Author: kannadanewsnow07

ಇಂದೋರ್: ಒಂದು ಸಂಪೂರ್ಣ ಸೂರ್ಯಗ್ರಹಣ ಸೇರಿದಂತೆ 2024 ರಲ್ಲಿ ನಾಲ್ಕು ಗ್ರಹಣಗಳು ಸಂಭವಿಸಲಿದ್ದು, ಅವುಗಳಲ್ಲಿ ಯಾವುದೂ ಭಾರತದಿಂದ ಗೋಚರಿಸುವುದಿಲ್ಲ ಎಂದು ಮಧ್ಯಪ್ರದೇಶದ ಉಜ್ಜಯಿನಿ ನಗರದ ಜೀವಾಜಿ ವೀಕ್ಷಣಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2024 ರ ಗ್ರಹಣಗಳ ಸರಣಿಯು ಮಾರ್ಚ್ 25 ರಂದು ಪೆನಂಬ್ರಲ್ ಚಂದ್ರ ಗ್ರಹಣದೊಂದಿಗೆ ಪ್ರಾರಂಭವಾಗಲಿದೆ ಎಂದು ವೀಕ್ಷಣಾಲಯದ ಅಧೀಕ್ಷಕ ಡಾ.ರಾಜೇಂದ್ರಪ್ರಕಾಶ್ ಗುಪ್ತಾ ಬುಧವಾರ ತಿಳಿಸಿದ್ದಾರೆ. ಸೂರ್ಯ, ಭೂಮಿ ಮತ್ತು ಚಂದ್ರರು ಬಹುತೇಕ ಸರಳ ರೇಖೆಯಲ್ಲಿ ಹೊಂದಿಕೆಯಾದಾಗ ಪೆನಂಬ್ರಲ್ ಚಂದ್ರ ಗ್ರಹಣ ಸಂಭವಿಸುತ್ತದೆ. ವರ್ಷದ ಈ ಮೊದಲ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ ಏಕೆಂದರೆ ಈ ಖಗೋಳ ಘಟನೆಯ ಸಮಯದಲ್ಲಿ ದೇಶದಲ್ಲಿ ಹಗಲಿನ ಸಮಯವಾಗಿರುತ್ತದೆ ಎಂದು ಅವರು ಹೇಳಿದರು. ಸಂಪೂರ್ಣ ಸೂರ್ಯಗ್ರಹಣವು ಏಪ್ರಿಲ್ 8 ಮತ್ತು 9 ರ ಮಧ್ಯರಾತ್ರಿ ಸಂಭವಿಸಲಿದ್ದು, ಇದು ಭಾರತದಲ್ಲಿಯೂ ಗೋಚರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 18 ರ ಬೆಳಿಗ್ಗೆ ಸಂಭವಿಸುವ ಭಾಗಶಃ ಚಂದ್ರ ಗ್ರಹಣವು ಭಾರತದಲ್ಲೂ ಗೋಚರಿಸುವುದಿಲ್ಲ ಎಂದು ಅವರು ಹೇಳಿದರು.

Read More

ನವದೆಹಲಿ: ಜಾಗತಿಕ ಆರ್ಥಿಕ ಕುಸಿತ ಮತ್ತು ಚಳಿಗಾಲದ ಧನಸಹಾಯದ ನಡುವೆ ನೇಮಕಾತಿಯಲ್ಲಿ ಸಂಕೋಚನವನ್ನು ಕಂಡಿರುವ ಭಾರತೀಯ ಐಟಿ ವಲಯವು 2024 ರಲ್ಲಿ ನೇಮಕಾತಿಯಲ್ಲಿ 8-10% ಹೆಚ್ಚಳದೊಂದಿಗೆ ಸಕಾರಾತ್ಮಕ ತಿರುವು ಪಡೆಯುವ ಸಾಧ್ಯತೆಯಿದೆ ಎಂದು ಟ್ಯಾಲೆಂಟ್ ಸೊಲ್ಯೂಷನ್ ಕಂಪನಿ ಎನ್ಎಲ್ಬಿ ಸರ್ವೀಸಸ್ನ ಹೊಸ ವರದಿ ಸೂಚಿಸುತ್ತದೆ. ಒಟ್ಟಾರೆಯಾಗಿ, ಐಟಿ ವಲಯದಲ್ಲಿ ನೇಮಕಾತಿಯು 2024 ರ ಹಣಕಾಸು ವರ್ಷದಲ್ಲಿ 12-15% ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ, ವಿಶೇಷವಾಗಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಏರಿಕೆ ಮತ್ತು ಜಾಗತಿಕ ಆರ್ಥಿಕತೆಯು ತುಲನಾತ್ಮಕವಾಗಿ ಸ್ಥಿರಗೊಳ್ಳುತ್ತಿರುವುದರಿಂದ ಎಂದು ವರದಿ ತಿಳಿಸಿದೆ. “ತ್ರೈಮಾಸಿಕ ದೃಷ್ಟಿಕೋನದಿಂದ, ಆರಂಭಿಕ ತ್ರೈಮಾಸಿಕದಲ್ಲಿ ನೇಮಕಾತಿಯಲ್ಲಿ ಸರಾಸರಿ 8-10 ಪ್ರತಿಶತದಷ್ಟು ಬೆಳವಣಿಗೆಯನ್ನು ಗಮನಿಸುತ್ತದೆ, ನಂತರ ಎರಡನೇ ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ಬೇಡಿಕೆಯ ಶೇಕಡಾವಾರು 12-14 ಪರ್ಸೆಂಟ್ ವರೆಗೆ ಏರುತ್ತದೆ” ಎಂದು ಎನ್ಎಲ್ಬಿ ಸರ್ವೀಸಸ್ ಸಿಇಒ ಸಚಿನ್ ಅಲುಗ್ ಹೇಳಿದ್ದಾರೆ. 2022 ಕ್ಕೆ ಹೋಲಿಸಿದರೆ 2023 ರಲ್ಲಿ ಐಟಿ ವಲಯವು ಶೇಕಡಾ 40-45 ರಷ್ಟು ಉದ್ಯೋಗಗಳ ಬೆಳವಣಿಗೆಯನ್ನು ಕಂಡಿದೆ ಎಂದು…

Read More

ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಲಿಫ್ಟ್‌ ಕೈಕೊಟ್ಟ ಕಾರಣ ಬಿಜೆಪಿ ಸಂಸದ ಸೇರಿದಂತೆ ಮೂವರು ಸಿಲುಕಿಕೊಂಡ ಘಟನೆ ನಡೆದಿದೆ. ವಿದ್ಯುತ್‌ ಚಕ್ತಿ ಹೋದ ಸಮಯದಲ್ಲಿ ಜನರೇಟರ್‌ ಸರಿಯಾಗಿ ಆನ್‌ ಆಗದ ಹಿನ್ನಲೆಯಲ್ಲಿ ಲಿಫ್ಟ್ ಕೈಕೊಟ್ಟಿದ್ದಾರೆ ಎನ್ನಲಾಗಿದೆ. ತಮ್ಮ ಬೆಂಬಲಿಗರ ಜೊತೆಗೆ ಉಮೇಶ್‌ ಜಾಧವ್‌ ಅವರು ಲಿಫ್ಟ್ ಒಳಗೆ ಹೋಗಿದ್ದಾರೆ ಈ ವೇಳೆ ವಿದ್ಯುತ್‌ ಕೈಕೊಟ್ಟಿದೆ. ಕೂಡಲೇ ಲಿಫ್ಟ್‌ ಆಪರೇಟರ್‌ಗಳನ್ನು ಕರೆಸಿದರು, ನಂತರ ತಾಂತ್ರಿಕ ವರ್ಗದವರು ಕಾರ್ಯಚರಣೆ ನಡೆಸಿ ಲಿಫ್ಟ್‌ ಒಳಗೆ ಸಿಲುಕಿಕೊಂಡವರನ್ನು ಹೊರಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಲಾಗಿದೆ. ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್‌) ಸಲ್ಲಿಸುವ ಪ್ರತಿ ಅರ್ಜಿಗೆ ನಿಗದಿ ಪಡಿಸಿದ ಪರಿಷ್ಕೃತ ಶುಲ್ಕ ಈ ಕೆಳಗಿನಂತಿದೆ. 11-ಇ ನಕ್ಷೆ, ತತ್ಕಾಲ್ ಪೋಡಿ, ಭೂ ಪರಿವರ್ತನೆ ಪೂರ್ವನಕ್ಷೆ 2 ಎಕರೆವರೆಗೆ 2,500 ರೂ. (ನಗರ), 1,500 ರೂ. (ಗ್ರಾಮೀಣ) 2 ಎಕರೆ ನಂತರ ಪ್ರತಿ ಎಕರೆಗೆ 1,000 ರೂ. (ನಗರ), 400 ರೂ. (ಗ್ರಾಮೀಣ) ಜಮೀನು ಹದ್ದುಬಸ್ತು 2 ಎಕರೆವರೆಗೆ ₹ 2,000 (ನಗರ), ₹ 500 (ಗ್ರಾಮೀಣ) 2 ಎಕರೆ ನಂತರ ಪ್ರತಿ ಎಕರೆಗೆ 400 ರೂ. (ನಗರ), 300 ರೂ. (ಗ್ರಾಮೀಣ)

