Author: kannadanewsnow07

ಬೆಂಗಳೂರು: ನಾಳೆಯಿಂದ ರಾಜ್ಯ ಸರ್ಕಾರದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಉಭಸದನಗಳನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ ಮಾಡಲಿದ್ದಾರೆ.  ರಾಜ್ಯಪಾಲರ ಮಾತಿನ ಬಳಿಕ ಅಗಲಿದ ಗಣ್ಯರಿಗೆ ಸಂತಾಪವನ್ನು ಸೂಚನೆ ಮಾಡಲಾಗುವುದು. ವಿಧಾನಸಭೆಯ ಮಾಜಿ ಸದಸ್ಯರಾಗಿದ್ದ ನಾಗನಗೌಡ ಕಂದಕೂರ ಮತ್ತು ಹಿರಿಯ ಸಾಹಿತಿ ಹಾಗೂ ವಿಮರ್ಶಕರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿರುವುದನ್ನು ಈ ಸದನಕ್ಕೆ ಅತ್ಯಂತ ವಿಷಾದದಿಂದ ತಿಳಿಸಬಯಸುತ್ತೇನೆ. 1. ನಾಗನಗೌಡ ಕಂದಕೂರ : ರಾಜ್ಯದ ಮಾಜಿ ಸದಸ್ಯರಾಗಿದ್ದ ನಾಗನಗೌಡ ಕಂದಕೂರು ಅವರು ದಿನಾಂಕ:01.06.1945 ರಂದು ಯಾದಗಿರಿ ಜಿಲ್ಲೆಯ ಗುರುಮಿಠಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಜನಿಸಿದ್ದು, ವೃತ್ತಿಯಲ್ಲಿ ಕೃಷಿಕರಾಗಿದ್ದರು. 15ನೇ ವಿಧಾನಸಭೆಗೆ ಆಯ್ಕೆಯಾಗಿದ್ದ ಶ್ರೀಯುತರು 2019 ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಹಿರಿಯ ರಾಜಕಾರಣಿ ನಾಗನಗೌಡ ಕಂದಕೂರು ರವರು ದಿನಾಂಕ:28.01.2024 ರಂದು ನಿಧನ ಹೊಂದಿರುತ್ತಾರೆ. 2. ಪ್ರೊ. ಅಮೃತ ಸೋಮೇಶ್ವರ : ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಅನನ್ಯ ಸಾಧಕರಾಗಿದ್ದ ಪ್ರೊ. ಅಮೃತ ಸೋಮೇಶ್ವರ ಅವರು ಕನ್ನಡ…

Read More

*ಕಿರಣ್‌ ತುಮಕೂರು: ತುಮಕೂರು ತಾಲ್ಲೂಕು, ಹೆಬ್ಬೂರಿನ ಹೋಬಳಿ, ಗರಗದಕುಪ್ಪೆ ಗ್ರಾಮದ ಶ್ರೀ ಆಂಜನೇಯಸ್ವಾಮಿಯವರ ಬ್ರಹ್ಮರಥೋತ್ಸವ ಹಾಗೂ ಜಾತ್ರೆಯ ಇದೇ 16-02-2024ನೇ ಶುಕ್ರವಾರ ಅದ್ದೂರಿಯಾಗಿ ನೇರವೇರಲಿದೆ. ತುಮಕೂರು ತಾಲ್ಲೂಕು, ಹೆಬ್ಬೂರಿನ ಹೋಬಳಿ, ಗರಗದಕುಪ್ಪೆ ಗ್ರಾಮದ ಶ್ರೀ ಅಂಜನೇಯಸ್ವಾಮಿಯವರ ಬ್ರಹ್ಮರಥೋತ್ಸವದ ಕಾರ್ಯಕ್ರಮಗಳು ಶ್ರೀ ಶೋಭಕೃತುನಾಮ ಸಂವತ್ಸರದ ಮಾಘಮಾಸ ಶುದ್ಧ ಪಂಚಮಿ ದಿನಾಂಕ : 14-02-2024ನೇ ಬುಧವಾರದಿಂದ ದಿನಾಂಕ : 23-02-2024ನೇ ಶುಕ್ರವಾರದವರೆಗೆ ಶ್ರೀ ಪಾಂಚರಾತ್ರಾಗಮ ರೀತ್ಯ ಶ್ರೀ ಸ್ವಾಮಿಯವರ ಪ್ರೇರಣೆಯಂತೆ ನಡೆಯುತ್ತದೆ ಭಕ್ತ ಮಹಾಶಯರು ಈ ಕಾರ್ಯಕ್ರಮದಲ್ಲಿ ಸಕುಟುಂಬ ಸಮೇತರಾಗಿ ಭಾಗವಹಿಸಿ ಶ್ರೀ ಸ್ವಾಮಿಯವರ ಕೃಪೆಗೆ ಪಾತ್ರರಾಗಬೇಕಾಗಿ ಊರಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Read More

