Author: kannadanewsnow07

ಕಾರವಾರ: ಕುಡಿವ ನೀರಿನ ಕೊರತೆ ನೀಗಿಸಲು ಶಿರಸಿಯ ಗೌರಿ ನಾಯ್ಕ ಮತ್ತೊಮ್ಮೆ ಏಕಾಂಗಿ ಸಾಹಸ ಮಾಡಿದ್ದು, ಈ ನಡುವೆ ಅವರು ಯಶಸ್ಸ ಅನ್ನು ಕೂಡ ಪಡೆದುಕೊಂಡಿದ್ದಾರೆ.  ಇಲ್ಲಿನ ಗಣೇಶನಗರದ ಅಂಗನವಾಡಿ ಮಕ್ಕಳಿಗೆ ನೀರಿಲ್ಲ. ಜೊತೆಗೆ ಆಸುಪಾಸಿನ ಮನೆಗಳಲ್ಲೂ ನೀರಿಗೆ ತತ್ವಾರ ಉಂಟಾಗಿತ್ತು, ಈ ನಡುವೆ ಸ್ವಪ್ರೇರಣೆಯಿಂದ ಗುದ್ದಲಿ, ಹಾರೆ ಹಿಡಿದುಕೊಂಡು ಬಾವಿ ತೋಡಿದ್ದಾರೆ. ಬಾವಿ ತೋಡುತ್ತಿರುವ ಜಲ ಸಾಧಕಿ ಗೌರಿ ನಾಯ್ಕ ಅವರ ಮುಖದಲ್ಲಿ ಬುಧವಾರ ಮಂದಹಾಸ ಮೂಡಿದೆ. ಕಳೆದ 10 ದಿನಗಳಿಂದ ಹಗಲಿಡೀ ದುಡಿದ ಪರಿಣಾಮ ಬಾವಿ ಸುಮಾರು 8 ಅಡಿ ಆಳ ತಲುಪಿದ್ದು, ಈಗ ಕೆಂಪನೆಯ ಮತ್ತು ತಂಪನೆಯ ಮಣ್ಣು ಲಭಿಸುತ್ತಿದೆ. ಜಲ ಸಮೀಪದಲ್ಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ ಎನ್ನಲಾಗಿದೆ. ಈ ಬಾವಿ ಪೂರ್ಣಗೊಳಿಸಲು ಒಂದು ತಿಂಗಳು ಬೇಕಾಗಬಹುದು ಎಂದು ಮೊದಲು ಅಂದಾಜಿಸಿದ್ದೆ. ಬುಧವಾರ ತಂಪನೆಯ ಮಣ್ಣು ಲಭಿಸುತ್ತಿರುವುದರಿಂದ ಇನ್ನು ಹದಿನೈದು ದಿನಗಳು ಭಾವಿ ಕೆಲಸ ಪೂರ್ಣಗೊಳಿಸಲು ಸಾಕಾಗಬಹುದು ಎನ್ನುತ್ತಾರೆ ಗೌರಿ.

Read More

ಬೆಂಗಳೂರು: ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡುವವರಿಗೆ ಹೈಕೋರ್ಟ್‌ ಬಿಗ್‌ಶಾಕ್‌ ನೀಡಿದೆ ತ್ಯಾಗರಾಜ ನಗರದಲ್ಲಿನ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಬೇಕು’ ಎಂದು ಕೋರಿ ಸ್ಥಳೀಯ ನಿವಾಸಿ ಪ್ರಶಾಂತ್ ರಾವ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ರಸ್ತೆ, ಪಾದಚಾರಿ ಮಾರ್ಗಗಳಲ್ಲಿ ದೀರ್ಘಕಾಲದಿಂದ ನಿಲುಗಡೆ ಮಾಡಲಾಗಿರುವ ಅಪರಿಚಿತ ಹಾಗೂ ವಾರಸುದಾರರು ಪತ್ತೆಯಾಗದ ವಾಹನಗಳನ್ನು ಹರಾಜು ಹಾಕಲು ಹೈಕೋರ್ಟ್ ಕಾಲಮಿತಿ ನಿಗದಿಪಡಿಸಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ, ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಹಾಗೂ ರಸ್ತೆಗಳಲ್ಲಿ ಬಿಟ್ಟು ಹೋಗಿರುವ ಅಪರಿಚಿತ ಮತ್ತು ವಾರಸುದಾರರು ಪತ್ತೆಯಾಗದ ವಾಹಗಳ ಸ್ಥಳಾಂತರ, ಅವುಗಳ ಹರಾಜು ಹಾಕುವ ಸಂಬಂಧ 2024ರ ಜ.31ರಂದು ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ಜಂಟಿ ಸಭೆಯ…

