Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ವಿವಿಧ ಸಂಸ್ಥೆಗಳಲ್ಲಿನ 39 ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷÀ ಅಭ್ಯರ್ಥಿಗಳಿಗೆ ವಸತಿನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ದಿನಾಂಕ: 01-07-2025 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳ ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ. ಡಿಪ್ಲೋಮಾ ಕೋರ್ಸ್ಗಾರಗಿ ಲಭ್ಯವಿರುವ ಸಂಸ್ಥೆಗಳು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ,…
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 60.48 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 0.16 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸರ್ಕಾರಿ ಕುಂಟೆ, ಕುಂಡ್ಲು ಕೆರೆ, ಸರ್ಕಾರಿ ಕರೆ, ಕುಂಟೆ, ರಾಜಕಾಲುವೆ, ಸ್ಮಶಾನ, ಬಂಡಿದಾರಿ, ಗುಂಡುತೋಪು, ಸರ್ಕಾರಿ ಖರಾಬು, ಸರ್ಕಾರಿ ಸೇಂದಿವನ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು. ಬೆಂಗಳೂರು ಪೂರ್ವ ತಾಲ್ಲೂಕಿನ* ಬಿದರಹಳ್ಳಿ ಹೋಬಳಿಯ ಬಿದರಹಳ್ಳಿ ಗ್ರಾಮದ ಸ.ನಂ 193ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.50 ಲಕ್ಷಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಕೊಡಿಗೆಹಳ್ಳಿ ಗ್ರಾಮದ ಸ.ನಂ 40 ರ ಸರ್ಕಾರಿ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ…
ಬೆಂಗಳೂರು: ಮಾನಸಿಕ ಅಸ್ವಸ್ಥ ನಿರಾಶ್ರಿತರಿಗೆ ಉತ್ತಮ ಮಾನಸಿಕ ಆರೋಗ್ಯ ಸೇವೆಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳೂಂದಿಗೆ ಪುನರ್ವಸತಿಯನ್ನು ಒದಗಿಸಲು ಆಸಕ್ತ ಸರ್ಕಾರೇತರ ಸಂಸ್ಥೆಗಳಿಂದ/ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಇಲಾಖೆಯ ವೈಬ್ ಸೈಟ್ www.kpp.karnatka.gov.in ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 9ರ ಸಂಜೆ 5.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾನಸಿಕ ಆರೋಗ್ಯಕಾರ್ಯಕ್ರಮ ಅಧಿಕಾರಿಗಳ ಕಛೇರಿ ಎಂ.ಎಂ.ರಸ್ತೆ ಫ್ರೆಜರ್ ಟೌನ್, ಬೆಂಗಳೂರು, ಕಛೇರಿಯ ಸಮಯದಲ್ಲಿ ಸಂರ್ಪಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ನವದೆಹಲಿ: ಶುಕ್ರವಾರ ಸಂಜೆ ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ನಲ್ಲಿ ಡ್ರೋನ್ಗಳ ಹಿಂಡು ಕಂಡುಬಂದಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಜಮ್ಮು, ಸಾಂಬಾ (ಜಮ್ಮು ಮತ್ತು ಕಾಶ್ಮೀರ), ಪಠಾಣ್ಕೋಟ್ ಮತ್ತು ಫಿರೋಜ್ಪುರ (ಪಂಜಾಬ್) ನಲ್ಲಿ ಡ್ರೋನ್ಗಳು ಕಂಡುಬಂದಿವೆ. ಈ ಪ್ರದೇಶದಲ್ಲಿ ಅನೇಕ ಸ್ಫೋಟಗಳು