ಬೆಂಗಳುರು: ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಲು ಶುರು ಮಾಡಿದೆ ಎಂದು ತಿಳಿಸಲಾಗಿದೆ. ಫೆಬ್ರವರಿ 15 ನೇ ದಿನಾಂಕದಿಂದ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಪ್ರಾರಂಭಿಸುತ್ತದೆ ಎನ್ನಲಾಗಿದೆ. ಈ ನಡುವೆ ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್(Gruhalakshmi Pending Money)ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿ ದ ಬಳಿಕ ಆರನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ–ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ–ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು…

Read More

ಬೆಂಗಳೂರು: ಆರು ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಸಂಚಾರ ನಿಯಮಗಳನ್ನು ಅನುಸರಿಸದವರ ವಿರುದ್ಧ ಸೂಕ್ತ ಕ್ರಮ ಹಾಗೂ ಕಟ್ಟುನಿಟ್ಟಾಗಿ ದಂಡ ವಿಧಿಸಲು ಸಂಚಾರಿ ಪೊಲೀಸರು ಮುಂದಾಗಿದ್ದಾರೆ ಎನ್ನುವ ಸುದ್ದಿಯೊಂದು ವೈರಲ್ ಆಗಿತ್ತು, ಇದಲ್ಲದೇ ಕೆಲವು ಮಾಧ್ಯಮಗಳು ಕೂಡ ಸುದ್ದಿಯನ್ನು ಪ್ರಕಟ ಮಾಡಿದ್ದವು. ಈ ನಡುವೆ ಇದಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆಯನ್ನು ಬೆಂಗಳೂರು ಪೊಲೀಸರು ನೀಡಿದ್ದಾರೆ. ಹೆಲೈಟ್ ಹಾಕದ 6 ವರ್ಷದ ಮೇಲ್ಪಟ್ಟ ಮಕ್ಕಳ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸುತ್ತಾರೆ ಎಂಬುದು ಕೇವಲ ವದಂತಿ ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಸ್ಪಷ್ಟಪಡಿಸಿದ್ದು, ಇದೇ ವೇಳೇ ಅವರು 6 ವರ್ಷ ಮೇಲ್ಪಟ್ಟ ಎಲ್ಲರೂ (ಸವಾರ ಹಾಗೂ ಹಿಂಬದಿ ಸವಾರರು) ಕಡ್ಡಾಯವಾಗಿ ಹೆಲೈಟ್ ಧರಿಸಬೇಕು ಎಂಬ ನಿಯಮವಿದೆ.ಈ ನಿಯಮವು ಹೊಸದೇನೂ ಅಲ್ಲ, ಆದರೆ ಈ ಸಂಬಂಧ ಸಂ ಚಾರ ಪೊಲೀಸರಿಗೆ, ಶಾಲೆಗಳ ಬಳಿ ವಿಶೇಷ ಕಾರ್ಯಾಚರಣೆ ನಡೆಸುವ ಯಾವುದೇ ಚಿಂತನೆ ಇಲ್ಲ ಅಂತ ಹೇಳಿದ್ದಾರೆ.