Read More

ಸ್ತನ ಕ್ಯಾನ್ಸರ್ ಮಹಿಳೆಯರಲ್ಲಿ ಉಂಟಾಗುವ ಸಾಮಾನ್ಯ ಸಮಸ್ಯೆಯಾಗಿದೆ. ಈ ಸಮಸ್ಯೆಯು ಹಾರ್ಮೋನುಗಳ ಬದಲಾವಣೆ ಅಥವಾ ಇತರ ಕಾರಣಗಳಿಂದ ಉಂಟಾಗುತ್ತದೆ. ಸ್ತನ ಕ್ಯಾನ್ಸರ್ ಅನ್ನು ಮ್ಯಾಮೊಗ್ರಾಮ್ ಮತ್ತು ಎಂಆರ್ಐ ಮೂಲಕ ಕಂಡು ಹಿಡಿಯಲಾಗಿದೆ. ಸ್ತನ ಕ್ಯಾನ್ಸರ್ ಮಹಿಳೆಯರಲ್ಲಿ ಉಂಟಾಗುವ ಸಾಮಾನ್ಯ ಸಮಸ್ಯೆಯಾಗಿದೆ. ಈ ಸಮಸ್ಯೆಯು ಹಾರ್ಮೋನುಗಳ ಬದಲಾವಣೆ ಅಥವಾ ಇತರ ಕಾರಣಗಳಿಂದ ಉಂಟಾಗುತ್ತದೆ. ಸ್ತನ ಕ್ಯಾನ್ಸರ್ ಅನ್ನು ಮ್ಯಾಮೊಗ್ರಾಮ್ ಮತ್ತು ಎಂಆರ್ಐ ಮೂಲಕ ಕಂಡು ಹಿಡಿಯಲಾಗುತ್ತದೆ. ಸ್ತನ ಕ್ಯಾನ್ಸರ್ ಅನ್ನು ಲುಂಪೆಕ್ಟಮಿ ಮೂಲಕ ಚಿಕಿತ್ಸೆ ನೀಡಲಾಗುತ್ತದೆ. ಇದು ಸ್ತನ ಕ್ಯಾನ್ಸರ್ನ ಗೆಡ್ಡೆ ತೆಗೆದು ಹಾಕುವ ವಿಧಾನವಾಗಿದೆ. ತೂಕವನ್ನು ನಿಯಂತ್ರಿಸುವ ಮೂಲಕ ಸ್ತನ ಕ್ಯಾನ್ಸರ್ ತಪ್ಪಿಸಬಹುದು. ಪುರುಷರು ಮತ್ತು ಮಹಿಳೆಯರಲ್ಲಿ ಬಹಳ ಸಾಮಾನ್ಯವಾದ ಕಾಯಿಲೆ ಹೃದ್ರೋಗ ಸಮಸ್ಯೆಯಾಗಿದೆ. ಮಹಿಳೆಯರು ಹೆಚ್ಚು ಹೃದಯ ಸಂಬಂಧಿ ಕಾಯಿಲೆ ಅಪಾಯವ ಹೊಂದಿರುತ್ತಾರೆ. ಮಧುಮೇಹ, ಮೂತ್ರಪಿಂಡದ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ಮಹಿಳೆಯರು ಹೃದ್ರೋಗ ಅಭಿವೃದ್ಧಿಪಡಿಸುವ ಹೆಚ್ಚಿನ ಅಪಾಯ ಹೊಂದಿರುತ್ತಾರೆ. ಕರಿದ ಪದಾರ್ಥ ಮತ್ತು ಉಪ್ಪಿನ ಸೇವನೆ ಕಡಿಮೆ…

Read More

ಕೆಎನ್‌ಎನ್‌ಸಿನಿಮಾಡೆಸ್ಕ್‌: ವೆಂಕಟ್ ಭಾರದ್ವಾಜ್ ನಿರ್ದೇಶನದ `ನಗುವಿನ ಹೂಗಳ ಮೇಲೆ’ ಚಿತ್ರ ಇಂದು ಬಿಡುಗಡೆಗೊಳ್ಳಲಿದೆ. ಅಂದ ಹಾಗೇ ಇಂದು ಬಿಡುಗಡೆಯ ಹೊಸ್ತಿಲಲ್ಲೇ ಪ್ರೇಕ್ಷಕರ ಕೌತಕ ಮೂಡಿಸು ಸಲುವಾಗಿ ಈ ಸಿನಿಮಾದಿಂದ ಹೊಸ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ‘ನಗುವಿನ ಹೂಗಳ ಮೇಲೆ’ ಒಂದಷ್ಟು ನಿರೀಕ್ಷೆ ಮೂಡಿಸಿದೆ. ಆ ನಿರೀಕ್ಷೆಗಳನ್ನು ಹೆಚ್ಚಿಸುವ ಸಲುವಾಗಿ ಈ ಹಾಡು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಪ್ರೀತಿ-ಪ್ರೇಮದ ಹಲವು ಮಜಲುಗಳು ಇವೆ. ಅವುಗಳಲ್ಲಿ ಒಂದು ಭಾವದ ಅಭಿವ್ಯಕ್ತಿಯ ರೀತಿಯಲ್ಲಿ ಈ ಹಾಡು ಮೂಡಿಬಂದಿದೆ. ಕಿರಣ್ ನಾಗರಾಜ್ ಸಾಹಿತ್ಯ ಮತ್ತು ರೋನಿ, ಮೇಘನಾ ಕಠಸಿರಿಯಲ್ಲಿ ಮುದ್ದಾಗಿ ರೂಪುಗೊಂಡಿರುವ ಈ ಹಾಡು ಫಲಿಸಿದ ಪ್ರೇಮದ ಎಲ್ಲ ಭಾವಗಳನ್ನೂ ಸಶಕ್ತವಾಗಿ ಹಿಡಿದಿಟ್ಟಂತೆ ಭಾಸವಾಗುತ್ತದೆ. ಜೀ ಮ್ಯೂಸಿಕ್ ಮೂಲಕ ಬಿಡುಗಡೆಗೊಂಡಿರುವ ಮುದ್ದು ಬೇಬಿ ಹಾಡು ಬಹು ಬೇಗನೆ ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ. ಇನ್ನೇನು ಪ್ರೇಮಿಗಳ ದಿನ ಹತ್ತಿರದಲ್ಲಿದೆ. ಆ ಹೊತ್ತಿಗೆಲ್ಲ ಈ ಹಾಡು ಸಮಸ್ತ ಪ್ರೇಮಿಗಳ ಫೇವರಿಟ್ ಆಗಿ ಬದಲಾಗುವ ಲಕ್ಷಣಗಳಿವೆ. ಇದು ಪರಿಶುದ್ಧ…

