Author: kannadanewsnow07

ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು 6 ಅಭ್ಯರ್ಥಿಗಳಿಂದ ಒಟ್ಟು 17 ನಾಮಪತ್ರಗಳು ಸಲ್ಲಿಕೆಯಾಗಿವೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಾರಾಯಣಸಾ.ಕೆ ಭಾಂಡಗೆ ಅವರು ಎರಡು ನಾಮಪತ್ರ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಲಾಗಿ ಅಜಯ್ ಮಾಕೇನ್ ಅವರು ನಾಲ್ಕು ನಾಮಪತ್ರ, ಜಿ.ಸಿ. ಚಂದ್ರಶೇಖರ್ ಅವರು ನಾಲ್ಕು ನಾಮಪತ್ರ ಮತ್ತು ನಾಸೀರ್ ಹುಸೇನ್ ಅವರು ನಾಲ್ಕು ನಾಮಪತ್ರ, ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಡಿ.ಕುಪೇಂದ್ರ ರೆಡ್ಡಿ ಅವರು ನಾಲ್ಕು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಕೆಂಗನೂರು ಅವರು ಒಂದು ನಾಮಪತ್ರವನ್ನು ಸಲ್ಲಿಸಿರುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿ ಡಾ. ಕೆ.ಪದ್ಮರಾಜನ್ ಅವರು ಫೆಬ್ರವರಿ 8 ರಂದು ಅವರು ಒಂದು ನಾಮಪತ್ರ ಸಲ್ಲಿಸಿರುತ್ತಾರೆ. ರಾಜ್ಯಸಭಾ ಚುನಾವಣೆಗೆ ಒಟ್ಟು 7 ಅಭ್ಯರ್ಥಿಗಳಿಂದ 18 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳ ಪರಿಶೀಲನಾ ಕಾರ್ಯ ಫೆಬ್ರವರಿ 16 ರಂದು ನಡೆಯಲಿದ್ದು, ಫೆಬ್ರವರಿ 20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಅವರು ಇಂದು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಬಸವಣ್ಣನವರು ಸಮಾನತೆಯನ್ನು ಕಂಡಿದ್ದವರು. ಸಮಸಮಾಜಕ್ಕಾಗಿ ಚಳವಳಿ ಮಾಡಿದವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಿಸಿದ್ದೇವೆ. ಕೇಂದ್ರ ಸರ್ಕಾರದ ಬಿಜೆಪಿಯ ಅವಧಿಯದ್ದು ಶೇ 5.8% ಸರ್ಕಾರ. ನಮ್ಮದು ಶೇ 2.95 % ವಿತ್ತೀಯ ಕೊರತೆ (ಫಿಸ್ಕಲ್ ಡೆಫಿಸಿಟ್) ಇದೆ. ಒಟ್ಟಾರೆ ಜನಪರ ಬಜೆಟ್. ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಮಾನವಾಗಿ ಬೆಳೆಸುವ ಕೆಲಸ ಮಾಡಲಾಗಿದೆ ಎಂದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ 1,20000 ಕೋಟಿ ಅಭಿವೃದ್ಧಿಗೆ ಖರ್ಚು ಮಾಡಿದರೆ ಅದು ಅಭಿವೃದ್ಧಿಪೂರಕ ಬಜೆಟ್. 52009 ಕೋಟಿ ಬಡವರಿಗೆ ಖರ್ಚು ಮಾಡಿದೆ ಅದು ಅಭಿವೃದ್ಧಿಗೆ ಪೂರಕವಾಗಿರುವಂಥದ್ದು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ 77, 750 ಕೋಟಿ ರೂ.ಗಳ ಒಟ್ಟು ಸಾಲ ,…

