Subscribe to Updates
Get the latest creative news from FooBar about art, design and business.
Author: kannadanewsnow07
*ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ನಟ ದರ್ಶನ್ ತೂಗುದೀಪ ಜಾಮೀನು ಭವಿಷ್ಯ ಸೋಮವಾರ ಕೋರ್ಟ್ ನಿರ್ಧಾರ ಮಾಡಿದೆ. ದರ್ಶನ್ ಅವರ ಜಾರ್ಮಿನು ಅರ್ಜಿ ಸಂಬಂಧ ಬೆಂಗಳೂರಿನ 57 ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಾದ – ಪ್ರತಿವಾದ ನಡೆದ ನ್ಯಾಯಾಧೀಶರು ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿ. ವಿ. ನಾಗೇಶ್ ಸ ರ್ಕಾರಿ ಪರ ವಕೀಲ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದರು. ಈ ನಡುವೆ ಜಾಮೀನು ಸಿಗದಿರುವ ಕಾರಣಕ್ಕೆ ದರ್ಶನ್ ಪರ ವಕೀಲರು ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಬಳ್ಳಾರಿ ಕಾರಾಗೃಹದಲ್ಲಿರುವ ದರ್ಶನ್ ಅವರಿಗೆ ಇದರಿಂದ ಬೇಸರವಾಗಿರುವುದು ಸುಳ್ಳಲ್ಲ. ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಆಗಸ್ಟ್ 29 ರಿಂದ ಬಳ್ಳಾರಿ ಕೇಂದ್ರ ಕಾರಾಗೃಹದ ಹೈಸೆಕ್ಯೂರಿಟಿ ಸೆಲ್ನಲ್ಲಿ ಬಂಧನದಲ್ಲಿ ಇಡಲಾಗಿದೆ. ನಾಳೆಯೊಳಗೆ ಜಾಮೀನು ಸಂಬಂಧ ಪ್ರಕ್ರಿಯೆಗಳನ್ನು ದರ್ಶನ್ ಪತ್ನಿ ಮಾಡಲಿದ್ದಾರೆ ಎನ್ನಲಾಗಿದೆ. ಎಲ್ಲವೂ ಅಂದುಕೊಂಡತೆ ಆದರೆ ನಾಳೆ…
*ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಗೌಡ ಜಾಮೀನು ಅರ್ಜಿ ಕೂಡ ವಜಾ ಆಗಿದೆ. ಪವಿತ್ರಗೌಡ ಪರ ಟಾಮಿ ಸ್ಟಾಮಿನ್ ಅವರು ವಾದ ಮಂಡನೆ ಮಾಡಿದ್ದರು, ಪವಿತ್ರಗೌಡ ಅವರು ಕೊಲೆಯಲ್ಲಿ ಪಾತ್ರವಹಿಸಿಲ್ಲ ಎನ್ನುವುದನ್ನು ನ್ಯಾಯಾಧೀಶರಿಗೆ ತಿಳಿಸುವುದಕ್ಕೆ ಮುಂದಾದರು ಆದರೆ ಅದು ಯಶಸ್ವಿಯಾಗಿಲ್ಲ.