Read More

ಕೆಎನ್‌ಎನ್‌ಸಿನಿಮಾಡೆಸ್ಕ್‌: ‘ತಾರಕಾಸುರ’ ಚಿತ್ರದ ಮೂಲಕ ಸ್ಯಾಂಡಲ್​​ವುಡ್​ನಲ್ಲಿ ಭರವಸೆ ಮೂಡಿಸಿರುವ ಯಂಗ್ ಹೀರೋ ರವಿ ಈಗ ‘ಕೈಲಾಸ ಕಾಸಿದ್ರೆ’ ಎಂಬ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ಅಂದ ಹಾಗೇ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಮೂಸಿರುವ ಕೈಲಾಸ ಚಿತ್ರತಂಡದಿಂದ ಕನ್ನಡದ ಮಟ್ಟಿಗೆ ಹೊಸತೆನ್ನಿಸುವಂಥ ಟ್ರಾನ್ಸ್ ಸಾಂಗ್ ಒಂದನ್ನು ಬಿಡುಗಡೆ ಮಾಡಿದ್ದು. ಪಡ್ಡೆ ಹುಡುಗರು ಇದನ್ನು ಮೆಚ್ಚಿಕೊಳ್ಳುತ್ತಿದ್ದಾರೆ.  ಅಂದ ಹಾಗೇ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಮೂಸಿರುವ ಕೈಲಾಸ ಚಿತ್ರತಂಡದಿಂದ ಕನ್ನಡದ ಮಟ್ಟಿಗೆ ಹೊಸತೆನ್ನಿಸುವಂಥ ಟ್ರಾನ್ಸ್ ಸಾಂಗ್ ಒಂದನ್ನು ಬಿಡುಗಡೆ ಮಾಡಿದ್ದು. ಪಡ್ಡೆ ಹುಡುಗರು ಇದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಟ್ರಾನ್ಸ್ ವೀಡಿಯೋ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ. ಲೇಖಕ್ ಎಂ ಸಿದ್ದಾರ್ಥ ಸಾಹಿತ್ಯ ಒದಗಿಸಿದ್ದಾರೆ. ಆಶಿಕ್ ಅರುಣ್ ಸಂಗೀತ ಸಂಯೋಜನೆಯೊಂದಿಗೆ ಈ ಟ್ರಾನ್ಸ್ ವೀಡಿಯೋ ಸಾಂಗ್ ಮೂಡಿ ಬಂದಿದೆ. ಇದು ಕ್ರೈಂ ಕಂ ಕಾಮಿಡಿ ಜಾನರಿಗೊಳಪಡುವ ಚಿತ್ರ. ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ…

