Subscribe to Updates
Get the latest creative news from FooBar about art, design and business.
Author: kannadanewsnow07
ಮಂಡ್ಯ: ಮಂಡ್ಯದಿಂದಲೇ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಲಿದ್ದು, ಈ ನಡುವೆ ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ಅಂತ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಈ ಬಗ್ಗೆ ತಿಳಿಸಿದರು ಇದೇ ವೇಳೆ ಅವರು ಮಾತನಾಡಿ ನಾನು ಕಾಂಗ್ರೆಸ್ನಿಂದ ಟಿಕೆಟ್ ಕೇಳೋದು ಇಲ್ಲ, ಇದಲ್ಲದೇ ನಾನು ಬಿಜೆಪಿ ಜೊತೆಗೆ ಇರುವೆ ಅಂತ ಹೇಳಿದರು ಇನ್ನೂ ನಾನು ಮಂಡ್ಯ ಬಿಟ್ಟು ಬೇರೆ ಕಡೆ ಹೋಗುವುದಿಲ್ಲ ಅಂಥ ಹೇಳಿದರು, ಮಂಡ್ಯದ ಬಗ್ಗೆ ಇಲ್ಲಿ ತನಕ ಯಾವುದೇ ಚರ್ಚೆಯಾಗಿಲ್ಲ ಅಂತ ಹೇಳಿದರು. ಇನ್ನೂ ಸದ್ಯ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜೊತೆ ಜೊತೆಯಾಗಿ ಕಣಕ್ಕೆ ಇಳಿಯುತ್ತಿದ್ದಾವೆ. ಅದರಲ್ಲೂ ಮಂಡ್ಯ ಟಿಕೇಟ್ ಯಾರಿಗೆ ಸಿಗಲಿದೆ ಎನ್ನುವುದು ಈಗ ಸದ್ಯದ ಪ್ರಶ್ನೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ನಿಖಿಲ್ ಕುಮಾರಸ್ವಾಮಿ ಈ ಬಾರಿ ಕೂಡ ಕಣಕ್ಕೆ ಇಳಿದು ಸೋಲಿನ ಅವಮಾನವನ್ನು ತೀರೀಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ನವದೆಹಲಿ: ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆಯು ತನ್ನ 6 ಮೀಟರ್ ಉದ್ದದ ಮ್ಯಾಗ್ನೆಟೋಮೀಟರ್ ಬೂಮ್ ಅನ್ನು ಲ್ಯಾಗ್ರೇಂಜ್ ಪಾಯಿಂಟ್ -1 ರಲ್ಲಿ ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ನಿಯೋಜಿಸಿದೆ ಎನ್ನಲಾಗಿದೆ. ಜನವರಿ 11, 2024 ರಂದು ಈ ನಿಯೋಜನೆ ನಡೆಯಿತು, ಉಪಗ್ರಹವನ್ನು ಲ್ಯಾಗ್ರೇಂಜ್ ಪಾಯಿಂಟ್ ಎಲ್ -1 ನಲ್ಲಿ ಹ್ಯಾಲೋ ಕಕ್ಷೆಯಲ್ಲಿ ಇರಿಸಲಾಗಿತ್ತು, ಇದು ಬಾಹ್ಯಾಕಾಶ ನೌಕೆಯ ಉಡಾವಣೆಯ 132 ದಿನಗಳನ್ನು ಸೂಚಿಸುತ್ತದೆ. ಬೂಮ್ ಎರಡು ಅತ್ಯಾಧುನಿಕ, ಹೆಚ್ಚಿನ-ನಿಖರತೆಯ ಫ್ಲಕ್ಸ್ಗೇಟ್ ಮ್ಯಾಗ್ನೆಟೋಮೀಟರ್ ಸಂವೇದಕಗಳನ್ನು ಹೊಂದಿದೆ, ಅದು ಬಾಹ್ಯಾಕಾಶದಲ್ಲಿ ಕಡಿಮೆ ತೀವ್ರತೆಯ ಅಂತರಗ್ರಹ ಕಾಂತೀಯ ಕ್ಷೇತ್ರವನ್ನು ಅಳೆಯುತ್ತದೆ. ಬಾಹ್ಯಾಕಾಶ ನೌಕೆಯ ದೇಹದಿಂದ 3 ಮತ್ತು 6 ಮೀಟರ್ ದೂರದಲ್ಲಿ ಸಂವೇದಕಗಳನ್ನು ನಿಯೋಜಿಸಲಾಗಿದೆ. ಈ ದೂರಗಳಲ್ಲಿ ಅವುಗಳನ್ನು ಜೋಡಿಸುವುದರಿಂದ ಮಾಪನಗಳ ಮೇಲೆ ಬಾಹ್ಯಾಕಾಶ ನೌಕೆಯು ಉತ್ಪಾದಿಸಿದ ಕಾಂತಕ್ಷೇತ್ರದ ಪ್ರಭಾವವನ್ನು ಕಡಿಮೆ ಮಾಡುತ್ತದೆ. , ಮತ್ತು ಅವುಗಳಲ್ಲಿ ಎರಡನ್ನು ಬಳಸುವುದು ಈ ಪ್ರಭಾವದ ನಿಖರವಾದ ಅಂದಾಜು ಮಾಡಲು ಸಹಾಯ ಮಾಡುತ್ತದೆ. ಡ್ಯುಯಲ್ ಸೆನ್ಸರ್ ವ್ಯವಸ್ಥೆಯು ಬಾಹ್ಯಾಕಾಶ ನೌಕೆಯ ಕಾಂತೀಯ…
