Author: kannadanewsnow07

ಬೆಳಗಾವಿ: ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮವಹಿಸಿ ಎಫ್‍ಐಆರ್ ದಾಖಲಿಸಲಾಗುವುದು ಈ ಸಂಬಂಧ ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರಿ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು. ವಿಧಾನ ಪರಿಷತ್ ನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ ಟಿ.ಎ., ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದ ಸಚಿವರು, ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ ಎಂದು ತಿಳಿಸಿದರು. ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ…

Read More

ಬೆಳಗಾವಿ:ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಪಡೆದು, ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಎಸ್ ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮಾಹೆ ಮತ್ತು ಮಾರ್ಚ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ…

Read More

ನವದೆಹಲಿ: ದೆಹಲಿಯ ಕನಿಷ್ಠ ನಾಲ್ಕು ಶಾಲೆಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಬಂದಿದ್ದು, ತರಗತಿಗಳನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದು, ಇಲ್ಲಿಯವರೆಗೆ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. ಈ ಶಾಲೆಗಳಲ್ಲಿ ಪೂರ್ವ ಕೈಲಾಶ್ನ ದೆಹಲಿ ಪಬ್ಲಿಕ್ ಶಾಲೆ, ಮಯೂರ್ ವಿಹಾರ್ನ ಸಲ್ವಾನ್ ಪಬ್ಲಿಕ್ ಶಾಲೆ ಮತ್ತು ಕೇಂಬ್ರಿಡ್ಜ್ ಶಾಲೆ ಸೇರಿವೆ. ದೆಹಲಿ ಪೊಲೀಸರ ಪ್ರಕಾರ, ಬೆಳಿಗ್ಗೆ 4.30 ಕ್ಕೆ ಕರೆ ಮೂಲಕ ಮೊದಲ ಬಾಂಬ್ ಬೆದರಿಕೆ ಬಂದಿದ್ದು, ನಂತರ ದೆಹಲಿ ಪೊಲೀಸರು ಮತ್ತು ದೆಹಲಿ ಅಗ್ನಿಶಾಮಕ ಸೇವೆಗಳ ತಂಡವನ್ನು ತನಿಖೆಗಾಗಿ ಸ್ಥಳಕ್ಕೆ ರವಾನಿಸಲಾಗಿದೆ.

