Author: kannadanewsnow07

ಬೆಂಗಳೂರು: ರೈತ ಸಂಘಟನೆಗಳು ರೈತ ಹುಡುಗನನ್ನು ಮದುವೆಯಾಗುವ ಯುವತಿಗೆ 5 ಲಕ್ಷ ರೂ. ನೀಡಿ ಅಂತ ಮನವಿ ಮಾಡಿಕೊಂಡಿದ್ದಾವೆ. ವೃತ್ತಿಯಲ್ಲಿ ರೈತನಾದ ಹುಡುಗನನ್ನು ಮದುವೆಯಾಗುವ ಯುವತಿಗೆ ರಾಜ್ಯ ಸರ್ಕಾರದಿಂದ 5 ಲಕ್ಷರೂ. ಪ್ರೋತ್ಸಾಹಧನ ನೀಡಬೇಕು ಎಂದು ರೈತ ಸಂಘಟನೆಗಳ ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಭಾನುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ವೇಳೆಯಲ್ಲಿ ಘಟನೆ ನಡೆದಿದೆ. ಈ ವೇಳೆ ಮಾತನಾಡಿದ ಬಡಗಲಪುರ ನಾಗೇಂದ್ರ, ‘ಕೃಷಿ ಮಾಡುವವರ ಮಕ್ಕಳಿಗೆ ಇಂದು ಹೆಣ್ಣು ಕೊಡುತ್ತಿಲ್ಲ. 45 ವರ್ಷವಾದರೂ ವಿವಾಹವಾಗುತ್ತಿಲ್ಲ. ಇದರಿಂದಾಗಿ ಕೃಷಿಗೂ ಆದ್ಯತೆ ಸಿಗುತ್ತಿಲ್ಲ. ಹಾಗಾಗಿ, ರೈತನನ್ನು ವಿವಾಹವಾಗುವ ಹುಡುಗಿಗೆ ಪ್ರೋತ್ಸಾಹ ಧನ ನೀಡಬೇಕು’ ಎಂದು ಮನವಿ ಮಾಡಿದರು.

Read More

ನವದೆಹಲಿ: ಸಾವರಿನ್ ಗೋಲ್ಡ್ ಬಾಂಡ್ಸ್ (ಎಸ್ಜಿಬಿ) 2023-24, ಸರಣಿ 4, ಫೆಬ್ರವರಿ 12, 2024 ರಂದು ಚಂದಾದಾರಿಕೆಗಾಗಿ ಇಂದು ತೆರೆಯುತ್ತದೆ. ಚಂದಾದಾರಿಕೆ ತೆರೆಯುವ ದಿನಾಂಕ, ವಿತರಣಾ ದಿನಾಂಕ, ಬೆಲೆ, ರಿಯಾಯಿತಿ, ಅರ್ಹತೆ ಮತ್ತು ಆನ್ಲೈನ್ನಲ್ಲಿ ಎಸ್ಡಿಬಿಗಳನ್ನು ಖರೀದಿಸಲು ಹಂತ ಹಂತದ ಮಾರ್ಗದರ್ಶಿ ಸೇರಿದಂತೆ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ. ಸಾವರಿನ್ ಗೋಲ್ಡ್ ಬಾಂಡ್ಸ್ ಸರಣಿ IV ಚಂದಾದಾರಿಕೆಗಾಗಿ ಇಂದು ತೆರೆಯುತ್ತದೆ, ಅಂದರೆ ಸೋಮವಾರ, ಫೆಬ್ರವರಿ 12, 2024. ಸಾವರಿನ್ ಗೋಲ್ಡ್ ಬಾಂಡ್ಸ್ ಸರಣಿ 4 ಐದು ದಿನಗಳವರೆಗೆ ತೆರೆದಿರುತ್ತದೆ ಮತ್ತು ಚಂದಾದಾರಿಕೆ ವಿಂಡೋ ಶುಕ್ರವಾರ ಅಂದರೆ ಫೆಬ್ರವರಿ 16, 2024 ರಂದು ಮುಚ್ಚಲ್ಪಡುತ್ತದೆ. ಎಸ್ಜಿಬಿ 2023-24 ಸರಣಿ 4 ವಿತರಣೆಯ ದಿನಾಂಕ ಸಾವರಿನ್ ಗೋಲ್ಡ್ ಬಾಂಡ್ಗಳ ಸರಣಿ 4 ವಿತರಣೆಯ ದಿನಾಂಕವನ್ನು ಫೆಬ್ರವರಿ 21, 2024 ರ ಗುರುವಾರ ನಿಗದಿಪಡಿಸಲಾಗಿದೆ. ಎಸ್ಜಿಬಿ 2023-24 ಸರಣಿ 4 ವಿತರಣೆ ಬೆಲೆ ಎಸ್ಜಿಬಿ 2023-24ರ ಸೀರಿಸ್ 4 ಇಶ್ಯೂ ಬೆಲೆ ಪ್ರತಿ ಗ್ರಾಂ ಚಿನ್ನಕ್ಕೆ 6,213…