ಸಹ ಕೇಳಿ ಬಂದಿವೆ. ಈ ಪ್ರದೇಶದಲ್ಲಿ ಸ್ಫೋಟದ ಶಬ್ದ ಕೇಳಿ ಎಚ್ಚರಿಕೆಗಳು ಮೊಳಗಿದ ನಂತರ ಜಮ್ಮು ನಗರವು ಕತ್ತಲೆಯಲ್ಲಿ ಮುಳುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಪರೇಷನ್ ಸಿಂಧೂರ್ನ ಭಾಗವಾಗಿ ಈ ವಾರದ ಆರಂಭದಲ್ಲಿ ದೇಶದಲ್ಲಿನ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತ ದಾಳಿ ನಡೆಸಿದ ನಂತರ ಪಾಕಿಸ್ತಾನ ನಡೆಸುತ್ತಿರುವ ಶೆಲ್ ದಾಳಿಯ ಮಧ್ಯೆ ಈ ಸ್ಫೋಟಗಳು ನಡೆದಿವೆ. “ಸ್ಫೋಟದ ಶಬ್ದಗಳು, ಬಹುಶಃ ಭಾರಿ ಫಿರಂಗಿಗಳು, ಈಗ ನಾನು ಇರುವ ಸ್ಥಳದಿಂದ ಕೇಳಬಹುದು” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಂಬಾದಲ್ಲಿ ಬ್ಲ್ಯಾಕೌಟ್ ನಡುವೆ ಭಾರತದ ವಾಯು ರಕ್ಷಣಾ ಪಡೆಗಳು ಪಾಕಿಸ್ತಾನದ ಡ್ರೋನ್ಗಳನ್ನು ತಡೆಯುತ್ತಿದ್ದಂತೆ ಕೆಂಪು…
ನವದೆಹಲಿ: ಭಾರತವು ತನ್ನ ಆಕಾಶದಲ್ಲಿ ಹಲವಾರು ಕ್ಷಿಪಣಿಗಳನ್ನು ತಡೆದ ಒಂದು ದಿನದ ನಂತರ, ಜಮ್ಮು ಶುಕ್ರವಾರ ರಾತ್ರಿ ಮತ್ತೆ ಬ್ಲ್ಯಾಕೌಟ್ ಮತ್ತು ಸೈರನ್ಗಳನ್ನು ಬಾರಿಸಿತು. ರಾತ್ರಿ 8.30ರ ಸುಮಾರಿಗೆ ನಗರದಲ್ಲಿ ಸ್ಫೋಟದ ಸದ್ದು ಕೇಳಿಸಿತು. ಜಮ್ಮುವಿನಲ್ಲಿ ಈಗ ಬ್ಲ್ಯಾಕೌಟ್. ನಗರದಾದ್ಯಂತ ಸೈರನ್ಗಳನ್ನು ಕೇಳಬಹುದು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರು ಪ್ರಸ್ತುತ ಜಮ್ಮುವಿನಲ್ಲಿದ್ದಾರೆ. ರಾತ್ರಿ 8 ಗಂಟೆಯ ನಂತರ ಬ್ಲ್ಯಾಕೌಟ್ ಅನ್ನು ಜಾರಿಗೆ ತರಲಾಗಿದೆ ಎಂದು ನಿವಾಸಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜಮ್ಮು, ಪಠಾಣ್ಕೋಟ್ ಮತ್ತು ಉಧಂಪುರದಲ್ಲಿನ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.
ಹಾಸನ: ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಹಾಸನ ಇಲ್ಲಿ 2025-26ನೇ ಸಾಲಿನ ಪ್ರಥಮ ವರ್ಷ ಡಿಪ್ಲೋಮಾ ಪ್ರವೇಶಕ್ಕಾಗಿ ಮೊದಲು ಬಂದವರಿಗೆ ಮೊದಲ ಆದ್ಯತೆ ಮೂಲಕ ಎಸ್.ಎಸ್.ಎಲ್.ಸಿ, ತತ್ಸಮಾನ ವಿದ್ಯಾರ್ಹತೆ ಪಡೆದ ಅರ್ಹ ಮಹಿಳಾ ಅಭ್ಯರ್ಥಿಗಳಿಗಾಗಿ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್, ಎ.ಡಿ.ಎಫ್.ಟಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಇಂಜಿನಿಯರಿAಗ್, ಲೈಬ್ರರಿ ಅಂಡ್ ಇನ್ಫರ್ಮೇಷನ್ ಸೈನ್ಸ್ ಕೋರ್ಸುಗಳ ಪ್ರವೇಶಾತಿಯು ಪ್ರಾರಂಭಗೊAಡಿದ್ದು, ಮೇ.05 ರಿಂದ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಸೂಚಿಸಲಾಗಿದೆ.[ಎಲ್ಲಾ ಸೀಟುಗಳು ಭರ್ತಿಯಾಗುವವರೆಗೂ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸೀಟುಗಳ ಲಭ್ಯತೆ ಹಾಗೂ ಪ್ರವೇಶ ಸಂಬAಧಿ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರನ್ನು ಕಚೇರಿಯ ಸಮಯದಲ್ಲಿ ಸಂರ್ಪಕಿಸಲು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಶಂಪಾಲರು ತಿಳಿಸಿದ್ದಾರೆ.
ಹಾಸನ: ಜಿಲ್ಲೆಯಲ್ಲಿ ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟ ಇಂದಿನಿAದ ಪ್ರಾರಂಭವಾಗಿದ್ದು, ಈಗಾಗಲೇ ಬಿತ್ತನೆ ಬೀಜಕ್ಕೆ 1500-1600 ರೂ ದರ ನಿಗದಿಪಡಿಸಲಾಗಿದೆ ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿರುವ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಬಾರಿ ಒಳ್ಳೆಯ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೈತರು ಉತ್ತಮ ಬೆಳೆ ಬೆಳೆದು ಅಭಿವೃದ್ಧಿ ಹೊಂದಲಿ ಹಾಗೂ ಮಾರಾಟಗಾರರಿಗೂ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು. ಬಿತ್ತನೆ ಬೀಜವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಇಲಾಖೆ ಗಮನಕ್ಕೆ ತರುವಂತೆ ತಿಳಿಸಿದರು.ರೈತರು ಬಿತ್ತನೆ ಬೀಜ ಖರೀದಿಸಿದ ನಂತರ ಬಿತ್ತನೆಗೆ ಮುನ್ನ ಅನುಸರಿಸಬೇಕಾದ ಕ್ರಮಗಳನ್ನು ಕುರಿತು ರೈತರಿಗೆ ಅರಿವು ಮೂಡಿಸಲು ಕ್ರಮ ವಹಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಮಂಗಳಾ, ತಹಸೀಲ್ದಾರ್ ಗ್ಭಿತಾ,…
ನವದೆಹಲಿ: ಸೂಕ್ತ ಆವರ್ತನ ಬಹಿರಂಗಪಡಿಸುವಿಕೆ, ಪರವಾನಗಿ ಮಾಹಿತಿ ಅಥವಾ ಸಲಕರಣೆ ಪ್ರಕಾರದ ಅನುಮೋದನೆ (ಇಟಿಎ) ಇಲ್ಲದೆ ತಮ್ಮ ಪ್ಲಾಟ್ಫಾರ್ಮ್ಗಳಲ್ಲಿ ವಾಕಿ-ಟಾಕಿಗಳ ಪಟ್ಟಿ ಮತ್ತು ಮಾರಾಟದ ವಿರುದ್ಧ ಅಮೆಜಾನ್, ಫ್ಲಿಪ್ಕಾರ್ಟ್, ಮೀಶೋ ಮತ್ತು ಒಎಲ್ಎಕ್ಸ್ನಂತಹ ಪ್ರಮುಖ ಡಿಜಿಟಲ್ ಮಾರುಕಟ್ಟೆಗಳಿಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಶುಕ್ರವಾರ 13 ನೋಟಿಸ್ಗಳನ್ನು ನೀಡಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯದ ಪ್ರಕಾರ, ವೈರ್ಲೆಸ್ ಆಪರೇಟಿಂಗ್ ಪರವಾನಗಿಯ ಅಗತ್ಯತೆ ಅಥವಾ ಅನ್ವಯವಾಗುವ ಕಾನೂನುಗಳ ಅನುಸರಣೆಯ ಬಗ್ಗೆ ಕಡ್ಡಾಯ ಮತ್ತು ಸ್ಪಷ್ಟ ಬಹಿರಂಗಪಡಿಸುವಿಕೆಗಳಿಲ್ಲದೆ ವಾಕಿ-ಟಾಕಿಗಳನ್ನು ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಪ್ರಾಥಮಿಕ ವಿಶ್ಲೇಷಣೆಯು ಅಮೆಜಾನ್ನಲ್ಲಿ ಸುಮಾರು 467, ಫ್ಲಿಪ್ಕಾರ್ಟ್ನಲ್ಲಿ 314, ಮೀಶೋದಲ್ಲಿ 489 ಮತ್ತು ಟ್ರೇಡ್ಇಂಡಿಯಾದಲ್ಲಿ 423 ಸೇರಿದಂತೆ ಈ ಪ್ಲಾಟ್ಫಾರ್ಮ್ಗಳಲ್ಲಿ ಇಂತಹ ಪಟ್ಟಿಗಳ ಆತಂಕಕಾರಿ ಪ್ರಮಾಣವನ್ನು ಬಹಿರಂಗಪಡಿಸಿದೆ. ಅನುಸರಣೆ ಮಾಡದ ವೈರ್ ಲೆಸ್ ಸಾಧನಗಳ ಮಾರಾಟವು ಶಾಸನಬದ್ಧ ಕಟ್ಟುಪಾಡುಗಳನ್ನು ಉಲ್ಲಂಘಿಸುವುದಲ್ಲದೆ ರಾಷ್ಟ್ರೀಯ ಭದ್ರತಾ ಕಾರ್ಯಾಚರಣೆಗಳಿಗೆ ಗಮನಾರ್ಹ ಅಪಾಯವನ್ನುಂಟು ಮಾಡುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. “ಗ್ರಾಹಕರ…
ಹಾಸನ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು, ಶಾಲೆಗಳಲ್ಲಿ (ಉನ್ನತ್ತಿಕರಣಗೊಂಡ), ಮೌಲಾನಾ ಆಜಾದ್ ಮಾದರಿ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಕ್ಕೆ ಶೇ 75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಓಬಿಸಿ) ಶೇ: 25 ಸ್ಥಾನಗಳು ಮೀಸಲಾತಿ ಇರುತ್ತದೆ. ಉಚಿತ ಪ್ರವೇಶಕ್ಕಾಗಿ “ಸೇವಾ ಸಿಂಧು ಪೋರ್ಟಲ್” ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಮೇ.17 ಎಲ್ಲಾ ಅರ್ಹ 10ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ನಲ್ಲಿ ನೇರವಾಗಿ ಲಿಂಕ್ hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಸಲ್ಲಿಸಬಹುದು ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಚÉÃರಿ, ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದಾಗಿದೆ. ವಸತಿ…
ಹಾಸನ: ಗಂಡಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಅರಸೀಕೆರೆ ತಾಲ್ಲೂಕು ಈ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳ ಚುನಾವಣೆಯನ್ನು ಮೇ.25 ರಂದು ಬೆಳ್ಳಿಗೆ 09 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗಂಡಸಿ ಅರಸೀಕೆರೆ ತಾಲ್ಲೂಕು ಇದರ ಆವರಣದಲ್ಲಿ ನಿಗಧಿಪಡಿಸಿದ್ದು, ನಾಮ ಪತ್ರಗಳ ಸ್ವಿಕೃತಿಯು ಸಂಘದ ಕಚÉÃರಿಯಲ್ಲಿ ಮೇ.12 ರಿಂದ 17 ರವರೆಗೆ ಬೆ.11 ಗಂಟೆಯಿAದ ಮದ್ಯಾಹ್ನ 01 ಗಂಟೆಯ ವರೆಗೆ ಸ್ವೀಕರಿಸಲಾಗುವುದು ಹಾಗೂ ನಾಮಪತ್ರಗಳ ಪರಿಶೀಲನೆಯು ಮೇ.18 ರಂದು ಬೆ.11.30 ಗಂಟೆಗೆ ಸಂಘದ ಕಚೇರಿಯಲ್ಲಿ ಮತ್ತು ನಾಮಪತ್ರಗಳ ವಾಪಸಾತಿಯ ಪ್ರಕ್ರಿಯೆಯು ಮೇ.19 ರಂದು ಮ.03 ಗಂಟೆಯವರೆಗೆ ಸಂಘದ ಕಚೇರಿಯಲ್ಲಿ ನಿಗಧಿಪಡಿಸಲಾಗಿರುವ ಕುರಿತು ಗಂಡಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ದ ರಿಟರ್ನಿಂಗ್ ಅಧಿಕಾರಿಗಳು ಹಾಗೂ ಹಿರಿಯ ನಿರೀಕ್ಷಕರು ತಿಳಿಸಿರುತ್ತಾರೆ.