Read More

ಬೆಂಗಳೂರು: ವಿತ್ತೀಯ ಕೊರತೆ 82981 ಕೋಟಿ ರೂ.ಗಳು ರಷ್ಟಿದ್ದು, ರಾಜ್ಯದ ಜಿಎಸ್ ಡಿ ಪಿಯ 2.95% ರಷ್ಟಿದೆ. ಇದು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ 2002ರಲ್ಲಿ ನಿಗದಿಪಡಿಸಿರುವ ಶೇ.3 ರ ಮಿತಿಯೊಳಗೆ ಇದ್ದು, ವಿತ್ತೀಯ ಶಿಸ್ತು ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು 2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕದಲ್ಲಿ ರಾಜಸ್ವ ಕೊರತೆ 27354 ಕೋಟಿ ರೂಇದ್ದು, 0.97% ರಷ್ಟಿದೆ. ಹೊಣೆಗಾರಿಕೆಯು(Borrowings) 105246 ಕೋಟಿಗಳಿದ್ದು, ಜಿಎಸ್ ಡಿಪಿಯ ಶೇ.23.68ರಷ್ಟಿದೆ. ರಾಜಸ್ವ ಹೆಚ್ಚಳ (Revenue Surplus)ನ್ನು ಮುಂದಿನ ವರ್ಷದಿಂದ ಸ್ಥಿರಗೊಳ್ಳಲಿದೆ ಎಂದರು. ರಾಜ್ಯ ಆರ್ಥಿಕವಾಗಿ ಸುಭದ್ರ 2017-2018 ರಿಂದ ಇಲ್ಲಿಯವರೆಗೆ 1,87,000 ಲಕ್ಷ ಕೋಟಿ ಬಂದಿದ್ದರೆ ರಾಜ್ಯ ಅಭಿವೃದ್ಧಿಯಾಗುತ್ತಿತ್ತು. 6 ವರ್ಷಗಳಲ್ಲಿ 62000 ಕೋಟಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಕೇಂದ್ರದಿಂದ ನ್ಯಾಯಯುತ ಪಾಲು ಬರದಿದ್ದರೂ ರಾಜ್ಯ ಆರ್ಥಿಕವಾಗಿ ಸುಭದ್ರವಾಗಿದ್ದೇವೆ. ಗ್ಯಾರಂಟಿಗಳಿಗೆ 52009 ಕೋಟಿ ಅಂದಾಜಿಸಲಾಗಿದೆ. ಇದಕ್ಕೂ ಹೆಚ್ಚು ಬೇಕಾದಲ್ಲಿ ನೀಡಲಾಗುವುದು ಎಂದರು. ಕೇಂದ್ರದಿಂದ ರಾಜ್ಯಕ್ಕೆ ಕೇವಲ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನ ಸಭಾಂಗಣದಲ್ಲಿ 2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೇ ಅವರು ಮಾತನಾಡುತ್ತ  ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯವನ್ನು ಜನರಿಗೆ ಹೇಳುವುದು ನನ್ನ ಕರ್ತವ್ಯ ಹಾಗೂ ಜವಾಬ್ದಾರಿ. ಅವರು ಕೂಡ ಕೋಲೆಬಸವನ ಹಾಗೆ ತಲೆ ಅಲ್ಲಾಡಿಸದೇ ಕೇಂದ್ರದವರನ್ನು ಕೇಳಬೇಕಿತ್ತು. ಕೋಲಾರ ಸಂಸದ ಮುನಿಸ್ವಾಮಿಯವರು ಅವರು ಸಂಸತ್ತಿನಲ್ಲಿ ಒಂದು ದಿನವೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬಾಯಿಬಿಡಲಿಲ್ಲ. ಐದು ವರ್ಷದಲ್ಲಿ ಒಂದು ಬಾರಿಯಾದರೂ ಮಾತನಾಡಿದ್ದಾರಾ? ಅವರು ಸಂಸದರಾಗಲು ಲಾಯಕ್ಕೇ ಎಂದರು. ಕೇಂದ್ರ ಸರ್ಕಾರದಿಂದ ನ್ಯಾಯಯುತವಾದದ್ದು ಕೇಳಲು ಇವರಿಗೆ ಸಾಧ್ಯವಿಲ್ಲ ಎಂದರೇ ಏನು ಸೂಚಿಸುತ್ತದೆ. ನಾನು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ , ಕೇಂದ್ರದ ಅನುದಾನವನ್ನು ಪಡೆಯಿರಿ ಎಂದು ಒತ್ತಾಯಿಸಿದ್ದೆ. 15 ನೇ ಹಣಕಾಸು ಆಯೋಗದವರು ವಿಶೇಷ ಅನುದಾನ 5495 ಕೋಟಿ ರೂ ವಿಶೇಷ ಅನುದಾನ ಪಡೆಯಲು ಹೇಳಿದ್ದೆ. ಬೆಂಗಳೂರು ಅಭಿವೃದ್ಧಿಗೆ 6000 ಕೋಟಿ ಕೊಟ್ಟಿದ್ದಾರೆ. ಅದನ್ನು ಪಡೆಯಿರಿ ಎಂದು ಹೇಳಿದ್ದೆ. ಒಟ್ಟು 11495…

