Author: kannadanewsnow07

ನವದೆಹಲಿ: ಚುನಾವಣಾ ಬಾಂಡ್ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸರಣಿ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಗುರುವಾರ ಬೆಳಿಗ್ಗೆ 10:30 ಕ್ಕೆ ತೀರ್ಪು ನೀಡಲಿದೆ.  ಜನವರಿ 2018 ರಲ್ಲಿ ಪ್ರಾರಂಭಿಸಲಾದ ಚುನಾವಣಾ ಬಾಂಡ್ಗಳು ವ್ಯಕ್ತಿಗಳು ಅಥವಾ ಕಾರ್ಪೊರೇಟ್ ಘಟಕಗಳು ಬ್ಯಾಂಕಿನಿಂದ ಖರೀದಿಸಿ ರಾಜಕೀಯ ಪಕ್ಷಕ್ಕೆ ಬರಬಹುದಾದ ಹಣಕಾಸು ಸಾಧನಗಳಾಗಿವೆ. ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ತರುವ ಪ್ರಯತ್ನವಾಗಿ ದೇಶದ ರಾಜಕೀಯ ಪಕ್ಷಗಳಿಗೆ ನೀಡಿದ ನಗದು ದೇಣಿಗೆಗಳಿಗೆ ಪರ್ಯಾಯವಾಗಿ ಈ ಯೋಜನೆಯನ್ನು ರೂಪಿಸಲಾಯಿತು. https://kannadanewsnow.com/kannada/vijayapura-over-110-cattle-rescued-by-villagers-for-illegally-transporting-cows/ https://kannadanewsnow.com/kannada/cbse-board-exam-2023-today/

Read More

 ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯೋಜನೆ ‘ಯುವ ನಿಧಿ’ಗೆ ನೋಂದಣಿ ಈಗಾಗಲೇ ಶುರುವಾಗಿದೆ. ಈ ನಡುವೆ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವೀಧರರಾದವರಿಗೆ ಮಾಸಿಕ 3000 ರೂ., ಡಿಪ್ಲೊಮಾ ತೇರ್ಗಡೆಯಾದವರಿಗೆ 1500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ. ಫಲಾನುಭವಿಗಳು ಪ್ರತಿ ತಿಂಗಳ 25ರೊಳಗೆ ಸ್ವಯಂಘೋಷಣೆ ಮೂಲಕ ನಿರುದ್ಯೋಗ ಭತ್ಯೆ ಪಡೆಯಬಹುದು. ಸ್ವಂತ ಉದ್ಯೋಗ ಆರಂಭಿಸಿದರೆ, ಉದ್ಯೋಗ ಸಿಕ್ಕರೆ ಭತ್ಯೆ ಪಡೆಯುವಂತಿಲ್ಲ. ಐಟಿ- ಜಿಎಸ್‌ಟಿ ನೋಂದಣಿ, ಇಎಸ್‌ಐ- ಪಿಎಫ್‌ ಮಾಹಿತಿಯಿಂದಲೂ ಉದ್ಯೋಗ ಪಡೆದಿರುವ ಬಗ್ಗೆ ಮಾಹಿತಿ ಸಿಗಲಿದೆ. ಜತೆಗೆ ಶೇ.5ರಷ್ಟು ಭೌತಿಕ ಪರಿಶೀಲನೆಯೂ ನಡೆಯಲಿದೆ. ಅನರ್ಹರು ಪಡೆದರೆ ಅಷ್ಟು ಮೊತ್ತವನ್ನು ವಾಪಾಸ್‌ ಪಡೆಯುವ ಜತೆಗೆ ಕಾನೂನು ಕ್ರಮವೂ ಆಗಲಿದೆ. ಯಾರೆಲ್ಲಾ ಅರ್ಹರು:  ನಿರುದ್ಯೋಗ ಭತ್ಯೆ ಪಡೆಯಲು ಬಯಸುವವರು 2022-23ನೇ ಸಾಲಿನಲ್ಲಿ ಪದವಿ/ ಡಿಪ್ಲೊಮಾ ತೇರ್ಗಡೆಯಾಗಿರಬೇಕು. ಕರ್ನಾಟಕದಲ್ಲಿಕನಿಷ್ಠ 6 ವರ್ಷದವರೆಗೆ ಪದವಿ/ ಡಿಪ್ಲೊಮಾ ವ್ಯಾಸಂಗದ ಅವಧಿಯಲ್ಲಿಕರ್ನಾಟಕದ ವಾಸಿಯಾಗಿರಬೇಕು. ಇವರು ಅರ್ಹರಲ್ಲ : ಸರಕಾರಿ, ಸರಕಾರಿ ಅನುದಾನಿತ ಸಂಸ್ಥೆ/ ಖಾಸಗಿ ವಲಯಗಳಲ್ಲಿಉದ್ಯೋಗದಲ್ಲಿರುವ ಅಭ್ಯರ್ಥಿಗಳು. ಸ್ವಯಂ…

