Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ತಾಜ್ ಮಹಲ್ ನಲ್ಲಿ ಪ್ರತಿವರ್ಷ ನಡೆಯುವ ಷಹಜಹಾನ್ ನ ಮೂರು ದಿನಗಳ ಉರುಸ್ ಗೆ ಕೇವಲ ನಾಲ್ಕು ದಿನಗಳು ಮಾತ್ರ ಉಳಿದಿವೆ. ಈ ನಡುವೆ ಇದನ್ನು ನಿಷೇಧಿಸುವಂತೆ ಕೋರಿ ಅಖಿಲ ಭಾರತ ಹಿಂದೂ ಮಹಾಸಭಾ ಶುಕ್ರವಾರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಅಲ್ಲದೆ, ಉರುಸ್ ಸಮಯದಲ್ಲಿ ಮೂರು ದಿನಗಳವರೆಗೆ ಉಚಿತ ಪ್ರವೇಶಕ್ಕೆ ಅವಕಾಶ ಕೋರಿದೆ. ಇನ್ನೂ ಈ ಸಂದರ್ಭದಲ್ಲಿ, ಅಮೀನ್ ಮೂಲಕ ಮಾರ್ಚ್ 4ರಂದು ವಿಚಾರಣೆ ನಡೆಯಲಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮೂರು ದಿನಗಳ ಉರುಸ್ ಆಯೋಜನೆ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಹುಸೇನ್ ಜೈದಿ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಸೇರಿದಂತೆ ಹಲವಾರು ಸಂಘಟನೆಗಳು ‘ತೇಜೋ ಮಹಾಲಯ’ ಎಂದು ಕರೆಯಲ್ಪಡುವ ತಾಜ್ ಮಹಲ್ ಅನ್ನು ಶಿವ ದೇವಾಲಯವೆಂದು ಪ್ರತಿಪಾದಿಸುತ್ತಿವೆ ಮತ್ತು ತಾಜ್ ಮಹಲ್ನಲ್ಲಿ ‘ಉರ್ಸ್’ ನಂತಹ ಕಾರ್ಯಕ್ರಮಗಳಿಗೆ ಆಕ್ಷೇಪ ವ್ಯಕ್ತಪಡಿಸಿವೆ. ಈ ವಿಷಯವನ್ನು ವಿವಿಧ ನ್ಯಾಯಾಲಯಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ ಮತ್ತು ಈ ವಿಷಯದ ಬಗ್ಗೆ ಆಗ್ರಾ…
ಬೆಂಗಳೂರು:ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ ವಸೂಲಿ ಮಾಡಲು ಸರ್ಕಾರ ಆದೇಶವನ್ನು ಹೊರಡಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ರವರ ಆದೇಶದಂತೆ,2023-243 ಸಾಲಿನ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ:26.02.2024 ರಿಂದ 02.03.2024 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪುಕಟಿಸಲಾಗಿದೆ.ಪೂರ್ವ ಸಿದ್ಧತಾ ಪರೀಕ್ಷೆಗೆ ಮುಖ್ಯ ಪರೀಕ್ಷೆಯ ಮಾದರಿಯಂತೆ ಪುಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ಜಿಲ್ಲಾ ಉಪನಿರ್ದೇಶಕರು [ಆಡಳಿತ]ರವರ ಲಾಗಿನ್ಗೆ ಲಭ್ಯಗೊಳಿಸಲಾಗುವುದು. ಸದರಿ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಉಪನಿರ್ದೇಶಕರು(ಆಡಳಿತ)ರವರ ಹಂತದಲ್ಲಿ ಮುದ್ರಿಸಿ ಸಂಬಂಧಿಸಿದ ಪ್ರೌಢ ಶಾಲೆಗಳಿಗೆ ತಲುಪಿಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಗತ್ಯ ಕ್ರಮವಹಿಸುವುದು. ಈ ಪರೀಕ್ಷೆ ಸಂಬಂಧ ಪ್ರತಿ ವಿದ್ಯಾರ್ಥಿಯಿಂದ ರೂ.50/-ಗಳನ್ನು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಸಂಗ್ರಹಿಸಿ ಜಿಲ್ಲಾ ಉಪನಿರ್ದೇಶಕರು [ಆಡಳಿತ] ರವರ ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ಕ್ರಮವಹಿಸುವುದು. ಈ ಬಗ್ಗೆ ಉಲ್ಲೇಖದಂತೆ ಸರ್ಕಾರದಿಂದ ಅನುಮೋದನೆ ಪಡೆಯಲಾಗಿರುತ್ತದೆ. ಸದರಿ ಪರೀಕ್ಷಾ ಖರ್ಚು ವೆಚ್ಚಗಳ…