Read More

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಗ್ರಾಹಕರ ಖಾತೆಗಳು, ಪ್ರಿಪೇಯ್ಡ್ ಸಾಧನಗಳು, ವ್ಯಾಲೆಟ್ಗಳು, ಫಾಸ್ಟ್ಟ್ಯಾಗ್ಗಳು, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ಗಳು ಇತ್ಯಾದಿಗಳಲ್ಲಿ ಹೆಚ್ಚಿನ ಠೇವಣಿಗಳು, ಕ್ರೆಡಿಟ್ ವಹಿವಾಟುಗಳು ಅಥವಾ ಟಾಪ್-ಅಪ್ಗಳನ್ನು ಮಾಡದಿರುವ ಗಡುವನ್ನು ಆರ್ಬಿಐ ಫೆಬ್ರವರಿ 29 ರಿಂದ ಮಾರ್ಚ್ 15 ರವರೆಗೆ ಭಾಗಶಃ ವಿಸ್ತರಿಸಿದೆ.  ಅಂತೆಯೇ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನಿರ್ದಿಷ್ಟಪಡಿಸಿದ ಸೇವೆಗಳನ್ನು ಹೊರತುಪಡಿಸಿ ಇತರ ಬ್ಯಾಂಕಿಂಗ್ ಸೇವೆಗಳನ್ನು ನೀಡುವುದನ್ನು ನಿಲ್ಲಿಸುವ ಗಡುವನ್ನು ಫೆಬ್ರವರಿ 29 ರಿಂದ ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಫೆಬ್ರವರಿ 16 ರಂದು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಪಿಪಿಬಿಎಲ್) ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಎಫ್ಎಕ್ಯೂ (ಆಗಾಗ್ಗೆ ಕೇಳಲಾಗುವ ಪ್ರಶ್ನೆಗಳು) ಹೊರಡಿಸಿದ್ದು, ನಿರ್ದೇಶನಗಳ ವಿವಿಧ ಅಂಶಗಳನ್ನು ವಿವರಿಸಿದೆ ಮತ್ತು ಕೇಂದ್ರ ಬ್ಯಾಂಕ್ ಕ್ರಮದಿಂದಾಗಿ ಬ್ಯಾಂಕಿನ ಗ್ರಾಹಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಭರವಸೆ ನೀಡಿದೆ. https://kannadanewsnow.com/kannada/udaan-actress-kavita-chaudhary-passes-away-due-to-cardiac-arrest-kavita-chaudhary-no-more/ https://kannadanewsnow.com/kannada/there-is-nothing-in-the-head-of-the-bjp-cm-siddaramaiah-hits-back/

