Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು : ರಾಜ್ಯ ತೆಂಗು ಬೆಳಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯನ್ನು ಬುಧವಾರದಿಂದ ಪುನಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳವಾರ ಸದಸ್ಯರಾದ ಕೆ.ಎ ತಿಪ್ಪೇಸ್ವಾಮಿ, ಟಿ.ಎ ಶರವಣ ಸೇರಿದಂತೆ ಇತರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವಾನಂದ ಎಸ್. ಪಾಟೀಲ್ ಬುಧವಾರದಿಂದ ಕೊಬ್ಬರಿ ಖರೀದಿ ಮತ್ತು ನೋಂದಣಿ ಪ್ರಾರಂಭವಾಗಲಿದೆ. ಹಾಸನ ಜಿಲ್ಲೆಯಲ್ಲಿ ತೆಂಗು ಬೆಳೆ ವಿಸ್ತೀರ್ಣ ಮತ್ತು ಬೆಳೆಗಾರರ ಸಂಖ್ಯೆ ಕಡಿಮೆ ಇದ್ದರೂ, ಹೆಚ್ಚು ಮಂದಿ ಹೆಸರು ನೋಂದಾಯಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಜಾಸ್ತಿಯಿದ್ದರೂ, ಕಡಿಮೆ ರೈತರು ನೋಂದಾಯಿಸಿಕೊಂಡಿದ್ದಾರೆ. ಹಾಗಾಗಿ, ಅಕ್ರಮ ನೋಂದಣಿಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದರು. ಇನ್ನೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. https://kannadanewsnow.com/kannada/breaking-indias-first-ai-language-model-hanuman-bharatgpt-to-launch-next-month/ https://kannadanewsnow.com/kannada/france-germany-italy-top-position-in-global-passport-ranking-india-ranks-80-global-passport-ranking/ https://kannadanewsnow.com/kannada/another-good-news-for-the-people-of-the-state-this-service-is-coming-to-your-doorstep/
ಬೆಂಗಳೂರು: ಆಶಾಕಿರಣ ಯೋಜನೆ ಯಡಿ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ಉಚಿತವಾಗಿ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ‘ಈ ಯೋಜನೆಯಡಿ ಮೊದಲ ಹಂತದಲ್ಲಿ ಹಾವೇರಿ, ಕಲಬುರಗಿ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳು, ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮನೆ ಮನೆಗೆ ತೆರಳಿ ಕುಟುಂಬದ ಸದಸ್ಯರ ಕಣ್ಣಿನ ತಪಾಸಣೆ ನಡೆಸಲಾಗುವುದು ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಿಸುವ ಉದ್ದೇಶವಿದೆ’ ಈ ನಡುವೆ ಈ ಬಗ್ಗೆ ಮಾಹಿತಿ ನೀಡಿರುವ ದಿನೇಶ್ ಗುಂಡುರಾವ್ ಅವರು ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರದ ಮಹತ್ವಾಕಾಂಕ್ಷಿ”ಆಶಾಕಿರಣ” ಯೋಜನೆ ರಾಜ್ಯವ್ಯಾಪಿ ಜಾರಿಯಾಗಿದೆ. ಜನರಲ್ಲಿ ಕಣ್ಣಿನ ಆರೈಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಆಶಾಕಿರಣ ಯೋಜನೆ ಈಗಾಗಲೇ…
ನವದೆಹಲಿ: ಇಲ್ಲಿನ ರೈತರ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ, ಸರ್ಕಾರವು ಸುಮಾರು 177 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ವೆಬ್ ಲಿಂಕ್ಗಳನ್ನು ಅಮಾನತುಗೊಳಿಸುವ ಮೂಲಕ ತಾತ್ಕಾಲಿಕ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಐಟಿ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಗೃಹ ಸಚಿವಾಲಯದ (ಎಂಎಚ್ಎ) ವಿನಂತಿಗಳ ಆಧಾರದ ಮೇಲೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿಐ) ಫೆಬ್ರವರಿ 14 ಮತ್ತು 19 ರಂದು ಈ ನಿರ್ದೇಶನಗಳನ್ನು ಹೊರಡಿಸಿದೆ. ಐಟಿ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ, ಕಂಪ್ಯೂಟರ್ ಸಂಪನ್ಮೂಲಗಳ ಮೂಲಕ ಯಾವುದೇ ಮಾಹಿತಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿದೆ. ಜೂನ್ 2020 ರಲ್ಲಿ ಚೀನಾದ ವೆಬ್ಸೈಟ್ಗಳನ್ನು ನಿರ್ಬಂಧಿಸಲು ಈ ಹಿಂದೆ ಬಳಸಲಾದ ಈ ಕಾನೂನು ನಿಬಂಧನೆ, ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ ಎನ್ನಲಾಗಿದೆ. https://kannadanewsnow.com/kannada/opposition-leaders-are-being-intimidated-and-lured-into-bjp-aicc-president-mallikarjun-kharge/ https://kannadanewsnow.com/kannada/terror-shadow-over-india-england-test-pannu-threatens-to-cancel-the-match/ https://kannadanewsnow.com/kannada/i-will-salute-you-100-crores-to-whom-did-cm-siddaramaiah-say-this-in-the-house/
ರಾಂಚಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ನಡೆಯಬೇಕಿತ್ತು. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ ವ್ಯಕ್ತಿ ಬೇರೆ ಯಾರೂ ಅಲ್ಲ, ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನು. ಆದಾಗ್ಯೂ, ಈಗ ಆ ಭಯೋತ್ಪಾದಕನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಮತ್ತು ಪಂದ್ಯವನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ ಯುಎಸ್ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನು ವಿರುದ್ಧ ಜಾರ್ಖಂಡ್ ಪೊಲೀಸರು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ. ಗೃಹ ಸಚಿವಾಲಯವು ಭಯೋತ್ಪಾದಕ ಎಂದು ಪಟ್ಟಿ ಮಾಡಿರುವ ಪನ್ನು, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊ ಮೂಲಕ ಕ್ರಿಕೆಟ್ ಪಂದ್ಯಕ್ಕೆ ಅಡ್ಡಿಪಡಿಸುವಂತೆ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) (ಮಾವೋವಾದಿ) ಗೆ ಮನವಿ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಫೆಬ್ರವರಿ 23 ರಂದು ರಾಂಚಿಯ ಜೆಎಸ್ಸಿಎ ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್ನಲ್ಲಿ ಪ್ರಾರಂಭವಾಗಲಿದೆ. https://kannadanewsnow.com/kannada/i-will-salute-you-100-crores-to-whom-did-cm-siddaramaiah-say-this-in-the-house/ https://kannadanewsnow.com/kannada/after-2-5-years-sidhu-becomes-ex-cm-mp-d-k-sureshs-statement/ https://kannadanewsnow.com/kannada/covid-vaccines-have-increased-heart-brain-blood-health-study/
ಬೆಂಗಳೂರು: ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ ಈ ರೀತಿ ಪ್ರಶ್ನಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ: ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು. ಈ ವೇಳೆ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಧ್ಯ ಪ್ರವೇಶಿಸಿ, ನಿಮ್ಮ ಕೋಟಿ ನಮಸ್ಕಾರ ನಮಗೆ ಬೇಡ. ಆದರೆ ಪ್ರಧಾನಿ ಮತ್ತು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಕರೆಯುವುದನ್ನು ನಿಲ್ಲಿಸಿ ಎನ್ನುವ ಮೂಲಕ ವಿಷಯಾಂತರ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ಬಿಜೆಪಿ ಮಾಡಿದ ಅವಮಾನವನ್ನು ಪ್ರಸ್ತಾಪಿಸುವಾಗ ಬಾಯಿತಪ್ಪಿ ಏಕ ವಚನ ಬಳಸಿದೆ. ಇದಕ್ಕೆ…
ಬೆಂಗಳೂರು : 2.5 ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ಎಂದು ಸಂಸದ, ಸಹೋದರ ಡಿ.ಕೆ. ಸುರೇಶ್ ಭವಿಷ್ಯ ನುಡಿದಿದ್ದು ಈ ಮೂಲಕ ಮತ್ತೆ ರಾಜ್ಯದಲ್ಲಿ ಸಿಎಂ ಗಾಧೆ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ರಾಜ್ಯ ವಿಧಾನಸಭಾ ಫಲಿತಾಂಶ ಬಂದ ಬಳಿಕ ಸಿಎಂ ಯಾರು ಆಗ್ತಾರೆ ಎನ್ನುವುದರ ಬಗ್ಗೆ ಕಾಂಗ್ರೆಸ್ನಲ್ಲಿ ತೀವ್ರ ಕೂತುಹಲ ಮೂಡಿತ್ತು ಈ ನಡುವಿನಲ್ಲಿ ಸಿಎಂ ಪಟ್ಟ ಬೇಕೇ ಬೇಕು ಅಂತ ಡಿ.ಕೆ ಶಿವಕುಮಾರ್ ಪಟ್ಟು ಹಿಡಿದು ಕೊನೆಗೆ ಡಿ.