Read More

ಕೆಎನ್‌ಎನ್‌ಸಿನಿಮಾಡೆಸ್ಕ್‌: `ಶಭ್ಬಾಷ್’ ಚಿತ್ರ ಅತ್ಯಂತ ವೇಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದು, ಶೀಘ್ರದಲ್ಲಿ ಬೆಳ್ಳಿ ತೆರೆಗೆ ದಾಪುಗಾಲು ಇಡಲಿದೆ. ರುದ್ರಶಿವ ಯೋಜನೆಯಂತೆ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಏಳು ದಿನಗಳ ಚಿತ್ರೀಕರಣ ಮುಗಿಸಿಕೊಂಡು, ಚನ್ನಗಿರಿಯ ಶಾಂತಿಸಾಗರದ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಅಲ್ಲಿನ ಪೌರಾಣಿಕ, ಐತಿಹಾಸಿಕ ಸ್ಥಳಗಳಲ್ಲಿ ಸಾಂಗವಾಗಿ ಚಿತ್ರೀಕರಣ ನೆರವೇರಿದೆ. ಚನ್ನಗಿರಿಯ ಶಾಂತಿಸಾಗರ ಸೂಳೆಕೆರೆ ಅಂತಲೂ ಕರೆಸಿಕೊಳ್ಳುತ್ತದೆ. ಏಷ್ಯಾ ಖಂಡದಲ್ಲಿಯೇ ಎರಡನೇ ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯೂ ಶಾಂತಿಸಾಗರಕ್ಕಿದೆ. ಈ ಕೆರೆಗೂ ಹನ್ನೆರಡನೇ ಶತಮಾನಕ್ಕೂ ಎಂದಿಗೂ ಸಡಿಲವಾಗದಂಥಾ ಕೊಂಡಿಗಳಿದ್ದಾವೆ. ಸ್ವರ್ಗಾವತಿ ಪಟ್ಟಣದ ದೊರೆ ವಿಕ್ರಮರಾಜನ ಸುಪುತ್ರಿ ಶಾಂತವ್ವ ತನಗಾದ ಅವಮಾನಕ್ಕೆ ಪ್ರತಿಭಟನೆಯ ಸ್ವರೂಪದಲ್ಲಿ ಈ ಬೃಹತ್ ಕೆರೆಯನ್ನು ಸೃಷ್ಟಿಸಿದಳೆಂಬ ಪ್ರತೀತಿ ಇದೆ. ಇಲ್ಲಿಯೇ ಸರ್ ಎಂ ವಿಶ್ವೇಶ್ವರಯ್ಯ ಕಟ್ಟಿಸಿರುವ ಸೇತುವೆಯೊಂದು ಪ್ರಧಾನ ಆಕರ್ಷಣೆ. ಎರಡು ಬೆಟ್ಟಗಳನ್ನು ಸೇರಿಸಿ ಈ ಸೇತುವೆಯನ್ನು ಕಟ್ಟಿಸಲಾಗಿದೆ. ಈವತ್ತಿಗೂ ಅಚ್ಚರಿಯಾಗಿ ಕಾಣಿಸುವ ಈ ಸೇತುವೆಯ ಮೇಲೆ ಶಭ್ಬಾಷ್ ಚಿತ್ರೀಕರಣ ನಡೆಸಲಾಗಿದೆ. ಇದಲ್ಲದೇ ಈ ಭಾಗದಲ್ಲಿರುವ ಪ್ರಸಿದ್ಧ ದೇವಾಲಯ,…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಸಾರಾಂಶ’ ಚಿತ್ರದ ಹಾಡುಗಳು ಈಗಾಗಲೇ ವೈರಲ್ ಆಗಿದೆ. ಈ ನಡುವೆ ಇದೀಗ ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ಉದಿತ್ ಸಹಯೋಗದ ಮತ್ತೊಂದು ಮೆಲೋಡಿಯಸ್ ಹಾಡು ಬಿಡುಡೆಯಾಗಿದ್ದು, ಎಲ್ಲ ಮನ ಗೆಲ್ಲುತ್ತಿದೆ. ತೀರದಾಚೆಗೆ ಹಾರಿ ಹೋಗುವಾಸೆ ಅಂತ ಶುರುವಾಗುವ ಈ ಹಾಡು ಸಾಹಿತ್ಯ ಸಂಗೀತದ ಹದವಾದ ಸಂಯೋಗದೊಂದಿಗೆ ಸಂಗೀತರ ಮನ ಗೆಲ್ಲುವುದಕ್ಕೆ ಮುಂದಾಗಿದೆ. ನಿರ್ದೇಶಕ ಸೂರ್ಯ ವಸಿಷ್ಠ ಬರೆದಿರುವ ಸಾಹಿತ್ಯಕ್ಕೆ ಪಂಚಮ್ ಅವರು ಧ್ವನಿಯಾಗಿದ್ದಾರೆ. ಧಾರಾವಾಹಿ, ಸಿನಿಮಾಗಳ ಮೂಲಕ ನಟರಾಗಿದ್ದ ಸೂರ್ಯ ವಸಿಷ್ಠ `ಸಾರಾಂಶ’ದ ಮೂಲಕ ನಿರ್ದೇಶಕರಾಗಿದ್ದು, ಸ್ಯಾಂಡಲ್‌ವುಡ್‌ನಲ್ಲಿ ಭರಸವಸೆ ಮೂಡಿಸಿದ್ದಾರೆ. ಇದಲ್ಲದೇ ಸೂರ್ಯ ವಸಿಷ್ಠ ಹಾಗೂ ಶೃತಿ ಹರಿಹರನ್ ಕಾಂಬಿನೇಷನ್ನಿನ ಈ ಹಾಡು, ಸಾರಾಂಶದ ದೃಷ್ಯಗಳ ಅಸಲೀ ಮೋಡಿಯ ಪರಿಚಯವನ್ನೂ ಮಾಡಿಸಿದೆ. ಅಂಧ ಹಾಗೇ ಇದೇ ಫೆಬ್ರವರಿ 15ರಂದು ಸಿನಿಮಾ ಬಿಡುಗಡೆಯಾಗಲಿದೆ. ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ…