Read More

ಹೈದರಾಬಾದ್: ದೂರದರ್ಶನ ಕಾರ್ಯಕ್ರಮ ‘ಉಡಾನ್’ ಮತ್ತು ಸರ್ಫ್ ಜಾಹೀರಾತುಗಳಲ್ಲಿ ಲಲಿತಾಜಿ ಪಾತ್ರದ ಮೂಲಕ ಸ್ಮರಣೀಯ ಪಾತ್ರಗಳಿಗೆ ಹೆಸರುವಾಸಿಯಾದ ಖ್ಯಾತ ನಟಿ ಕವಿತಾ ಚೌಧರಿ ನಿಧನರಾಗಿದ್ದಾರೆ. ಅವರ ಸೋದರಳಿಯ ಅಜಯ್ ಸಯಲ್ ಅವರ ಪ್ರಕಾರ, ಚೌಧರಿ ಹೃದಯ ಸ್ತಂಭನದಿಂದ ಬಳಲುತ್ತಿದ್ದರು ಮತ್ತು ಗುರುವಾರ ರಾತ್ರಿ ಅಮೃತಸರದಲ್ಲಿ ಕೊನೆಯುಸಿರೆಳೆದರು ಎನ್ನಲಾಗಿದೆ.  ಅಜಯ್ ಸಯಾಲ್, “ಅವರು ಗುರುವಾರ ರಾತ್ರಿ 8.30 ಕ್ಕೆ ಹೃದಯ ಸ್ತಂಭನದಿಂದ ನಿಧನರಾದರು. ಅಮೃತಸರದ ಪಾರ್ವತಿ ದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದರು. ಚೌಧರಿ ಅವರಿಗೆ 67 ವರ್ಷ ವಯಸ್ಸಾಗಿತ್ತು ಅಂತ ತಿಳಿಸಿದ್ದಾರೆ. https://kannadanewsnow.com/kannada/russian-president-putins-critic-alexei-navalny-dies-in-prison/ https://kannadanewsnow.com/kannada/applications-for-new-bpl-apl-ration-cards-to-begin-from-april-1/ https://kannadanewsnow.com/kannada/do-you-want-300-units-of-free-electricity-sit-at-home-and-apply-in-just-5-minutes/

Read More

ಬೆಂಗಳೂರು: ಬಜೆಟ್‌ನಲ್ಲಿ ಏನಿಲ್ಲವೆಂದು ಘೋಷಣೆ ಕೂಗುವ ಬಿಜೆಪಿಗರ ತಲೆಯಲ್ಲಿ ಏನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು 3,71,383 ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಾಗಿದೆ. ಕಳೆದ ವರ್ಷ 3,27,747 ಕೋಟಿ ಬಜೆಟ್ ಗಾತ್ರವಾಗಿತ್ತು. ಈ ವರ್ಷದ ಬಜೆಟ್ ಕಳೆದ ಜುಲೈಗೆ ಮಂಡನೆ ಮಾಡಿದ ಬಜೆಟ್ ಗಾತ್ರಕ್ಕಿಂತ 46,636 ಕೋಟಿ ಹೆಚ್ಚಳವಾಗಿದ್ದು ಶೇ 13 ರಷ್ಟು ಬೆಳವಣಿಗೆ ಆಗಿದೆ ಎಂದರು. ಬಜೆಟ್ ಮಂಡನೆ ಮಾಡುವಾಗ ವಿರೋಧ ಪಕ್ಷ ಬಹಿಷ್ಕಾರ ಮಾಡಿದ ಇತಿಹಾಸ ಇಲ್ಲ. ನಾನು ಬಜೆಟ್ ಮಂಡನೆ ಮಾಡುವಾಗ ಸುನೀಲ್ ಕುಮಾರ್ ಏನಿಲ್ಲ ಏನಿಲ್ಲ ಎಂದು ಕೂಗುತ್ತಿದ್ದರು. ಆದರೆ, ಅವರ ತಲೆಯಲ್ಲಿ ಏನಿಲ್ಲ. ಅವರಿಗೆ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ. ಅವರಿಗೆ ರಾಜಕೀಯ ಮಂಜು ಆವರಿಸಿದೆ. ಕಾಮಾಲೆ ರೋಗದವರೆಗೆ ಕಂಡದೆಲ್ಲಾ‌ ಹಳದಿ ಅಂತ ಹೇಳಿದರು. https://kannadanewsnow.com/kannada/do-you-want-300-units-of-free-electricity-sit-at-home-and-apply-in-just-5-minutes/ https://kannadanewsnow.com/kannada/applications-for-new-bpl-apl-ration-cards-to-begin-from-april-1/ https://kannadanewsnow.com/kannada/russian-president-putins-critic-alexei-navalny-dies-in-prison/