Read More

ನವದೆಹಲಿ: ಆಧಾರ್ ಹೊಂದಿರುವವರು ಗಡುವಿನವರೆಗೆ ಇತ್ತೀಚಿನ ವಿವರಗಳನ್ನು ಉಚಿತವಾಗಿ ನವೀಕರಿಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಈ ಹಿಂದೆ ಘೋಷಿಸಿತ್ತು. ಯುಐಡಿಎಐ ಮೈಆಧಾರ್ ಪೋರ್ಟಲ್ನಲ್ಲಿ ಇತ್ತೀಚಿನ ದಾಖಲೆಗಳನ್ನು ನೀವು ಈ ದಿನಾಂಕದವರೆಗೆ ಉಚಿತವಾಗಿ ಅಪ್ಲೋಡ್ ಮಾಡಬಹುದು. ಹೊಸ ನಗರಕ್ಕೆ ಸ್ಥಳಾಂತರಗೊಂಡ ಅಥವಾ ಇತ್ತೀಚೆಗೆ ತಮ್ಮ ವಿಳಾಸವನ್ನು ಬದಲಾಯಿಸಿದ ಆಧಾರ್ ಹೊಂದಿರುವವರು ಅದನ್ನು ಆಧಾರ್ ವಿವರಗಳಲ್ಲಿ ನವೀಕರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಯುಐಡಿಎಐ ಪ್ರತಿ 10 ವರ್ಷಗಳಿಗೊಮ್ಮೆ ವಿವರಗಳನ್ನು ನವೀಕರಿಸಲು ಆಧಾರ್ ಹೊಂದಿರುವವರನ್ನು ಒತ್ತಾಯಿಸುತ್ತಿದೆ. ಉತ್ತಮ ಸೇವಾ ವಿತರಣೆ ಮತ್ತು ನಿಖರವಾದ ಆಧಾರ್ ಆಧಾರಿತ ದೃಢೀಕರಣಕ್ಕಾಗಿ ಡೇಟಾಬೇಸ್ನಲ್ಲಿ ಇತ್ತೀಚಿನ ವಿವರಗಳನ್ನು ನವೀಕರಿಸುವುದು ಮುಖ್ಯವಾಗಿದೆ. ಆಧಾರ್ ಉಚಿತ ನವೀಕರಣಕ್ಕೆ ಕೊನೆಯ ದಿನಾಂಕ ಯಾವುದು: ಆಧಾರ್ ಕಾರ್ಡ್ ಹೊಂದಿರುವವರು ಡಿಸೆಂಬರ್ 14, 2024 ರವರೆಗೆ ಮೈ ಆಧಾರ್ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ತಮ್ಮ ವಿವರಗಳನ್ನು ಉಚಿತವಾಗಿ ನವೀಕರಿಸಬಹುದು. ಈ ದಿನಾಂಕದ ನಂತರ, ಆಧಾರ್ ಕೇಂದ್ರಗಳಲ್ಲಿ ಆಫ್ಲೈನ್ ನವೀಕರಣಗಳಿಗೆ ಶುಲ್ಕ ವಿಧಿಸಲಾಗುತ್ತದೆ. ಆಧಾರ್ ನೋಂದಣಿ ಕೇಂದ್ರದಲ್ಲಿ ದಾಖಲೆಗಳನ್ನು…