ದಾವಣಗೆರೆ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು. ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು. ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ ,…
ಬೆಂಗಳೂರು: ರಾಜ್ಯ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ 2023-24 ನೇ ಸಾಲಿಗೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕ್ಕೆÀ ಸಂಬಂಧಿಸಿದಂತೆ ಅಪ್ರೆಂಟಿಸ್ ಟೆಕ್ನೀಶಿಯನ್ ಟ್ರೈನಿಗಳ ಆಯ್ಕೆಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಡಿಪೆÇ್ಲೀಮಾ ಪಡೆದಿರಬೇಕು. ನಿಗಧಿತ ಶಿಕ್ಷಣಾರ್ಹತೆಯನ್ನು 2021 ಮೇ ತಿಂಗಳ ನಂತರ ಪಡೆದವರು ಮಾತ್ರ ತರಬೇತಿಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳನ್ನು ಅವರು ಗಳಿಸಿದ ಅಂಕಗಳ (ಮೆರಿಟ್) ಹಾಗೂ ಮೀಸಲಾತಿ ಆಧಾರದ ಮೇಲೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ಈಗಾಗಲೇ ಅಪ್ರೆಂಟಿಸ್ ಪಡೆದವರಾಗಿದ್ದರೆ ಅಂತಹವರು ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ತರಬೇತಿಯ ಅವಧಿಯಲ್ಲಿ ಮಾಹೆಯಾನ ರೂ. 8,000/- ( ರೂ. 4000/- ಗಳನ್ನು ರಾಜ್ಯ ಸರ್ಕಾರದಿಂದ ಹಾಗೂ ರೂ. 4000 ಗಳನ್ನು ಅಪ್ರೆಂಟಿಸ್ ಬೋರ್ಡ್ರವರಿಂದ ನೇರವಾಗಿ ಟ್ರೈನಿಗಳ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಲಾಗುತ್ತದೆ) ಪಾವತಿಸಲಾಗುತ್ತದೆ. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ, ಸಚಿವಾಲಯ ಗ್ರಂಥಾಲಯ, ಕೊಠಡಿ ಸಂಖ್ಯೆ – 11 ನೆಲಮಹಡಿ, ವಿಧಾನಸೌಧ, ಬೆಂಗಳೂರು-…
ಬೆಂಗಳೂರು: ಇ-ಶ್ರಮ್ -ಶ್ರಮ್ ಯೋಜನೆಯಲ್ಲಿ ಹೆಸರು ನೋಂದಾಯಿಸುವ ಅಸಂಘಟಿತ ಕಾರ್ಮಿಕರ ವಯೋಮಿತಿಯನ್ನು ಈಗಿನ 59 ವರ್ಷದಿಂದ 70 ವರ್ಷಕ್ಕೆ ವಿಸ್ತರಿಸಲಾಗುತ್ತದೆ ಅಂಥ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯು ಅಸಂಘಟಿತ ವಲಯದ ಕಾರ್ಮಿಕರಾದ ಬಟ್ಟೆ ಒಗೆಯುವವರು, ಚಮ್ಮಾರರು, ಇಟ್ಟಿಗೆ ಗೂಡು ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಮನೆಕೆಲಸದವರು, ಪೋರ್ಟರ್ ರಿಕ್ಷಾ ಚಾಲಕರು, ಆಟೋ ಚಾಲಕರು, ನರೇಗಾ ಕಾರ್ಮಿಕರು, ಮಧ್ಯಾಹ್ನದ ಬಿಸಿಯೂಟ ಕಾರ್ಮಿಕರು, ಆನ್ಲೈನ್ ಕಂಪನಿ ಮತ್ತು ಕೊರಿಯರ್ಗಳು, ಕಾವಲುಗಾರರು, ಚಾಲಕರು, ಅಡುಗೆಯವರು, ಆರೈಕೆದಾರರು