Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಜನವರಿ 26, 2024 ರಂದು ಭಾರತವು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸುತ್ತಿದೆ. ನಾರಿ ಶಕ್ತಿ ಅಥವಾ ಮಹಿಳಾ ಸಬಲೀಕರಣಕ್ಕೆ ವಿಶೇಷ ಒತ್ತು ನೀಡುವ ಮೂಲಕ ಭಾರತದ ಮಿಲಿಟರಿ ಪರಾಕ್ರಮ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸುವ ಕಾರ್ತವ್ಯ ಪಥದಲ್ಲಿ ರಾಷ್ಟ್ರದ ರಾಜಧಾನಿ ಭವ್ಯ ಮೆರವಣಿಗೆಯನ್ನು ಆಯೋಜಿಸಿದೆ. ಇದೇ ಮೊದಲ ಬಾರಿಗೆ ಮಹಿಳಾ ತ್ರಿಸೇನಾ ತುಕಡಿ ಮೆರವಣಿಗೆಯಲ್ಲಿ ಭಾಗವಹಿಸುತ್ತಿದೆ. ಹದಿನೈದು ಮಹಿಳಾ ಪೈಲಟ್ಗಳು ಭಾರತೀಯ ವಾಯುಪಡೆಯ ಫ್ಲೈ-ಪಾಸ್ನ ಭಾಗವಾಗಲಿದ್ದಾರೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ತುಕಡಿಗಳು ಮಹಿಳಾ ಸಿಬ್ಬಂದಿಯನ್ನು ಮಾತ್ರ ಒಳಗೊಂಡಿರುತ್ತವೆ. ಮುಖ್ಯ ಅತಿಥಿಯಾದ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಆಗಮಿಸಿದ್ದಾರೆ ಮತ್ತು ದ್ರೌಪದಿ ಮುರ್ಮು ಅವರೊಂದಿಗೆ ಉತ್ಸವದ ನೇತೃತ್ವ ವಹಿಸಿದ್ದಾರೆ. https://twitter.com/ANI/status/1750755195318124595
ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್, 2030 ರ ವೇಳೆಗೆ ಕನಿಷ್ಠ 30,000 ವಿದ್ಯಾರ್ಥಿಗಳು ಫ್ರಾನ್ಸ್ನಲ್ಲಿ ಅಧ್ಯಯನ ಮಾಡಲಿದ್ದಾರೆ, ಆ ಗುರಿಯೊಂದಿಗೆ ನಾವು ಮುಂದೆ ಸಾಗುತ್ತಿದ್ದೇವೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ. ಈ ಗುರಿಯನ್ನು ಪೂರೈಸಲು ನಾವು ಬದ್ಧರಾಗಿದ್ದೇವೆ ಎಂದು ಮ್ಯಾಕ್ರನ್ ಹೇಳಿದರು. ಭಾರತದಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಮುಖ್ಯ ಅತಿಥಿಯಾಗಿ ಬಂದ ಮ್ಯಾಕ್ರೋನ್, ಭಾರತೀಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇನ್ನೂ ಕೆಲವು ದೊಡ್ಡ ಘೋಷಣೆಗಳನ್ನು ಮಾಡಿದ್ದಾರೆ. ಫ್ರೆಂಚ್ ಭಾಷೆಯನ್ನು ವಿದ್ಯಾರ್ಥಿಗಳಿಗೆ ಕಲಿಸಲಾಗುವುದು: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ನಾವು ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಬಯಸುತ್ತೇವೆ ಎಂದು ಹೇಳಿದರು. ಫ್ರೆಂಚ್ ಮಾತನಾಡಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ತರಗತಿಗಳನ್ನು ಸಿದ್ಧಪಡಿಸಲಾಗುವುದು. ಇದಲ್ಲದೆ, ಫ್ರೆಂಚ್ ಭಾಷೆಯನ್ನು ಕಲಿಯಲು ಕೇಂದ್ರಗಳನ್ನು ಸಹ ಸ್ಥಾಪಿಸಲಾಗುವುದು. ಫ್ರೆಂಚ್ ಭಾಷೆಯನ್ನು ತಿಳಿದುಕೊಳ್ಳುವುದು ಕಡ್ಡಾಯವಲ್ಲ ಎಂದು ನಾವು ಭಾರತೀಯ ವಿದ್ಯಾರ್ಥಿಗಳಿಗೆ ಹೇಳಲು ಬಯಸುತ್ತೇವೆ. “ಫ್ರಾನ್ಸ್ನಲ್ಲಿ ಅಧ್ಯಯನ ಮಾಡುತ್ತಿರುವ ಯಾವುದೇ ಮಾಜಿ ಭಾರತೀಯ ವಿದ್ಯಾರ್ಥಿಗೆ ವೀಸಾ ಕಾರ್ಯವಿಧಾನಗಳನ್ನು…
ನವದೆಹಲಿ: ಸಾಂಸ್ಕೃತಿಕ ಮಹತ್ವ ಮತ್ತು ಒಳಗೊಳ್ಳುವಿಕೆಯ ಅಸಾಧಾರಣ ಪ್ರದರ್ಶನದೊಂದಿಗೆ ಕಾರ್ತವ್ಯ ಪಥದಲ್ಲಿ 2024 ರ ಗಣರಾಜ್ಯೋತ್ಸವದ ಮೆರವಣಿಗೆ ಪ್ರಾರಂಭವಾಗುತ್ತಿದ್ದಂತೆ ದೆಹಲಿ ಐತಿಹಾಸಿಕ ಮತ್ತು ಮಹತ್ವದ ಸಂದರ್ಭಕ್ಕೆ ಸಾಕ್ಷಿಯಾಯಿತು. 100 ಕ್ಕೂ ಹೆಚ್ಚು ಪ್ರತಿಭಾವಂತ ಮಹಿಳಾ ಕಲಾವಿದರು ಸಾಂಪ್ರದಾಯಿಕ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುವ ಮೂಲಕ ಎಲ್ಲರ ಗಮನ ಸೆಳೇದರು , ಇದು ರಾಷ್ಟ್ರದ ವೈವಿಧ್ಯತೆ ಮತ್ತು ಪ್ರತಿಭೆಯ ಆಚರಣೆಯಲ್ಲಿ ಸಾಂಕೇತಿಕ ಬದಲಾವಣೆಯನ್ನು ಸೂಚಿಸುತ್ತದೆ. ‘ಆವಾಹನ್’ ನ ಪ್ರತಿಧ್ವನಿ, ಕರೆ ಗಾಳಿಯಲ್ಲಿ ಪ್ರತಿಧ್ವನಿಸಿತು. ಮೆರವಣಿಗೆಯ ಇತಿಹಾಸದಲ್ಲಿ ಮೊದಲ ಬಾರಿಗೆ, ಆತ್ಮವನ್ನು ಪ್ರಚೋದಿಸುವ ಮಧುರ ಗೀತೆಗಳನ್ನು ಸಂಪೂರ್ಣವಾಗಿ ಮಹಿಳಾ ಕಲಾವಿದರು ಸಂಯೋಜಿಸಿದರು, ಇದು ಭಾರತದ ಸಾಂಸ್ಕೃತಿಕ ಚಿತ್ರಪಟದಲ್ಲಿ ಮಹಿಳೆಯರ ಕೊಡುಗೆಗಳನ್ನು ಒಳಗೊಳ್ಳಲು ಮತ್ತು ಗುರುತಿಸಲು ಒಂದು ಪೂರ್ವನಿದರ್ಶನವನ್ನು ಸ್ಥಾಪಿಸಿತು. https://twitter.com/sahilpndy/status/1750748815618171079