Read More

ಬೆಂಗಳೂರು: ಬಿಜೆಪಿಯಿಂದ ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನ ಶುರುವಾಗಿದ್ದು, ಈ ಮೂಲಕ ರಾಜ್ಯ ಸರ್ಕಾರದ ವಿರುದ್ದ ಸಮರ ಸಾರಿದ್ದಾರೆ ಬಿಜೆಪಿ ನಾಯಕರುಗಳು. ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಏಕಾಂಗಿ ಪ್ರತಿಭಟನೆ ನಡೆಸಿದರು. ಅವರು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ಮಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಅವರನ್ನು ಪೊಲೀಸರು ತಮ್ಮ ವಶಕ್ಕೆ ತೆಗದುಕೊಂಡ ಘಟನೆ ಕೂಡ ನಡೆಯಿತು. ಶ್ರೀಕಾಂತ್ ಪೂಜಾರಿ ಬಂಧನದ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ. ಇದಲ್ಲದೇ ಚಿಕ್ಕಮಗಳೂರಿನಲ್ಲಿ ಕೂಡ ಠಾಣೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಸಿಟಿ ರವಿಯವರನ್ನು ಕೂಡ ಪೊಲೀಸರು ಮುಂಜಾಗ್ರತ ಕ್ರಮವಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. https://twitter.com/karkalasunil/status/1742761255931433142

Read More

ಬೆಂಗಳೂರು : ಅಲೆಮಾರಿ ಸಮುದಾಯಕ್ಕೆ ಸರ್ಕಾರ 2 ಲಕ್ಷ ಸಾಲ ಸೌಲಭ್ಯ ನೀಡಲಿದ್ದು, ಈ ಬಗ್ಗೆ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಹಾದೇವಪ್ಪ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ ಹೇಳಿರುವ ಹೇಳಿಕೆಯಂತೆ, ‘ಆಧುನಿಕ ಸಂದರ್ಭವು ಬೆಳೆದಂತೆ, ತಮ್ಮ ಬದುಕಲ್ಲಿ ನಿರೀಕ್ಷಿತ ಸುಧಾರಣೆ ಕಾಣದ ಅಲೆಮಾರಿ ಸಮುದಾಯಗಳು ಒಂದಿಲ್ಲೊಂದು ಕಾರಣಕ್ಕೆ ಅಭದ್ರತೆ ಮತ್ತು ಅನಿಶ್ಚಿತತೆಯನ್ನು ಎದುರಿಸುತ್ತವೆ ಅವರಿಗೆ ಘನತೆಯ ಬದುಕನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಅಲೆಮಾರಿಗಳಿಗೆ 2 ಲಕ್ಷದವರೆಗೆ ಉದ್ಯಮಶೀಲತಾ ಸಾಲವನ್ನು ನಮ್ಮ ಸರ್ಕಾರ ಕಲ್ಪಿಸಲಿದೆ’ ಎಂದು ಮಾಹಿತಿ ನೀಡಿದ್ದಾರೆ. https://twitter.com/CMahadevappa/status/1742747265138315751

Read More

ಮೂರು ದಶಕಗಳಷ್ಟು ಹಳೆಯದಾದ ರಾಮ ಮಂದಿರ ಪ್ರಕರಣಕ್ಕೆ ಸಂಬಂಧಿಸಿದ ಹಿಂದೂ ಕಾರ್ಯಕರ್ತನ ಬಂಧನದ ವಿರುದ್ಧ ಕರ್ನಾಟಕದ ತೀವ್ರ ಪ್ರತಿಭಟನೆಯ ಮಧ್ಯೆ, ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ಹಿಂದೂ ವಿರೋಧಿ” ಎಂದು ಟೀಕಿಸಿದೆ. ಈ ನಡುವೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ. ಸಿಎಂ ಸಿದ್ದರಾಮಯ್ಯ ಅವರೇ ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ..? ಅಂತ ಪ್ರಶ್ನೆ ಮಾಡಿದೆ. https://twitter.com/BJP4Karnataka/status/1742375172559212986