Read More

ಬೆಂಗಳೂರು: ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ನಡೆಸುವ ʼಸಾಮೂಹಿಕ ವಿವಾಹ ಕಾರ್ಯಕ್ರಮʼದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ರೂ. 50,000 ಆರ್ಥಿಕ ನೆರವು ನೀಡಲಾಗುತ್ತದೆ. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಕರ್ನಾಟಕದ ಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008 ರಿಂದ 2013 ರವರೆಗೆ 22,000 ಕೋಟಿರೂ.ಗಳು ವೆಚ್ಚವಾಗಿದೆ. 2013 ರಿಂದ 2018 ರವರೆ 88 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ. ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7ಡಿ ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಯಾವುದೇ ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು. ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು.…

Read More

ನವದೆಹಲಿ: ಫೆಬ್ರವರಿ 12 ರಂದು ನಡೆದ ವಿಡಿಯೋ ಕಾನ್ಫರೆನ್ಸಿಂಗ್ ಅಧಿವೇಶನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ವ್ಯಕ್ತಿಗಳಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್ಗಾರ್ ಮೇಳ ಉಪಕ್ರಮದ ಭಾಗವಾಗಿರುವ ಈ ಕಾರ್ಯಕ್ರಮವು ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮತ್ತು ರಾಷ್ಟ್ರದ ಯುವಕರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.  ಕರ್ಮಯೋಗಿ ಭವನಕ್ಕೆ ಶಂಕುಸ್ಥಾಪನೆ : ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ನವದೆಹಲಿಯಲ್ಲಿ ಸಮಗ್ರ ಸಂಕೀರ್ಣವಾದ “ಕರ್ಮಯೋಗಿ ಭವನ”ದ ಮೊದಲ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ರಾಷ್ಟ್ರವ್ಯಾಪಿ ಉಪಕ್ರಮ : ರೋಜ್ಗಾರ್ ಮೇಳವನ್ನು ದೇಶಾದ್ಯಂತ 47 ಸ್ಥಳಗಳಲ್ಲಿ ನಡೆಸಲಾಗುತ್ತಿದ್ದು, ಇದು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗೆ ಅನುಕೂಲ ಮಾಡಿಕೊಡುತ್ತದೆ. ಹೊಸದಾಗಿ ನೇಮಕಗೊಂಡ ವ್ಯಕ್ತಿಗಳು ಕಂದಾಯ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಂತಹ ಸಚಿವಾಲಯಗಳಲ್ಲಿ ವಿವಿಧ ಸಾಮರ್ಥ್ಯಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ. https://twitter.com/ANI/status/1756911175294464429

Read More

ನವದೆಹಲಿ: ಬೋಚಸನ್ವಾಸಿ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥೆ (ಬಿಎಪಿಎಸ್) ನಿರ್ಮಿಸಿದ ಅಬುಧಾಬಿಯ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 14 ರಂದು ಉದ್ಘಾಟಿಸಲಿದ್ದಾರೆ. ಈ ದೇವಾಲಯವು ಯುಎಇಯಲ್ಲಿ ಮೊದಲನೆಯದಾಗಿದೆ ಮತ್ತು ಹಿಂದೂ ಧರ್ಮದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿನಿಧಿಸುತ್ತದೆ, ಇದು ಅಬುಧಾಬಿಯ ವೈವಿಧ್ಯಮಯ ಪರಿಸರವನ್ನು ಹೆಚ್ಚಿಸುತ್ತದೆ. ಎಎನ್ಐ ಹಂಚಿಕೊಂಡ ವೀಡಿಯೊವು ಅದರ ವಾಸ್ತುಶಿಲ್ಪವನ್ನು ಬಹಿರಂಗಪಡಿಸಿದೆ, ಭಾರತೀಯ ಶಾಸ್ತ್ರೀಯ ಶೈಲಿಯನ್ನು ಮಧ್ಯಪ್ರಾಚ್ಯ ಪ್ರಭಾವಗಳೊಂದಿಗೆ ಬೆರೆಸುತ್ತದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಎರಡು ದಿನಗಳ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಬಿಎಪಿಎಸ್ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಯುಎಇಯಲ್ಲಿನ ಭಾರತೀಯ ರಾಯಭಾರಿ ಸುಂಜಯ್ ಸುಧೀರ್, ಈ ದೇವಾಲಯವು ಭಾರತ ಮತ್ತು ಗಲ್ಫ್ ಪ್ರದೇಶದ ನಡುವಿನ ಬಲವಾದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಆರ್ಥಿಕ ಸಂಬಂಧಗಳ ಸಂಕೇತವಾಗಿದೆ ಎಂದು ಬಣ್ಣಿಸಿದರು. 2015 ರ ಯುಎಇ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿಯವರ ದೃಷ್ಟಿಕೋನದಿಂದ ದೇವಾಲಯದ ಪ್ರಾಮುಖ್ಯತೆ ಮತ್ತು ಅದರ ಪ್ರಮಾಣವನ್ನು ಗಮನಿಸಿ ದೇವಾಲಯದ ಪ್ರಾಮುಖ್ಯತೆಯ ಬಗ್ಗೆ ಸುಧೀರ್ ಹೇಳಿದರು.…