ಕಲಬುರಗಿ: ರಾಜ್ಯದಲ್ಲಿ ಮಳೆ ಅಭಾವ ಕಾರಣ ಬರಗಾಲ ಘೋಷಣೆ ಮಾಡಿದ್ದರಿಂದ ಬರಗಾಲ ಪರಿಹಾರದ ಆರಂಭಿಕ ಕಂತು ತಲಾ 2,000 ರೂ. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರೂ. ಜಮೆ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬರಗಾಲ ಘೋಷಣೆ ಮಾಡಿ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಪರಿಹಾತ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದೂವರೆಗೆ ಯಾವುದೇ ಹಣ ಬಿಡುಗಡೆಯಾಗಿಲ್ಲ. ಸಂಕಷ್ದದಲ್ಲಿದ ರೈತರಿಗೆ ನೆರವಿಗೆ ಧಾವಿಸಲು ಎನ್.ಡಿ.ಅರ್.ಆಫ್ ಅನುದಾನ ನಿರೀಕ್ಷಿಸಿ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಎಂದರು. ರಾಜ್ಯದಾದ್ಯಂತ ಒಟ್ಟಾರೆ 35 ಲಕ್ಷ ರೈತರಿಗೆ 650 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಇದೂವರೆಗೆ 24 ಲಕ್ಷ ಜನರಿಗೆ 519 ಕೋಟಿ ರೂ. ಪಾವತಿಯಾಗಿದೆ. 2-3…
ಮೈಸೂರು: ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರಿನ ಗೃಹ ಕಛೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹ್ನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ವನ್ನು ಬಲಪಡಿಸಬೇಕಾಗಿದೆ 75 ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡುತಿದ್ದು, ಸಂವಿಧಾನ ತಜ್ಞರು,ವಿಚಾರವಾದಿಗಳಿಂದ ಭಾಷಣ ಕಾರ್ಯಗಳು ನಡೆಯಲಿವೆ, ರಾಜ್ಯದ 6 ಸಾವಿರ ಗ್ರಾ.ಪಂ.ಗಳಲ್ಲಿ ಸಂಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದ ಚಿತ್ರ ವಾಹನಗಳು ಬೆಂಗಳೂರಿನಲ್ಲಿ ಸಮಾವೇಶಗೊಂಡು ಜನವರಿ 24 ಹಾಗೂ 25 ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿವೆ. ಸಂವಿಧಾನದ ಮೂಲ ಅಂಶಗಳಾದ ಧರ್ಮನಿರಪೇಕ್ಷತೆ,ಜಾತ್ಯಾತೀತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ…
ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ನಡುವೆ ಮಾಧ್ಯಮಗಳ ಜೊತೆಗೆ ಪಾರ್ಟಿಗೆ ಸೇರಿದ ಬಳಿಕ ಅವರು ಮಾತನಾಡಿ, ನಾನು ಕಾಂಗ್ರೆಸ್ಗೆ ಸೇರಿದ ಬಳಿಕ ಎಲ್ಲರೂ ಕೂಡ ನನ್ನ ಗೌರವಿತವಾಗಿ ನಡೆದಕೊಂಡರು. ಅದರಲ್ಲೂ ಬಹುಮುಖ್ಯವಾಗಿ ಸಿಎಂ. ಸಿದ್ದರಾಮಯ್ಯ ಮತ್ತು ಡಿ.ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಧನ್ಯವಾದವನ್ನು ಅರ್ಪಿಸುವೆ ಅಂತ ಹೇಳಿದರು. ಇನ್ನೂ ಇದೇ ವೇಳೆ ಮಾತನಾಡಿರುವ ಅವರು “ಪಕ್ಷವು ಈ ಹಿಂದೆ ನನಗೆ ಸಾಕಷ್ಟು ಜವಾಬ್ದಾರಿಗಳನ್ನು ನೀಡಿತು. ಕೆಲವು ಸಮಸ್ಯೆಗಳಿಂದಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದೆ. ಕಳೆದ 8-9 ತಿಂಗಳುಗಳಲ್ಲಿ, ಸಾಕಷ್ಟು ಚರ್ಚೆಗಳು ನಡೆದವು, ಬಿಜೆಪಿ ಕಾರ್ಯಕರ್ತರು ನನ್ನನ್ನು ಬಿಜೆಪಿಗೆ ಮರಳುವಂತೆ ಕೇಳಿಕೊಂಡರು. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರೂ ನಾನು ಬಿಜೆಪಿಗೆ ಮರಳಬೇಕೆಂದು ಬಯಸಿದ್ದರು. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎಂಬ ನಂಬಿಕೆಯೊಂದಿಗೆ ನಾನು ಮತ್ತೆ ಪಕ್ಷಕ್ಕೆ ಸೇರುತ್ತಿದ್ದೇನೆ” ಎಂದು ಹೇಳಿದರು. ಇನ್ನೂ ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಚೆಲುವರಾಯ…
ಲಕ್ನೋ: ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಲ್ಹಾಗಂಜ್ ಪೊಲೀಸ್ ಠಾಣೆ ಪ್ರದೇಶದ ಬರೇಲಿ-ಫರೂಕಾಬಾದ್ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಟ್ರಕ್ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 12 ಭಕ್ತರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶಹಜಹಾನ್ಪುರದ ಮದ್ನಾಪುರ ಪ್ರದೇಶದ ದಮ್ಗಡಾ ಗ್ರಾಮದಿಂದ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳುತ್ತಿದ್ದ ಭಕ್ತರ ಆಟೋಗೆ ಟ್ರಕ್ ಡಿಕ್ಕಿ ಹೊಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ಗುರುವಾರ ಬೆಳಿಗ್ಗೆ 10: 30 ರ ಸುಮಾರಿಗೆ ಅಲ್ಹಾಗಂಜ್ನ ಸುಗ್ಸುಗಿ ಗ್ರಾಮದ ಬಳಿ ಬರೇಲಿ-ಫರೂಕಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಆಟೋದಲ್ಲಿ 12 ಜನರಿದ್ದರು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಮೃತರೆಲ್ಲರೂ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಡಿಎಂ ಉಮೇಶ್ ಪ್ರತಾಪ್ ಸಿಂಗ್, ಎಸ್ಪಿ ಅಶೋಕ್…
ಬೆಂಗಳೂರು/ ನವದೆಹಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ನಡುವೆ ವಿಧಾನಸಭಾ ಚುನಾವಣೆ ಬಳಿಕ ಪಡೆದುಕೊಂಡಿದ್ದ ವಿಧಾನಪರಿಷತ್ ಸ್ಥಾನಕ್ಕೂ ನಾನು ರಾಜೀನಾಮೆ ನೀಡಿದ್ದೇನೆ. ಇ-ಮೇಲ್ ಮೂಲಕ ರಾಜೀನಾಮೆ ರವಾನಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದರು. ಇನ್ನೂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಗೆ ಸಂಬಂಧಪಟ್ಟಂತೆ ಕಿಡಿಕಾರಿರುವ ಡಿ.ಕೆ ಶಿವಕುಮಾರ್ ಅವರು ಬಲವಂತದಿಂದ ಅವರನ್ನು ಕರೆದಕೊಂಡು ಹೋಗಿದ್ದಾರೆ ಅಂತ ಹೇಳಿದರು. ಇನ್ನೂ ಕಾಂಗ್ರೆಸ್ನಲ್ಲಿ ನಡೆಯುವ ವ್ಯವಸ್ಥೆಯೇ ಬೇರೆ, ಬಿಜೆಪಿಯಲ್ಲಿ ನಡೆಯುವ ವ್ಯವಸ್ಥೆಯೇ ಬೇರೆ, ನನಗೆ ಇಲ್ಲಿ ತನಕ ಯಾವುದೇ ರಾಜೀನಾಮೆ ಪತ್ರ ಬಂದಿಲ್ಲ ಅಂತ ಹೇಳಿದರು. https://twitter.com/ANI/status/1750426443446931539
