Author: kannadanewsnow07

ನವದೆಹಲಿ: ನಾವು ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಹೊಸ ವೈರಲ್‌ ಸುದ್ದಿಗಳನ್ನು ನಾವು ನೋಡ್ತಾ ಇರ್ತಿವಿ. ಕೆಲವೊಮ್ಮೆ ವಿಚಿತ್ರ ಘಟನೆಗಳು ವೈರಲ್ ಆಗುತ್ತವೆ, ಕೆಲವೊಮ್ಮೆ ಕೆಲವು ವೀಡಿಯೊಗಳು ತಮ್ಮಲ್ಲಿ ತುಂಬಾ ಆಸಕ್ತಿದಾಯಕವಾಗಿರುತ್ತವೆ ಕೂಡ. ಈ ನಡುವೆ ಬಾಲಕನ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊದಲ್ಲಿ, ಚಿಕ್ಕ ಹುಡುಗನೊಬ್ಬ ಎಬಿಸಿಡಿಯ ಎಲ್ಲಾ ಅಕ್ಷರಗಳೊಂದಿಗೆ ಮೋದಿ ಸರ್ಕಾರದ ಯೋಜನೆಗಳ ಹೆಸರುಗಳನ್ನು ಉಲ್ಲೇಖ ಮಾಡುವುದನ್ನು ನೋಡುವುದನ್ನು ಕಾಣಬಹುದಾಗಿದೆ . ಬಾಲಕ A ಯಿಂದ Z ವರೆಗಿನ ಎಲ್ಲಾ ಅಕ್ಷರಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಎಲ್ಲಾ ಯೋಜನೆಗಳನ್ನು ಪಠ ಪಠ ಅಂತ ಉಲ್ಲೇಖ ಮಾಡುವುದಕ್ಕೆ ನಾವು ನೋಡಬಹುದಾಗಿದೆ. ವೀಡಿಯೊದಲ್ಲಿ, ಒಬ್ಬ ಬಾಲಕನೊಬ್ಬ ಪಿಎಂ ಮೋದಿ ಸರ್ಕಾರದ ಯೋಜನೆಗಳನ್ನು ಇಂಗ್ಲಿಷ್ ವರ್ಣಮಾಲೆಯ ಎಲ್ಲಾ ಅಕ್ಷರಗಳಿಗೆ ಲಿಂಕ್ ಮಾಡುವ ಮೂಲಕ ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸಿದ್ದಾನೆ. ಈ ವೀಡಿಯೊದಲ್ಲಿ, ಪುಟ್ಟ ಮಗು ಎ, ಬಿ, ಸಿ, ಡಿ ಯಿಂದ ಝಡ್ ವರೆಗಿನ ಎಲ್ಲಾ ಅಕ್ಷರಗಳನ್ನು ಪ್ರಧಾನಿ ನರೇಂದ್ರ…

Read More

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರ ಖಾತೆಗೆ ಬಡ್ಡಿಯನ್ನು ವಾರ್ಷಿಕವಾಗಿ ಆರ್ಥಿಕ ವರ್ಷದ ಕೊನೆಯ ದಿನದಂದು ಜಮೆ ಮಾಡುವ ಬದಲು ಪ್ರತಿ ತಿಂಗಳ ಕೊನೆಯ ದಿನ ಜಮೆ ಮಾಡುವ ಕುರಿತು ಹೊರಡಿಸಲಾದ ಆದೇಶವನ್ನು ಹಿಂಪಡೆದು ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಕರ್ನಾಟಕ ರಾಜ್ಯದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರ ಖಾತೆಗೆ ಬಡ್ಡಿಯನ್ನು ಪ್ರತಿ ತಿಂಗಳ ಕೊನೆಯ ದಿನ ಜಮೆ ಮಾಡಲು ಕೋರಲಾಗಿತ್ತು. ಅದರಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರದ ಆದೇಶದಲ್ಲಿ ರಾಜ್ಯದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರ ಖಾತೆಗೆ ಬಡ್ಡಿಯನ್ನು ವಾರ್ಷಿಕವಾಗಿ ಆರ್ಥಿಕ ವರ್ಷದ ಕೊನೆಯ ದಿನದಂದು ಜಮೆ ಮಾಡುವ ಬದಲು ಪ್ರತಿ ತಿಂಗಳ ಕೊನೆಯ ದಿನ ಜಮೆ ಮಾಡುವಂತೆ ಆದೇಶಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಪತ್ರದಲ್ಲಿ ಮಹಾಲೇಖಪಾಲರು ಸಾಮಾನ್ಯ ಭವಿಷ್ಯ ನಿಧಿ ಖಾತೆಯ ಚಂದಾದಾರರ ಖಾತೆಗಳಿಗೆ ಮಾಸಿಕ ನೇರವಾಗಿ ಬಡ್ಡಿಯನ್ನು ಜಮಾ ಮಾಡುವುದರಿಂದ ಹೆಚ್ಚಿನ ಬಡ್ಡಿಯ ಪಾವತಿಗೆ ಕಾರಣವಾಗುತ್ತದೆಂದು ತಿಳಿಸುತ್ತಾ, ಇದು ಒಟ್ಟಾರೆ…