Read More

ಮಡಿಕೇರಿ: ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮಡಿಕೇರಿಯಲ್ಲಿ ಒಂದು ಗ್ರೂಪ್-ಡಿ ಹುದ್ದೆ ಖಾಲಿ ಇದ್ದು, ಹೊರಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ಎಸ್‍ಎಸ್‍ಎಲ್‍ಸಿ ತೇರ್ಗಡೆ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಡಿಸೆಂಬರ್, 18 ರಂದು ಬೆಳಗ್ಗೆ ನಡೆಯಲಿರುವ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಇಚ್ಛೆ ಇರುವ ಅಭ್ಯರ್ಥಿಗಳು ಆಯೋಗದ ದೂ.ಸಂ.08272-229852 ಅಥವಾ ಖುದ್ದಾಗಿ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್‍ಬುಕ್, ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು, 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದರು. ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟೆಲಿಗ್ರಾಂ, ಇತರೆ ಅಂರ್ತಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್‍ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್‍ಸ್ಟಾಗ್ರಾಂ ಖಾತೆಗಳು ಹಾಗೂ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559. 1)ಹೆಸರು, ಗೌರವ, ಸುಖ, ಭೋಗಗಳಿಗಾಗಿ, ಸಂಪತ್ತಿಗಾಗಿ, ಮೋಕ್ಷಕ್ಕಾಗಿ ಶ್ರೀ ಯಂತ್ರವನ್ನು ಪುಜಿಸಬೇಕು. 2)ಹಣ, ಧಾನ್ಯ, ಕಾರ್ಯಸಿದ್ಧಿ ಉಂಟಾಗುವುದಕ್ಕೆ, ಕೆಲಸಗಳು ನಿರ್ವಿಘ್ನವಾಗಿ ನಡೆಯುವುದಕ್ಕೆ ಶ್ರೀ ಮಹಾಲಕ್ಷ್ಮಿ ಯಂತ್ರವನ್ನು ಪುಜಿಸಬೇಕು. 3)ಧನವಂತರಾಗುವುದಕ್ಕೆ, ಸಂಪಾದಿಸಿದ ಹಣ ನಿಲ್ಲುವುದಕ್ಕೆ ಶ್ರೀ ಮಹಾಕುಬೇರ ಯಂತ್ರವನ್ನು ಪುಜಿಸಬೇಕು. 4)ವ್ಯಾಪಾರದಲ್ಲಿ ಅಭಿವೃದ್ಧಿ ಉಂಟಾಗುವುದಕ್ಕೆ, ನಿಧಾನವಾಗಿ ನಡೆಯುವ ವ್ಯಾಪಾರಗಳು ಸುಗಮವಾಗಿ ಸಾಗುವುದಕ್ಕೆ ಗಣೇಶ ಲಕ್ಷ್ಮಿ ಮಹಾ ಯಂತ್ರ ಅಥವಾ ವ್ಯಾಪಾರವೃದ್ಧಿ ಮಹಾಯಂತ್ರವನ್ನು ಪುಜಿಸಬೇಕು. 5)ಭಕ್ತಿಮಾರ್ಗವನ್ನು ಪ್ರಾರಂಭಿಸುವದಕ್ಕೆ, ಒಳ್ಳೆಯ ಭವಿಷ್ಯವನ್ನು ನೀಡುವ ಕೆಲಸಗಳನ್ನು ಪ್ರಾರಂಭಿಸುವಾಗ, ಹಣ ಸಮೃದ್ಧಿ ಮತ್ತು ಕಾರ್ಯಸಿದ್ಧಿ ನಡೆಯುವುದಕ್ಕೆ ಶ್ರೀ ಗಣೇಶ ಯಂತ್ರವನ್ನು ಪುಜಿಸಬೇಕು. 6)ಆರೋಗ್ಯ ಚೆನ್ನಾಗಿ ಆಗಲು, ಅಕಾಲಮರಣ ಗಂಡ ಕಳೆಯುವುದಕ್ಕೆ, ಕಾಯಿಲೆಯ ತೀವ್ರಗೆ ಕಡಿಮೆಯಾಗುವುದಕ್ಕೆ ಶ್ರೀ ಮಹಾಮೃತ್ಯುಂಜಯ ಯಂತ್ರವನ್ನು ಪುಜಿಸಬೇಕು. 7)ಸೂರ್ಯದೇವನನ್ನು ಪ್ರಾರ್ಥಿಸುವುದಕ್ಕೆ, ಸೂರ್ಯ ದೇವನ ಮಹಿಮೆ ಉಂಟಾಗುವುದಕ್ಕೆ, ನಮ್ಮಲ್ಲಿ ತೇಜಸ್ಸು ಹೆಚ್ಚಾಗಿಸುವುದಕ್ಕೆ, ಪ್ರಪಂಚವನ್ನು ಗೆಲ್ಲುವುದಕ್ಕೆ ಸೂರ್ಯಯಂತ್ರವನ್ನು ಪುಜಿಸಬೇಕು.…

Read More

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ನಲ್ಲಿ ಗುರುವಾರ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಲಡಿಕೋಡ್ ಬಳಿಯ ಪನಿಯಂಪದಂನಲ್ಲಿ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಲಕಿಯರು ಶಾಲಾ ಸಮಯದ ನಂತರ ಮನೆಗೆ ಮರಳಲು ಬಸ್ ಗಾಗಿ ಕಾಯುತ್ತಿದ್ದರು. ಪೊಲೀಸರ ಪ್ರಕಾರ, ಸಿಮೆಂಟ್ ತುಂಬಿದ ಟ್ರಕ್ ವೇಗವಾಗಿ ಚಲಿಸುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಪಲ್ಟಿಯಾಗಿದೆ ಎಂದು ವರದಿಯಾಗಿದೆ. ನಂತರ ವಾಹನವು ಅದರ ಬದಿಗೆ ಬಿದ್ದು ಮಕ್ಕಳನ್ನು ನಜ್ಜುಗುಜ್ಜು ಮಾಡಿತು. ಮೃತರು ಅಪಘಾತದ ಸ್ಥಳದ ಬಳಿಯ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಎಂದು ಪ್ರಾಥಮಿಕ ಮಾಹಿತಿ ಸೂಚಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಪಘಾತ ಸಂಭವಿಸಿದ ರಸ್ತೆಯನ್ನು ವೈಜ್ಞಾನಿಕವಾಗಿ ವಿನ್ಯಾಸಗೊಳಿಸಲಾಗಿಲ್ಲ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದರು. ಈ ಸ್ಥಳವು ರಸ್ತೆ ಅಪಘಾತಗಳಿಗೆ ಕುಖ್ಯಾತವಾಗಿದೆ ಮತ್ತು ಅಧಿಕಾರಿಗಳು ತಮ್ಮ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Read More

