Author: kannadanewsnow07

ಬೆಂಗಳೂರು: ಅರಣ್ಯ ಪದವೀಧರ ವಿದ್ಯಾರ್ಥಿಗಳು ಫ್ರೀಡಂ ಪಾರ್ಕ್‍ನಲ್ಲಿ ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಅವರು ತಮ್ಮ ಬೇಡಿಕೆಗಳ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿದ್ದಾರೆ. ಪ್ರಕೃತಿ ಪರಿಸರ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ, ವನ್ಯ ಜೀವಿ ಸಂರಕ್ಷಣೆ, ಎಲ್ಲಾ ಕಡೆ ಮಾಲಿನ್ಯ ಇದೆ. ನೀರಿನಲ್ಲಿ ಮಾಲಿನ್ಯ, ಗಾಳಿಯಲ್ಲೂ ಮಾಲಿನ್ಯ, ಹೀಗಾಗಿ ಜಾಗತಿಕ ತಾಪಮಾನ ಹೆಚ್ಚಾಗಿ ಅನೇಕ ರೋಗ ರುಜಿನಗಳು ಬರುತ್ತಿವೆ. ಇರುವಂತಹ ಒಂದೇ ಭೂಮಿಯಲ್ಲಿ ಪರಿಸರವನ್ನು ಸಂರಕ್ಷಣೆ ಮಾಡಿ ಆರೋಗ್ಯಕರವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಾಗಿದೆ. ಅಂತಹ ಒಂದು ಜವಾಬ್ದಾರಿ ನಿಮ್ಮ ಮೇಲಿದೆ. ನಿಮ್ಮ ಬೇಡಿಕೆಗಳಾದ ಉಪವಲಯ ಅರಣ್ಯಾಧಿಕಾರಿಗಳಲ್ಲಿ ಶೇ.50 ಪ್ರತಿಶತ ಅರಣ್ಯ ಪದವೀಧರರಿಗೆ ಮೀಸಲು ಇರಿಸಲಾಗಿತ್ತು. ಆಡಳಿತ ಸಮಿತಿಯ ವರದಿಯಲ್ಲಿ 100 % ಮುಂಬಡ್ತಿ ಮುಖಾಂತರ ತುಂಬಲು ಶಿಫಾರಸ್ಸು ಮಾಡಿರುತ್ತಾರೆ. ಅದೇ ರೀತಿ ಒಪ್ಪಿಕೊಂಡರೆ ಅರಣ್ಯ ಪದವೀಧರರಿಗೆ…