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರಿಗೆ ಜಾಮೀನು ನೀಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ ನೀಡಿದೆ. ನಾಳೆ ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆ ಇದೇ ಎನ್ನಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ನಾಗೇಂದ್ರಗೆ ಇಂದು ರಿಲೀಫ್ ಸಿಕ್ಕಿದೆ. ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಪ್ರಮುಖ ಆರೋಪಿ ಯಾಗಿ ಶಾಸಕ ಬಿ. ನಾಗೇಂದ್ರ ಗುರುತಿಸಿಕೊಂಡಿದ್ದಾರೆ. ವಾಲ್ಮೀಕಿ ನಿಗಮದ 187 ಕೋಟಿ ರೂ. ಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಳ್ಳಲು ರೂಪಿಸಿದ್ದ ಸಂಚಿನಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಧಾನ ಪಾತ್ರ ವಹಿಸಿದ್ದಾರೆ. ಅಕ್ರಮ ಬೆಳಕಿಗೆ ಬರುತ್ತಲೇ ಸಾಕ್ಷ್ಯಾಧಾರವಿದ್ದ ಮೂರು ಮೊಬೈಲ್ ನಾಶಪಡಿಸಿದ್ದಾರೆ ಎಂದು ಇ.ಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಕೆಎನ್ಎನ್ಡಿಜಿಟಲ್ಡೆಸ್ಕ್: ಕಂಟೆಂಟ್ ಓರಿಯಂಟೆಡ್ ಸಿನಿಮಾಗಳ ಗುಂಗು ಹತ್ತಿಸಿಕೊಂಡ ದೊಡ್ಡ ಪ್ರೇಕ್ಷಕ ವರ್ಗವೊಂದು ಕನ್ನಡದಲ್ಲಿದೆ. ಅದೇ ಧಾಟಿಯ ಚಿತ್ರವೊಂದು ಪಕ್ಕಾ ಕಮರ್ಶಿಯಲ್ ಪಥದಲ್ಲಿ ರೂಪುಗೊಂಡಿದೆಯೆಂದರೆ ಅದರ ಬಗೆಗೊಂದು ಕುತೂಹಲ ತಾನಾಗಿಯೇ ಮೂಡಿಕೊಳ್ಳುತ್ತೆ. ಸದ್ಯ ಅಂಥಾದ್ದೊಂದು ಕೌತುಕಕ್ಕೆ ಕಾರಣವಾಗಿರುವ ಚಿತ್ರ ‘ಬಿಳಿಚುಕ್ಕಿ ಹಳ್ಳಿಹಕ್ಕಿ’. ಈ ಹಿಂದೆ `ಮಹಿರಾ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿ ಗಮನ ಸೆಳೆದಿದ್ದವರು ಮಹೇಶ್ ಗೌಡ. ಇದೀಗ ಅವರು ಸ್ವತಃ ನಿರ್ಮಾಣ, ನಿರ್ದೇಶನದ ಜವಾಬ್ದಾರಿ ಹೊತ್ತು ತಾವೇ ನಾಯಕನಾಗಿ ನಟಿಸಿರುವ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ದಸರಾ ಹಬ್ಬಕ್ಕೆ ಶುಭ ಕೋರುವ ನಿಮಿತ್ತವಾಗಿ ಈ ಚಿತ್ರದ ಒಂದು ಪೋಸ್ಟರ್ ಅನಾವರಣಗೊಂಡಿದೆ. ಈ ಮೂಲಕ ಸದರಿ ಚಿತ್ರದತ್ತ ಪ್ರೇಕ್ಷಕರ ಚಿತ್ತ ಹೊರಳಿಕೊಂಡಿದೆ. ಇಡೀ ದೇಶದಲ್ಲಿಯೇ ಮೊದಲ ಬಾರಿ ಈ ಸಿನಿಮಾ ಮೂಲಕ ವಿಟಿಲಿಗೋ ಅಂದರೆ, ತೊನ್ನಿನ ಭೂಮಿಕೆಯಲ್ಲಿ ತಯಾರಾದ ಚಿತ್ರವೆಂಬ ಹೆಗ್ಗಳಿಕೆ `ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರಕ್ಕಿದೆ. ಸಾಮಾನ್ಯವಾಗಿ ಇಂಥಾ ಕಥಾ ಹಂದರದ ಯಾವುದೇ ಸಿನಿಮಾದಲ್ಲಿ ಪಾತ್ರಧಾರಿಗಳು ಮೇಕಪ್ ಮೂಲಕ ಅದಕ್ಕೆ ಜೀವ ತುಂಬುತ್ತಾರೆ. ಆದರೆ,…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಮ್ಮ ಕೋರಿಕೆ ಏನೇ ಇರಲಿ ಈ ಸಮಯದಲ್ಲಿ ಬೇಡಿಕೊಂಡರೆ 100% ಬೇಗನೆ ಹೇಗೆ ಈಡೇರುತ್ತದೆ ಎಂದು ತಿಳಿಯೋಣ . ಯಾವ ಸಮಯದಲ್ಲಿ ಸರಿಯಾಗಿ ಬೇಡಿಕೊಳ್ಳಬೇಕು ಎಂಬ ಸರಳ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ . ನಿರ್ಧಾರಗಳನ್ನು ಮಾಡಿಕೊಳ್ಳದೆ ಯಾವುದೇ ಕೆಲಸವನ್ನು ಮಾಡಿದರೆ ಅದು ಖಂಡಿತವಾಗಿಯೂ ನೆರವೇರುವುದಿಲ್ಲ ನಾವು ಯಾವುದೇ ಕೆಲಸವನ್ನು ಪ್ರಾರಂಭ ಮಾಡಿಕೊಳ್ಳಬೇಕು ಎಂದರೆ ಸರಿಯಾದ ನಿರ್ಧಾರವನ್ನು ಕೈಗೊಳ್ಳಬೇಕಾಗುತ್ತದೆ . ಮೊದಲಿಗೆ ನೀವು ಒಂದು ಪುಸ್ತಕವನ್ನು ಇಡಬೇಕು .ಆ ಪುಸ್ತಕಕ್ಕೆ ಒಂದು ಹೆಸರನ್ನು ಕೊಟ್ಟು , ನಿಮ್ಮ ಗೆಳತಿ ಎಂದು ತಿಳಿಯಬೇಕು . ಈ ವರ್ಷದಲ್ಲಿ ಮಾಡಬೇಕಾದ ಕೆಲಸಗಳನ್ನು ಅದನ್ನು ಆ ಪುಸ್ತಕದಲ್ಲಿ ಬರೆದುಕೊಳ್ಳಿ . ನಿಮ್ಮ ಆಸೆಗಳು ಏನು ಇರುತ್ತದೆಯೋ ಅದನ್ನು ಪುಸ್ತಕದಲ್ಲಿ ಬರೆದುಕೊಳ್ಳಿ . ಐದು ಕೆಲಸಗಳು ಇದ್ದರೆ ಅದಕ್ಕೆ ಒಂದೊಂದು ನಂಬರ್ ಗಳನ್ನು ನೀಡಬೇಕು . ನಿಮ್ಮ ಕೆಲಸ…
ಪ್ರಯಾಗ್ ರಾಜ್: ಒಂದು ಪ್ರಮುಖ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಅಲಹಾಬಾದ್ ಹೈಕೋರ್ಟ್ ಗಂಡ ಮತ್ತು ಹೆಂಡತಿಯ ನಡುವಿನ ಲೈಂಗಿಕ ಬಯಕೆಯ ಪ್ರಕರಣವು ಕ್ರೌರ್ಯವಲ್ಲ ಎಂದು ಹೇಳಿದೆ. ಪತಿಯು ತನ್ನ ಹೆಂಡತಿಯ ಶಾರೀರಿಕ ಬಯಕೆಗಳನ್ನು ಪೂರೈಸಲು ಒತ್ತಾಯಿಸದಿದ್ದರೆ, ಸುಸಂಸ್ಕೃತ ಸಮಾಜದಲ್ಲಿ ಅವನು ಎಲ್ಲಿಗೆ ಹೋಗುತ್ತಾನೆ ಅಂತ ಪ್ರಶ್ನೆ ಮಾಡಿದೆ. ವರದಕ್ಷಿಣೆ ಕಿರುಕುಳದ ಕ್ರೌರ್ಯದ ಆರೋಪವನ್ನು ಆಧಾರರಹಿತ ಎಂದು ಪರಿಗಣಿಸಿ ನ್ಯಾಯಾಲಯವು ನಡೆಯುತ್ತಿರುವ ಕ್ರಿಮಿನಲ್ ಪ್ರಕರಣವನ್ನು ವಜಾಗೊಳಿಸಿದೆ. ಪತಿ ಪ್ರಂಜಲ್ ಶುಕ್ಲಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನೀಶ್ ಕುಮಾರ್ ಗುಪ್ತಾ ಈ ಆದೇಶ ನೀಡಿದ್ದಾರೆ. ಪತ್ನಿ ನೋಯ್ಡಾದ ಮಹಿಳಾ ಪೊಲೀಸ್ ಠಾಣೆಯಲ್ಲಿ ತನ್ನ ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಅಸ್ವಾಭಾವಿಕ ಸಂಬಂಧದ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಜುಲೈ 23, 2018 ರಂದು ದಾಖಲಾದ ಎಫ್ಐಆರ್ನಲ್ಲಿ ತಾನು ಡಿಸೆಂಬರ್ 2015 ರಲ್ಲಿ ಮದುವೆಯಾಗಿದ್ದೇನೆ ಎಂದು ಪತ್ನಿ ಹೇಳಿದ್ದಾರೆ. ನನ್ನ ಪತಿ ಎಂಜಿನಿಯರ್. ಎಫ್ಐಆರ್ ತನಿಖೆಯಲ್ಲಿ ಕಿರುಕುಳ ಅಥವಾ ಹಲ್ಲೆಗೆ ಯಾವುದೇ ದೃಢವಾದ…
ಮುಂಬೈ: ಶನಿವಾರ (ಅಕ್ಟೋಬರ್ 12) ಸಂಘಟನೆಯ ದಸರಾ ಉತ್ಸವದ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಸಾರ್ವಜನಿಕರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧದ ದೌರ್ಜನ್ಯಗಳನ್ನು ಹೆಚ್ಚು ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಆರ್ಎಸ್ಎಸ್ ಮುಖ್ಯಸ್ಥರು ಅಲ್ಲಿ ಹಿಂದೂ ಸಮುದಾಯ ಎದುರಿಸುತ್ತಿರುವ ದೌರ್ಜನ್ಯಗಳು ಮತ್ತು ನೆರೆಯ ಬಾಂಗ್ಲಾದೇಶದ ಪರಿಸ್ಥಿತಿ ಭಾರತದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಹೇಗೆ ಪರಿಣಾಮ ಬೀರುತ್ತಿದೆ ಎಂಬುದನ್ನು ಉಲ್ಲೇಖಿಸಿದರು. “ನಮ್ಮ ನೆರೆಯ ಬಾಂಗ್ಲಾದೇಶದಲ್ಲಿ ಏನಾಯಿತು? ಇದು ಕೆಲವು ತಕ್ಷಣದ ಕಾರಣಗಳನ್ನು ಹೊಂದಿರಬಹುದು, ಆದರೆ ಸಂಬಂಧಪಟ್ಟವರು ಅದನ್ನು ಚರ್ಚಿಸುತ್ತಾರೆ. ಆದಾಗ್ಯೂ, ಅವ್ಯವಸ್ಥೆಯಲ್ಲಿ, ಹಿಂದೂಗಳ ವಿರುದ್ಧ ದೌರ್ಜನ್ಯ ನಡೆಸುವ ಸಂಪ್ರದಾಯವು ಪುನರಾವರ್ತನೆಯಾಯಿತು. ಮೊದಲ ಬಾರಿಗೆ ಹಿಂದೂಗಳು ಒಗ್ಗೂಡಿ ತಮ್ಮ ರಕ್ಷಣೆಗಾಗಿ ಬೀದಿಗಿಳಿದರು ಅಂತ ಹೇಳಿದರು. ಆದರೆ ಎಲ್ಲಿಯವರೆಗೆ ಕೋಪದಿಂದ ದೌರ್ಜನ್ಯ ಎಸಗುವ ಈ ತೀವ್ರಗಾಮಿ ಸ್ವರೂಪ ಇರುತ್ತದೆಯೋ ಅಲ್ಲಿಯವರೆಗೆ ಹಿಂದೂಗಳು ಮಾತ್ರವಲ್ಲ, ಎಲ್ಲ ಅಲ್ಪಸಂಖ್ಯಾತರೂ ಅಪಾಯದಲ್ಲಿದ್ದಾರೆ. ಅವರಿಗೆ ಪ್ರಪಂಚದಾದ್ಯಂತದ ಹಿಂದೂಗಳ ಸಹಾಯ ಬೇಕು. ಭಾರತ ಸರ್ಕಾರವು…