ಬೆಂಗಳೂರು: ಬಿಜೆಪಿ ಸೇರುವ ಬಗ್ಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, “ಈ ಹಿಂದೆ ಪಕ್ಷ ನನಗೆ ಸಾಕಷ್ಟು ಜವಾಬ್ದಾರಿಗಳನ್ನು ನೀಡಿತ್ತು. ಕೆಲವು ಸಮಸ್ಯೆಗಳಿಂದಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದೆ. ಕಳೆದ 8-9 ತಿಂಗಳುಗಳಲ್ಲಿ, ಸಾಕಷ್ಟು ಚರ್ಚೆಗಳು ನಡೆದವು, ಬಿಜೆಪಿ ಕಾರ್ಯಕರ್ತರು ನನ್ನನ್ನು ಬಿಜೆಪಿಗೆ ಮರಳುವಂತೆ ಕೇಳಿಕೊಂಡರು. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರೂ ನಾನು ಬಿಜೆಪಿಗೆ ಮರಳಬೇಕೆಂದು ಬಯಸಿದ್ದರು. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎಂಬ ನಂಬಿಕೆಯೊಂದಿಗೆ ನಾನು ಮತ್ತೆ ಪಕ್ಷಕ್ಕೆ ಸೇರುತ್ತಿದ್ದೇನೆ” ಎಂದು ಹೇಳಿದರು. ಈ ನಡುವೆ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ ನಾವು ಸೀನಿಯರ್ ಲೀಡರ್ ಅಂಥ ಅವರಿಗೆ ಸ್ಥಾನ ಮಾನ ಕೊಟ್ವಿದ್ವಿ, ನಾವು ಅವರಿಗೆ ಟಿಕೆಟ್ ಕೊಟ್ಟಿದ್ವಿ ಆದರೆ ಅವರು ಸೋತರು. ನಾವು ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿದ್ದೇವೆ. ಈ ನಡುವೆ ನನಗೆ ಇಲ್ಲಿ ತನಕ ರಾಜೀನಾಮೆ ಪತ್ರ ತಲುಪಿಲ್ಲ ಅಂತ ಹೇಳಿದ್ದಾರೆ.
ಬೆಂಗಳೂರು: 75ನೇ ಗಣರಾಜ್ಯೋತ್ಸವದ ಅಂಗವಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜನವರಿ 25 ಮತ್ತು 26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜನವರಿ 25 ಮತ್ತು 26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ. ಜನವರಿ 26ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ಸುತ್ತೋಲೆಯಲ್ಲಿ ಸೂಚನೆ ನೀಡಿದೆ.
ಬೆಂಗಳೂರು: ರಾಜ್ಯದ 21 ಅಧಿಕಾರಿಗಳಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕದ ಗೌರವವನ್ನು ಈ ಬಾರಿ ನೀಡಲಾಗುವುದು. ವಿಶಿಷ್ಟ ಸೇವಾ ಪದಕ ಭಾರತೀಯ ಸಶಸ್ತ್ರ ಪಡೆಗಳಲ್ಲಿ ನೀಡುವ ಒಂದು ಪ್ರಶಸ್ತಿಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳ ಯಾವುದೇ ಶ್ರೇಣಿಗಳ ಹುದ್ದೆ ಹೊಂದಿರುವವರ ಉನ್ನತ ರೀತಿಯ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುತ್ತಾರೆ. ಕರ್ನಾಟಕ 110. ಶ್ರೀ ಪ್ರವೀಣ್ ಮಧುಕರ್ ಪವಾರ್, ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಕರ್ನಾಟಕ. 111. ಶ್ರೀ ರಮಣ್ ಗುಪ್ತಾ, ಪೊಲೀಸ್ ಮಹಾನಿರ್ದೇಶಕರು ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತರು, ಕರ್ನಾಟಕ. 112. ಶ್ರೀ ಅನಿಲ್ ಕುಮಾರ್ ಎಸ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಕರ್ನಾಟಕ. 113. ಶ್ರೀ ಶಿವಗಂಗೆ ಪುಟ್ಟಗಂಗಪ್ಪ ಧರಣೀಶ. ಕರ್ನಾಟಕ ಪೊಲೀಸ್ ಆಯುಕ್ತರು. ಸಹಾಯಕ 114. ಶ್ರೀ ರಘು ಕುಮಾರ್ ವೆಂಕಟೇಸುಲು, ಸಹಾಯಕ ನಿರ್ದೇಶಕ / ಉಪ ಪೊಲೀಸ್ ವರಿಷ್ಠಾಧಿಕಾರಿ, ಕರ್ನಾಟಕ 115. ಶ್ರೀ ನಾರಾಯಣಸ್ವಾಮಿ ವೆಂಕಟಶಾಮಪ್ಪ, ಪೊಲೀಸ್…