Read More

ಕಲಬುರಗಿ: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚದ ಬೋರ್ಡ್‌ ಪ್ರದರ್ಶನ ಕಡ್ಡಾಯವಾಗಿ ಹಾಕಾಬೇಕಾಗಿದೆ ಅಂಥ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣ್‌ ಪ್ರಕಾಶ್‌ ಪಾಟೀಲ್‌ ನೀಡಿದ್ದಾರೆ. ಅವರು ನಗರದಲ್ಲಿ ಶನಿವಾರ ಜಿಮ್ಸ್‌ ಆವರಣದಲ್ಲಿ ನಿರ್ಮಾಣಗೊಂಡಿರುವ ಟ್ರಾಮಾ ಕೇರ್‌ ಸೆಂಟರ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದೇ ವೇಳೇ ಅವರು ಮಾತನಾಡಿ, ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡುವ ಚಿಕಿತ್ಸೆ ವೆಚ್ಚದ ಬೋರ್ಡ್‌ಗಳನ್ನು ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಪ್ರದರ್ಶಿಸಬೇಕು. ಆ ಮೂಲಕ ನಡೆಯುತ್ತಿರುವ ಸುಲಿಗೆ ತಪ್ಪಿಸಬೇಕು ಅಂತ ಹೇಳಿದರು. ಇನ್ನೂ ಯಾವ-ಯಾವ ಸೇವೆಗಳಿಗೆ ಎಷ್ಟು ಹಣವನ್ನು ಪಡೆಯಲಾಗುತ್ತದೆ ಎನ್ನುವ ವಿವರಗಳನ್ನು ರೋಗಿ ಮತ್ತು ರೋಗಿಯ ಸಂಬಂಧಿಕರಿಗೆ ಮೊದಲು ತಿಳಿಸಬೇಕು ಅಂತ ಹೇಳಿದರು.

Read More

ಬೆಂಗಳೂರು : ಬರದಿಂದ ತತ್ತರಿಸಿರುವ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗುಳೇ ಹೋಗದಂತೆ ತಡೆಯಲು ರಾಜ್ಯ ಸರ್ಕಾರದಿಂದ 860 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ದ್ದರಾಮಯ್ಯ ಮಾಹಿತಿ ನೀಡಿದ್ದು, ಜನರು ಗುಳೇ ಹೋಗದಂತೆ ತಡೆಯಲು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ₹ 2000ದಂತೆ ಅಂದಾಜು 34 ಲಕ್ಷ ರೈತರಿಗೆ ₹ 650 ಕೋಟಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ ತಿಳಿಸಿದ್ದಾರೆ. ಇದೇ ವೇಳೆ ಅವರು ಬರದ ಹಿನ್ನೆಲೆಯಲ್ಲಿ ರಾಜ್ಯದ ಜನರಿಗೆ ಕುಡಿಯುವ ನೀರು, ಮೇವು, ಉದ್ಯೋಗ ಒದಗಿಸಲಾಗುತ್ತಿದೆ. ರಾಜ್ಯದಿಂದ 860 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದ್ದು, ಇದನ್ನು ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Read More