Read More

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವವರನ್ನು ಪತ್ತೆ ಹಚ್ಚಿ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ಅವರು ಇಂದು ವಿಧಾನಸಭಾ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಪ್ರತಿಪಕ್ಷದ ಸದಸ್ಯರುಗಳು ರಾಜ್ಯಸಭಾ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿ ಡಾ.ಸೈಯದ್ ನಾಸೀರ್ ಹುಸೇನ್ ಬೆಂಗಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಪ್ರಸ್ತಾಪಿಸಿದ ಸಂದರ್ಭದಲ್ಲಿ ಗೃಹ ಸಚಿವರು ಮಾತನಾಡಿ, ಈಗಾಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಈ ಪ್ರಕರಣದ ಬಗ್ಗೆ ಎಫ್‍ಐಆರ್ ದಾಖಲಿಸಿಕೊಂಡು, ತನಿಖೆಯನ್ನು ಚುರುಕುಗೊಳಿಸಿದೆ. ದೇಶದ ಹಿತದೃಷ್ಟಿಯಿಂದ ಹಾಗೂ ಸಮಾಜದ ಹಿತದೃಷ್ಟಿಯಿಂದ ಅಪರಾಧಿಗಳನ್ನು ಆದಷ್ಟು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಪಾಕಿಸ್ತಾನದ ಪರ ಘೋಷಣೆ ಕೂಗಿರುವವರನ್ನು ರಕ್ಷಿಸುವ ಮಾತೇ ಇಲ್ಲ ಎಂದರು. ರಾಜ್ಯದಲ್ಲಿ ಪಾಕಿಸ್ತಾನದ ಪರ ಧ್ವನಿ ಎತ್ತಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆಯನ್ನು ಯಾರೇ ಕೂಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ತಲೆಯ ಚರ್ಮ ಅಂದರೆ ನೆತ್ತಿಯ ಚರ್ಮ ಕೂಡ ತುಂಬಾ ಸೂಕ್ಷ್ಮವಾಗಿರುತ್ತದೆ. ಇದು ಸೂಕ್ಷ್ಮ ಚರ್ಮ ಎಂದರೆ ತಪ್ಪಾಗಲಾರದು. ತಲೆಯ ಚರ್ಮದ ತುರಿಕೆಗೆ ಅನೇಕ ಕಾರಣಗಳಿವೆ. ಹೊರಗಡೆಯ ಟ್ರಾಫಿಕ್‌ ಧೂಳು, ಬೆವರು, ತಲೆಯ ಹೊಟ್ಟು, ಕಾರ್ಬನ್‌ ಮಿಶ್ರಿತ ಹೊಗೆ, ಹೀಗೆ ಅನೇಕ ಕಾರಣಗಳಿವೆ. ಈ ಎಲ್ಲಾ ಕಾರಣಗಳಿಂದ ನೆತ್ತಿಯ ಚರ್ಮಕ್ಕೆ ಶಿಲಿಂಧ್ರ ಸೊಂಕು ಉಂಟಾಗುತ್ತದೆ. ಈ ಶಿಲೀಂದ್ರ ಸೋಕು ನೆತ್ತಿ ಚರ್ಮಕ್ಕೆ ತುಂಬಾ ಹಾನಿಯುಂಟು ಮಾಡುತ್ತದೆ. ಈ ಸಮಸ್ಯೆಗೆ ನಾವಿಂದು ಪರಿಹಾರ ಕಂಡುಕೊಳ್ಳೋಣ ಬನ್ನಿ. ಬೇವು ಈ ತಲೆ ಚರ್ಮದ ಸೋಂಕಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ. ಅಷ್ಟೆ ಅಲ್ಲದೇ ಬೇವು ಇನ್ನುಳಿದ ಚರ್ಮದ ಸೋಂಕಿಗೂ ಮದ್ದಾಗಿದೆ. ಬೇವನ್ನು ಬಳಸಿ ನೆತ್ತಿಯ ಶಿಲೀಂದ್ರ ಸೋಂಕಿಗೆ ಹೇಗೆ ಚಿಕಿತ್ಸೆ ನೀಡಬೇಕೆಂದರೆ, ಬೇವಿ ಎಲೆಗಳನ್ನು ಕಿತ್ತು ಅವುಗಳನ್ನು ಶುಭ್ರವಾಗಿ ಸ್ವಚ್ಛವಾದ ನೀರಿನಲ್ಲಿ ತೊಳೆಯಬೇಕು. ಒಂದು ಮಿಕ್ಸಿ ಜಾರಿಗೆ ಬೇವಿನ ಎಲೆಗಳನ್ನು ಹಾಕಿ ಮಿಕ್ಸಿ ಮಾಡಿ ಪೇಸ್ಟ್‌ ರೂಪದಲ್ಲಿ ಮಾಡಿಕೊಳ್ಳಬೇಕು. ಈ ಬೇವಿನ ಪೇಸ್ಟ್‌ಗೆ ನಿಂಬೆ ರಸ…