ಮತ್ತು ನರ್ಸ್ಗಳನ್ನು ಒದಗಿಸಿದೆ. ಕಟ್ಟಡ ಅಂಗಡಿಯವರು, ಮೆಸ್ ಗಳು, ಧರ್ಮಶಾಲಾಗಳಿಗೆ ಇ-ಶ್ರಮ್ ಕಾರ್ಡ್ ಯೋಜನೆಯಡಿ ಪಿಂಚಣಿ ಅರ್ಜಿಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಔಷಧಿಗಳ ಬೆಲೆಗಳು ಗಮನಾರ್ಹವಾಗಿ ಹೆಚ್ಚಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಜನರು ಯಾವುದೇ ರೋಗವನ್ನು ಎದುರಿಸಲು ತೊಂದರೆ ಅನುಭವಿಸುತ್ತಾರೆ, ವಿಶೇಷವಾಗಿ ಬಡ ಜನರು ಆಗಿದ್ದಾರೆ. ಕರೋನವೈರಸ್ ಸಾಂಕ್ರಾಮಿಕ ರೋಗದ ನಂತರ, ದೇಶದಲ್ಲಿ ಔಷಧಿಗಳ ಬೆಲೆ ಮತ್ತು ವೈದ್ಯಕೀಯ ವೆಚ್ಚಗಳು ಇನ್ನೂ ಹೆಚ್ಚಾಗಿದೆ. ಏತನ್ಮಧ್ಯೆ, ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರದಿಂದಾಗಿ, ಸಕ್ಕರೆ, ನೋವು, ಜ್ವರ, ಹೃದಯ, ಕೀಲು ತೈಲ ಮತ್ತು ಸೋಂಕಿನ ಔಷಧಿಗಳು ಅಗ್ಗವಾಗಲಿವೆ. ಸಂಪೂರ್ಣ ವಿವರಗಳನ್ನು ಓದಿ. ಅಧಿಸೂಚನೆ ಹೊರಡಿಸಲಾಗಿದೆ ಕೇಂದ್ರ ಸರ್ಕಾರವು 39 ಸೂತ್ರೀಕರಣಗಳ ಬೆಲೆಗಳನ್ನು ನಿಗದಿಪಡಿಸಿದೆ. ಇದರೊಂದಿಗೆ, 4 ವಿಶೇಷ ವೈಶಿಷ್ಟ್ಯ ಉತ್ಪನ್ನಗಳನ್ನು ಸಹ ಅನುಮೋದಿಸಲಾಗಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (ಎನ್ಪಿಪಿಎ) ಕೂಡ ತನ್ನ ಅಧಿಸೂಚನೆಯನ್ನು ಹೊರಡಿಸಿದೆ. ಈ ಔಷಧಿಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ ವಾಸ್ತವವಾಗಿ, ಔಷಧಿಗಳ ಕಾಳಸಂತೆಯನ್ನು ತಡೆಗಟ್ಟಲು, ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು 39 ಸೂತ್ರೀಕರಣಗಳ ಬೆಲೆಗಳನ್ನು ನಿಗದಿಪಡಿಸಿದೆ. ಈ ಹೂಳಿನಲ್ಲಿ ಯಾವ ಔಷಧಿಗಳನ್ನು ಸೇರಿಸಲಾಗಿದೆ ಎಂಬುದನ್ನು ವಿವರಿಸಿ…
ಬೆಂಗಳೂರು: 18 ವರ್ಷ ತುಂಬದ ಮತ್ತು ಡಿಎಲ್ ಇಲ್ಲದ ವಿದ್ಯಾರ್ಥಿಗಳ ಪೋಷಕರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ. ನಗರದಲ್ಲಿ 1,500ಕ್ಕೂ ಹೆಚ್ಚು ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ಸಂಚಾರಿ ಪೊಲೀಸರು ದಂಡದ ಹಾಕಿದ್ದಾರೆ. ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಸರ್ಕ್ಯುಲೇಷನ್ ಹೊರಡಿಸುವ ಭರವಸೆ ನೀಡಿವೆ ಎಂದು ದಕ್ಷಿಣ ವಿಭಾಗ ಸಂಚಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಮಕ್ಕಳು ಶಾಲಾ-ಕಾಲೇಜುಗಳಿಗೆ ದ್ವಿಚಕ್ರ ವಾಹನಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಈ ಸಂಖ್ಯೆ ವಿಪರೀತವಾದಂತೆ ಟ್ರಾಫಿಕ್ ಪೊಲೀಸರು ಎಚ್ಚೆತ್ತುಕೊಂಡು ನಗರದ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ತೆರಳಿ ತಪಾಸಣೆ ನಡೆಸಿದ್ದಾರೆ.