ನವದೆಹಲಿ: ಭಾರತ ಸರ್ಕಾರದ ಪ್ರಮುಖ ಯೋಜನೆಯಾದ ಆಯುಷ್ಮಾನ್ ಭಾರತ್ ಅನ್ನು ರಾಷ್ಟ್ರೀಯ ಆರೋಗ್ಯ ನೀತಿ 2017 ರ ಶಿಫಾರಸಿನಂತೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯ (ಯುಎಚ್ಸಿ) ದೃಷ್ಟಿಕೋನವನ್ನು ಸಾಧಿಸಲು ಪ್ರಾರಂಭಿಸಲಾಯಿತು. ಈ ಉಪಕ್ರಮವನ್ನು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (ಎಸ್ಡಿಜಿ) ಪೂರೈಸಲು ವಿನ್ಯಾಸಗೊಳಿಸಲಾಗಿದೆ. ಪಿಎಂ-ಜೆಎವೈ ಅಡಿಯಲ್ಲಿ ಪ್ರಯೋಜನ ರಕ್ಷಣೆ : ಭಾರತದಲ್ಲಿನ ವಿವಿಧ ಸರ್ಕಾರಿ ಅನುದಾನಿತ ಆರೋಗ್ಯ ವಿಮಾ ಯೋಜನೆಗಳ ಅಡಿಯಲ್ಲಿ ಪ್ರಯೋಜನಗಳನ್ನು ಯಾವಾಗಲೂ ವಿವಿಧ ರಾಜ್ಯಗಳಲ್ಲಿನ ಪ್ರತಿ ಕುಟುಂಬಕ್ಕೆ ವಾರ್ಷಿಕ 30,000 ರೂ.ಗಳಿಂದ 3,00,000 ರೂ.ಗಳವರೆಗಿನ ಗರಿಷ್ಠ ಮಿತಿಯ ಮಿತಿಯಲ್ಲಿ ರಚಿಸಲಾಗಿದೆ, ಇದು ವಿಭಜಿತ ವ್ಯವಸ್ಥೆಯನ್ನು ಸೃಷ್ಟಿಸಿದೆ. ಪಿಎಂ-ಜೆಎವೈ ಪಟ್ಟಿ ಮಾಡಲಾದ ದ್ವಿತೀಯ ಮತ್ತು ತೃತೀಯ ಆರೈಕೆ ಪರಿಸ್ಥಿತಿಗಳಿಗಾಗಿ ಪ್ರತಿ ಅರ್ಹ ಕುಟುಂಬಕ್ಕೆ ವರ್ಷಕ್ಕೆ 5,00,000 ರೂ.ಗಳವರೆಗೆ ನಗದುರಹಿತ ರಕ್ಷಣೆಯನ್ನು ಒದಗಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಕವರ್ ಚಿಕಿತ್ಸೆಯ ಈ ಕೆಳಗಿನ ಘಟಕಗಳಿಗೆ ಮಾಡಿದ ಎಲ್ಲಾ ವೆಚ್ಚಗಳನ್ನು ಒಳಗೊಂಡಿದೆ. ವೈದ್ಯಕೀಯ ಪರೀಕ್ಷೆ, ಚಿಕಿತ್ಸೆ ಮತ್ತು ಸಮಾಲೋಚನೆ ಆಸ್ಪತ್ರೆಗೆ ದಾಖಲಾಗುವ ಮೊದಲುೃ ಔಷಧ ಮತ್ತು…

Read More

ಬೆಂಗಳೂರು: ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು. ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಸರ್ಗದರ್ಶನ ನನಗೆ ಅನುಕೂಲವಾಯಿತು ಎಂದರು. ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ…

Read More

ಬೆಂಗಳೂರು: ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ ಅಂತ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್‌ ಅವರು ತಿರುಗೇಟು ನೀಡಿದ್ದಾರೆ.ೃ ಅವರು ಇಂದು ನಗರದಲ್ಲಿ ಸುದ್ದಿಗಾರರ ಜತೊಎಗೆ ಮಾತನಾಡುತ್ತ ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ‌ ಹೀಗೆ ಹೇಳಿರಬಹುದು. ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳಬೇಕು?. ಬಡವರ ಮಕ್ಕಳನ್ನು ಯಾಕೆ ರೊಚ್ಚಿಗೆ ಎಬ್ಬಿಸ್ತಿರಾ‌‌?. ಪಕ್ಷದಲ್ಲಿ ಅವರನ್ನು ಮೂಲೆ ಗುಂಪು ಮಾಡಿದ್ದಾರೆ ಅಂತ ವ್ಯಂಗ್ಯವಾಡಿದರು. ಇನ್ನೂ ನಾನೇ ಸಮಯ ಕೊಡ್ತೀನಿ. ಒಂದು ವಾರದಲ್ಲಿ ಯಾವಾಗ ಅಂತಲೂ ಹೇಳುವೆ. ನಾನೇ ಈಶ್ವರಪ್ಪ ಅವರ ಮನೆಗೆ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ.‌ ಹೇಳಿಕೆ ಮೂಲಕ ಬಡವರ ಮಕ್ಕಳನ್ನು ರೊಚ್ಚಿಗೆಬ್ಬಿಸುವುದು ಬೇಡ‌. ಅವರೇ ಆ ಕೆಲಸ ಮಾಡಲಿ ಎಂದು ಹೇಳಿದರು.