Read More

ಬೆಂಗಳೂರು: ರಾಜ್ಯ ಸರ್ಕಾರ ಫೆಬ್ರವರಿ 1ರಿಂದ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 185ರಿಂದ 195ಕ್ಕೆ ಏರಿಸಿ ಮದ್ಯಪ್ರಿಯರ ಕಿಸಿಗೆ ಕೈ ಹಾಕಲು ಮಂದಾಗಿತ್ತು. ಆದರೆ ಈಗ ರಾಜ್ಯ ಸರ್ಕಾರಕ್ಕೆ ಮದ್ಯಪ್ರಿಯರೇ ಶಾಕ್‌ ಕೊಟ್ಟಿದ್ದಾರೆ. ಹೌದು, ಫೆಬ್ರವರಿ 1ರಂದು ಎಇಡಿ ಹೆಚ್ಚಳದ ನಂತರ ಬಿಯರ್ ಮಾರಾಟದಲ್ಲಿ ಕಡಿಮೆಯಾಗಿದೆ ಎನ್ನಲಾಗಿದೆ. ಈ ನಡುವೆ ಗಿ ಪ್ರತಿ ಬಾಟಲಿ ಬಿಯರ್‌ ದರವು ಕನಿಷ್ಠ 8 ರೂ.ಗಳಿಂದ ಗರಿಷ್ಠ 15 ರೂ.ವರೆಗೆ ಹೆಚ್ಚಳವಾಗಿದೆ. ಹೀಗಾಗಿ ಮದ್ಯಪ್ರಿಯರು ಬಿಯರ್‌ ಖರೀದಿಗೆ ನಿರಾಸಕ್ತಿ ತೋರಿದ್ದರಿಂದ ರಾಜ್ಯದೆಲ್ಲೆಡೆ ಫೆಬ್ರವರಿ 1ರಿಂದಲೂ ಬಿಯರ್‌ ಮಾರಾಟದಲ್ಲಿ ಕಡಿಮೆಯಾಗಿದೆ ಎನ್ನಲಾಗಿದೆ. ಹಲವು ಮದ್ಯ ಪ್ರಿಯರು ಕಡಿಮೆ ಬೆಲೆಯ ಬಿಯರ್‌ ಬ್ರ್ಯಾಂಡ್‌ಗಳತ್ತ ಮುಖ ಮಾಡುತ್ತಿದ್ದಾರೆ. ಮತ್ತೆ ಕೆಲ ಮದ್ಯಪ್ರಿಯರು ಬಿಯರ್‌ ಖರೀದಿ ಪ್ರಮಾಣ ಕಡಿಮೆ ಮಾಡಲು ಮುಂದಾಗುತ್ತಿದ್ದಾರೆ ಎನ್ನಲಾಗಿದೆ. ದುಬಾರಿ ಬ್ರ್ಯಾಂಡ್‌ಗಳ ಬಿಯರ್‌ಗಳಿಗೆ ಮೊದಲಿದ್ದಂತೆ ಬೇಡಿಕೆ ಇಲ್ಲ. ಬಹುತೇಕ ಕಡಿಮೆ ಬೆಲೆಯ ಬಿಯರ್‌ಗಳನ್ನು ಕೊಂಡುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನೀವು ಅಂದುಕೊಂಡ ಕೆಲಸ ಕಾರ್ಯಗಳು ಆಗಬೇಕಾದರೇ 21 ದಿನಗಳ ಕಾಲ ಈ ಶಕ್ತಿಶಾಲಿ ಮಂತ್ರವನ್ನು ಪಠಿಸಿದರೇ ಸಾಕು ಸಾಕ್ಷಾತ್ ಆಂಜನೇಯಸ್ವಾಮಿಯ ಅನುಗ್ರಹವಾಗಬೇಕು ಮತ್ತು ಜೀವನದಲ್ಲಿ ಏಳಿಗೆಯಾಗಬೇಕು. ಮನೆಯಲ್ಲಿ ಕಲಹಗಳು ಉಂಟಾಗುವುದು, ಗಂಡಹೆಂಡತಿಯರ ನಡುವೆ ಅನ್ಯೂನತೆ ಇಲ್ಲದಿರುವುದು, ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆಗಳು ಆಗುತ್ತಿರುವುದು, ಮನೆಯಲ್ಲಿ ಮಕ್ಕಳು ಹಠಮಾಡುತ್ತಿರುವುದು, ಮನೆಯಲ್ಲಿ ಸಂಪಾದನೆ ಮಾಡಿದ ಹಣ ನಿಲ್ಲುವುದಿಲ್ಲ, ಸ್ವಂತ ಮನೆಯ ಕನಸ್ಸು ನನಸಾಗುವುದು ಮತ್ತು ವ್ಯಾಪಾರದಲ್ಲಿ ಏಳಿಗೆಯಾಗಬೇಕಾದರೇ ಈ ಶಕ್ತಿಶಾಲಿ ಕಾರ್ಯಸಿದ್ಧಿ ಆಂಜನೇಯಸ್ವಾಮಿ ಮಂತ್ರವನ್ನು 21 ದಿನಗಳ ಕಾಲ ಪಠಿಸಿದರೇ ಸಾಕು ಸಾಕ್ಷಾತ್ ಆಂಜನೇಯಸ್ವಾಮಿಯ ಅನುಗ್ರಹವಾಗುವುದು ಶತಸಿದ್ಧ. ಈ ವಿಶೇಷವಾದ ಮಂತ್ರ ಯಾವುದು ಮತ್ತು ಈ ಮಂತ್ರದಿಂದ ಆಗುವ ಲಾಭಗಳೇನು ಎಂಬುದನ್ನು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ. ಆಂಜನೇಯನು ಶ್ರೀರಾಮನ ಪರಮಭಕ್ತ. ಆಂಜನೇಯಸ್ವಾಮಿಯು ಬೇಡಿದ್ದನ್ನು ಕರುಣಿಸುವ ಮಹಾನ್ ಮಹಿಮ. ಇಂತಹ ವಿಶೇಷವಾದ ದೇವರ ಮಾರ್ಗವನ್ನು ಅನುಸರಿಸಿದರೆ ಏಳಿಗೆಯನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರವು ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ನಮ್ಮ ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳನ್ನು ಪ್ರತಿ ವರ್ಗದ ಜನರಿಗೂ ತಲುಪಿಸುತ್ತೇವೆ. ಅದಕ್ಕೆ ನಾವೇ ಗ್ಯಾರಂಟಿ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಸ್ಪಷ್ಟಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಭಾನುವಾರದಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು 58,000 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಇಡೀ ದೇಶದಲ್ಲಿಯೇ ನಮ್ಮ ರಾಜ್ಯ ಸರ್ಕಾರವು ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಇತರೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಜನರ ಮನವರಿಕೆ ಮಾಡಿಕೊಡುವ ಕೆಲಸ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ಶಾಸಕರು ಮಾಡುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು,…