Read More

ನವದೆಹಲಿ: ನವದೆಹಲಿ: ಫಾಸ್ಟ್ ಟ್ಯಾಗ್ ಗಳನ್ನು ಖರೀದಿಸಲು ಭಾರತದ ರಸ್ತೆ ಟೋಲ್ ಪ್ರಾಧಿಕಾರ ಶಿಫಾರಸು ಮಾಡಿದ ಅಧಿಕೃತ ಬ್ಯಾಂಕುಗಳ ಪಟ್ಟಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊಂದಿರದ 32 ಅಧಿಕೃತ ಬ್ಯಾಂಕುಗಳ ಪಟ್ಟಿಯಿಂದ ಫಾಸ್ಟ್ಟ್ಯಾಗ್ಗಳನ್ನು ಖರೀದಿಸಲು ಭಾರತೀಯ ಹೆದ್ದಾರಿ ನಿರ್ವಹಣಾ ಕಂಪನಿ ಹೆದ್ದಾರಿ ಬಳಕೆದಾರರಿಗೆ ಸಲಹೆ ನೀಡಿದೆ. ಇದರರ್ಥ ಸುಮಾರು 20 ಮಿಲಿಯನ್ ಪೇಟಿಎಂ ಫಾಸ್ಟ್ಟ್ಯಾಗ್ ಬಳಕೆದಾರರು ಹೊಸ ಆರ್ಎಫ್ಐಡಿ (ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್) ಸ್ಟಿಕ್ಕರ್ಗಳನ್ನು ಪಡೆಯಬೇಕಾಗುತ್ತದೆ. ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್, ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಸಿಟಿ ಯೂನಿಯನ್ ಬ್ಯಾಂಕ್, ಕಾಸ್ಮೋಸ್ ಬ್ಯಾಂಕ್, ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಫೆಡರಲ್ ಬ್ಯಾಂಕ್, ಫಿನೋ ಪೇಮೆಂಟ್ಸ್ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಐಡಿಬಿಐ ಬ್ಯಾಂಕ್, ಐಡಿಎಫ್ಸಿ ಫಸ್ಟ್ ಬ್ಯಾಂಕ್,…

Read More

ವಸಂತ್ ಬಿ ಈಶ್ವರ ಗೆರೆ ಜೊತೆಗೆ ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. ಇನ್ನೂ ಇದೇ ವೇಳೇ ಬಜೆಟ್‌ನಲ್ಲಿ ಸುಧಾರಣಾ ಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡಲಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ವ: ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ರಚಿಸಲು ವಿವಿಧ ಕಾನೂನಿನಡಿಯಲ್ಲಿ 7,214 ಸಂಸ್ಥೆಗಳ ಶಾಸನಬದ್ಧ ಬ್ಯಾಂಕ್ ಡಿ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು.…

Read More

ವಸಂತ್ ಬಿ ಈಶ್ವರ ಗೆರೆ ಜೊತೆಗೆ ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.  https://kannadanewsnow.com/kannada/rural-development-and-panchayat-raj-department-gets-bumper-gift-in-state-budget/ https://kannadanewsnow.com/kannada/what-did-women-and-youth-get-in-this-years-state-budget-heres-the-complete-information/ ಇದೇ ವೇಳೆ ಅವರು ಬಜೆಟ್‌ನಲ್ಲಿ ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು. ಅಂತ ತಿಳಿಸಿದರು. ಇನ್ನೂ ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್‌ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆಯನ್ನು ಪಿಪಿಪಿ…

Read More