Read More

ಬೆಂಗಳೂರು: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ ಭರಿತ ಮಾತುಗಳನ್ನು ಆಡಿಕೊಳ್ಳುತ್ತಿದ್ದಾರೆ. ಈ ಬಾರಿಯ ವಿಧಾನಸಭೆಯಲ್ಲಿ ತಮ್ಮ ತಂದೆಯವರ ಸಾವಿನ ಸಿಂಪತಿಯನ್ನು ಗಿಟ್ಟಿಸಿಕೊಂಡು ಗೆಲುವು ಕಂಡಿರುವ ದರ್ಶನ್ ಪುಟ್ಟಣ್ಣಯ್ಯ ತಮ್ಮ ಶಾಸಕ ಸ್ಥಾನವನ್ನು ಸರಿಯಾಗಿ ನಿಭಾಸುತ್ತಿಲ್ಲ ಎಲ್ಲದಕ್ಕಿಂತ ಹೆಚ್ಚಾಗಿ ಅವರಿಗೆ ಮೇಲುಕೋಟೆ ಕ್ಷೇತ್ರಕ್ಕಿಂತ ಅಮೇರಿಕಾದಲ್ಲಿರುವ ತಮ್ಮ ವ್ಯವಹಾರದ ಮೇಲೆಯೇ ಹೆಚ್ಚು ಪ್ರೀತಿ ಅಂಥ ಹೇಳುತ್ತಿದ್ದಾರೆ. ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೇರಿಕಕ್ಕೆ ತೆರಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಗೂ ಮೊದಲು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಾಟ ಮಾಡಿ ಹುಟ್ಟೂರಲ್ಲೇ ಇರುವುದಾಗಿ ದರ್ಶನ್ ಪುಟ್ಟಣಯ್ಯ ಭರವಸೆ ನೀಡಿದ್ದರು. ಆದಾದ ಬಳಿಕ ಅವರು ಅಮೇರಿಕಾಕ್ಕೆ ಹೋಗಿದ್ದರು, ಬಳಿಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದರು, ಆದಾದ ಬಳಿಕ ಅವರು ತಮ್ಮ ಜನತೆ ಬಳಿಕ ಇನ್ಮುಂದೆಹೀಗೆ ಆಗುವುದಿಲ್ಲ…

Read More

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 760 ಕೋವಿಡ್ -19 ಪ್ರಕರಣಗಳು ಮತ್ತು ಎರಡು ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ನಿನ್ನೆಯ 4,440 ರಿಂದ 4,423 ಕ್ಕೆ ಸ್ವಲ್ಪ ಕಡಿಮೆಯಾಗಿದೆ ಮತ್ತು ಎರಡು ಸಾವುನೋವುಗಳು ಕೇರಳ ಮತ್ತು ಕರ್ನಾಟಕದಿಂದ ವರದಿಯಾಗಿವೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಅಂಕಿ ಅಂಶಗಳು ತಿಳಿಸಿವೆ. ಹೊಸ ಸಾವುನೋವುಗಳು ಒಟ್ಟಾರೆ ಸಾವಿನ ಸಂಖ್ಯೆಯನ್ನು 5,33,373 ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 775 ಜನರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದು, ಒಟ್ಟು ಚೇತರಿಕೆಯ ಸಂಖ್ಯೆ 4.44 ಕೋಟಿಗೆ (4,44,78,047) ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಚೇತರಿಕೆ ಪ್ರಮಾಣವು ಶೇಕಡಾ 98.81 ರಷ್ಟಿದ್ದರೆ, ಸಾವಿನ ಪ್ರಮಾಣವು ಶೇಕಡಾ 1.18 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. 2020 ರ ಜನವರಿಯಲ್ಲಿ ದೇಶದಲ್ಲಿ ಕೋವಿಡ್ -19 ಏಕಾಏಕಿ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ದೇಶವು 4.50 ಕೋಟಿ (4,50,15,843) ಅನ್ನು…

Read More

ಚಿಕ್ಕಮಗಳೂರು: ಪೊಲೀಸ್‌ ಠಾಣೆ ಮುಂದೆ ಧರಣಿ ಮಾಡುತ್ತಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ರಾಜ್ಯದಲ್ಲಿ ರಾಮನ ಕರ ಸೇವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಅಂಥ ಆರೋಪಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿಯವರು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿ, ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ನಡುವೆ ಇಂದು ಕೂಡ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ಪೊಲೀಸ್‌ ಠಾಣೆ ಅವರಣದಲ್ಲಿ ನನ್ನ ಕೂಡ ಬಂಧಿಸಿ ಎನ್ನುವ ಫಲಕವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸರು ಸಿಟಿ ರವಿಯವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಸ್ಥಳದಲ್ಲಿ ಕೆಲ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಪೊಲೀಸರು ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.

Read More