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ 6 ನೇ ಕಂತಿನ ಹಣ ಬಿಡುಗಡೆಗೂ ಮುನ್ನ ಹೊಸ ರೂಲ್ಸ್ ಜಾರಿಯಾಗಿದ್ದು, ಒಂದು ವೇಳೆ ನೀವು ಇದನ್ನು ಅನುಸರಣೆ ಮಾಡದೇ ಹೋದಲಿ ನಿಮಗೆ ಹಣ ಬರುವುದಿಲ್ಲ. ಹೌದು, ಸದ್ಯ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಮಾಸಿಕ 2000 ರೂ ಹಣ ಪಡೆಯಲು ಹೊಸ ನಿಯಮವನ್ನು ರೂಪಿಸಿದೆ. ಗೃಹ ಲಕ್ಷ್ಮಿ ಪಾಲನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ. ನಿಮ್ಮ ಹತ್ತಿರದ ಬ್ಯಾಂಕ್ ಗೆ ಭೇಟಿ ನೀಡುವ ಮೂಲಕ NPCI ಅನ್ನು ಮಾಡಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ ಜೊತೆಗೆ ಬ್ಯಾಂಕ್ ವಿವರಗಳನ್ನು ನೀಡಿದರೆ NPCI ಮಾಡಿಕೊಡಲಾಗುತ್ತದೆ. ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಪಡೆಯಲು NPCI ಕಡ್ಡಾಯವಾಗಿದೆ. NPCI ಆಗದಿದ್ದರೆ 6 ನೇ ಕಂತಿನ ಹಣ ಜಮಾ ಆಗುವುದಿಲ್ಲ ಎನ್ನಲಾಗಿದೆ.
ನವದೆಹಲಿ: ಭಾರತದ ಮಾಜಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಂದ ವಿಚ್ಛೇದನದ ಸುದ್ದಿ ಬಹಿರಂಗವಾದ ನಂತರ ಮೊದಲ ಬಾರಿಗೆ ಇನ್ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದಾರೆ. ಇಬ್ಬರು ಕ್ರೀಡಾ ತಾರೆಯರು 2010 ರಲ್ಲಿ ವಿವಾಹವಾದರು ಮತ್ತು ಇಜಾನ್ ಮಿರ್ಜಾ ಮಲಿಕ್ ಎಂಬ ಮಗನನ್ನು ಹೊಂದಿದ್ದಾರೆ. ಶೋಯೆಬ್ ಮಲಿಕ್ ಅವರ ಮೂರನೇ ಮದುವೆಯ ಸುದ್ದಿ ಆನ್ ಲೈನ್ ನಲ್ಲಿ ವೈರಲ್ ಆದ ನಂತರ ಸಾನಿಯಾ ಮಿರ್ಜಾ ಮೌನವಾಗಿದ್ದರು. ಇದೇ ವೇಳೇ ಅವರ ತಂಡವು ಜನವರಿ 21 ರ ಭಾನುವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತು, ಇಬ್ಬರೂ ಕೆಲವು ತಿಂಗಳುಗಳಿಂದ ಬೇರ್ಪಟ್ಟಿದ್ದಾರೆ ಎಂದು ದೃಢಪಡಿಸಿದರು, ಯಾವುದೇ ಊಹಾಪೋಹಗಳಲ್ಲಿ ತೊಡಗದಂತೆ ಅಭಿಮಾನಿಗಳಿಗೆ ಕರೆ ನೀಡಿದರು. “ಸಾನಿಯಾ ಯಾವಾಗಲೂ ತಮ್ಮ ವೈಯಕ್ತಿಕ ಜೀವನವನ್ನು ಸಾರ್ವಜನಿಕರ ದೃಷ್ಟಿಯಿಂದ ದೂರವಿಟ್ಟಿದ್ದಾರೆ. ಆದಾಗ್ಯೂ, ಶೋಯೆಬ್ ಮತ್ತು ಅವಳು ಈಗ ಕೆಲವು ತಿಂಗಳುಗಳಿಂದ ವಿಚ್ಛೇದನ ಪಡೆದಿದ್ದಾರೆ ಎಂದು ಹಂಚಿಕೊಳ್ಳುವ ಅವಶ್ಯಕತೆ ಇಂದು ಉದ್ಭವಿಸಿದೆ. ಶೋಯೆಬ್ ಅವರ ಹೊಸ ಪ್ರಯಾಣಕ್ಕೆ ಅವಳು…