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 2024 ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ 9,163 ಕೋಟಿ ರೂ.ಗಳ ನಿವ್ವಳ ಲಾಭವನ್ನು ವರದಿ ಮಾಡಿದೆ, ಇದು ಹಿಂದಿನ ವರ್ಷದ 14,205 ಕೋಟಿ ರೂ.ಗಿಂತ ಶೇಕಡಾ 35 ರಷ್ಟು ಕಡಿಮೆಯಾಗಿದೆ. ಸಾರ್ವಜನಿಕ ಸಾಲದಾತ 2024 ರ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ 40,378 ಕೋಟಿ ರೂ.ಗಳ ನಿವ್ವಳ ಲಾಭವನ್ನು ವರದಿ ಮಾಡಿದ್ದಾರೆ, ಇದು 2023 ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ 33,538 ಕೋಟಿ ರೂ.ಗಳಿಂದ ಶೇಕಡಾ 20.40 ರಷ್ಟು ಹೆಚ್ಚಾಗಿದೆ. ದೇಶದ ಅತಿದೊಡ್ಡ ಬ್ಯಾಂಕಿನ ನಿವ್ವಳ ಬಡ್ಡಿ ಆದಾಯ (ಎನ್ಐಐ) 39,815 ಕೋಟಿ ರೂ.ಗಳಾಗಿದ್ದು, ಅಂದಾಜು 40,304 ಕೋಟಿ ರೂ ಆಗಿದೆ. ಬ್ಯಾಂಕಿನ ಒಟ್ಟು ಅನುತ್ಪಾದಕ ಆಸ್ತಿ (ಎನ್ಪಿಎ) 2.42% ರಷ್ಟಿದ್ದು, ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ದಾಖಲಾದ 3.14% ರಿಂದ ಕಡಿಮೆಯಾಗಿದೆ. ಮತ್ತೊಂದೆಡೆ, ತ್ರೈಮಾಸಿಕದಲ್ಲಿ ನಿವ್ವಳ ಎನ್ಪಿಎ ಕಳೆದ ವರ್ಷ ಶೇಕಡಾ 0.77 ಕ್ಕೆ ಹೋಲಿಸಿದರೆ ಶೇಕಡಾ…
ಬೆಂಗಳೂರು : ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ ಎಂದರು. ಸಮೀಕ್ಷೆ ನಡೆಯುತ್ತಿದೆ ಎಂದರು. ಪಟ್ಟಿಯನ್ನು ಅಂತಿಮ ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರೇ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷ ರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು…
ನವದೆಹಲಿ: 1990 ರ ದಶಕದಲ್ಲಿ ರಾಮ ಜನ್ಮಭೂಮಿ ಚಳವಳಿಯ ನೇತೃತ್ವ ವಹಿಸಿದ್ದ ಹಿರಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಘೋಷಿಸಿದ್ದಾರೆ. ಈ ನಡುವೆ ನಡೆದಾಡುವ ದೇವರು, ತ್ರಿವಿಧದಾಸೋಹಿ ಪರಮಪೂಜ್ಯ ಸಿದ್ದಗಂಗಾ ಶ್ರೀಗಳಿಗೆ ಕೂಡ ಭಾರತ ರತ್ನ ನೀಡುವಂತೆ ರಾಜ್ಯದಲ್ಲಿ ಹಲವು ಮಂದಿ ಶ್ರೀಗಳ ಭಕ್ತರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಶ್ರೀಗಳಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ರಾಜ್ಯದ ಕೋಟ್ಯಾಂತರ ಮಂದಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಢ್ವಾಣಿ ಅವರಿಗೆ ಭಾರತ ರತ್ನ ನೀಡಿದ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ನಾವು ಕೂಡ ಸಿದ್ದಗಂಗೆಯ ಶ್ರೀ ಶಿವಕುಮಾರ ಸ್ವಾಮಿಗಳಿಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ…