Subscribe to Updates
Get the latest creative news from FooBar about art, design and business.
Author: kannadanewsnow07
ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ನಗರ ಸಂಚಾರಕ್ಕೆ 100 ಎಲೆಕ್ಟ್ರಿಕ್ ಬಸ್ಗಳನ್ನು ಒದಗಿಸಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅಲ್ಲದೆ, ಸಾರಿಗೆ ಬಸ್ಗಳಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ ಎಂದರು. ಅವರು ಇಂದು ಗೋಕುಲ್ ರಸ್ತೆಯ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣದ ಶಂಕು ಸ್ಥಾಪನೆ, ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್ಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಬೇರೆ ಸಾರಿಗೆ ನಿಗಮಗಳಲ್ಲಿ ನೀಡಲಾಗುವ ಅಪಘಾತ ಪರಿಹಾರ ವಿಮೆಯಂತೆ ಈ ಸಂಸ್ಥೆಯಲ್ಲಿಯೂ ಸಹ ರೂ.1 ಕೋಟಿ ಅಪಘಾತ ಪರಿಹಾರ ವಿಮೆಯನ್ನು ಹೆಚ್ಚಿಸಬೇಕಾಗಿದೆ. 9 ಸಾವಿರ ಜನರಿಗೆ ಉದ್ಯೋಗ ನೀಡಲಾಗಿದೆ. 3,800 ಬಸ್ಗಳು ಕೋವಿಡ್ ಸಮಯದಲ್ಲಿ ಬಂದ್ ಆಗಿದ್ದವು. ಈಗ ಪುನಃ ಆರಂಭಗೊಂಡಿವೆ. ಇದರಿಂದ ಶಕ್ತಿ ಯೋಜನೆಗೆ ಬಸ್ಗಳ ಕೊರತೆ ನೀಗಿದಂತಾಗಿದೆ. ಈ ಭಾಗದ ಜನರಿಗೆ ಹಳೆ…
ಬೆಂಗಳೂರು: ಸಿರಿಧಾನ್ಯಗಳ ಉತ್ಪಾದನೆ, ಮೌಲ್ಯ ವರ್ಧನೆ, ರಫ್ತು ಮತ್ತು ಮಾರಾಟಕ್ಕೆ ಅಭಿಯಾನದ ಸ್ವರೂಪ ನೀಡುವಲ್ಲಿ ಕರ್ನಾಟಕ ರಾಜ್ಯವು ವಿಶ್ವದಲ್ಲೇ ಮುಂಚೂಣಿಯಲ್ಲಿದ್ದು ಇದಕ್ಕಾಗಿ ಕೃಷಿ ಸಚಿವರು ಹಾಗೂ ಇಲಾಖೆಯನ್ನು ಅಭಿನಂದಿಸುವುದಾಗಿ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಏರ್ಪಡಿಸಿದ್ದ ಸಾವಯವ ,ಸಿರಿಧಾನ್ಯ ಅಂತರಾಷ್ಟ್ರೀಯ ವಾಣಿಜ್ಯ ಮೇಳದ ಸಮಾರೋಪ ಸಮಾರಂಭದಲ್ಲಿ ಆವರು ಮಾತನಾಡಿದರು. ನಾವು ನಮ್ಮ ಮೂಲ ಬೇರುಗಳನ್ನು ಮರೆಯಬಾರದು. ಸಿರಿಧಾನ್ಯ ನಮ್ಮ ಪರಂಪರೆಯ ಆಹಾರವಾಗಿದ್ದು ಅದನ್ನು ಬೆಳೆಸಿ, ಬಳಸಬೇಕು ಎಂದರು. ರಾಜ್ಯ ಸರ್ಕಾರ ಕೃಷಿ ಗೆ ಹೆಚ್ಚಿನ ಆಧ್ಯತೆ ನೀಡುತ್ತಿದೆ ಸಿರಿಧಾನ್ಯಗಳ ಜಾಗೃತಿಗೆ ವಿಶೇಷ ಕಾಳಜಿ ವಹಿಸಿದೆ. ಇμÉ್ಟೂಂದು ಉತ್ಕøಷ್ಟ ದರ್ಜೆಯಲ್ಲಿ ಅಚ್ಚುಕಟ್ಟಾಗಿ ಸಿರಿಧಾನ್ಯ ಮೇಳ ಆಯೋಜಿಸಿರುವುದು ಪ್ರಶಂಸನೀಯ ಎಂದರು. ಕೇಂದ್ರ ಬುಡಕಟ್ಟು ವ್ಯವಹಾರ, ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಅರ್ಜುನ್ ಮುಂಡಾ ಅವರು ಮಾತನಾಡಿ, ಅತ್ಯಂತ ಪೌಷ್ಟಿಕತೆ ಸಿರಿಧಾನ್ಯಗಳ ಉತ್ಪಾದನೆ, ಬಳಕೆ ಮೌಲ್ಯ ವರ್ಧನೆಗೆ, ಜಾಗೃತಿ, ಪ್ರಚಾರಕ್ಕೆ ಆಂದೋಲನದ ರೂಪ ನೀಡಿರುವ…
ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಮತ್ತು ಸಂಘ ಸಂಸ್ಥೆಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಸರಿಯಾದ ಗುಣಮಟ್ಟದ ಕೋಳಿ, ಜಾನುವಾರು ಆಹಾರ ಉತ್ಪಾದಿಸಲು ಮತ್ತು ಮಾರಾಟ ಮಾಡಲು ಪರವಾನಗಿ (ಲೈಸೆನ್ಸ್) ಪಡೆಯುವುದು ಕಡ್ಡಾಯವಾಗಿದೆ. ಈಗಾಗಲೇ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಮತ್ತು ಸ್ಥಳೀಯವಾಗಿ ಕೈಗಾರಿಕಾ ಇಲಾಖೆಯಿಂದ ಪರವಾನಗಿ ಪಡೆದಿದ್ದರೂ ಕೂಡ ಕರ್ನಾಟಕ ಕುಕ್ಕುಟ, ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಪ್ರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ ಮತ್ತು ಈ ರೀತಿ ಪಡೆದ ಪರವಾನಗಿಯು ಪ್ರತಿ ವರ್ಷ ಡಿಸೆಂಬರ್-31 ಕ್ಕೆ ಮುಕ್ತಾಯವಾಗುವುದರಿಂದ ನವೀಕರಣವನ್ನು ಜನವರಿ-01 ರಿಂದ ಪಡೆಯಬೇಕಾಗಿರುತ್ತದೆ. ಪ್ರಸ್ತುತ ವರ್ಷ 2024ನೇ ಸಾಲಿಗೆ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು ಮತ್ತು ಮಾರಾಟಗಾರರು ನೂತನ ಪರವಾನಗಿ ಪಡೆಯಲು ಮತ್ತು…
1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು. 10.ಮಕರ-ಉತ್ತರ-ಶನಿ. 11.ಕುಂಭ-ಉತ್ತರ-ಶನಿ. 12.ಮೀನ-ಈಶಾನ್ಯ-ಗುರು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್…
ಬೆಂಗಳೂರು:ಸೂರಣಗಿ ಗ್ರಾಮದಲ್ಲಿ ನಡೆದ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಮೃತ ಯುವಕರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಸಂತಾಪ ಸೂಚಿಸಿದ್ದಾರೆ. ಈ ನಡುವೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ಮೂವರು ಯುವಕರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ. ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಅಂಥ ತಿಳಿಸಿದ್ದಾರೆ. ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಅಂತ ತಿಳಿಸಿದ್ದಾರೆ. https://twitter.com/CMofKarnataka/status/1744306126932623626
ಗದಗ: ಯಶ್ ಜನ್ಮದಿನದ ಅಂಗವಾಗಿ 20 ಅಡಿ ಬ್ಯಾನರ್ ಕಟ್ಟುವಾಗ ದಾರುಣವಾಗಿ ಸಾವನ್ನಪ್ಪಿದ ಮೂವರು ಯುವಕರ ಸಾಮೂಹಿಕ ಅಂತ್ಯಕ್ರಿಯೆ ಸೂರಣಗಿಯಲ್ಲಿ ನೇರವೇರಿದೆ. ಈ ನಡುವೆ ಸುದ್ದಿ ತಿಳಿದ ಯಶ್, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಇಂದು ಸಂಜೆ ಭೇಟಿ ಮೃತರ ಕುಟುಂಬಕ್ಕೆ ಸಮಾಧಾನ ಮಾಡಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ನಾನು ಮೃತರ ಕುಟುಂಬದೊಂದಿಗೆ ಇದ್ದು, ಅವರನ್ನು ಯಾವುದೇ ಕಾರಣಕ್ಕೂ ಕೈ ಬಿಡುವುದಿಲ್ಲ ಅಂತ ತಿಳಿಸಿದರು. ಯಾರೂ ಕೂಡ ಕಟೌಟ್ ಕಟ್ಟುವುದು, ವಾಹನಗಳ ಹಿಂದೆ ಬರುವುದು ಮಾಡಬೇಡಿ ಅಂತ ಮನವಿ ಮಾಡಿಕೊಂಡರು. ಇನ್ನೂ ನೀವು ಖುಶಿಯಾಗಿದ್ದರೆ ಅದೇ ನನಗೆ ಸಂತೋಶ, ಅಭಿಮಾನದ ಹೆಸರಿನಲ್ಲಿ ನಿಮ್ ಜೀವ ಕಳೆದುಕೊಳ್ಳಬೇಡಿ ಅಂತ ಹೇಳಿದರು.