Read More

ಬೆಂಗಳೂರು: ಕರ್ನಾಟಕ ಶಿಕ್ಷಣ ಕಾಯ್ದೆ-1983 ರ ಸೆಕ್ಷನ್ 2 ರ ಕ್ಲಾಸ್ (31) ಮತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ.43.ವಿವಿಧ.2001, ದಿನಾಂಕ: 05-05-2003 ಹಾಗೂ ಸರ್ಕಾರದ ಆದೇಶ ಸಂಖ್ಯೆ: ಇಡಿ.09.ವಿವಿಧ.2001, ದಿನಾಂಕ: 16-05-2006 ಪ್ರಕಾರ, ಕರ್ನಾಟಕ ರಾಜ್ಯದಲ್ಲಿ ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್. ಹಾಗೂ ಕೆ.ಎ.ಎಸ್. ಭಾμÁ ಕೋಚಿಂಗ್ ಮತ್ತು ಇನ್ನಿತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ನೀಡುವ ಸಂಸ್ಥೆಗಳು ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಸೌಧ, ಶೇμÁದ್ರಿ ರಸ್ತೆ ಬೆಂಗಳೂರು – 560001 ಇಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ನೋಂದಣಿ ಮಾಡಿಕೊಳ್ಳದೇ ಇರುವ ರಾಜ್ಯದಲ್ಲಿರುವ ಕೋಚಿಂಗ್ ಸೆಂಟರ್‍ಗಳು ಈ ಪ್ರಕಟಣೆಯು ಪ್ರಕಟಗೊಂಡ 15 ದಿನಗಳ ಒಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವುದು. ತಪ್ಪಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ-1983 ರ ಸೆಕ್ಷನ್ 2 ರ ಕ್ಲಾಸ್ (31) ರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಹಾಸ್ಟೆಲ್‌ನಲ್ಲಿ ಓದುತ್ತಲೇ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ನಡೆದಿದೆ. ತುಮಕೂರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಬಾಗೇಪಲ್ಲಿ ಠಾಣೆಯ ಪೊಲೀಸರು ಪೋಕ್ಸೋ ಕೇಸ್ ದಾಖಲು ಮಾಡಿಕೊಂಡು ಪ್ರಕರಣವನ್ನು ಬಾಗೇಪಲ್ಲಿ ಪೊಲೀಸ್‌ ಠಾಣೆಯಿಂದ ತುಮಕೂರು ನಗರ ಪೊಲೀಸ್‌ ಠಾಣೆಗೆ ಪೋಕ್ಸೋ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಸದ್ಯ ತುಮಕೂರಿನ ನಗರ ಪೊಲೀಸ್‌ ಠಾಣೆಯವರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ವ್ಯಕ್ತಿಗಾಗಿ ಬೆನ್ನಟ್ಟಿದ್ದಾರೆ.

Read More

ಕಠ್ಮಾಂಡ್‌: ನೇಪಾಳದ ಕ್ರಿಕೆಟ್‌ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇಲೆ ನೇಪಾಳ ನ್ಯಾಯಾಲಯ 8 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿಶಿರ್ ರಾಜ್ ಧಾಕಲ್ ಅವರ ಪೀಠವು ಇಂದು ವಿಚಾರಣೆ ನಡೆಸಿದ ನಂತರ ಪರಿಹಾರ ಮತ್ತು ದಂಡದೊಂದಿಗೆ 8 ವರ್ಷಗಳ ಜೈಲು ಶಿಕ್ಷೆಯ ತೀರ್ಪನ್ನು ಪ್ರಕಟಿಸಿತು. ನ್ಯಾಯಾಲಯದ ಅಧಿಕಾರಿ ರಾಮು ಶರ್ಮಾ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ನವೆಂಬರ್ನಲ್ಲಿ ನಡೆದ ಟಿ 20 ಏಷ್ಯಾ ಫೈನಲ್ಸ್ನಲ್ಲಿ ಒಮಾನ್ ವಿರುದ್ಧ ನೇಪಾಳ ಪರ ಕೊನೆಯ ಬಾರಿಗೆ ಆಡಿದ್ದರು.