Read More

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ, 2023ರ ಆಗಸ್ಟ್ 18 ರಿಂದ- 2024ರ ಫೆಬ್ರವರಿ 12ರ ವರೆಗೆ 18,32,787 ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ವಿಧಾನ ಪರಿಷತ್ತು ಕಾರ್ಯಕಲಾಪದ ವೇಳೆ ಶಾಸಕ ಮಧು ಜಿ. ಮಾದೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದಲ್ಲಿ ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಆಗಿರುವ ವಾಹನಗಳ ಸಂಖ್ಯೆ ಎಷ್ಟು ಹಾಗೂ ಇಲ್ಲಿಯವರೆಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಆಳವಡಿಸಿಕೊಂಡಿರುವ ವಾಹಗಳ ಸಂಖ್ಯೆ ಮತ್ತು ಇದರ ಶೇಕಡವಾರು ಪ್ರಮಾಣ ಎಷ್ಟು ಎಂದ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ ಸಚಿವರು ತಿಳಿಸಿದರು. ಕೇಂದ್ರ ಸರ್ಕಾರದ ಆದೇಶದಂತೆ, ಎಲ್ಲಾ ರಾಜ್ಯಗಳಲ್ಲಿಯೂ ಅತಿ ಸುರಕ್ಷತಾ ನೋಂದಣಿ ಫಲಕಗಳನ್ನು ಅಳವಡಿಸಲಾಗುತ್ತಿದ್ದು, ಅದೇ ರೀತಿಯಾಗಿ ರಾಜ್ಯದಲ್ಲಿಯೂ ಸಹ ಫಲಕಗಳನ್ನು ಅಳವಡಿಸಲು ಆದೇಶಿಸಲಾಗಿದ್ದು, ರಾಜ್ಯದಲ್ಲಿ ಏಪ್ರಿಲ್ 2019ಕ್ಕಿಂತ ಮೊದಲು ಅಂದಾಜು 2.45 ಕೋಟಿ ವಾಹನಗಳು ನೋಂದಣಿಯಾಗಿದ್ದು, ಸುಮಾರು 2 ಕೋಟಿ ವಾಹನಗಳು ಅಸ್ತಿತ್ವದಲ್ಲಿವೆ ಹಾಗೂ ಇಲ್ಲಿಯವರೆಗೆ ಶೇ.9.16%…