Read More

ಕೆಎನ್‌ಎನ್‌ಸಿನಿಮಾಡೆಸ್ಕ್‌: ನಟಿ ಪ್ರಿಯಾ ಪ್ರಕಾಶ್​ ವಾರಿಯರ್‌ ಮತ್ತು ಶ್ರೇಯಸ್​ ಮಂಜು ಅಭಿನಯದ ವಿಷ್ಣುಪ್ರಿಯನ ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ನಿರ್ಮಾಣ ಮಾಡಿದೆ. ಚಿಗುರು ಚಿಗುರೊ ಸಮಯ ಹಿತವಾದ ಒಂದು ಮೌನ.. ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ…’ ಎಂಬ ಸಾಲಿನಿಂದ ಶುರುವಾಗುವ ಈ ಗೀತೆಯು ಸಂಗೀತ ಮತ್ತು ಸಾಹಿತ್ಯದ ಜೊತೆಗೆ ರೊಮ್ಯಾಂಟಿಕ್​ ಆದ ದೃಶ್ಯದ ಮೂಲಕವೂ ಗಮನ ಸೆಳೆಯುತ್ತಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಇದಕ್ಕೆ ಸಾಹಿತ್ಯ ಬರೆದಿದ್ದಾರೆ. ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ. ಈ ವರ್ಷದ ಸುಮಧುರ ಹಾಡು ಎಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಹಾಡಿಗೆ ಇದೆ. ವಿ.ಕೆ. ಪ್ರಕಾಶ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಗಂಡುಗಲಿ ಕೆ.ಮಂಜು ನಿರ್ಮಾಣದ ವಿಷ್ಣುಪ್ರಿಯ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು…

Read More

ದಾವಣಗೆರೆ : ಸಂಸದ ಡಿ.ಕೆ ಸುರೇಶ್​ರನ್ನು ಗುಂಡಿಕ್ಕಿ ಕೊಲ್ಲಬೇಕು ಅಂತ ಮಾಜಿ ಶಾಸಕ ಕೆ.ಎಸ್‌ ಈಶ್ವರಪ್ಪನಮವರು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅವರು ಇಂದು ದಾವಣಗೆರೆ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಸಂಸದ ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ ಇಬ್ಬರು ರಾಷ್ಟ್ರದ್ರೋಹಿಗಳು. ದೇಶ ವಿಭಜನೆ ಮಾತು ಹೇಳುವ ಡಿ.ಕೆ ಸುರೇಶ್, ವಿನಯ್ ಕುಲಕರ್ಣಿ ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ, ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತೇವೆ. ದೇಶ ಛಿದ್ರ ಮಾಡುವವರಿಗೆ, ಇಂತವರಿಗೆ ತಕ್ಕ ಪಾಠ ಕಲಿಸಿ. ದೇಶ ವಿಭಜನೆ ಮಾತು ಆಡುವವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ. ದೇಶ ತುಂಡು ಮಾಡುವ ಮಾತು ನೆಹರು ಕಾಲದಿಂದಲೂ ಬಂದಿದೆ. ಜಿನ್ನಾ ಸಂಸ್ಕೃತಿ ಡಿ.ಕೆ ಸುರೇಶ್ ಅವರಿಗೆ ಬಂದಿದೆ ಎಂದು ಕೆ.ಎಸ್. ಈಶ್ವರಪ್ಪ ಅವರು ಕಿಡಿಕಾರಿದರು.

Read More

ಬೆಂಗಳೂರು; ಗೃಹ ಕಚೇರಿ ಕೃμÁ್ಣದಲ್ಲಿ ನ.27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ 5 ಸಾವಿರ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಮುಖ್ಯಮಂತ್ರಿಗಳು, ಆಡಳಿತ ಜನರ ಬಳಿಗೆ ಹೋಗಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಜನರು ಸಣ್ಣ ಪುಟ್ಟ ಕೆಲಸಗಳಿಗಾಗಿ ಬೆಂಗಳೂರಿಗೆ ಬರುವಂತಾಗಬಾರದು. ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಯಬೇಕು. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ಅವರು ವಿವರಿಸಿದರು. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ…

Read More