Read More

ಬೆಂಗಳೂರು: ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ರೂ 2000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರೂ 628 ಕೋಟಿ ಹಣವನ್ನು ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಡನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಎಂದರು. ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟ ಮಾಡಬೇಕು ಎಂದು ಸೂಚನೆ ನೀಡಿರುವ ಹಿನ್ನೆಲೆ, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಿಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು…

Read More

ಬೆಂಗಳೂರು: ರಾಜ್ಯ ಸಭಾ ಸದ್ಯಸ ಟಿಕೇಟ್‌ಗಾಗಿ ಕಳೆದ ಒಂದು ತಿಂಗಳಿನಿಂದೆ ದೆಹಲಿ ನಾಯಕರತ್ತ ತಿರುಗಾಡುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣನವರಿಗೆ ಬಿಗ್‌ ಶಾಕ್‌ ಹೈಕಮಾಂಡ್ ನೀಡಿದೆ. ಈ ನಡುವೆ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವಕಾಶ ನೀಡಲಾಗಿದೆ ಮೇಲ್ಮನೆಯಲ್ಲಿ ನಾರಾಯಣಸಾ ಭಾಂಡಗೆ ಕೂಡ ಕಾರ್ಯನಿರ್ವಹಿಸಿದ್ದರು. ಇನ್ನೂ ವ ಬಿಹಾರದಿಂಧ ಡಾ.ಧರ್ಮಶೀಲಾ ಗುಪ್ತ, ಡಾ.ಭೀಮಸಿಂಗ್‌ ಅವರಿಗೆ ಮತ್ತು ಛತ್ತೀಸ್‌ಘಡ್‌ನಿಂದ ದೇವೇಂದ್ರ ಪ್ರತಾಪ್‌ ಸಿಂಗ್‌ಗೆ ಟೀಕೇಟ್‌ ಅವರಿಗೆ ಕೂಡ ಟಿಕೇಟ್‌ ನೀಡಲಾಗಿದೆ.

Read More