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 2,14,292 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುμÁ್ಠನಗೊಳಿಸಲು ಸದರಿ ಯೋಜನೆಗಳಿಗೆ ಆಯವ್ಯಯದಲ್ಲಿ 52,009 ಕೋಟಿ ರೂ. ಗಳನ್ನು ಒದಗಿಸಿದೆ. ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರವು ರಾಜಸ್ವ ಹಾಗೂ ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ…

Read More

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳ ಸಂಖ್ಯೆಯ ಬಗ್ಗೆ ಮುಖ ಮರೆಮಾಚುತ್ತಾರೆ ಎಂದು ಗುರುವಾರ ಹೇಳಿದ್ದಾರೆ. ರಸ್ತೆ ಅಪಘಾತಗಳಲ್ಲಿ ವಾರ್ಷಿಕವಾಗಿ 1.78 ಲಕ್ಷ ಜನರು ಸಾವನ್ನಪ್ಪುತ್ತಿದ್ದು, ಸಾಯುವವರಲ್ಲಿ ಸುಮಾರು 60% ರಷ್ಟು 18-34 ವರ್ಷ ವಯಸ್ಸಿನವರು ಎಂದು ಅವರು ವಿಷಾದಿಸಿದರು. ಲೋಕಸಭೆಯಲ್ಲಿ ಮಾತನಾಡಿದ ಗಡ್ಕರಿ, “ಇದು ಹೆಚ್ಚಾಗಿದೆ ಎಂದು ಒಪ್ಪಿಕೊಳ್ಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಹೇಳಿದರು, ಅವರು 2014 ರಲ್ಲಿ ಮೊದಲ ಬಾರಿಗೆ ಅಧಿಕಾರ ವಹಿಸಿಕೊಂಡಾಗ ಅಪಘಾತಗಳನ್ನು 50% ರಷ್ಟು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದರು. ವಿಶ್ವಬ್ಯಾಂಕ್ ವರದಿಯ ಪ್ರಕಾರ, ಜಾಗತಿಕ ರಸ್ತೆ ಅಪಘಾತ ಸಾವುಗಳಲ್ಲಿ 11% ಭಾರತವು ಎಲ್ಲಾ ವಾಹನಗಳಲ್ಲಿ 1% ರಷ್ಟಿದೆ ಎಂದು ಅವರು ಬುಧವಾರ ರಾಜ್ಯಸಭೆಯಲ್ಲಿ ಹೇಳಿದರು. ಸಚಿವರು ತಮ್ಮ ಕುಟುಂಬದೊಂದಿಗೆ ಪ್ರಯಾಣಿಸುವಾಗ ರಸ್ತೆ ಅಪಘಾತದ ಭಾಗವಾದ ನಂತರ ಅವರನ್ನು ಹೇಗೆ ಆಸ್ಪತ್ರೆಗೆ ದಾಖಲಿಸಲಾಯಿತು ಎಂಬುದರ ಬಗ್ಗೆಯೂ ಮಾತನಾಡಿದರು. “ದೇವರ…

Read More