ಸಿಎಂ ಪಟ್ಟಕ್ಕೆ ತೃಪ್ತಿ ಪಟ್ಟುಕೊಂಡಿದ್ದು ನಮಗೆ ತಿಳಿದಿದೆ. ಈ ನಡುವೆ : 2.5 ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಕೂಡ ಎನ್ನಲಾಗುತಿತ್ತು. ಅದು ನಿಜ ಎನ್ನುವುದು ಈಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಹೇಳಿರುವುದು ಗಮನ ಸೆಳೆದಿದೆ. , 2.5 ವರ್ಷದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ. ಆದರೆ, ಕಾಲ ಬರುವವರೆಗೂ ನಾವು ಕಾಯಬೇಕು ಎಂದು ಹೇಳಿದ್ದಾರೆ. https://kannadanewsnow.com/kannada/opposition-leaders-are-being-intimidated-and-lured-into-bjp-aicc-president-mallikarjun-kharge/ https://kannadanewsnow.com/kannada/covid-vaccines-have-increased-heart-brain-blood-health-study/ https://kannadanewsnow.com/kannada/bjp-will-do-politics-over-peoples-dead-bodies-minister-ishwar-khandre/ https://kannadanewsnow.com/kannada/bjp-will-do-politics-over-peoples-dead-bodies-minister-ishwar-khandre/
ನವದೆಹಲಿ: ಫೈಜರ್, ಮಾಡರ್ನಾ ಮತ್ತು ಅಸ್ಟ್ರಾಜೆನೆಕಾದಂತಹ ಕಂಪನಿಗಳ ಕೋವಿಡ್ ಲಸಿಕೆಗಳು ಹೃದಯ, ಮೆದುಳು ಮತ್ತು ರಕ್ತದ ಅಸ್ವಸ್ಥತೆಗಳ ಅಪರೂಪದ ಘಟನೆಗಳೊಂದಿಗೆ ಸಂಬಂಧ ಹೊಂದಿವೆ ಎಂದು ಇದುವರೆಗಿನ ಅತಿದೊಡ್ಡ ಲಸಿಕೆ ಅಧ್ಯಯನ ತಿಳಿಸಿದೆ. ಗ್ಲೋಬಲ್ ವ್ಯಾಕ್ಸಿನ್ ಡಾಟಾ ನೆಟ್ವರ್ಕ್ನ ಸಂಶೋಧಕರು ಎಂಟು ದೇಶಗಳಲ್ಲಿ ಲಸಿಕೆ ಪಡೆದ 99 ಮಿಲಿಯನ್ ಜನರನ್ನು ವಿಶ್ಲೇಷಿಸಿದ್ದಾರೆ ಮತ್ತು 13 ವೈದ್ಯಕೀಯ ಪರಿಸ್ಥಿತಿಗಳ ಹೆಚ್ಚಳವನ್ನು ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಬ್ಲೂಮ್ಬರ್ಗ್ ನ್ಯೂಸ್ ವರದಿ ಮಾಡಿದೆ. https://kannadanewsnow.com/kannada/the-state-government-will-soon-invite-applications-for-1000-posts-of-village-administration-officer/ ಕಳೆದ ವಾರ ವ್ಯಾಕ್ಸಿನ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು, ಲಸಿಕೆಗಳು ನರವೈಜ್ಞಾನಿಕ, ರಕ್ತ ಮತ್ತು ಹೃದಯ ಸಂಬಂಧಿತ ವೈದ್ಯಕೀಯ ಪರಿಸ್ಥಿತಿಗಳಲ್ಲಿ ಸ್ವಲ್ಪ ಏರಿಕೆಗೆ ಸಂಬಂಧಿಸಿವೆ ಎಂದು ಕಂಡುಹಿಡಿದಿದೆ. ಫೈಜರ್-ಬಯೋಟೆಕ್ ಮತ್ತು ಮಾಡರ್ನಾದ ಎಂಆರ್ಎನ್ಎ ಲಸಿಕೆಗಳ ಮೊದಲ, ಎರಡನೇ ಮತ್ತು ಮೂರನೇ ಡೋಸ್ಗಳಲ್ಲಿ ಹೃದಯ ಸ್ನಾಯುವಿನ ಉರಿಯೂತ ಸೇರಿದಂತೆ ಮಯೋಕಾರ್ಡಿಟಿಸ್ನ ಅಪರೂಪದ ಪ್ರಕರಣಗಳು ಕಂಡುಬಂದಿವೆ. ಅಸ್ಟ್ರಾಜೆನೆಕಾದ ವೈರಲ್-ವೆಕ್ಟರ್ ಶಾಟ್ನ ಮೂರನೇ ಡೋಸ್ ಪಡೆದವರಲ್ಲಿ ಹೃದಯದ ಸ್ನಾಯುವಿನ ಉರಿಯೂತವಾದ ಪೆರಿಕಾರ್ಡಿಟಿಸ್ 6.9 ಪಟ್ಟು ಹೆಚ್ಚಿನ ಅಪಾಯವನ್ನು…
ಬೆಂಗಳೂರು: ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು. ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು. ಕೇಂದ್ರದಲ್ಲಿ UPA ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು. https://kannadanewsnow.com/kannada/mobile-users-should-note-google-instructs-you-to-delete-these-apps-immediately/ https://kannadanewsnow.com/kannada/denial-of-sex-for-2-years-woman-files-fir-against-husband/ https://kannadanewsnow.com/kannada/the-state-government-will-soon-invite-applications-for-1000-posts-of-village-administration-officer/ https://kannadanewsnow.com/kannada/breaking-kcet-application-deadline-extended-again-heres-the-new-date-kcet-2024/ ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ…
ಬೆಂಗಳೂರು: ಕರ್ನಾಟಕ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡರು ರಾಜ್ಯದಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ರಾಜ್ಯದಲ್ಲಿ 1 ಸಾವಿರ ಗ್ರಾಮ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವುದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ತಿಂಗಳೊಳಗೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು. https://kannadanewsnow.com/kannada/breaking-kcet-application-deadline-extended-again-heres-the-new-date-kcet-2024/ https://kannadanewsnow.com/kannada/applications-already-invited-for-post-matric-scholarship-this-document-is-mandatory-to-apply/ https://kannadanewsnow.com/kannada/the-country-is-secure-only-if-the-states-are-secure-cm-siddaramaiah/ https://kannadanewsnow.com/kannada/mobile-users-should-note-google-instructs-you-to-delete-these-apps-immediately/ ವಿಧಾನಸಭೆಯ ಕಲಾಪದ ವೇಳೆ ಕುಂದಾಪುರ ಶಾಸಕ ಕಿರಣಕುಮಾರ್ ಕೊಡ್ಗಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಖಾಲಿ ಹುದ್ದೆಗಳ ಭರ್ತಿ ಮಾಡುವುದರ ಜೊತೆಗೆ ನಿಯೋಜನೆ ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದ ಸಚಿವರು, ಕುಂದಾಪುರ ತಾಲೂಕು ತಹಸೀಲ್ದಾರರ ಕಚೇರಿಯ 19 ಜನ ಸಿಬ್ಬಂದಿ ಬೇರೆಡೆ ನಿಯೋಜನೆ ಮೇಲೆ ಹೋಗಿರುವ ವಿಷಯ ತಿಳಿದುಬಂದಿದ್ದು, ಅವಶ್ಯವಿರುವ 5 ಜನರನ್ನು ಹೊರತುಪಡಿಸಿ ಉಳಿದ 14 ಜನರನ್ನು ಕೂಡಲೇ ಮೂಲಸ್ಥಳವಾದ ಕುಂದಾಪುರ ತಹಸೀಲ್ದಾರ್ ಕಚೇರಿಗೆ ಹಿಂದುರಿಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಈ…
ಬೆಂಗಳೂರು: ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು ಎಂದು ಮುಖ್ಯಮಂತ್ರಿಗಳು ಪುನರುಚ್ಛರಿಸಿದರು. ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು. ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ‘ಕೋ ಆಪರೇಟಿವ್ ಫೆಡರಿಲಿಸಂ’ ಎಂದು ಹೇಳುತ್ತಾರೆ. ಆದರೆ ಅವರ ಮತ್ತು ಕೇಂದ್ರ ಸರ್ಕಾರದ ನಡವಳಿಕೆಯಲ್ಲಿ ಇದು ಕಾಣುತ್ತಿಲ್ಲ ಎನ್ನುತ್ತಾ ಕೇಂದ್ರದಿಂದ ರಾಜ್ಯಕ್ಕೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು. https://kannadanewsnow.com/kannada/breaking-kcet-application-deadline-extended-again-heres-the-new-date-kcet-2024/ https://kannadanewsnow.com/kannada/national-anthem-not-mandatory-in-private-schools-another-controversial-order-from-state-government/ https://kannadanewsnow.com/kannada/mobile-users-should-note-google-instructs-you-to-delete-these-apps-immediately/ https://kannadanewsnow.com/kannada/%e0%b2%96%e0%b2%be%e0%b2%b8%e0%b2%97%e0%b2%bf-%e0%b2%b6%e0%b2%be%e0%b2%b2%e0%b3%86%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%a8%e0%b2%be%e0%b2%a1%e0%b2%97%e0%b3%80%e0%b2%a4%e0%b3%86/ ರಾಜ್ಯದಿಂದ ತೆರಿಗೆ ಕೇಂದ್ರಕ್ಕೆ ಹೋಗುತ್ತದೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತಿದೆ. ತೆರಿಗೆ ಹಂಚಿಕೆಯಲ್ಲಿ 2023-24ಕ್ಕೆ 37252 ಕೋಟಿ ರೂ. ಬರುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಂದ 13005 ಕೋಟಿ , ಒಟ್ಟು 50257 ಕೋಟಿ ಮಾತ್ರ ರೂ. ಬರುತ್ತಿದೆ. ಕೇಂದ್ರದ ಬಜೆಟ್…