Read More

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ.   ಚಾಮರಾಜನಗರ: ತಾಲ್ಲೂಕಿನ ಗುಂಡ್ಲುಪೇಟೆ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ನಿಯಮಬಾಹಿರವಾಗಿ ಡ್ರೋಣ್ ಕ್ಯಾಮೆರಾ ಬಳಿ ದೇವಾಲಯ ಹಾರಾಡಿಸಲಾಗಿದ್ದು ಸಮೀಪದ ಆನೆಯೂ ಕೂಡ ಬೆಚ್ಚಿದೆ ಎನ್ನಲಾಗಿದೆ ಜೊತೆಗೆ ಸಾಮಾಜಿಕ ಜಾಲತಾಣಗಳಿಗೆ ಹರಿಯಬಿಟ್ಟಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಕಳೆದ ಶನಿವಾರ ಬೆಟ್ಟಕ್ಕೆ ಆಗಮಿಸಿದ್ದ ಪ್ರಭಾವಿಗಳು (ಸ್ವಂತ ವಾಹನದಲ್ಲಿ ಹೋಗಿದ್ದಾರೆ ಎನ್ನಲಾಗಿದೆ, ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಡ್ರೋಣ್ ಕ್ಯಾಮೆರಾ ಬಳಸಿ ಚಿತ್ರೀಕರಣ ನಡೆಸಿದ್ದಾರೆ ಅಷ್ಟೆ ಅಲ್ಲ ಸಾಮಾಜಿಕ ಜಾಲತಾಣದಲ್ಲಿ ಅವರು ಪೋಸ್ಟ್ ಮಾಡಿದ್ದ ಆನೆಯ ಫೋಟೋಗಳು ದೊಡ್ಡ ಮಟ್ಟದಲ್ಲಿ ಟ್ರೋಲ್ ಆಗುತ್ತಿದ್ದಂತೆ ಮಂಗಳವಾರ ಎಡಿಟ್ ಮಾಡಿದ ವೀಡಿಯೋ ಸಹಾ ಅಪ್‌ಲೋಡ್ ಮಾಡಿದ್ದಾರೆ. ಇದು ನೆಟ್ಟಿಗರ ಪಿತ್ತ ನೆತ್ತಿಗೇರಿಸಿದೆ. ಸಂಜೆ ನಾಲ್ಕು ಗಂಟೆ ನಂತರ ಒಬ್ಬರನ್ನೂ ಬೆಟ್ಟದ ಮೇಲೆ ಇರಲು ಬಿಡದ ಅರಣ್ಯ ಇಲಾಖೆ 6 ಗಂಟೆವರೆಗೂ ಇರಲು ಡ್ರೋಣ್ ಕ್ಯಾಮೆರಾ ಬಳಸಲು ಹೇಗೆ ಒಪ್ಪಿಗೆ ನೀಡಿತು. ಸಾರ್ವಜನಿಕರಿಗೆ ಒಂದು ನ್ಯಾಯ ನಿಮಗೊಂದು ನ್ಯಾಯಾನಾ? ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಣ್ಣ…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಹಿಂದೂ ಕ್ಯಾಲೆಂಡರ್ ಪ್ರಕಾರ, ಪೂರ್ಣಿಮಾ ಮತ್ತು ಅಮಾವಾಸ್ಯೆಯ ನಂತರದ ಪ್ರತಿ ಹನ್ನೊಂದನೇ ದಿನವನ್ನು ಏಕಾದಶಿ ಎಂದು ಕರೆಯಲಾಗುತ್ತದೆ. ಈ ತಿಂಗಳನ್ನು ಕೃಷ್ಣ ಪಕ್ಷ ಮತ್ತು ಶುಕ್ಲ ಪಕ್ಷ ಎಂದು ವಿಂಗಡಿಸಲಾಗಿದೆ ಮತ್ತು ಪ್ರತಿ ಪಕ್ಷವು ಏಕಾದಶಿಯನ್ನು ಒಳಗೊಂಡಿದೆ. ಹುಣ್ಣಿಮೆಯ ನಂತರದ ಹನ್ನೊಂದನೇ ದಿನವನ್ನು ಕೃಷ್ಣ ಪಕ್ಷ ಏಕಾದಶಿ ಎಂದು ಕರೆಯಲಾಗುತ್ತದೆ ಮತ್ತು ಅಮಾವಾಸ್ಯೆಯ ನಂತರದ ಹನ್ನೊಂದನೇ ದಿನವನ್ನು ಶುಕ್ಲ ಪಕ್ಷ ಏಕಾದಶಿ ಎಂದು ಕರೆಯಲಾಗುತ್ತದೆ. ಆದ್ದರಿಂದ, ಇಡೀ ಈ ವರ್ಷವು ಕ್ಯಾಲೆಂಡರ್ ಅನ್ನು ಅವಲಂಬಿಸಿ ಇಪ್ಪತ್ತನಾಲ್ಕರಿಂದ ಇಪ್ಪತ್ತಾರು ಏಕಾದಶಿಗಳನ್ನು ಒಳಗೊಂಡಿದೆ. ಪ್ರತಿ ಏಕಾದಶಿ ವಿಭಿನ್ನ ಉದ್ದೇಶವನ್ನು ಪೂರೈಸುತ್ತದೆ – ಆದಾಗ್ಯೂ, ಈ ದಿನವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ವಿಷ್ಣುವಿನ ಭಕ್ತರು ಈ ದಿನ ಉಪವಾಸ ಮಾಡುತ್ತಾರೆ ಮತ್ತು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ಏಕಾದಶಿ ಆಚರಣೆಗಳ ಪ್ರಕಾರ, ಏಕಾದಶಿ ದಿನದಂದು ಬೇಗನೆ ಎದ್ದು ಸ್ನಾನ ಮಾಡಿ ತಾಜಾ ಸ್ವಚ್ಛವಾದ ಬಟ್ಟೆಗಳನ್ನು ಧರಿಸಬೇಕು. ನಂತರ ವಿಷ್ಣುವಿಗೆ ಪ್ರಾರ್ಥನೆ ಸಲ್ಲಿಸಬೇಕು ಮತ್ತು ದಿನವಿಡೀ ಹಾಲು,…