ಹಾಸನ : . ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು. ಇದು ಕಾಂಗ್ರೆಸ್ನ ದೌರ್ಬಲ್ಯ. ಮುಂದಿನ ದಿನಗಳಲ್ಲಿ ಈ ದೇಶದಲ್ಲಿ ಕಾಂಗ್ರೆಸ್ ಹಂತಹಂತವಾಗಿ ನೆಲಕಚ್ಚುತ್ತೆ ಎಂದ ಅವರು, ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವುದು ಸ್ವಾಗತ. ಬಿಜೆಪಿಗೆ ಶಕ್ತಿ ಬರುತ್ತದೆ ಎನ್ನುವುದನ್ನು ಮನದಲ್ಲಿಟ್ಟುಕೊಂಡು ನಾಯಕರು ತೀರ್ಮಾನ ಮಾಡಿರುತ್ತಾರೆ ಅಂತ ಹೇಳಿದರು. ಇನ್ನೂ ಜಗದೀಶ್ ಶೆಟ್ಟರ್ ಸಮರ್ಥ ನಾಯಕರು. ಮಾಜಿ ಮುಖ್ಯಮಂತ್ರಿಯಾಗಿದ್ದವರು. ಅವರನ್ನು ಕಾಂಗ್ರೆಸ್ನವರು ಪಕ್ಷಕ್ಕೆ ಉತ್ಸಾಹದಿಂದ ಸೇರಿಸಿಕೊಂಡರು. ಹೀಗೆ ಸೇರಿಸಿಕೊಂಡ ಮೇಲೆ ಅವರನ್ನು ಒಂದು ಮಂತ್ರಿ ಮಾಡುವಷ್ಟು ಸೌಜನ್ಯ ಬೇಡವೇ?. ನಾನು ಯಾರ ಬಗ್ಗೆಯೂ ನಿಂದನೆ ಮಾಡಲ್ಲ ಅಂತ ಹೇಳಿದರು.
ಬೆಂಗಳೂರು: 75ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿಯವರ ಸಂದೇಶ ಹೀಗಿದೆ ಎಲ್ಲರಿಗೂ ನಮಸ್ಕಾರ, 1. ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. 2. ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2023ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ. 3. ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. 4. ‘ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ’ ಎಂದು ತ್ರಿಕರಣಪೂರ್ವಕವಾಗಿ ನಂಬಿಕೊಂಡು ಬಂದಿರುವ ನಮ್ಮ ಸರ್ಕಾರ, ಜಾತಿ-ಧರ್ಮಗಳ ಭೇದವಿಲ್ಲದೆ ಸಂಪತ್ತು, ಅವಕಾಶ ಮತ್ತು ಅಧಿಕಾರದಲ್ಲಿ…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಬೆಂಗಳೂರು: ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರ ಮನವಿ ಮೇರೆಗೆ ಶ್ರೀರಾಮ ದರ್ಶನಕ್ಕೆ ಅಯೋಧ್ಯೆಗೆ ಕೊಪ್ಪಳ ಮಾರ್ಗವಾಗಿ ರೈಲುಗಳ ಸಂಚಾರಕ್ಕೆ ರೈಲ್ವೇ ಇಲಾಖೆಯು ಸ್ಪಂದನೆ ನೀಡಿ, ನಿಗದಿತ ದಿನಗಳಂದು ರೈಲ್ವೇ ವ್ಯವಸ್ಥೆಯನ್ನು ಕಲ್ಪಿಸಿದೆ. ಕೊಪ್ಪಳದಿಂದ ಅಯೋಧ್ಯಾ ಧಾಮಕ್ಕೆ ಮತ್ತು ಅಯೋಧ್ಯಾ ಧಾಮದಿಂದ ಕೊಪ್ಪಳಕ್ಕೆ ಸಂಚಾರಕ್ಕಾಗಿ ಮನವಿ ಮೇರೆಗೆ ರೈಲ್ವೆ ಇಲಾಖೆಯು ಸಾರ್ವಜನಿಕರಿಗೆ ಮತ್ತು ಭಕ್ತಾಧಿಗಳಿಗೆ ಶ್ರೀರಾಮ ದರ್ಶನ ಪಡೆಯಲು ಕೊಪ್ಪಳ ಮಾರ್ಗವಾಗಿ ರೈಲುಗಳ ಸಂಚಾರಗಳನ್ನು ಪ್ರಾರಂಭಿಸಿದ್ದು, ಈ ಸೇವೆಯ ಸದುಪಯೋಗವನ್ನು ಪ್ರಯಾಣಿಕರು, ಸಾರ್ವಜನಿಕರು, ಭಕ್ತಾಧಿಗಳು ಪಡೆದುಕೊಳ್ಳಬೇಕು ಎಂದು ಸಂಸದರು ತಿಳಿಸಿದ್ದಾರೆ. *ರೈಲುಗಳ ವಿವರ:* ಜನವರಿ 31, ಫೆಬ್ರವರಿ 14 ಮತ್ತು 28ರ ಬುಧವಾರ ಬೆಂಗಳೂರು-ಅಯೋಧ್ಯ ರೈಲು, ಫೆ.3, 17 ಮತ್ತು ಮಾರ್ಚ್ 2ರ ಶನಿವಾರ ಅಯೋಧ್ಯಾ ಧಾಮ-ಬೆಂಗಳೂರು, ಫೆ.4 ಮತ್ತು 18ರ ಭಾನುವಾರ ಮೈಸೂರು- ಅಯೋಧ್ಯಾ ಧಾಮ, ಫೆ.7 ಮತ್ತು 21ರ ಬುಧವಾರ ಅಯೋಧ್ಯಾ ಧಾಮ-ಮೈಸೂರು, ಫೆ.7 ಮತ್ತು 21ರ ಬುಧವಾರ ತುಮಕೂರು-ಅಯೋಧ್ಯಾ ಧಾಮ, ಫೆ.10 ಮತ್ತು 24ರ ಶನಿವಾರ ಅಯೋಧ್ಯಾ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ‘ಜನಸ್ಪಂದನ’ ಕಾರ್ಯಕ್ರಮ ಅಭೂತ ಪೂರ್ವ ಯಶಸ್ಸು ಕಂಡ ಎರಡೂವರೆ ತಿಂಗಳ ಬಳಿಕ ಫೆ.8 ರಂದು ವಿಧಾನ ಸೌಧದ ಮುಂಭಾಗ ರಾಜ್ಯಮಟ್ಟದ 2ನೇ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಅಂದು ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನ.27ರಂದು ಮೊದಲ ಜನಸ್ಪಂದನ ಕಾಠ್ಯ ಕ್ರಮದ ವೇಳೆ ಬರೋಬ್ಬರಿ 3,812 ಮಂದಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಹಲವು ಅರ್ಜಿಗಳಿಗೆ ಸ್ಥಳ ದಲ್ಲೇ ಪರಿಹಾರ ಕಲ್ಪಿಸಿದ್ದರು. ಅಲ್ಲದೆ, 3 ತಿಂಗಳಲ್ಲಿ ಮತ್ತೊಮ್ಮೆ ಜನಸ್ಪಂದನ ನಡೆಸುತ್ತೇನೆ. ಆ ವೇಳೆ ಅರ್ಜಿಗಳು ಹೆಚ್ಚು ಬಂದರೆ ತಳಮಟ್ಟದ ಅಧಿಕಾರಿಗಳನ್ನೇ ಹೊಣೆ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಹೀಗಾಗಿ ಫೆ.8ರಂದು ನಡೆಯಲಿರುವ ಜನಸ್ಪಂದನ ಕಾರ್ಯಕ್ರಮ ಕುತೂಹಲ ಮೂಡಿಸಿದೆ. ಜನಸ್ಪಂದನ ಸಿದ್ಧತೆಗೆ ಸಭೆ: ಬುಧವಾರ 2ನೇ ಜನಸ್ಪಂದನದ ಸಿದ್ದತಾ ಸಭೆ ನಡೆಸಿದ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ. ಅತೀಕ್, ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು,…