Supreme Court Verdict in Bilkis Bano Case ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ದೊಡ್ಡ ತೀರ್ಪು ನೀಡಿದ್ದು, ಅಪರಾಧಿಗಳನ್ನು ಅಕಾಲಿಕವಾಗಿ ಬಿಡುಗಡೆ ಮಾಡುವ ಆದೇಶವನ್ನು ರದ್ದುಗೊಳಿಸಿದೆ. 11 ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡಿರುವುದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನು ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರ ವಿಶೇಷ ಪೀಠವು 2023 ರ ಅಕ್ಟೋಬರ್ 12 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತು. 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಬಿಡುಗಡೆಯ ಬಗ್ಗೆ ನಿರ್ಧರಿಸುವ ಹಕ್ಕು ಮಹಾರಾಷ್ಟ್ರ ಸರ್ಕಾರಕ್ಕೆ ಇದೆಯೇ ಹೊರತು ಗುಜರಾತ್ ಸರ್ಕಾರಕ್ಕಲ್ಲ ಎಂದು ಹೇಳಿದೆ. ಈ ಅಪರಾಧವು ಗುಜರಾತ್ನಲ್ಲಿ ನಡೆದಿದ್ದರೂ, ಮಹಾರಾಷ್ಟ್ರದಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಗುಜರಾತ್ ಸರ್ಕಾರಕ್ಕೆ ಇಲ್ಲ ಎಂದು…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಹಿಂದೂ ಧರ್ಮದಲ್ಲಿ ನಂಬಿಕೊಂಡು ಬರುತ್ತಿರುವಂತಹ ಒಂಭತ್ತೂ ಗ್ರಹಗಳು ಆಕಾಶಕಾಯಗಳು. ‘ನವ’ ಎಂದರೆ ಒಂಭತ್ತು ‘ಗ್ರಹ’ ಎಂದರೆ ಆಕಾಶಕಾಯ, ಹಾಗಾಗಿ ಇದನ್ನು ಒಟ್ಟಾಗಿ ನವಗ್ರಹಗಳೆಂದು ಕರೆಯುತ್ತೇವೆ. ನವಗ್ರಹಗಳಲ್ಲೇ ಪ್ರಬಲವಾಗಿರುವಂತಹ ಸೂರ್ಯ ದೇವನು ಉತ್ತ ಆರೋಗ್ಯ ಹಾಗೂ ಸಮೃದ್ಧಿಯನ್ನು ನೀಡುವವನು. ಚಂದ್ರನು ಮನಸ್ಸನ್ನು ನಿಯಂತ್ರಿಸುವುದರ ಜೊತೆಗೆ ಯಶಸ್ಸನ್ನು ದಯಪಾಲಿಸುವವನು. ಮಂಗಳನು ಜೀವನದಲ್ಲಿ ಧೈರ್ಯ ಹಾಗೂ ಸಮೃದ್ಧಿಯನ್ನು ನೀಡುವವನಾದರೆ, ಬುಧನು ಬುದ್ಧಿಶಕ್ತಿ ಹಾಗೂ ಸಂಪತ್ತನ್ನು ಪ್ರತಿನಿಧಿಸುತ್ತಾನೆ. ಗುರು ವಿದ್ಯಾಕಾರಕನೂ, ಜ್ಞಾನ ಹಾಗೂ ಆರೋಗ್ಯವನ್ನು ನೀಡಿ ಹರಸುತ್ತಾನೆ. ಶುಕ್ರನು ದೀರ್ಘಾಯುಷ್ಯ ಹಾಗೂ ಲಲಿತಕಲೆಗಳಲ್ಲಿ ಪ್ರಾವೀಣ್ಯತೆ ಗಳಿಸುವಂತೆ ಮಾಡುತ್ತಾನೆ. ಶನಿಯು ಸಂತೋಷವನ್ನು, ರಾಹು ಚಂದ್ರನ ಪ್ರಭಾವವನ್ನು ಏರಿಕೆ ಮಾಡಿ, ಜೀವನವನ್ನು ಬಲಗೊಳಿಸಿದರೆ, ಕೇತು ಚಂದ್ರನಿಂದಾಗುವ ನಕಾರಾತ್ಮಕ ಪ್ರಭಾವಗಳನ್ನು ಕಡಿಮೆ ಮಾಡಿ, ಸಮೃದ್ಧಿಯನ್ನು ನೀಡುತ್ತಾನೆ. ಪ್ರತಿಯೊಂದು ನವಗ್ರಹಗಳೂ ಒಂದೊಂದು ರೀತಿಯಲ್ಲಿ ಆಳಲ್ಪಡುತ್ತದೆ ಜೊತೆಗೆ ತಮ್ಮದೇ ಆದ ಪವಿತ್ರ ಶಕ್ತಿಯನ್ನು ಕೂಡಾ…
ಬೆಂಗಳೂರು: : ಜನವರಿ 18ರಿಂದ ಭಾರತ್ ಗೌರವ್ ದಕ್ಷಿಣ ಯಾತ್ರೆ ಆರಂಭವಾಗಲಿದೆ. ಈ ಯಾತ್ರೆ ರಾಮೇಶ್ವರ-ಕನ್ಯಾಕುಮಾರಿ-ಮಧುರೈ ಮತ್ತು ತಿರುವನಂತಪುರಂ ಅನ್ನು ಒಳಗೊಂಡಿದೆ. ಐಆರ್ಸಿಟಿಸಿ/ ಐಟಿಎಂಎಸ್ ವೆಬ್ಸೈಟ್ ಮೂಲಕ 18/1/2024ರಿಂದ ಬುಕ್ಕಿಂಗ್ ಆರಂಭವಾಗಲಿದೆ ಆಂತ ತಿಳಿಸಲಾಗಿದೆ. ಈ ವಿಶೇಷ ರೈಲು ಹೊರಡಲಿರುವ ದಿನಾಂಕಗಳು. ನಿರ್ಗಮನ 18/1/2024, ಆಗಮನ 23/1/2024. ನಿರ್ಗಮನ 30/1/2024, ಆಗಮನ 4/2/2024 ಆಗಿದೆ. ರಾಮೇಶ್ವರ- ರಾಮೇಶ್ವರ ದೇವಾಲಯ. ಕನ್ಯಾಕುಮಾರಿ- ಶ್ರೀ ಭಗವತಿ ದೇವಾಲಯ. ಮಧುರೈ- ಶ್ರೀ ಮೀನಾಕ್ಷಿ ದೇವಾಲಯ. ತಿರುವನಂತಪುರಂ- ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯಗಳ ದರ್ಶನವನ್ನು ಈ ಪ್ಯಾಕೇಜ್ ನಲ್ಲಿ ನೀಡಲಾಗುತ್ತದೆ. ರೈಲು ಹತ್ತುವ ಮತ್ತು ಇಳಿಯುವ ನಿಲ್ದಾಣಗಳು ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ, ಯಶವಂತಪುರ ಆಗಿವೆ. ಯಾತ್ರೆಯ ಒಟ್ಟು ಪ್ಯಾಕೇಜ್ ಮೊತ್ತ 15,000 ರೂ.ಗಳು. ಕರ್ನಾಟಕ ಸರ್ಕಾರದಿಂದ ಸಹಾಯಧನ 5000 ರೂ.ಗಳು. ಯಾತ್ರಿಯ ಪಾವತಿಸಬೇಕಾದ ಮೊತ್ತ ಕೇವಲ 10,000 ರೂ.ಗಳು ಆಗಿವೆ. https://twitter.com/KarnatakaVarthe/status/1743637994157002964