Read More

ಬೆಂಗಳೂರು: ಜನನಿಬಿಡ ರಸ್ತೆಯಲ್ಲಿ ಮಹೀಂದ್ರಾ ಥಾರ್ ಕಾರಿನಡ ಡ್ರೈವರ್‌ ಸೀಟಿನಲ್ಲಿ ಮಗುವೊಂದು ಕಾಣಿಸಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರ ತೊಡೆಯ ಮೇಲೆ ಕುಳಿತು ಮಗು ಎಸ್ ಯುವಿಯನ್ನು ಓಡಿಸುತ್ತಿತ್ತು. ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಬಳಿ ನಡೆದ ಗಂಭೀರ ಸಂಚಾರ ಉಲ್ಲಂಘನೆಯನ್ನು ಎತ್ತಿ ತೋರಿಸುವಾಗ ಪತ್ರಕರ್ತರೊಬ್ಬರು ಈ ಕ್ಲಿಪ್ ಅನ್ನು ಮೈಕ್ರೋಬ್ಲಾಗಿಂಗ್ ಸೈಟ್ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದೊಂದಿಗೆ ವಾಹನದ ಸಂಖ್ಯೆಯನ್ನು ಹಂಚಿಕೊಳ್ಳುವಾಗ ಅವರು ಸಂಚಾರ ಪೊಲೀಸರು ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು ಟ್ಯಾಗ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. https://youtu.be/tfWqfoWit2Y

Read More

ಬೆಂಗಳೂರು: ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ. ಇಂದು KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಮಹತ್ವದ ಘೋಷಣೆ ಘೋಷಣೆ ಮಾಡಿದರು. ಇದೇ ವೇಳೆ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುವುದು, ಹಾಗೂ ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ಉಳಿದ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ನೀಡಲಾಗುತ್ತದೆ ಅಂತ ತಿಳಿಸಿದರು. ಇದಕ್ಕೆ ವಾರ್ಷಿಕ 16 ಕೋಟಿ ರೂ. ವೆಚ್ಚವಾಗಲಿದ್ದು, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಅಂತ ಸಿಎಂ ತಿಳಿಸಿದರು.

Read More

ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ದಂಪತಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಸೀಮೆಎಣ್ಣೆ ಸುರಿದುಕೊಂಡು ದಂಪತಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಇಬ್ಬರಿಂದ ಸೀಮೆಎಣ್ಣೆಯನ್ನು ಕಿತ್ತುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಜೆ.ಜೆ ನಗರದ ನಿವಾಸಿಗಳಾದ ಶಾಯಿಸ್ತಾ ದಂಪತಿಗಳು ಅಂತ ತಿಳಿದು ಬಂದಿದೆ. ಬ್ಯಾಂಕ್‌ನಿಂಧ ಸಾಲ ಪಡೆದುಕೊಂಡಿದ್ದರು, ಸಾಲವನ್ನು ತೀರಿಸಿದ ಹಿನ್ನಲೆಯಲ್ಲಿ, ಬ್ಯಾಂಕ್‌ನವರು ಜಮೀನನ್ನು ಹರಾಜು ಮಾಡಲು ಮುಂದಾಗಿದ್ದರು ಎನ್ನಲಾಗಿದೆ.

Read More