Read More

ನವದೆಹಲಿ: 1993 ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ತುಂಡಾ ಅವರನ್ನು ಟಾಡಾ (ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳ ಕಾಯ್ದೆ) ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.   https://kannadanewsnow.com/kannada/if-you-have-constipation-stop-consuming-these-foods-immediately-2/ ಮಹತ್ವದ ಬೆಳವಣಿಗೆಯೊಂದರಲ್ಲಿ, 1993 ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ತುಂಡಾ ಅವರನ್ನು ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳ ಕಾಯ್ದೆ (ಟಾಡಾ) ನ್ಯಾಯಾಲಯ ಖುಲಾಸೆಗೊಳಿಸಿದೆ. https://kannadanewsnow.com/kannada/bjp-moves-court-against-ban-on-chakravarthy-sulibele-from-entering-kalaburagi/ https://kannadanewsnow.com/kannada/dont-you-feel-ashamed-to-justify-the-injustice-done-to-7-crore-kannadigas-siddaramaiah/ 2013ರಲ್ಲಿ ಭಾರತ-ನೇಪಾಳ ಗಡಿಯ ಬನ್ಬಾಸಾದಲ್ಲಿ ಈತನನ್ನು ಬಂಧಿಸಲಾಗಿತ್ತು. ಹಲವಾರು ಬಾಂಬ್ ಸ್ಫೋಟಗಳ ಆರೋಪಗಳ ಹೊರತಾಗಿಯೂ, ಅವರ ವಿರುದ್ಧದ ನಾಲ್ಕು ಪ್ರಕರಣಗಳಲ್ಲಿ 2016 ರಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್ ಪಡೆದಿದ್ದ. ಆರೋಪಗಳನ್ನು ರೂಪಿಸಲು ಅವರ ವಿರುದ್ಧ ಗಮನಾರ್ಹ ಪುರಾವೆಗಳನ್ನು ತರಲು ದೆಹಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾಯಾಲಯವು ಹೇಳಿದೆ. ಆದಾಗ್ಯೂ, ಲಷ್ಕರ್-ಎ-ತೈಬಾ ಭಯೋತ್ಪಾದಕನ ವಿರುದ್ಧ ಹಲವಾರು ಪ್ರಕರಣಗಳು ಬಾಕಿ ಇರುವ ಕಾರಣ ಲಾಕಪ್ನಲ್ಲಿಯೇ ಉಳಿದಿದ್ದಾನೆ.

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಸರ್ವಕಾಲಕ್ಕೂ ಸುಲಭವಾಗಿ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ಬಾಳೆಹಣ್ಣು ಸಾಮಾನ್ಯವಾಗಿ ಎಲ್ರೂ ನಿತ್ಯವೂ ಸೇವಿಸುತ್ತಾರೆ. ಆದರೆ ಇದೇ ಬಾಳೆಹಣ್ಣಿನ ಸಿಪ್ಪೆ ಎಸೆಯುವ ಮೊದಲು ಒಮ್ಮೆ ಈ ಲೇಖನ ಓದಿಕೊಳ್ಳಿ. ಬಾಳೆಹಣ್ಣಿನ ಸಿಪ್ಪೆಯಿಂದಲೂ ಅನೇಕ ಲಾಭಗಳಿವೆ, ಅವುಗಳೆಂದರೆ ಬಾಳೆಹಣ್ಣಿನ ಸಿಪ್ಪೆ ನೋವು ನಿವಾರಕವಾಗಿ ಕೆಲಸ ಮಾಡುತ್ತದೆ. ದೇಹದ ಯಾವುದೇ ಭಾಗದಲ್ಲಿ ಊರಿ ನೋವು ಕಾಣಸಿಕೊಂಡರೆ ಅಲ್ಲಿ ಚೆನ್ನಾಗಿ ಮಾಗಿದ ಬಾಳೆಹಣ್ಣಿನ ಸಿಪ್ಪೆಯನ್ನು ಇಟ್ಟು 20 ನಿಮಿಷಗಳ ಕಾಳ ಹಾಗೆಯೇ ಬಿಡಿ. ನಂತರ ಸಿಪ್ಪೆ ತೆಗೆಯಿರಿ. ನೋವು ಇಲ್ಲದಂತಾಗುತ್ತದೆ. ಕೆಲಸದ ಒತ್ತಡದಿಂದ ಅಥವಾ ಕಣ್ಣಿಗೆ ಹೆಚ್ಚು ಶ್ರಮಕೊಟ್ಟಾಗ, ಸರಿಯಾಗಿ ನಿದ್ರೆ ಆಗದೇ ಇದ್ದಾಗ ಕಣ್ಣುಗಳು ಊದಿಕೊಳ್ಳುತ್ತವೆ. ಹೀಗೆ ಆದಾಗ ಬಾಳೆಹಣ್ಣಿನ ಸಿಪ್ಪೆಯನ್ನು ಕಣ್ಣಿನ ಕೆಳಭಾಗದಲ್ಲಿ ಸ್ವಲ್ಪ ಹೊತ್ತು ಇಟ್ಟುಕೊಂಡರೆ ಊದಿಕೊಂಡ ಕಣ್ಣುಗಳು ಮತ್ತೆ ಸಹಜ ಸ್ಥಿತಿಗೆ ಬರುತ್ತದೆ. ಹೀಗೆ ಮಾಡಿದರೆ ಕಣ್ಣಿನ ಆರೋಗ್ಯಕ್ಕೆ ತಂಪು ಹಾಗು ಕಣ್ಣಿನ ಒತ್ತಡವನ್ನೂ ಕಡಿಮೆ ಮಾಡುತ್ತದೆ. ಶೂ ಪಾಲಿಶ್‌ ಮಾಡುತ್ತದೆ. ಹೌದು ಬಾಳೆಹಣ್ಣಿನ ಸಿಪ್ಪೆಯಿಂದ ಶೂ…