Read More

ಬೆಂಗಳೂರು: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸಿ.ಸಿ.ಇ. ಪದ್ಧತಿಯನ್ವಯ ಕೈಗೊಳ್ಳಲಾಗಿರುವ ಆಂತರಿಕ ಮೌಲ್ಯಮಾಪನದ ಅಂಕಗಳ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ನೇಮಿಸಿ ಪರಿಶೀಲನೆ ನಡೆಸುವ ಬಗ್ಗೆ ಮಂಡಳಿಯಿಂದ ಆದೇಶವನ್ನು ಹೊರಡಿಸಲಾಗಿದೆ. ಈ ನಡುವೆ ಆದೇಶದಲ್ಲಿ , ಸರ್ಕಾರದ ಆದೇಶ ಸಂಖ್ಯೆ: ಇಡಿ 156 ಮಾಹಿತಿ 2014 ದಿನಾಂಕ:26-06-2014 ಮತ್ತು ಸರ್ಕಾರದ ಆದೇಶ ಸಂಖ್ಯೆ:ಇಡಿ 295 ಮಾಹಿತಿ 2014 ದಿನಾಂಕ:09-01-2015 ರನ್ವಯ ನಿರಂತರ ಹಾಗೂ ಸಮಗ್ರ ಮೌಲ್ಯಮಾಪನ(ಸಿ.ಸಿ.ಇ) ಪದ್ಧತಿಯನ್ನು ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ ಅನುಷ್ಟಾನಗೊಳಿಸಲಾಗಿರುತ್ತದೆ. ನಿರಂತರ ಹಾಗೂ ಸಮಗ್ರ ಮೌಲ್ಯಮಾಪನ (ಸಿ.ಸಿ.ಇ ಪದ್ಧತಿಯಲ್ಲಿ ಅಳವಡಿಸಿರುವ ವಿಧಿವಿಧಾನಗಳನ್ನು ಕೆಳಕಂಡಂತೆ ವಿವರಿಸಲಾಗಿದೆ. > ಶೈಕ್ಷಣಿಕ ವರ್ಷದಲ್ಲಿ ವಿಷಯವಾರು ಒಟ್ಟು 04 ರೂಪಣಾತ್ಮಕ ಮೌಲ್ಯಮಾಪನಗಳನ್ನು ನಡೆಸಬೇಕಾಗಿದ್ದು ಪ್ರತಿ ರೂಪಣಾತ್ಮಕ ಮೌಲ್ಯಮಾಪನದಲ್ಲಿ ಎರಡು ಚಟುವಟಿಕೆಗಳು ಮತ್ತು ಒಂದು ಕಿರುಪರೀಕ್ಷೆಯನ್ನು ನಡೆಸಬೇಕಾಗುತ್ತದೆ. ಒಟ್ಟಾರೆ 04 ರೂಪಣಾತ್ಮಕ ಮೌಲ್ಯಮಾಪನಗಳಿಗೆ 08 ಚಟುವಟಿಕೆಗಳು ಹಾಗೂ 04 ಕಿರುಪರೀಕ್ಷೆಗಳನ್ನು ನಡೆಸಬೇಕಾಗುತ್ತದೆ. > ಪರೀಕ್ಷೆಯು ಆಂತರಿಕ ಮೌಲ್ಯಮಾಪನ ಹಾಗೂ ಬಾಹ್ಯ ಪರೀಕ್ಷಾ ವಿಧಾನದಿಂದ…

Read More

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ 2024) ಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಫೆಬ್ರವರಿ 14 ರಂದು ನೋಂದಣಿಯನ್ನು ಪ್ರಾರಂಭಿಸಿದೆ. ಅಭ್ಯರ್ಥಿಗಳು ಇದನ್ನು upsc.gov.in ಮತ್ತು upsconline.nic.in ಪರಿಶೀಲಿಸಬಹುದು. ಇದಲ್ಲದೇ ಸಿಎಸ್ಇ ಮೂಲಕ ಭಾರತೀಯ ಅರಣ್ಯ ಸೇವೆಗಳ (ಐಎಫ್ಎಸ್) ಪ್ರಿಲಿಮ್ಸ್ಗೆ ನೋಂದಣಿಯೂ ಪ್ರಾರಂಭವಾಗಿದೆ. ಅರ್ಜಿ ವಿಂಡೋ ಮಾರ್ಚ್ 5 ರಂದು ಕೊನೆಗೊಳ್ಳುತ್ತದೆ. ಯುಪಿಎಸ್ಸಿ ಸಿಎಸ್ಇ 2024 ರ ಮೂಲಕ ಸುಮಾರು 1,056 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅಧಿಸೂಚನೆಯಲ್ಲಿ, ಅಭ್ಯರ್ಥಿಗಳು ಖಾಲಿ ಹುದ್ದೆಗಳು, ಅರ್ಹತೆ, ಪರೀಕ್ಷೆ ಮತ್ತು ಆಯ್ಕೆ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪರಿಶೀಲಿಸಬಹುದು. ಲಭ್ಯವಿರುವ ಒಟ್ಟು ಹುದ್ದೆಗಳ ಸಂಖ್ಯೆ ಸರಿಸುಮಾರು 1,056, ಅದರಲ್ಲಿ 40 ಹುದ್ದೆಗಳನ್ನು ಬೆಂಚ್ಮಾರ್ಕ್ ಅಂಗವೈಕಲ್ಯ (ಪಿಡಬ್ಲ್ಯೂಬಿಡಿ) ವ್ಯಕ್ತಿಗಳಿಗೆ ಮೀಸಲಿಡಲಾಗಿದೆ. ಪಿಡಬ್ಲ್ಯೂಬಿಡಿ ವಿಭಾಗದಲ್ಲಿ ಕುರುಡುತನ, ಕಡಿಮೆ ದೃಷ್ಟಿ, ಕಿವುಡುತನ, ಶ್ರವಣ ದೋಷ, ಚಲನ ಚಲನ ಅಂಗವೈಕಲ್ಯ, ಸೆರೆಬ್ರಲ್ ಪಾಲ್ಸಿ, ಕುಷ್ಠರೋಗ, ಕುಬ್ಜತೆ, ಆಸಿಡ್ ದಾಳಿ ಸಂತ್ರಸ್ತರು…

