಪೇಟೆ (06246) ಫೆ. 24ರಿಂದ 25, ಕೆಎಸ್ಆ ಬೆಂಗಳೂರು-ಮೀರಜ್ (16589) ಫೆ.…
ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ವಿಷಯಗಳಲ್ಲಿ ಖಾಲಿ ಇದ್ದ ಒಟ್ಟು 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸರ್ಕಾರದ ನೇಮಕಾತಿ ಹಾಗೂ ಮೀಸಲಾತಿ ನಿಯಮಗಳನ್ವಯ ದಿನಾಂಕ: 30-09-2021ರಂದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು. ಅದರಂತೆ ಸರ್ಕಾರದ ಸುತ್ತೋಲೆ ದಿನಾಂಕ: 06-06-2020 ರಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಪಾಲಿಸಬೇಕಾದ ವಿಧಿವಿಧಾನಗಳ ಬಗ್ಗೆ ತಿಳಿಸಲಾಗಿರುತ್ತದೆ. ಸದರಿ ಸುತ್ತೋಲೆಯಲ್ಲಿ ಒಂದೇ ಅಧಿಸೂಚನೆ ಮೂಲಕ ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ ನೇರ…
ನವದೆಹಲಿ: ಹಲವಾರು ವರ್ಷಗಳಿಂದ ಚಲನಚಿತ್ರ ಉದ್ಯಮದಲ್ಲಿ ತಮ್ಮ ಅನೇಕ ಅದ್ಭುತ ಪಾತ್ರಗಳಿಂದ ಅಭಿಮಾನಿಗಳನ್ನು ಮೆಚ್ಚಿದ ರಿತುರಾಜ್ ಸಿಂಗ್ ಕಳೆದ ರಾತ್ರಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ನಟನಿಗೆ ಕೇವಲ 59 ವರ್ಷ ವಯಸ್ಸಾಗಿತ್ತು ಮತ್ತು ಅವರ ಮೇದೋಜ್ಜೀರಕ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಈ ಸುದ್ದಿ ಅವರ ಆಪ್ತರಿಗೆ ಮತ್ತು ಅಭಿಮಾನಿಗಳಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಮೇದೋಜ್ಜೀರಕ ಗ್ರಂಥಿಯ ಕಾಯಿಲೆಯಿಂದ ಬಳಲುತ್ತಿದ್ದ ನಟ ರಿತುರಾಜ್ ಇತ್ತೀಚೆಗೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ಹಠಾತ್ ನಿಧನಕ್ಕೆ ನೆಟ್ಟಿಗರು ಮತ್ತು ಆಪ್ತರು ಶೋಕ ವ್ಯಕ್ತಪಡಿಸಿದ್ದಾರೆ ಮತ್ತು ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅವರೊಂದಿಗೆ ಉತ್ತಮ ಸ್ನೇಹಿತರಾಗಿದ್ದ ಅಮಿತ್ ಬೆಹ್ಲ್ ಈ ಸುದ್ದಿಯನ್ನು ದೃಢಪಡಿಸಿದರು ಮತ್ತು ಅದರ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ.