Author: kannadanewsnow07

ಬೆಂಗಳೂರು: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದರು. ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ರಾಜ್ಯಕ್ಕೆ 77 ಸಾವಿರ ಕೋಟಿ ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ , ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರದ ಕಡಿಮೆ ಅವಧಿಯಲ್ಲೇ ಇಷ್ಟೊಂದು ಪ್ರಮಾಣದ ಹೂಡಿಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ವಿವರಿಸಿದರು.…

Read More

ಬೆಂಗಳೂರು: ಪಿಯುಸಿ ಪರೀಕ್ಷೆಯು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಯಲಿದೆ. SSLC ಪರೀಕ್ಷೆಯು ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.  https://kannadanewsnow.com/kannada/big-news-state-govt-plans-probe-into-works-at-jayadeva-hospital/ https://kannadanewsnow.com/kannada/breaking-2018-rahul/ ಅಂದ ಹಾಗೇ ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಒಳಗೊಂಡಿದೆ ಆಂತ ತಿಳಿಸಿದರು . 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ 04-03-2024 ಸೋಮವಾರ ಗಣಿತ ಪರೀಕ್ಷೆ 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ 09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ…

Read More

ನವದೆಹಲಿ: ಮಗಳು ಉತ್ತಮ ಆರ್ಥಿಕ ಸ್ಥಿತಿಯನ್ನು ಹೊಂದಿದ್ದಾಳೆ ಎಂಬ ಕಾರಣಕ್ಕಾಗಿ, ಅವಳ ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಹಕ್ಕು ಸಾಧಿಸಲು ಸ್ವಯಂಚಾಲಿತವಾಗಿ ನಿರಾಕರಿಸಲಾಗುವುದಿಲ್ಲ ಎಂದು ತೆಲಂಗಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.   https://kannadanewsnow.com/kannada/breaking-2018-rahul/ https://kannadanewsnow.com/kannada/big-news-state-govt-plans-probe-into-works-at-jayadeva-hospital/ ನ್ಯಾಯಮೂರ್ತಿ ಎಂ.ಜಿ.ಪ್ರಿಯದರ್ಶಿನಿ ಅವರು ತಮ್ಮ ಸಹೋದರಿಯ ಪರವಾಗಿ ವಿಭಜನೆ ಮೊಕದ್ದಮೆ ತೀರ್ಪು ನೀಡಿದ ನಂತರ ಅವರ ಸಹೋದರನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ. ಉತ್ತಮ ಆರ್ಥಿಕ ಸ್ಥಿತಿಯ ಕಾರಣದಿಂದಾಗಿ ತನ್ನ ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಪಾಲನ್ನು ಪಡೆಯಲು ಅನುಮತಿಸಲಾಗುವುದಿಲ್ಲ ಎಂದು ಹೇಳಲಾಗಿದೆ. ವಿಚಾರಣಾ ನ್ಯಾಯಾಲಯವು ಆಪಾದಿತ ವಿಲ್ ಅನ್ನು ನಂಬಲಿಲ್ಲ ಮತ್ತು ಸಹೋದರಿಯ ಪರವಾಗಿ ಮೊಕದ್ದಮೆಯನ್ನು ಘೋಷಿಸಿತು. ಸಹೋದರ (ಮೇಲ್ಮನವಿದಾರ) ನ್ಯಾಯಾಲಯಕ್ಕೆ ಹಾಜರುಪಡಿಸಿದ ವಿಲ್ ಡೀಡ್ನಲ್ಲಿ, ಸಹೋದರಿ “ಉತ್ತಮ ಆರ್ಥಿಕ ಸ್ಥಿತಿ” ಹೊಂದಿರುವುದರಿಂದ, ತನ್ನ ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಯಾವುದೇ ಪಾಲನ್ನು ಪಡೆಯಲು ಅವಳು ಅರ್ಹಳಲ್ಲ ಎಂದು ಉಲ್ಲೇಖಿಸಲಾಗಿದೆ. ವಾದಿ (ಸಹೋದರಿ) ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂಬ ಕಾರಣಕ್ಕಾಗಿ, ಸ್ವಯಾರ್ಜಿತ ಆಸ್ತಿಗಳಲ್ಲಿ ಪಾಲನ್ನು ಕೇಳುವ ಅವಳ ತಂದೆಯ…

Read More

ಹುಬ್ಬಳ್ಳಿ: ರಾಜ್ಯ ಪೊಲೀಸ್ ನೇಮಕಾತಿ ಪರೀಕ್ಷೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರಾಜ್ಯದೊಳಗೆ ಸಂಚರಿಸುವ ವಿವಿಧ ರೈಲುಗಳಲ್ಲಿ ಒಂದು ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕ ರೈಲ್ವೆ ವಲಯ ನಿರ್ಧರಿಸಿದೆ. ಮೈಸೂರು-ಬೆಳಗಾವಿ (17301) ಫೆ. 24ರಿಂದ 25ರವರೆಗೆ, ಬೆಳಗಾವಿ- ಮೈಸೂರು (17302), ಮೈಸೂರು- ಬಾಗಲಕೋಟ (17307) ಫೆ. 23 ರಿಂದ ಬಾಗಲಕೋಟೆ-ಮೈಸೂರು (17308) ಫೆ. 24ರಿಂದ 26, ಮೈಸೂರು-ತಾಳಗುಪ್ಪ ಫೆ. 23ರಿಂದ 25 ( 16227), ತಾಳಗುಪ್ಪ ಮೈಸೂರು (16228) ಫೆ. 24ರಿಂದ 26, ಈ ಎಲ್ಲ ರೈಲುಗಳಿಗೆ ನಿಗದಿತ ದಿನಾಂಕಗಳಂದು ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿ ಜೋಡಿಸಲಾಗುತ್ತಿದೆ. ಕೆಎಸ್‌ಆರ್ ಬೆಂಗಳೂರು-ಹುಬ್ಬಳ್ಳಿ (17391) ಫೆ. 25ರಿಂದ 27ರವರೆಗೆ ಹುಬ್ಬಳ್ಳಿ-ಕೆಎಸ್‌ಆ‌ ಬೆಂಗಳೂರು (17392) ಫೆ. 22ರಿಂದ 25, ಕೆಎಸ್‌ಆರ್ ಬೆಂಗಳೂರು-ಹೊಸಪೇಟೆ (05243) ಫೆ. 23ರಿಂದ 25, ಹೊಸಪೇಟೆ-ಕೆಎಸ್‌ಆರ್ ಬೆಂಗಳೂರಿಗೆ ಫೆ.24ರಿಂದ 26, ಹೊಸಪೇಟೆ-ಹರಿಹರ (06245) ಫೆ. 23ರಿಂದ 25, ಹರಿಹರ-ಹೊಸಪೇಟೆ (06246) ಫೆ. 24ರಿಂದ 25, ಕೆಎಸ್‌ಆ‌ ಬೆಂಗಳೂರು-ಮೀರಜ್ (16589) ಫೆ.…

Read More

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ವಿಷಯಗಳಲ್ಲಿ ಖಾಲಿ ಇದ್ದ ಒಟ್ಟು 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್   ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸರ್ಕಾರದ ನೇಮಕಾತಿ ಹಾಗೂ ಮೀಸಲಾತಿ ನಿಯಮಗಳನ್ವಯ ದಿನಾಂಕ: 30-09-2021ರಂದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು. ಅದರಂತೆ ಸರ್ಕಾರದ ಸುತ್ತೋಲೆ ದಿನಾಂಕ: 06-06-2020 ರಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಪಾಲಿಸಬೇಕಾದ ವಿಧಿವಿಧಾನಗಳ ಬಗ್ಗೆ ತಿಳಿಸಲಾಗಿರುತ್ತದೆ. ಸದರಿ ಸುತ್ತೋಲೆಯಲ್ಲಿ ಒಂದೇ ಅಧಿಸೂಚನೆ ಮೂಲಕ ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ ನೇರ…

Read More

ನವದೆಹಲಿ: ಹಲವಾರು ವರ್ಷಗಳಿಂದ ಚಲನಚಿತ್ರ ಉದ್ಯಮದಲ್ಲಿ ತಮ್ಮ ಅನೇಕ ಅದ್ಭುತ ಪಾತ್ರಗಳಿಂದ ಅಭಿಮಾನಿಗಳನ್ನು ಮೆಚ್ಚಿದ ರಿತುರಾಜ್ ಸಿಂಗ್ ಕಳೆದ ರಾತ್ರಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ನಟನಿಗೆ ಕೇವಲ 59 ವರ್ಷ ವಯಸ್ಸಾಗಿತ್ತು ಮತ್ತು ಅವರ ಮೇದೋಜ್ಜೀರಕ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಈ ಸುದ್ದಿ ಅವರ ಆಪ್ತರಿಗೆ ಮತ್ತು ಅಭಿಮಾನಿಗಳಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ.  ಮೇದೋಜ್ಜೀರಕ ಗ್ರಂಥಿಯ ಕಾಯಿಲೆಯಿಂದ ಬಳಲುತ್ತಿದ್ದ ನಟ ರಿತುರಾಜ್ ಇತ್ತೀಚೆಗೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ಹಠಾತ್ ನಿಧನಕ್ಕೆ ನೆಟ್ಟಿಗರು ಮತ್ತು ಆಪ್ತರು ಶೋಕ ವ್ಯಕ್ತಪಡಿಸಿದ್ದಾರೆ ಮತ್ತು ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅವರೊಂದಿಗೆ ಉತ್ತಮ ಸ್ನೇಹಿತರಾಗಿದ್ದ ಅಮಿತ್ ಬೆಹ್ಲ್ ಈ ಸುದ್ದಿಯನ್ನು ದೃಢಪಡಿಸಿದರು ಮತ್ತು ಅದರ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: ಅನಧಿಕೃತ ಸಾಗುವಳಿ ಸಕ್ರಮೀಕರಣ (ಬಗರ್ ಹುಕುಂ ಸಾಗುವಳಿ) ಕೋರಿ ರಾಜ್ಯದಲ್ಲಿ 9.55ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, 54ಲಕ್ಷ ಹೆಕ್ಟೇರ್ ಜಮೀನು ಸಕ್ರಮಕ್ಕೆ ಕೋರಲಾಗಿದೆ. ಆದರೇ ಅಚ್ಚರಿ ಎಂದರೆ ವಾಸ್ತವವಾಗಿ ಅಷ್ಟು ಪ್ರಮಾಣದ ಸರಕಾರಿ ಜಮೀನು ರಾಜ್ಯದಲ್ಲಿ ಲಭ್ಯವಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದರು. ಹರಿಹರ ಶಾಸಕ ಹರೀಶ್ ಬಿ.ಪಿ ಅವರು ವಿಧಾನಸಭಾ ಅಧಿವೇಶನದಲ್ಲಿಂದು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ಬಡವರಿಗೆ ಸಹಾಯ ಮಾಡಲು ತಂದಿರುವ ಕಾನೂನು ದುರುಪಯೋಗ ಹೆಚ್ಚಾಗುತ್ತಿದೆ. ಒಂದು ಕಡೆ ಓರ್ವ ವ್ಯಕ್ತಿ 25 ಅರ್ಜಿ ಸಲ್ಲಿಸಿರುವುದನ್ನು, ಅರ್ಜಿ ಸಲ್ಲಿಸಿದ ವ್ಯಕ್ತಿ 1990 ಏಪ್ರಿಲ್ 14ಕ್ಕಿಂತ ಮುಂಚೆ ಕಡೆಯ ಪಕ್ಷ ಹಿಂದಿನ ಮೂರು ವರ್ಷಗಳ ಕಡಿಮೆಯಿಲ್ಲದ ಅವಧಿಯ ನಿರಂತರ ಭೂಮಿಯ ಅನಧಿಕೃತ ಅಧಿಬೋಗನಾಗಿರಬೇಕು ಎಂಬ ನಿಯಮವಿದೆ; ಬಂದಿರುವ ಕೆಲ ಅರ್ಜಿಗಳಲ್ಲಿ ಈಗμÉ್ಟೀ 18 ವರ್ಷ ತುಂಬಿದವರು ಸಹ ಇದ್ದಾರೆ ಎಂಬ ಬೇಸರವನ್ನು ಸಚಿವ ಕೃಷ್ಣಬೈರೇಗೌಡ ಅವರು ಹೊರಹಾಕಿದರು. ಹರಿಹರ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ 138…

Read More

ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ ಯುವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ (ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಇತ್ಯಾದಿ) ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಸಮಿತಿಯ ಮಾರ್ಗದರ್ಶನದಂತೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗಿದೆ. ಹಾಗಾದ್ರೇ ನೋಂದಣಿ ಹೇಗೆ..? ಅಭ್ಯರ್ಥಿಗಳು ಮತ್ತು ಕಂಪನಿಗಳು ಈ https://udyogamela.skillconnect.kaushalkar.com/ ವೆಬ್ಸೈಟ್ನಲ್ಲಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು. 1) https://skillconnect.kaushalkar.com/new ಭೇಟಿ ನೀಡಿ ಹಂತ 2 : ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ ಹಂತ 3 : ಉದ್ಯೋಗ ಮೇಳ ಕ್ಲಿಕ್ ಮಾಡಿ ಹಂತ 4: ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್…