Read More

ಬೆಂಗಳೂರು : ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ದಿ:01-04-2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ನಿರ್ದಿಷ್ಟ ಪಿಂಚಣಿ ಬಿಡುಗಡೆ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಯಿಂದ ಮಹತ್ವದ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ(1)ರ ಪತ್ರದಲ್ಲಿ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ದಿ:01-04-2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ಅನುಬಂಧದಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಸರ್ಕಾರಕ್ಕೆ ಸಲ್ಲಿಸುವಂತೆ ನಿರ್ದೇಶನವಾಗಿರುತ್ತದೆ. ಅದರಂತೆ ಸದರಿ ಮಾಹಿತಿಯು ಅನುಬಂಧ-01 ರಲ್ಲಿ ಸಲ್ಲಿಸಲು ವಿಭಾಗದ ಎಲ್ಲಾ ಉಪನಿರ್ದೇಶಕರು(ಆಡಳಿತ) ರವರಿಗೆ ಉಲ್ಲೇಖ(2)ರನ್ವಯ ತಿಳಿಸಲಾಗಿತ್ತು. ಉಲ್ಲೇಖಿತ(3)ರ ಪತ್ರದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರ ಆಪ್ತ ಕಾರ್ಯದರ್ಶಿ ರವರ ದಿನಾಂಕ:18-12-2023ರ ಟಿಪ್ಪಣಿ ಮತ್ತು ಅದರ ಅಡಕಗಳನ್ನು ಇದರೊಡನೆ ಲಗತ್ತಿಸಿ. ಉಲ್ಲೇಖಿತ(4) ರನ್ವಯ ದಿನಾಂಕ:01-04-2006ರ ಪೂರ್ವದಲ್ಲಿ ನೇಮಕವಾಗಿದ್ದು ದಿನಾಂಕ:01-04-2006ರ ನಂತರ ವೇತನಾನುದಾನಕ್ಕೆ ಒಳಪಟ್ಟು ನಿವೃತ್ತರಾಗಿರುವ/ಮರಣಹೊಂದಿರುವ /ಹಾಲಿ ಸೇವೆಯಲ್ಲಿದ್ದು…

Read More

ನವದೆಹಲಿ: ಎರಡು ದಿನಗಳ ಅಬುಧಾಬಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಬುಧಾಬಿಯ ಮೊದಲ ಹಿಂದೂ ಶಿಲಾ ದೇವಾಲಯ, ಬೋಚಸನ್ವಾಸಿ ಶ್ರೀ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥೆ (ಬಿಎಪಿಎಸ್) ಮಂದಿರವನ್ನು ಉದ್ಘಾಟನೆ ಮಾಡಿದರು.  ಅಬುಧಾಬಿಯಲ್ಲಿ 27 ಎಕರೆ ಭೂಮಿಯಲ್ಲಿ ನಿರ್ಮಿಸಲಾದ ಬಿಎಪಿಎಸ್ ಹಿಂದೂ ಮಂದಿರವು ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮುರೇಖಾದಲ್ಲಿದೆ. ನಿರ್ಮಾಣವು 2019 ರಿಂದ ನಡೆಯುತ್ತಿದೆ. ಈ ನಡುವೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಬೆಂಬಲಕ್ಕಾಗಿ ಮತ್ತು ಹಿಂದೂ ದೇವಾಲಯ ನಿರ್ಮಾಣಕ್ಕೆ ಭೂಮಿಯನ್ನು ಮಂಜೂರು ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಮಂಗಳವಾರ ಧನ್ಯವಾದ ಅರ್ಪಿಸಿದರು. ಫೆಬ್ರವರಿ 18 ರಂದು ದೇವಾಲಯವು ಸಾರ್ವಜನಿಕರಿಗೆ ತೆರೆದಿರುತ್ತದೆ. ದೇವಾಲಯದ ನಿರ್ಮಾಣದಲ್ಲಿ ಯಾವುದೇ ಉಕ್ಕು ಅಥವಾ ಕಾಂಕ್ರೀಟ್ ಅನ್ನು ಬಳಸಲಾಗಿಲ್ಲ. ಬಿಎಪಿಎಸ್ ಹಿಂದೂ ಮಂದಿರದಲ್ಲಿ ಯುಎಇಯ ಏಳು ಎಮಿರೇಟ್ಗಳನ್ನು ಸಂಕೇತಿಸುವ ಏಳು ಶಿಖರಗಳಿವೆ. ದೇವಾಲಯದ ಆವರಣದಲ್ಲಿ ಸಂದರ್ಶಕರ ಕೇಂದ್ರ, ಗ್ರಂಥಾಲಯ, ತರಗತಿ, ಪ್ರಾರ್ಥನಾ…

Read More

ಬೆಂಗಳೂರು: ಕೊಬ್ಬರಿ ಖರೀದಿಗೆ ರೈತರ ನೋಂದಣಿ ಪ್ರಕ್ರಿಯೆ ಒಂದು ವಾರ ಸ್ಥಗಿತ ಮಾಡಲಾಗುವುದು ಅಂಥ ಇಂದು ಸದನದಲ್ಲಿ ಸಚಿವ ಶಿವಾನಂದ ಅವರು ಮಾಹಿತಿ ನೀಡಿದರು. ಕೊಬ್ಬರಿ ಖರೀದಿಗೆ ರೈತರ ನೋಂದಣಿಯಲ್ಲಿ ಅವ್ಯವಹಾರ ನಡೆದಿರುವ ಕಾರಣಕ್ಕೆ ತಾತ್ಕಾಲಿಕವಾಗಿ ಒಂದು ವಾರ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಲೋಪಗಳು ಕಂಡುಬರುತ್ತಿವೆ. ಇಲಾಖೆಯಿಂದ ಖರೀದಿಸಲಾಗಿದ್ದ ಕಂಪ್ಯೂಟರ್ ಬದಲಿಗೆ ಅಧಿಕಾರಿಗಳು ಮತ್ತು ಹೊರಗುತ್ತಿಗೆ ಸಿಬ್ಬಂದಿ, ತಾವೇ ಬೇರೆ ಕಂಪ್ಯೂಟರ್ ಖರೀದಿಸಿ ಅದನ್ನು ರೈತರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿದ್ದಾರೆ. ಬೇರೆ ಜಿಲ್ಲೆಯಿಂದ 3,500 ರೈತರನ್ನು ಹಾಸನದಲ್ಲಿ ನೋಂದಣಿ ಮಾಡಲಾಗಿದೆ. ಹೀಗಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ 9 ಮಂದಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುತ್ತಿದೆ. ನೋಂದಣಿ ಪ್ರಕ್ರಿಯೆ ಪರಿಷ್ಕರಣೆ ಒಳಪಡಿಸಲಾಗುತ್ತಿದ್ದು, ಅಲ್ಲಿಯವರೆಗೆ ತಾತ್ಕಾಲಿಕವಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಅವರುಹೇಳಿದರು. https://kannadanewsnow.com/kannada/42-women-in-india-underpaid-survey/ https://kannadanewsnow.com/kannada/the-crucial-state-cabinet-meeting-is-scheduled-to-be-held-at-6-pm-tomorrow/ https://kannadanewsnow.com/kannada/the-bodies-of-four-members-of-a-family-from-kerala-were-found-in-california-murder-suspected/