Read More

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಶನಿವಾರ ಲೋಕಸಭೆಯಲ್ಲಿ ಭಾವನಾತ್ಮಕ ಭಾಷಣ ಮಾಡಿ, ಅಯೋಧ್ಯೆಯ ರಾಮ ಮಂದಿರ ಸ್ಥಳದಲ್ಲಿ ಬಾಬರಿ ಮಸೀದಿ ಶಾಶ್ವತವಾಗಿ ಅಸ್ತಿತ್ವದಲ್ಲಿರುತ್ತದೆ ಎಂದು ಘೋಷಿಸಿದರು. ಅವರು ತಮ್ಮ ಭಾಷಣವನ್ನು ‘ಬಾಬರಿ ಮಸ್ಜಿದ್ ಜಿಂದಾಬಾದ್’ ಘೋಷಣೆಯೊಂದಿಗೆ ಮುಕ್ತಾಯಗೊಳಿಸಿದರ ಘಟನೆ ನಡೆದಿದೆ. “ಮಸೀದಿ ಇನ್ನೂ ಅಸ್ತಿತ್ವದಲ್ಲಿದೆ ಮತ್ತು ಅದು ಒಂದು ಕಾಲದಲ್ಲಿ ಇದ್ದ ಸ್ಥಳದಲ್ಲಿಯೇ ಉಳಿಯುತ್ತದೆ ಎಂದು ನನ್ನ ನಂಬಿಕೆ. ಬಾಬರಿ ಮಸೀದಿ ಇತ್ತು, ಇದೆ ಮತ್ತು ಮುಂದುವರಿಯುತ್ತದೆ. ಬಾಬರಿ ಮಸೀದಿ ದೀರ್ಘಕಾಲ ಬಾಳಲಿ, ಭಾರತ ದೀರ್ಘಕಾಲ ಬಾಳಲಿ, ಜೈ ಹಿಂದ್ ಆಗಿರಲಿ” ಎಂದು ಅವರು ಹೇಳಿದರು. ಇದೇ ವೇಳೆ ಅವರು ಮಾತನಾಡುತ್ತ “ಮೋದಿ ಸರ್ಕಾರವು ಒಂದು ನಿರ್ದಿಷ್ಟ ಸಮುದಾಯ, ಧರ್ಮದ ಸರ್ಕಾರವೇ ಅಥವಾ ಇಡೀ ದೇಶದ ಸರ್ಕಾರವೇ ಎಂದು ನಾನು ಕೇಳಲು ಬಯಸುತ್ತೇನೆ. ಭಾರತ ಸರ್ಕಾರಕ್ಕೆ ಒಂದು ಧರ್ಮವಿದೆಯೇ? ಈ ದೇಶಕ್ಕೆ ಧರ್ಮವಿಲ್ಲ ಎಂದು ನಾನು ನಂಬುತ್ತೇನೆ. ಜನವರಿ 22 ರ ಮೂಲಕ, ಒಂದು ಧರ್ಮವು ಇನ್ನೊಂದರ ಮೇಲೆ ಗೆದ್ದಿದೆ…

Read More