Read More

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಸೋಮವಾರ ಇಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಯಿತು. https://kannadanewsnow.com/kannada/%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%86%e0%b2%b0%e0%b3%8b%e0%b2%97%e0%b3%8d%e0%b2%af%e0%b2%a6/ https://kannadanewsnow.com/kannada/breaking-pak-don/ ಬಳಿಕ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ವಿಧಾನಸೌಧದಲ್ಲಿ ನಡೆದ ಒಡಂಬಡಿಕೆ ವಿನಿಮಯದ ನಂತರ ಮಾತನಾಡಿದ ಸಚಿವ ಪಾಟೀಲ, `ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್…

Read More

ಬೆಂಗಳೂರು: ವಸತಿ ಶಾಲೆಗಳಲ್ಲಿ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ” ಎಂಬ ಕುವೆಂಪು ವಿರಚಿತ ಸಾಲುಗಳನ್ನು ಬದಲಾಯಿಸಿ, “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ” ಎನ್ನುವ ನಾಮಮಫಲಕ ಈಗ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಸಮಾಜ ಕಲ್ಯಾಣ ಅಧಿಕಾರಿ ಮಣಿವಣ್ಣನ್‌ ಅವರನ್ನು ಸರ್ಕಾರ ಬೇರೆ ಕಡೆ ವರ್ಗಾವಣೆ ಮಾಡುವುದಕ್ಕೆ ಮುಂದಾಗಿದೆ ಎನ್ನಲಾಗಿದೆ. 1998 ಐಎಎಸ್‌ ಬ್ಯಾಚ್ ಅಧಿಕಾರಿ ಮಣಿವಣ್ಣನ್ ಅವರ ಕಾರ್ಯವೈಕರಿ ಬಗ್ಗೆ ಇಲಾಖೆಯಲ್ಲಿ ಅಸಮಾಧಾನ ಕೂಡ ಇದೇ ಎನ್ನಲಾಗಿದ್ದು, ಇಲಾಖೆಗೆ ಸಂಬಂಧಪಟ್ಟ ಯಾವುದೇ ಕೆಲಸ ಹಾಗೂ ಬದಲಾವಣೆ ಮಾಡುವುದಕ್ಕೆ ಅವರು ಮನಸ್ಸು ಮಾಡುತ್ತಿಲ್ಲ ಎನ್ನಲಾಗಿದೆ. ಇದಲ್ಲದೇ ಆಪ್ತರಿಗೆ ಇಲಾಖೆಯಲ್ಲಿ ಸ್ಥಾನ ನೀಡುತ್ತಿದ್ದಾರೆ ಎನ್ನಲಾಗಿದ್ದು, ಇಲಾಖೆಯಲ್ಲಿ ಕೆಲಸಗಳನ್ನು ಕೂಡ ತಮ್ಮ ಆಪ್ತರಿಗೆ ನೀಡುತ್ತಿದ್ದಾರೆ ಎನ್ನುವ ಆರೋಫ ಕೇಳಿ ಬಂದಿದೆ. ಕೆಲ ತಿಂಗಳ ಹಿಂದೆ ಶಾಸಕರೊರಬ್ಬರು ಮತ್ತು ಮಹಿಳಾ ಐಎಎಸ್‌ ಅಧಿಕಾರಿಗಳ ನಡುವಿನ ವಿವಾದದಲ್ಲಿ ಸಂಧಾನವನ್ನು ಕೂಡ ಮಾಡಲು ಪಿ.ಮಣಿವಣ್ಣನ್‌ ಮುಂದಾಗಿದ್ದರು ಎನ್ನುವ ಪೋಟೋಗಳು ವೈರಲ್‌ ಆಗಿದ್ದವು. https://kannadanewsnow.com/kannada/bigg-news-state-govt-withdraws-controversial-signboard-following-outrage/ https://kannadanewsnow.com/kannada/breaking-big-relief-for-siddaramaiah-other-leaders-sc-stays-trial/

Read More