Read More

ಶಿವಮೊಗ್ಗ: ಶೀಘ್ರದಲ್ಲಿ ಓರ್ವ ಐಪಿಎಸ್ ಅಧಿಕಾರಿ ಬಂಧನವಾಗಲಿದೆ ಅಂತ ಹೊಸ ಬಾಂಬ್‌ ಅನ್ನು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್‌ ಅವರು ಸಿಡಿಸಿದ್ದಾರೆ. ಅವರು .ಶಿವಮೊಗ್ಗದಲ್ಲಿಂದು ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಸ್ವಯಂ ಘೋಷಿಸಿತ ಲಿಂಗಾಯತ ನಾಯಕರೊಬ್ಬರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಮೀಸಲಾತಿಗೆ ಅಡ್ಡ ಹಾಕಿದ್ದಾರೆ ಅಂತ ಕಿಡಿಕಾರಿದರು. ಇನ್ನೂ ನಾನು ಮಂತ್ರಿ ಆಗುವುದಕ್ಕೆ, ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ ಆಗುವುದಕ್ಕೆ ಸ್ವಾಮೀಜಿಯಿಂದ ಲಾಬಿ ಮಾಡಲ್ಲ. ನನ್ನ ಸೋಲಿಸಲು ಕೆಲವರು ವಿಜಯಪುರಕ್ಕೆ ಬಹಳ ಹಣ ಕಳಿಸಿದರು ಅಂತ ತಿಳಿಸಿದರು. https://kannadanewsnow.com/kannada/the-bodies-of-four-members-of-a-family-from-kerala-were-found-in-california-murder-suspected/ https://kannadanewsnow.com/kannada/the-crucial-state-cabinet-meeting-is-scheduled-to-be-held-at-6-pm-tomorrow/ https://kannadanewsnow.com/kannada/brahmin-community-in-the-state-has-been-given-extension-of-time-till-february-25-to-apply-for-the-self-reliant-scheme/

Read More

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಸ್ಯಾನ್ ಮ್ಯಾಟಿಯೊ ನಗರದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ತನಿಖೆ ನಡೆಯುತ್ತಿದ್ದು ಇದು ಕೊಲೆ-ಇಲ್ಲವೇ ಆತ್ಮಹತ್ಯೆ ಎಂದು ಅಧಿಕಾರಿಗಳು ನಂಬಿದ್ದಾರೆ. ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಆಲಿಸ್ ಪ್ರಿಯಾಂಕಾ ಬೆಂಜಿಗರ್ (40) ಮತ್ತು ಅವರ 4 ವರ್ಷದ ಅವಳಿ ಗಂಡು ಮಕ್ಕಳು ಎಂದು ಗುರುತಿಸಲಾಗಿದೆ. ನ್ಯಾಯಾಲಯದ ದಾಖಲೆಗಳ ಪ್ರಕಾರ ಆನಂದ್ 2016ರ ಡಿಸೆಂಬರ್ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಅವಳಿ ಗಂಡು ಮಕ್ಕಳು ಮಲಗುವ ಕೋಣೆಯಲ್ಲಿ ಪತ್ತೆಯಾಗಿದ್ದು, ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತನಿಖೆಯಲ್ಲಿದೆ, ಆದರೆ ತನಿಖೆಯ ಹತ್ತಿರದ ಮೂಲಗಳು ಸ್ಥಳೀಯ ಮಾಧ್ಯಮ ಎನ್ಬಿಸಿಗೆ ತಿಳಿಸಿದ್ದು, ದೈಹಿಕ ಆಘಾತದ ಯಾವುದೇ ಚಿಹ್ನೆಗಳನ್ನು ತೋರಿಸದ ಕಾರಣ ಅವರನ್ನು ಉಸಿರುಗಟ್ಟಿಸಿ, ಕತ್ತು ಹಿಸುಕಿ ಅಥವಾ ವಿಷಪ್ರಾಶನ ಮಾಡಿರಬಹುದು ಎಂದು ತಿಳಿಸಿವೆ. https://kannadanewsnow.com/kannada/brahmin-community-in-the-state-has-been-given-extension-of-time-till-february-25-to-apply-for-the-self-reliant-scheme/ https://kannadanewsnow.com/kannada/the-crucial-state-cabinet-meeting-is-scheduled-to-be-held-at-6-pm-tomorrow/ https://kannadanewsnow.com/kannada/pm-modi-inaugurates-indias-dragon-mart-in-dubai/

Read More