Read More

ಬೆಂಗಳೂರು: ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಸಮಾಜದ 4067 ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಫೆಬ್ರವರಿ 27, ಮಂಗಳವಾರ 5.53 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆಗೊಳಿಸಿದರು. ಹಣ ವರ್ಗಾವಣೆ ನಂತರ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಚಿವರು, “ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಬ್ರಾಹ್ಮಣ ಮತ್ತು ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ನಡೆಸುತ್ತಿರುವ ಎರಡೂ ಸಮಾಜದ 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಈಗಾಗಲೇ ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಂಡು, ಸಮಾಜಕ್ಕೆ ಬೆಳಕಾಗಬೇಕು ಎಂದು ಅವರು ಹಾರೈಸಿದರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವಿದ್ಯಾರ್ಥಿ ವೇತನದ ವಿವರ: 2023-24ನೇ ಸಾಲಿನಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2710…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಈ ಹಿಂದೆ ಬಿಡುಗಡೆಯಾಗಿದ್ದ ಟ್ರಾನ್ಸ್ ಸಾಂಗ್ ಮೂಲಕ ವ್ಯಾಪಕ ಕ್ರೇಜ್ ಸೃಷ್ಟಿಸಿದ್ದ ಚಿತ್ರ `ಕೈಲಾಸ ಕಾಸಿದ್ರೆ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ದೃಶ್ಯಗಳ ಮೂಲಕವೇ ಕಿಕ್ಕೇರಿಸೋ ಶೈಲಿಯ ಈ ಟ್ರಾನ್ಸ್ ವೀಡಿಯೋ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ. ನಾಯಕ ರವಿ ಸೇರಿದಂತೆ ಒಂದಷ್ಟು ಪಾತ್ರಗಳ ಮಜಲುಗಳು ಈ ಮೂಲಕ ಪ್ರೇಕ್ಷಕರೆದುರು ತೆರೆದುಕೊಂಡಿವೆ. ದರಲ್ಲಿಯೂ ವಿಶೇಷವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಪಾತ್ರವಿಲ್ಲಿ ಪ್ರಧಾನವಾಗಿಯೇ ಸೆಳೆದಿದೆ. ಸೂರಜ್ ಒಂದಿಡೀ ಚಿತ್ರದ ತುಂಬಾ ಕ್ಯಾಟಿ ಆಗುವಂಥಾ ಹಾಸ್ಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನಿಗೆ ಸರಿ ಸಮನಾಗಿರುವ ಆ ಪಾತ್ರ ಕೂಡಾ ಈ ಟ್ರೈಲರ್ ನ ಹೈಲೈಟ್ ಗಳಲ್ಲೊಂದು ಆಗಿದೆ. ರವಿ ಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಗರ್ಭಿಣಿಯರು ತಮ್ಮ ಆರೋಗ್ಯವನ್ನು ತುಂಬಾ ನಾಜೂಕಾಗಿ ಇಟ್ಟುಕೊಳ್ಳಬೇಕು. ಕೆಲವೊಂದು ಆಹಾರಗಳನ್ನು ಸೇವಿಸಲೇಬಾರದು, ಇನ್ನು ಕೆಲ ಆಹಾರಗಳನ್ನು ಅವರು ಸೇವಿಸಲೇಬೇಕು. ಜ್ಯೂಸ್‌ಗಳ ವಿಷಯಕ್ಕೆ ಬಂದರೆ ಗರ್ಭಿಣಿಯರು ಸೇವಿಸಲೇಬೇಕಾದ ಜ್ಯೂಸ್‌ಗಳಾವವು ಹಾಗು ಅದರಿಂದ ಏನು ಪ್ರಯೋಜನ ಎಂದು ತಿಳಿದುಕೊಳ್ಳೋಣ. ಬೀಟ್‌ರೂಟ್‌ ಜ್ಯೂಸ್‌: ಇದರಲ್ಲಿ ವಿಟಮಿನ್‌ ಎ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇದು ಗರ್ಭಿಣಿಯರಿಗೆ ಬಳಲಿಕೆ ಸುಸ್ತು ಕಡಿಮೆ ಮಾಡುತ್ತದೆ ಹಾಗು ದೇಹಕ್ಕೆ ನಿಶ್ಯಕ್ತಿ ಉಂಟಾದರೆ ಅದನ್ನು ಕಡಿಮೆ ಮಾಡಿ ದೇಹಕ್ಕೆ ಶಕ್ತಿ ನೀಡುತ್ತದೆ. ದಾಳಿಂಬೆ ಜ್ಯೂಸ್‌: ಇದರಲ್ಲಿ ಹೆಚ್ಚಿನ ನಾರಿನಾಂಶ ಹಾಗು ವಿಟಮಿನ್‌ ಸಿ ಮತ್ತು ಕೆ ಇರುತ್ತದೆ. ಇದು ದೇಹವು ಹೆಚ್ಚಿನ ಪ್ರಮಾಣದ ಕಬ್ಬಿನಾಂಶವನ್ನು ಹೀರಿಕೊಳ್ಳಲು ನೆರವಾಗುತ್ತದೆ. ಇದು ದೇಹವನ್ನು ನಿರ್ಜಲೀಕರಣ ಆಗದಂತೆ ನೋಡಿಕೊಳ್ಳುತ್ತದೆ. ಹಾಗು ದಾಳಿಂಬೆ ಜ್ಯೂಸ್‌ ಮಲಬದ್ಧತೆಯನ್ನೂ ನಿವಾರಿಸುತ್ತದೆ. ಸ್ಟ್ರಾಬೆರಿ ಜ್ಯೂಸ್‌: ಗರ್ಭಿಣಿಯರು ಈ ಜ್ಯೂಸ್‌ ಅನ್ನು ನಿಯಮಿತವಾಗಿ ಸೇವಿಸಿದರೆ ದೇಹದ ಪ್ರತಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಹಾಗು ಇದರಲ್ಲಿರುವ ಫಾಲಟೆ ಅಂಶವು…

Read More

ನವದೆಹಲಿ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ವಿರುದ್ಧ ಕಾಂಗ್ರೆಸ್ ಶಾಸಕರು ಬಂಡಾಯ ಎದ್ದ ನಂತರ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಕಾಂಗ್ರೆಸ್ ಮುಖಂಡ ಮತ್ತು ಸಚಿವ ವಿಕ್ರಮಾದಿತ್ಯ ಸಿಂಗ್ ಹಿಮಾಚಲ ಪ್ರದೇಶ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪುತ್ರ ಅವರು ಪಕ್ಷವನ್ನು ತೊರೆಯುವುದಿಲ್ಲ ಆದರೆ ಈಗ ಎಲ್ಲವೂ ಕಾಂಗ್ರೆಸ್ ಹೈಕಮಾಂಡ್ ನ್ಯಾಯಾಲಯದಲ್ಲಿದೆ ಎಂದು ಹೇಳಿದರು. ಪಕ್ಷದ ಆರು ಶಾಸಕರು ಅಡ್ಡ ಮತದಾನದಲ್ಲಿ ತೊಡಗಿದ್ದರಿಂದ ಪಕ್ಷದ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿಗೆ ಕಾರಣವಾದ ನಂತರ ರಾಜ್ಯದ ಕಾಂಗ್ರೆಸ್ ಸರ್ಕಾರವು ದೊಡ್ಡ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ತಲಾ 34…

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More