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸತತ ಮೂರನೇ ಗೆಲುವಿನ ನಂತರ, ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ. ಇತ್ತೀಚಿನ ಬೆಳವಣಿಗೆಯಲ್ಲಿ, ಹರಿಯಾಣದ ಹೊಸ ಕ್ಯಾಬಿನೆಟ್ ಅಕ್ಟೋಬರ್ 17 ರಂದು ಪ್ರಮಾಣವಚನ ಸ್ವೀಕರಿಸಲಿದೆ. ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನೂತನ ಸರ್ಕಾರದ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭವು ಗುರುವಾರ ಬೆಳಿಗ್ಗೆ 10:00 ಗಂಟೆಗೆ ಸೆಕ್ಟರ್ 5 ರ ಪಂಚಕುಲದ ಪೆರೇಡ್ ಮೈದಾನದಲ್ಲಿ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ, ಬಿಜೆಪಿ ಆಡಳಿತದ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಅವರೊಂದಿಗೆ, ಪಕ್ಷದ ಹಿರಿಯ ನಾಯಕರು ಸಹ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಕೆಎನ್ಎನ್ಡಿಜಿಟಲ್ಡೆಸ್ಕ್: ಸಾಮಾಜಿಕ ಪಲ್ಲಟಗಳಿಗೆ ಕಣ್ಣಾದ ಕಥೆ ಹೊಂದಿರುವ ಚಿತ್ರಗಳೆಂದರೆ ಕನ್ನಡದ ಪ್ರೇಕ್ಷಕರಲ್ಲಿ ಒಂದು ರೀತಿಯಲ್ಲಿ ಗಮನವನ್ನು ಕೇಂದ್ರಿಕರಿ ಇರುತ್ತಾರೆ. ಈಗ ಅಂಥಾದ್ದೊಂದು ಕಥೆ ಭಿನ್ನ ಜಾನರಿನಲ್ಲಿ, ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ರೂಪುಗೊಂಡಿದೆಯೆಂದರೆ ಅಂಥಾ ಸೆಳೆತ ಮತ್ತಷ್ಟು ತೀವ್ರವಾಗಿರುತ್ತದೆ. ಅಂದ ಹಾಗೇ ಸದ್ಯ ಬಿಡುಗಡೆಗೊಂಡಿರುವ `ಅಂಶು’ ಚಿತ್ರದ ಟ್ರೈಲರ್ ನಲ್ಲಿಯೂ ಕೂಡ ಜನತೆಯ ಗಮನವನ್ನು ಸೆಳೇಯುವಲ್ಲಿ ಗಮನವನ್ನು ಹರಿಸಿದ್ದು. ಇದೀಗ ಬಿಡುಗಡೆಗೆ ಸಜ್ಜುಗೊಂಡಿರುವ `ಅಂಶು’ ಮಹಿಳಾ ಪ್ರಧಾನ ಕಥಾನಕವನ್ನು ಒಳಗೊಂಡಿರುವ ಚಿತ್ರವಾಗಿದೆ.ಅದರ ಒಟ್ಟಾರೆ ಸಾರದತ್ತ ಕುತೂಹಲ ಕೇಂದ್ರೀಕರಿಸುವಂತೆ ಮಾಡುವಲ್ಲಿ ಈ ಟ್ರೈಲರ್ ಎಲ್ಲರ ಗಮನ ಸೆಳೆಯುತ್ತಿದೆ. ಈ ನಡುವೆಈ ಚಿತ್ರದಲ್ಲಿ ನಿಶಾ ರವಿಕೃಷ್ಣನ್ ನಾಯಕಿಯಾಗಿ ನಟಿಸಿದ್ದಾರೆ. ಗಟ್ಟಿಮೇಳ ಸೀರಿಯಲ್ಲಿನ ಅಮೂಲ್ಯಾ ಪಾತ್ರದ ಮೂಲಕ ಮಿಂಚಿದ್ದ ನಿಶಾ ಈ ಟ್ರೈಲರ್ನಲ್ಲಿ ಸೀರಿಯಲ್ ಇಮೇಜನ್ನು ಮೀರಿದ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಎಂ.ಸಿ ಚನ್ನಕೇಶವ ನಿರ್ದೇಶನದ ಚೊಚ್ಚಲ ಚಿತ್ರ ಅಂಶು. `ನಾವು ನಂಬೋದೆಲ್ಲ ನಿಜ ಅಲ್ಲ, ಸಹಿಸೋಕ್ ಆಗ್ದೆ ಇರೋದೆಲ್ಲ ಸುಳ್ಳಲ್ಲ’ ಅಂತ ಶುರುವಾಗುವ ಈ ಟ್ರೈಲರ್ ನೋಡಿದ…
ಕೆಎನ್ಎನ್ಡಿಜಿಟಲ್ಡೆಸ್ಕ್: ನೀವು ಹೆಚ್ಚು ಸೋಡಾ, ಹಣ್ಣಿನ ರಸ ಮತ್ತು ಕಾಫಿ ಕುಡಿದರೆ, ಜಾಗರೂಕರಾಗಿರ, ಹೊಸದಾಗಿ ಬಿಡುಗಡೆಯಾದ ಸಂಶೋಧನೆಯ ಪ್ರಕಾರ, ಇದು ಪಾರ್ಶ್ವವಾಯುವಿನ ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎನ್ನಲಾಗಿದೆ. ದಿನಕ್ಕೆ ನಾಲ್ಕು ಕಪ್ ಕಾಫಿ ಕುಡಿಯುವುದರಿಂದ ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ, ಆದರೆ ದಿನಕ್ಕೆ 3-4 ಕಪ್ ಬ್ಲ್ಯಾಕ್ ಟೀ ಅಥವಾ ಗ್ರೀನ್ ಟೀ ಕುಡಿಯುವುದರಿಂದ ಸಾಮಾನ್ಯವಾಗಿ ಪಾರ್ಶ್ವವಾಯುವಿನಿಂದ ರಕ್ಷಿಸುತ್ತದೆ ಎನ್ನಲಾಗಿದೆ. ಮೆಕ್ಮಾಸ್ಟರ್ ಯೂನಿವರ್ಸಿಟಿ ಕೆನಡಾ ಮತ್ತು ಸ್ಟ್ರೋಕ್ ಸಂಶೋಧಕರ ಅಂತರರಾಷ್ಟ್ರೀಯ ಜಾಲದ ಸಹಯೋಗದೊಂದಿಗೆ ಗಾಲ್ವೇ ವಿಶ್ವವಿದ್ಯಾಲಯದ ಸಹ-ನೇತೃತ್ವದ ಜಾಗತಿಕ ಸಂಶೋಧನಾ ಅಧ್ಯಯನಗಳ ಹೊಸ ಸಂಶೋಧನೆಗಳ ಪ್ರಕಾರ, ಸಕ್ಕರೆ ಸಿಹಿಯಾದ ಮತ್ತು ಕೃತಕವಾಗಿ ಸಿಹಿಗೊಳಿಸಿದ ಆಹಾರ ಅಥವಾ ಶೂನ್ಯ ಸಕ್ಕರೆ ಎರಡನ್ನೂ ಒಳಗೊಂಡಂತೆ ಫಿಜಿ ಪಾನೀಯಗಳು ಪಾರ್ಶ್ವವಾಯುವಿಗೆ ಶೇಕಡಾ 22 ರಷ್ಟು ಹೆಚ್ಚಿನ ಸಾಧ್ಯತೆಯೊಂದಿಗೆ ಸಂಬಂಧ ಹೊಂದಿವೆ. ಇದಲ್ಲದೆ, ದಿನಕ್ಕೆ ಎರಡು ಅಥವಾ ಹೆಚ್ಚಿನ ಪಾನೀಯಗಳೊಂದಿಗೆ ಅಪಾಯವು ತೀವ್ರವಾಗಿ ಹೆಚ್ಚಾಗಿದೆ ಎನ್ನಲಾಗಿದೆ. ಇತರ ಸಂಶೋಧನೆಗಳು: ಫಿಜಿ ಪಾನೀಯಗಳು ಮತ್ತು ಪಾರ್ಶ್ವವಾಯುವಿನ…